Homeಮುಖಪುಟಭಾರತದ ರಾಜಕಾರಣಿಗಳ ಮೇಲೆ ಪೆಗಾಸಸ್ ಕಣ್ಗಾವಲಿದೆ; ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಪ್ರಸ್ತಾಪ

ಭಾರತದ ರಾಜಕಾರಣಿಗಳ ಮೇಲೆ ಪೆಗಾಸಸ್ ಕಣ್ಗಾವಲಿದೆ; ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಪ್ರಸ್ತಾಪ

- Advertisement -
- Advertisement -

“ಪೆಗಾಸಸ್‌ ಸ್ಪೈವೇರ್‌ ಬಳಸಿ ನನ್ನನ್ನು ಸೇರಿದಂತೆ ಅನೇಕ ರಾಜಕಾರಣಿಗಳ ಮೇಲೆ ಕಣ್ಗಾವಲು ಇಡಲಾಗಿದೆ” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಅವರು ಇಂಗ್ಲೆಡ್‌‌ನ ಕೇಂಬ್ರಿಡ್ಜ್‌ ವಿಶ್ವವಿದ್ಯಾನಿಲಯದ ಉಪನ್ಯಾಸದ ವೇಳೆ ಹೇಳಿದ್ದಾರೆ.

ರಾಹುಲ್ ಗಾಂಧಿಯವರು ಮಾತನಾಡಿರುವ ವಿಡಿಯೊವನ್ನು ಕಾಂಗ್ರೆಸ್‌ ನಾಯಕ ಸ್ಯಾಮ್ ಪಿತ್ರೋಡಾ ಅವರು ಶುಕ್ರವಾರ ಹಂಚಿಕೊಂಡಿದ್ದಾರೆ.

ಪೋನಿನಲ್ಲಿ ಮಾತನಾಡುವಾಗ ಜಾಗೂರೂಕವಾಗಿರಿ, ನಿಮ್ಮ ಕಾಲ್‌ ರೆಕಾರ್ಡ್ ಆಗುತ್ತಿದೆ ಎಂದು ಗುಪ್ತಚರ ಅಧಿಕಾರಿಗಳು ಹೇಳಿರುವುದಾಗಿ ರಾಹುಲ್‌ ತಿಳಿಸಿದ್ದಾರೆ.

2021ರಲ್ಲಿ 17 ಮಾಧ್ಯಮ ಸಂಸ್ಥೆಗಳು ಮತ್ತು ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಒಂದು ಗುಂಪು ನಡೆಸಿದ ತನಿಖೆಗೆ ಸಂಬಂಧಿಸಿದಂತೆ ರಾಹುಲ್ ಪ್ರಸ್ತಾಪಿಸಿದ್ದಾರೆ. ಭಾರತ ಸೇರಿದಂತೆ ವಿಶ್ವದಾದ್ಯಂತ ಪತ್ರಕರ್ತರು, ಹೋರಾಟಗಾರರು, ರಾಜಕಾರಣಿಗಳ ಮೇಲೆ ಕಣ್ಣಿಡಲು ಪೆಗಾಸಸ್ ಸ್ಪೈವೇರ್ ಅನ್ನು ಬಳಸಲಾಗುತ್ತಿದೆ ಎಂದು ತನಿಖಾ ವರದಿಗಳು ಹೇಳುತ್ತಿವೆ.

ರಾಹುಲ್ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತು ಭಾರತದ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರನ್ನು ಟಾರ್ಗೆಟ್‌ ಮಾಡಲು ಉದ್ದೇಶಿಸಿರುವುದನ್ನು ‘ದಿ ವೈರ್’ ವರದಿ ಬಿಚ್ಚಿಟ್ಟಿದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ 10 ಫೋನ್‌ಗಳನ್ನು ಭಾರತದಲ್ಲಿ ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವೆಲ್ಲವೂ ಹ್ಯಾಕ್ ಆಗಿವೆ ಅಥವಾ ಇನ್ನೊಬ್ಬರಿಗೆ ಡಿವೈಸ್‌ಗಳು ಸುಲಭವಾಗಿ ಸಹಕರಿಸಿವೆ ಎಂದು ಪರೀಕ್ಷಾ ವರದಿ ತಿಳಿಸಿದೆ.

ಪ್ರಕರಣ ಬಯಲಿಗೆ ಬಂದ ನಂತರ ಆರೋಪಗಳ ತನಿಖೆ ಮತ್ತು ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಯಿತು. ಪೆಗಾಸಸ್ ಪ್ರಕರಣದಲ್ಲಿನ ಸಮಸ್ಯೆಗಳನ್ನು ತನಿಖೆ ಮಾಡಲು ನ್ಯಾಯಾಲಯವು ತಾಂತ್ರಿಕ ಸಮಿತಿಯನ್ನು ಅಕ್ಟೋಬರ್‌ನಲ್ಲಿ ರಚಿಸಿತ್ತು. ರಾಷ್ಟ್ರೀಯ ಭದ್ರತೆಯನ್ನು ಉಲ್ಲೇಖಿಸಿ ಅಫಿಡವಿಟ್‌ಗಳನ್ನು ಸಲ್ಲಿಸಲು ಸಾಧ್ಯವಾಗುವುದಿಲ್ಲ ಎನ್ನುತ್ತಿರುವ ಕೇಂದ್ರ ಸರ್ಕಾರವನ್ನು ಕೋರ್ಟ್ ಕಟುವಾಗಿ ಟೀಕಿಸಿತ್ತು.

ಅಕ್ರಮ ಕಣ್ಗಾವಲು ಆರೋಪಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಆಗಸ್ಟ್‌ನಲ್ಲಿ ಸಲ್ಲಿಸಿದ 29 ಸಾಧನಗಳ ಪೈಕಿ ಐದರಲ್ಲಿ ಮಾಲ್‌ವೇರ್ ಕುರುಹುಗಳು ಕಂಡುಬಂದಿವೆ. ಆದಾಗ್ಯೂ, ಮಾಲ್ವೇರ್ ಪೆಗಾಸಸ್ ಆಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿರಿ: ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ: ಕಾಂಗ್ರೆಸ್ ಆರೋಪ

ಇಸ್ರೇಲಿ ಸೈಬರ್ ಗುಪ್ತಚರ ಕಂಪನಿಯಾದ ಎನ್‌ಎಸ್‌ಒ ಗ್ರೂಪ್‌ನ ಮೂಲಕ ಪೆಗಾಸಸ್ ಸ್ಪೈವೇರ್‌ನ ಖರೀದಿಗಳು ನಡೆದಿವೆ. ಪ್ರಪಂಚದಾದ್ಯಂತದ ಸರ್ಕಾರಗಳಿಗೆ ಪರವಾನಗಿಯನ್ನು ಕಂಪನಿಯು ನೀಡಿದೆ. ಉತ್ತಮ ಮಾನವ ಹಕ್ಕುಗಳ ದಾಖಲೆ ‘ಪರಿಶೀಲಿಸಿದ ಸರ್ಕಾರಗಳಿಗೆ’ ಮಾತ್ರ ಸ್ಪೈವೇರ್‌ ಮಾರಾಟ ಮಾಡಲಾಗಿದೆ, ಅಪರಾಧಿಗಳನ್ನು ಗುರಿಯಾಗಿಸುವ ಉದ್ದೇಶ ಇದಕ್ಕಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಕೇಂದ್ರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ನಾಯಕ ಅನುರಾಗ್ ಠಾಕೂರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದ್ದು, “ಇತ್ತೀಚಿನ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತಿದೆ. ಹೀಗಾಗಿ ರಾಹುಲ್‌ ಗಾಂಧಿಯವರು ವಿದೇಶಿ ನೆಲದಲ್ಲಿ ನಿಂತು ಆರೋಪಗಳನ್ನು ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪ್ರಧಾನಿಯವರ ಮೇಲಿನ ಅವರ ದ್ವೇಷವನ್ನು ನಾವು ಅರ್ಥಮಾಡಿಕೊಳ್ಳಬಹುದು, ಆದರೆ ವಿದೇಶಿ ಸ್ನೇಹಿತರ ಸಹಾಯದಿಂದ ವಿದೇಶಿ ನೆಲದಲ್ಲಿ ನಿಂತು ದೇಶವನ್ನು ಕೆಡಿಸುವ ಪಿತೂರಿ ಇದಾಗಿದೆ. ಕಾಂಗ್ರೆಸ್‌ನ ಕಾರ್ಯಸೂಚಿಗಳು ಪ್ರಶ್ನಾರ್ಹವಾಗಿವೆ” ಎಂದಿದ್ದಾರೆ ಠಾಕೂರ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

“50 ಗ್ರಾಂ ಡ್ರಗ್ಸ್ ಇಟ್ಟು ಕೇಸ್ ಹಾಕ್ತೀನಿ!”: ಪ್ರತಿಭಟನಾ ನಿರತ ವಿದ್ಯಾರ್ಥಿಗಳಿಗೆ ಮಾದಕದ್ರವ್ಯ ಪ್ರಕರಣದ ಬೆದರಿಕೆಯೊಡ್ಡಿದ ಮುಂಬೈ ಪೊಲೀಸ್!

ಮುಂಬೈ: ದೇಶಾದ್ಯಂತ ವಿದ್ಯಾರ್ಥಿ ಸಮುದಾಯದ ಆಕ್ರೋಶ ತೀವ್ರಗೊಳ್ಳುತ್ತಿರುವ ಬೆನ್ನಲ್ಲೇ, ತಮ್ಮ ಹಕ್ಕುಗಳಿಗಾಗಿ ಧ್ವನಿ ಎತ್ತುತ್ತಿರುವ ಯುವಜನರನ್ನು ಹತೋಟಿಗೆ ತರಲು ಪೊಲೀಸರು ಯಾವ ಮಟ್ಟದ ದಮನಕಾರಿ ಮಾರ್ಗಗಳನ್ನು ತುಳಿಯುತ್ತಿದ್ದಾರೆ ಎಂಬುದಕ್ಕೆ ಮುಂಬೈನಲ್ಲಿ ನಡೆದ ಘಟನೆಯೊಂದು...

ಬಿಡದಿ ಟೌನ್‌ಶಿಪ್: 80% ರೈತರ ಒಪ್ಪಿಗೆ ಇದೆ ಎಂಬ ವಾದ ಸಾಬೀತುಪಡಿಸಿ – ಸರ್ಕಾರಕ್ಕೆ ಸಂಯುಕ್ತ ಹೋರಾಟ ಸವಾಲು

ಬಿಡದಿ ಟೌನ್‌ಶಿಪ್ ಯೋಜನೆಗೆ ಭೂಮಿ ನೀಡಲು ಉದ್ದೇಶಿತ ಪ್ರದೇಶದ ಶೇಕಡಾ 80 ರಷ್ಟು ರೈತರು ಒಪ್ಪಿದ್ದಾರೆ ಎಂಬ ಸರ್ಕಾರದ ವಾದಕ್ಕೆ ಯಾವುದೇ ವಾಸ್ತವಿಕ ಆಧಾರವಿಲ್ಲ. ಸರ್ಕಾರಕ್ಕೆ ಧೈರ್ಯವಿದ್ದರೆ ತನ್ನ ಈ ಹೇಳಿಕೆಯನ್ನು ಜನರ...

ವಿದ್ಯಾರ್ಥಿಗಳ ಮೇಲಿನ ಪೊಲೀಸ್ ದೌರ್ಜನ್ಯ: ವಿಚಾರಣೆ ತಿರಸ್ಕರಿಸಿದ ಸುಪ್ರೀಂ; “ವಿಡಿಯೋ ನೋಡಲು ನಮಗೆ ಆಸಕ್ತಿಯೂ ಇಲ್ಲ, ಸಮಯವೂ ಇಲ್ಲ” ಎಂದ ನ್ಯಾಯಮೂರ್ತಿ ಸೂರ್ಯಕಾಂತ್

ನವದೆಹಲಿ: ಪ್ರಶ್ನೆಪತ್ರಿಕೆ ಸೋರಿಕೆ ಮತ್ತು ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಶಾಂತಿಯುತವಾಗಿ ಹೋರಾಡುತ್ತಿದ್ದ ಯುವ ಸಮೂಹದ ಮೇಲೆ ದೆಹಲಿ ಪೊಲೀಸರು ನಡೆಸಿದ ಭೀಕರ ದೌರ್ಜನ್ಯದ ವಿರುದ್ಧ ನ್ಯಾಯದ ನಿರೀಕ್ಷೆಯಲ್ಲಿದ್ದ ವಿದ್ಯಾರ್ಥಿಗಳಿಗೆ ದೇಶದ ಅತ್ಯುನ್ನತ ನ್ಯಾಯಾಲಯದಿಂದ...

ರಾಹುಲ್ ಗಾಂಧಿ ವಿದ್ಯಾರ್ಥಿಗಳನ್ನು ‘ರಾಜಕೀಯ ದಾಳ’ವಾಗಿ ಬಳಸುತ್ತಿದ್ದಾರೆ ಎಂದ ಧರ್ಮೇಂದ್ರ ಪ್ರಧಾನ್ ವಿರುದ್ಧ ವ್ಯಾಪಕ ಆಕ್ರೋಶ

ನವದೆಹಲಿ: ದೇಶಾದ್ಯಂತ ನೀಟ್ (NEET) ಪರೀಕ್ಷೆಯ ಅಕ್ರಮಗಳು, ಪ್ರಶ್ನೆಪತ್ರಿಕೆ ಸೋರಿಕೆ ಹಾಗೂ ಶಿಕ್ಷಣ ಇಲಾಖೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ವಿದ್ಯಾರ್ಥಿಗಳು ಮತ್ತು ವಿರೋಧ ಪಕ್ಷಗಳು ತೀವ್ರ ಪ್ರತಿಭಟನೆ ನಡೆಸುತ್ತಿದ್ದು, ಶಿಕ್ಷಣ ಸಚಿವ ಧರ್ಮೇಂದ್ರ...

ಸಿಜೆಪಿ ಪ್ರತಿಭಟನಾಕಾರರ ಮೇಲೆ ಪೆಲೆಟ್ ಗನ್ ಬಳಕೆ, ವಿದ್ಯುತ್ ಲಾಠಿ ಪ್ರಹಾರ: ಆರೋಪ ನಿರಾಕರಿಸಿದ ಪೊಲೀಸರು

ಸೋಮವಾರ (ಜುಲೈ 20) ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಕರೆ ನೀಡಿದ್ದ ಸಂಸತ್ ಚಲೋ ಮೆರವಣಿ ಸಂದರ್ಭದಲ್ಲಿ ನಡೆದ ಪೊಲೀಸರ ದೌರ್ಜನ್ಯದಲ್ಲಿ ಗಾಯಗೊಂಡ 80 ಪ್ರತಿಭಟನಾಕಾರರಲ್ಲಿ ಕನಿಷ್ಠ ಒಬ್ಬರಿಗೆ ಪೆಲೆಟ್ ಗನ್ ಗಾಯಗಳಾಗಿವೆ...

ಪ್ರತಿಭಟನಾನಿರತ ಮಹಿಳೆಯ ಕೆನ್ನೆಗೆ ಹೊಡೆದ ದೆಹಲಿ ಪೊಲೀಸ್ ಅಧಿಕಾರಿ ಸಂದೀಪ್ ಲಂಬಾ: ವಿಡಿಯೋ ವೈರಲ್ ನಂತರ ವ್ಯಾಪಕ ಟೀಕೆ

ದೆಹಲಿ: ಶಾಂತಿಯುತವಾಗಿ ತಮ್ಮ ಹಕ್ಕುಗಳಿಗಾಗಿ ಹೋರಾಡುತ್ತಿದ್ದ ಪ್ರತಿಭಟನಾಕಾರರ ಮೇಲೆ ದೆಹಲಿ ಪೊಲೀಸರು ನಡೆಸಿದ ಕ್ರೂರ ದಮನ ಕಾರ್ಯಾಚರಣೆಯ ಭೀಕರ ಮುಖವಾಡವೊಂದು ಮತ್ತೆ ಜಗಜ್ಜಾಹೀರಾಗಿದೆ. ಸೋಮವಾರ ಸಂಸತ್ತಿನ ಮೆರವಣಿಗೆಯಲ್ಲಿ ಭಾಗವಹಿಸಿದ್ದ ಪ್ರತಿಭಟನಾಕಾರರನ್ನು ಹತ್ತಿಕ್ಕುವ ನೆಪದಲ್ಲಿ,...

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...