Homeಮುಖಪುಟಭಾರತದ ರಾಜಕಾರಣಿಗಳ ಮೇಲೆ ಪೆಗಾಸಸ್ ಕಣ್ಗಾವಲಿದೆ; ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಪ್ರಸ್ತಾಪ

ಭಾರತದ ರಾಜಕಾರಣಿಗಳ ಮೇಲೆ ಪೆಗಾಸಸ್ ಕಣ್ಗಾವಲಿದೆ; ಕೇಂಬ್ರಿಡ್ಜ್‌ನಲ್ಲಿ ರಾಹುಲ್ ಪ್ರಸ್ತಾಪ

- Advertisement -
- Advertisement -

“ಪೆಗಾಸಸ್‌ ಸ್ಪೈವೇರ್‌ ಬಳಸಿ ನನ್ನನ್ನು ಸೇರಿದಂತೆ ಅನೇಕ ರಾಜಕಾರಣಿಗಳ ಮೇಲೆ ಕಣ್ಗಾವಲು ಇಡಲಾಗಿದೆ” ಎಂದು ಕಾಂಗ್ರೆಸ್‌ ನಾಯಕ ರಾಹುಲ್‌ ಅವರು ಇಂಗ್ಲೆಡ್‌‌ನ ಕೇಂಬ್ರಿಡ್ಜ್‌ ವಿಶ್ವವಿದ್ಯಾನಿಲಯದ ಉಪನ್ಯಾಸದ ವೇಳೆ ಹೇಳಿದ್ದಾರೆ.

ರಾಹುಲ್ ಗಾಂಧಿಯವರು ಮಾತನಾಡಿರುವ ವಿಡಿಯೊವನ್ನು ಕಾಂಗ್ರೆಸ್‌ ನಾಯಕ ಸ್ಯಾಮ್ ಪಿತ್ರೋಡಾ ಅವರು ಶುಕ್ರವಾರ ಹಂಚಿಕೊಂಡಿದ್ದಾರೆ.

ಪೋನಿನಲ್ಲಿ ಮಾತನಾಡುವಾಗ ಜಾಗೂರೂಕವಾಗಿರಿ, ನಿಮ್ಮ ಕಾಲ್‌ ರೆಕಾರ್ಡ್ ಆಗುತ್ತಿದೆ ಎಂದು ಗುಪ್ತಚರ ಅಧಿಕಾರಿಗಳು ಹೇಳಿರುವುದಾಗಿ ರಾಹುಲ್‌ ತಿಳಿಸಿದ್ದಾರೆ.

2021ರಲ್ಲಿ 17 ಮಾಧ್ಯಮ ಸಂಸ್ಥೆಗಳು ಮತ್ತು ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ ಒಂದು ಗುಂಪು ನಡೆಸಿದ ತನಿಖೆಗೆ ಸಂಬಂಧಿಸಿದಂತೆ ರಾಹುಲ್ ಪ್ರಸ್ತಾಪಿಸಿದ್ದಾರೆ. ಭಾರತ ಸೇರಿದಂತೆ ವಿಶ್ವದಾದ್ಯಂತ ಪತ್ರಕರ್ತರು, ಹೋರಾಟಗಾರರು, ರಾಜಕಾರಣಿಗಳ ಮೇಲೆ ಕಣ್ಣಿಡಲು ಪೆಗಾಸಸ್ ಸ್ಪೈವೇರ್ ಅನ್ನು ಬಳಸಲಾಗುತ್ತಿದೆ ಎಂದು ತನಿಖಾ ವರದಿಗಳು ಹೇಳುತ್ತಿವೆ.

ರಾಹುಲ್ ಗಾಂಧಿ, ರಾಜಕೀಯ ತಂತ್ರಜ್ಞ ಪ್ರಶಾಂತ್ ಕಿಶೋರ್ ಮತ್ತು ಭಾರತದ ಮಾಜಿ ಚುನಾವಣಾ ಆಯುಕ್ತ ಅಶೋಕ್ ಲಾವಾಸಾ ಅವರನ್ನು ಟಾರ್ಗೆಟ್‌ ಮಾಡಲು ಉದ್ದೇಶಿಸಿರುವುದನ್ನು ‘ದಿ ವೈರ್’ ವರದಿ ಬಿಚ್ಚಿಟ್ಟಿದೆ.

ಅಮ್ನೆಸ್ಟಿ ಇಂಟರ್‌ನ್ಯಾಶನಲ್‌ನ 10 ಫೋನ್‌ಗಳನ್ನು ಭಾರತದಲ್ಲಿ ವಿಧಿವಿಜ್ಞಾನ ಪರೀಕ್ಷೆಗೆ ಒಳಪಡಿಸಲಾಗಿದ್ದು, ಇವೆಲ್ಲವೂ ಹ್ಯಾಕ್ ಆಗಿವೆ ಅಥವಾ ಇನ್ನೊಬ್ಬರಿಗೆ ಡಿವೈಸ್‌ಗಳು ಸುಲಭವಾಗಿ ಸಹಕರಿಸಿವೆ ಎಂದು ಪರೀಕ್ಷಾ ವರದಿ ತಿಳಿಸಿದೆ.

ಪ್ರಕರಣ ಬಯಲಿಗೆ ಬಂದ ನಂತರ ಆರೋಪಗಳ ತನಿಖೆ ಮತ್ತು ಸರ್ಕಾರದಿಂದ ಪ್ರತಿಕ್ರಿಯೆಯನ್ನು ಕೋರಿ ಸುಪ್ರೀಂ ಕೋರ್ಟ್‌ನಲ್ಲಿ ಹಲವಾರು ಅರ್ಜಿಗಳನ್ನು ಸಲ್ಲಿಸಲಾಯಿತು. ಪೆಗಾಸಸ್ ಪ್ರಕರಣದಲ್ಲಿನ ಸಮಸ್ಯೆಗಳನ್ನು ತನಿಖೆ ಮಾಡಲು ನ್ಯಾಯಾಲಯವು ತಾಂತ್ರಿಕ ಸಮಿತಿಯನ್ನು ಅಕ್ಟೋಬರ್‌ನಲ್ಲಿ ರಚಿಸಿತ್ತು. ರಾಷ್ಟ್ರೀಯ ಭದ್ರತೆಯನ್ನು ಉಲ್ಲೇಖಿಸಿ ಅಫಿಡವಿಟ್‌ಗಳನ್ನು ಸಲ್ಲಿಸಲು ಸಾಧ್ಯವಾಗುವುದಿಲ್ಲ ಎನ್ನುತ್ತಿರುವ ಕೇಂದ್ರ ಸರ್ಕಾರವನ್ನು ಕೋರ್ಟ್ ಕಟುವಾಗಿ ಟೀಕಿಸಿತ್ತು.

ಅಕ್ರಮ ಕಣ್ಗಾವಲು ಆರೋಪಗಳನ್ನು ಪರಿಶೀಲಿಸಲು ಸುಪ್ರೀಂ ಕೋರ್ಟ್ ನೇಮಿಸಿದ ಸಮಿತಿಯು ಆಗಸ್ಟ್‌ನಲ್ಲಿ ಸಲ್ಲಿಸಿದ 29 ಸಾಧನಗಳ ಪೈಕಿ ಐದರಲ್ಲಿ ಮಾಲ್‌ವೇರ್ ಕುರುಹುಗಳು ಕಂಡುಬಂದಿವೆ. ಆದಾಗ್ಯೂ, ಮಾಲ್ವೇರ್ ಪೆಗಾಸಸ್ ಆಗಿದೆಯೇ ಎಂಬುದು ಸ್ಪಷ್ಟವಾಗಿಲ್ಲ.

ಇದನ್ನೂ ಓದಿರಿ: ರಿಸರ್ವ್ ಬ್ಯಾಂಕಿನಲ್ಲಿರುವುದಕ್ಕಿಂತ ಹೆಚ್ಚು ಹಣ ಬಿಜೆಪಿಗರ ಮನೆಯಲ್ಲಿದೆ: ಕಾಂಗ್ರೆಸ್ ಆರೋಪ

ಇಸ್ರೇಲಿ ಸೈಬರ್ ಗುಪ್ತಚರ ಕಂಪನಿಯಾದ ಎನ್‌ಎಸ್‌ಒ ಗ್ರೂಪ್‌ನ ಮೂಲಕ ಪೆಗಾಸಸ್ ಸ್ಪೈವೇರ್‌ನ ಖರೀದಿಗಳು ನಡೆದಿವೆ. ಪ್ರಪಂಚದಾದ್ಯಂತದ ಸರ್ಕಾರಗಳಿಗೆ ಪರವಾನಗಿಯನ್ನು ಕಂಪನಿಯು ನೀಡಿದೆ. ಉತ್ತಮ ಮಾನವ ಹಕ್ಕುಗಳ ದಾಖಲೆ ‘ಪರಿಶೀಲಿಸಿದ ಸರ್ಕಾರಗಳಿಗೆ’ ಮಾತ್ರ ಸ್ಪೈವೇರ್‌ ಮಾರಾಟ ಮಾಡಲಾಗಿದೆ, ಅಪರಾಧಿಗಳನ್ನು ಗುರಿಯಾಗಿಸುವ ಉದ್ದೇಶ ಇದಕ್ಕಿದೆ ಎಂದು ಸಂಸ್ಥೆ ಹೇಳಿಕೊಂಡಿದೆ.

ಕೇಂದ್ರ ಸಚಿವ ಮತ್ತು ಭಾರತೀಯ ಜನತಾ ಪಕ್ಷದ ನಾಯಕ ಅನುರಾಗ್ ಠಾಕೂರ್ ಅವರು ಶುಕ್ರವಾರ ಪ್ರತಿಕ್ರಿಯಿಸಿದ್ದು, “ಇತ್ತೀಚಿನ ಅಸೆಂಬ್ಲಿ ಚುನಾವಣೆಯಲ್ಲಿ ಕಾಂಗ್ರೆಸ್‌ ಸೋತಿದೆ. ಹೀಗಾಗಿ ರಾಹುಲ್‌ ಗಾಂಧಿಯವರು ವಿದೇಶಿ ನೆಲದಲ್ಲಿ ನಿಂತು ಆರೋಪಗಳನ್ನು ಮಾಡುತ್ತಿದ್ದಾರೆ” ಎಂದು ಆರೋಪಿಸಿದ್ದಾರೆ.

“ಪ್ರಧಾನಿಯವರ ಮೇಲಿನ ಅವರ ದ್ವೇಷವನ್ನು ನಾವು ಅರ್ಥಮಾಡಿಕೊಳ್ಳಬಹುದು, ಆದರೆ ವಿದೇಶಿ ಸ್ನೇಹಿತರ ಸಹಾಯದಿಂದ ವಿದೇಶಿ ನೆಲದಲ್ಲಿ ನಿಂತು ದೇಶವನ್ನು ಕೆಡಿಸುವ ಪಿತೂರಿ ಇದಾಗಿದೆ. ಕಾಂಗ್ರೆಸ್‌ನ ಕಾರ್ಯಸೂಚಿಗಳು ಪ್ರಶ್ನಾರ್ಹವಾಗಿವೆ” ಎಂದಿದ್ದಾರೆ ಠಾಕೂರ್‌.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...

SIR | ಮತದಾರರ ಪಟ್ಟಿಯಲ್ಲಿ ಹೆಸರಿದ್ದರೆ ಮಾತ್ರ ಸರ್ಕಾರಿ ಸೌಲಭ್ಯ: ಸಿಎಂ

ರಾಜ್ಯ ಸರ್ಕಾರದ ಐದು ಪ್ರಮುಖ ಗ್ಯಾರಂಟಿ ಯೋಜನೆಗಳು ಹಾಗೂ ಇತರ ಸರ್ಕಾರಿ ಸವಲತ್ತುಗಳನ್ನು ಪಡೆಯುತ್ತಿರುವ ಫಲಾನುಭವಿಗಳಿಗೆ ಮುಖ್ಯಮಂತ್ರಿಗಳು ಗಂಭೀರ ಎಚ್ಚರಿಕೆಯೊಂದನ್ನು ನೀಡಿದ್ದಾರೆ. ಪ್ರತಿಯೊಬ್ಬ ಫಲಾನುಭವಿಯೂ ತಮ್ಮ ಹೆಸರು ಮತದಾರರ ಪಟ್ಟಿಯಲ್ಲಿ ಇರುವುದನ್ನು ಕಡ್ಡಾಯವಾಗಿ...

SIR, ಚುನಾವಣಾ ಆಯೋಗದ ಕಾರ್ಯನಿರ್ವಹಣೆ ಕುರಿತು 23 ವಿಪಕ್ಷಗಳಿಂದ ಸಿಜೆಐಗೆ ಜಂಟಿ ಪತ್ರ

ಭಾರತೀಯ ಚುನಾವಣಾ ಆಯೋಗವು (ಇಸಿಐ) ನಡೆಸುತ್ತಿರುವ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆ ಹಾಗೂ ಇತರ ಚುನಾವಣೆ ಸಂಬಂಧಿತ ವಿಷಯಗಳ ವಿರುದ್ಧ ಇಂಡಿಯಾ ಮೈತ್ರಿಕೂಟದ ಹೊರಗಿರುವ ದ್ರಾವಿಡ ಮುನ್ನೇತ್ರ ಕಳಗಂ...

SIR: ಮತದಾರರ ಅನುಕೂಲಕ್ಕಾಗಿ ಸಹಾಯ ಕೇಂದ್ರಗಳನ್ನು ಸ್ಥಾಪಿಸಲು ಸರ್ಕಾರದ ಆದೇಶ

ರಾಜ್ಯಾದ್ಯಂತ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ-2026 (SIR) ಕಾರ್ಯವು ಜೂನ್ 30ರಿಂದ (ಇಂದಿನಿಂದ) ಅಧಿಕೃತವಾಗಿ ಆರಂಭವಾಗಿದೆ. ಜುಲೈ 29ರವರೆಗೆ ಒಂದು ತಿಂಗಳ ಕಾಲ ಬೂತ್ ಮಟ್ಟದ ಅಧಿಕಾರಿಗಳು ಮನೆ ಮನೆಗೆ ಭೇಟಿ...

SIR: ಕೇಂದ್ರ ಸರ್ಕಾರದ SIRಗೆ ಕೌಂಟರ್‌, ಮಹತ್ವದ ಆದೇಶಗಳನ್ನು ಹೊರಡಿಸಿದ ಕರ್ನಾಟಕ ಸರ್ಕಾರ

ಕೇಂದ್ರ ಸರ್ಕಾರ ಚುನಾವಣಾ ಆಯೋಗದ ಮೂಲಕ ನಡೆಸುತ್ತಿರುವ ವಿಶೇಷ ಮತದಾರ ಪಟ್ಟಿ ಪರಿಷ್ಕರಣೆ ಕುರಿತಂತೆ ದೇಶದಾದ್ಯಂತ ಭಾರೀ ವಿರೋಧ ವ್ಯಕ್ತವಾಗಿದ್ದವು. ಸುಪ್ರೀಂ ಕೋರ್ಟ್‌ ಆ ಪ್ರಕ್ರಿಯೆಯನ್ನು ಮಾನ್ಯ ಮಾಡಿತ್ತು. ಕರ್ನಾಟಕದಲ್ಲಿ ನಾಳೆಯಿಂದ (ಜೂನ್.30)‌...