Homeಚಳವಳಿಉಂಡ ಮನೆಗೆ ದ್ರೋಹ ಬಗೆದ ಭಾರತೀಯ ಮಾಧ್ಯಮಗಳು; ಅನ್ನದಾತರನ್ನೇ ಭಯೋತ್ಪಾದಕರು-ದೇಶದ್ರೋಹಿಗಳು ಎನ್ನುತ್ತಿವೆ!

ಉಂಡ ಮನೆಗೆ ದ್ರೋಹ ಬಗೆದ ಭಾರತೀಯ ಮಾಧ್ಯಮಗಳು; ಅನ್ನದಾತರನ್ನೇ ಭಯೋತ್ಪಾದಕರು-ದೇಶದ್ರೋಹಿಗಳು ಎನ್ನುತ್ತಿವೆ!

ರೈತರು ಮಂಗಳವಾರ ತಮ್ಮ ಗಣರಾಜ್ಯೋತ್ಸವನ್ನು ಟ್ರಾಕ್ಟರ್‌ ರ್‍ಯಾಲಿ ಮೂಲಕ ನಡೆಸಿ ಇತಿಹಾಸದ ಪುಟದಲ್ಲಿ ಅಜರಾಮವಾಗಲಿದ್ದಾರೆ.

- Advertisement -
- Advertisement -

ಕೇಂದ್ರ ಸರ್ಕಾರ ಜಾರಿಗೆ ತಂದಿರುವ ಕೃಷಿ ಕಾಯ್ದೆಗಳ ವಿರುದ್ಧ ನಡೆಸುತ್ತಿರುವ ರೈತರ ಹೋರಾಟ ಇಂದಿಗೆ ಎರಡು ತಿಂಗಳು ಪೂರೈಸಿದೆ. ಸರ್ಕಾರ ಮತ್ತು ರೈತರ ನಡುವೆ ಈವರೆಗೆ 11 ಸುತ್ತಿನ ಮಾತುಕತೆ ನಡೆದಿದ್ದು, ಎಲ್ಲವು ಸಭೆಗಳೂ ಮುರಿದು ಬಿದ್ದಿವೆ. ರೈತ ಅಳಲು-ಆಕ್ರೋಶವನ್ನು ಗಣನೆಗೆ ತೆಗೆದುಕೊಳ್ಳದ ಕೇಂದ್ರ ಸರ್ಕಾರ, ಕೃಷಿ ಕಾನೂನುಗಳ ಹಿಂಪಡೆಯುವುದಿಲ್ಲ ಎಂಬ ಮೊಂಡುತನವನ್ನು ಪ್ರದರ್ಶಿಸುತ್ತಿದೆ. ಹೀಗಾಗಿ ರೈತರು ನಾಳೆ (ಜ.26) ಗಣರಾಜ್ಯೋತ್ಸವ ದಿನದಂದು ದೆಹಲಿ ಗಡಿಯಲ್ಲಿ ಮತ್ತು ದೇಶಾದ್ಯಂತ ಟ್ರಾಕ್ಟರ್‌ ಪರೇಡ್‌ ನಡೆಸಲು ಮುಂದಾಗಿವೆ. ದೇಶಾದ್ಯಂತ ಇದಕ್ಕೆ ಬೆಂಬಲ ವ್ಯಕ್ತವಾಗಿದ್ದು, ಹಲವಾರು ರಾಜ್ಯಗಳಲ್ಲಿ ಟ್ರಾಕ್ಟರ್ ರ್‍ಯಾಲಿ ನಡೆಯಲಿದೆ.

ದೆಹಲಿ ಗಡಿಗಳ ಸುತ್ತಲೂ ನಡೆಯುತ್ತಿರುವ ಹೋರಾಟ 60 ದಿನಗಳನ್ನು ದಾಟುತ್ತಿದ್ದರೂ ದೇಶದ ಮಾಧ್ಯಮಗಳು ಮಾತ್ರ ರೈತರ ಹೋರಾಟವನ್ನು ವರದಿ ಮಾಡುವುದರಿಂದ ದೂರ ಉಳಿದಿವೆ. ಬದಲಾಗಿ, ಕೃಷಿ ಕಾಯ್ದೆಗಳನ್ನು ಸಮರ್ಥಿಸಿಕೊಂಡು, ಕಾನೂನುಗಳ ಪರವಾದ ಡಿಬೇಟ್ – ಸ್ಪೆಷಲ್‌ ಸ್ಟೋರಿಗಳನ್ನು ಮಾಡುತ್ತಾ, ಬಿಜೆಪಿಗೆ ತನ್ನ ಸ್ವಾಮಿ ನಿಷ್ಠೆಯನ್ನು ತೋರಿಸುತ್ತಿವೆ.

ಗೋದಿ ಮೀಡಿಯಾಗಳು ಎಂದು ಕರೆಸಿಕೊಳ್ಳುತ್ತಿರುವ ಆಜ್‌ತಕ್, ಎಬಿಪಿ, ರಿಪಬ್ಲಿಕ್‌ ಟಿವಿ ಮತ್ತು ಝೀ ನ್ಯೂಸ್ ಚಾನೆಲ್‌ಗಳು ರೈತ ಹೋರಾಟಗಾರರನ್ನು ನಕಲಿ ರೈತರು, ಭಯೋತ್ಪಾದಕರು, ಖಾಲಿಸ್ಥಾನಿಗಳು ಎಂದು ಬಿಂಬಿಸುತ್ತಿವೆ.

ನಾಸಿಕ್‌

ಇದನ್ನೂ ಓದಿ: ಬೆಂಗಳೂರಿನಲ್ಲಿ ಟ್ರ್ಯಾಕ್ಟರ್ ಪರೇಡ್‌ ನಡೆಸಿಯೇ ತೀರುತ್ತೇವೆ: ರೈತ ಮುಖಂಡರ ಒಕ್ಕೊರಲ ಘೋಷಣೆ

ಪ್ರಮುಖವಾಗಿ ಆರು ರಾಜ್ಯಗಳ ರೈತರು ಮತ್ತು ವಿವಿಧ ರಾಜ್ಯಗಳ ರೈತರು ದೆಹಲಿ ಗಡಿಯಲ್ಲಿ ಬೀಡುಬಿಟ್ಟು ಹೋರಾಟ ನಡೆಸುತ್ತಿದ್ದಾರೆ. ಚಳಿ-ಗಾಳಿ-ಮಳೆಗೆ ಅಳುಕದೆ ಪಟ್ಟು ಹಿಡಿದು ಹೋರಾಟ ನಡೆಸುತ್ತಿದ್ದಾರೆ. ಆದರೆ, ಮಾಧ್ಯಮಗಳು ಈ ಹೋರಾಟ ಕೇವಲ ಪಂಜಾಬಿಗಳ ಹೋರಾಟ, ಅದರಲ್ಲೂ ಖಾಲಿಸ್ತಾನಕ್ಕಾಗಿ ಬೇಡಿಕೆ ಇಟ್ಟವರ ಹೋರಾಟ, ರೈತರನ್ನು ಹಾದಿ ತಪ್ಪಿಸಲು ಮತ್ತು ದೇಶವನ್ನು ಒಡೆಯುವುದಕ್ಕಾಗಿ ಈ ಹೋರಾಟವನ್ನು ಮಾಡುತ್ತಿದ್ದಾರೆ ಎಂದು ಕತೆ ಕಟ್ಟಿ, ಸುಳ್ಳುಗಳ ಸರಮಾಲೆ ಎಣೆದು ರೈತ ವಿರೋಧಿ ಧೋರಣೆಯನ್ನು ಜನರ ಮನಸ್ಸಿನಲ್ಲಿ ಬಿತ್ತುತ್ತಿವೆ.

ಅಲ್ಲದೆ, ಬಿಜೆಪಿಯ ಎಂಜಲು ಕಾಸಿಗಾಗಿಯೂ, ಹಿಂದೂತ್ವದ ಕೋಮು ವಿಷಪ್ರಾಶನವನ್ನು ಗಂಟಲಿಗೇರಿಸಿಕೊಂಡು ದ್ವೇಷವನ್ನು ಹರಡುವುದರಲ್ಲಿ ನಿರತವಾಗಿವೆ. ಈ ಕಾರಣಕ್ಕಾಗಿಯೇ ಲಕ್ಷಾಂತರ ರೈತರ ಹೋರಾಟವನ್ನು ಮಾಧ್ಯಮಗಳು ನಿರ್ಲಕ್ಷಿಸಿವೆ. ಹಾಗಾಗಿ, ಸರ್ಕಾರದ ವಿರುದ್ಧ ನಡೆಯುತ್ತಿರುವ ರೈತರ ಪ್ರತಿಭಟನೆಯನ್ನೂ –ಪ್ರತಿಭಟನಾಕಾರರನ್ನು ದೇಶದ್ರೋಹಿಗಳು, ಭಯೋತ್ಪಾದರು ಎಂದು ಬಿಂಬಿಸುತ್ತಿವೆ.

ರೈತರ ವಿಚಾರದಲ್ಲೂ ವಿಷ ಕಕ್ಕುತ್ತಿರುವ ರಿಪಬ್ಲಿಕ್‌ ಟಿವಿ, “ಈ ಹಿಂದೆ ಪ್ರತಿ ಬಾಗ್‌ಗಳನ್ನು ಶಾಹೀನ್‌ ಬಾಗ್‌ ಮಾಡಿ ಎಂದು ಕರೆಕೊಟ್ಟಿದ್ದ ಚಂದ್ರಶೇಖರ್ ಆಜಾದ್ ಇದ್ದಕ್ಕಿದ್ದಂತೆ ರೈತರ ಪ್ರತಿಭಟನೆಯಲ್ಲಿ ಇಳಿಯುತ್ತಾರೆ. ಕಳೆದ ಡಿಸೆಂಬರ್‌ನಲ್ಲಿ ಶಾಹೀನ್‌ಬಾಗ್‌ನಲ್ಲಿ ಸಿಎಎ ವಿರುದ್ಧ ಜನರನ್ನು ಸಜ್ಜುಗೊಳಿಸುತ್ತಿದ್ದ ಅದೇ ಯೋಗೇಂದ್ರ ಯಾದವ್ ರೈತ ಮಸೂದೆಗಳ ವಿರುದ್ದ ರೈತರಲ್ಲಿ ತಪ್ಪು ಮಾಹಿತಿ ಹರಡುವ ಅಭಿಯಾನ ನಡೆಸುತ್ತಿದ್ದಾರೆ” ಎಂದು ವರದಿ ಮಾಡಿತ್ತು.

ಟ್ರಾಕ್ಟರ್‌, ರ್‍ಯಾಲಿ

ಇದನ್ನೂ ಓದಿ: ರ್‍ಯಾಲಿಗೆ ಟ್ರಾಕ್ಟರ್‌ ತರಬೇಡಿ ಎಂದ ಬೆಂಗಳೂರು ಪೊಲೀಸರು: ತಂದೇ ತರುತ್ತೇವೆ ಎಂದ ರೈತರು!

ಅಲ್ಲದೆ, ಜವಾಹರಲಾಲ್ ನೆಹರು ವಿಶ್ವವಿದ್ಯಾಲಯ ಮತ್ತು ಶಾಹೀನ್ ಬಾಗ್‌ನಲ್ಲಿ ನಡೆದ ಪ್ರತಿಭಟನೆಯ ಸಂದರ್ಭದಲ್ಲಿ ಇದು ಸಂಭವಿಸಿದೆ. ಈಗ ಸಿಂಗುವಿನಲ್ಲಿನ ಅದೇ ನಡೆಯುತ್ತಿದೆ. ಅವರೆಲ್ಲರೂ “ಖಲಿಸ್ತಾನ್ ಜಿಂದಾಬಾದ್ ಘೋಷಣೆಗಳನ್ನು ಎತ್ತುವವರು” ಎಂದು ರೈತರ ವಿರುದ್ದ ಜೀ ನ್ಯೂಸ್‌ ವರದಿ ಮಾಡಿತ್ತು.

ಹೀಗಾಗಿಯೇ, “ರಾಷ್ಟ್ರೀಯ ಮಾಧ್ಯಮ ನಮ್ಮೊಂದಿಗಿಲ್ಲ… ಆಜ್ ತಕ್, ಝೀ ನ್ಯೂಸ್, ಎಬಿಪಿಗಳಂತಹ ಮಾಧ್ಯಮಗಳು ಸರ್ಕಾರವನ್ನು ಸಮರ್ಥಿಸಲು ರೈತರನ್ನು ಪ್ರತ್ಯೇಕವಾದಿಗಳು, ಭಯೋತ್ಪಾದಕರು ಎಂದು ಬೊಗಳೆ ಬಿಡುತ್ತಿವೆ. ಇವು ರೈತ ವಿರೋಧಿ ನಡೆಯನ್ನು ಅನುಸರಿಸುತ್ತಿವೆ ಎಂದು ರೈತರು ಕಿಡಿಕಾರಿದ್ದಾರೆ.

ದೆಹಲಿ

“ನಮ್ಮಲ್ಲಿ ಯಾವ ಶಸ್ತ್ರಾಸ್ತ್ರಗಳಿವೆ? ನಿಮಗೆ ನಾವು ಯಾವ ರೀತಿಯಲ್ಲಿ ಭಯೋತ್ಪಾದಕರಂತೆ ಕಾಣುತ್ತಿದ್ದೇವೆ. ನಾವು ಭಯೋತ್ಪಾದಕರು ಎಂದು ಎಂದು ಯಾರಿಗಾಗಿ ಹೇಳುತ್ತಿದ್ದೀರಿ? ನಾವು ರೈತರು, ವಿದ್ಯಾವಂತ ರೈತರು” ಎಂದು ಪ್ರತಿಭಟನಾಕಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಸರ್ಕಾರವು ಧಾನ್ಯಗಳ ಸಂಗ್ರಹ ಮಿತಿಯನ್ನು ಹೆಚ್ಚಿಸಲು ಹೊರಟಿದೆ. “ಅಗತ್ಯ ದಾಸ್ತಾನುಗಳ ಸಂಗ್ರಹ ಮಿತಿ ಮೀರಿದ ದಿನ, ಸಾಮಾನ್ಯ ಜನರು ಸಾಯುತ್ತಾರೆ.” ಇದು ಜನರಿಗೆ ತಿಳಿದಿಲ್ಲ. ಮಾಧ್ಯಮಗಳಿಗೆ ಇದರ ಪರಿಣಾಮ ಅರ್ಥವಾಗುತ್ತಿಲ್ಲ. ರಾಷ್ಟ್ರೀಯ ಮಾಧ್ಯಮಗಳು ಈ ಬಗ್ಗೆ ತುಟಿಬಿಚ್ಚುವುದಿಲ್ಲ ಎಂದು ರೈತರು ಹೇಳಿದ್ದಾರೆ.

ಕೇಂದ್ರದ ನೀತಿಗಳು ರೈತರಿಗೆ ಸರಿಯಾಗಿ ಅರ್ಥವಾಗಿಲ್ಲ ಎಂದು ಮಾಧ್ಯಮಗಳು ಹೇಳುತ್ತಿವೆ. ನಾನೊಬ್ಬ ಅನಕ್ಷರಸ್ಥ ರೈತ, ಆದರೆ, ಈ ನೀತಿಗಳು ಹೇಗೆ ರೈತರಿಗೆ ಪ್ರಯೋಜಕಾರಿಯಾಗಿವೆ ಎಂದು ಯಾರಾದರು ನನ್ನನ್ನು ಒಪ್ಪಿಸಲಿ ಎಂದು ರೈತರೊಬ್ಬರು ಸವಾಲು ಹಾಕಿದ್ದಾರೆ.

ಇದನ್ನೂ ಓದಿ: ಮಹಾರಾಷ್ಟ್ರದ 21 ಜಿಲ್ಲೆಯಿಂದ ಮುಂಬೈಗೆ ಭೋರ್ಗರೆದ ರೈತರ ದಂಡು

ಸರ್ಕಾರವನ್ನು ಪ್ರಶ್ನಿಸುವವರೆಲ್ಲರೂ ರಾಷ್ಟ್ರ ವಿರೋಧಿಗಳಾದರೆ, ದೇಶದ ಪ್ರಜೆ ಯಾರು? ದೇಶದ ನಾಗರಿಕರು ಸಮಸ್ಯೆಗಳನ್ನು ಸೃಷ್ಟಿಸುವುದಿಲ್ಲ. ಯಾವಾಗಲೂ ಸರ್ಕಾರವೇ ಸಮಸ್ಯೆಗಳನ್ನು ಸೃಷ್ಟಿಸುತ್ತದೆ.

ಆದರೆ, ಸರ್ಕಾರ ಕೈಗೊಂಬೆಯಾಗಿರುವ ಮಾಧ್ಯಮಗಳು ಪ್ರಶ್ನೆ ಮಾಡುವ ನಾಗರಿಕರನ್ನು ಅಪರಾಧಿಗಳೆಂದು ಬಿಂಬಿಸುತ್ತಿವೆ. ಈ ಮಾಧ್ಯಮಗಳು ಎಂದಿಗೂ ನಮ್ಮೊಂದಿಗೆ ಇರಲಾರವು ಎಂದು ರೈತ ಹೋರಾಟಗಾರರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಅಲ್ಲದೆ, ರೈತರು ತಮ್ಮದೇ ಆದ ವಾರ ಪತ್ರಿಕೆಯನ್ನೂ, ಯೂಟ್ಯೂಬ್‌ ಚಾನೆಲ್‌ಅನ್ನೂ ಆರಂಭಿಸಿದ್ದಾರೆ. ರೈತ ಹೋರಾಟ ಪ್ರತಿ ಅಪ್‌ಡೇಟ್‌ಗಳನ್ನೂ ಆ ಮೂಲಕ ಜನರಿಗೆ, ರೈತರಿಗೆ ತಲುಪಿಸುವ ಕೆಲಸವನ್ನೂ ರೈತರೇ ಮಾಡುತ್ತಿದ್ದಾರೆ. ಈ ಮೂಲಕ ರೈತರು ಏಕಕಾಲದಲ್ಲಿ ಮಾಧ್ಯಮ ಮತ್ತು ಸರ್ಕಾರದ ವಿರದ್ದು ಸಮರ ಸಾರಿದ್ದಾರೆ. ವಿಶ್ವದ ಅತೀ ದೊಡ್ಡ ಗಣರಾಜ್ಯದ ರೈತರು ಮಂಗಳವಾರ ತಮ್ಮ ಗಣರಾಜ್ಯೋತ್ಸವನ್ನು ಟ್ರಾಕ್ಟರ್‌ ರ್‍ಯಾಲಿ ಮೂಲಕ ನಡೆಸಿ ಇತಿಹಾಸದ ಪುಟದಲ್ಲಿ ಅಜರಾಮವಾಗಲಿದ್ದಾರೆ. ಹಾಗೆಯೆ ಭಾರತದಲ್ಲಿರುವ ಮಾಧ್ಯಮಗಳು ಅದೇ ಇತಿಹಾಸದ ಪುಟಗಳಲ್ಲಿ ಕಪ್ಪು ಚುಕ್ಕೆಯಾಗಿ ಉಳಿಯಲಿದೆ.

(ಲೇಖಕರು ಪತ್ರಕರ್ತರು, ಅಭಿಪ್ರಾಯಗಳು ವೈಯಕ್ತಿಕವಾದವು)

ಇದನ್ನೂ ಓದಿ: ಗಡಿಯಲ್ಲಿ ಮೃತಪಟ್ಟರೆ ದೇಶಪ್ರೇಮಿ, ಹಕ್ಕುಗಳನ್ನು ಕೇಳಿದರೆ ಖಾಲಿಸ್ಥಾನಿ!

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

2 COMMENTS

  1. ದೇಶದ ರಾಜಧಾನಿಯಲ್ಲಿ ಇವತ್ತು ಗಲಭೆ ಮಾಡುವ ಮೂಲಕ, ರೈತರ ಹೆಸರಿನಲ್ಲಿ ಪ್ರತಿಭಟನೆ ಮಾಡುತ್ತಿದ್ದ ದೇಶದ್ರೋಹಿಗಳು ದಲ್ಲಾಳಿಗಳ ಅಸಲೀ ಬಣ್ಣ ಬಟಾ ಬಯಲಾಗಿದೆ.

    ನಿಜವಾದ ಭಾರತೀಯ ರೈತ ತ್ರಿವರ್ಣ ಧ್ವಜದ ಜಾಗದಲ್ಲಿ ಖಲೀಸ್ಥಾನ್ ಧ್ವಜ ಹಾರಿಸಲಾರ, ರಸ್ತೆಯಲ್ಲಿ ತಲ್ಚಾರ್ ಝಳುಪಿಸಲಾರ

  2. Farmers are not terrorists but there is a paid mafia working along poor farmers to disintigrate our great nation…paid and divisive media like….are supporting anti national activities…. it’s to everyone s knowledge that neither apmc’s are closed nor msp is withdrawn…
    The only motto is to dislodge the present patriot govt by hook or crook….

LEAVE A REPLY

Please enter your comment!
Please enter your name here

- Advertisment -

ಶೂಟ್ ಮಾಡಿಕೊಂಡು ಪ್ರಾಣ ಬಿಟ್ಟ ಕಾನ್ಫಿಡೆಂಟ್ ಗ್ರೂಪ್ ಸಂಸ್ಥಾಪಕ ಸಿ.ಜೆ. ರಾಯ್: ಐಟಿ ದಾಳಿ ಒತ್ತಡದಿಂದ ಆತ್ಮಹತ್ಯೆ ಶಂಕೆ

ಬೆಂಗಳೂರು: ಖ್ಯಾತ ರಿಯಲ್ ಎಸ್ಟೇಟ್ ಉದ್ಯಮಿ, ಕಾನ್ಫಿಡೆಂಟ್ ಗ್ರೂಪ್ (Confident Group) ಅಧ್ಯಕ್ಷ ಡಾ. ಸಿ.ಜೆ. ರಾಯ್ ಅವರು ಶುಕ್ರವಾರ ಬೆಂಗಳೂರಿನ ತಮ್ಮ ಕಚೇರಿಯಲ್ಲಿ ಗನ್ ನಿಂದ ಶೂಟ್ ಮಾಡಿಕೊಂಡು ಆತ್ಮಹತ್ಯೆಗೆ ಶರಣಾಗಿದ್ದಾರೆ.  ಕೇರಳ...

ಕಾಂಗ್ರೆಸ್ ಆಳ್ವಿಕೆಯಲ್ಲಿ ನುಸುಳಲುಕೋರರು ಬಹುಸಂಖ್ಯಾತರಾದರು; ನುಸುಳುಕೋರರಿಂದ ಅಸ್ಸಾಂ ರಕ್ಷಿಸಲು ಬಿಜೆಪಿಗೆ ಮತ ಹಾಕಿ: ಅಮಿತ್ ಶಾ

ಧೇಮಾಜಿ (ಅಸ್ಸಾಂ): ಕಾಂಗ್ರೆಸ್ ಆಳ್ವಿಕೆಯಲ್ಲಿ ಅಸ್ಸಾಂನ ಜನಸಂಖ್ಯಾಶಾಸ್ತ್ರ ಬದಲಾಗಿದೆ ಎಂದು ಹೇಳಿರುವ ಕೇಂದ್ರ ಗೃಹ ಸಚಿವ ಅಮಿತ್ ಶಾ , ಪ್ರಧಾನಿ ನರೇಂದ್ರ ಮೋದಿ ನೇತೃತ್ವದ ಬಿಜೆಪಿ ನೇತೃತ್ವದ ಸರ್ಕಾರ ಈ ಪ್ರವೃತ್ತಿಯನ್ನು...

ಕೊಲ್ಕತ್ತಾ ಅಗ್ನಿ ಅವಘಡ| ಈವರೆಗೆ ವಾವ್ ಮೊಮೋ ಕಂಪನಿ ಗೋದಾಮು ಸೇರಿದಂತೆ ಇತರೆಡೆ 21 ಜನರು ಸಾವನ್ನಪ್ಪಿರುವ ಮಾಹಿತಿ ಲಭ್ಯ  

ಜನವರಿ 26 ರ ಮುಂಜಾನೆ ಕೋಲ್ಕತ್ತಾದ ಆನಂದಪುರ ಪ್ರದೇಶದಲ್ಲಿ ಸಂಭವಿಸಿದ ಭೀಕರ ಬೆಂಕಿ ಅಪಘಾತದಲ್ಲಿ ಸಾವನ್ನಪ್ಪಿದವರ ಸಂಖ್ಯೆ ಗುರುವಾರ 21 ಕ್ಕೆ ಏರಿದ್ದು, 28 ಜನರು ಇನ್ನೂ ನಾಪತ್ತೆಯಾಗಿದ್ದಾರೆ.  ಬೆಂಕಿಯ ಅವಘಡದಲ್ಲಿ ಎರಡು ಗೋದಾಮುಗಳು...

ಮುಟ್ಟಿನ ಆರೋಗ್ಯ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ : ಸುಪ್ರೀಂ ಕೋರ್ಟ್

ಮುಟ್ಟಿನ ಆರೋಗ್ಯ ಸಂವಿಧಾನದ 21ನೇ ವಿಧಿಯಡಿ ಖಾತ್ರಿಪಡಿಸಿದ ಮೂಲಭೂತ ಹಕ್ಕು, ಬದುಕುವ ಹಕ್ಕಿನ ಭಾಗ ಎಂದು ಸುಪ್ರೀಂ ಕೋರ್ಟ್ ಶುಕ್ರವಾರ (ಜ.30) ಮಹತ್ವದ ತೀರ್ಪು ನೀಡಿದೆ. ಎಲ್ಲಾ ರಾಜ್ಯಗಳು ಮತ್ತು ಕೇಂದ್ರಾಡಳಿತ ಪ್ರದೇಶಗಳ ಸರ್ಕಾರಿ,...

ಅತ್ಯಾಚಾರ ಪ್ರಕರಣದಲ್ಲಿ ಎಸ್‌ಪಿ ನಾಯಕ ಮೊಯಿದ್ ಖಾನ್ ಖುಲಾಸೆ: ಬಂಧನದ ಎರಡು ವರ್ಷಗಳ ನಂತರ ಬುಲ್ಡೋಜರ್ ನಿಂದ ಮನೆ ಕೆಡವಿದ್ದ ಯೋಗಿ ಸರ್ಕಾರ

2024 ರಲ್ಲಿ ಅಪ್ರಾಪ್ತ ಬಾಲಕಿಯ ಮೇಲೆ ನಡೆದ ಸಾಮೂಹಿಕ ಅತ್ಯಾಚಾರ ಪ್ರಕರಣದಲ್ಲಿ ಸಮಾಜವಾದಿ ಪಕ್ಷದ ನಾಯಕ ಮೊಯಿದ್ ಖಾನ್ ಅವರನ್ನು ಉತ್ತರ ಪ್ರದೇಶದ ಅಯೋಧ್ಯೆಯ ಪೋಕ್ಸೋ ನ್ಯಾಯಾಲಯವು ಖುಲಾಸೆಗೊಳಿಸಿದೆ.  ಅಪ್ರಾಪ್ತ ಬಾಲಕಿಯ ಮೇಲೆ ನಡೆದ...

ಸಿಎಂ ಸಿದ್ದರಾಮಯ್ಯ, ಡಿಕೆಶಿ ವಿರುದ್ಧ ‘ಸ್ಕ್ಯಾಮ್ ಲಾರ್ಡ್’ ಪೋಸ್ಟ್: ಕರ್ನಾಟಕ ಬಿಜೆಪಿ ಎಕ್ಸ್ ಹ್ಯಾಂಡಲ್ ವಿರುದ್ಧ ಪ್ರಕರಣ ದಾಖಲು

ಕರ್ನಾಟಕ ಮುಖ್ಯಮಂತ್ರಿ ಸಿದ್ದರಾಮಯ್ಯ, ಉಪಮುಖ್ಯಮಂತ್ರಿ ಡಿಕೆ ಶಿವಕುಮಾರ್ ಮತ್ತು ಇತರ ಸಚಿವರನ್ನು ಗುರಿಯಾಗಿಸಿಕೊಂಡು "ಮಾನಹಾನಿಕರ" ಪೋಸ್ಟ್ ಪೋಸ್ಟ್ ಮಾಡಿದ್ದಕ್ಕಾಗಿ ಮತ್ತು ರಾಜ್ಯವನ್ನು "ಲೂಟಿ" ಮಾಡುವಲ್ಲಿ ಅವರು ಭಾಗಿಯಾಗಿದ್ದಾರೆ ಎಂದು ಆರೋಪಿಸಿ ಬಿಜೆಪಿಯ 'ಎಕ್ಸ್'...

‘ನೀವು ಮುಂದೆ ಬರಲು ಸಿದ್ಧರಿದ್ದೀರಾ, ಅಥವಾ ಟ್ವೀಟ್ ಮಾಡುತ್ತಲೇ ಇರುತ್ತೀರಾ?’; ಮೋಹನ್ ದಾಸ್ ಪೈಗೆ ರಾಮಲಿಂಗಾರೆಡ್ಡಿ ಓಪನ್ ಚಾಲೆಂಜ್..!

ಬೆಂಗಳೂರಿನಲ್ಲಿ ಬಿಎಂಟಿಸಿ (BMTC) ಬಸ್‌ಗಳ ಕೊರತೆಯನ್ನು ಎತ್ತಿ, ಖಾಸಗಿ ಕಂಪನಿಗಳಿಗೆ ನಗರ ಬಸ್ ಸೇವೆಗೆ ಅವಕಾಶ ನೀಡಬೇಕು ಎಂದು ಸಲಹೆ ನೀಡಿದ್ದ, ಮೋಹನ್ ದಾಸ್ ಪೈ ಹೇಳಿಕೆಗೆ ಸಾರಿಗೆ ಸಚಿವ ರಾಮಲಿಂಗಾ ರೆಡ್ಡಿ...

ಪ್ಯಾಲೆಸ್ತೀನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಣೆ; ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿಭಟಿಸಬೇಕು : ನಟ ಪ್ರಕಾಶ್ ರಾಜ್

ಬೆಂಗಳೂರು ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ಪ್ಯಾಲೆಸ್ತೀನಿಯನ್ ಸಿನಿಮಾಗಳ ಪ್ರದರ್ಶನಕ್ಕೆ ಅನುಮತಿ ನಿರಾಕರಿಸಿರುವ ಕೇಂದ್ರ ಸರ್ಕಾರದ ಕ್ರಮವನ್ನು ರಾಜ್ಯ ಸರ್ಕಾರ ಗಟ್ಟಿ ದನಿಯಲ್ಲಿ ಪ್ರತಿರೋಧಿಸಬೇಕು, ಪ್ರತಿಭಟಿಸಬೇಕು ಎಂದು ನಟ ಪ್ರಕಾಶ್ ರಾಜ್ ಒತ್ತಾಯಿಸಿದರು. ಗುರುವಾರ (ಜ.29) ಸಂಜೆ...

ಗೌರಿ ಲಂಕೇಶರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ‘ಲ್ಯಾಂಡ್‍ ಲಾರ್ಡ್‌’ನಂತಹ ಸಿನಿಮಾ ಮಾಡಲು ಕೈ ಹಾಕಿದ್ದೇನೆ: ನಟ ದುನಿಯಾ ವಿಜಯ್

ಗೌರಿ ಲಂಕೇಶ್ ಹಾಗೂ ಇತರ ಹೋರಾಟಗಾರರ ನೆರಳು ನನ್ನ ಮೇಲೆ ಬಿದ್ದಿರುವ ಕಾರಣಕ್ಕೆ ನಾನು 'ಲ್ಯಾಂಡ್‍ಲಾರ್ಡ್' ನಂತಹ ಸಿನೆಮಾ ಮಾಡುವುದಕ್ಕೆ ಕೈ ಹಾಕಿದ್ದೇನೆ ಎಂದು ನಟ ದುನಿಯಾ ವಿಜಯ್ ಹೇಳಿದರು. ಗುರುವಾರ (ಜ.29) ಬೆಂಗಳೂರಿನ...

ಜಾತಿ ತಾರತಮ್ಯ ತಡೆಗಟ್ಟುವ ಯುಜಿಸಿಯ ಹೊಸ ನಿಯಮಕ್ಕೆ ಸುಪ್ರೀಂ ಕೋರ್ಟ್ ತಡೆ

ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಜಾತಿ ಆಧಾರಿತ ತಾರತಮ್ಯವನ್ನು ತಡೆಗಟ್ಟಲು ಕೇಂದ್ರ ಸರ್ಕಾರ ಜಾರಿಗೆ ತಂದಿರುವ ವಿಶ್ವವಿದ್ಯಾಲಯ ಅನುದಾನ ಆಯೋಗದ (ಉನ್ನತ ಶಿಕ್ಷಣ ಸಂಸ್ಥೆಗಳಲ್ಲಿ ಸಮಾನತೆಯ ಪ್ರಚಾರ) ನಿಯಮಗಳು, 2026ಕ್ಕೆ ಸುಪ್ರೀಂ ಕೋರ್ಟ್ ಗುರುವಾರ...