Homeಅಂತರಾಷ್ಟ್ರೀಯರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳಿಗಾಗಿ ಭಾರತವು ಫ್ರಾನ್ಸ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ಬೆನ್ನಲ್ಲೇ ಭಾರತದ ಮಧ್ಯವರ್ತಿಯೊಬ್ಬರಿಗೆ ಒಂದು ಮಿಲಿಯನ್ ಯೂರೋ ಪಾವತಿಸಿದೆ ಎಂದು ದೇಶದ ಭ್ರಷ್ಟಾಚಾರ-ವಿರೋಧಿ ಏಜೆನ್ಸಿಯ ತನಿಖೆಯನ್ನು ಉಲ್ಲೇಖಿಸಿ ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ.

ಆ ಮಧ್ಯವರ್ತಿಯು ಮತ್ತೊಂದು ರಕ್ಷಣಾ ಒಪ್ಪಂದದಲ್ಲಿ ಮನಿ ಲಾಂಡರಿಂಗ್ ಪ್ರಕರಣದ ಆರೋಪಿಯಾಗಿದ್ದಾನೆ ಎಂದು ಪತ್ರಿಕೆ ತನ್ನ ವರದಿಯಲ್ಲಿ ತಿಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರಫೇಲ್ ಜೆಟ್‌ಗಳ 50 ಪ್ರತಿಕೃತಿಗಳ ತಯಾರಿಕೆಗೆ ಪಾವತಿಸಲು ಈ ಹಣವನ್ನು ಬಳಸಲಾಗಿದೆ ಎಂದು ಡಸಾಲ್ಟ್ ಹೇಳಿದೆ. “ರಾಫೇಲ್ ಜೆಟ್‌ಗಳ 50 ದೊಡ್ಡ ಪ್ರತಿಕೃತಿಗಳ ತಯಾರಿಕೆಗೆ ಪಾವತಿಸಲು ಈ ಹಣವನ್ನು ಬಳಸಲಾಗಿದೆ ಎಂದು ಕಂಪನಿ ಹೇಳಿದೆ, ಆದರೆ ಈ ಮಾದರಿಗಳನ್ನು ತಯಾರಿಸಲಾಗಿದೆಯೆಂದು ತನಿಖಾಧಿಕಾರಿಗಳಿಗೆ ಯಾವುದೇ ಪುರಾವೆ ನೀಡಲಾಗಿಲ್ಲ” ಎಂದು ಮೀಡಿಯಾಪಾರ್ಟ್ ವರದಿ ಮಾಡಿದೆ.

ಫ್ರೆಂಚ್ ಭ್ರಷ್ಟಾಚಾರ-ವಿರೋಧಿ ಸಂಸ್ಥೆ ‘ಎಜೆನ್ಸ್ ಫ್ರಾಂಕೈಸ್ ಆಂಟಿಕೊರಪ್ಷನ್ (ಎಎಫ್‌ಎ)’ ಅವರು ಡಸಾಲ್ಟ್ ಅವರ ಲೆಕ್ಕಪರಿಶೋಧನೆಯ ಸಮಯದಲ್ಲಿ ಈ ಸಂಗತಿಗಳು ಹೊರಬಿದ್ದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ ಎಎಫ್‌ಎ, ಈ ಪ್ರಕರಣವನ್ನು ಪ್ರಾಸಿಕ್ಯೂಟರ್‌ಗಳಿಗೆ ಉಲ್ಲೇಖಿಸದಿರಲು ನಿರ್ಧರಿಸಿದೆ ಎಂದು ಅದು ಹೇಳಿದೆ.

“2017 ರ ಒಟ್ಟು ವ್ಯವಹಾರ ಗಮನಿಸಿದಾಗ 5,08,925 ಯೂರೋಗಳಷ್ಟು ವೆಚ್ಚವನ್ನು ‘ಗ್ರಾಹಕರಿಗೆ ಉಡುಗೊರೆಗಳು’ ಎಂಬ ಶೀರ್ಷಿಕೆಯಡಿಯಲ್ಲಿ ತರಲಾಗಿದೆ. ಇದು ಎಎಫ್‌ಎ ಅಧಿಕಾರಿಗಳನ್ನು ಆಶ್ಚರ್ಯಗೊಳಿಸಿದೆ ಎಂದು ವರದಿ ತಿಳಿಸಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ನಡೆಸುತ್ತಿರುವ ಭಾರತೀಯ ಕಂಪನಿ ಡೆಫ್ಸಿಸ್ ಸೊಲ್ಯೂಷನ್ಸ್‌ನಿಂದ ಮೇಲಿನ ಹಣಕ್ಕೆ ರಶೀದಿ ನೀಡಲಾಗಿದೆ. ಭಾರತದ ಡಸಾಲ್ಟ್‌ನ ಉಪ ಗುತ್ತಿಗೆದಾರರಲ್ಲಿ ಡೆಫ್ಸಿಸ್ ಕೂಡ ಒಂದಾಗಿದೆ. ಹೆಲಿಕ್ಯಾಪ್ಟರ್ ಡೀಲ್ ಪ್ರಕರಣದಲ್ಲಿ ಸುಶೇನ್ ಗುಪ್ತಾ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು. ಈಗ ಜಾಮೀನು ನೀಡಲಾಗಿದೆ.

ಮಾರ್ಚ್ 30, 2017 ರ ಡೆಫ್ಸಿಸ್ ಸೊಲ್ಯೂಷನ್ಸ್‌ನ ರಶೀದಿ ನೋಡಿದರೆ ಇದು “ಸಾಮಾನ್ಯ ಉಡುಗೊರೆಗಿಂತ ದೊಡ್ಡದಾಗಿದೆ” ಎಂದು ಡಸಾಲ್ಟ್ ಕಂಪನಿ ಸಮರ್ಥಿಸಿಕೊಳ್ಳಲು ಮುಂದಾಗಿತ್ತು ಎನ್ನಲಾಗಿದೆ.

ರಫೇಲ್ ಜೆಟ್‌ಗಳ 50 ಪ್ರತಿಕೃತಿಗಳ ತಯಾರಿಕೆಗಾಗಿ 10,17,850 ಯುರೋಗಳಷ್ಟು ಹಣದ 50 ಪ್ರತಿಶತವನ್ನು ಡೆಫ್ಸಿಸ್‌ಗೆ ಪಾವತಿಸಲಾಗಿದೆ ಎಂದು ರಶೀದಿ ಸೂಚಿಸಿದೆ. ಅಂದರೆ ಪ್ರತಿ ಮಾದರಿಯ ಬೆಲೆ 20,000 ಯೂರೋಗಳಿಗಿಂತ ಹೆಚ್ಚಾಗಿದೆ!

ಆದರೆ ಆ ಪ್ರತಿಕೃತಿಗಳನ್ನು ತಯಾರಿಸಿರುವುದರ ಕುರಿತು ಯಾವುದೇ ಸಾಕ್ಷ್ಯಗಳು ಮತ್ತು ಗ್ರಾಹಕರಿಗೆ ಅಂತಹ ದೊಡ್ಡ ಉಡುಗೊರೆ ನೀಡಿದ್ದು ಏಕೆ ಎಂಬುದರ ಕುರಿತು ಡಸಾಲ್ಟ್ ಯಾವುದೇ ವಿವರಣೆ ನೀಡಿಲ್ಲ ಎಂದು ಮೀಡಿಯಾಪಾರ್ಟ್ ಆರೋಪಿಸಿದೆ.

ಈ ಆರೋಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದೆ.

ಫ್ರೆಂಚ್ ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಎಎಫ್‌ಎ ನಡೆಸಿದ ತನಿಖೆಯಲ್ಲಿ 2016 ರಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಡಸಾಲ್ಟ್ 1.1 ಮಿಲಿಯನ್ ಯೂರೋವನ್ನು ಮಧ್ಯವರ್ತಿಯೊಬ್ಬರಿಗೆ (ಡೆಫ್ಸಿಸ್ ಸೊಲ್ಯೂಷನ್ಸ್) ಪಾವತಿಸಿದೆ ಎಂದು ತಿಳಿದುಬಂದಿದೆ. ಈ ಮೊತ್ತವನ್ನು ‘ಗ್ರಾಹಕರಿಗೆ ಉಡುಗೊರೆಗಳು’ ಎಂದು ಡಸಾಲ್ಟ್ ಕಂಪನಿಯು ಖರ್ಚು ಲೆಕ್ಕದಲ್ಲಿ ತೋರಿಸಲಾಗಿದೆ” ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ಹೇಳಿದ್ದಾರೆ.

“ವಾಸ್ತವದಲ್ಲಿ ಎಷ್ಟು ಲಂಚ ಮತ್ತು ಕಮಿಷನ್ ಅನ್ನು ಪಾವತಿಸಲಾಗಿದೆ? ಮತ್ತು ಭಾರತ ಸರ್ಕಾರದಲ್ಲಿ ಯಾರಿಗೆ ನೀಡಲಾಗಿದೆ ಎಂದು ಕಂಡುಹಿಡಿಯಲು ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದದ ಬಗ್ಗೆ ಪೂರ್ಣ ಮತ್ತು ಸ್ವತಂತ್ರ ತನಿಖೆಯ ಅಗತ್ಯವಿಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.


ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ – ರಫೇಲ್ ಡೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...