Homeಅಂತರಾಷ್ಟ್ರೀಯರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳಿಗಾಗಿ ಭಾರತವು ಫ್ರಾನ್ಸ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ಬೆನ್ನಲ್ಲೇ ಭಾರತದ ಮಧ್ಯವರ್ತಿಯೊಬ್ಬರಿಗೆ ಒಂದು ಮಿಲಿಯನ್ ಯೂರೋ ಪಾವತಿಸಿದೆ ಎಂದು ದೇಶದ ಭ್ರಷ್ಟಾಚಾರ-ವಿರೋಧಿ ಏಜೆನ್ಸಿಯ ತನಿಖೆಯನ್ನು ಉಲ್ಲೇಖಿಸಿ ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ.

ಆ ಮಧ್ಯವರ್ತಿಯು ಮತ್ತೊಂದು ರಕ್ಷಣಾ ಒಪ್ಪಂದದಲ್ಲಿ ಮನಿ ಲಾಂಡರಿಂಗ್ ಪ್ರಕರಣದ ಆರೋಪಿಯಾಗಿದ್ದಾನೆ ಎಂದು ಪತ್ರಿಕೆ ತನ್ನ ವರದಿಯಲ್ಲಿ ತಿಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರಫೇಲ್ ಜೆಟ್‌ಗಳ 50 ಪ್ರತಿಕೃತಿಗಳ ತಯಾರಿಕೆಗೆ ಪಾವತಿಸಲು ಈ ಹಣವನ್ನು ಬಳಸಲಾಗಿದೆ ಎಂದು ಡಸಾಲ್ಟ್ ಹೇಳಿದೆ. “ರಾಫೇಲ್ ಜೆಟ್‌ಗಳ 50 ದೊಡ್ಡ ಪ್ರತಿಕೃತಿಗಳ ತಯಾರಿಕೆಗೆ ಪಾವತಿಸಲು ಈ ಹಣವನ್ನು ಬಳಸಲಾಗಿದೆ ಎಂದು ಕಂಪನಿ ಹೇಳಿದೆ, ಆದರೆ ಈ ಮಾದರಿಗಳನ್ನು ತಯಾರಿಸಲಾಗಿದೆಯೆಂದು ತನಿಖಾಧಿಕಾರಿಗಳಿಗೆ ಯಾವುದೇ ಪುರಾವೆ ನೀಡಲಾಗಿಲ್ಲ” ಎಂದು ಮೀಡಿಯಾಪಾರ್ಟ್ ವರದಿ ಮಾಡಿದೆ.

ಫ್ರೆಂಚ್ ಭ್ರಷ್ಟಾಚಾರ-ವಿರೋಧಿ ಸಂಸ್ಥೆ ‘ಎಜೆನ್ಸ್ ಫ್ರಾಂಕೈಸ್ ಆಂಟಿಕೊರಪ್ಷನ್ (ಎಎಫ್‌ಎ)’ ಅವರು ಡಸಾಲ್ಟ್ ಅವರ ಲೆಕ್ಕಪರಿಶೋಧನೆಯ ಸಮಯದಲ್ಲಿ ಈ ಸಂಗತಿಗಳು ಹೊರಬಿದ್ದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ ಎಎಫ್‌ಎ, ಈ ಪ್ರಕರಣವನ್ನು ಪ್ರಾಸಿಕ್ಯೂಟರ್‌ಗಳಿಗೆ ಉಲ್ಲೇಖಿಸದಿರಲು ನಿರ್ಧರಿಸಿದೆ ಎಂದು ಅದು ಹೇಳಿದೆ.

“2017 ರ ಒಟ್ಟು ವ್ಯವಹಾರ ಗಮನಿಸಿದಾಗ 5,08,925 ಯೂರೋಗಳಷ್ಟು ವೆಚ್ಚವನ್ನು ‘ಗ್ರಾಹಕರಿಗೆ ಉಡುಗೊರೆಗಳು’ ಎಂಬ ಶೀರ್ಷಿಕೆಯಡಿಯಲ್ಲಿ ತರಲಾಗಿದೆ. ಇದು ಎಎಫ್‌ಎ ಅಧಿಕಾರಿಗಳನ್ನು ಆಶ್ಚರ್ಯಗೊಳಿಸಿದೆ ಎಂದು ವರದಿ ತಿಳಿಸಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ನಡೆಸುತ್ತಿರುವ ಭಾರತೀಯ ಕಂಪನಿ ಡೆಫ್ಸಿಸ್ ಸೊಲ್ಯೂಷನ್ಸ್‌ನಿಂದ ಮೇಲಿನ ಹಣಕ್ಕೆ ರಶೀದಿ ನೀಡಲಾಗಿದೆ. ಭಾರತದ ಡಸಾಲ್ಟ್‌ನ ಉಪ ಗುತ್ತಿಗೆದಾರರಲ್ಲಿ ಡೆಫ್ಸಿಸ್ ಕೂಡ ಒಂದಾಗಿದೆ. ಹೆಲಿಕ್ಯಾಪ್ಟರ್ ಡೀಲ್ ಪ್ರಕರಣದಲ್ಲಿ ಸುಶೇನ್ ಗುಪ್ತಾ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು. ಈಗ ಜಾಮೀನು ನೀಡಲಾಗಿದೆ.

ಮಾರ್ಚ್ 30, 2017 ರ ಡೆಫ್ಸಿಸ್ ಸೊಲ್ಯೂಷನ್ಸ್‌ನ ರಶೀದಿ ನೋಡಿದರೆ ಇದು “ಸಾಮಾನ್ಯ ಉಡುಗೊರೆಗಿಂತ ದೊಡ್ಡದಾಗಿದೆ” ಎಂದು ಡಸಾಲ್ಟ್ ಕಂಪನಿ ಸಮರ್ಥಿಸಿಕೊಳ್ಳಲು ಮುಂದಾಗಿತ್ತು ಎನ್ನಲಾಗಿದೆ.

ರಫೇಲ್ ಜೆಟ್‌ಗಳ 50 ಪ್ರತಿಕೃತಿಗಳ ತಯಾರಿಕೆಗಾಗಿ 10,17,850 ಯುರೋಗಳಷ್ಟು ಹಣದ 50 ಪ್ರತಿಶತವನ್ನು ಡೆಫ್ಸಿಸ್‌ಗೆ ಪಾವತಿಸಲಾಗಿದೆ ಎಂದು ರಶೀದಿ ಸೂಚಿಸಿದೆ. ಅಂದರೆ ಪ್ರತಿ ಮಾದರಿಯ ಬೆಲೆ 20,000 ಯೂರೋಗಳಿಗಿಂತ ಹೆಚ್ಚಾಗಿದೆ!

ಆದರೆ ಆ ಪ್ರತಿಕೃತಿಗಳನ್ನು ತಯಾರಿಸಿರುವುದರ ಕುರಿತು ಯಾವುದೇ ಸಾಕ್ಷ್ಯಗಳು ಮತ್ತು ಗ್ರಾಹಕರಿಗೆ ಅಂತಹ ದೊಡ್ಡ ಉಡುಗೊರೆ ನೀಡಿದ್ದು ಏಕೆ ಎಂಬುದರ ಕುರಿತು ಡಸಾಲ್ಟ್ ಯಾವುದೇ ವಿವರಣೆ ನೀಡಿಲ್ಲ ಎಂದು ಮೀಡಿಯಾಪಾರ್ಟ್ ಆರೋಪಿಸಿದೆ.

ಈ ಆರೋಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದೆ.

ಫ್ರೆಂಚ್ ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಎಎಫ್‌ಎ ನಡೆಸಿದ ತನಿಖೆಯಲ್ಲಿ 2016 ರಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಡಸಾಲ್ಟ್ 1.1 ಮಿಲಿಯನ್ ಯೂರೋವನ್ನು ಮಧ್ಯವರ್ತಿಯೊಬ್ಬರಿಗೆ (ಡೆಫ್ಸಿಸ್ ಸೊಲ್ಯೂಷನ್ಸ್) ಪಾವತಿಸಿದೆ ಎಂದು ತಿಳಿದುಬಂದಿದೆ. ಈ ಮೊತ್ತವನ್ನು ‘ಗ್ರಾಹಕರಿಗೆ ಉಡುಗೊರೆಗಳು’ ಎಂದು ಡಸಾಲ್ಟ್ ಕಂಪನಿಯು ಖರ್ಚು ಲೆಕ್ಕದಲ್ಲಿ ತೋರಿಸಲಾಗಿದೆ” ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ಹೇಳಿದ್ದಾರೆ.

“ವಾಸ್ತವದಲ್ಲಿ ಎಷ್ಟು ಲಂಚ ಮತ್ತು ಕಮಿಷನ್ ಅನ್ನು ಪಾವತಿಸಲಾಗಿದೆ? ಮತ್ತು ಭಾರತ ಸರ್ಕಾರದಲ್ಲಿ ಯಾರಿಗೆ ನೀಡಲಾಗಿದೆ ಎಂದು ಕಂಡುಹಿಡಿಯಲು ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದದ ಬಗ್ಗೆ ಪೂರ್ಣ ಮತ್ತು ಸ್ವತಂತ್ರ ತನಿಖೆಯ ಅಗತ್ಯವಿಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.


ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ – ರಫೇಲ್ ಡೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...