Homeಅಂತರಾಷ್ಟ್ರೀಯರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳಿಗಾಗಿ ಭಾರತವು ಫ್ರಾನ್ಸ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ಬೆನ್ನಲ್ಲೇ ಭಾರತದ ಮಧ್ಯವರ್ತಿಯೊಬ್ಬರಿಗೆ ಒಂದು ಮಿಲಿಯನ್ ಯೂರೋ ಪಾವತಿಸಿದೆ ಎಂದು ದೇಶದ ಭ್ರಷ್ಟಾಚಾರ-ವಿರೋಧಿ ಏಜೆನ್ಸಿಯ ತನಿಖೆಯನ್ನು ಉಲ್ಲೇಖಿಸಿ ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ.

ಆ ಮಧ್ಯವರ್ತಿಯು ಮತ್ತೊಂದು ರಕ್ಷಣಾ ಒಪ್ಪಂದದಲ್ಲಿ ಮನಿ ಲಾಂಡರಿಂಗ್ ಪ್ರಕರಣದ ಆರೋಪಿಯಾಗಿದ್ದಾನೆ ಎಂದು ಪತ್ರಿಕೆ ತನ್ನ ವರದಿಯಲ್ಲಿ ತಿಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರಫೇಲ್ ಜೆಟ್‌ಗಳ 50 ಪ್ರತಿಕೃತಿಗಳ ತಯಾರಿಕೆಗೆ ಪಾವತಿಸಲು ಈ ಹಣವನ್ನು ಬಳಸಲಾಗಿದೆ ಎಂದು ಡಸಾಲ್ಟ್ ಹೇಳಿದೆ. “ರಾಫೇಲ್ ಜೆಟ್‌ಗಳ 50 ದೊಡ್ಡ ಪ್ರತಿಕೃತಿಗಳ ತಯಾರಿಕೆಗೆ ಪಾವತಿಸಲು ಈ ಹಣವನ್ನು ಬಳಸಲಾಗಿದೆ ಎಂದು ಕಂಪನಿ ಹೇಳಿದೆ, ಆದರೆ ಈ ಮಾದರಿಗಳನ್ನು ತಯಾರಿಸಲಾಗಿದೆಯೆಂದು ತನಿಖಾಧಿಕಾರಿಗಳಿಗೆ ಯಾವುದೇ ಪುರಾವೆ ನೀಡಲಾಗಿಲ್ಲ” ಎಂದು ಮೀಡಿಯಾಪಾರ್ಟ್ ವರದಿ ಮಾಡಿದೆ.

ಫ್ರೆಂಚ್ ಭ್ರಷ್ಟಾಚಾರ-ವಿರೋಧಿ ಸಂಸ್ಥೆ ‘ಎಜೆನ್ಸ್ ಫ್ರಾಂಕೈಸ್ ಆಂಟಿಕೊರಪ್ಷನ್ (ಎಎಫ್‌ಎ)’ ಅವರು ಡಸಾಲ್ಟ್ ಅವರ ಲೆಕ್ಕಪರಿಶೋಧನೆಯ ಸಮಯದಲ್ಲಿ ಈ ಸಂಗತಿಗಳು ಹೊರಬಿದ್ದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ ಎಎಫ್‌ಎ, ಈ ಪ್ರಕರಣವನ್ನು ಪ್ರಾಸಿಕ್ಯೂಟರ್‌ಗಳಿಗೆ ಉಲ್ಲೇಖಿಸದಿರಲು ನಿರ್ಧರಿಸಿದೆ ಎಂದು ಅದು ಹೇಳಿದೆ.

“2017 ರ ಒಟ್ಟು ವ್ಯವಹಾರ ಗಮನಿಸಿದಾಗ 5,08,925 ಯೂರೋಗಳಷ್ಟು ವೆಚ್ಚವನ್ನು ‘ಗ್ರಾಹಕರಿಗೆ ಉಡುಗೊರೆಗಳು’ ಎಂಬ ಶೀರ್ಷಿಕೆಯಡಿಯಲ್ಲಿ ತರಲಾಗಿದೆ. ಇದು ಎಎಫ್‌ಎ ಅಧಿಕಾರಿಗಳನ್ನು ಆಶ್ಚರ್ಯಗೊಳಿಸಿದೆ ಎಂದು ವರದಿ ತಿಳಿಸಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ನಡೆಸುತ್ತಿರುವ ಭಾರತೀಯ ಕಂಪನಿ ಡೆಫ್ಸಿಸ್ ಸೊಲ್ಯೂಷನ್ಸ್‌ನಿಂದ ಮೇಲಿನ ಹಣಕ್ಕೆ ರಶೀದಿ ನೀಡಲಾಗಿದೆ. ಭಾರತದ ಡಸಾಲ್ಟ್‌ನ ಉಪ ಗುತ್ತಿಗೆದಾರರಲ್ಲಿ ಡೆಫ್ಸಿಸ್ ಕೂಡ ಒಂದಾಗಿದೆ. ಹೆಲಿಕ್ಯಾಪ್ಟರ್ ಡೀಲ್ ಪ್ರಕರಣದಲ್ಲಿ ಸುಶೇನ್ ಗುಪ್ತಾ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು. ಈಗ ಜಾಮೀನು ನೀಡಲಾಗಿದೆ.

ಮಾರ್ಚ್ 30, 2017 ರ ಡೆಫ್ಸಿಸ್ ಸೊಲ್ಯೂಷನ್ಸ್‌ನ ರಶೀದಿ ನೋಡಿದರೆ ಇದು “ಸಾಮಾನ್ಯ ಉಡುಗೊರೆಗಿಂತ ದೊಡ್ಡದಾಗಿದೆ” ಎಂದು ಡಸಾಲ್ಟ್ ಕಂಪನಿ ಸಮರ್ಥಿಸಿಕೊಳ್ಳಲು ಮುಂದಾಗಿತ್ತು ಎನ್ನಲಾಗಿದೆ.

ರಫೇಲ್ ಜೆಟ್‌ಗಳ 50 ಪ್ರತಿಕೃತಿಗಳ ತಯಾರಿಕೆಗಾಗಿ 10,17,850 ಯುರೋಗಳಷ್ಟು ಹಣದ 50 ಪ್ರತಿಶತವನ್ನು ಡೆಫ್ಸಿಸ್‌ಗೆ ಪಾವತಿಸಲಾಗಿದೆ ಎಂದು ರಶೀದಿ ಸೂಚಿಸಿದೆ. ಅಂದರೆ ಪ್ರತಿ ಮಾದರಿಯ ಬೆಲೆ 20,000 ಯೂರೋಗಳಿಗಿಂತ ಹೆಚ್ಚಾಗಿದೆ!

ಆದರೆ ಆ ಪ್ರತಿಕೃತಿಗಳನ್ನು ತಯಾರಿಸಿರುವುದರ ಕುರಿತು ಯಾವುದೇ ಸಾಕ್ಷ್ಯಗಳು ಮತ್ತು ಗ್ರಾಹಕರಿಗೆ ಅಂತಹ ದೊಡ್ಡ ಉಡುಗೊರೆ ನೀಡಿದ್ದು ಏಕೆ ಎಂಬುದರ ಕುರಿತು ಡಸಾಲ್ಟ್ ಯಾವುದೇ ವಿವರಣೆ ನೀಡಿಲ್ಲ ಎಂದು ಮೀಡಿಯಾಪಾರ್ಟ್ ಆರೋಪಿಸಿದೆ.

ಈ ಆರೋಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದೆ.

ಫ್ರೆಂಚ್ ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಎಎಫ್‌ಎ ನಡೆಸಿದ ತನಿಖೆಯಲ್ಲಿ 2016 ರಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಡಸಾಲ್ಟ್ 1.1 ಮಿಲಿಯನ್ ಯೂರೋವನ್ನು ಮಧ್ಯವರ್ತಿಯೊಬ್ಬರಿಗೆ (ಡೆಫ್ಸಿಸ್ ಸೊಲ್ಯೂಷನ್ಸ್) ಪಾವತಿಸಿದೆ ಎಂದು ತಿಳಿದುಬಂದಿದೆ. ಈ ಮೊತ್ತವನ್ನು ‘ಗ್ರಾಹಕರಿಗೆ ಉಡುಗೊರೆಗಳು’ ಎಂದು ಡಸಾಲ್ಟ್ ಕಂಪನಿಯು ಖರ್ಚು ಲೆಕ್ಕದಲ್ಲಿ ತೋರಿಸಲಾಗಿದೆ” ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ಹೇಳಿದ್ದಾರೆ.

“ವಾಸ್ತವದಲ್ಲಿ ಎಷ್ಟು ಲಂಚ ಮತ್ತು ಕಮಿಷನ್ ಅನ್ನು ಪಾವತಿಸಲಾಗಿದೆ? ಮತ್ತು ಭಾರತ ಸರ್ಕಾರದಲ್ಲಿ ಯಾರಿಗೆ ನೀಡಲಾಗಿದೆ ಎಂದು ಕಂಡುಹಿಡಿಯಲು ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದದ ಬಗ್ಗೆ ಪೂರ್ಣ ಮತ್ತು ಸ್ವತಂತ್ರ ತನಿಖೆಯ ಅಗತ್ಯವಿಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.


ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ – ರಫೇಲ್ ಡೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...

ತಂಪು ಪಾನೀಯದಲ್ಲಿ ಮತ್ತು ಬರುವ ಔಷಧ ಬೆರೆಸಿ ಅಪ್ರಾಪ್ತ ಬಾಲಕಿಯರ ಮೇಲೆ ಅತ್ಯಾಚಾರ: ಆರೋಪಿ ಬಂಧನ

ಮುಂಬೈ ನಗರವನ್ನೇ ಬೆಚ್ಚಿಬೀಳಿಸಿದ ಆಘಾತಕಾರಿ ಘಟನೆಯಲ್ಲಿ, ವಕ್ತಿಯೋರ್ವ ಮತ್ತು ಬರುವ ತಂಪು ಪಾನೀಯ ನೀಡಿ ಅಪ್ರಾಪ್ತ ಬಾಲಕಿಯರ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ್ದಾನೆ. ಅಪರಾಧದ ಅಶ್ಲೀಲ ವೀಡಿಯೊಗಳನ್ನು ರೆಕಾರ್ಡ್ ಮಾಡಿ, ನಂತರ ವೀಡಿಯೊಗಳನ್ನು...

ಮನರೇಗಾ ಬದಲು ವಿಬಿ-ಜಿ ರಾಮ್ ಜಿ : ಲೋಕಸಭೆಯಲ್ಲಿ ಮಸೂದೆ ಅಂಗೀಕಾರದ ವೇಳೆ ಸಭಾತ್ಯಾಗಕ್ಕೆ ನಿರ್ಧರಿಸಿದ ವಿಪಕ್ಷಗಳು

ನರೇಗಾ ಬದಲು ತಂದಿರುವ ವಿಕಸಿತ್ ಭಾರತ್-ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕಾ ಮಿಷನ್ (ಗ್ರಾಮೀಣ್) ಮಸೂದೆ, 2025 (ವಿಬಿ–ಜಿ ರಾಮ್ ಜಿ ಮಸೂದೆ) ಲೋಕಸಭೆಯಲ್ಲಿ ಅಂಗೀಕಾರದ ವೇಳೆ ಸಹಕರಿಸದಿರಲು ವಿರೋಧ ಪಕ್ಷಗಳ ಸಂಸದರು...

ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ ಆರೋಪ: ಮ್ಯೂಸಿಕ್ ಮೈಲಾರಿ ಮೇಲೆ ಪೋಕ್ಸೋ ಪ್ರಕರಣ ದಾಖಲು 

ಬೆಂಗಳೂರು: ಉತ್ತರ ಕರ್ನಾಟಕದ ಜನಪದ ಗಾಯಕ ಹಾಗೂ ಯೂಟ್ಯೂಬ್ ಸ್ಟಾರ್ ಎಂದೇ ಖ್ಯಾತಿ ಪಡೆದಿದ್ದ ‘ಮ್ಯೂಸಿಕ್ ಮೈಲಾರಿ’ಎಂಬಾತನನ್ನು ಅಪ್ರಾಪ್ತೆ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪದಡಿ ಮಹಾಲಿಂಗಪುರ ಪೊಲೀಸರು ಬಂಧಿಸಿದ್ದಾರೆ. ಈ ಪ್ರಕರಣಕ್ಕೆ ಸಂಬಂಧಿಸಿದಂತೆ ಮೈಲಾರಿ...

ಇಂಧನ ಖರೀದಿಗೆ ‘ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ’ ಕಡ್ಡಾಯಗೊಳಿಸಿದ ದೆಹಲಿ ಸರ್ಕಾರ

ರಾಷ್ಟ್ರ ರಾಜಧಾನಿ ದೆಹಲಿಯ ವಾಹನ ಮಾಲೀಕರು ಕಟ್ಟುನಿಟ್ಟಾದ ಆದೇಶ ಎದುರಿಸುತ್ತಾರೆ. ಡಿಸೆಂಬರ್ 18 ರಿಂದ ನಗರದಾದ್ಯಂತದ ಪೆಟ್ರೋಲ್ ಬಂಕ್‌ಗಳಲ್ಲಿ ಇಂಧನ ಖರೀದಿಗೆ ಮಾಲಿನ್ಯ ನಿಯಂತ್ರಣ ಪ್ರಮಾಣಪತ್ರ (ಪಿಯುಸಿ) ಕಡ್ಡಾಯಗೊಳಿಸಲಾಗಿದೆ. ದೆಹಲಿ ಪರಿಸರ ಸಚಿವ ಮಂಜಿಂದರ್...

ವೈದ್ಯೆಯ ಹಿಜಾಬ್ ಎಳೆದ ಬಿಹಾರ ಸಿಎಂ, ಅವಹೇಳನ ಮಾಡಿದ ಯುಪಿ ಸಚಿವನ ವಿರುದ್ದ ದೂರು ದಾಖಲು

ವೈದ್ಯೆಯ ಹಿಜಾಬ್ ಎಳೆದ ಬಿಹಾರದ ಮುಖ್ಯಮಂತ್ರಿ ನಿತೀಶ್ ಕುಮಾರ್ ಮತ್ತು ಈ ಘಟನೆಯ ಕುರಿತು ಮಾತನಾಡುವಾಗ ಮಹಿಳೆಯನ್ನು ಅವಮಾನಿಸಿದ ಉತ್ತರ ಪ್ರದೇಶದ ಸಂಪುಟ ಸಚಿವ ಸಂಜಯ್ ನಿಶಾದ್ ವಿರುದ್ದ ಲಕ್ನೋದ ಕೈಸರ್‌ಬಾಗ್ ಪೊಲೀಸ್...

1 ಲಕ್ಷ ರೂಪಾಯಿ ಸಾಲ 74 ಲಕ್ಷ ರೂಪಾಯಿಗೆ ಏರಿಕೆ, ಸಾಲ ತೀರಿಸಲು ಕಿಡ್ನಿ ಮಾರಿದ ರೈತ 

ಅಕ್ರಮವಾಗಿ ಸಾಲ ನೀಡುವವರಿಂದ 1 ಲಕ್ಷ ಸಾಲ ಪಡೆದಿದ್ದು, ಅದಕ್ಕೆ ಹೆಚ್ಚಿನ ದಿನದ ಬಡ್ಡಿ ಸೇರಿ 75 ಲಕ್ಷ ಸಾಲ ಏರಿಕೆಯಾದ ಕಾರಣ ವ್ಯಕ್ತಿಯೊಬ್ಬ ತನ್ನ ಕಿಡ್ನಿಯನ್ನೇ ಮಾರಾಟ ಮಾಡಿರುವ ಘಟನೆ ಮಹಾರಾಷ್ಟ್ರದಲ್ಲಿ...