Homeಅಂತರಾಷ್ಟ್ರೀಯರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

ರಫೇಲ್ ಒಪ್ಪಂದಕ್ಕಾಗಿ ಭಾರತೀಯ ಮಧ್ಯವರ್ತಿಗೆ 1 ಮಿಲಿಯನ್ ಯೂರೋ ನೀಡಲಾಗಿದೆ: ವರದಿ

- Advertisement -
- Advertisement -

ಫ್ರೆಂಚ್ ಯುದ್ಧ ವಿಮಾನ ರಫೇಲ್ ತಯಾರಕರಾದ ಡಸಾಲ್ಟ್ ಕಂಪನಿಯು, 36 ರಫೇಲ್‌ ವಿಮಾನಗಳಿಗಾಗಿ ಭಾರತವು ಫ್ರಾನ್ಸ್‌ನೊಂದಿಗೆ ಒಪ್ಪಂದಕ್ಕೆ ಸಹಿ ಹಾಕಿದ ಬೆನ್ನಲ್ಲೇ ಭಾರತದ ಮಧ್ಯವರ್ತಿಯೊಬ್ಬರಿಗೆ ಒಂದು ಮಿಲಿಯನ್ ಯೂರೋ ಪಾವತಿಸಿದೆ ಎಂದು ದೇಶದ ಭ್ರಷ್ಟಾಚಾರ-ವಿರೋಧಿ ಏಜೆನ್ಸಿಯ ತನಿಖೆಯನ್ನು ಉಲ್ಲೇಖಿಸಿ ಫ್ರೆಂಚ್ ಪತ್ರಿಕೆ “ಮೀಡಿಯಾಪಾರ್ಟ್” ಆರೋಪಿಸಿದೆ.

ಆ ಮಧ್ಯವರ್ತಿಯು ಮತ್ತೊಂದು ರಕ್ಷಣಾ ಒಪ್ಪಂದದಲ್ಲಿ ಮನಿ ಲಾಂಡರಿಂಗ್ ಪ್ರಕರಣದ ಆರೋಪಿಯಾಗಿದ್ದಾನೆ ಎಂದು ಪತ್ರಿಕೆ ತನ್ನ ವರದಿಯಲ್ಲಿ ತಿಳಿಸಿದೆ ಎಂದು ಎನ್‌ಡಿಟಿವಿ ವರದಿ ಮಾಡಿದೆ.

ರಫೇಲ್ ಜೆಟ್‌ಗಳ 50 ಪ್ರತಿಕೃತಿಗಳ ತಯಾರಿಕೆಗೆ ಪಾವತಿಸಲು ಈ ಹಣವನ್ನು ಬಳಸಲಾಗಿದೆ ಎಂದು ಡಸಾಲ್ಟ್ ಹೇಳಿದೆ. “ರಾಫೇಲ್ ಜೆಟ್‌ಗಳ 50 ದೊಡ್ಡ ಪ್ರತಿಕೃತಿಗಳ ತಯಾರಿಕೆಗೆ ಪಾವತಿಸಲು ಈ ಹಣವನ್ನು ಬಳಸಲಾಗಿದೆ ಎಂದು ಕಂಪನಿ ಹೇಳಿದೆ, ಆದರೆ ಈ ಮಾದರಿಗಳನ್ನು ತಯಾರಿಸಲಾಗಿದೆಯೆಂದು ತನಿಖಾಧಿಕಾರಿಗಳಿಗೆ ಯಾವುದೇ ಪುರಾವೆ ನೀಡಲಾಗಿಲ್ಲ” ಎಂದು ಮೀಡಿಯಾಪಾರ್ಟ್ ವರದಿ ಮಾಡಿದೆ.

ಫ್ರೆಂಚ್ ಭ್ರಷ್ಟಾಚಾರ-ವಿರೋಧಿ ಸಂಸ್ಥೆ ‘ಎಜೆನ್ಸ್ ಫ್ರಾಂಕೈಸ್ ಆಂಟಿಕೊರಪ್ಷನ್ (ಎಎಫ್‌ಎ)’ ಅವರು ಡಸಾಲ್ಟ್ ಅವರ ಲೆಕ್ಕಪರಿಶೋಧನೆಯ ಸಮಯದಲ್ಲಿ ಈ ಸಂಗತಿಗಳು ಹೊರಬಿದ್ದಿವೆ ಎಂದು ವರದಿಯಲ್ಲಿ ತಿಳಿಸಲಾಗಿದೆ. ಆದರೆ ಎಎಫ್‌ಎ, ಈ ಪ್ರಕರಣವನ್ನು ಪ್ರಾಸಿಕ್ಯೂಟರ್‌ಗಳಿಗೆ ಉಲ್ಲೇಖಿಸದಿರಲು ನಿರ್ಧರಿಸಿದೆ ಎಂದು ಅದು ಹೇಳಿದೆ.

“2017 ರ ಒಟ್ಟು ವ್ಯವಹಾರ ಗಮನಿಸಿದಾಗ 5,08,925 ಯೂರೋಗಳಷ್ಟು ವೆಚ್ಚವನ್ನು ‘ಗ್ರಾಹಕರಿಗೆ ಉಡುಗೊರೆಗಳು’ ಎಂಬ ಶೀರ್ಷಿಕೆಯಡಿಯಲ್ಲಿ ತರಲಾಗಿದೆ. ಇದು ಎಎಫ್‌ಎ ಅಧಿಕಾರಿಗಳನ್ನು ಆಶ್ಚರ್ಯಗೊಳಿಸಿದೆ ಎಂದು ವರದಿ ತಿಳಿಸಿದೆ.

ಅಗುಸ್ಟಾವೆಸ್ಟ್‌ಲ್ಯಾಂಡ್ ಪ್ರಕರಣದಲ್ಲಿ ವಿ.ವಿ.ಐ.ಪಿ ಹೆಲಿಕ್ಯಾಪ್ಟರ್‌ಗಳ ಒಪ್ಪಂದದಲ್ಲಿ ಭಾರತದಲ್ಲಿ ಕಿಕ್‌ಬ್ಯಾಕ್‌ ಪಡೆದ ಆರೋಪದ ಮೇಲೆ ಸಿಬಿಐ ಮತ್ತು ಜಾರಿ ನಿರ್ದೇಶನಾಲಯದಿಂದ ತನಿಖೆ ಎದುರಿಸುತ್ತಿರುವ ಸುಶೇನ್ ಗುಪ್ತಾ ನಡೆಸುತ್ತಿರುವ ಭಾರತೀಯ ಕಂಪನಿ ಡೆಫ್ಸಿಸ್ ಸೊಲ್ಯೂಷನ್ಸ್‌ನಿಂದ ಮೇಲಿನ ಹಣಕ್ಕೆ ರಶೀದಿ ನೀಡಲಾಗಿದೆ. ಭಾರತದ ಡಸಾಲ್ಟ್‌ನ ಉಪ ಗುತ್ತಿಗೆದಾರರಲ್ಲಿ ಡೆಫ್ಸಿಸ್ ಕೂಡ ಒಂದಾಗಿದೆ. ಹೆಲಿಕ್ಯಾಪ್ಟರ್ ಡೀಲ್ ಪ್ರಕರಣದಲ್ಲಿ ಸುಶೇನ್ ಗುಪ್ತಾ ಅವರನ್ನು ಈ ಹಿಂದೆ ಬಂಧಿಸಲಾಗಿತ್ತು. ಈಗ ಜಾಮೀನು ನೀಡಲಾಗಿದೆ.

ಮಾರ್ಚ್ 30, 2017 ರ ಡೆಫ್ಸಿಸ್ ಸೊಲ್ಯೂಷನ್ಸ್‌ನ ರಶೀದಿ ನೋಡಿದರೆ ಇದು “ಸಾಮಾನ್ಯ ಉಡುಗೊರೆಗಿಂತ ದೊಡ್ಡದಾಗಿದೆ” ಎಂದು ಡಸಾಲ್ಟ್ ಕಂಪನಿ ಸಮರ್ಥಿಸಿಕೊಳ್ಳಲು ಮುಂದಾಗಿತ್ತು ಎನ್ನಲಾಗಿದೆ.

ರಫೇಲ್ ಜೆಟ್‌ಗಳ 50 ಪ್ರತಿಕೃತಿಗಳ ತಯಾರಿಕೆಗಾಗಿ 10,17,850 ಯುರೋಗಳಷ್ಟು ಹಣದ 50 ಪ್ರತಿಶತವನ್ನು ಡೆಫ್ಸಿಸ್‌ಗೆ ಪಾವತಿಸಲಾಗಿದೆ ಎಂದು ರಶೀದಿ ಸೂಚಿಸಿದೆ. ಅಂದರೆ ಪ್ರತಿ ಮಾದರಿಯ ಬೆಲೆ 20,000 ಯೂರೋಗಳಿಗಿಂತ ಹೆಚ್ಚಾಗಿದೆ!

ಆದರೆ ಆ ಪ್ರತಿಕೃತಿಗಳನ್ನು ತಯಾರಿಸಿರುವುದರ ಕುರಿತು ಯಾವುದೇ ಸಾಕ್ಷ್ಯಗಳು ಮತ್ತು ಗ್ರಾಹಕರಿಗೆ ಅಂತಹ ದೊಡ್ಡ ಉಡುಗೊರೆ ನೀಡಿದ್ದು ಏಕೆ ಎಂಬುದರ ಕುರಿತು ಡಸಾಲ್ಟ್ ಯಾವುದೇ ವಿವರಣೆ ನೀಡಿಲ್ಲ ಎಂದು ಮೀಡಿಯಾಪಾರ್ಟ್ ಆರೋಪಿಸಿದೆ.

ಈ ಆರೋಪಗಳ ಕುರಿತು ಪ್ರಧಾನಿ ನರೇಂದ್ರ ಮೋದಿಯವರು ಹೇಳಿಕೆ ನೀಡಬೇಕೆಂದು ಕಾಂಗ್ರೆಸ್ ಪಕ್ಷ ಪತ್ರಿಕಾಗೋಷ್ಠಿ ನಡೆಸಿ ಒತ್ತಾಯಿಸಿದೆ.

ಫ್ರೆಂಚ್ ಭ್ರಷ್ಟಾಚಾರ ನಿಗ್ರಹ ಸಂಸ್ಥೆ ಎಎಫ್‌ಎ ನಡೆಸಿದ ತನಿಖೆಯಲ್ಲಿ 2016 ರಲ್ಲಿ ಒಪ್ಪಂದಕ್ಕೆ ಸಹಿ ಹಾಕಿದ ನಂತರ, ಡಸಾಲ್ಟ್ 1.1 ಮಿಲಿಯನ್ ಯೂರೋವನ್ನು ಮಧ್ಯವರ್ತಿಯೊಬ್ಬರಿಗೆ (ಡೆಫ್ಸಿಸ್ ಸೊಲ್ಯೂಷನ್ಸ್) ಪಾವತಿಸಿದೆ ಎಂದು ತಿಳಿದುಬಂದಿದೆ. ಈ ಮೊತ್ತವನ್ನು ‘ಗ್ರಾಹಕರಿಗೆ ಉಡುಗೊರೆಗಳು’ ಎಂದು ಡಸಾಲ್ಟ್ ಕಂಪನಿಯು ಖರ್ಚು ಲೆಕ್ಕದಲ್ಲಿ ತೋರಿಸಲಾಗಿದೆ” ಎಂದು ಕಾಂಗ್ರೆಸ್ ವಕ್ತಾರ ರಂದೀಪ್ ಸುರ್ಜೆವಾಲಾ ಹೇಳಿದ್ದಾರೆ.

“ವಾಸ್ತವದಲ್ಲಿ ಎಷ್ಟು ಲಂಚ ಮತ್ತು ಕಮಿಷನ್ ಅನ್ನು ಪಾವತಿಸಲಾಗಿದೆ? ಮತ್ತು ಭಾರತ ಸರ್ಕಾರದಲ್ಲಿ ಯಾರಿಗೆ ನೀಡಲಾಗಿದೆ ಎಂದು ಕಂಡುಹಿಡಿಯಲು ಭಾರತದ ಅತಿದೊಡ್ಡ ರಕ್ಷಣಾ ಒಪ್ಪಂದದ ಬಗ್ಗೆ ಪೂರ್ಣ ಮತ್ತು ಸ್ವತಂತ್ರ ತನಿಖೆಯ ಅಗತ್ಯವಿಲ್ಲವೇ?” ಎಂದು ಕಾಂಗ್ರೆಸ್ ಪ್ರಶ್ನಿಸಿದೆ.


ಇದನ್ನೂ ಓದಿ: ರಕ್ಷಣಾ ಇಲಾಖೆಯ ಅತಿದೊಡ್ಡ ಹಗರಣ – ರಫೇಲ್ ಡೀಲ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...