Homeಕರೋನಾ ತಲ್ಲಣಕೋವಿಡ್ ಕುರಿತ ಬಾಬಾ ರಾಮದೇವ್ ಹುಚ್ಚಾಟ: ಕಾನೂನು ಕ್ರಮಕ್ಕೆ ವೈದ್ಯಕೀಯ ಸಂಘ ಒತ್ತಾಯ

ಕೋವಿಡ್ ಕುರಿತ ಬಾಬಾ ರಾಮದೇವ್ ಹುಚ್ಚಾಟ: ಕಾನೂನು ಕ್ರಮಕ್ಕೆ ವೈದ್ಯಕೀಯ ಸಂಘ ಒತ್ತಾಯ

- Advertisement -
- Advertisement -

ಪದೇ ಪದೇ ಕೋವಿಡ್ ಕುರಿತಂತೆ ಏನನ್ನೋ ಅವೈಜ್ಞಾನಿಕವಾದುದನ್ನು ಹೇಳುವ ಮೂಲಕ, ಯಾವುದೋ ಔಷ಼ಧಿಯನ್ನು ಕೋವಿಡ್‌ಗೆ ರಾಮಬಾಣ ಎಂದು ಸುದ್ದಿ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವ ಬಾಬಾ ರಾಮದೇವ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೇಶದ ವೈದ್ಯರ ಪ್ರಾತಿನಿಧಿಕ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಒತ್ತಾಯಿಸಿದೆ.

ಇತ್ತೀಚೆಗೆ ರಾಮದೇವ್ ಅವರು ಅಲೋಫಥಿಕ್ ವಿಜ್ಞಾನ (ಆಧುನಿಕ ವೈದ್ಯ ವಿಜ್ಞಾನ) ಮತ್ತು ಅಲೊಪಥಿಕ್ ವೈದ್ಯರ ಕುರಿತಾಗಿ ಕ್ಷುಲ್ಲಕವಾಗಿ ಮಾತನಾಡಿದ್ದರು.

‘ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಲೋಪಥಿಕ್ ವೈದ್ಯರು ಮುಂಚೂಣಿಯಲ್ಲಿದ್ದಾರೆ. ಈವರೆಗೆ 1,200 ವೈದ್ಯರು ಈ ಕಾರಣಕ್ಕೇ ಜೀವ ಕಳೆದುಕೊಂಡಿದ್ದಾರೆ. ಅಂತಹವರನ್ನು ಅವಮಾನಿಸುವ ಕೆಲಸವನ್ನು ಮಾಡುವ ಮೂಲಕ ಬಾಬಾ ರಾಮದೇವ್ ಎಂಬ ಸ್ವಯಂಘೋಷಿತ ದೇವಮಾನವ, ವೈದ್ಯರು ಮತ್ತು ರೋಗಿಗಳ ನಡುವೆ ಅವಿಶ್ವಾಸ ಮಾಡಿಸುವ ಕೆಲಸವನ್ನು ಮಾಡುತ್ತ ಬಂದಿದ್ದಾರೆ. ಇದು ವೈದ್ಯ ಸಮೂಹಕ್ಕೆ ಹಿನ್ನಡೆ ಮಾಡುವ ಕೆಲಸವಾಗಿದೆ. ವಿಜ್ಞಾನದ ಬದಲು ಮೌಢ್ಯವನ್ನು ಅವರು ಹರಡುತ್ತಿದ್ದಾರೆ. ಕೂಡಲೇ ರಾಮದೇವ್ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು’ ಎಂದು ಐಎಂಎ ಒತ್ತಾಯ ಮಾಡಿದೆ.

ವೃತ್ತಿಪರರು ದೇಶದ ಆರೋಗ್ಯ ರಕ್ಷಣೆಯನ್ನು ವೃತ್ತಿಪರ ರೀತಿಯಲ್ಲಿ ನಿರ್ವಹಿಸಬೇಕು. ಅವೈಜ್ಞಾನಿಕ ಅನಕ್ಷರತೆಯನ್ನು ಕಿವುಡು ಕಿವಿ ಮತ್ತು ಕುರುಡು ಕಣ್ಣುಗಳಿಂದ ಚಿಕಿತ್ಸೆ ನೀಡುವುದು ಅಷ್ಟೇನೂ ವೃತ್ತಿಪರತೆಯಲ್ಲ ಎಂದು ಐಎಂಎ ಚಾಟಿ ಬೀಸಿದೆ.

ಬಾಬಾ ರಾಮದೇವ್ ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ತಮ್ಮ ಪತಂಜಲಿ ಕಂಪನಿಯಿಂದ ಯಾವುದೇ ವೈಜ್ಞಾನಿಕ ಟ್ರಯಲ್ಸ್‌ಗಳಿಲ್ಲದೇ ಕೊರೊನಿಲ್ ಎಂಬ ಔಷಧಿ ಬಿಡುಗಡೆ ಮಾಡಿದ್ದರು. ಆಗಲೂ ಸರ್ಕಾರ ಸುಮ್ಮನೇ ಇತ್ತು ಎಂಬುದನ್ನು ಇಲ್ಲಿ ಗಮನಿಸಬಹುದು.

ಇತ್ತೀಚೆಗೆ ಕೆಲ ತಿಂಗಳ ಹಿಂದೆ ಅವರು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಸಮ್ಮುಖದಲ್ಲಿ ತಮ್ಮ ಕೊರೊನಿಲ್ ವಿಶ್ವ ಆರೋಗ್ಯ ಸಂಸ್ಥೆಯ ಪ್ರಮಾಣಿತ ಔಷಧಿ ಎಂದು ಸುಳ್ಳು ಹೇಳಿ ಮತ್ತೊಮ್ಮೆ ಸಿಕ್ಕು ಬಿದ್ದಿದ್ದರು.

ಈಗ ಇಡೀ ವೈದ್ಯಕೀಯ ಸಮೂಹವನ್ನೇ ಗೇಲಿ ಮಾಡುವ ಮೂಲಕ, ಅಸಂಸದೀಯ ಪದಗಳ ಮೂಲಕ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರನ್ನು ಅವಮಾನಿಸಲು ನೋಡಿದ್ದಾರೆ,
ಈಗ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಐಎಂಎ ಅಧಿಕೃತ ಒತ್ತಾಯ ಮಾಡಿದೆ.


ಇದನ್ನೂ ಓದಿ; ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕ, ಇಸ್ರೇಲ್, ಇರಾನ್ ದಾಳಿ-ಪ್ರತಿ ದಾಳಿ : ಈವರೆಗೆ ಕನಿಷ್ಠ 8 ಸಾವು

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ಜಂಟಿಯಾಗಿ ಇರಾನ್ ಮೇಲೆ ನಡೆಸಿದ ದಾಳಿ ಹಾಗೂ ಅದಕ್ಕೆ ಪ್ರತಿಯಾಗಿ ಇರಾನ್ ನಡೆಸಿದ ಪ್ರತಿ-ದಾಳಿಗಳಲ್ಲಿ ಹಲವು ಸಾವು-ನೋವುಗಳು ಸಂಭವಿಸಿದ ಬಗ್ಗೆ ವರದಿಯಾಗಿದೆ. ದಕ್ಷಿಣ ಇರಾನ್‌ನ ಮಿನಾಬ್‌ನಲ್ಲಿರುವ ಹೆಣ್ಣು...

ಮಧ್ಯಪ್ರಾಚ್ಯ ಉದ್ವಿಗ್ನ : ಯುಎಇ, ಬಹ್ರೇನ್‌, ಕತಾರ್, ಕುವೈತ್‌ನ ಅಮೆರಿಕ ಸೇನಾ ನೆಲೆಗಳ ಮೇಲೆ ಇರಾನ್ ಪ್ರತಿ ದಾಳಿ!

ಶನಿವಾರ (ಫೆ.28) ಇಸ್ರೇಲ್ ಮತ್ತು ಅಮೆರಿಕ ನಡೆಸಿದ ಜಂಟಿ ದಾಳಿಗೆ ಪ್ರತಿಯಾಗಿ, ಇರಾನ್ ಅಮೆರಿಕದ ಮಿಲಿಟರಿ ನೆಲೆಗಳಿರುವ ಹಲವು ಅರಬ್ ರಾಷ್ಟ್ರಗಳ ಮೇಲೆ ಕ್ಷಿಪಣಿ ದಾಳಿ ನಡೆಸಿದೆ ಎಂದು ವರದಿಯಾಗಿದೆ. ಇರಾನ್ ಉಡಾಯಿಸಿದ ಬ್ಯಾಲಿಸ್ಟಿಕ್...

ರಾಜ್ಯಸಭೆಗೆ ಮೇನಕಾ ಗುರುಸ್ವಾಮಿ : ದೇಶದ ಮೊದಲ LGBTQ+ ಸಂಸದೆಯಾಗಲು ಅಣಿಯಾದ ಹಿರಿಯ ವಕೀಲೆ

ರಾಜ್ಯಸಭಾ ಚುನಾವಣೆಗೆ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಶುಕ್ರವಾರ (ಫೆ.27) ವಕೀಲೆ ಮೇನಕಾ ಗುರುಸ್ವಾಮಿ, ಪಶ್ಚಿಮ ಬಂಗಾಳದ ಮಾಜಿ ಪೊಲೀಸ್ ಮುಖ್ಯಸ್ಥ ರಾಜೀವ್ ಕುಮಾರ್, ರಾಜ್ಯ ಸಂಪುಟ ಸಚಿವ ಬಾಬುಲ್ ಸುಪ್ರಿಯೋ ಮತ್ತು ನಟಿ...

ದಾಳಿ ಮುಂದುವರಿಸುವ ಸೂಚನೆ ನೀಡಿದ ಟ್ರಂಪ್ : ಇರಾನ್‌ನಿಂದ ತೀವ್ರ ಪ್ರತಿದಾಳಿಯ ಎಚ್ಚರಿಕೆ

ಅಮೆರಿಕದ ಸಹಯೋಗದೊಂದಿಗೆ ಇಸ್ರೇಲ್ ಶನಿವಾರ (ಫೆ.28) ಇರಾನ್‌ ಮೇಲೆ ಕ್ಷಿಪಣಿ ದಾಳಿ ನಡೆಸಿದೆ. ಇದರಿಂದ ಮಧ್ಯಪ್ರಾಚ್ಯದಲ್ಲಿ ಯುದ್ಧ ಪ್ರಾರಂಭವಾಗುವಾಗ ಎಲ್ಲಾ ಲಕ್ಷಣಗಳು ಗೋಚರಿಸುತ್ತಿವೆ. ಇಸ್ರೇಲ್‌ ಇರಾನ್‌ನ ರಾಜಧಾನಿ ಟೆಹ್ರಾನ್‌ ಸೇರಿದಂತೆ ದೇಶದ ಹಲವು ಸ್ಥಳಗಳ...

ಅಮೆರಿಕ ಅಣತಿಯಂತೆ ಇರಾನ್ ಮೇಲೆ ಇಸ್ರೇಲ್ ದಾಳಿ : ಟೆಹ್ರಾನ್‌ನ ಹಲವೆಡೆ ಭಾರೀ ಸ್ಪೋಟ

ಇರಾನ್ ಮೇಲೆ ಇಸ್ರೇಲ್ ಶನಿವಾರ (ಫೆ.28) ವೈಮಾನಿಕ ದಾಳಿ ನಡೆಸಿರುವುದಾಗಿ ಅಂತಾರಾಷ್ಟ್ರೀಯ ಮಾಧ್ಯಮಗಳು ವರದಿ ಮಾಡಿವೆ. ಈ ದಾಳಿಯನ್ನು ಇಸ್ರೇಲ್ 'ಪೂರ್ವಭಾವಿ ದಾಳಿ' ಎಂದು ಕರೆದಿದೆ. ಇಂದು ಬೆಳಿಗ್ಗಿನ ಹೇಳಿಕೆಯೊಂದರಲ್ಲಿ, ಇಸ್ರೇಲ್ ರಕ್ಷಣಾ ಸಚಿವ...

ನಟಿಯ ಅಪಹರಣ, ಅತ್ಯಾಚಾರ ಪ್ರಕರಣ : ನಟ ದಿಲೀಪ್, ಇತರರ ಖುಲಾಸೆ ಪ್ರಶ್ನಿಸಿ ಮೇಲ್ಮನವಿ ಸಲ್ಲಿಸಿದ ಕೇರಳ ಸರ್ಕಾರ

ನಟಿಯ ಅಪಹರಣ ಮತ್ತು ಅತ್ಯಾಚಾರ ಪ್ರಕರಣದಲ್ಲಿ (2017ರ ಪ್ರಕರಣ) ಮಲಯಾಳಂನ ಪ್ರಮುಖ ನಟ ದಿಲೀಪ್ ಅವರನ್ನು ಎಲ್ಲಾ ಆರೋಪಗಳಿಂದ ಮುಕ್ತಗೊಳಿಸಿದ ಸೆಷನ್ಸ್ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಕೇರಳ ಸರ್ಕಾರ ಹೈಕೋರ್ಟ್‌ಗೆ ಅರ್ಜಿ ಸಲ್ಲಿಸಿದೆ. ಪ್ರಕರಣದ...

‘ದಿ ಕೇರಳ ಸ್ಟೋರಿ-2’ ಬಿಡುಗಡೆಗೆ ವಿಧಿಸಿದ್ದ ತಡೆಯಾಜ್ಞೆ ತೆರವು

'ದಿ ಕೇರಳ ಸ್ಟೋರಿ-2 : ಗೋಸ್ ಬಿಯಾಂಡ್' ಚಿತ್ರದ ಬಿಡುಗಡೆಗೆ ವಿಧಿಸಲಾಗಿದ್ದ ಮಧ್ಯಂತರ ತಡೆಯಾಜ್ಞೆಯನ್ನು ಕೇರಳ ಹೈಕೋರ್ಟ್ ವಿಭಾಗೀಯ ಪೀಠ ಶುಕ್ರವಾರ (ಫೆ.27) ತೆರವುಗೊಳಿಸಿದೆ. 'ಕೋಮು ಸಾಮರಸ್ಯ ಕದಡುವ ಸಾಧ್ಯತೆ'ಯನ್ನು ಉಲ್ಲೇಖಿಸಿ ನ್ಯಾಯಮೂರ್ತಿ ಬೆಚು...

‘ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ; ಬಿಜೆಪಿ 10ಕ್ಕಿಂತ ಹೆಚ್ಚು ಸ್ಥಾನ ಗೆದ್ದರೆ ರಾಜಕೀಯ ತ್ಯಜಿಸುತ್ತೇನೆ’: ಕೇಜ್ರಿವಾಲ್ ಸವಾಲು

"ದೆಹಲಿಯಲ್ಲಿ ಮತ್ತೆ ಚುನಾವಣೆ ನಡೆಸಿ, ಬಿಜೆಪಿ ಹತ್ತಕ್ಕಿಂತ ಹೆಚ್ಚು ಸ್ಥಾನಗಳನ್ನು ಗೆದ್ದರೆ ನಾನು ರಾಜಕೀಯ ತ್ಯಜಿಸುತ್ತೇನೆ" ಎಂದು ಮಾಜಿ ಮುಖ್ಯಮಂತ್ರಿ ಹಾಗೂ ಆಮ್‌ ಆದ್ಮಿ ಪಕ್ಷದ (ಎಎಪಿ) ಮುಖ್ಯಸ್ಥ ಅರವಿಂದ್ ಕೇಜ್ರಿವಾಲ್ ಹೇಳಿದ್ದಾರೆ....

ಚನ್ನರಾಯಪಟ್ಟಣ| ಭೂಸ್ವಾಧೀನ ವಿರುದ್ಧ ಗೆದ್ದ ರೈತರಿಂದ ‘ಭೂಮಿ ಹಬ್ಬ’ ಸಂಭ್ರಮ: ಹೋರಾಟದ ಒಡನಾಡಿಗಳಿಗೆ ಗೌರವ ಸಮರ್ಪಣೆ

ದೇವನಹಳ್ಳಿಯ ಚನ್ನರಾಯಪಟ್ಟಣದ ಹೋಬಳಿಯ 13 ಹಳ್ಳಿಗಳ 1,777 ಎಕರೆ ಕೃಷಿ ಭೂಮಿಯನ್ನು ಉಳಿಸಿಕೊಳ್ಳಲು ರೈತರು ನಡೆಸಿದ ಸುದೀರ್ಘ ನಾಲ್ಕು ವರ್ಷಗಳ ಸತ್ಯಾಗ್ರಹಕ್ಕೆ ಐತಿಹಾಸಿಕ ಜಯ ಲಭಿಸಿದ ಹಿನ್ನಲೆಯಲ್ಲಿ, ಭೂಸ್ವಾದೀನ ವಿರೋಧಿ ಹೋರಾಟ ಸಮಿತಿಯು...

ಅಬಕಾರಿ ಹಗರಣದಲ್ಲಿ ಕೇಜ್ರಿವಾಲ್ ಮತ್ತು ಇತರರು ಖುಲಾಸೆ: ದೆಹಲಿ ಹೈಕೋರ್ಟ್‌ಗೆ ಮೇಲ್ಮನವಿ ಸಲ್ಲಿಸಿದ ಸಿಬಿಐ

ಮದ್ಯ ನೀತಿ ಪ್ರಕರಣದಲ್ಲಿ ಮಾಜಿ ಮುಖ್ಯಮಂತ್ರಿ ಅರವಿಂದ್ ಕೇಜ್ರಿವಾಲ್, ಮಾಜಿ ಉಪಮುಖ್ಯಮಂತ್ರಿ ಮನೀಶ್ ಸಿಸೋಡಿಯಾ ಮತ್ತು ಇತರರನ್ನು ಖುಲಾಸೆಗೊಳಿಸಿದ ವಿಶೇಷ ನ್ಯಾಯಾಲಯದ ಆದೇಶವನ್ನು ಪ್ರಶ್ನಿಸಿ ಸಿಬಿಐ ದೆಹಲಿ ಹೈಕೋರ್ಟ್‌ನಲ್ಲಿ ಮೇಲ್ಮನವಿ ಸಲ್ಲಿಸಿದೆ ಎಂದು...