Homeಕರೋನಾ ತಲ್ಲಣಕೋವಿಡ್ ಕುರಿತ ಬಾಬಾ ರಾಮದೇವ್ ಹುಚ್ಚಾಟ: ಕಾನೂನು ಕ್ರಮಕ್ಕೆ ವೈದ್ಯಕೀಯ ಸಂಘ ಒತ್ತಾಯ

ಕೋವಿಡ್ ಕುರಿತ ಬಾಬಾ ರಾಮದೇವ್ ಹುಚ್ಚಾಟ: ಕಾನೂನು ಕ್ರಮಕ್ಕೆ ವೈದ್ಯಕೀಯ ಸಂಘ ಒತ್ತಾಯ

- Advertisement -
- Advertisement -

ಪದೇ ಪದೇ ಕೋವಿಡ್ ಕುರಿತಂತೆ ಏನನ್ನೋ ಅವೈಜ್ಞಾನಿಕವಾದುದನ್ನು ಹೇಳುವ ಮೂಲಕ, ಯಾವುದೋ ಔಷ಼ಧಿಯನ್ನು ಕೋವಿಡ್‌ಗೆ ರಾಮಬಾಣ ಎಂದು ಸುದ್ದಿ ಮಾಡುವ ಮೂಲಕ ಜನರನ್ನು ದಾರಿ ತಪ್ಪಿಸುವ ಕೆಲಸ ಮಾಡುತ್ತಿರುವ ಬಾಬಾ ರಾಮದೇವ್ ವಿರುದ್ಧ ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ದೇಶದ ವೈದ್ಯರ ಪ್ರಾತಿನಿಧಿಕ ಸಂಸ್ಥೆಯಾದ ಭಾರತೀಯ ವೈದ್ಯಕೀಯ ಸಂಘ (ಐಎಂಎ) ಒತ್ತಾಯಿಸಿದೆ.

ಇತ್ತೀಚೆಗೆ ರಾಮದೇವ್ ಅವರು ಅಲೋಫಥಿಕ್ ವಿಜ್ಞಾನ (ಆಧುನಿಕ ವೈದ್ಯ ವಿಜ್ಞಾನ) ಮತ್ತು ಅಲೊಪಥಿಕ್ ವೈದ್ಯರ ಕುರಿತಾಗಿ ಕ್ಷುಲ್ಲಕವಾಗಿ ಮಾತನಾಡಿದ್ದರು.

‘ಕೋವಿಡ್ ವಿರುದ್ಧದ ಹೋರಾಟದಲ್ಲಿ ಅಲೋಪಥಿಕ್ ವೈದ್ಯರು ಮುಂಚೂಣಿಯಲ್ಲಿದ್ದಾರೆ. ಈವರೆಗೆ 1,200 ವೈದ್ಯರು ಈ ಕಾರಣಕ್ಕೇ ಜೀವ ಕಳೆದುಕೊಂಡಿದ್ದಾರೆ. ಅಂತಹವರನ್ನು ಅವಮಾನಿಸುವ ಕೆಲಸವನ್ನು ಮಾಡುವ ಮೂಲಕ ಬಾಬಾ ರಾಮದೇವ್ ಎಂಬ ಸ್ವಯಂಘೋಷಿತ ದೇವಮಾನವ, ವೈದ್ಯರು ಮತ್ತು ರೋಗಿಗಳ ನಡುವೆ ಅವಿಶ್ವಾಸ ಮಾಡಿಸುವ ಕೆಲಸವನ್ನು ಮಾಡುತ್ತ ಬಂದಿದ್ದಾರೆ. ಇದು ವೈದ್ಯ ಸಮೂಹಕ್ಕೆ ಹಿನ್ನಡೆ ಮಾಡುವ ಕೆಲಸವಾಗಿದೆ. ವಿಜ್ಞಾನದ ಬದಲು ಮೌಢ್ಯವನ್ನು ಅವರು ಹರಡುತ್ತಿದ್ದಾರೆ. ಕೂಡಲೇ ರಾಮದೇವ್ ವಿರುದ್ಧ ಕಾನೂನು ಪ್ರಕಾರ ಕ್ರಮ ಕೈಗೊಳ್ಳಬೇಕು’ ಎಂದು ಐಎಂಎ ಒತ್ತಾಯ ಮಾಡಿದೆ.

ವೃತ್ತಿಪರರು ದೇಶದ ಆರೋಗ್ಯ ರಕ್ಷಣೆಯನ್ನು ವೃತ್ತಿಪರ ರೀತಿಯಲ್ಲಿ ನಿರ್ವಹಿಸಬೇಕು. ಅವೈಜ್ಞಾನಿಕ ಅನಕ್ಷರತೆಯನ್ನು ಕಿವುಡು ಕಿವಿ ಮತ್ತು ಕುರುಡು ಕಣ್ಣುಗಳಿಂದ ಚಿಕಿತ್ಸೆ ನೀಡುವುದು ಅಷ್ಟೇನೂ ವೃತ್ತಿಪರತೆಯಲ್ಲ ಎಂದು ಐಎಂಎ ಚಾಟಿ ಬೀಸಿದೆ.

ಬಾಬಾ ರಾಮದೇವ್ ಕೋವಿಡ್ ಮೊದಲ ಅಲೆಯ ಸಂದರ್ಭದಲ್ಲಿ ತಮ್ಮ ಪತಂಜಲಿ ಕಂಪನಿಯಿಂದ ಯಾವುದೇ ವೈಜ್ಞಾನಿಕ ಟ್ರಯಲ್ಸ್‌ಗಳಿಲ್ಲದೇ ಕೊರೊನಿಲ್ ಎಂಬ ಔಷಧಿ ಬಿಡುಗಡೆ ಮಾಡಿದ್ದರು. ಆಗಲೂ ಸರ್ಕಾರ ಸುಮ್ಮನೇ ಇತ್ತು ಎಂಬುದನ್ನು ಇಲ್ಲಿ ಗಮನಿಸಬಹುದು.

ಇತ್ತೀಚೆಗೆ ಕೆಲ ತಿಂಗಳ ಹಿಂದೆ ಅವರು ಕೇಂದ್ರ ಆರೋಗ್ಯ ಸಚಿವ ಡಾ. ಹರ್ಷವರ್ಧನ್ ಮತ್ತು ಸಾರಿಗೆ ಸಚಿವ ನಿತಿನ್ ಗಡ್ಕರಿ ಸಮ್ಮುಖದಲ್ಲಿ ತಮ್ಮ ಕೊರೊನಿಲ್ ವಿಶ್ವ ಆರೋಗ್ಯ ಸಂಸ್ಥೆಯ ಪ್ರಮಾಣಿತ ಔಷಧಿ ಎಂದು ಸುಳ್ಳು ಹೇಳಿ ಮತ್ತೊಮ್ಮೆ ಸಿಕ್ಕು ಬಿದ್ದಿದ್ದರು.

ಈಗ ಇಡೀ ವೈದ್ಯಕೀಯ ಸಮೂಹವನ್ನೇ ಗೇಲಿ ಮಾಡುವ ಮೂಲಕ, ಅಸಂಸದೀಯ ಪದಗಳ ಮೂಲಕ ಕೊರೊನಾ ವಿರುದ್ಧ ಹೋರಾಡುತ್ತಿರುವ ವೈದ್ಯರನ್ನು ಅವಮಾನಿಸಲು ನೋಡಿದ್ದಾರೆ,
ಈಗ ಅವರ ವಿರುದ್ಧ ಕ್ರಮ ಕೈಗೊಳ್ಳಿ ಎಂದು ಐಎಂಎ ಅಧಿಕೃತ ಒತ್ತಾಯ ಮಾಡಿದೆ.


ಇದನ್ನೂ ಓದಿ; ಬ್ಲ್ಯಾಕ್ ಫಂಗಸ್ (ಮ್ಯುಕಾರ್ ಮೈಕೋಸಿಸ್ MucorMycosis) ಕುರಿತ ಪ್ರಶ್ನೆಗಳಿಗೆ ವೈದ್ಯರ ಸರಳ ಉತ್ತರಗಳು

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

SIR ಬಳಿಕ ಒಡಿಶಾದ ಕರಡು ಮತದಾರರ ಪಟ್ಟಿ ಪ್ರಕಟ : 20 ಲಕ್ಷ ಹೆಸರುಗಳು ಡಿಲೀಟ್

ವಿಶೇಷ ತೀವ್ರ ಪರಿಷ್ಕರಣೆಯ (ಎಸ್‌ಐಆರ್) ಗಣತಿ ಹಂತದ ಬಳಿಕ ಚುನಾವಣಾ ಆಯೋಗ ಭಾನುವಾರ (ಜು.5) ಒಡಿಶಾದ ಕರಡು ಮತದಾರರ ಪಟ್ಟಿಯನ್ನು ಪ್ರಕಟಿಸಿದ್ದು, ಇದರಲ್ಲಿ 20 ಲಕ್ಷಕ್ಕೂ ಹೆಚ್ಚು ಜನರ ಹೆಸರುಗಳನ್ನು ಮತದಾರರ ಪಟ್ಟಿಯಿಂದ...

SIR: ಟಾರ್ಗೆಟ್ ಮತ್ತು ಒತ್ತಡದ ಕೆಲಸದಿಂದ ಮೂವರು ಸಿಬ್ಬಂದಿ ಸಾವು

ಕರ್ನಾಟಕದಲ್ಲಿ ನಡೆಯುತ್ತಿರುವ ಸಮಗ್ರ ಮತದಾರರ ಪಟ್ಟಿ ಪರಿಷ್ಕರಣೆ (SIR) ಪ್ರಕ್ರಿಯೆಯು ಕೆಳಹಂತದ ನೌಕರರ ಪಾಲಿಗೆ ಮರಣಶಾಸನವಾಗುತ್ತಿದೆಯೇ ಎಂಬ ಗಂಭೀರ ಪ್ರಶ್ನೆಯೊಂದು ಎದ್ದಿದೆ. ಅಧಿಕಾರಿಗಳು ನೀಡುತ್ತಿರುವ ಅತಿಯಾದ ಒತ್ತಡ ಮತ್ತು ಟಾರ್ಗೆಟ್ ಬೆನ್ನತ್ತುವ ಧಾವಂತದಿಂದಾಗಿ...

ಖಮೇನಿ ಅಂತ್ಯಕ್ರಿಯೆ ವೇಳೆ ಟ್ರಂಪ್ ಉದ್ಧಟತನದ ಹೇಳಿಕೆ: “ಇತಿಹಾಸ, ಗೌರವವಿಲ್ಲದ ದೇಶ ಅಮೆರಿಕ” ಎಂದು ಇರಾನ್ ತೀಕ್ಷ್ಣ ತಿರುಗೇಟು

ಟೆಹ್ರಾನ್: ಇರಾನ್‌ನ ಮಾಜಿ ಸುಪ್ರೀಂ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ನಿಧನದ ನಂತರ ಜಾಗತಿಕ ರಾಜತಾಂತ್ರಿಕ ವಲಯದಲ್ಲಿ ಭಾರೀ ವಾಕ್ಸಮರ ಉಂಟಾಗಿದೆ. ಖಮೇನಿ ಅವರ ಅಂತ್ಯಕ್ರಿಯೆಯ ಸಂದರ್ಭದಲ್ಲಿ ಒಟ್ಟುಗೂಡಿರುವ ಇರಾನ್‌ನ ಇಡೀ...

ಮ್ಯಾಚ್ ಮಧ್ಯೆ ಕಾಂಡೊಮ್ ಜಾಹೀರಾತು: ಬಿಸಿಸಿಐ ವಿರುದ್ಧ ಕಿಡಿಕಾರಿದ ಮಾಜಿ ಕ್ರಿಕೆಟಿಗ, TMC ಸಂಸದ ಕೀರ್ತಿ ಆಜಾದ್

ಮ್ಯಾಂಚೆಸ್ಟರ್‌ನ ಓಲ್ಡ್ ಟ್ರಾಫರ್ಡ್‌ನಲ್ಲಿ ನಡೆದ ಭಾರತ ಮತ್ತು ಇಂಗ್ಲೆಂಡ್ ನಡುವಿನ ಟಿ20 ಅಂತರರಾಷ್ಟ್ರೀಯ ಪಂದ್ಯದ ನೇರ ಪ್ರಸಾರದ ವೇಳೆ ಕಾಂಡೊಮ್ ಜಾಹೀರಾತುಗಳನ್ನು ಪ್ರಸಾರ ಮಾಡಿದ್ದನ್ನು ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಮತ್ತು ಮಾಜಿ...

ಒಂದೇ ಒಂದು ಇಟ್ಟಿಗೆ ಇಟ್ಟಿಲ್ಲ : ಕಳೆದ ಆರು ವರ್ಷಗಳಿಂದ ಕಾಗದದ ಮೇಲೆಯೇ ಕಾರ್ಯ ನಿರ್ವಹಿಸುತ್ತಿರುವ 100 ಹಾಸಿಗೆಗಳ ಆಸ್ಪತ್ರೆ!

ಮಧ್ಯ ಪ್ರದೇಶದ ಇಂದೋರ್‌ನ ಖಜರಾನಾದಲ್ಲಿ ಮಂಜೂರಾದ 100 ಹಾಸಿಗೆಗಳ ಸಿವಿಲ್ ಆಸ್ಪತ್ರೆಯು ಕಳೆದ 6 ವರ್ಷಗಳಿಂದ ಕೇವಲ ಕಾಗದದ ಮೇಲಷ್ಟೇ (ದಾಖಲೆಗಳಲ್ಲಿ) ಅಸ್ತಿತ್ವದಲ್ಲಿರುವುದು ವರದಿಯಾಗಿದೆ. ಈ ವಿಲಕ್ಷಣ ಮತ್ತು ಆಘಾತಕಾರಿ ಆಡಳಿತಾತ್ಮಕ ವೈಫಲ್ಯದ ಪ್ರಕರಣವು...

ವೋಟ್‌ಯಿಂದ ಹಿಡಿದು ಮಂದಿರದ ಚಂದಾದವರೆಗೆ ಬಿಜೆಪಿಯದ್ದು ಬರೀ ‘ಚೋರಿ’ ಎಂದ ಕಾಂಗ್ರೆಸ್

ಅಯೋಧ್ಯೆಯ ರಾಮ ಮಂದಿರದಲ್ಲಿ ನಡೆದಿದೆ ಎನ್ನಲಾದ ದೇಣಿಗೆ ದುರುಪಯೋಗದ ವಿಚಾರವಾಗಿ ಭಾನುವಾರ ಕಾಂಗ್ರೆಸ್ ಪಕ್ಷವು ಬಿಜೆಪಿ-ಆರ್‌ಎಸ್‌ಎಸ್ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದೆ. ಇದು ಅವರದೇ ಆದ ಇಕೋ ಸಿಸ್ಟಮ್‌ನ ದೊಡ್ಡ "ಹಗರಣ"ವಾಗಿದ್ದು, ಈ...

ಮುಸ್ಲಿಮರನ್ನು ಮಾದಕ ದ್ರವ್ಯ, ಭಯೋತ್ಪಾದನೆಗೆ ಲಿಂಕ್ ಮಾಡಿ ಪೋಸ್ಟ್: ಕೇರಳ ಹಿಂದೂ ಐಕ್ಯ ವೇದಿಕೆ ಮುಖ್ಯಸ್ಥ ಆರ್‌ವಿ ಬಾಬು ವಿರುದ್ಧ ಪ್ರಕರಣ ದಾಖಲು

ಕೊಚ್ಚಿ: ಮುಸ್ಲಿಂ ಸಮುದಾಯ ಮತ್ತು ಅದರ ಧಾರ್ಮಿಕ ಮುಖಂಡರನ್ನು ಗುರಿಯಾಗಿಸಿಕೊಂಡು ಸಾಮಾಜಿಕ ಮಾಧ್ಯಮದಲ್ಲಿ ಆಕ್ಷೇಪಾರ್ಹ ಹಾಗೂ ಕೋಮು ಪ್ರಚೋದನಾತ್ಮಕ ಪೋಸ್ಟ್ ಹಂಚಿಕೊಂಡಿದ್ದಕ್ಕಾಗಿ ಕೇರಳದ ಹಿಂದೂ ಐಕ್ಯ ವೇದಿಕೆಯ ರಾಜ್ಯ ಅಧ್ಯಕ್ಷ ಆರ್.ವಿ. ಬಾಬು...

ಇರಾನ್ ಜನರು ಅವರನ್ನು ದ್ವೇಷಿಸುತ್ತಾರೆ ಅಂದುಕೊಂಡಿದ್ದೆ: ಖಮೇನಿ ಅಂತ್ಯಕ್ರಿಯೆಯ ಜನಸಾಗರ ನೋಡಿ ಶಾಕ್ ಆದ ಟ್ರಂಪ್

ಇರಾನ್‌ನ ಮಾಜಿ ಸರ್ವೋಚ್ಚ ನಾಯಕ ಅಯತೊಲ್ಲಾ ಅಲಿ ಖಮೇನಿ ಅವರ ಅಂತ್ಯಕ್ರಿಯೆಯಲ್ಲಿ ಲಕ್ಷಾಂತರ ಜನರು ಭಾಗವಹಿಸಿ ಕಣ್ಣೀರು ಹಾಕುತ್ತಿರುವುದನ್ನು ನೋಡಿ ತಮಗೆ ತೀವ್ರ ಆಘಾತವಾಗಿದೆ ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ....

‘ನಿಮ್ಮ ಮೌನ ಯುವಜನರನ್ನು ಕೇವಲ ಕೀಟಗಳಂತೆ ನೋಡುತ್ತೀರಿ ಎಂಬುದಕ್ಕೆ ಒಪ್ಪಿಗೆಯಾಗಿದೆ’: ಮೋದಿಗೆ ಬಹಿರಂಗ ಪತ್ರ ಬರೆದ ಸಿಜೆಪಿ

"ಈ ದೇಶದ ಯುವಜನರನ್ನು ನೀವು ಕೇವಲ ನಿರ್ಲಕ್ಷಿಸಬೇಕಾದ ಕೀಟಗಳಂತೆ ನೋಡುತ್ತಿದ್ದೀರಾ?" ಎಂದು ಪ್ರಶ್ನಿಸಿ ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಪ್ರಧಾನಿ ನರೇಂದ್ರ ಮೋದಿ ಅವರಿಗೆ ಶನಿವಾರ (ಜುಲೈ 4) ಬಹಿರಂಗ ಪತ್ರ ಬರೆದಿದೆ. ದೇಶದ...

ಮಮತಾ ಬ್ಯಾನರ್ಜಿಗೆ ಬಿಗ್ ಶಾಕ್: ನೇಮಕಗೊಂಡ ತಿಂಗಳಲ್ಲೇ ಟಿಎಂಸಿ ರಾಜ್ಯಾಧ್ಯಕ್ಷೆ ಚಂದ್ರಿಮಾ ಭಟ್ಟಾಚಾರ್ಯ ರಾಜೀನಾಮೆ

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಹೀನಾಯ ಸೋಲಿನ ಹಿನ್ನೆಲೆಯಲ್ಲಿ, ಅತ್ಯಂತ ನಿರ್ಣಾಯಕವಾದ ಸಾಂಸ್ಥಿಕ ಜವಾಬ್ದಾರಿಗೆ ನೇಮಕಗೊಂಡ ಕೇವಲ ಒಂದು ತಿಂಗಳ ಒಳಗಾಗಿಯೇ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ರಾಜ್ಯ ಘಟಕದ ಅಧ್ಯಕ್ಷೆ ಚಂದ್ರಿಮಾ...