Homeಅಂತರಾಷ್ಟ್ರೀಯಪನ್ನುನ್ ಹತ್ಯೆ ಸಂಚಿನಲ್ಲಿ ಗುಜರಾತ್‌ನ ವ್ಯಕ್ತಿ: ಅಮೆರಿಕದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆ

ಪನ್ನುನ್ ಹತ್ಯೆ ಸಂಚಿನಲ್ಲಿ ಗುಜರಾತ್‌ನ ವ್ಯಕ್ತಿ: ಅಮೆರಿಕದಲ್ಲಿ ದೋಷಾರೋಪ ಪಟ್ಟಿ ಸಲ್ಲಿಕೆ

- Advertisement -
- Advertisement -

ಅಮೆರಿಕದಲ್ಲಿ ಸಿಖ್ ಪ್ರತ್ಯೇಕತಾವಾದಿ ನಾಯಕ ಗುರುಪತ್ವಂತ್ ಸಿಂಗ್ ಪನ್ನುನ್‌ ಹತ್ಯೆಗೆ ಸಂಬಂಧಿಸಿ ಗುಜರಾತ್‌ನ ನಿಖಿಲ್ ಗುಪ್ತಾ ವಿರುದ್ಧ ಅಮೆರಿಕದ ನ್ಯಾಯಾಲಯದಲ್ಲಿ ಪ್ರಕರಣ ದಾಖಲಾಗಿದೆ. ನಿಖಿಲ್ ಗುಪ್ತಾ ಗುಜರಾತ್‌ನಲ್ಲಿ ತನ್ನ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ವಜಾಗೊಳಿಸುವ ಬಗ್ಗೆ ಭರವಸೆ ನೀಡಿದ ನಂತರ ಸಂಚು ರೂಪಿಸಲು ಒಪ್ಪಿಕೊಂಡಿದ್ದಾನೆ ಎಂದು ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್‌ಗಳು ಆರೋಪಿಸಿದ್ದಾರೆ.

ಅಮೆರಿಕದ ಫೆಡರಲ್ ಪ್ರಾಸಿಕ್ಯೂಟರ್‌ಗಳು ನ್ಯೂಯಾರ್ಕ್‌ ನ್ಯಾಯಾಲಯದಲ್ಲಿ ಸಲ್ಲಿಸಿದ ದೋಷಾರೋಪ ಪಟ್ಟಿಯಲ್ಲಿ ಗುಜರಾತ್‌ನ ನಿಖಿಲ್‌ ಗುಪ್ತಾ ಭಾರತದ ಅಧಿಕಾರಿಯೊಂದಿಗೆ ಸಂಬಂಧ ಹೊಂದಿದ್ದಾನೆ ಎಂದು ಆರೋಪಿಸಲಾಗಿದೆ. ಇದಲ್ಲದೆ ಭಾರತದ ಅಧಿಕಾರಿಯ ಸಹಾಯದಿಂದ ಗುಪ್ತಾ ಹಂತಕನಿಗೆ ಸಿಖ್ ಪ್ರತ್ಯೇಕತಾವಾದಿ ನಾಯಕನನ್ನು ಕೊಲ್ಲಲು 1,00,000 ಅಮೆರಿಕನ್ ಡಾಲರ್ ಪಾವತಿಸಲು ಗುಪ್ತಾ ಒಪ್ಪಿಕೊಂಡಿದ್ದಾನೆ. ಜೂ.9, 2023 ರಂದು ಗುಪ್ತಾ ಕೊಲೆಗೆ ಮುಂಗಡ ಪಾವತಿಯಾಗಿ ನ್ಯೂಯಾರ್ಕ್‌ನ ಮ್ಯಾನ್‌ಹ್ಯಾಟನ್‌ನಲ್ಲಿರುವ ಯುಸಿಯಲ್ಲಿ 15,000 ಅಮೆರಿಕನ್ ಡಾಲರ್ ನ್ನು ಹಂತಕನಿಗೆ ವ್ಯವಸ್ಥೆ ಮಾಡಿದ್ದಾನೆ ಎಂದು ದೋಷಾರೋಪ ಪಟ್ಟಿಯಲ್ಲಿ ಆರೋಪಿಸಲಾಗಿದೆ.

ಯುಎಸ್ ದಕ್ಷಿಣ ಜಿಲ್ಲೆಯ ಡಿಸ್ಟ್ರಿಕ್ಟ್ ಕೋರ್ಟ್‌ನಲ್ಲಿ ಬುಧವಾರ ಮುಚ್ಚಿದ ಲಕೋಟೆಯಲ್ಲಿ ಈ ದೋಷಾರೋಪಣೆ ಪಟ್ಟಿ ಸಲ್ಲಿಕೆ ಮಾಡಲಾಗಿದೆ.

ದಿ ಫೈನಾನ್ಷಿಯಲ್ ಟೈಮ್ಸ್ ವರದಿಯ ಪ್ರಕಾರ, ಅಮೆರಿಕದ ಅಧಿಕಾರಿಗಳು ಗುರುಪತ್ವಂತ್ ಸಿಂಗ್ ಪನ್ನುನ್‌ ಹತ್ಯೆ ಮಾಡುವ ಸಂಚನ್ನು ವಿಫಲಗೊಳಿಸಿದ್ದಾರೆ. ಭಾರತ ಸರ್ಕಾರವು ಈ ಸಂಚಿನಲ್ಲಿ ಭಾಗಿಯಾಗಿರುವ ಬಗ್ಗೆ ಕಳವಳ ವ್ಯಕ್ತಪಡಿಸಿತ್ತು.

ಗುಜರಾತ್‌ನಲ್ಲಿ ಅವರ ವಿರುದ್ಧದ ಕ್ರಿಮಿನಲ್ ಮೊಕದ್ದಮೆಯನ್ನು ವಜಾಗೊಳಿಸಲಾಗುವುದು ಎಂದು ಭರವಸೆ ನೀಡಿದ ನಂತರ ಗುಪ್ತಾ ಈ ಸಂಚಿಗೆ ಹೇಗೆ ಒಪ್ಪಿಕೊಂಡರು ಎಂಬುದನ್ನು ದೋಷಾರೋಪಣೆಯಲ್ಲಿ ಪ್ರಾಸಿಕ್ಯೂಟರ್‌ಗಳು ವಿವರಿಸಿದ್ದಾರೆ.

2023ರ ಮೇ ತಿಂಗಳ ಆರಂಭದಲ್ಲಿ CC-1(ಭಾರತೀಯ ಸರ್ಕಾರಿ ನೌಕರ ಎಂದು ಹೇಳಿಕೊಂಡ ವ್ಯಕ್ತಿ) ಮತ್ತು ಗುಪ್ತಾ ನಡುವಿನ ಎಲೆಕ್ಟ್ರಾನಿಕ್ ಸಂವಹನದಲ್ಲಿ ಪನ್ನುನ್ ಕೊಲೆಗೆ ವ್ಯವಸ್ಥೆ ಮಾಡಲು ಗುಪ್ತಾಗೆ CC-1 ಹೇಳಿದ್ದಾರೆ. ಭಾರತದಲ್ಲಿ ಗುಪ್ತಾ ವಿರುದ್ಧ ಕ್ರಿಮಿನಲ್ ಮೊಕದ್ದಮೆ ಇತ್ತು. ಅದನ್ನು ರದ್ದು ಮಾಡಿಸಲು CC-1 ಗುಪ್ತಾ ಜೊತೆ ಒಪ್ಪಂದ ಮಾಡಿದ್ದಾರೆ ಎಂದು ದೋಷಾರೋಪಣೆಯಲ್ಲಿ ಹೇಳಲಾಗಿದೆ.

CC-1 ಒಬ್ಬ ಭಾರತೀಯ ಸರ್ಕಾರಿ ನೌಕರ ಎಂದು ಹೇಳಲಾಗಿದೆ. ಮೇ 6, 2023 CC-1 ಅವರು ಗುಪ್ತಾ ಅವರಿಗೆ ಮೆಸೇಜ್‌ ಮಾಡಿದ್ದಾರೆ. ನನ್ನ ಹೆಸರನ್ನು CC- 1 ಅಲಿಯಾಸ್ ಎಂದು ಮೊಬೈಲ್‌ನಲ್ಲಿ ಸೇವ್ ಮಾಡಿ ಎಂದು ಮೆಸೇಜ್‌ನಲ್ಲಿ ಹೇಳಲಾಗಿತ್ತು. ಇದರಂತೆ CC-1 ಹೆಸರಿನಲ್ಲಿ ಗುಪ್ತಾ ಅವರ ಫೋನ್‌ನಲ್ಲಿ ದೂರವಾಣಿ ಸಂಖ್ಯೆಯನ್ನು ನಮೂದಿಸಲಾಗಿದೆ. ಕೆಲವು ನಿಮಿಷಗಳ ನಂತರ CC-1 ನ್ಯೂಯಾರ್ಕ್‌ನಲ್ಲಿ ಗುರಿ ಮತ್ತು ಕ್ಯಾಲಿಫೋರ್ನಿಯಾದಲ್ಲಿ ಮತ್ತೊಂದು ಗುರಿಯನ್ನು ಹೊಂದಿದೆ ಸಂದೇಶವನ್ನು ಕಳುಹಿಸಿದ್ದಾರೆ ಎಂದು ದೋಷಾರೋಪಣೆಯಲ್ಲಿ ಹೇಳಲಾಗಿದೆ.

ಮೇ 12, 2023ರಂದು ಸಿಸಿ-1 ಗುಪ್ತಾ ಅವರಿಗೆ ಕಳುಹಿಸಿದ ಸಂದೇಶದಲ್ಲಿ ಕ್ರಿಮಿನಲ್ ಪ್ರಕರಣವನ್ನು ಈಗಾಗಲೇ ರದ್ದು ಮಾಡಲಾಗಿದೆ ಮತ್ತು ಗುಜರಾತ್ ಪೊಲೀಸರು ಇನ್ನು ಬೆನ್ನ ಹಿಂದೆ ಬರಲ್ಲ ಎಂದು ಹೇಳಲಾಗಿದೆ. ಮೇ 23, 2023ರಂದು CC-1 ಮತ್ತೊಮ್ಮೆ ಗುಪ್ತಾ ಅವರಿಗೆ ಕಳುಹಿಸಿದ ಸಂದೇಶದಲ್ಲಿ ನಿಮ್ಮ ಗುಜರಾತ್ ಪ್ರಕರಣದ ಕುರಿತು ಬಾಸ್ ಜೊತೆ ಮಾತನಾಡಿದ್ದೇನೆ ಎಂದು ಹೇಳಿದ್ದಾರೆ ಎಂದು ದೋಷಾರೋಪಪಟ್ಟಿಯಲ್ಲಿ ಉಲ್ಲೇಖಿಸಲಾಗಿದೆ. ಗುಪ್ತಾ ವಿರುದ್ಧದ ಕೊಲೆ ಸಂಚು ಆರೋಪವು ಗರಿಷ್ಠ 10 ವರ್ಷಗಳ ಜೈಲು ಶಿಕ್ಷೆಯ ಸಾಧ್ಯತೆಯನ್ನು ಹೊಂದಿದೆ.

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಭವನ’ಗಳನ್ನು ‘ಲೋಕಭವನ’ಗಳೆಂದು ಮರುನಾಮಕರಣ; ಇದು ಒಕ್ಕೂಟ ವ್ಯವಸ್ಥೆ ಮತ್ತು ಭಾಷಾ ಸಮಾನತೆಯ ಮೇಲಿನ ಆಕ್ರಮಣ: ಜಾಗೃತ ಕರ್ನಾಟಕ

ದೇಶಾದಾದ್ಯಂತ ಇರುವ ರಾಜಭವನಗಳ ಹೆಸರನ್ನು ಲೋಕಭವನ ಎಂದು ಮರುನಾಮಕರಣ ಮಾಡುವುದಾಗಿ ಕೇಂದ್ರ ಗೃಹಸಚಿವಾಲಯ ತೀರ್ಮಾನಿಸಿದೆ. ಕೇಂದ್ರದ  ಈ ನೀತಿಯನ್ನು ವಿರೋಧಿಸಿರುವ ಜಾಗೃತ ಕರ್ನಾಟಕ ದೇಶದ ಎಲ್ಲಾ ಹಿಂದಿಯೇತರ ರಾಜ್ಯಗಳ ಮುಖ್ಯಮಂತ್ರಿಗಳಿಗೆ ಪತ್ರ ಬರೆದಿದೆ....

ಯುಜಿಸಿ ಈಕ್ವಿಟಿ ನಿಯಮಗಳ ಮೇಲಿನ ಸುಪ್ರೀಂ ಕೋರ್ಟ್ ತಡೆಗೆ ವಿದ್ಯಾರ್ಥಿಗಳ ಪ್ರತಿಭಟನೆ, ರೋಹಿತ್ ಕಾಯ್ದೆಗೆ ಒತ್ತಾಯ

ಯುಜಿಸಿ ಇಕ್ವಿಟಿ ನಿಯಮಗಳಿಗೆ ಸುಪ್ರೀಂ ಕೋರ್ಟ್ ನೀಡಿದ ತಡೆಯಾಜ್ಞೆಯ ವಿರುದ್ಧ ಮತ್ತು ವಿಶ್ವವಿದ್ಯಾಲಯಗಳಲ್ಲಿ ಜಾತಿ ತಾರತಮ್ಯವನ್ನು ಎದುರಿಸಲು ಶಾಸನಬದ್ಧ ರೋಹಿತ್ ಕಾಯ್ದೆಯನ್ನು ಜಾರಿಗೆ ತರುವಂತೆ ಒತ್ತಾಯಿಸಿ ಅಖಿಲ ಭಾರತ ವಿದ್ಯಾರ್ಥಿ ಸಂಘ (ಎಐಎಸ್ಎ)...

ನರವಾಣೆ ಅಪ್ರಕಟಿತ ಪುಸ್ತಕ ಗದ್ದಲ | ಸತ್ಯ ಹೊರಬಂದರೆ ಮೋದಿ, ರಾಜನಾಥ್ ಸಿಂಗ್ ಮುಖವಾಡ ಬಯಲಾಗಲಿದೆ : ರಾಹುಲ್ ಗಾಂಧಿ

ಮಾಜಿ ಸೇನಾ ಮುಖ್ಯಸ್ಥ ಜನರಲ್ ಮನೋಜ್ ಮುಕುಂದ್ ನರವಾಣೆ ಅವರ ಅಪ್ರಕಟಿತ ಆತ್ಮಚರಿತ್ರೆ ಕುರಿತು ರಾಹುಲ್ ಗಾಂಧಿ ಸೋಮವಾರ (ಫೆ.2) ಲೋಕಸಭೆಯಲ್ಲಿ ಉಲ್ಲೇಖಿಸಿದ್ದು, ಈ ವೇಳೆ ಆಡಳಿತ ಮತ್ತು ಪ್ರತಿಪಕ್ಷಗಳ ನಡುವೆ ತೀವ್ರ...

ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ಘರ್ಷಣೆ : ಮೂವರ ಬಂಧನ

ಗುಜರಾತ್‌ನ ಪಠಾಣ್ ತಾಲೂಕಿನ ಚದ್ರುಮಣ ಗ್ರಾಮದಲ್ಲಿ ದಲಿತ ಕುಟುಂಬದ ಮದುವೆ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ಮೂವರನ್ನು ಪೊಲೀಸರು ಬಂಧಿಸಿದ್ದು, ಇನ್ನೂ ಐವರ ಬಂಧನಕ್ಕೆ ಬಲೆ ಬೀಸಿದ್ದಾರೆ. ಆರೋಪಿಗಳ ವಿರುದ್ದ ಎಸ್‌ಸಿ/ಎಸ್‌ಟಿ...

ಲೋಕಸಭೆಯಲ್ಲಿ ಲಡಾಖ್ ಬಿಕ್ಕಟ್ಟಿನ ಬಗ್ಗೆ ಮಾಜಿ ಸೇನಾ ಮುಖ್ಯಸ್ಥರ ಅಪ್ರಕಟಿತ ಆತ್ಮಚರಿತ್ರೆ ಉಲ್ಲೇಖಿಸಿದ ರಾಹುಲ್ ಗಾಂಧಿ: ಸಭೆಯಲ್ಲಿ ತೀವ್ರ ಗದ್ದಲ

ಸೋಮವಾರ ಲೋಕಸಭೆಯಲ್ಲಿ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರು ಮಾಜಿ ಸೇನಾ ಮುಖ್ಯಸ್ಥ ಎಂಎಂ ನರವಾಣೆ ಅವರ ಆತ್ಮಚರಿತ್ರೆಯಿಂದ ಉಲ್ಲೇಖಿಸಲು ಪ್ರಯತ್ನಿಸಿದ ನಂತರ ಗದ್ದಲ ಭುಗಿಲೆದ್ದಿತು. ರಾಹುಲ್ ಮಾತನಾಡಲು ಪ್ರಾರಂಭಿಸುತ್ತಿದ್ದಂತೆ, ರಕ್ಷಣಾ ಸಚಿವ...

ಪಂಜಾಬ್ ನಿರೀಕ್ಷೆಗಳನ್ನು ಪೂರೈಸುವಲ್ಲಿ ಕೇಂದ್ರ ಬಜೆಟ್ ಮತ್ತೊಮ್ಮೆ ವಿಫಲವಾಗಿದೆ: ಸಿಎಂ ಭಗವಂತ್ ಮಾನ್

ಕೇಂದ್ರ ಬಜೆಟ್ ಮತ್ತೊಮ್ಮೆ ಪಂಜಾಬ್‌ನ ನಿರೀಕ್ಷೆಗಳನ್ನು ಪೂರೈಸುವಲ್ಲಿ ವಿಫಲವಾಗಿದೆ ಎಂದು ಪಂಜಾಬ್ ಮುಖ್ಯಮಂತ್ರಿ ಭಗವಂತ್ ಮಾನ್ ಮತ್ತು ಆಡಳಿತಾರೂಢ ಆಮ್ ಆದ್ಮಿ ಪಕ್ಷದ (ಎಎಪಿ) ಸರ್ಕಾರದ ಸಚಿವರು ಭಾನುವಾರ ಅಭಿಪ್ರಾಯಪಟ್ಟಿದ್ದಾರೆ. ಬಜೆಟ್ ರೈತರಿಗೆ ಯಾವುದೇ...

ರಾಜ್ಯಪಾಲರು ಪೂರ್ಣ ಭಾಷಣ ಓದಿಲ್ಲ, ‘ಜೈ ಸಂವಿಧಾನ’ ಎನ್ನುವುದನ್ನು ಉಲ್ಲೇಖಿಸದೆ ಹೋದರು : ಸಿಎಂ ಸಿದ್ದರಾಮಯ್ಯ

ರಾಜ್ಯಪಾಲರು ಪೂರ್ತಿ ಭಾಷಣ ಓದದೆ ತರಾತುರಿಯಲ್ಲಿ ಹೋದರು. ಭಾಷಣದಲ್ಲಿದ್ದ "ಜೈ ಸಂವಿಧಾನ" ಎನ್ನುವುದನ್ನೂ ಉಲ್ಲೇಖಿಸದೆ ತೆರಳಿದರು. ರಾಷ್ಟ್ರಗೀತೆ ಮುಗಿಯುವವರೆಗೂ ಕಾಯದೆ ಹೋಗಿಬಿಟ್ಟರು. ಇದು ಸರಿಯಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದರು. ಬಿಜೆಪಿ ಶಾಸಕ...

ಉತ್ತರಾಖಂಡ| ಹಿಂದುತ್ವ ಗುಂಪಿನ ಕಿರುಕುಳದಿಂದ ಮುಸ್ಲಿಂ ಅಂಗಡಿ ಮಾಲೀಕನನ್ನು ರಕ್ಷಿಸಿದ ದೀಪಕ್ ಕುಮಾರ್

ಸ್ಥಳೀಯ ಮುಸ್ಲಿಂ ಅಂಗಡಿ ಮಾಲೀಕನ ವಿರುದ್ಧ ಬಜರಂಗದಳ ಸದಸ್ಯರು ನೀಡುತ್ತಿದ್ದ ಕಿರುಕುಳವನ್ನು ಜಿಮ್ ಮಾಲೀಕ ದೀಪಕ್ ಕುಮಾರ್ ಸ್ಥಳದಲ್ಲೇ ಎದುರಿಸಿದ್ದಾರೆ. ಆಕ್ರೋಶಿತರಾದ ಹಿಂದುತ್ವ ಗುಂಪಿನ ಸದಸ್ಯರು ದೀಪಕ್ ವಿರುದ್ಧವೇ ಪ್ರತಿಭಟನೆ ನಡೆಸಿದ್ದು, ಹಲವಾರ...

ಎಸ್‌ಐಆರ್ ವಿರುದ್ಧ ಸುಪ್ರೀಂ ಕೋರ್ಟ್ ಮೆಟ್ಟಿಲೇರಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ರಾಜ್ಯದಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ನಡೆಸುವ ಭಾರತೀಯ ಚುನಾವಣಾ ಆಯೋಗದ (ಇಸಿಐ) ನಿರ್ಧಾರವನ್ನು ಪ್ರಶ್ನಿಸಿ ಸುಪ್ರೀಂ ಕೋರ್ಟ್‌ನಲ್ಲಿ ಸಾರ್ವಜನಿಕ ಹಿತಾಸಕ್ತಿ...

ದಕ್ಷಿಣ ಪಿನಾಕಿನಿ ಜಲವಿವಾದ : ನ್ಯಾಯಮಂಡಳಿ ಸ್ಥಾಪಿಸಲು ಸುಪ್ರೀಂ ಕೋರ್ಟ್ ಆದೇಶ

ದಕ್ಷಿಣ ಪಿನಾಕಿನಿ (ಪೆನ್ನೈಯಾರ್) ನದಿ ನೀರಿನ ಹಂಚಿಕೆಗೆ ಸಂಬಂಧಿಸಿದಂತೆ ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳ ನಡುವೆ ಬಾಕಿ ಇರುವ ವಿವಾದಗಳನ್ನು ಪರಿಹರಿಸಲು ನ್ಯಾಯಮಂಡಳಿ ಸ್ಥಾಪಿಸುವಂತೆ ಸುಪ್ರೀಂ ಕೋರ್ಟ್ ಸೋಮವಾರ (ಫೆ.2) ನಿರ್ದೇಶನ ನೀಡಿದೆ. ಕೇಂದ್ರ...