Homeಅಂತರಾಷ್ಟ್ರೀಯಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

ಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

- Advertisement -
- Advertisement -

ಭಾರತೀಯ ನೌಕಪಡೆಯ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಆರೋಪದ ಕುರಿತು ತಜ್ಞರು ತನಿಖೆ ಪ್ರಾರಂಭಿಸಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಈ ಕುರಿತು ಮೇ 15ರಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ “ಕಳೆದ ವಾರ ರೋಹಿಂಗ್ಯಾ ನಿರಾಶ್ರಿತರನ್ನು ಭಾರತೀಯ ನೌಕಾಪಡೆಯ ಹಡಗಿನಿಂದ ಅಂಡಮಾನ್ ಬಳಿ ಬಲವಂತವಾಗಿ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ವಿಶ್ವಾಸಾರ್ಹ ವರದಿಗಳಿಂದ ಗಾಬರಿಗೊಂಡ ವಿಶ್ವಸಂಸ್ಥೆಯ ತಜ್ಞರು, ಇಂತಹ ‘ಊಹಿಸಲಾಗದ’ ಮತ್ತು ‘ಒಪ್ಪಿಕೊಳ್ಳಲಾಗದ’ ಕೃತ್ಯದ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ” ಎಂದಿದೆ.

ಮ್ಯಾನ್ಮಾರ್‌ನ ಅಪಾಯಕಾರಿ ಪರಿಸ್ಥಿತಿಗೆ ವಾಪಸ್ ಕಳುಹಿಸುವುದು ಸೇರಿದಂತೆ ಅಮಾನವೀಯ ಮತ್ತು ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ರೋಹಿಂಗ್ಯಾ ನಿರಾಶ್ರಿತರನ್ನು ನಡೆಸಿಕೊಳ್ಳುವುದನ್ನು ಭಾರತ ಸರ್ಕಾರ ನಿಲ್ಲಿಸಬೇಕು ಎಂದು ಇದೇ ವೇಳೆ ಮಂಡಳಿ ಆಗ್ರಹಿಸಿದೆ.

“ರೋಹಿಂಗ್ಯಾ ನಿರಾಶ್ರಿತರನ್ನು ನೌಕಾಪಡೆಯ ಹಡಗುಗಳಿಂದ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಕಲ್ಪನೆಯು ಅತಿರೇಕದ ಸಂಗತಿಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಸಾಕ್ಷ್ಯವನ್ನು ನಾನು ಹುಡುಕುತ್ತಿದ್ದೇನೆ. ಏನಾಯಿತು ಎಂಬುದರ ಸಂಪೂರ್ಣ ವರದಿಯನ್ನು ಒದಗಿಸುವಂತೆ ಭಾರತ ಸರ್ಕಾರವನ್ನು ಕೋರಿದ್ದೇನೆ” ಎಂದು ಮ್ಯಾನ್ಮಾರ್‌ನ ಮಾನವ ಹಕ್ಕುಗಳ ಪರಿಸ್ಥಿತಿಯ ಕುರಿತ ವಿಶ್ವಸಂಸ್ಥೆಯ ವಿಶೇಷ ವರದಿಗಾರ ಟಾಮ್ ಆಂಡ್ರ್ಯೂಸ್ ತಿಳಿಸಿದ್ದಾರೆ.

“ಅಂತಾರಾಷ್ಟ್ರೀಯ ರಕ್ಷಣೆಯ ಅಗತ್ಯವಿರುವವರ ಜೀವನ ಮತ್ತು ಸುರಕ್ಷತೆಯ ಬಗ್ಗೆ ಸ್ಪಷ್ಟವಾಗಿ ನಿರ್ಲಕ್ಷ್ಯ ತೋರುತ್ತಿರುವುದರಿಂದ ನಾನು ತೀವ್ರ ಕಳವಳಗೊಂಡಿದ್ದೇನೆ. ಇಂತಹ ಕ್ರೂರ ಕ್ರಮಗಳು ಮಾನವ ಸಭ್ಯತೆಗೆ ಅವಮಾನವಾಗಿದೆ ಮತ್ತು ಜೀವ ಅಥವಾ ಸ್ವಾತಂತ್ರ್ಯಕ್ಕೆ ಬೆದರಿಕೆ ಇರುವ ಜನರನ್ನು ಬಲವಂತವಾಗಿ ವಾಪಸ್ ಕಳಿಸುವುದನ್ನು ನಿಷೇಧಿಸುವ ಅಂತಾರಾಷ್ಟ್ರೀಯ ಕಾನೂನಿನ ಮೂಲಭೂತ ತತ್ವ ಸ್ಪಷ್ಟ ಉಲ್ಲಂಘನೆಯಾಗಿದೆ ಆಂಡ್ರ್ಯೂಸ್ ಹೇಳಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಹಿಂಸೆ, ಕಿರುಕುಳ ಮತ್ತು ಇತರ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯ ಬೆದರಿಕೆಯನ್ನು ಎದುರಿಸುತ್ತಿರುವ ರೋಹಿಂಗ್ಯಾ ನಿರಾಶ್ರಿತರನ್ನು ಬಲವಂತವಾಗಿ ವಾಪಸ್ ಕಳುಹಿಸುವುದನ್ನು ಕೊನೆಗೊಳಿಸಬೇಕು” ಎಂದು ಆಂಡ್ರ್ಯೂಸ್ ಆಗ್ರಹಿಸಿದ್ದಾರೆ.

ಕಳೆದ ವಾರದ ಕೊನೆಯಲ್ಲಿ ಭಾರತೀಯ ಅಧಿಕಾರಿಗಳು ದೆಹಲಿಯಲ್ಲಿ ವಾಸಿಸುತ್ತಿದ್ದ ಹಲವಾರು ರೋಹಿಂಗ್ಯಾ ನಿರಾಶ್ರಿತರನ್ನು ಬಂಧಿಸಿದ್ದಾರೆಂದು ವರದಿಯಾಗಿದೆ. ಅವರಲ್ಲಿ ಹೆಚ್ಚಿನವರು ಅಥವಾ ಎಲ್ಲರೂ ನಿರಾಶ್ರಿತರ ಗುರುತಿನ ದಾಖಲೆಗಳನ್ನು ಹೊಂದಿದ್ದರು. ಈ ಗುಂಪಿನ ಸುಮಾರು 40 ಸದಸ್ಯರ ಕಣ್ಣುಗಳಿಗೆ ಬಟ್ಟೆ ಕಟ್ಟಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಕರೆದೊಯ್ಯಲಾಗಿದೆ. ನಂತರ ಭಾರತೀಯ ನೌಕಾಪಡೆಯ ಹಡಗಿಗೆ ಅವರನ್ನು ಸ್ಥಳಾಂತರಿಸಲಾಗಿದೆ. ಹಡಗು ಅಂಡಮಾನ್ ಸಮುದ್ರವನ್ನು ದಾಟಿದ ನಂತರ, ನಿರಾಶ್ರಿತರಿಗೆ ಲೈಫ್ ಜಾಕೆಟ್‌ಗಳನ್ನು ನೀಡಿ, ಬಲವಂತವಾಗಿ ಸಮುದ್ರಕ್ಕೆ ಇಳಿಸಿ, ಮ್ಯಾನ್ಮಾರ್ ಪ್ರದೇಶದ ದ್ವೀಪಕ್ಕೆ ಈಜುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ನಿರಾಶ್ರಿತರು ದಡಕ್ಕೆ ಈಜುವ ಮೂಲಕ ಬದುಕುಳಿದಿದ್ದಾರೆ ಎಂದು ವರದಿಯಾಗಿದೆ, ಆದರೆ ಅವರ ಪ್ರಸ್ತುತ ಸ್ಥಳ ಮತ್ತು ಸ್ಥಿತಿ ಗೊತ್ತಾಗಿಲ್ಲ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.

ಭಾರತೀಯ ಅಧಿಕಾರಿಗಳು ಅಸ್ಸಾಂ ರಾಜ್ಯದ ಬಂಧನ ಕೇಂದ್ರದಿಂದ ಸುಮಾರು 100 ಮಂದಿ ರೋಹಿಂಗ್ಯಾ ನಿರಾಶ್ರಿತರ ಗುಂಪನ್ನು ಬಾಂಗ್ಲಾದೇಶದ ಗಡಿಯಲ್ಲಿರುವ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ ಎಂದು ವರದಿಯಾಗಿದೆ. ಈ ಗುಂಪಿನ ಪ್ರಸ್ತುತ ಸ್ಥಳ ಮತ್ತು ಸ್ಥಿತಿಯೂ ತಿಳಿದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

“ಮಾರ್ಚ್ 3, 2025ರಂದು, ವಿಶೇಷ ವರದಿಗಾರ ಆಂಡ್ರ್ಯೂಸ್ ಅವರು ಭಾರತ ಸರ್ಕಾರಕ್ಕೆ ಪತ್ರ ಬರೆದಿದ್ದು, ರೋಹಿಂಗ್ಯಾಗಳು ಸೇರಿದಂತೆ ಇತರ ನಿರಾಶ್ರಿತರ ವ್ಯಾಪಕ, ಅನಿಯಂತ್ರಿತ ಮತ್ತು ಅನಿರ್ದಿಷ್ಟ ಬಂಧನ ಹಾಗೂ ರೋಹಿಂಗ್ಯಾ ನಿರಾಶ್ರಿತರನ್ನು ಮ್ಯಾನ್ಮಾರ್‌ಗೆ ವಾಪಸ್ ಕಳುಹಿಸಲಾಗುತ್ತದೆ ಎಂಬ ಆರೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮ್ಯಾನ್ಮಾರ್‌ ನಿರಾಶ್ರಿತರನ್ನು ಅನಿಯಂತ್ರಿತ ಬಂಧನದಿಂದ ಮುಕ್ತಗೊಳಿಸಬೇಕು ಮತ್ತು ಬಂಧನ ಸ್ಥಳಗಳಿಗೆ ಅವರಿಗೆ ಪ್ರವೇಶ ಅವಕಾಶ ನೀಡಬೇಕು ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ.”

“ಭಾರತ ಸರ್ಕಾರವು ರೋಹಿಂಗ್ಯಾ ನಿರಾಶ್ರಿತರ ವಿರುದ್ಧದ ಎಲ್ಲಾ ರೀತಿಯ ಒಪ್ಪಿಕೊಳ್ಳಲಾಗದ ಕೃತ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು. ಮ್ಯಾನ್ಮಾರ್‌ಗೆ ಅವರನ್ನು ಗಡಿಪಾರು ಮಾಡುವುದನ್ನು ಕೊನೆಗಳಿಸಬೇಕು. ಭಾರತದ ಅಂತಾರಾಷ್ಟ್ರೀಯ ಬಾಧ್ಯತೆಗಳ ಈ ಸ್ಪಷ್ಟ ಉಲ್ಲಂಘನೆಗಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂಬುವುದಾಗಿ ಆಂಡ್ರ್ಯೂಸ್ ಪತ್ರದಲ್ಲಿ ಆಗ್ರಹಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಗಾಜಾದಲ್ಲಿ ಮುಂದುವರೆದ ಇಸ್ರೇಲ್ ವಾಯುದಾಳಿ; 80 ಜನರು ಸಾವು, ಕ್ಯಾನ್ಸರ್ ಆಸ್ಪತ್ರೆ ಸೇವೆ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಕೋಲ್ಕತ್ತಾ | 48 ದಿನಗಳಿಂದ ಮುಸ್ಲಿಂ ಕಾಲೋನಿಗೆ ನೀರು ಬಂದ್ : ಬಿಜೆಪಿ ಸರ್ಕಾರದಿಂದ ದ್ವೇಷ ಸಾಧನೆ ಆರೋಪ

ಉತ್ತರ ಕೋಲ್ಕತ್ತಾದ ಕಾಶಿಪುರದ ಜ್ಯೋತಿನಗರ ಕಾಲೋನಿ ನಿವಾಸಿಗಳು ಕಳೆದ 48 ದಿನಗಳಿಂದ ಕುಡಿಯುವ ನೀರಿಗಾಗಿ ಹಾಹಾಕಾರಪಡುತ್ತಿದ್ದಾರೆ. ಇಲ್ಲಿನ ನೂರಾರು ಕುಟುಂಬಗಳಿಗೆ ನೀರಿನ ಮೂಲವಾಗಿರುವ ಐದು ಸಾರ್ವಜನಿಕ ನಲ್ಲಿಗಳು ಸಂಪೂರ್ಣವಾಗಿ ಒಣಗಿ ಹೋಗಿವೆ. ಇದರಿಂದಾಗಿ...

ಗುರುಗ್ರಾಮ| ಮಹಿಳಾ ಬೈಕರ್‌ಗೆ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಕಾರು ಚಾಲಕನ ಬಂಧನ

ಗುರುಗ್ರಾಮದಲ್ಲಿ ಮಹಿಳಾ ಸ್ಪೋರ್ಟ್ಸ್ ಬೈಕ್ ಸವಾರೆಗೆ ಕಾರಿನಿಂದ ಡಿಕ್ಕಿ ಹೊಡೆದು ಪರಾರಿಯಾಗಿದ್ದ ಪ್ರಕರಣಕ್ಕೆ ಸಂಬಂಧಿಸಿದಂತೆ, ಚಾಲಕ ಕಲ್ಯಾಣ್ ಬೈನ್ಸ್ಲಾನನ್ನು ರಾಜಸ್ಥಾನದ ರಾಜ್‌ಗಢದಲ್ಲಿ ಮಂಗಳವಾರ ಬಂಧಿಸಲಾಗಿದೆ ಎಂದು ಗುರುಗ್ರಾಮ ಕಮಿಷನರ್ ಸಿಬಾಶ್ ಕಬೀರಾಜ್ ತಿಳಿಸಿದ್ದಾರೆ. ಈ...

ಸರ್ಕಾರ ಆಧಾರ್ ವ್ಯವಸ್ಥೆಯನ್ನು ನಂಬುವುದಾದರೆ, SIR‌ ತಪಾಸಣೆಗೂ ಇದನ್ನೇ ಬಳಸಲಿ: ಆರ್‌ ಎಸ್‌ ಶರ್ಮಾ ಸಲಹೆ

ಪ್ರಸ್ತುತ ಚರ್ಚೆಯಲ್ಲಿರುವ ಮತದಾರರ ಪಟ್ಟಿ ಪರಿಷ್ಕರಣೆ (SIR) ಮತ್ತು ದಾಖಲೆಗಳ ತಪಾಸಣೆ ಪ್ರಕ್ರಿಯೆಗೆ ಸಂಬಂಧಿಸಿದಂತೆ ಆಧಾರ್‌ ವ್ಯವಸ್ಥೆಯ ಮಾಜಿ ಮುಖ್ಯಸ್ಥ (UIDAI) ಶರ್ಮಾ ಅವರು ಮಹತ್ವದ ಸಲಹೆಯೊಂದನ್ನು ನೀಡಿದ್ದಾರೆ. ಪ್ರತಿ ಬಾರಿ ಸಾವಿರಾರು...

ಸೋಶಿಯಲ್ ಮೀಡಿಯಾಗಳಲ್ಲಿ ಅಪ್ರಾಪ್ತರಿಗೆ ಹೆಚ್ಚುತ್ತಿರುವ ಅಪಾಯ; ಲೈಂಗಿಕ ಶೋಷಣೆ ತಡೆಗೆ ಮೆಟಾದಿಂದ ಮಹತ್ವದ ನಿರ್ಧಾರ!

ಸಾಮಾಜಿಕ ಜಾಲತಾಣಗಳ ಬಳಕೆ ಯುವಜನರು ಮತ್ತು ಮಕ್ಕಳ ದೈನಂದಿನ ಬದುಕಿನ ಅವಿಭಾಜ್ಯ ಭಾಗವಾಗಿರುವ ಬೆನ್ನಲ್ಲೇ, ಆನ್‌ಲೈನ್‌ನಲ್ಲಿ ಮಕ್ಕಳ ಲೈಂಗಿಕ ಶೋಷಣೆ ಮತ್ತು ದೌರ್ಜನ್ಯಕ್ಕೆ ಸಂಬಂಧಿಸಿದ ಪ್ರಕರಣಗಳನ್ನು ಎದುರಿಸಲು ಮೆಟಾ ಮಹತ್ವದ ನಿರ್ಧಾರ ಕೈಗೊಂಡಿದೆ....

ಬೆಂಗಳೂರಿನ ಎನ್‌ಎಲ್‌ಎಸ್‌ಐಯು‌ನಲ್ಲಿ ಉಮರ್ ಖಾಲಿದ್ ಸಾಕ್ಷ್ಯಚಿತ್ರ ಪ್ರದರ್ಶನ; ಕೇಂದ್ರದ ಹಸ್ತಕ್ಷೇಪಕ್ಕೆ ಎಬಿವಿಪಿ ಮನವಿ

ಬೆಂಗಳೂರಿನಲ್ಲಿರುವ ನ್ಯಾಷನಲ್ ಲಾ ಸ್ಕೂಲ್ ಆಫ್ ಇಂಡಿಯಾ ಯೂನಿವರ್ಸಿಟಿಯಲ್ಲಿ (ಎನ್‌ಎಲ್‌ಎಸ್‌ಐಯು‌) ಜೈಲಿನಲ್ಲಿರುವ ಹೋರಾಟಗಾರ ಉಮರ್ ಖಾಲಿದ್ ಕುರಿತಾದ ಸಾಕ್ಷ್ಯಚಿತ್ರದ ಪ್ರದರ್ಶನವನ್ನು ಕಾಯಂ ಆಗಿ ರದ್ದುಗೊಳಿಸಲು ಆರ್‌ಎಸ್ಎಸ್ ಸಂಯೋಜಿತ ವಿದ್ಯಾರ್ಥಿ ಸಂಘಟನೆ ಎಬಿವಿಪಿ ಕೇಂದ್ರ...

‘NAZA’ಗೆ ವೆನಿಸ್ ವಿಶೇಷ ಜ್ಯೂರಿ ಪ್ರಶಸ್ತಿ; ಸ್ವದೇಶ ಇಸ್ರೇಲ್‌ನ ಎಐ ಹತ್ಯಾಕಾಂಡ ಬಯಲಿಗೆಳೆದ ನಿರ್ದೇಶಕರಿಗೆ ಪೌರತ್ವ ಕಸಿಯುವ ಬೆದರಿಕೆ

ವೆನಿಸ್ ಚಲನಚಿತ್ರೋತ್ಸವದಲ್ಲಿ ವಿಶೇಷ ಜ್ಯೂರಿ ಪ್ರಶಸ್ತಿ ಗೆದ್ದ ‘NAZA’ ಸಾಕ್ಷ್ಯಚಿತ್ರದ ನಿರ್ದೇಶಕರ ವಿರುದ್ಧ ಇಸ್ರೇಲಿ ಸಂಸ್ಕೃತಿ ಸಚಿವ ಮಿಕಿ ಜೋಹರ್ ತೀವ್ರ ಆಕ್ರೋಶ ವ್ಯಕ್ತಪಡಿಸಿದ್ದು, ‘ರಾಜ್ಯಕ್ಕೆ ದ್ರೋಹ’ ಎಸಗಿದ್ದಾರೆಂದು ಆರೋಪಿಸಿ ಅವರ ಇಸ್ರೇಲಿ...

ಕರ್ನಾಟಕದಲ್ಲಿ ಬರದ ಬರೆ; ನೀರು, ವಿದ್ಯುತ್‌ ಕೊರತೆ ಸಾಧ್ಯತೆ: ಸಿಎಂ ಡಿಕೆ ಶಿವಕುಮಾರ್‌ ಎಚ್ಚರಿಕೆ

ದುರ್ಬಲ ಮುಂಗಾರು ಹಾಗೂ ಮಳೆಯ ಕೊರತೆಯಿಂದ ಕರ್ನಾಟಕದಲ್ಲಿ ಬರ ಪರಿಸ್ಥಿತಿ ಮತ್ತಷ್ಟು ಬಿಗಡಾಯಿಸುತ್ತಿದ್ದು, ಮುಂದಿನ ದಿನಗಳಲ್ಲಿ ರಾಜ್ಯವು ಕುಡಿಯುವ ನೀರು ಮತ್ತು ವಿದ್ಯುತ್‌ ಕೊರತೆಯನ್ನು ಎದುರಿಸುವ ಸಾಧ್ಯತೆಯಿದೆ ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್‌...

2,000 ರೂ.ವರೆಗಿನ UPI ಪಾವತಿಗೆ ಶುಲ್ಕವಿಲ್ಲ ಎಂದ ಕೇಂದ್ರ ಸರ್ಕಾರ

ಡಿಜಿಟಲ್ ಪಾವತಿ ಬಳಸುವ ಕೋಟ್ಯಂತರ ಸಾಮಾನ್ಯ ಜನರಿಗೆ ಕೇಂದ್ರ ಹಣಕಾಸು ಸಚಿವಾಲಯ ಮಹತ್ವದ ಸ್ಪಷ್ಟನೆ ನೀಡಿದ್ದು, 2,000 ರೂಪಾಯಿವರೆಗಿನ ಯುಪಿಐ (UPI) ವಹಿವಾಟುಗಳಿಗೆ ಯಾವುದೇ ರೀತಿಯ ಶುಲ್ಕ ವಿಧಿಸುವಂತಿಲ್ಲ ಎಂದು ಅಧಿಸೂಚನೆ ಹೊರಡಿಸಿದೆ....

ಯಾದಗಿರಿ| ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತರ ಮೇಲೆ ಮಾರಣಾಂತಿಕ ಹಲ್ಲೆ

ಸಿದ್ಧಲಿಂಗೇಶ್ವರ ದೇವಸ್ಥಾನಕ್ಕೆ ತೆರಳಿದ್ದ ದಲಿತ ಸಮುದಾಯದ ಭಕ್ತರ ಮೇಲೆ ಸವರ್ಣೀಯರು ಮಾರಣಾಂತಿಕ ಹಲ್ಲೆ ನಡೆದಿರುವ ಆರೋಪ ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ಗುರುಸುಣಿಗಿ ಗುಡ್ಡದಲ್ಲಿ ಕೇಳಿಬಂದಿದೆ. ಚಾಮನಾಳ ಗ್ರಾಮದ ದಲಿತ ಭಕ್ತರನ್ನು ಗುರಿಯಾಗಿಸಿಕೊಂಡು ಗುರುಸುಣಿಗಿ...

ರಾಜಸ್ಥಾನ ಸ್ಥಳೀಯ ಸಂಸ್ಥೆ ಚುನಾವಣೆ: ಬಿಕಾನೇರ್‌ನ ನೋಖಾದಲ್ಲಿ ಸಿಪಿಐ(ಎಂ) ಐತಿಹಾಸಿಕ ಜಯಭೇರಿ

ರಾಜಸ್ಥಾನ ಸ್ಥಳೀಯ ಸಂಸ್ಥೆಗಳ ಚುನಾವಣೆಯಲ್ಲಿ ಎಡಪಕ್ಷವಾದ ಸಿಪಿಐ(ಎಂ) (CPI-M) ಐತಿಹಾಸಿಕ ಸಾಧನೆ ಮಾಡಿದ್ದು, ಬಿಕಾನೇರ್ ಜಿಲ್ಲೆಯ ನೋಖಾ ನಗರ ಪಾಲಿಕೆಯ ಆಡಳಿತದ ಚುಕ್ಕಾಣಿಯನ್ನು ತನ್ನದಾಗಿಸಿಕೊಂಡಿದೆ. ಹಲವು ವರ್ಷಗಳಿಂದ ಬಿಜೆಪಿ ಹಾಗೂ ಎನ್‌ಸಿಪಿ (NCP)...