Homeಅಂತರಾಷ್ಟ್ರೀಯಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

ಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

- Advertisement -
- Advertisement -

ಭಾರತೀಯ ನೌಕಪಡೆಯ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಆರೋಪದ ಕುರಿತು ತಜ್ಞರು ತನಿಖೆ ಪ್ರಾರಂಭಿಸಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಈ ಕುರಿತು ಮೇ 15ರಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ “ಕಳೆದ ವಾರ ರೋಹಿಂಗ್ಯಾ ನಿರಾಶ್ರಿತರನ್ನು ಭಾರತೀಯ ನೌಕಾಪಡೆಯ ಹಡಗಿನಿಂದ ಅಂಡಮಾನ್ ಬಳಿ ಬಲವಂತವಾಗಿ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ವಿಶ್ವಾಸಾರ್ಹ ವರದಿಗಳಿಂದ ಗಾಬರಿಗೊಂಡ ವಿಶ್ವಸಂಸ್ಥೆಯ ತಜ್ಞರು, ಇಂತಹ ‘ಊಹಿಸಲಾಗದ’ ಮತ್ತು ‘ಒಪ್ಪಿಕೊಳ್ಳಲಾಗದ’ ಕೃತ್ಯದ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ” ಎಂದಿದೆ.

ಮ್ಯಾನ್ಮಾರ್‌ನ ಅಪಾಯಕಾರಿ ಪರಿಸ್ಥಿತಿಗೆ ವಾಪಸ್ ಕಳುಹಿಸುವುದು ಸೇರಿದಂತೆ ಅಮಾನವೀಯ ಮತ್ತು ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ರೋಹಿಂಗ್ಯಾ ನಿರಾಶ್ರಿತರನ್ನು ನಡೆಸಿಕೊಳ್ಳುವುದನ್ನು ಭಾರತ ಸರ್ಕಾರ ನಿಲ್ಲಿಸಬೇಕು ಎಂದು ಇದೇ ವೇಳೆ ಮಂಡಳಿ ಆಗ್ರಹಿಸಿದೆ.

“ರೋಹಿಂಗ್ಯಾ ನಿರಾಶ್ರಿತರನ್ನು ನೌಕಾಪಡೆಯ ಹಡಗುಗಳಿಂದ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಕಲ್ಪನೆಯು ಅತಿರೇಕದ ಸಂಗತಿಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಸಾಕ್ಷ್ಯವನ್ನು ನಾನು ಹುಡುಕುತ್ತಿದ್ದೇನೆ. ಏನಾಯಿತು ಎಂಬುದರ ಸಂಪೂರ್ಣ ವರದಿಯನ್ನು ಒದಗಿಸುವಂತೆ ಭಾರತ ಸರ್ಕಾರವನ್ನು ಕೋರಿದ್ದೇನೆ” ಎಂದು ಮ್ಯಾನ್ಮಾರ್‌ನ ಮಾನವ ಹಕ್ಕುಗಳ ಪರಿಸ್ಥಿತಿಯ ಕುರಿತ ವಿಶ್ವಸಂಸ್ಥೆಯ ವಿಶೇಷ ವರದಿಗಾರ ಟಾಮ್ ಆಂಡ್ರ್ಯೂಸ್ ತಿಳಿಸಿದ್ದಾರೆ.

“ಅಂತಾರಾಷ್ಟ್ರೀಯ ರಕ್ಷಣೆಯ ಅಗತ್ಯವಿರುವವರ ಜೀವನ ಮತ್ತು ಸುರಕ್ಷತೆಯ ಬಗ್ಗೆ ಸ್ಪಷ್ಟವಾಗಿ ನಿರ್ಲಕ್ಷ್ಯ ತೋರುತ್ತಿರುವುದರಿಂದ ನಾನು ತೀವ್ರ ಕಳವಳಗೊಂಡಿದ್ದೇನೆ. ಇಂತಹ ಕ್ರೂರ ಕ್ರಮಗಳು ಮಾನವ ಸಭ್ಯತೆಗೆ ಅವಮಾನವಾಗಿದೆ ಮತ್ತು ಜೀವ ಅಥವಾ ಸ್ವಾತಂತ್ರ್ಯಕ್ಕೆ ಬೆದರಿಕೆ ಇರುವ ಜನರನ್ನು ಬಲವಂತವಾಗಿ ವಾಪಸ್ ಕಳಿಸುವುದನ್ನು ನಿಷೇಧಿಸುವ ಅಂತಾರಾಷ್ಟ್ರೀಯ ಕಾನೂನಿನ ಮೂಲಭೂತ ತತ್ವ ಸ್ಪಷ್ಟ ಉಲ್ಲಂಘನೆಯಾಗಿದೆ ಆಂಡ್ರ್ಯೂಸ್ ಹೇಳಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಹಿಂಸೆ, ಕಿರುಕುಳ ಮತ್ತು ಇತರ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯ ಬೆದರಿಕೆಯನ್ನು ಎದುರಿಸುತ್ತಿರುವ ರೋಹಿಂಗ್ಯಾ ನಿರಾಶ್ರಿತರನ್ನು ಬಲವಂತವಾಗಿ ವಾಪಸ್ ಕಳುಹಿಸುವುದನ್ನು ಕೊನೆಗೊಳಿಸಬೇಕು” ಎಂದು ಆಂಡ್ರ್ಯೂಸ್ ಆಗ್ರಹಿಸಿದ್ದಾರೆ.

ಕಳೆದ ವಾರದ ಕೊನೆಯಲ್ಲಿ ಭಾರತೀಯ ಅಧಿಕಾರಿಗಳು ದೆಹಲಿಯಲ್ಲಿ ವಾಸಿಸುತ್ತಿದ್ದ ಹಲವಾರು ರೋಹಿಂಗ್ಯಾ ನಿರಾಶ್ರಿತರನ್ನು ಬಂಧಿಸಿದ್ದಾರೆಂದು ವರದಿಯಾಗಿದೆ. ಅವರಲ್ಲಿ ಹೆಚ್ಚಿನವರು ಅಥವಾ ಎಲ್ಲರೂ ನಿರಾಶ್ರಿತರ ಗುರುತಿನ ದಾಖಲೆಗಳನ್ನು ಹೊಂದಿದ್ದರು. ಈ ಗುಂಪಿನ ಸುಮಾರು 40 ಸದಸ್ಯರ ಕಣ್ಣುಗಳಿಗೆ ಬಟ್ಟೆ ಕಟ್ಟಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಕರೆದೊಯ್ಯಲಾಗಿದೆ. ನಂತರ ಭಾರತೀಯ ನೌಕಾಪಡೆಯ ಹಡಗಿಗೆ ಅವರನ್ನು ಸ್ಥಳಾಂತರಿಸಲಾಗಿದೆ. ಹಡಗು ಅಂಡಮಾನ್ ಸಮುದ್ರವನ್ನು ದಾಟಿದ ನಂತರ, ನಿರಾಶ್ರಿತರಿಗೆ ಲೈಫ್ ಜಾಕೆಟ್‌ಗಳನ್ನು ನೀಡಿ, ಬಲವಂತವಾಗಿ ಸಮುದ್ರಕ್ಕೆ ಇಳಿಸಿ, ಮ್ಯಾನ್ಮಾರ್ ಪ್ರದೇಶದ ದ್ವೀಪಕ್ಕೆ ಈಜುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ನಿರಾಶ್ರಿತರು ದಡಕ್ಕೆ ಈಜುವ ಮೂಲಕ ಬದುಕುಳಿದಿದ್ದಾರೆ ಎಂದು ವರದಿಯಾಗಿದೆ, ಆದರೆ ಅವರ ಪ್ರಸ್ತುತ ಸ್ಥಳ ಮತ್ತು ಸ್ಥಿತಿ ಗೊತ್ತಾಗಿಲ್ಲ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.

ಭಾರತೀಯ ಅಧಿಕಾರಿಗಳು ಅಸ್ಸಾಂ ರಾಜ್ಯದ ಬಂಧನ ಕೇಂದ್ರದಿಂದ ಸುಮಾರು 100 ಮಂದಿ ರೋಹಿಂಗ್ಯಾ ನಿರಾಶ್ರಿತರ ಗುಂಪನ್ನು ಬಾಂಗ್ಲಾದೇಶದ ಗಡಿಯಲ್ಲಿರುವ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ ಎಂದು ವರದಿಯಾಗಿದೆ. ಈ ಗುಂಪಿನ ಪ್ರಸ್ತುತ ಸ್ಥಳ ಮತ್ತು ಸ್ಥಿತಿಯೂ ತಿಳಿದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

“ಮಾರ್ಚ್ 3, 2025ರಂದು, ವಿಶೇಷ ವರದಿಗಾರ ಆಂಡ್ರ್ಯೂಸ್ ಅವರು ಭಾರತ ಸರ್ಕಾರಕ್ಕೆ ಪತ್ರ ಬರೆದಿದ್ದು, ರೋಹಿಂಗ್ಯಾಗಳು ಸೇರಿದಂತೆ ಇತರ ನಿರಾಶ್ರಿತರ ವ್ಯಾಪಕ, ಅನಿಯಂತ್ರಿತ ಮತ್ತು ಅನಿರ್ದಿಷ್ಟ ಬಂಧನ ಹಾಗೂ ರೋಹಿಂಗ್ಯಾ ನಿರಾಶ್ರಿತರನ್ನು ಮ್ಯಾನ್ಮಾರ್‌ಗೆ ವಾಪಸ್ ಕಳುಹಿಸಲಾಗುತ್ತದೆ ಎಂಬ ಆರೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮ್ಯಾನ್ಮಾರ್‌ ನಿರಾಶ್ರಿತರನ್ನು ಅನಿಯಂತ್ರಿತ ಬಂಧನದಿಂದ ಮುಕ್ತಗೊಳಿಸಬೇಕು ಮತ್ತು ಬಂಧನ ಸ್ಥಳಗಳಿಗೆ ಅವರಿಗೆ ಪ್ರವೇಶ ಅವಕಾಶ ನೀಡಬೇಕು ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ.”

“ಭಾರತ ಸರ್ಕಾರವು ರೋಹಿಂಗ್ಯಾ ನಿರಾಶ್ರಿತರ ವಿರುದ್ಧದ ಎಲ್ಲಾ ರೀತಿಯ ಒಪ್ಪಿಕೊಳ್ಳಲಾಗದ ಕೃತ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು. ಮ್ಯಾನ್ಮಾರ್‌ಗೆ ಅವರನ್ನು ಗಡಿಪಾರು ಮಾಡುವುದನ್ನು ಕೊನೆಗಳಿಸಬೇಕು. ಭಾರತದ ಅಂತಾರಾಷ್ಟ್ರೀಯ ಬಾಧ್ಯತೆಗಳ ಈ ಸ್ಪಷ್ಟ ಉಲ್ಲಂಘನೆಗಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂಬುವುದಾಗಿ ಆಂಡ್ರ್ಯೂಸ್ ಪತ್ರದಲ್ಲಿ ಆಗ್ರಹಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಗಾಜಾದಲ್ಲಿ ಮುಂದುವರೆದ ಇಸ್ರೇಲ್ ವಾಯುದಾಳಿ; 80 ಜನರು ಸಾವು, ಕ್ಯಾನ್ಸರ್ ಆಸ್ಪತ್ರೆ ಸೇವೆ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

31 ವರ್ಷಗಳ ಹಳೇ ಸಾಲ ತೀರಿಸಲು 1200 ಕಿ.ಮೀ ಪ್ರಯಾಣಿಸಿದ ಕೇರಳದ ಇಸ್ಮಾಯಿಲ್

"ನನ್ನ ಕಣ್ಣುಗಳಿಂದ ಆನಂದಬಾಷ್ಪಗಳು ಉದುರಿದವು. ನನ್ನ ಮನಸ್ಸಿಗೆ ಅದೆಷ್ಟು ನೆಮ್ಮದಿ ಸಿಕ್ಕಿತೆಂದರೆ, ಅದನ್ನು ವಿವರಿಸಲು ಪದಗಳೇ ಸಾಲದು. ಆತನಿಗೂ ಅಷ್ಟೇ ದೊಡ್ಡ ಸಮಾಧಾನ." ಹೀಗೆ ಭಾವುಕರಾಗಿ ನುಡಿಯುತ್ತಾರೆ ಮೊಹಮ್ಮದ್ ಇಸ್ಮಾಯಿಲ್. 1995ರಲ್ಲಿ ಸೌದಿ...

ಬಂಡಾಯದ ಬಳಿಕ ಟಿಎಂಸಿಗೆ ಮತ್ತೊಂದು ಸವಾಲು : ಪಕ್ಷದ ಬ್ಯಾಂಕ್ ಖಾತೆಗಳು ಫ್ರೀಝ್

ಮಮತಾ ಬ್ಯಾನರ್ಜಿ ನೇತೃತ್ವದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಪಕ್ಷದ ಮೂರು ಬ್ಯಾಂಕ್ ಖಾತೆಗಳಲ್ಲಿರುವ 440 ಕೋಟಿ ರೂಪಾಯಿ ಹಣವನ್ನು ಭಾಗಶಃ ಬಳಸಲು ಕಲ್ಕತ್ತಾ ಹೈಕೋರ್ಟ್ ಅನುಮತಿ ನೀಡಿದ ಮರುದಿನವೇ, ಪಶ್ಚಿಮ ಬಂಗಾಳ ಪೊಲೀಸರು...

ಮಂದಿರ ನಿರ್ಮಾಣದ ಕ್ರೆಡಿಟ್‌ಗೆ ಇದ್ದ ಯಜಮಾನಿಕೆ, ಕೊಳ್ಳೆ ಹೊಡೆದಾಗ ಯಾಕಿಲ್ಲ ಸೇವಕರೇ?

ಬಾಲರಾಮನ ಪ್ರಾಣಪ್ರತಿಷ್ಠಾಪನೆಗೆ ಮುನ್ನ ಪ್ರಧಾನಿಯವರು 11 ದಿನಗಳ ಕಾಲ ಕಠಿಣ ಉಪವಾಸ ವ್ರತ ಆಚರಿಸಿದ್ದರು, ಕೇವಲ ಎಳನೀರು ಕುಡಿದರು, ನೆಲದ ಮೇಲೆ ಮಲಗಿದರು ಎಂದು ಇಡೀ ದೇಶಕ್ಕೆ ಸಾರಲಾಗಿತ್ತು. ಅಯೋಧ್ಯೆಯಿಂದ ಹೊಸ ಕಾಲದ...

‘ಫ್ರೀ ಪ್ಯಾಲೆಸ್ತೀನ್’ ಘೋಷಣೆಯನ್ನು ತಮಾಷೆ ಮಾಡಿದ ಸೈಫ್ ಅಲಿ ಖಾನ್ – ನಿರೂಪಕಿ ಅನುಪಮಾ ಚೋಪ್ರಾ

ಸ್ಪ್ಯಾನಿಷ್ ನಟ ಜೇವಿಯರ್ ಬಾರ್ಡೆಮ್ ಅವರ "ಫ್ರೀ ಪ್ಯಾಲೆಸ್ತೀನ್" ಹೇಳಿಕೆ ಕುರಿತು ಸೈಫ್ ಅಲಿ ಖಾನ್ ಮತ್ತು ಚಲನಚಿತ್ರ ಪತ್ರಕರ್ತೆ ಅನುಪಮಾ ಚೋಪ್ರಾ ನಗುತ್ತಿರುವ ಕ್ಲಿಪ್ ಆನ್‌ಲೈನ್‌ನಲ್ಲಿ ವೈರಲ್ ಆಗಿದ್ದು, ನಟನ ಅಸೂಕ್ಷ್ಮ...

ತೆಲಂಗಾಣ : ಪೋಕ್ಸೋ ಪ್ರಕರಣದ ಆರೋಪಿಯಿಂದ ಸಂತ್ರಸ್ತೆ ಸೇರಿ 6 ಜನರ ಹತ್ಯೆ

ಪೋಕ್ಸೋ ಪ್ರಕರಣದ ಆರೋಪಿಯೊಬ್ಬ ಸಂತ್ರಸ್ತೆ ಸೇರಿದಂತೆ ಒಟ್ಟು ಆರು ಜನರನ್ನು ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತೆಲಂಗಾಣದ ರಂಗಾರೆಡ್ಡಿ ಜಿಲ್ಲೆಯ ಶಾಬಾದ್ ಮಂಡಲದಲ್ಲಿ ಶುಕ್ರವಾರ (ಜು.10) ರಾತ್ರಿ ನಡೆದಿದೆ. 28 ವರ್ಷ ವಯಸ್ಸಿನ...

‘ನನ್ನನ್ನು ಮೌನಗೊಳಿಸಲು, ನೀವು ನನ್ನನ್ನು ಕೊಲ್ಲಬೇಕಾಗುತ್ತದೆ’: ಟಿಎಂಸಿ ಬಿಕ್ಕಟ್ಟಿನ ನಡುವೆ ಬಿಜೆಪಿ ವಿರುದ್ಧ ಮಮತಾ ಬ್ಯಾನರ್ಜಿ ಆಕ್ರೋಶ  

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಆಡಳಿತಾರೂಢ ತೃಣಮೂಲ ಕಾಂಗ್ರೆಸ್ (TMC) ಪಕ್ಷದಲ್ಲಿ ಆಂತರಿಕ ಬಿಕ್ಕಟ್ಟು ತಾರಕಕ್ಕೇರಿರುವ ಬೆನ್ನಲ್ಲೇ, ಪಕ್ಷದ ಸುಪ್ರೀಮೋ ಹಾಗೂ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅವರು ಇತ್ತೀಚಿನ ತಿಂಗಳುಗಳಲ್ಲೇ ಅತ್ಯಂತ ಪ್ರಬಲವಾದ ರಾಜಕೀಯ...

ಸುಪ್ರೀಂ ಕೋರ್ಟ್‌ನಲ್ಲಿ ಜಡ್ಜ್‌ಗಳನ್ನೇ ‘ನ್ಯಾಯಾಂಗ ಸೇವಕರು’ ಎಂದ ಅರ್ಜಿದರ

ಸುಪ್ರೀಂ ಕೋರ್ಟ್‌ನಲ್ಲಿ ಶುಕ್ರವಾರ ಅತ್ಯಂತ ನಾಟಕೀಯ ಹಾಗೂ ಆಘಾತಕಾರಿ ದೃಶ್ಯವೊಂದು ತೆರೆದುಕೊಂಡಿದೆ. ಪ್ರಕರಣವೊಂದರ ವಿಚಾರಣೆ ವೇಳೆ ಖುದ್ದಾಗಿ ಹಾಜರಾಗಿದ್ದ ಅರ್ಜಿದಾರನೊಬ್ಬ, ಲಕ್ನೋದ ಪೊಲೀಸ್ ಅಧಿಕಾರಿಯೊಬ್ಬರ ವಿರುದ್ಧ ಎಫ್‌ಐಆರ್ (FIR) ದಾಖಲಿಸಲು ನಾನು ನ್ಯಾಯಪೀಠಕ್ಕೆ...

ಮದ್ಯದ ಅಮಲಿನಲ್ಲಿ ಸಾರಿಗೆ ಬಸ್‌ ಅಪಹರಿಸಿದ ವ್ಯಕ್ತಿ; 21 ಕಿ.ಮೀ. ಪ್ರಯಾಣದ ನಂತರ ಅಪಘಾತ

ತೆಲಂಗಾಣದ ಜನಗಾಂವ್ ಬಸ್ ನಿಲ್ದಾಣದಲ್ಲಿ ನಿಂತಿದ್ದ ತೆಲಂಗಾಣ ರಾಜ್ಯ ರಸ್ತೆ ಸಾರಿಗೆ ನಿಗಮದ (ಟಿಜಿಎಸ್‌ಆರ್‌ಟಿಸಿ) ಬಸ್‌ ಅನ್ನು ವ್ಯಕ್ತಿಯೊಬ್ಬ ಕುಡಿದ ಮತ್ತಿನಲ್ಲಿ ಕದ್ದಿದ್ದಾನೆ. ನಂತರ ಅದನ್ನು ಸುಮಾರು 21 ಕಿ.ಮೀ. ದೂರ ಓಡಿಸಿ,...

ಬೆಂಗಳೂರಿನಲ್ಲಿ: ರಸ್ತೆ ಬದಿ ವಾರಗಟ್ಟಲೆ ವಾಹನ ನಿಲ್ಲಿಸಿದರೆ ಜಪ್ತಿ ಮಾಡಿ ‘ಹರಾಜು’ ಹಾಕಲಿದೆ ಸರ್ಕಾರ!

ಸಿಲಿಕಾನ್ ಸಿಟಿಯ ಟ್ರಾಫಿಕ್ ದಟ್ಟಣೆಗೆ ಮುಕ್ತಿ ಹಾಡಲು ಮತ್ತು ಪಾದಚಾರಿಗಳ ಹಕ್ಕನ್ನು ರಕ್ಷಿಸಲು ರಾಜ್ಯ ಸರ್ಕಾರ ಈಗ ಅತ್ಯಂತ ಕಠಿಣ ಹೆಜ್ಜೆಯನ್ನಿಟ್ಟಿದೆ. ನಗರದ ರಸ್ತೆ ಬದಿ ಹಾಗೂ ಫುಟ್‌ಪಾತ್‌ಗಳಲ್ಲಿ ತಿಂಗಳುಗಟ್ಟಲೆ ಧೂಳು ತಿನ್ನುತ್ತಾ...

ಸರ್ಕಾರಿ ಶಾಲೆಗಳಲ್ಲಿ 86 ಲಕ್ಷ ವಿದ್ಯಾರ್ಥಿಗಳ ಕುಸಿತ, ಖಾಸಗಿ ಶಾಲೆಗಳತ್ತ ಮುಖ ಮಾಡಿದ 88 ಲಕ್ಷ ಮಕ್ಕಳು: ಕಳವಳಕಾರಿ ವರದಿ

ನವದೆಹಲಿ: ದೇಶದ ಶಾಲಾ ಶಿಕ್ಷಣ ವ್ಯವಸ್ಥೆಯಲ್ಲಿ ಮಹತ್ತರ ಬದಲಾವಣೆಗಳು ಕಂಡುಬರುತ್ತಿದ್ದು, ಸರ್ಕಾರಿ ಶಾಲೆಗಳ ದಾಖಲಾತಿಯಲ್ಲಿ ಭಾರಿ ಕುಸಿತ ಉಂಟಾಗಿದೆ. 2023–24 ಮತ್ತು 2025–26ರ ಶೈಕ್ಷಣಿಕ ವರ್ಷಗಳ ನಡುವಿನ ಅವಧಿಯಲ್ಲಿ ದೇಶಾದ್ಯಂತ ಸರ್ಕಾರಿ ಶಾಲೆಗಳಲ್ಲಿ...