Homeಅಂತರಾಷ್ಟ್ರೀಯಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

ಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

- Advertisement -
- Advertisement -

ಭಾರತೀಯ ನೌಕಪಡೆಯ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಆರೋಪದ ಕುರಿತು ತಜ್ಞರು ತನಿಖೆ ಪ್ರಾರಂಭಿಸಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಈ ಕುರಿತು ಮೇ 15ರಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ “ಕಳೆದ ವಾರ ರೋಹಿಂಗ್ಯಾ ನಿರಾಶ್ರಿತರನ್ನು ಭಾರತೀಯ ನೌಕಾಪಡೆಯ ಹಡಗಿನಿಂದ ಅಂಡಮಾನ್ ಬಳಿ ಬಲವಂತವಾಗಿ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ವಿಶ್ವಾಸಾರ್ಹ ವರದಿಗಳಿಂದ ಗಾಬರಿಗೊಂಡ ವಿಶ್ವಸಂಸ್ಥೆಯ ತಜ್ಞರು, ಇಂತಹ ‘ಊಹಿಸಲಾಗದ’ ಮತ್ತು ‘ಒಪ್ಪಿಕೊಳ್ಳಲಾಗದ’ ಕೃತ್ಯದ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ” ಎಂದಿದೆ.

ಮ್ಯಾನ್ಮಾರ್‌ನ ಅಪಾಯಕಾರಿ ಪರಿಸ್ಥಿತಿಗೆ ವಾಪಸ್ ಕಳುಹಿಸುವುದು ಸೇರಿದಂತೆ ಅಮಾನವೀಯ ಮತ್ತು ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ರೋಹಿಂಗ್ಯಾ ನಿರಾಶ್ರಿತರನ್ನು ನಡೆಸಿಕೊಳ್ಳುವುದನ್ನು ಭಾರತ ಸರ್ಕಾರ ನಿಲ್ಲಿಸಬೇಕು ಎಂದು ಇದೇ ವೇಳೆ ಮಂಡಳಿ ಆಗ್ರಹಿಸಿದೆ.

“ರೋಹಿಂಗ್ಯಾ ನಿರಾಶ್ರಿತರನ್ನು ನೌಕಾಪಡೆಯ ಹಡಗುಗಳಿಂದ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಕಲ್ಪನೆಯು ಅತಿರೇಕದ ಸಂಗತಿಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಸಾಕ್ಷ್ಯವನ್ನು ನಾನು ಹುಡುಕುತ್ತಿದ್ದೇನೆ. ಏನಾಯಿತು ಎಂಬುದರ ಸಂಪೂರ್ಣ ವರದಿಯನ್ನು ಒದಗಿಸುವಂತೆ ಭಾರತ ಸರ್ಕಾರವನ್ನು ಕೋರಿದ್ದೇನೆ” ಎಂದು ಮ್ಯಾನ್ಮಾರ್‌ನ ಮಾನವ ಹಕ್ಕುಗಳ ಪರಿಸ್ಥಿತಿಯ ಕುರಿತ ವಿಶ್ವಸಂಸ್ಥೆಯ ವಿಶೇಷ ವರದಿಗಾರ ಟಾಮ್ ಆಂಡ್ರ್ಯೂಸ್ ತಿಳಿಸಿದ್ದಾರೆ.

“ಅಂತಾರಾಷ್ಟ್ರೀಯ ರಕ್ಷಣೆಯ ಅಗತ್ಯವಿರುವವರ ಜೀವನ ಮತ್ತು ಸುರಕ್ಷತೆಯ ಬಗ್ಗೆ ಸ್ಪಷ್ಟವಾಗಿ ನಿರ್ಲಕ್ಷ್ಯ ತೋರುತ್ತಿರುವುದರಿಂದ ನಾನು ತೀವ್ರ ಕಳವಳಗೊಂಡಿದ್ದೇನೆ. ಇಂತಹ ಕ್ರೂರ ಕ್ರಮಗಳು ಮಾನವ ಸಭ್ಯತೆಗೆ ಅವಮಾನವಾಗಿದೆ ಮತ್ತು ಜೀವ ಅಥವಾ ಸ್ವಾತಂತ್ರ್ಯಕ್ಕೆ ಬೆದರಿಕೆ ಇರುವ ಜನರನ್ನು ಬಲವಂತವಾಗಿ ವಾಪಸ್ ಕಳಿಸುವುದನ್ನು ನಿಷೇಧಿಸುವ ಅಂತಾರಾಷ್ಟ್ರೀಯ ಕಾನೂನಿನ ಮೂಲಭೂತ ತತ್ವ ಸ್ಪಷ್ಟ ಉಲ್ಲಂಘನೆಯಾಗಿದೆ ಆಂಡ್ರ್ಯೂಸ್ ಹೇಳಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಹಿಂಸೆ, ಕಿರುಕುಳ ಮತ್ತು ಇತರ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯ ಬೆದರಿಕೆಯನ್ನು ಎದುರಿಸುತ್ತಿರುವ ರೋಹಿಂಗ್ಯಾ ನಿರಾಶ್ರಿತರನ್ನು ಬಲವಂತವಾಗಿ ವಾಪಸ್ ಕಳುಹಿಸುವುದನ್ನು ಕೊನೆಗೊಳಿಸಬೇಕು” ಎಂದು ಆಂಡ್ರ್ಯೂಸ್ ಆಗ್ರಹಿಸಿದ್ದಾರೆ.

ಕಳೆದ ವಾರದ ಕೊನೆಯಲ್ಲಿ ಭಾರತೀಯ ಅಧಿಕಾರಿಗಳು ದೆಹಲಿಯಲ್ಲಿ ವಾಸಿಸುತ್ತಿದ್ದ ಹಲವಾರು ರೋಹಿಂಗ್ಯಾ ನಿರಾಶ್ರಿತರನ್ನು ಬಂಧಿಸಿದ್ದಾರೆಂದು ವರದಿಯಾಗಿದೆ. ಅವರಲ್ಲಿ ಹೆಚ್ಚಿನವರು ಅಥವಾ ಎಲ್ಲರೂ ನಿರಾಶ್ರಿತರ ಗುರುತಿನ ದಾಖಲೆಗಳನ್ನು ಹೊಂದಿದ್ದರು. ಈ ಗುಂಪಿನ ಸುಮಾರು 40 ಸದಸ್ಯರ ಕಣ್ಣುಗಳಿಗೆ ಬಟ್ಟೆ ಕಟ್ಟಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಕರೆದೊಯ್ಯಲಾಗಿದೆ. ನಂತರ ಭಾರತೀಯ ನೌಕಾಪಡೆಯ ಹಡಗಿಗೆ ಅವರನ್ನು ಸ್ಥಳಾಂತರಿಸಲಾಗಿದೆ. ಹಡಗು ಅಂಡಮಾನ್ ಸಮುದ್ರವನ್ನು ದಾಟಿದ ನಂತರ, ನಿರಾಶ್ರಿತರಿಗೆ ಲೈಫ್ ಜಾಕೆಟ್‌ಗಳನ್ನು ನೀಡಿ, ಬಲವಂತವಾಗಿ ಸಮುದ್ರಕ್ಕೆ ಇಳಿಸಿ, ಮ್ಯಾನ್ಮಾರ್ ಪ್ರದೇಶದ ದ್ವೀಪಕ್ಕೆ ಈಜುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ನಿರಾಶ್ರಿತರು ದಡಕ್ಕೆ ಈಜುವ ಮೂಲಕ ಬದುಕುಳಿದಿದ್ದಾರೆ ಎಂದು ವರದಿಯಾಗಿದೆ, ಆದರೆ ಅವರ ಪ್ರಸ್ತುತ ಸ್ಥಳ ಮತ್ತು ಸ್ಥಿತಿ ಗೊತ್ತಾಗಿಲ್ಲ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.

ಭಾರತೀಯ ಅಧಿಕಾರಿಗಳು ಅಸ್ಸಾಂ ರಾಜ್ಯದ ಬಂಧನ ಕೇಂದ್ರದಿಂದ ಸುಮಾರು 100 ಮಂದಿ ರೋಹಿಂಗ್ಯಾ ನಿರಾಶ್ರಿತರ ಗುಂಪನ್ನು ಬಾಂಗ್ಲಾದೇಶದ ಗಡಿಯಲ್ಲಿರುವ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ ಎಂದು ವರದಿಯಾಗಿದೆ. ಈ ಗುಂಪಿನ ಪ್ರಸ್ತುತ ಸ್ಥಳ ಮತ್ತು ಸ್ಥಿತಿಯೂ ತಿಳಿದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

“ಮಾರ್ಚ್ 3, 2025ರಂದು, ವಿಶೇಷ ವರದಿಗಾರ ಆಂಡ್ರ್ಯೂಸ್ ಅವರು ಭಾರತ ಸರ್ಕಾರಕ್ಕೆ ಪತ್ರ ಬರೆದಿದ್ದು, ರೋಹಿಂಗ್ಯಾಗಳು ಸೇರಿದಂತೆ ಇತರ ನಿರಾಶ್ರಿತರ ವ್ಯಾಪಕ, ಅನಿಯಂತ್ರಿತ ಮತ್ತು ಅನಿರ್ದಿಷ್ಟ ಬಂಧನ ಹಾಗೂ ರೋಹಿಂಗ್ಯಾ ನಿರಾಶ್ರಿತರನ್ನು ಮ್ಯಾನ್ಮಾರ್‌ಗೆ ವಾಪಸ್ ಕಳುಹಿಸಲಾಗುತ್ತದೆ ಎಂಬ ಆರೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮ್ಯಾನ್ಮಾರ್‌ ನಿರಾಶ್ರಿತರನ್ನು ಅನಿಯಂತ್ರಿತ ಬಂಧನದಿಂದ ಮುಕ್ತಗೊಳಿಸಬೇಕು ಮತ್ತು ಬಂಧನ ಸ್ಥಳಗಳಿಗೆ ಅವರಿಗೆ ಪ್ರವೇಶ ಅವಕಾಶ ನೀಡಬೇಕು ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ.”

“ಭಾರತ ಸರ್ಕಾರವು ರೋಹಿಂಗ್ಯಾ ನಿರಾಶ್ರಿತರ ವಿರುದ್ಧದ ಎಲ್ಲಾ ರೀತಿಯ ಒಪ್ಪಿಕೊಳ್ಳಲಾಗದ ಕೃತ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು. ಮ್ಯಾನ್ಮಾರ್‌ಗೆ ಅವರನ್ನು ಗಡಿಪಾರು ಮಾಡುವುದನ್ನು ಕೊನೆಗಳಿಸಬೇಕು. ಭಾರತದ ಅಂತಾರಾಷ್ಟ್ರೀಯ ಬಾಧ್ಯತೆಗಳ ಈ ಸ್ಪಷ್ಟ ಉಲ್ಲಂಘನೆಗಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂಬುವುದಾಗಿ ಆಂಡ್ರ್ಯೂಸ್ ಪತ್ರದಲ್ಲಿ ಆಗ್ರಹಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಗಾಜಾದಲ್ಲಿ ಮುಂದುವರೆದ ಇಸ್ರೇಲ್ ವಾಯುದಾಳಿ; 80 ಜನರು ಸಾವು, ಕ್ಯಾನ್ಸರ್ ಆಸ್ಪತ್ರೆ ಸೇವೆ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...