Homeಅಂತರಾಷ್ಟ್ರೀಯಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

ಭಾರತೀಯ ನೌಕಾಪಡೆ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಿದ ಆರೋಪ: ತನಿಖೆ ಪ್ರಾರಂಭಿಸಿದ ವಿಶ್ವಸಂಸ್ಥೆ

- Advertisement -
- Advertisement -

ಭಾರತೀಯ ನೌಕಪಡೆಯ ಹಡಗಿನಿಂದ ರೋಹಿಂಗ್ಯಾ ನಿರಾಶ್ರಿತರನ್ನು ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಆರೋಪದ ಕುರಿತು ತಜ್ಞರು ತನಿಖೆ ಪ್ರಾರಂಭಿಸಿದ್ದಾರೆ ಎಂದು ವಿಶ್ವಸಂಸ್ಥೆ ತಿಳಿಸಿದೆ.

ಈ ಕುರಿತು ಮೇ 15ರಂದು ಪತ್ರಿಕಾ ಪ್ರಕಟಣೆ ಬಿಡುಗಡೆ ಮಾಡಿರುವ ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿ “ಕಳೆದ ವಾರ ರೋಹಿಂಗ್ಯಾ ನಿರಾಶ್ರಿತರನ್ನು ಭಾರತೀಯ ನೌಕಾಪಡೆಯ ಹಡಗಿನಿಂದ ಅಂಡಮಾನ್ ಬಳಿ ಬಲವಂತವಾಗಿ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ವಿಶ್ವಾಸಾರ್ಹ ವರದಿಗಳಿಂದ ಗಾಬರಿಗೊಂಡ ವಿಶ್ವಸಂಸ್ಥೆಯ ತಜ್ಞರು, ಇಂತಹ ‘ಊಹಿಸಲಾಗದ’ ಮತ್ತು ‘ಒಪ್ಪಿಕೊಳ್ಳಲಾಗದ’ ಕೃತ್ಯದ ಬಗ್ಗೆ ತನಿಖೆ ಪ್ರಾರಂಭಿಸಿದ್ದಾರೆ” ಎಂದಿದೆ.

ಮ್ಯಾನ್ಮಾರ್‌ನ ಅಪಾಯಕಾರಿ ಪರಿಸ್ಥಿತಿಗೆ ವಾಪಸ್ ಕಳುಹಿಸುವುದು ಸೇರಿದಂತೆ ಅಮಾನವೀಯ ಮತ್ತು ಜೀವಕ್ಕೆ ಅಪಾಯಕಾರಿ ರೀತಿಯಲ್ಲಿ ರೋಹಿಂಗ್ಯಾ ನಿರಾಶ್ರಿತರನ್ನು ನಡೆಸಿಕೊಳ್ಳುವುದನ್ನು ಭಾರತ ಸರ್ಕಾರ ನಿಲ್ಲಿಸಬೇಕು ಎಂದು ಇದೇ ವೇಳೆ ಮಂಡಳಿ ಆಗ್ರಹಿಸಿದೆ.

“ರೋಹಿಂಗ್ಯಾ ನಿರಾಶ್ರಿತರನ್ನು ನೌಕಾಪಡೆಯ ಹಡಗುಗಳಿಂದ ಸಮುದ್ರಕ್ಕೆ ತಳ್ಳಲಾಗಿದೆ ಎಂಬ ಕಲ್ಪನೆಯು ಅತಿರೇಕದ ಸಂಗತಿಯಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿ ಮತ್ತು ಸಾಕ್ಷ್ಯವನ್ನು ನಾನು ಹುಡುಕುತ್ತಿದ್ದೇನೆ. ಏನಾಯಿತು ಎಂಬುದರ ಸಂಪೂರ್ಣ ವರದಿಯನ್ನು ಒದಗಿಸುವಂತೆ ಭಾರತ ಸರ್ಕಾರವನ್ನು ಕೋರಿದ್ದೇನೆ” ಎಂದು ಮ್ಯಾನ್ಮಾರ್‌ನ ಮಾನವ ಹಕ್ಕುಗಳ ಪರಿಸ್ಥಿತಿಯ ಕುರಿತ ವಿಶ್ವಸಂಸ್ಥೆಯ ವಿಶೇಷ ವರದಿಗಾರ ಟಾಮ್ ಆಂಡ್ರ್ಯೂಸ್ ತಿಳಿಸಿದ್ದಾರೆ.

“ಅಂತಾರಾಷ್ಟ್ರೀಯ ರಕ್ಷಣೆಯ ಅಗತ್ಯವಿರುವವರ ಜೀವನ ಮತ್ತು ಸುರಕ್ಷತೆಯ ಬಗ್ಗೆ ಸ್ಪಷ್ಟವಾಗಿ ನಿರ್ಲಕ್ಷ್ಯ ತೋರುತ್ತಿರುವುದರಿಂದ ನಾನು ತೀವ್ರ ಕಳವಳಗೊಂಡಿದ್ದೇನೆ. ಇಂತಹ ಕ್ರೂರ ಕ್ರಮಗಳು ಮಾನವ ಸಭ್ಯತೆಗೆ ಅವಮಾನವಾಗಿದೆ ಮತ್ತು ಜೀವ ಅಥವಾ ಸ್ವಾತಂತ್ರ್ಯಕ್ಕೆ ಬೆದರಿಕೆ ಇರುವ ಜನರನ್ನು ಬಲವಂತವಾಗಿ ವಾಪಸ್ ಕಳಿಸುವುದನ್ನು ನಿಷೇಧಿಸುವ ಅಂತಾರಾಷ್ಟ್ರೀಯ ಕಾನೂನಿನ ಮೂಲಭೂತ ತತ್ವ ಸ್ಪಷ್ಟ ಉಲ್ಲಂಘನೆಯಾಗಿದೆ ಆಂಡ್ರ್ಯೂಸ್ ಹೇಳಿದ್ದಾರೆ.

ಮ್ಯಾನ್ಮಾರ್‌ನಲ್ಲಿ ಹಿಂಸೆ, ಕಿರುಕುಳ ಮತ್ತು ಇತರ ಗಂಭೀರ ಮಾನವ ಹಕ್ಕುಗಳ ಉಲ್ಲಂಘನೆಯ ಬೆದರಿಕೆಯನ್ನು ಎದುರಿಸುತ್ತಿರುವ ರೋಹಿಂಗ್ಯಾ ನಿರಾಶ್ರಿತರನ್ನು ಬಲವಂತವಾಗಿ ವಾಪಸ್ ಕಳುಹಿಸುವುದನ್ನು ಕೊನೆಗೊಳಿಸಬೇಕು” ಎಂದು ಆಂಡ್ರ್ಯೂಸ್ ಆಗ್ರಹಿಸಿದ್ದಾರೆ.

ಕಳೆದ ವಾರದ ಕೊನೆಯಲ್ಲಿ ಭಾರತೀಯ ಅಧಿಕಾರಿಗಳು ದೆಹಲಿಯಲ್ಲಿ ವಾಸಿಸುತ್ತಿದ್ದ ಹಲವಾರು ರೋಹಿಂಗ್ಯಾ ನಿರಾಶ್ರಿತರನ್ನು ಬಂಧಿಸಿದ್ದಾರೆಂದು ವರದಿಯಾಗಿದೆ. ಅವರಲ್ಲಿ ಹೆಚ್ಚಿನವರು ಅಥವಾ ಎಲ್ಲರೂ ನಿರಾಶ್ರಿತರ ಗುರುತಿನ ದಾಖಲೆಗಳನ್ನು ಹೊಂದಿದ್ದರು. ಈ ಗುಂಪಿನ ಸುಮಾರು 40 ಸದಸ್ಯರ ಕಣ್ಣುಗಳಿಗೆ ಬಟ್ಟೆ ಕಟ್ಟಿ ಅಂಡಮಾನ್ ಮತ್ತು ನಿಕೋಬಾರ್ ದ್ವೀಪಗಳಿಗೆ ಕರೆದೊಯ್ಯಲಾಗಿದೆ. ನಂತರ ಭಾರತೀಯ ನೌಕಾಪಡೆಯ ಹಡಗಿಗೆ ಅವರನ್ನು ಸ್ಥಳಾಂತರಿಸಲಾಗಿದೆ. ಹಡಗು ಅಂಡಮಾನ್ ಸಮುದ್ರವನ್ನು ದಾಟಿದ ನಂತರ, ನಿರಾಶ್ರಿತರಿಗೆ ಲೈಫ್ ಜಾಕೆಟ್‌ಗಳನ್ನು ನೀಡಿ, ಬಲವಂತವಾಗಿ ಸಮುದ್ರಕ್ಕೆ ಇಳಿಸಿ, ಮ್ಯಾನ್ಮಾರ್ ಪ್ರದೇಶದ ದ್ವೀಪಕ್ಕೆ ಈಜುವಂತೆ ಸೂಚಿಸಲಾಗಿದೆ ಎಂದು ವರದಿಯಾಗಿದೆ. ನಿರಾಶ್ರಿತರು ದಡಕ್ಕೆ ಈಜುವ ಮೂಲಕ ಬದುಕುಳಿದಿದ್ದಾರೆ ಎಂದು ವರದಿಯಾಗಿದೆ, ಆದರೆ ಅವರ ಪ್ರಸ್ತುತ ಸ್ಥಳ ಮತ್ತು ಸ್ಥಿತಿ ಗೊತ್ತಾಗಿಲ್ಲ ಎಂದು ವಿಶ್ವಸಂಸ್ಥೆಯ ಮಾನವ ಹಕ್ಕುಗಳ ಮಂಡಳಿಯ ಪತ್ರಿಕಾ ಪ್ರಕಟಣೆಯಲ್ಲಿ ಹೇಳಲಾಗಿದೆ.

ಭಾರತೀಯ ಅಧಿಕಾರಿಗಳು ಅಸ್ಸಾಂ ರಾಜ್ಯದ ಬಂಧನ ಕೇಂದ್ರದಿಂದ ಸುಮಾರು 100 ಮಂದಿ ರೋಹಿಂಗ್ಯಾ ನಿರಾಶ್ರಿತರ ಗುಂಪನ್ನು ಬಾಂಗ್ಲಾದೇಶದ ಗಡಿಯಲ್ಲಿರುವ ಪ್ರದೇಶಕ್ಕೆ ಸ್ಥಳಾಂತರಿಸಿದ್ದಾರೆ ಎಂದು ವರದಿಯಾಗಿದೆ. ಈ ಗುಂಪಿನ ಪ್ರಸ್ತುತ ಸ್ಥಳ ಮತ್ತು ಸ್ಥಿತಿಯೂ ತಿಳಿದಿಲ್ಲ ಎಂದು ಪ್ರಕಟಣೆ ತಿಳಿಸಿದೆ.

“ಮಾರ್ಚ್ 3, 2025ರಂದು, ವಿಶೇಷ ವರದಿಗಾರ ಆಂಡ್ರ್ಯೂಸ್ ಅವರು ಭಾರತ ಸರ್ಕಾರಕ್ಕೆ ಪತ್ರ ಬರೆದಿದ್ದು, ರೋಹಿಂಗ್ಯಾಗಳು ಸೇರಿದಂತೆ ಇತರ ನಿರಾಶ್ರಿತರ ವ್ಯಾಪಕ, ಅನಿಯಂತ್ರಿತ ಮತ್ತು ಅನಿರ್ದಿಷ್ಟ ಬಂಧನ ಹಾಗೂ ರೋಹಿಂಗ್ಯಾ ನಿರಾಶ್ರಿತರನ್ನು ಮ್ಯಾನ್ಮಾರ್‌ಗೆ ವಾಪಸ್ ಕಳುಹಿಸಲಾಗುತ್ತದೆ ಎಂಬ ಆರೋಪಗಳ ಬಗ್ಗೆ ಕಳವಳ ವ್ಯಕ್ತಪಡಿಸಿದ್ದಾರೆ. ಮ್ಯಾನ್ಮಾರ್‌ ನಿರಾಶ್ರಿತರನ್ನು ಅನಿಯಂತ್ರಿತ ಬಂಧನದಿಂದ ಮುಕ್ತಗೊಳಿಸಬೇಕು ಮತ್ತು ಬಂಧನ ಸ್ಥಳಗಳಿಗೆ ಅವರಿಗೆ ಪ್ರವೇಶ ಅವಕಾಶ ನೀಡಬೇಕು ಭಾರತ ಸರ್ಕಾರವನ್ನು ಒತ್ತಾಯಿಸಿದ್ದಾರೆ.”

“ಭಾರತ ಸರ್ಕಾರವು ರೋಹಿಂಗ್ಯಾ ನಿರಾಶ್ರಿತರ ವಿರುದ್ಧದ ಎಲ್ಲಾ ರೀತಿಯ ಒಪ್ಪಿಕೊಳ್ಳಲಾಗದ ಕೃತ್ಯಗಳನ್ನು ತಕ್ಷಣವೇ ನಿಲ್ಲಿಸಬೇಕು. ಮ್ಯಾನ್ಮಾರ್‌ಗೆ ಅವರನ್ನು ಗಡಿಪಾರು ಮಾಡುವುದನ್ನು ಕೊನೆಗಳಿಸಬೇಕು. ಭಾರತದ ಅಂತಾರಾಷ್ಟ್ರೀಯ ಬಾಧ್ಯತೆಗಳ ಈ ಸ್ಪಷ್ಟ ಉಲ್ಲಂಘನೆಗಳಿಗೆ ಕಾರಣರಾದವರನ್ನು ಹೊಣೆಗಾರರನ್ನಾಗಿ ಮಾಡಬೇಕು” ಎಂಬುವುದಾಗಿ ಆಂಡ್ರ್ಯೂಸ್ ಪತ್ರದಲ್ಲಿ ಆಗ್ರಹಿಸಿದ್ದಾರೆ ಎಂದು ಪ್ರಕಟಣೆ ತಿಳಿಸಿದೆ.

ಗಾಜಾದಲ್ಲಿ ಮುಂದುವರೆದ ಇಸ್ರೇಲ್ ವಾಯುದಾಳಿ; 80 ಜನರು ಸಾವು, ಕ್ಯಾನ್ಸರ್ ಆಸ್ಪತ್ರೆ ಸೇವೆ ಸ್ಥಗಿತ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

1 COMMENT

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....