Homeಮುಖಪುಟಡೊಮಿನಿಕಾದಿಂದ ಬರಿಗೈನಲ್ಲಿ ವಾಪಸ್; ಮೆಹುಲ್‌ ಚೋಕ್ಸಿ ಬಂಧಿಸಿ ಕರೆತರುವ ಭಾರತದ ಪ್ರಯತ್ನಕ್ಕೆ ನಿರಾಸೆ

ಡೊಮಿನಿಕಾದಿಂದ ಬರಿಗೈನಲ್ಲಿ ವಾಪಸ್; ಮೆಹುಲ್‌ ಚೋಕ್ಸಿ ಬಂಧಿಸಿ ಕರೆತರುವ ಭಾರತದ ಪ್ರಯತ್ನಕ್ಕೆ ನಿರಾಸೆ

- Advertisement -
- Advertisement -

ಭಾರತದಿಂದ ಪರಾರಿಯಾಗಿರುವ ಬಹುಕೋಟಿ ಬ್ಯಾಂಕಿಂಗ್‌ ವಂಚನೆಯ ಆರೋಪಿ ಮೆಹುಲ್‌ ಚೋಕ್ಸಿ ಸದ್ದದ ಮಟ್ಟಿಗೆ ಡೊಮಿನಿಕ್‌ ದೇಶದಲ್ಲಿ ಸುರಕ್ಷಿತರಾಗಿದ್ದಾರೆ. ಜುಲೈ 1 ರ ವರೆಗೆ ಚೋಕ್ಸಿ ಬಂಧನ ಸಾಧ್ಯವಿಲ್ಲ. ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವುದೇ ಅಥವಾ ಆಂಟಿಗುವಾ ಬಾರ್ಬುಡಾ ದೇಶಕ್ಕೆ ಹಸ್ತಾಂತರಿಸುವುದೇ ಎಂದು ವಿಚಾರಣೆಯಲ್ಲಿ ಡೊಮಿನಿಕನ್‌ ನ್ಯಾಯಾಲಯ ತೊಡಗಿದೆ. ಡೊಮಿನಿಕಾ ಕೋರ್ಟ್‌ ತೀರ್ಪು ಬರುವ ತನಕ ಭಾರತಕ್ಕೆ ಮೆಹುಲ್‌ ಚೋಕ್ಸಿಯನ್ನು ಕರೆತರುವ ದೇಶದ ತನಿಖಾ ಸಂಸ್ಥೆಗಳ ಪ್ರಯತ್ನಕ್ಕೆ ಅಡ್ಡಿ ಎದುರಾಗಿದೆ.

ಆಂಟಿಗುವ ಮತ್ತು ಬಾರ್ಬುಡ ದೇಶದ ಪೌರತ್ವ ಪಡೆದು ಭಾರತದಿಂದ ಪರಾರಿಯಾಗಿದ್ದ ಚೋಕ್ಸಿ ಬಂಧನಕ್ಕೆ ಡೊಮಿನಿಕಾಗೆ ತೆರಳಿದ್ದ ಭಾರತದ ಅಧಿಕಾರಿಗಳು ಈಗ ಬರಿಗೈಯಲ್ಲಿ ಮರಳಿದ್ದಾರೆ. ಖಾಸಗಿ ವಿಮಾನವೊಂದನ್ನು ಡೊಮಿನಿಕಾ ದೇಶದ ವಿಮಾನ ನಿಲ್ಧಾಣದಲ್ಲಿ ನಿಲ್ಲಿಸಿಕೊಂಡು ಚೋಕ್ಸಿ ಬಂಧಿಸಿ ಕರೆತರಲು ಕಾಯುತ್ತಿದ್ದ ಅಧಿಕಾರಿಗಳು ಬೇರೆ ದಾರಿಯಿಲ್ಲದೇ ಬಂದ ದಾರಿಗೆ ವಾಪಸಾಗಿ ವಿಮಾನದಲ್ಲಿ ಭಾರತಕ್ಕೆ ಹೊರಟಿದ್ದಾರೆ.

ಮೇ 29 ರಂದು ಕೆರಿಬಿಯನ್‌ ದೇಶಕ್ಕೆ ಭಾರತದ ಅಧಿಕಾರಿಗಳು ಖಾಸಗಿ ವಿಮಾನದಲ್ಲಿ ಯಾಕೆ ತೆರಳಿದರೆಂದು ಇದುವರೆಗೆ ಭಾರತ ಸರ್ಕಾರ ಯಾವುದೇ ಅಧಿಕೃತ ಹೇಳಿಕೆ ಬಿಡುಗಡೆ ಮಾಡಿಲ್ಲ. ಆದರೆ ಈ ನಡುವೆ ಚೋಕ್ಸಿ ಬಂಧನಕ್ಕಾಗಿ ಭಾರತದ ಅಧಿಕಾರಿಗಳು ಡೊಮಿನಿಕಾದಲ್ಲಿ ಕಾಯುತ್ತಿರುವ ಸುದ್ದಿ ಎಲ್ಲೆಡೆಯಲ್ಲೂ ಹರಿದಾಡುತ್ತಿತ್ತು. ಮೇ 23 ರಂದು ಚೋಕ್ಸಿ ಆಂಟಿಗುವ ದೇಶದಿಂದ ನಾಪತ್ತೆಯಾದ ಘಟನೆ ಭಾರತೀಯ ಅಧಿಕಾರಿಗಳಲ್ಲಿ ಮೆಹುಲ್‌ ಚೋಕ್ಸಿ ಅವರನ್ನು ಭಾರತಕ್ಕೆ ಕರೆತರುವ ಚಿಕ್ಕ ಅವಕಾಶದ ಬಾಗಿಲನ್ನು ತೆರೆದಿತ್ತು. ಸದ್ಯದ ಮಟ್ಟಿಗೆ ಭಾರತದ ಪಾಲಿಗೆ ಆ ಅವಕಾಶದ ಬಾಗಿಲು ಮುಚ್ಚಿದಂತೆ ಆಗಿದೆ.

ಭಾರತೀಯ ಮುಖ ಲಕ್ಷಣ ವಿರುವ ವ್ಯಕ್ತಿಯೊಬ್ಬರು ಮೆಹುಲ್‌ ಚೋಕ್ಸಿ ಅವರನ್ನು ಆಂಟಿಗುವಾದಿಂದ ಅಪಹರಿಸಿ ಡೊಮಿನಿಕ ದೇಶಕ್ಕೆ ಕೊಂಡೊಯ್ದಿದ್ದಾರೆ. ಇದು ಭಾರತಕ್ಕೆ ಚೋಕ್ಸಿಯನ್ನು ಕರೆದೊಯ್ಯಲು ಭಾರತ ನಡೆಸಿದ ಆಪರೇಶನ್‌ ಎಂದು ಮೆಹುಲ್‌ ಚೋಕ್ಸಿ ಪರ ವಕೀಲ ವೇಯ್ನೆ ಮಾರ್ಷ್‌ ಹೇಳಿಕೆ ನೀಡಿದ್ದಾರೆ.

ಸದ್ಯದ ಮಟ್ಟಿಗೆ ಪ್ರಕರಣ ಏನೇ ಇರಬಹುದು ಆದರೆ ಮೆಹುಲ್‌ ಚೋಕ್ಸಿಯವರನ್ನು ಭಾರತಕ್ಕೆ ಕರೆತರುವ ಅಧಿಕಾರಿಗಳ ಪ್ರಯತ್ನಕ್ಕೆ ಹಿನ್ನಡೆಯಾಗಿರುವುದಂತೂ ಸತ್ಯ. ಆದರೆ ಇದು ಕೇವಲ ಅಧಿಕಾರಿಗಳ ವೈಫಲ್ಯವಲ್ಲ. ಬದಲಾಗಿ ಚೋಕ್ಸಿ ಡೊಮಿನಿಕ್ ದೇಶದ ಕಾನೂನಿನ ಮೂಲಕ ತನ್ನನ್ನು ಬಂಧನದಿಂದ ರಕ್ಷಿಸಿಕೊಳ್ಳುತ್ತಿರುವ ಅಧಿಕಾರ ಪಡೆದುಕೊಂಡಿದ್ದಾರೆ. ಹೀಗಾಗಿ ಮೆಹುಲ್‌ ಚೋಕ್ಸಿ ಬಂಧನ ಸಾಧ್ಯವಾಗುತ್ತಿಲ್ಲ ಎಂದು ತನಿಖಾ ಸಂಸ್ಥೆಯ ಮೂಲಗಳು ತಿಳಿಸಿವೆ.

ಚೋಕ್ಸಿ ಪರ ವಕೀಲರ ತಂಡ ಮೆಹುಲ್‌ ಚೋಕ್ಸಿಯವರನ್ನು ಭಾರತಕ್ಕೆ ಹಸ್ತಾಂತರಿಸುವುದು ಡೊಮಿನಿಕನ್‌ ಸಂವಿಧಾನದ ವಿರೋಧಿ ನಡೆ ಎಂದು ನ್ಯಾಯಾಲಯದಲ್ಲಿ ವಾದಿಸುತ್ತಿದೆ. ಮೆಹುಲ್‌ ಚೋಕ್ಸಿ ಆಂಟಿಗುವ ದೇಶದ ಪ್ರಜೆ. ಅವರನ್ನು ಹಸ್ತಾಂತರಿಸುವುದಾದರೆ ಆಂಟಿಗುವ ದೇಶಕ್ಕೆ ಹಸ್ತಾಂತರಿಸಬೇಕೆಂದು ಡೊಮಿನಿಕನ್‌ ನ್ಯಾಯಾಲಯದ ಮುಂದೆ ವಾದಿಸುತ್ತಿದ್ದಾರೆ. ಇದರ ಪರಿಣಾಮ ಡೊಮಿನಿಕನ್‌ ನ್ಯಾಯಾಲಯ ಮೆಹುಲ್‌ ಚೋಕ್ಸಿ ಅವರನ್ನು ಭಾರತಕ್ಕೆ ಹಸ್ತಾಂತರಿಸುವುದೇ ಅಥವಾ ಆಂಟಿಗುವಾ ಬಾರ್ಬುಡಾಕ್ಕೆ ಹಸ್ತಾಂತರಿಸುವುದೇ ಎಂಬ ಗೊಂದಲದಲ್ಲಿದ್ದು ಆದೇಶದಲ್ಲಿರುವ ಕಾನೂನಿನ ಅವಕಾಶಗಳನ್ನು ಪರಿಶೀಲನೆ ನಡೆಸುತ್ತಿದೆ.

ಭಾರತದ ತನಿಖಾ ಸಂಸ್ಥೆಗಳು ಜುಲೈ 1 ರ ನಂತರ ಮೆಹುಲ್‌ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವಂತೆ ಡೊಮಿನಿಕನ್‌ ನ್ಯಾಯಾಲಯ ಆದೇಶ ಹೊರಡಿಸಲಿದೆ ಎಂಬ ನಿರೀಕ್ಷೆಯಲ್ಲಿದ್ದಾರೆ. ಈ ಸಂಬಂಧ ಭಾರತದ ನ್ಯಾಯವಾದಿಗಳು ಡೊಮಿನಿಕನ್‌ ನ್ಯಾಯಾಲಯದಲ್ಲಿ ಪ್ರಬಲ ವಾದವನ್ನು ಮಂಡಿಸಲಿದ್ದಾರೆ ಎಂದು ಭಾರತದ ತನಿಖಾ ಸಂಸ್ಥೆಗಳು ತಿಳಿಸಿವೆ. ಮೆಹುಲ್‌ ಚೋಕ್ಸಿ ಭಾರತದ ಪೌರತ್ವ ಹೊಂದಿರುವುದರಿಂದ ಭಾರತಕ್ಕೆ ಅವರನ್ನು ಕರೆತರುವ ಸಾಧ್ಯತೆಗಳಿವೆ.

ಯಾವಗಲೂ ಪಕ್ಕಾ ಯೋಜನೆಗಳನ್ನು ಹಾಕಿಕೊಂಡಿರುವ ಮೆಹುಲ್‌ ಚೋಕ್ಸಿ

ಗೀತಾಂಜಲಿ ಜೆಮ್ಸ್‌ ನ ಮ್ಯಾನೆಜಿಂಗ್‌ ಡೈರೆಕ್ಟರ್‌ ಆಗಿರುವ ಮೆಹುಲ್‌ ಚೋಕ್ಸಿ ತಮ್ಮ ತಂದೆ ಚಿನುಬಾಯಿ ಚೋಕ್ಸಿಯವರಿಂದ 1985 ರಲ್ಲಿ ವಜ್ರ ವ್ಯಾಪಾರದ ವಹಿವಾಟಿನ ವ್ಯವಹಾರದ ಜವಾಬ್ಧಾರಿಯನ್ನು ಪಡೆದುಕೊಂಡ ನಂತರ ಮತ್ತೆ ಹಿಂತಿರುಗಿ ನೋಡಲಿಲ್ಲ. ʼನಕ್ಷತ್ರ,ʼ ʼಡಿ ದಮಸ್‌ʼ ಅಸ್ಮಿ, ದಿಯಾ, ಮಾಯಾ, ಸಂಗಿನಿ ಹೀಗೆ ಬೇರೆ ಹೆಸರಿನ ಸೆಲೆಬ್ರಿಟ್‌ ವಜ್ರಾಭರಣಗಳ ಬ್ರ್ಯಾಂಡ್‌ಗಳನ್ನು ಪರಿಚಯಿಸುತ್ತಲೇ ಹೋದರು. ಮುಂಬೈನ ಸೆಲೆಬ್ರಿಟಿ ವಲಯದಲ್ಲಿ ಅತ್ಯಂತ ಪ್ರಸಿದ್ಧ ವಜ್ರಾಭರಣ ವ್ಯಾಪಾರಿಯಾಗಿ ಬೆಳೆದ ಚೋಕ್ಸಿ ಇಂದಿಗೂ ಪ್ಲಾನ್‌ ಗಳನ್ನು ಹೊಂದಿರುವ ವ್ಯಕ್ತಿ ಎಂದೇ ಚಿರಪರಿಚಿತರಾಗಿದ್ದಾರೆ. ಅವರ ಪ್ಲಾನ್‌ ಗಳ ಚತುರತೆ ಕಾರಣದಿಂದಲೇ ಇಂದು ಭಾರತದ ಬ್ಯಾಂಕ್‌ಗಳಿಗೆ ಸಾವಿರಾರು ಕೋಟಿ ಹಣವನ್ನು ವಂಚಿಸಿ ಭಾರತದಿಂದ ಪರಾರಿಯಾಗಿ ವಿದೇಶಗಳಲ್ಲಿ ಸುರಕ್ಷಿತವಾಗಿರಲು ಸಾಧ್ಯವಾಗಿದೆ ಎಂದು ಅವರನ್ನು ಹತ್ತಿರದಿಂದ ಬಲ್ಲ ವ್ಯಕ್ತಿಗಳು ಹೇಳುತ್ತಾರೆ.

ಸಿಬಿಐ ಅಧಿಕಾರಿಗಳು ಹೇಳುವಂತೆ ಚೋಕ್ಸಿ ವಜ್ರ ವ್ಯಾಪಾರಗಳಿಂದ ದೊಡ್ಡ ಮಟ್ಟದ ಲಾಭಗಳಿಸುತ್ತಿದ್ದ. ಹಾಗಾಗೇ ಕೆಲವೇ ವರ್ಷಗಳಲ್ಲಿ ದೇಶದ ಪ್ರತಿಷ್ಠಿತ ಉದ್ಯಮಿಯಾಗಿ ಬೆಳೆಯಲು ಸಾಧ್ಯವಾಯಿತು. ನಕಲಿ ದಾಖಲೆಗಳ ಮೂಲಕ ಬ್ಯಾಂಕ್‌ಗಳಿಂದ ಸಾವಿರಾರು ಕೋಟಿ ಸಾಲ ಪಡೆದು ಅದನ್ನು ವಿದೇಶಗಳಲ್ಲಿ ಹೂಡಿಕೆ ಮಾಡಿದ್ದಾರೆ. ವಿದೇಶಿ ಕಂಪನಿಗಳ 223 ನಕಲಿ ಗ್ಯಾರಂಟಿ ಪ್ರಮಾಣ ಪತ್ರವನ್ನು ನೀಡಿ ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ಒಂದರಿಂದಲೇ ಸುಮಾರು 5000 ಕೋಟಿ ರೂಪಾಯಿ ಹಣವನ್ನು ಪಡೆದಿದ್ದಾರೆ. ಅದನ್ನು  ಮತ್ತೆ ಮರುಪಾವತಿಸಿಲ್ಲ. ಮೆಹುಲ್‌ ಚೋಕ್ಸಿ ತನ್ನ ಸಂಬಂಧಿ ನೀರವ್‌ ಮೋದಿಗಿಂತ ದೊಡ್ಡ ಪ್ರಮಾಣದ ಬ್ಯಾಂಕಿಂಗ್‌ ಹಗರಣದಲ್ಲಿ ಭಾಗಿಯಾಗಿದ್ದಾರೆ.

ಡೊಮಿನಿಕನ್‌ ವಿರೋಧಪಕ್ಷದ ಸಹಾಯದಿಂದ ತನ್ನನ್ನು ರಕ್ಷಿಸಿಕೊಳ್ಳುತ್ತಿರುವ ಮೆಹುಲ್‌ ಚೋಕ್ಸಿ

ಮೆಹುಲ್‌ ಚೋಕ್ಸಿ ಡೊಮಿನಿಕನ್‌ ದೇಶದ ಅಧಿಕಾರಿಗಳು ದೇಶಕ್ಕೆ ಅತಿಕ್ರಮ ಪ್ರವೇಶ ಮಾಡಿದ ಆರೋಪದಲ್ಲಿ ತನ್ನನ್ನು ಬಂಧಿಸಬಹುದು ಎಂಬ ಭಯದಲ್ಲಿ ಅಲ್ಲಿನ ವಿರೋಧ ಪಕ್ಷಗಳ ಮೊರೆ ಹೋಗಿದ್ದಾರೆ ಎಂದು ಮೂಲಗಳಿಂದ ತಿಳಿದು ಬಂದಿದೆ.

ಆಂಟಿಗುವಾ ದೇಶದ ಪ್ರಧಾನಿ ಗ್ಯಾಸ್ಟೋನ್‌ ಬ್ರೌನ್‌ ಮೆಹುಲ್‌ ಚೋಕ್ಸಿ ಅವರನ್ನು ನೇರವಾಗಿ ಭಾರತಕ್ಕೆ ಹಸ್ತಾಂತರಿಸುವಂತೆ ಡೊಮಿನಿಕನ್‌ ಅಧಿಕಾರಿಗಳಿಗೆ ತಿಳಿಸಿದರು. ಭಾರತ ಮತ್ತು ಡೊಮಿನಿಕನ್‌ ದೇಶಗಳ ಸಂಬಂಧವನ್ನು ಅರಿತಿದ್ದ ಮೆಹುಲ್‌ ಚೋಕ್ಸಿ ತನಗೆ ಆಪತ್ತು ಎದುರಾಗಿದೆಯೆಂದು ತಿಳಿದು ಡೊಮಿನಿಕನ್‌ ವಿರೋಧ ಪಕ್ಷಗಳನ್ನು ತನ್ನ ಪರವಾಗಿ ಬಳಸಿಕೊಳ್ಳತೊಡಗಿದರು. ಮೆಹುಲ್‌ ಚೋಕ್ಸಿ ಡೊಮಿನಿಕನ್‌ ವಿರೋಧಪಕ್ಷಗಳಿಗೆ ಹಣಕಾಸಿನ ಆಮಿಶವನ್ನು ಕೂಡ ಒಡ್ಡಿದ್ದಾರೆ ಎಂದು ಭಾರತದ ತನಿಖಾ ಸಂಸ್ಥೆಗಳು ಆರೋಪ ಮಾಡಿವೆ.

ಮೆಹುಲ್‌ ಚೋಕ್ಸಿ ಅವರ ಅಣ್ಣ ಚೇತನ್‌ ಚಿನುಬಾಯಿ ಚೋಕ್ಸಿ ಮೇ 29 ರಂದು ಡೊಮಿನಿಕಾ ದೇಶಕ್ಕೆ ತೆರಳಿ ಅಲ್ಲಿನ ವಿರೋಧ ಪಕ್ಷದ ನಾಯಕ ಲೆನೊಕ್ಸ್‌ ಲಿಂಟನ್‌ ಅವರೊಂದಿಗೆ ರಹಸ್ಯ ಮಾತುಕತೆ ನಡೆಸಿದ್ದಾರೆ. ಡೊಮಿನಿಕ್ ಸಂಸತ್ತಿನಲ್ಲಿ ಮೆಹುಲ್‌ ಚೋಕ್ಸಿ ಭಾರತ ಹಸ್ತಾಂತರವನ್ನು ವಿರೋಧಿಸುವಂತೆ ಒಪ್ಪಂದ ಮಾಡಿಕೊಂಡಿದ್ದಾರೆ. ಇದಕ್ಕೆ ಪ್ರತಿಯಾಗಿ ಚೇತನ್‌ ಚೋಕ್ಸಿ ವಿರೋಧ ಪಕ್ಷಗಳಿಗೆ ಚುನಾವಣಾ ದೇಣಿಗೆಯನ್ನು ಸಹ ನೀಡಲು ಒಪ್ಪಿಕೊಂಡಿದ್ದಾರೆ  ಎಂದು ಡೊಮಿನಿಕನ್‌ ಸುದ್ದಿ ಮೂಲಗಳು ಹೇಳುತ್ತಿವೆ.

ಮೆಹುಲ್‌ ಚೋಕ್ಸಿ ಪರ ವಕೀಲ ವಿಜಯ್‌ ಅಗರವಾಲ್‌ ಈ ಆರೋಪಗಳನ್ನು ಅಲ್ಲಗಳೆದಿದ್ದಾರೆ. ಚೋಕ್ಸಿಯವರ ಸಹೋದರ ಮೆಹುಲ್‌ ಚೋಕ್ಸಿ ಆರೋಗ್ಯವನ್ನು ವಿಚಾರಿಸಲಷ್ಟೆ ಡೊಮಿನಿಕ ದೇಶಕ್ಕೆ ಬಂದಿದ್ದಾರೆ ಎಂದು ತಿಳಿಸಿದ್ದಾರೆ.

ಭಾರತದ ಮುಂದಿನ ನಡೆ ಏನು?

ಮೆಹುಲ್‌ ಚೋಕ್ಸಿ ವಿರುದ್ಧ ಡೊಮಿನಿಕ್ ದೇಶಕ್ಕೆ ಅಕ್ರಮವಾಗಿ ಪ್ರವೇಶಿಸಿರುವ ಆರೋಪದ ಮೇಲೆ ರಾಜಧಾನಿ ರೊಸಿಯು ನಗರದ ಮ್ಯಾಜಿಸ್ಟ್ರೇಟ್‌ ಕೋರ್ಟ್‌ ನಲ್ಲಿ ವಿಚಾರಣೆ ನಡೆಯುತ್ತಿದೆ. ನಡುವೆ ಡೊಮಿನಿಕನ್‌ ಸರ್ಕಾರ ಚೋಕ್ಸಿ ಅಕ್ರಮವಾಗಿ ದೇಶದೊಳಗೆ ಪ್ರವೇಶಿಸಿದ್ದಾರೆ ಅವರನ್ನು ಭಾರತಕ್ಕೆ ಹಸ್ತಾಂತರಿಸಬೇಕೆಂದು ನ್ಯಾಯಾಲಯದಲ್ಲಿ ವಾದಿಸುತ್ತಿದೆ.

ಮತ್ತೊಂದೆಡೆ ಮೆಹುಲ್‌ ಚೋಕ್ಸಿ ಪರ ವಕೀಲರು ಈಸ್ಟರ್ನ್‌ ಕೆರಿಬಿಯನ್‌ ಸುಪ್ರೀಂ ಕೋರ್ಟ್‌ ನಲ್ಲಿ ಮೆಹುಲ್‌ ಚೋಕ್ಸಿಯವರನ್ನು ಆಂಟಿಗುವಾದಿಂದ ಅಪಹರಿಸಲಾಗಿದೆ. ಅವರನ್ನು ಆಂಟಿಗುವ ದೇಶಕ್ಕೆ ಹಸ್ತಾಂತರಿಸಬೇಕೆಂದು ಸುಪ್ರೀಂ ಕೋರ್ಟ್‌ ಮೊರೆಹೋಗಿದ್ದಾರೆ.

ಭಾರತದ ತನಿಖಾ ಅಧಿಕಾರಿಗಳು ಪಂಜಾಬ್‌ ನ್ಯಾಶನಲ್‌ ಬ್ಯಾಂಕ್‌ ಹಗರಣದಲ್ಲಿ ಮೆಹುಲ್‌ ಚೋಕ್ಸಿ ಭಾಗಿಯಾಗಿರುವ ಕುರಿತು ಸಾಕ್ಷ್ಯಗಳನ್ನು ಮತ್ತು ದಾಖಲೆಗಳನ್ನು ಡೊಮಿನಿಕನ್‌ ನ್ಯಾಯಾಲಯಕ್ಕೆ ನೀಡಿದ್ದು ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಬೇಕೆಂದು ಮನವಿ ಮಾಡಿದ್ದಾರೆ.

ಭಾರತದ ತನಿಖಾಧಿಕಾರಿಗಳು ಮೆಹುಲ್‌ ಚೋಕ್ಸಿ ಭಾರತದ ಪ್ರಜೆ. ಅವರು ಭಾರತದ ಪೌರತ್ವವನ್ನು ತ್ಯಜಿಸಿರುವುದಾಗಿ ಘೋಷಣೆ ಮಾಡಿಲ್ಲ. ಹಾಗಾಗಿ ಚೋಕ್ಸಿಯನ್ನು ಭಾರತಕ್ಕೆ ಕರೆ ತರುತ್ತೇವೆ ಎಂದು ಹೇಳುತ್ತಿದ್ದಾರೆ. ಇನ್ನು ಭಾರತದ ಪೌರತ್ವ ಕಾಯ್ದೆ ಪ್ರಕಾರ ದೇಶದ ಯಾವುದೇ ನಾಗರಿಕ ವಿದೇಶದ ಪೌರತ್ವ ಪಡೆದ ತಕ್ಷಣ ಇಲ್ಲಿನ ಅವರ ಪೌರತ್ವ ರದ್ದಾಗುತ್ತದೆ. ಹಾಗಾಗಿ ಮೆಹುಲ್‌ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸಲು ಸಾಧ್ಯವಿಲ್ಲವೆಂಬ ವಾದವೂ ಕೇಳಿಬಂದಿದೆ.

ಇದೆಲ್ಲದರ ನಡುವೆ ಜುಲೈ 1 ರ ವರೆಗಂತೂ ಮೆಹುಲ್‌ ಚೋಕ್ಸಿ ಡೊಮಿನಿಕ್ ದೇಶದಲ್ಲಿ ಸುರಕ್ಷಿತವಾಗಿರಲಿದ್ದಾರೆ. ಜುಲೈ 1 ರ ವರೆಗೆ ಭಾರತದ ಅಧಿಕಾರಿಗಳಿಗೆ ಮೆಹುಲ್‌ ಚೋಕ್ಸಿಯವರನ್ನು ಭಾರತಕ್ಕೆ ಕರೆತರಲು ಯಾವ ಅವಕಾಶವೂ ಇಲ್ಲ. ಡೊಮಿನಿಕನ್‌ ನ್ಯಾಯಲಯ ಮಾತ್ರ ಈ ಸಂದರ್ಭದಲ್ಲಿ ಮೆಹುಲ್‌ ಚೋಕ್ಸಿಯನ್ನು ಭಾರತಕ್ಕೆ ಹಸ್ತಾಂತರಿಸುವ ಅಧಿಕಾರವನ್ನು ಹೊಂದಿದೆ. ಆದರೆ ಅಷ್ಟರ ನಡುವೆ ಭಾರತದ ತನಿಖಾಧಿಕಾರಿಗಳಿಗೆ ಚಳ್ಳೆಹಣ್ಣು ತಿನ್ನಿಸಲು ಮೆಹುಲ್‌ ಚೋಕ್ಸಿ ಇನ್ನೊಂದು ಯೋಜನೆಯನ್ನೂ ಸಿದ್ಧಗೊಳಿಸಿಕೊಳ್ಳುವ ಸಾಧ್ಯತೆ ಕೂಡ ಇದೆ ಎಂದು ತನಿಖಾ ಸಂಸ್ಥೆಯ ಮೂಲಗಳು ಕಳವಳಗೊಂಡಿವೆ.


ಇದನ್ನೂ ಓದಿ: 14 ಸಾವಿರ ಕೋಟಿ ವಂಚಿಸಿ ಪರಾರಿಯಾದ ಮೆಹುಲ್ ಚೋಕ್ಸಿ ಆಂಟಿಗುವಾದಲ್ಲಿ ‘ನಾಪತ್ತೆ’ !

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

BJP ವಿರುದ್ಧದ ಆಕ್ರೋಶವೇ Gen-Z ಹೋರಾಟದ ಮೂಲ: ವಿಪಕ್ಷಗಳಿಗೆ ಇದು ದೊಡ್ಡ ಪಾಠ

ಜಂತರ್ ಮಂತರ್‌ನಲ್ಲಿ ನಡೆದ ವಿದ್ಯಾರ್ಥಿಗಳ ಹೋರಾಟವನ್ನು ನಿಮ್ಮ ರಾಜಕೀಯ ದೃಷ್ಟಿಕೋನಕ್ಕೆ ತಕ್ಕಂತೆ ನೀವು ಕ್ರಾಂತಿ ಎಂದಾದರೂ ನೋಡಬಹುದು, ಅಥವಾ ಕ್ಷಣಿಕವಾಗಿ ಎದ್ದ ಬಿರುಗಾಳಿ ಎಂದಾದರೂ ಭಾವಿಸಬಹುದು. ಆದರೆ ಇಲ್ಲಿ ನಿಜವಾಗಿಯೂ ಆಗಿದ್ದೇನು ಮತ್ತು...

ಇನ್‌ಸ್ಟಾಗ್ರಾಮ್‌ನಲ್ಲಿ ಕ್ಷಮಿಸಿದರೆ ಸಾಲದು, ವಿದ್ಯಾರ್ಥಿಗಳ ಮೇಲಿನ ಕೇಸ್ ವಾಪಸ್ ಪಡೆಯಿರಿ: ಪ್ರಧಾನಿಗೆ ದೀಪ್ಕೆ ನೇರ ಪ್ರಶ್ನೆ

ಪ್ರಧಾನಿ ನರೇಂದ್ರ ಮೋದಿ ಅವರು ಇನ್‌ಸ್ಟಾಗ್ರಾಮ್ ವಿಡಿಯೋವೊಂದರಲ್ಲಿ ತಮ್ಮ ವಿರುದ್ಧ ನಿಂದನಾತ್ಮಕ ಪದ ಬಳಸಿದ್ದ ‘ಕಾಕ್ರೋಚ್ ಜನತಾ ಪಾರ್ಟಿ’ (CJP) ಪ್ರತಿಭಟನಾ ನಿರತ ವಿದ್ಯಾರ್ಥಿಗಳನ್ನು ಕ್ಷಮಿಸಿದ್ದೇನೆ ಎಂದು ಹೇಳಿರುವುದಕ್ಕೆ ಸಿಜೆಪಿ ಸಂಸ್ಥಾಪಕ ಅಭಿಜೀತ್...

ಪ್ರತಿಭಟನೆ ಭೀತಿ : ಸಿಜೆಐ ಸೂರ್ಯಕಾಂತ್ ಭಾಗವಹಿಸಬೇಕಿದ್ದ ಘಟಿಕೋತ್ಸವ ದಿಢೀರ್ ಮುಂದೂಡಿದ TISS

ಮುಂಬೈನ ಟಾಟಾ ಇನ್‌ಸ್ಟಿಟ್ಯೂಟ್ ಆಫ್ ಸೋಷಿಯಲ್ ಸೈನ್ಸಸ್ (ಟಿಐಎಸ್‌ಎಸ್‌) ಸಂಸ್ಥೆಯು ಆಗಸ್ಟ್ 2ರಂದು ನಡೆಸಲು ನಿಗದಿಪಡಿಸಿದ್ದ ತನ್ನ 86ನೇ ವಾರ್ಷಿಕ ಘಟಿಕೋತ್ಸವವನ್ನು ದಿಢೀರ್ ಮುಂದೂಡಿದೆ. ಕ್ಯಾಂಪಸ್ ಭದ್ರತೆಯ ಬಗೆಗಿನ ಕಳವಳಗಳು ಮತ್ತು ವಿದ್ಯಾರ್ಥಿಗಳ...

ಪ್ರಧಾನಿಗಳೇ ನಿಮ್ಮ ರೀಲ್‌ಗಳನ್ನು ಅಂಧಭಕ್ತರು ಮೆಚ್ಚಬಹುದು, ಆದರೆ ಇತಿಹಾಸ ನಿಮ್ಮನ್ನು ಕ್ಷಮಿಸುವುದಿಲ್ಲ: ಬಿ.ಕೆ. ಹರಿಪ್ರಸಾದ್

ಪ್ರಧಾನಿ ನರೇಂದ್ರ ಮೋದಿ ಬಿಡುಗಡೆ ಮಾಡಿರುವ ಇತ್ತೀಚಿನ ವಿಡಿಯೋ (ರೀಲ್) ಕುರಿತು ಕಾಂಗ್ರೆಸ್ ಹಿರಿಯ ನಾಯಕ ಮತ್ತು ಕೆಪಿಸಿಸಿ ಅಧ್ಯಕ್ಷರಾದ ಬಿ.ಕೆ. ಹರಿಪ್ರಸಾದ್ ತೀವ್ರ ವಾಗ್ದಾಳಿ ನಡೆಸಿದ್ದಾರೆ. ತಾನು ಮಾಡಿದರೆ ರಾಜತಂತ್ರ, ಬೇರೆಯವರು...

ಪ್ರಧಾನಿ ಮೋದಿ ವಿರುದ್ಧ ನಿಂದನೆ: ನನಗೆ ಕೇವಲ 15 ವರ್ಷ ‘ಅನ್ಯರ ಪ್ರಭಾವಕ್ಕೆ ಒಳಗಾಗಿದ್ದೆ’ ಎಂದು ಕ್ಷಮೆ ಕೇಳಿದ ವಿದ್ಯಾರ್ಥಿನಿ ವಿಡಿಯೋ ವೈರಲ್

ಪ್ರಧಾನಮಂತ್ರಿ ನರೇಂದ್ರ ಮೋದಿ ಅವರ ವಿರುದ್ಧ ಆಕ್ಷೇಪಾರ್ಹ ಹೇಳಿಕೆ ನೀಡಿ ಭಾರಿ ಆಕ್ರೋಶಕ್ಕೆ ಗುರಿಯಾಗಿದ್ದ ಸಿಜೆಪಿ (CJP) ಪ್ರತಿಭಟನಾಕಾರ ಯುವತಿಯೊಬ್ಬಳು ಸೋಶಿಯಲ್ ಮೀಡಿಯಾದಲ್ಲಿ ಕ್ಷಮೆಯಾಚಿಸಿದ್ದಾಳೆ ಎನ್ನಲಾದ ವೀಡಿಯೊವೊಂದು ಹರಿದಾಡುತ್ತಿದೆ. ಸಾಮಾಜಿಕ ಮಾಧ್ಯಮಗಳಲ್ಲಿ ವೈರಲ್...

ಸ್ಪೇನ್‌ಗೆ ನುಗ್ಗಿದ ಸಾವಿರಾರು ಮೊರಾಕನ್ನರು : ಬೃಹತ್ ವಲಸೆಯ ಹಿಂದೆ ಇಸ್ರೇಲ್ ಕುತಂತ್ರ?

ಮೊರಾಕೊದಿಂದ ಸ್ಪೇನ್‌ನ ಸಿಯುಟಾ ನಗರಕ್ಕೆ ಸಾವಿರಾರು ವಲಸಿಗರು ನುಗ್ಗಿದ ಬಿಕ್ಕಟ್ಟಿನ ಹಿಂದೆ ಇಸ್ರೇಲ್ ಕೈವಾಡವಿದೆ ಎಂಬ ಆರೋಪಗಳು ಕೇಳಿ ಬಂದಿದ್ದು, ಸಾಮಾಜಿಕ ಜಾಲತಾಣಗಳಲ್ಲಿ ಇಸ್ರೇಲ್‌ನ ಕುತಂತ್ರ ಬುದ್ದಿಯ ಬಗ್ಗೆ ಭಾರೀ ಚರ್ಚೆಗಳು ನಡೆಯುತ್ತಿವೆ. ಇದೇ...

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...