Homeಮುಖಪುಟ'ಇಂಡಿಯಾ ಔಟ್' ಅಭಿಯಾನ: ಏನಿದು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ?

‘ಇಂಡಿಯಾ ಔಟ್’ ಅಭಿಯಾನ: ಏನಿದು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ?

- Advertisement -
- Advertisement -

ಭಾರತದ ಉತ್ಪನ್ನಗಳು ಬಾಂಗ್ಲಾದೇಶದಲ್ಲಿ ಬಹಿಷ್ಕಾರದ ಕರೆಗಳನ್ನು ಎದುರಿಸುತ್ತಿದ್ದು, ಭಾರತ ಮತ್ತು ಬಾಂಗ್ಲಾದೇಶದ ಸಂಬಂಧ ನಿಜಕ್ಕೂ ಹಳಸಿದ್ಯಾ ಎಂಬ ಪ್ರಶ್ನೆ ಮೂಡಿದೆ. ಢಾಕಾದ ಶೇಖ್ ಹಸೀನಾ ಸರ್ಕಾರದ ಜೊತೆ ಭಾರತ ಉತ್ತಮ ಸಂಬಂಧವನ್ನು ಹೊಂದಿದೆ, ಆದರೆ ಶೇಖ್ ಹಸೀನಾ ಮತ್ತು ಅವರ ಅವಾಮಿ ಲೀಗ್‌ಗೆ ವಿರುದ್ಧವಾಗಿರುವ ಪಕ್ಷಗಳು ಮತ್ತು ನಾಯಕರು ಮಾಲ್ಡೀವ್ಸ್‌ನಲ್ಲಿನ ರೀತಿಯಲ್ಲಿ ‘ಇಂಡಿಯಾ ಔಟ್’ ಅಭಿಯಾನಕ್ಕೆ ಕರೆಯನ್ನು ನೀಡಿದ್ದಾರೆ.

ಕೆಲವು ಸಾಮಾಜಿಕ ಮಾಧ್ಯಮ ಖಾತೆಗಳು ಬಾಂಗ್ಲಾದೇಶದ “ಭಾರತದ ಉತ್ಪನ್ನಗಳನ್ನು ಬಹಿಷ್ಕರಿಸಿ” ಎಂಬ ಭಾವನೆಯನ್ನು ಉತ್ತೇಜಿಸಲು ಪ್ರಯತ್ನಿಸುತ್ತಿದೆ, ಮೋದಿ ಸರ್ಕಾರವು ಸೋಮವಾರ ರಂಜಾನ್ ಮತ್ತು ಈದ್‌ಗೆ ಮುಂಚಿತವಾಗಿ ಬಾಂಗ್ಲಾದೇಶಕ್ಕೆ 50,000 ಟನ್ ಈರುಳ್ಳಿಯನ್ನು ರಫ್ತು ಮಾಡಲು ಅವಕಾಶ ಮಾಡಿಕೊಟ್ಟಿದೆ. ವಿಶೇಷವಾಗಿ ರಂಜಾನ್ ಅವಧಿಯಲ್ಲಿ ಹಬ್ಬದ ಮತ್ತು ಉಪವಾಸದ ಸಮಯದಲ್ಲಿ ಭಕ್ಷ್ಯಗಳಿಗೆ, ಈರುಳ್ಳಿ ಮುಖ್ಯವಾಗಿದೆ. ಈರುಳ್ಳಿ ರಫ್ತು ನಿಷೇಧಿಸಲಾಗಿದೆಯಾದರೂ, ಸರ್ಕಾರವು ಎರಡು ಆಪ್ತ ರಾಷ್ಟ್ರಗಳಾದ ಬಾಂಗ್ಲಾದೇಶ ಮತ್ತು ಯುಎಇಗೆ ವಿನಾಯಿತಿ ನೀಡಿದೆ. ಭಾರತವು ಡಿಸೆಂಬರ್ 2023ರಲ್ಲಿ ಈರುಳ್ಳಿ ರಫ್ತು ನಿಷೇಧಿಸಿತ್ತು.

ಅಲ್ ಜಝೀರಾ ವರದಿಯು ಢಾಕಾದ ಪಂಥಾಪತ್ ಪ್ರದೇಶದಲ್ಲಿ ಭಾರತೀಯ ಉತ್ಪನ್ನಗಳನ್ನು ಸಂಗ್ರಹಿಸುವ ಅಂಗಡಿಗಳು ಭಾರತದ ಹೊಸ ಉತ್ಪನ್ನಗಳನ್ನು ಬಹಿಷ್ಕರಿಸುತ್ತಿದೆ ಎಂಬುವುದನ್ನು ವರದಿ ಮಾಡಿದೆ. ಫೆಬ್ರವರಿಯಲ್ಲಿ ಢಾಕಾ ಮತ್ತು ಚಿತ್ತಗಾಂಗ್‌ನಲ್ಲಿನ ಹಲವಾರು ಅಂಗಡಿಗಳ ಮಾರಾಟಗಾರರು ಅಡುಗೆ ಎಣ್ಣೆ, ಸಂಸ್ಕರಿಸಿದ ಆಹಾರಗಳು, ಶೌಚಾಲಯಗಳು, ಸೌಂದರ್ಯವರ್ಧಕಗಳು ಮತ್ತು ಬಟ್ಟೆಗಳಂತಹ ಭಾರತೀಯ ಉತ್ಪನ್ನಗಳ ಮಾರಾಟದಲ್ಲಿ ಇಳಿಕೆಯಾಗಿದೆ ಎಂದು ವಾಯ್ಸ್ ಆಫ್ ಅಮೇರಿಕಾಗೆ ಮಾಹಿತಿ ನೀಡಿದ್ದಾರೆ.

ಬಾಂಗ್ಲಾದೇಶದ ಆನ್‌ಲೈನ್ ಅಭಿಯಾನವು ಹೆಚ್ಚಾಗಿ ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿದೆ ಮತ್ತು ಭಾರತ ವಿರೋಧಿ ಪೋಸ್ಟ್‌ಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ‘ಬಾಯ್ಕಾಟ್ ಇಂಡಿಯಾ’ ಅಭಿಯಾನದ ಪ್ರಮುಖ ಚಾಲಕರಲ್ಲಿ ಒಬ್ಬರು ಪ್ಯಾರಿಸ್ ಮೂಲದ ಪಿನಾಕಿ ಭಟ್ಟಾಚಾರ್ಯ ಎಂದು ಹೇಳಲಾಗಿದೆ.  ಬಾಂಗ್ಲಾದೇಶದಿಂದ ಗಡಿಪಾರು ಮಾಡಲಾಗಿದ್ದ ಬ್ಲಾಗರ್, ಆನ್‌ಲೈನ್ ಕಾರ್ಯಕರ್ತ ಮತ್ತು ಮಾನವ ಹಕ್ಕುಗಳ ರಕ್ಷಕ ಎಂದು ತನ್ನನ್ನು ತಾನು ವಿವರಿಸಿಕೊಳ್ಳುವ ವೈದ್ಯ ಪಿನಾಕಿ, ಜನವರಿ ಮಧ್ಯದಲ್ಲಿ ‘ಇಂಡಿಯಾ ಔಟ್’ ಅಭಿಯಾನವನ್ನು ಆರಂಭಿಸಿದ್ದರು.

4,000ಕ್ಕೂ ಹೆಚ್ಚು ಪೋಸ್ಟ್‌ಗಳು #BoycottIndianProducts ಜೊತೆಗೆ #IndiaOut ಮತ್ತು #BoycottIndiaದಂತಹ ಹ್ಯಾಶ್‌ಟ್ಯಾಗ್‌ಗಳನ್ನು ತೋರಿಸುತ್ತದೆ, ಹಸೀನಾ ಪ್ರಮಾಣವಚನ ಸ್ವೀಕರಿಸಿದ ಒಂದು ವಾರದ ನಂತರ ಬಾಂಗ್ಲಾದೇಶದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಇವುಗಳು ಹೆಚ್ಚಾಗಿ ಕಂಡು ಬಂದಿದೆ.

ಆನ್‌ಲೈನ್ ನ್ಯೂಸ್ ಪೋರ್ಟಲ್ ‘ಢಾಕಾ ಪೋಸ್ಟ್’ ಮಾರ್ಚ್‌ನಲ್ಲಿ 12 ಬಾಂಗ್ಲಾದೇಶದ ಪಕ್ಷಗಳು ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿವೆ ಎಂದು ವರದಿ ಮಾಡಿದೆ. ಬಹಿಷ್ಕಾರಕ್ಕೆ ಕರೆ ನೀಡಿದವರಲ್ಲಿ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ ಮತ್ತು ಪ್ರಮುಖ ಇಸ್ಲಾಮಿಸ್ಟ್ ಪಕ್ಷವಾದ ಬಾಂಗ್ಲಾದೇಶ ಜಮಾತ್-ಎ-ಇಸ್ಲಾಮಿ ಇರಲಿಲ್ಲ ಎನ್ನಲಾಗಿದೆ. 2022-2023ರಲ್ಲಿ ಉತ್ಪನ್ನಗಳ ಬಹಿಷ್ಕಾರದ ಪರಿಣಾಮವು ಆರ್ಥಿಕವಾಗಿ ಹೆಚ್ಚು ಪರಿಣಾಮ ಬೀರುವುದಿಲ್ಲ. ಆದರೆ ಈ ಬೆಳವಣಿಗೆಯು ಭಾರತಕ್ಕೆ ಎಚ್ಚರಿಕೆಯಾಗಿದೆ ಎಂಬುವುದು ಗಮನಾರ್ಹ.

‘ಭಾರತದ ಉತ್ಪನ್ನಗಳ ಬಹಿಷ್ಕಾರ’ ಅಭಿಯಾನದ ಬಗ್ಗೆ ಪ್ರತಿಕ್ರಿಯಿಸಿದ ಚಿತ್ತಗಾಂಗ್ ವಿಶ್ವವಿದ್ಯಾಲಯದ  ಮುಂತಸ್ಸಿರ್ ಮಾಮೂನ್, ಬಾಂಗ್ಲಾದೇಶದಲ್ಲಿ ಈ ಅಭಿಯಾನದ ಪ್ರಭಾವ ಬೀರಿರುವುದು ಕಂಡು ಬಂದಿಲ್ಲ ಎಂದು ಹೇಳಿಕೊಂಡಿದ್ದಾರೆ. ಒಂದು ರೀತಿಯ ಭಾರತೀಯ-ವಿರೋಧಿ ಅಲೆ ಬಾಂಗ್ಲಾದಲ್ಲಿ ಯಾವಾಗಲೂ ಪ್ರಚಲಿತದಲ್ಲಿದೆ, ಆದರೆ ಪ್ರಸ್ತುತ ಬಹಿಷ್ಕಾರದ ಅಭಿಯಾನವು ಸಾಮಾಜಿಕ ಮಾಧ್ಯಮ ಕೇಂದ್ರಿತವಾಗಿದೆ ಎಂದು ಮನೋಹರ್ ಪರಿಕ್ಕರ್ ರಕ್ಷಣಾ ಅಧ್ಯಯನ ಮತ್ತು ವಿಶ್ಲೇಷಣೆ ಸಂಸ್ಥೆಯ ಸ್ಮೃತಿ ಪಟ್ಟನಾಯಕ್ ಹೇಳಿದ್ದಾರೆ.

ಇದನ್ನು ಓದಿ: ಪ್ರೊ.ಜಿ.ಎನ್‌ ಸಾಯಿಬಾಬಾ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಂಜಾಬ್‌| ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ನಿಂತಿದ್ದಾಗಲೇ ಕುಸಿದು ಬಿದ್ದು ಸಾವನ್ನಪ್ಪಿದ ವೃದ್ಧ

ಪಂಜಾಬ್‌ನ ಬರ್ನಾಲಾ ಜಿಲ್ಲೆಯಲ್ಲಿ, ಎಲ್‌ಪಿಜಿ ಸಿಲಿಂಡರ್‌ಗಾಗಿ ಸರತಿ ಸಾಲಿನಲ್ಲಿ ಕಾಯುತ್ತಿದ್ದಾಗ 66 ವರ್ಷದ ವ್ಯಕ್ತಿಯೊಬ್ಬರು ಹೃದಯಾಘಾತದಿಂದ ಕುಸಿದು ಬಿದ್ದು ಸಾವನ್ನಪ್ಪಿರುವ ಘಟನೆ ಶುಕ್ರವಾರ ನಡೆದಿದೆ. ದೇಶದಲ್ಲಿ ಪ್ರಸ್ತುತ ನಡೆಯುತ್ತಿರುವ ಅನಿಲ ಕೊರತೆಯಿಂದ ಉಂಟಾಗುತ್ತಿರುವ...

ಮುಖ್ಯ ಚುನಾವಣಾ ಆಯುಕ್ತ ಜ್ಞಾನೇಶ್ ಕುಮಾರ್ ಪದಚ್ಯುತಿಗೆ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿದ ವಿಪಕ್ಷಗಳು

ನವದೆಹಲಿ: ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಜ್ಞಾನೇಶ್ ಕುಮಾರ್ ಅವರನ್ನು ಪದಚ್ಯುತಗೊಳಿಸುವಂತೆ ಕೋರಿ ವಿರೋಧ ಪಕ್ಷದ ಸಂಸದರು ಸಂಸತ್ತಿನ ಉಭಯ ಸದನಗಳಲ್ಲಿ ನೋಟಿಸ್ ಸಲ್ಲಿಸಿರುವುದಾಗಿ ಶುಕ್ರವಾರ ವರದಿಯಾಗಿದೆ.  ಈ ನೋಟಿಸ್‌ಗೆ 130 ಲೋಕಸಭಾ ಸದಸ್ಯರು...

ಹಿಂದೂಯೇತರರಿಗೆ ದೇಗುಲ ಪ್ರವೇಶಕ್ಕೆ ನಿಷೇಧ ಹೇರಿದ ಬದರೀನಾಥ್-ಕೇದಾರನಾಥ ದೇವಾಲಯಗಳ ಸಮಿತಿ

ಮುಂಬರುವ ತೀರ್ಥಯಾತ್ರೆಯ ಋತುವಿನಿಂದ ಜಾರಿಗೆ ಬರುವಂತೆ ಬದರೀನಾಥ್ ಮತ್ತು ಕೇದಾರನಾಥ ದೇವಾಲಯಗಳು ಸೇರಿದಂತೆ ಅದರ ವ್ಯಾಪ್ತಿಯಲ್ಲಿರುವ 47 ಇತರ ದೇವಾಲಯಗಳಿಗೆ ಹಿಂದೂಯೇತರರ ಪ್ರವೇಶವನ್ನು ನಿಷೇಧಿಸುವ ನಿರ್ಣಯವನ್ನು ಸರ್ವಾನುಮತದಿಂದ ದೇವಾಲಯ ಸಮಿತಿಯು ಅಂಗೀಕರಿಸಿದೆ. ಬಿಕೆಟಿಸಿ ಅಧ್ಯಕ್ಷ...

‘ಮಹಿಳೆಯರನ್ನು ಯಾರೂ ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ..’; ಕಡ್ಡಾಯ ಮುಟ್ಟಿನ ರಜೆ ಕುರಿತ ಅರ್ಜಿ ತಿರಸ್ಕರಿಸಿದ ಸುಪ್ರೀಂ ಕೋರ್ಟ್ 

ಮಹಿಳೆಯರಿಗೆ ಕಡ್ಡಾಯ ಮುಟ್ಟಿನ ರಜೆ 'ಅವರ ಉದ್ಯೋಗದ ಮೇಲೆ ಪ್ರತಿಕೂಲ ಪರಿಣಾಮ ಬೀರಬಹುದು'. ಏಕೆಂದರೆ, ನಾವು ಅಂತಹ ಕಾನೂನನ್ನು ಜಾರಿಗೆ ತಂದರೆ ಉದ್ಯೋಗದಾತರು ಮಹಿಳೆಯರನ್ನು ಕೆಲಸಕ್ಕೆ ನೇಮಿಸಿಕೊಳ್ಳುವುದಿಲ್ಲ' ಎಂದು ಸುಪ್ರೀಂ ಕೋರ್ಟ್‌ ಮುಖ್ಯ...

ಪ್ಯಾಲೆಸ್ತೀನಿಯನ್ ಬಂಧಿತನ ಮೇಲೆ ಲೈಂಗಿಕ ದೌರ್ಜನ್ಯ; ಇಸ್ರೇಲ್ ಸೈನಿಕರ ವಿರುದ್ಧದ ಆರೋಪ ಕೈಬಿಟ್ಟ ಸೇನೆ

ಕ್ಯಾಮೆರಾದಲ್ಲಿ ಭಾಗಶಃ ಸೆರೆಹಿಡಿಯಲಾದ ಹಲ್ಲೆಯಲ್ಲಿ, ಬಂಧಿತ ಪ್ಯಾಲೆಸ್ತೀನಿಯನ್ ಮೇಲೆ ಲೈಂಗಿಕ ದೌರ್ಜನ್ಯ ಎಸಗಿದ ಆರೋಪ ಹೊತ್ತಿರುವ ಐದು ಸೈನಿಕರ ವಿರುದ್ಧದ ಆರೋಪಗಳನ್ನು ಕೈಬಿಡುತ್ತಿರುವುದಾಗಿ ಇಸ್ರೇಲ್ ಸೇನೆ (ಮಾರ್ಚ್ 12) ತಿಳಿಸಿದೆ. ಈ ಘೋಷಣೆಯನ್ನು ಪ್ರಧಾನಿ...

‘ಇರಾನ್ ಸರ್ವೋಚ್ಚ ನಾಯಕ ಜೀವಂತವಾಗಿರಬಹುದು, ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ’: ಡೊನಾಲ್ಡ್ ಟ್ರಂಪ್

ಇರಾನ್‌ನ ಸರ್ವೋಚ್ಚ ನಾಯಕ ಅಯತೊಲ್ಲಾ ಮೊಜ್ತಬಾ ಖಮೇನಿ(56) "ಬಹುಶಃ ಜೀವಂತವಾಗಿದ್ದಾರೆ ಆದರೆ ಗಂಭೀರವಾಗಿ ಗಾಯಗೊಂಡಿದ್ದಾರೆ" ಎಂದು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹೇಳಿದ್ದಾರೆ. ಶುಕ್ರವಾರ ಪ್ರಸಾರವಾದ ಫಾಕ್ಸ್ ನ್ಯೂಸ್ ರೇಡಿಯೋದ ಬ್ರಿಯಾನ್ ಕಿಲ್ಮೀಡ್ ಅವರ...

ಬಾಗಲಕೋಟೆ| ಜನರ ಮೇಲೆ ಕಲ್ಲು ಎಸೆದ ಆರೋಪ; ಸಾವಳಗಿಯಲ್ಲಿ ದಲಿತ ಯುವಕನನ್ನು ಕೊಂದ ಗುಂಪು

ಬಾಗಲಕೋಟೆ ಜಿಲ್ಲೆಯ ಜಮಖಂಡಿ ತಾಲ್ಲೂಕಿನ ಸಾವಳಗಿ ಗ್ರಾಮದಲ್ಲಿ ದಲಿತ ದೌರ್ಜನ್ಯದ ಆಘಾತಕಾರಿ ಘಟನೆಯೊಂದು ನಡೆದಿದೆ. ಶಾಲಾ ಕಾರ್ಯಕ್ರಮವೊಂದರಲ್ಲಿ ಜನರ ಮಲೆ ಸಣ್ಣ ಕಲ್ಲು ಎಸೆದ ಎಂಬ ಆರೋಪದ ಮೇಲೆ ದಲಿತ ಯುವಕನನ್ನು ಕ್ರೂರವಾಗಿ...

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...