Homeಮುಖಪುಟ'ಇಂಡಿಯಾ ಔಟ್' ಅಭಿಯಾನ: ಏನಿದು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ?

‘ಇಂಡಿಯಾ ಔಟ್’ ಅಭಿಯಾನ: ಏನಿದು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ?

- Advertisement -
- Advertisement -

ಭಾರತದ ಉತ್ಪನ್ನಗಳು ಬಾಂಗ್ಲಾದೇಶದಲ್ಲಿ ಬಹಿಷ್ಕಾರದ ಕರೆಗಳನ್ನು ಎದುರಿಸುತ್ತಿದ್ದು, ಭಾರತ ಮತ್ತು ಬಾಂಗ್ಲಾದೇಶದ ಸಂಬಂಧ ನಿಜಕ್ಕೂ ಹಳಸಿದ್ಯಾ ಎಂಬ ಪ್ರಶ್ನೆ ಮೂಡಿದೆ. ಢಾಕಾದ ಶೇಖ್ ಹಸೀನಾ ಸರ್ಕಾರದ ಜೊತೆ ಭಾರತ ಉತ್ತಮ ಸಂಬಂಧವನ್ನು ಹೊಂದಿದೆ, ಆದರೆ ಶೇಖ್ ಹಸೀನಾ ಮತ್ತು ಅವರ ಅವಾಮಿ ಲೀಗ್‌ಗೆ ವಿರುದ್ಧವಾಗಿರುವ ಪಕ್ಷಗಳು ಮತ್ತು ನಾಯಕರು ಮಾಲ್ಡೀವ್ಸ್‌ನಲ್ಲಿನ ರೀತಿಯಲ್ಲಿ ‘ಇಂಡಿಯಾ ಔಟ್’ ಅಭಿಯಾನಕ್ಕೆ ಕರೆಯನ್ನು ನೀಡಿದ್ದಾರೆ.

ಕೆಲವು ಸಾಮಾಜಿಕ ಮಾಧ್ಯಮ ಖಾತೆಗಳು ಬಾಂಗ್ಲಾದೇಶದ “ಭಾರತದ ಉತ್ಪನ್ನಗಳನ್ನು ಬಹಿಷ್ಕರಿಸಿ” ಎಂಬ ಭಾವನೆಯನ್ನು ಉತ್ತೇಜಿಸಲು ಪ್ರಯತ್ನಿಸುತ್ತಿದೆ, ಮೋದಿ ಸರ್ಕಾರವು ಸೋಮವಾರ ರಂಜಾನ್ ಮತ್ತು ಈದ್‌ಗೆ ಮುಂಚಿತವಾಗಿ ಬಾಂಗ್ಲಾದೇಶಕ್ಕೆ 50,000 ಟನ್ ಈರುಳ್ಳಿಯನ್ನು ರಫ್ತು ಮಾಡಲು ಅವಕಾಶ ಮಾಡಿಕೊಟ್ಟಿದೆ. ವಿಶೇಷವಾಗಿ ರಂಜಾನ್ ಅವಧಿಯಲ್ಲಿ ಹಬ್ಬದ ಮತ್ತು ಉಪವಾಸದ ಸಮಯದಲ್ಲಿ ಭಕ್ಷ್ಯಗಳಿಗೆ, ಈರುಳ್ಳಿ ಮುಖ್ಯವಾಗಿದೆ. ಈರುಳ್ಳಿ ರಫ್ತು ನಿಷೇಧಿಸಲಾಗಿದೆಯಾದರೂ, ಸರ್ಕಾರವು ಎರಡು ಆಪ್ತ ರಾಷ್ಟ್ರಗಳಾದ ಬಾಂಗ್ಲಾದೇಶ ಮತ್ತು ಯುಎಇಗೆ ವಿನಾಯಿತಿ ನೀಡಿದೆ. ಭಾರತವು ಡಿಸೆಂಬರ್ 2023ರಲ್ಲಿ ಈರುಳ್ಳಿ ರಫ್ತು ನಿಷೇಧಿಸಿತ್ತು.

ಅಲ್ ಜಝೀರಾ ವರದಿಯು ಢಾಕಾದ ಪಂಥಾಪತ್ ಪ್ರದೇಶದಲ್ಲಿ ಭಾರತೀಯ ಉತ್ಪನ್ನಗಳನ್ನು ಸಂಗ್ರಹಿಸುವ ಅಂಗಡಿಗಳು ಭಾರತದ ಹೊಸ ಉತ್ಪನ್ನಗಳನ್ನು ಬಹಿಷ್ಕರಿಸುತ್ತಿದೆ ಎಂಬುವುದನ್ನು ವರದಿ ಮಾಡಿದೆ. ಫೆಬ್ರವರಿಯಲ್ಲಿ ಢಾಕಾ ಮತ್ತು ಚಿತ್ತಗಾಂಗ್‌ನಲ್ಲಿನ ಹಲವಾರು ಅಂಗಡಿಗಳ ಮಾರಾಟಗಾರರು ಅಡುಗೆ ಎಣ್ಣೆ, ಸಂಸ್ಕರಿಸಿದ ಆಹಾರಗಳು, ಶೌಚಾಲಯಗಳು, ಸೌಂದರ್ಯವರ್ಧಕಗಳು ಮತ್ತು ಬಟ್ಟೆಗಳಂತಹ ಭಾರತೀಯ ಉತ್ಪನ್ನಗಳ ಮಾರಾಟದಲ್ಲಿ ಇಳಿಕೆಯಾಗಿದೆ ಎಂದು ವಾಯ್ಸ್ ಆಫ್ ಅಮೇರಿಕಾಗೆ ಮಾಹಿತಿ ನೀಡಿದ್ದಾರೆ.

ಬಾಂಗ್ಲಾದೇಶದ ಆನ್‌ಲೈನ್ ಅಭಿಯಾನವು ಹೆಚ್ಚಾಗಿ ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿದೆ ಮತ್ತು ಭಾರತ ವಿರೋಧಿ ಪೋಸ್ಟ್‌ಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ‘ಬಾಯ್ಕಾಟ್ ಇಂಡಿಯಾ’ ಅಭಿಯಾನದ ಪ್ರಮುಖ ಚಾಲಕರಲ್ಲಿ ಒಬ್ಬರು ಪ್ಯಾರಿಸ್ ಮೂಲದ ಪಿನಾಕಿ ಭಟ್ಟಾಚಾರ್ಯ ಎಂದು ಹೇಳಲಾಗಿದೆ.  ಬಾಂಗ್ಲಾದೇಶದಿಂದ ಗಡಿಪಾರು ಮಾಡಲಾಗಿದ್ದ ಬ್ಲಾಗರ್, ಆನ್‌ಲೈನ್ ಕಾರ್ಯಕರ್ತ ಮತ್ತು ಮಾನವ ಹಕ್ಕುಗಳ ರಕ್ಷಕ ಎಂದು ತನ್ನನ್ನು ತಾನು ವಿವರಿಸಿಕೊಳ್ಳುವ ವೈದ್ಯ ಪಿನಾಕಿ, ಜನವರಿ ಮಧ್ಯದಲ್ಲಿ ‘ಇಂಡಿಯಾ ಔಟ್’ ಅಭಿಯಾನವನ್ನು ಆರಂಭಿಸಿದ್ದರು.

4,000ಕ್ಕೂ ಹೆಚ್ಚು ಪೋಸ್ಟ್‌ಗಳು #BoycottIndianProducts ಜೊತೆಗೆ #IndiaOut ಮತ್ತು #BoycottIndiaದಂತಹ ಹ್ಯಾಶ್‌ಟ್ಯಾಗ್‌ಗಳನ್ನು ತೋರಿಸುತ್ತದೆ, ಹಸೀನಾ ಪ್ರಮಾಣವಚನ ಸ್ವೀಕರಿಸಿದ ಒಂದು ವಾರದ ನಂತರ ಬಾಂಗ್ಲಾದೇಶದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಇವುಗಳು ಹೆಚ್ಚಾಗಿ ಕಂಡು ಬಂದಿದೆ.

ಆನ್‌ಲೈನ್ ನ್ಯೂಸ್ ಪೋರ್ಟಲ್ ‘ಢಾಕಾ ಪೋಸ್ಟ್’ ಮಾರ್ಚ್‌ನಲ್ಲಿ 12 ಬಾಂಗ್ಲಾದೇಶದ ಪಕ್ಷಗಳು ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿವೆ ಎಂದು ವರದಿ ಮಾಡಿದೆ. ಬಹಿಷ್ಕಾರಕ್ಕೆ ಕರೆ ನೀಡಿದವರಲ್ಲಿ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ ಮತ್ತು ಪ್ರಮುಖ ಇಸ್ಲಾಮಿಸ್ಟ್ ಪಕ್ಷವಾದ ಬಾಂಗ್ಲಾದೇಶ ಜಮಾತ್-ಎ-ಇಸ್ಲಾಮಿ ಇರಲಿಲ್ಲ ಎನ್ನಲಾಗಿದೆ. 2022-2023ರಲ್ಲಿ ಉತ್ಪನ್ನಗಳ ಬಹಿಷ್ಕಾರದ ಪರಿಣಾಮವು ಆರ್ಥಿಕವಾಗಿ ಹೆಚ್ಚು ಪರಿಣಾಮ ಬೀರುವುದಿಲ್ಲ. ಆದರೆ ಈ ಬೆಳವಣಿಗೆಯು ಭಾರತಕ್ಕೆ ಎಚ್ಚರಿಕೆಯಾಗಿದೆ ಎಂಬುವುದು ಗಮನಾರ್ಹ.

‘ಭಾರತದ ಉತ್ಪನ್ನಗಳ ಬಹಿಷ್ಕಾರ’ ಅಭಿಯಾನದ ಬಗ್ಗೆ ಪ್ರತಿಕ್ರಿಯಿಸಿದ ಚಿತ್ತಗಾಂಗ್ ವಿಶ್ವವಿದ್ಯಾಲಯದ  ಮುಂತಸ್ಸಿರ್ ಮಾಮೂನ್, ಬಾಂಗ್ಲಾದೇಶದಲ್ಲಿ ಈ ಅಭಿಯಾನದ ಪ್ರಭಾವ ಬೀರಿರುವುದು ಕಂಡು ಬಂದಿಲ್ಲ ಎಂದು ಹೇಳಿಕೊಂಡಿದ್ದಾರೆ. ಒಂದು ರೀತಿಯ ಭಾರತೀಯ-ವಿರೋಧಿ ಅಲೆ ಬಾಂಗ್ಲಾದಲ್ಲಿ ಯಾವಾಗಲೂ ಪ್ರಚಲಿತದಲ್ಲಿದೆ, ಆದರೆ ಪ್ರಸ್ತುತ ಬಹಿಷ್ಕಾರದ ಅಭಿಯಾನವು ಸಾಮಾಜಿಕ ಮಾಧ್ಯಮ ಕೇಂದ್ರಿತವಾಗಿದೆ ಎಂದು ಮನೋಹರ್ ಪರಿಕ್ಕರ್ ರಕ್ಷಣಾ ಅಧ್ಯಯನ ಮತ್ತು ವಿಶ್ಲೇಷಣೆ ಸಂಸ್ಥೆಯ ಸ್ಮೃತಿ ಪಟ್ಟನಾಯಕ್ ಹೇಳಿದ್ದಾರೆ.

ಇದನ್ನು ಓದಿ: ಪ್ರೊ.ಜಿ.ಎನ್‌ ಸಾಯಿಬಾಬಾ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಎಸ್‌ಎಲ್‌ಸಿಯಲ್ಲಿ ತೃತೀಯ ಭಾಷೆಗೆ ಗ್ರೇಡ್: ನಿರ್ಧಾರ ಪರಿಶೀಲಿಸುವಂತೆ ರಾಜ್ಯ ಸರ್ಕಾರಕ್ಕೆ ಸೂಚಿಸಿದ ರಾಜ್ಯಪಾಲ ಗೆಹ್ಲೋಟ್ 

ಬೆಂಗಳೂರು: 10ನೇ ತರಗತಿ ಪರೀಕ್ಷೆಯಲ್ಲಿ ತೃತೀಯ ಭಾಷೆಯ ವಿಷಯಕ್ಕೆ ಅಂಕಗಳನ್ನು ಬದಲಿಸುವ ನಿರ್ಧಾರವನ್ನು ಮರುಪರಿಶೀಲಿಸುವಂತೆ ಕರ್ನಾಟಕ ರಾಜ್ಯಪಾಲ ಥಾವರ್‌ಚಂದ್ ಗೆಹ್ಲೋಟ್ ರಾಜ್ಯ ಸರ್ಕಾರವನ್ನು ಕೇಳಿದ್ದಾರೆ. ಸರ್ಕಾರವು ಈ ನಿರ್ಧಾರವನ್ನು "ಸಮಗ್ರವಾಗಿ ಪರಿಶೀಲಿಸಬೇಕು" ಎಂದು ಲೋಕಭವನವು...

ತಿರುಚ್ಚಿ ಪೂರ್ವದ ಪೆರಂಬೂರಿನಲ್ಲಿ ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಅಫಿಡವಿಟ್‌ಗಳಲ್ಲಿ ಹಲವು ವ್ಯತ್ಯಾಸಗಳಿರುವುದಾಗಿ ವರದಿ  

ಚೆನ್ನೈ: ನಟ ಮತ್ತು ಟಿವಿಕೆ ಸಂಸ್ಥಾಪಕ ವಿಜಯ್ ಸಲ್ಲಿಸಿದ ಎರಡು ಪ್ರತ್ಯೇಕ ಚುನಾವಣಾ ಅಫಿಡವಿಟ್‌ಗಳಲ್ಲಿ ವ್ಯತ್ಯಾಸಗಳು ಕಾಣಿಸಿಕೊಂಡಿದ್ದು, ವಿಧಾನಸಭಾ ಚುನಾವಣೆಗೆ ಮುನ್ನ ಕಾನೂನು ಮತ್ತು ರಾಜಕೀಯ ಪರಿಶೀಲನೆಗೆ ಅವಕಾಶ ನೀಡುವ ಸಾಧ್ಯತೆಯಿದೆ. ಪೆರಂಬೂರು ಮತ್ತು...

ಉತ್ತಮ್ ನಗರದಲ್ಲಿ ಶಾಂತಿ ಕಾಪಾಡುವಲ್ಲಿ ದೆಹಲಿ ಪೊಲೀಸರ ಪ್ರಯತ್ನಗಳನ್ನು ಶ್ಲಾಘಿಸಿದ ಎಪಿಸಿಆರ್

ಈದ್ ಅಲ್-ಫಿತರ್, ರಾಮ ನವಮಿ ಮತ್ತು ಹನುಮಾನ್ ಜಯಂತಿ ಸೇರಿದಂತೆ ಧಾರ್ಮಿಕ ಹಬ್ಬಗಳ ಆಚರಣೆಯ ಸಂದರ್ಭದಲ್ಲಿ ರಾಷ್ಟ್ರ ರಾಜಧಾನಿಯ ಉತ್ತಮ್ ನಗರ ಪ್ರದೇಶದಲ್ಲಿ ಶಾಂತಿ ಮತ್ತು ಭದ್ರತೆಯನ್ನು ಕಾಪಾಡಿದ್ದಕ್ಕಾಗಿ ನಾಗರಿಕ ಹಕ್ಕುಗಳ ರಕ್ಷಣಾ...

ದಲಿತ ಸಮುದಾಯಕ್ಕೆ ಕ್ಷಮೆಯಾಚಿಸಿದ ನೇಪಾಳದ ಹೊಸ ಸರ್ಕಾರ

ಪ್ರಧಾನಿ ಬಾಲೇಂದ್ರ ಶಾ ಅವರ ನೇಪಾಳದ ಹೊಸ ಸರ್ಕಾರದ 100 ಅಂಶಗಳ ಸುಧಾರಣಾ ಕಾರ್ಯಸೂಚಿಯಡಿಯಲ್ಲಿ, ಮುಂದಿನ 15 ದಿನಗಳ ಒಳಗೆ ದಲಿತರು ಮತ್ತು ಐತಿಹಾಸಿಕವಾಗಿ ಹೊರಗಿಡಲ್ಪಟ್ಟ ಇತರೆ ಸಮುದಾಯಗಳಿಗೆ 'ಔಪಚಾರಿಕ ಕ್ಷಮೆಯಾಚನೆ' ಕೇಳುವುದಾಗಿ...

‘ಯಾರು ಹೆದರುತ್ತಾನೋ ಅವನು ಸತ್ತಂತೆ’: ರಾಘವ್ ಛಡ್ಡಾಗೆ ತೀವ್ರವಾಗಿ ಪ್ರತಿಕ್ರಿಯೆ ನೀಡಿದ ಎಎಪಿ ನಾಯಕ ಸೌರಭ್ ಭಾರದ್ವಾಜ್ 

ಆಮ್ ಆದ್ಮಿ ಪಕ್ಷದ (ಎಎಪಿ) ನಾಯಕ ಮತ್ತು ದೆಹಲಿ ಘಟಕದ ಮುಖ್ಯಸ್ಥ ಸೌರಭ್ ಭಾರದ್ವಾಜ್ ಅವರು ವೀಡಿಯೊ ಸಂದೇಶದಲ್ಲಿ ಆಪ್ ಸಂಸದ ರಾಘವ್ ಛಡ್ಡಾ ಅವರು ಸಂಸತ್ತಿನಲ್ಲಿ "ಸಾಫ್ಟ್ ಪಿಆರ್" ನಲ್ಲಿ ತೊಡಗಿದ್ದಾರೆ...

ಚಂಡೀಗಢ ಬಿಜೆಪಿ ಕಚೇರಿ ಸ್ಫೋಟ: ಪಂಜಾಬ್ ಕೌಂಟರ್ ಇಂಟೆಲಿಜೆನ್ಸ್ ಪಡೆಯಿಂದ ಇಬ್ಬರು ಶಂಕಿತರ ಮನೆಗಳ ಮೇಲೆ ದಾಳಿ

ಚಂಡೀಗಢದಲ್ಲಿರುವ ಪಂಜಾಬ್ ಬಿಜೆಪಿ ಕಚೇರಿಯ ಹೊರಗೆ ಸ್ಫೋಟ ನಡೆಸಿದ ಆರೋಪದ ಮೇಲೆ ಇಬ್ಬರು ಶಂಕಿತರ ಮನೆಗಳ ಮೇಲೆ  ಪಂಜಾಬ್ ಪೊಲೀಸರ ಗುಪ್ತಚರ ನಿಗ್ರಹ ದಳವು ಇಂದು ಮುಂಜಾನೆ ದಾಳಿ ನಡೆಸಿದೆ.  ರೋಪರ್ ಜಿಲ್ಲೆಯ ಮೊರಿಂಡಾ ಪ್ರದೇಶದ...

‘ನನ್ನ ಮೌನವನ್ನು ಸೋಲು ಎಂದು ತಿಳಿಯಬೇಡಿ’’: ರಾಜ್ಯಸಭೆಯಲ್ಲಿ ಪದಚ್ಯುತಿಯ ನಂತರ ಎಎಪಿಗೆ ತಿರಗೇಟು ನೀಡಿದ ಸಂಸದ ರಾಘವ್ ಛಡ್ಡಾ

ರಾಜ್ಯಸಭೆಯಲ್ಲಿ ಪಕ್ಷದ ಉಪ ನಾಯಕನ ಸ್ಥಾನದಿಂದ ತೆಗೆದುಹಾಕಲ್ಪಟ್ಟ ಒಂದು ದಿನದ ನಂತರ ಆಮ್ ಆದ್ಮಿ ಪಕ್ಷದ ಸಂಸದ ರಾಘವ್ ಛಡ್ಡಾ ಅವರು ಶುಕ್ರವಾರ "ನನ್ನ ಬಾಯಿ ಮುಚ್ಚಿಸಬಹುದು, ಸೋಲಿಸಲು ಸಾಧ್ಯವಿಲ್ಲ" ಎಂದು ಹೇಳಿದ್ದಾರೆ. ಪಕ್ಷದ...

ಮಾಲ್ಡಾ ನ್ಯಾಯಾಂಗ ಅಧಿಕಾರಿಗಳ ಘೇರಾವ್ ಪ್ರಕರಣದಲ್ಲಿ 17 ಜನರ ಬಂಧನ: ತನಿಖೆಯನ್ನು ಎನ್‌ಐಎಗೆ ಹಸ್ತಾಂತರಿಸಿದ ಇಸಿ

ಕೋಲ್ಕತ್ತಾ: ಪಶ್ಚಿಮ ಬಂಗಾಳದ ಮಾಲ್ಡಾ ಜಿಲ್ಲೆಯಲ್ಲಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಅಳಿಸಿಹಾಕಿದ್ದಕ್ಕಾಗಿ ಏಳು ನ್ಯಾಯಾಂಗ ಅಧಿಕಾರಿಗಳ ಘೇರಾವ್‌ನಲ್ಲಿ ಭಾಗಿಯಾಗಿದ್ದಕ್ಕಾಗಿ ಚುನಾವಣಾ ಅಭ್ಯರ್ಥಿ ಸೇರಿದಂತೆ ಕನಿಷ್ಠ 17 ಜನರನ್ನು ಪೊಲೀಸರು ಗುರುವಾರ ಬಂಧಿಸಿದ್ದಾರೆ ಎಂದು...

ದೆಹಲಿ ಗಲಭೆ ಪ್ರಕರಣದಿಂದ ಒಂಬತ್ತು ಜನರನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದ ಪ್ರಕರಣದಲ್ಲಿ ಒಂಬತ್ತು ಜನರನ್ನು ನ್ಯಾಯಾಲಯವು ಖುಲಾಸೆಗೊಳಿಸಿದೆ. ಸಾಕ್ಷ್ಯಗಳು ನಿರ್ದಿಷ್ಟತೆಯ ಕೊರತೆ ಮತ್ತು ಸಾಮಾನ್ಯ ಸ್ವರೂಪದ್ದಾಗಿರುವುದರಿಂದ ಪ್ರಕರಣದಲ್ಲಿ ಅವುಗಳನ್ನು ನಂಬಲಾಗುವುದಿಲ್ಲ ಎಂ ನ್ಯಾಯಾಲಯ ಹೇಳಿದೆ. ಹೆಚ್ಚುವರಿ ಸೆಷನ್ಸ್ ನ್ಯಾಯಾಧೀಶ...

ಚುನಾವಣಾ ಕಾರ್ಯಕ್ಕೆ ಅರಣ್ಯ ಸಿಬ್ಬಂದಿ : ಅಸ್ಸಾಂ ಸರ್ಕಾರದ ಆದೇಶಕ್ಕೆ ಎನ್‌ಜಿಟಿ ತಡೆ

ವಿಧಾನಸಭೆ ಚುನಾವಣೆಗೆ ಅಸ್ಸಾಂ ಅರಣ್ಯ ಸಂರಕ್ಷಣಾ ಪಡೆಯ 1,600 ಸಿಬ್ಬಂದಿಯನ್ನು ನಿಯೋಜಿಸಲು ಕೋರಿದ್ದ ಅಸ್ಸಾಂ ಸರ್ಕಾರದ ಆದೇಶವನ್ನು ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ (ಎನ್‌ಜಿಟಿ) ಪೂರ್ವ ವಲಯ ಪೀಠ ಗುರುವಾರ (ಮಾ.2) ತಡೆಹಿಡಿದಿದೆ. ಈ ಆದೇಶವನ್ನು...