Homeಮುಖಪುಟ'ಇಂಡಿಯಾ ಔಟ್' ಅಭಿಯಾನ: ಏನಿದು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ?

‘ಇಂಡಿಯಾ ಔಟ್’ ಅಭಿಯಾನ: ಏನಿದು ಬಾಂಗ್ಲಾದೇಶದಲ್ಲಿ ನಡೆಯುತ್ತಿರುವ ಬೆಳವಣಿಗೆ?

- Advertisement -
- Advertisement -

ಭಾರತದ ಉತ್ಪನ್ನಗಳು ಬಾಂಗ್ಲಾದೇಶದಲ್ಲಿ ಬಹಿಷ್ಕಾರದ ಕರೆಗಳನ್ನು ಎದುರಿಸುತ್ತಿದ್ದು, ಭಾರತ ಮತ್ತು ಬಾಂಗ್ಲಾದೇಶದ ಸಂಬಂಧ ನಿಜಕ್ಕೂ ಹಳಸಿದ್ಯಾ ಎಂಬ ಪ್ರಶ್ನೆ ಮೂಡಿದೆ. ಢಾಕಾದ ಶೇಖ್ ಹಸೀನಾ ಸರ್ಕಾರದ ಜೊತೆ ಭಾರತ ಉತ್ತಮ ಸಂಬಂಧವನ್ನು ಹೊಂದಿದೆ, ಆದರೆ ಶೇಖ್ ಹಸೀನಾ ಮತ್ತು ಅವರ ಅವಾಮಿ ಲೀಗ್‌ಗೆ ವಿರುದ್ಧವಾಗಿರುವ ಪಕ್ಷಗಳು ಮತ್ತು ನಾಯಕರು ಮಾಲ್ಡೀವ್ಸ್‌ನಲ್ಲಿನ ರೀತಿಯಲ್ಲಿ ‘ಇಂಡಿಯಾ ಔಟ್’ ಅಭಿಯಾನಕ್ಕೆ ಕರೆಯನ್ನು ನೀಡಿದ್ದಾರೆ.

ಕೆಲವು ಸಾಮಾಜಿಕ ಮಾಧ್ಯಮ ಖಾತೆಗಳು ಬಾಂಗ್ಲಾದೇಶದ “ಭಾರತದ ಉತ್ಪನ್ನಗಳನ್ನು ಬಹಿಷ್ಕರಿಸಿ” ಎಂಬ ಭಾವನೆಯನ್ನು ಉತ್ತೇಜಿಸಲು ಪ್ರಯತ್ನಿಸುತ್ತಿದೆ, ಮೋದಿ ಸರ್ಕಾರವು ಸೋಮವಾರ ರಂಜಾನ್ ಮತ್ತು ಈದ್‌ಗೆ ಮುಂಚಿತವಾಗಿ ಬಾಂಗ್ಲಾದೇಶಕ್ಕೆ 50,000 ಟನ್ ಈರುಳ್ಳಿಯನ್ನು ರಫ್ತು ಮಾಡಲು ಅವಕಾಶ ಮಾಡಿಕೊಟ್ಟಿದೆ. ವಿಶೇಷವಾಗಿ ರಂಜಾನ್ ಅವಧಿಯಲ್ಲಿ ಹಬ್ಬದ ಮತ್ತು ಉಪವಾಸದ ಸಮಯದಲ್ಲಿ ಭಕ್ಷ್ಯಗಳಿಗೆ, ಈರುಳ್ಳಿ ಮುಖ್ಯವಾಗಿದೆ. ಈರುಳ್ಳಿ ರಫ್ತು ನಿಷೇಧಿಸಲಾಗಿದೆಯಾದರೂ, ಸರ್ಕಾರವು ಎರಡು ಆಪ್ತ ರಾಷ್ಟ್ರಗಳಾದ ಬಾಂಗ್ಲಾದೇಶ ಮತ್ತು ಯುಎಇಗೆ ವಿನಾಯಿತಿ ನೀಡಿದೆ. ಭಾರತವು ಡಿಸೆಂಬರ್ 2023ರಲ್ಲಿ ಈರುಳ್ಳಿ ರಫ್ತು ನಿಷೇಧಿಸಿತ್ತು.

ಅಲ್ ಜಝೀರಾ ವರದಿಯು ಢಾಕಾದ ಪಂಥಾಪತ್ ಪ್ರದೇಶದಲ್ಲಿ ಭಾರತೀಯ ಉತ್ಪನ್ನಗಳನ್ನು ಸಂಗ್ರಹಿಸುವ ಅಂಗಡಿಗಳು ಭಾರತದ ಹೊಸ ಉತ್ಪನ್ನಗಳನ್ನು ಬಹಿಷ್ಕರಿಸುತ್ತಿದೆ ಎಂಬುವುದನ್ನು ವರದಿ ಮಾಡಿದೆ. ಫೆಬ್ರವರಿಯಲ್ಲಿ ಢಾಕಾ ಮತ್ತು ಚಿತ್ತಗಾಂಗ್‌ನಲ್ಲಿನ ಹಲವಾರು ಅಂಗಡಿಗಳ ಮಾರಾಟಗಾರರು ಅಡುಗೆ ಎಣ್ಣೆ, ಸಂಸ್ಕರಿಸಿದ ಆಹಾರಗಳು, ಶೌಚಾಲಯಗಳು, ಸೌಂದರ್ಯವರ್ಧಕಗಳು ಮತ್ತು ಬಟ್ಟೆಗಳಂತಹ ಭಾರತೀಯ ಉತ್ಪನ್ನಗಳ ಮಾರಾಟದಲ್ಲಿ ಇಳಿಕೆಯಾಗಿದೆ ಎಂದು ವಾಯ್ಸ್ ಆಫ್ ಅಮೇರಿಕಾಗೆ ಮಾಹಿತಿ ನೀಡಿದ್ದಾರೆ.

ಬಾಂಗ್ಲಾದೇಶದ ಆನ್‌ಲೈನ್ ಅಭಿಯಾನವು ಹೆಚ್ಚಾಗಿ ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿದೆ ಮತ್ತು ಭಾರತ ವಿರೋಧಿ ಪೋಸ್ಟ್‌ಗಳನ್ನು ವ್ಯಾಪಕವಾಗಿ ಹಂಚಿಕೊಳ್ಳಲಾಗಿದೆ. ‘ಬಾಯ್ಕಾಟ್ ಇಂಡಿಯಾ’ ಅಭಿಯಾನದ ಪ್ರಮುಖ ಚಾಲಕರಲ್ಲಿ ಒಬ್ಬರು ಪ್ಯಾರಿಸ್ ಮೂಲದ ಪಿನಾಕಿ ಭಟ್ಟಾಚಾರ್ಯ ಎಂದು ಹೇಳಲಾಗಿದೆ.  ಬಾಂಗ್ಲಾದೇಶದಿಂದ ಗಡಿಪಾರು ಮಾಡಲಾಗಿದ್ದ ಬ್ಲಾಗರ್, ಆನ್‌ಲೈನ್ ಕಾರ್ಯಕರ್ತ ಮತ್ತು ಮಾನವ ಹಕ್ಕುಗಳ ರಕ್ಷಕ ಎಂದು ತನ್ನನ್ನು ತಾನು ವಿವರಿಸಿಕೊಳ್ಳುವ ವೈದ್ಯ ಪಿನಾಕಿ, ಜನವರಿ ಮಧ್ಯದಲ್ಲಿ ‘ಇಂಡಿಯಾ ಔಟ್’ ಅಭಿಯಾನವನ್ನು ಆರಂಭಿಸಿದ್ದರು.

4,000ಕ್ಕೂ ಹೆಚ್ಚು ಪೋಸ್ಟ್‌ಗಳು #BoycottIndianProducts ಜೊತೆಗೆ #IndiaOut ಮತ್ತು #BoycottIndiaದಂತಹ ಹ್ಯಾಶ್‌ಟ್ಯಾಗ್‌ಗಳನ್ನು ತೋರಿಸುತ್ತದೆ, ಹಸೀನಾ ಪ್ರಮಾಣವಚನ ಸ್ವೀಕರಿಸಿದ ಒಂದು ವಾರದ ನಂತರ ಬಾಂಗ್ಲಾದೇಶದ ಸಾಮಾಜಿಕ ಮಾಧ್ಯಮ ವೇದಿಕೆಗಳಲ್ಲಿ ಇವುಗಳು ಹೆಚ್ಚಾಗಿ ಕಂಡು ಬಂದಿದೆ.

ಆನ್‌ಲೈನ್ ನ್ಯೂಸ್ ಪೋರ್ಟಲ್ ‘ಢಾಕಾ ಪೋಸ್ಟ್’ ಮಾರ್ಚ್‌ನಲ್ಲಿ 12 ಬಾಂಗ್ಲಾದೇಶದ ಪಕ್ಷಗಳು ಭಾರತೀಯ ಉತ್ಪನ್ನಗಳ ಬಹಿಷ್ಕಾರಕ್ಕೆ ಕರೆ ನೀಡಿವೆ ಎಂದು ವರದಿ ಮಾಡಿದೆ. ಬಹಿಷ್ಕಾರಕ್ಕೆ ಕರೆ ನೀಡಿದವರಲ್ಲಿ ಪ್ರಮುಖ ವಿರೋಧ ಪಕ್ಷವಾದ ಬಾಂಗ್ಲಾದೇಶ ನ್ಯಾಶನಲಿಸ್ಟ್ ಪಾರ್ಟಿ ಮತ್ತು ಪ್ರಮುಖ ಇಸ್ಲಾಮಿಸ್ಟ್ ಪಕ್ಷವಾದ ಬಾಂಗ್ಲಾದೇಶ ಜಮಾತ್-ಎ-ಇಸ್ಲಾಮಿ ಇರಲಿಲ್ಲ ಎನ್ನಲಾಗಿದೆ. 2022-2023ರಲ್ಲಿ ಉತ್ಪನ್ನಗಳ ಬಹಿಷ್ಕಾರದ ಪರಿಣಾಮವು ಆರ್ಥಿಕವಾಗಿ ಹೆಚ್ಚು ಪರಿಣಾಮ ಬೀರುವುದಿಲ್ಲ. ಆದರೆ ಈ ಬೆಳವಣಿಗೆಯು ಭಾರತಕ್ಕೆ ಎಚ್ಚರಿಕೆಯಾಗಿದೆ ಎಂಬುವುದು ಗಮನಾರ್ಹ.

‘ಭಾರತದ ಉತ್ಪನ್ನಗಳ ಬಹಿಷ್ಕಾರ’ ಅಭಿಯಾನದ ಬಗ್ಗೆ ಪ್ರತಿಕ್ರಿಯಿಸಿದ ಚಿತ್ತಗಾಂಗ್ ವಿಶ್ವವಿದ್ಯಾಲಯದ  ಮುಂತಸ್ಸಿರ್ ಮಾಮೂನ್, ಬಾಂಗ್ಲಾದೇಶದಲ್ಲಿ ಈ ಅಭಿಯಾನದ ಪ್ರಭಾವ ಬೀರಿರುವುದು ಕಂಡು ಬಂದಿಲ್ಲ ಎಂದು ಹೇಳಿಕೊಂಡಿದ್ದಾರೆ. ಒಂದು ರೀತಿಯ ಭಾರತೀಯ-ವಿರೋಧಿ ಅಲೆ ಬಾಂಗ್ಲಾದಲ್ಲಿ ಯಾವಾಗಲೂ ಪ್ರಚಲಿತದಲ್ಲಿದೆ, ಆದರೆ ಪ್ರಸ್ತುತ ಬಹಿಷ್ಕಾರದ ಅಭಿಯಾನವು ಸಾಮಾಜಿಕ ಮಾಧ್ಯಮ ಕೇಂದ್ರಿತವಾಗಿದೆ ಎಂದು ಮನೋಹರ್ ಪರಿಕ್ಕರ್ ರಕ್ಷಣಾ ಅಧ್ಯಯನ ಮತ್ತು ವಿಶ್ಲೇಷಣೆ ಸಂಸ್ಥೆಯ ಸ್ಮೃತಿ ಪಟ್ಟನಾಯಕ್ ಹೇಳಿದ್ದಾರೆ.

ಇದನ್ನು ಓದಿ: ಪ್ರೊ.ಜಿ.ಎನ್‌ ಸಾಯಿಬಾಬಾ ಖುಲಾಸೆ ಪ್ರಶ್ನಿಸಿ ಸುಪ್ರೀಂ ಕೋರ್ಟ್‌ ಮೊರೆ ಹೋದ ಸರಕಾರ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಿರುದ್ಯೋಗಿ ಯುವಕರನ್ನು ಜಿರಳೆಗಳು ಎಂದ ಸಿಜೆಐ: ಇದೆಂತಾ ಮಾತು ನ್ಯಾಯಮೂರ್ತಿಗಳೇ!

‘ಕೆಲವು ನಿರುದ್ಯೋಗಿ ಯುವಕರು ಜಿರಳೆಗಳಂತೆ ಸಮಾಜವನ್ನು ಕಾಡುತ್ತಾರೆ. ಉದ್ಯೋಗ, ಸ್ಥಾನಮಾನ ಸಿಗದೆ ಇದ್ದಾಗ ಅವರು ಎಲ್ಲರ ಮೇಲೆ ದಾಳಿ ಆರಂಭಿಸುತ್ತಾರೆ’ ಇದು ಯಾವುದೋ ರಾಜಕೀಯ ರ‍್ಯಾಲಿಯ ಭಾಷಣವಲ್ಲ ಅಥವಾ ಟಿವಿ ಚಾನೆಲ್‌ಗಳ ಜಗಳವಲ್ಲ,...

ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ..ಹಕ್ಕುಗಳನ್ನು ಕೇಳಬಾರದಾ?: ಕಾಂಗ್ರೆಸ್‌ಗೆ ಮುಸ್ಲಿಂ ಸಮಾವೇಶ ಪ್ರಶ್ನೆ

"ಮುಸ್ಲಿಮರು ಕೇವಲ ವೋಟು ಹಾಕಿಕೊಂಡೇ ಇರಬೇಕಾ? ಯಾವ ಹಕ್ಕನ್ನೂ ಕೇಳಬಾರದು ಎಂದು ನೀವು (ಕಾಂಗ್ರೆಸ್‌ನವರು) ಬಯಸುತ್ತಿದ್ದೀರಾ?" ಎಂದು ಕರ್ನಾಟಕ ಮುಸ್ಲಿಂ ಸಮಾವೇಶ ಖಾರವಾಗಿ ಪ್ರಶ್ನಿಸಿತು. ಬೆಂಗಳೂರಿನ ಪುರಭವನದಲ್ಲಿ ಇಂದು (ಮೇ 16, ಶನಿವಾರ) ನಡೆದ...

“ಸನಾತನ ಬೇರುಗಳಲ್ಲಿರುವ ಅಸಮಾನತೆಗೆ ದ್ರಾವಿಡ ನೆಲದ ಪ್ರತಿರೋಧ”: ಉದಯನಿಧಿ ಹೇಳಿಕೆ ವಿವಾದವಾಗಿದ್ದೇಗೆ..?

ಸನಾತನ ಸಂಸ್ಥೆಗಳನ್ನು ಮತ್ತು ಸನಾತನ ಧರ್ಮವನ್ನು ನಿರ್ಮೂಲನೆ ಮಾಡುವ ಬಗ್ಗೆ ಉದಯನಿಧಿ ಸ್ಟಾಲಿನ್ ಅವರ ಹೇಳಿಕೆಗಳು ಸದ್ಯ ದೇಶಾದ್ಯಂತ ಸಂಚಲನ ಮೂಡಿಸಿವೆ.  ತಮಿಳುನಾಡು ವಿಧಾನಸಭೆಯಲ್ಲಿ ನೂತನ ಮುಖ್ಯಮಂತ್ರಿಯಾಗಿ ಸಿ. ಜೋಸೆಫ್ ವಿಜಯ್ ಅವರು ಅಧಿಕಾರ...

ನೇತ್ರಾವತಿ ತೀರದಲ್ಲಿ ‘ಅಂತರಗಂಗೆ’ಯಂತೆ ಹರಿಯುತ್ತಿರುವ ಪ್ರತಿರೋಧ: ವೇದವಲ್ಲಿಯಿಂದ ಸೌಜನ್ಯಳವರೆಗೆ ಪ್ರತಿಧ್ವನಿಸುತ್ತಿರುವ ಪ್ರಶ್ನೆ-‘ಕೊಂದವರು ಯಾರು?’

ಪ್ರಪಂಚದಾದ್ಯಂತ ಪಿತೃಪ್ರಧಾನ ವ್ಯವಸ್ಥೆ ಮತ್ತು ಪ್ರಭುತ್ವಗಳು ಹಲವು ರೀತಿಗಳಲ್ಲಿ ಮಹಿಳೆಯರನ್ನು ದಮನಿಸುವ ವಿಧಾನಗಳನ್ನು ಕಂಡುಕೊಂಡು ಕರಗತ ಮಾಡಿಕೊಂಡಿವೆ. ಅದರಲ್ಲಿ ಅತ್ಯಂತ ಪರಿಣಾಮಕಾರಿಯಾದುದು, ದೇವರು, ಭಕ್ತಿ ಮತ್ತು ಧರ್ಮದ ಹೆಸರಿನಲ್ಲಿ ಮಹಿಳೆಯರನ್ನು ದಮನಕ್ಕೊಳಪಡಿಸುವ ತಂತ್ರ....

ರೂ. 170 ಕೋಟಿ ದಂಡ ಪಾವತಿಸಲು ಮುಂದಾದ ಅದಾನಿ : ಏನಿದು ಪ್ರಕರಣ?

ಅಮೆರಿಕದ ನ್ಯಾಯಾಲಯದಲ್ಲಿ ದಾಖಲಾಗಿದ್ದ ವಂಚನೆ ಮತ್ತು ಲಂಚದ ಪ್ರಕರಣಕ್ಕೆ ಸಂಬಂಧಿಸಿದಂತೆ, ಉದ್ಯಮಿ ಗೌತಮ್ ಅದಾನಿ ಮತ್ತು ಅವರ ಸೋದರಳಿಯ ಸಾಗರ್ ಅದಾನಿ ಒಟ್ಟು 18 ಮಿಲಿಯನ್ ಡಾಲರ್ (ಸುಮಾರು 170 ಕೋಟಿ ರೂಪಾಯಿ) ದಂಡ ಪಾವತಿಸಲು ಒಪ್ಪಿಕೊಳ್ಳುವ ಮೂಲಕ...

ಭೋಜಶಾಲಾ-ಕಮಲ್ ಮೌಲಾ ಪ್ರಕರಣದಲ್ಲಿ ಹಿಂದೂಗಳ ಪರ ತೀರ್ಪು…ಮಸೀದಿಯಲ್ಲ ದೇವಸ್ಥಾನವೆಂದ ಕೋರ್ಟ್ : ಏನಿದು ವಿವಾದ?

ಸುಮಾರು 100 ವರ್ಷಗಳ ಹಳೆಯ ವಿವಾದವಾದ ಭೋಜಶಾಲಾ-ಕಮಲ್ ಮೌಲಾ ಮಸೀದಿ ಪ್ರಕರಣದಲ್ಲಿ ಶುಕ್ರವಾರ (ಮೇ 15) ಮಧ್ಯಪ್ರದೇಶ ಹೈಕೋರ್ಟ್ ತೀರ್ಪು ನೀಡಿದ್ದು, ಭೋಜಶಾಲಾದಲ್ಲಿರುವ ಐತಿಹಾಸಿಕ ಸ್ಥಳವು ಸರಸ್ವತಿ ದೇವಿಗೆ ಸಮರ್ಪಿತವಾದ ದೇವಾಲಯವಾಗಿದೆ ಎಂದು...

“ಮಹಿಳಾ ಮೀಸಲಾತಿ ಮುಖವಾಡದಲ್ಲಿ ಡಿಲಿಮಿಟೇಷನ್ ಕುತಂತ್ರ ವಿಫಲ” ಬಿಜೆಪಿಗೆ ದಕ್ಷಿಣ ಭಾರತದ ಎಚ್ಚರಿಕೆ

ಮೋದಿ ನೇತೃತ್ವದ ಕೇಂದ್ರ ಸರ್ಕಾರವು 2026ರ ಏಪ್ರಿಲ್ 16ರಂದು ಸಂಸತ್ತಿನ ವಿಶೇಷ ಅಧಿವೇಶನ ಕರೆದು, ಮಹಿಳಾ ಮೀಸಲಾತಿ ಅನುಷ್ಠಾನವನ್ನು ತ್ವರಿತಗೊಳಿಸುವ ನೆಪವನ್ನು ಮುಂದುಮಾಡಿ ಮೂರು ಮಸೂದೆಗಳನ್ನು ಮಂಡಿಸಿತು. ಇವುಗಳಲ್ಲಿ ಪ್ರಮುಖವಾದ ಸಂವಿಧಾನ (131ನೇ...

ಹೊಸ ಕಾರ್ಮಿಕ ಕಾನೂನು ಶ್ರಮಿಕರ ಮೂಲಭೂತ ಹಕ್ಕುಗಳಿಗೆ ಕತ್ತರಿ!

"8 ಗಂಟೆ ಕೆಲಸ, 8 ಗಂಟೆ ಮನರಂಜನೆ, 8 ಗಂಟೆ ವಿಶ್ರಾಂತಿ" ಎಂಬ ತತ್ವವು ಸುಲಭವಾಗಿ ದೊರೆತದ್ದಲ್ಲ, ಇದು ದೀರ್ಘಕಾಲದ ಹೋರಾಟ, ತ್ಯಾಗ ಮತ್ತು ಏಕತೆಯ ಫಲವಾಗಿದೆ. ಕೆಲಸದ ಹೊರೆ ಅತಿಯಾಗಿ ಇದ್ದ...

ಮನರೇಗಾ ಯಶೋಗಾಥೆ: ಭಾಗ-1 ದಲಿತರು-ಮಹಿಳೆಯರಿಗೆ ಆರ್ಥಿಕ ಭದ್ರತೆ; ಗ್ರಾಮ ಸಬಲೀಕರಣಕ್ಕೆ ಮನರೇಗಾ ಕೊಟ್ಟ ಕೊಡುಗೆ ಅಪಾರ

2001-2004 ರವರೆಗಿನ ನಿರಂತರ ಬರ ಕರ್ನಾಟಕದ ಬಹುತೇಕ ಹಳ್ಳಿಗಳನ್ನು ಕಂಗಾಲಾಗಿಸಿದ್ದಂತೂ ನಿಜ. ಎಲ್ಲ ಕೆರೆಗಳು ಬತ್ತಿಹೋಗಿದ್ದರಿಂದ ದನಕರುಗಳಿಗೆ ನೀರು ಕುಡಿಸಲೂ ಜನ ಅಲೆದಾಡುತ್ತಿದ್ದರು. ಜನರಿಗೆ ಕುಡಿಯುವ ನೀರು ಪೂರೈಕೆ ಸಹ ಆ ಸಂದರ್ಭದಲ್ಲಿ...

ಮಣಿಪುರ: ಬುಡಕಟ್ಟು ಚರ್ಚ್ ನಾಯಕರ ಮೇಲೆ ಉಗ್ರ ದಾಳಿ:  ಹಲವೆಡೆ ಮೇಣದ ಬತ್ತಿಯ ಜೊತೆಗೆ ಶೋಕ ವ್ಯಕ್ತ ಪಡಿಸಿದ ಕುಕಿ ಸಮುದಾಯ 

ಇಂಫಾಲ್: ಮಣಿಪುರದ ಕಾಂಗ್‌ಪೋಕ್ಪಿ ಜಿಲ್ಲೆಯಲ್ಲಿ ಮೂವರು ಪ್ರಮುಖ ಕುಕಿ ಚರ್ಚ್ ನಾಯಕರನ್ನು ಹೊಂಚು ಹಾಕಿ ದಾಳಿ ನಡೆಸಿ ಕೊಲ್ಲಲಾಗಿದೆ. ಈ ಘಟನೆಯು ರಾಜ್ಯದಲ್ಲಿ ಜನಾಂಗೀಯ ಉದ್ವಿಗ್ನತೆಯನ್ನು ಮತ್ತಷ್ಟು ತೀವ್ರಗೊಳಿಸಿದೆ.  ಮೇ 13ರಂದು ಬೆಳಿಗ್ಗೆ ಚುರಾಚಂದ್‌ಪುರನಲ್ಲಿ...