Homeಅಂಕಣಗಳುಅಮೆರಿಕದಲ್ಲಿ ಬಲಪಂಥೀಯರ ಚುನಾವಣಾ ವಿಷಯವಾಗುತ್ತಿರುವ ‘ಆ್ಯಂಟಿ ವೋಕ್'!

ಅಮೆರಿಕದಲ್ಲಿ ಬಲಪಂಥೀಯರ ಚುನಾವಣಾ ವಿಷಯವಾಗುತ್ತಿರುವ ‘ಆ್ಯಂಟಿ ವೋಕ್’!

- Advertisement -
- Advertisement -

ದಿಲ್ಬರ್ಟ್ ಮತ್ತು ರೋಲ್ಡ್ ಡಾಲ್ ಹಾಗೂ ಎಚ್ಚೆತ್ತ ಮಾಧ್ಯಮಗಳ ಬಗ್ಗೆ ಕಳೆದ ವಾರ ಬರೆದ ಸಂಪಾದಕೀಯದಲ್ಲಿ, ಈ ಎಚ್ಚರಿಕೆಯನ್ನು ’ವೋಕ್ ಸಂಸ್ಕೃತಿ’ ಅಥವಾ ’ವೋಕಿಸಂ’ ಎಂಬ ಬಗೆದು ಹೀಗಳೆಯಲು ಹಲವರು ಪ್ರಯತ್ನಿಸುವ ಬಗ್ಗೆ ಪ್ರಸ್ತಾಪಿಸಿ ಲೇಖನವನ್ನು ಕೊನೆಗೊಳಿಸಲಾಗಿತ್ತು. ’ವೋಕ್-ವಿರೋಧಿ’ ಅಭಿಯಾನವನ್ನೇ ಪ್ರಧಾನವಾಗಿಟ್ಟುಕೊಂಡು ಯುಎಸ್‌ಎನ ರಿಪಬ್ಲಿಕನ್ ಪಕ್ಷದಿಂದ ಅಧ್ಯಕ್ಷೀಯ ಅಭ್ಯರ್ಥಿಯಾಗಲು ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಇತ್ತೀಚೆಗೆ ವಿವೇಕ್ ಬಗ್ಗೆ ಸುದೀರ್ಘ ಲೇಖನವನ್ನು ಪ್ರಕಟಿಸಿದ್ದ ನ್ಯೂಯಾರ್ಕರ್ ಪತ್ರಿಕೆ ಅವರನ್ನು ’ಆಂಟಿ ವೋಕ್ ಇಂಕ್’ ಸಿಇಒ ಎಂದು ಕರೆದಿತ್ತು. 21ನೇ ಶತಮಾನದಲ್ಲಿ ಜನಾಂಗ, ಲಿಂಗತ್ವ, ಹವಾಮಾನ, ಸವಲತ್ತು, ಪ್ರಾತಿನಿಧ್ಯ ಮುಂತಾದ ಸಂಗತಿಗಳ ಬಗ್ಗೆ ಸಮಾಜ ಎಚ್ಚೆತ್ತುಕೊಳ್ಳುತ್ತಿರುವ ಅಥವಾ ಎಚ್ಚರಗೊಳ್ಳಬೇಕಿರುವ ಆಶಯದ ವಿರುದ್ಧ ಹೂಡಿರುವ ಈ ’ವೋಕ್-ವಿರೋಧಿ’ ಅಭಿಯಾನ ದಿನೇದಿನೇ ಬಲಪಂಥೀಯ ಮಾಧ್ಯಮಗಳಲ್ಲಿ ರಾರಾಜಿಸುತ್ತಿದೆ. ಅಮೆರಿಕದ ತೀವ್ರ ಬಲಪಂಥೀಯ ಟಿವಿ ಚಾನೆಲ್ ಆದ ಫಾಕ್ಸ್ ನ್ಯೂಸ್ ಕಾರ್ಯಕ್ರಮಗಳಲ್ಲಿ ವಿವೇಕ್ ರಾಮಸ್ವಾಮಿ ಕಾಯಂಆಗಿ ಹೋಗಿದ್ದಾರೆ ಎನ್ನುತ್ತವೆ ವರದಿಗಳು.

ಸ್ಯಾಂಪಲ್‌ಗೆ ವಿವೇಕ್ ಅವರ ಒಂದು ಟ್ವೀಟ್ ನೋಡಿ: “ನಾನು ಅಧ್ಯಕ್ಷನಾಗಿ, ಫೆಡೆರಲ್ ಕಾನೂನಾದ (ಯುಎಸ್‌ಎ ರಾಷ್ಟ್ರ ಮತ್ತು ರಾಜ್ಯಗಳು ಸೇರಿ ಮಾಡಿರುವ) ’ಅಫರ್ಮೆಟಿವ್ ಆಕ್ಷನ್’ ಅನ್ನು (ಅಂದರೆ, ಜನಾಂಗೀಯ ತಾರತಮ್ಯ ಕೊನೆಗಾಣಿಸಲು ನೀಡುವ ಮೀಸಲಾತಿ) ಕೊನೆಗೊಳಿಸುತ್ತೇನೆ. ಜನಾಂಗದ ಆಧಾರದ ಮೇಲೆ ಮೀಸಲಾತಿ ನೀಡುವ ಲಿಂಡನ್ ಜಾನ್ಸನ್ ಕಾರ್ಯಾಂಗ ಆದೇಶ 11246ವನ್ನು ವಾಪಸ್ ತೆಗೆದುಕೊಳ್ಳುತ್ತೇನೆ. ಜಾನ್ಸನ್ ನಂತರ ಪ್ರತಿ ರಿಪಬ್ಲಿಕನ್‌ಗೆ ಈ ಕೆಲಸ ಮಾಡುವ ಅವಕಾಶವಿತ್ತು. ನಾನು ಯಾವುದೇ ಕ್ಷಮೆ ಕೇಳದೆ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ “ಪ್ರತಿಭೆ, ಶ್ರೇಷ್ಠತೆ, ಸ್ವ-ಆಡಳಿತ, ಮುಕ್ತ ಅಭಿವ್ಯಕ್ತಿ. ಇದು ಹೊಸ ಅಮೆರಿಕನ್ ಡ್ರೀಮ್ ಎಂದು ಬರೆದುಕೊಳ್ಳುತ್ತಾರೆ. ಯಾವ ಮೌಲ್ಯಗಳನ್ನು ಮರುಮೌಲ್ಯಮಾಪನ ಮಾಡಿ ಸಮಾನತೆ, ಪ್ರಾತಿನಿಧ್ಯದ ಕಡೆಗೆ ಚಲಿಸಬೇಕೆಂದು ಎಚ್ಚೆತ್ತ ಮನಸ್ಸುಗಳು ತುಡಿಯುತ್ತಿವೆಯೋ ಅವನ್ನೆಲ್ಲಾ ಅವಮಾನಿಸಿ ವಿರೋಧಿಸುವ ಅಭಿಯಾನವೇ ’ಆ್ಯಂಟಿ ವೋಕಿಸಂ’. ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ, ಜನಾಂಗೀಯ ನಿಂದನೆಯ ಬಗ್ಗೆ ಕಠಿಣ ಕ್ರಮಗಳು, ಜನ ಕಲ್ಯಾಣ ಯೋಜನೆಗಳು – ಹೀಗೆ ಜನಪರ ನೀತಿಗಳನ್ನೆಲ್ಲಾ ತೊಡೆದುಹಾಕಿ ’ಅಮೆರಿಕ ಫಸ್ಟ್’ ಎನಿಸಿಕೊಳ್ಳಬೇಕೆನ್ನುವ ’ಹುಸಿ ಶ್ರೇಷ್ಠತೆಯ’ ಧೋರಣೆಯೇ ಇದರ ಮೊದಲ ಆದ್ಯತೆ. ಮುಕ್ತ ಅಭಿವ್ಯಕ್ತಿ ಎಂಬುದು ಜವಾಬ್ದಾರಿ ಹೊತ್ತುಕೊಳ್ಳದ ಅಭಿವ್ಯಕ್ತಿ ಸ್ವಾತಂತ್ರ್ಯವಾಗಿ ಉಳಿಯಬೇಕೆಂಬ ವಾದ ಇವರದ್ದು. ಯಾವುದೇ ಮಟ್ಟದಲ್ಲಿ ಕೂಡ ಜನಾಂಗೀಯ, ಅಲ್ಪಸಂಖ್ಯಾತರ, ಮಹಿಳೆಯರ ಅವಮಾನ-ನಿಂದನೆಯನ್ನು ಮಾಡಲು ಸ್ವಾತಂತ್ರ್ಯ ಇರಬೇಕೆಂಬುದು ಇವರ ಫ್ರೀ ಸ್ಪೀಚ್ ವಾದದ ಉದ್ದೇಶ!

ಇದನ್ನೂ ಓದಿ: ದಿಲ್ಬರ್ಟ್, ರೋಲ್ಡ್ ಡಾಲ್ ಮತ್ತು ಎಚ್ಚೆತ್ತ ಮಾಧ್ಯಮಗಳ ಸುತ್ತ…

ಈ ವಿವೇಕ್ ರಾಮಸ್ವಾಮಿಯ ಕುಟುಂಬದವರು ಕೇರಳ ಮೂಲದ ಬ್ರಾಹ್ಮಣ ಜಾತಿಗೆ ಸೇರಿದವರು. ಇಲ್ಲಿನ ಬ್ರಾಹ್ಮಣ್ಯದ ’ಶ್ರೇಷ್ಠತೆಯ’ ಬಲಪಂಥೀಯತೆ ಮತ್ತು ಅಮೆರಿಕದಲ್ಲಿ ಹುಟ್ಟಿ ಬೆಳೆದು ಮೈಗೂಡಿಸಿಕೊಂಡಿರುವ ಕಾರ್ಪೊರೆಟ್ ಸಂಸ್ಕೃತಿಯ ಬಲಪಂಥೀಯತೆ ಒಟ್ಟಿಗೆ ಸೇರಿ ವಿವೇಕ್ ಅಮೆರಿಕದಲ್ಲಿ ಹೊಸ ಬಗೆಯ ಧ್ರುವೀಕರಣಕ್ಕೆ ನಾಂದಿ ಹಾಡುತ್ತಿದ್ದಾರೆ; ಡೊನಾಲ್ಡ್ ಟ್ರಂಪ್ ಮಾಡಿದ ಡ್ಯಾಮೇಜ್ ಏನೇನೂ ಸಾಲದೆಂಬಂತೆ. ಇಂತಹ ’ವೋಕ್-ಎಚ್ಚರ’ದ ವಿರುದ್ಧದ ಅಭಿಯಾನ ಮೀಸಲಾತಿ ವಿರೋಧಿಯಾಗಿ, ಖಾಸಗೀಕರಣದ ಪ್ರತಿಪಾದಕನಾಗಿ, ದೈತ್ಯ ಕಾರ್ಪೊರೆಟ್ ಕುಳಗಳ ಸಂರಕ್ಷರರಾಗಿ ಬೇರೆಬೇರೆ ಅವತಾರಗಳಲ್ಲಿ ಭಾರತದಲ್ಲಿಯೂ ನಮಗೆ ಕಾಣಸಿಗುತ್ತದೆ. ಅದು ಮುಂದೆ ಇನ್ನೂ ತೀವ್ರವಾಗುವುದರಲ್ಲಿ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಆಧುನಿಕ ಜಗತ್ತಿಗೆ ಬೇಕಾದ ಸಮಾನತೆಯ ಮೌಲ್ಯಗಳನ್ನು ಉಳಿಸಿಕೊಳ್ಳುವ ಬಗ್ಗೆ ಕಾಳಜಿಯನ್ನು ಸ್ವಲ್ಪವಾದರೂ ಉಳಿಸಿಕೊಂಡಿರುವ ರಾಜಕೀಯ ಪಕ್ಷಗಳು, ನಾಗರಿಕ ಸಮಾಜ ಮತ್ತು ನಾಗರಿಕ ಹಕ್ಕುಗಳ ಹೋರಾಟ ಗುಂಪುಗಳು ಸಕ್ರಿಯವಾಗಬೇಕಿದೆ.

2014ರಲ್ಲಿ ಕಪ್ಪು ವ್ಯಕ್ತಿಯೊಬ್ಬನನ್ನು ಅಮೆರಿಕದ ಪೊಲೀಸನೊಬ್ಬ ಕೊಂದಿದ್ದು ’ಬ್ಲಾಕ್ ಲೈವ್ಸ್ ಮ್ಯಾಟರ್‍ಸ್’ ಪ್ರತಿಭಟನೆಗಳಿಗೆ ಕಾರಣವಾಗಿತ್ತು. ಆಗ ’ಸ್ಟೇ ವೋಕ್’ ಅಥವಾ ’ವೋಕ್’ ಅತಿ ಹೆಚ್ಚು ಜನಪ್ರಿಯತೆ ಪಡೆದುಕೊಂಡಿತು. 2020ರಲ್ಲಿ ಯುಎಸ್‌ಎನ ಪೊಲೀಸನೊಬ್ಬ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ವ್ಯಕ್ತಿಯನ್ನು ಕತ್ತುಹಿಸುಕಿ ಸಾರ್ವಜನಿಕವಾಗಿಯೇ ಹತ್ಯೆ ಮಾಡಿದಾಗ ’ಬ್ಲಾಕ್ ಲೈವ್ಸ್ ಮ್ಯಾಟರ್‍ಸ್’ ತೀವ್ರ ಸ್ವರೂಪ ಪಡೆದುಕೊಂಡಿತು. ಇದು ಜಗತ್ತಿನಾದ್ಯಂತ ಜನಾಂಗೀಯ ಹಿಂಸೆಗಳ ಬಗ್ಗೆ ಚರ್ಚೆಗೆ ಕಾರಣವಾಯಿತು. ಜನಾಂಗೀಯ ನಿಂದನೆ ಮತ್ತು ಹಿಂಸೆಗಳ ಬಗ್ಗೆ ಜಾಗೃತಿ ತಳೆಯುವಂತೆ ಯುವ ಸಮುದಾಯವನ್ನು ಪ್ರಚೋದಿಸಿತು. ಭಾರತದಲ್ಲಿ ಜಾತಿನಿಂದನೆ ಮತ್ತು ಹಿಂಸೆಯ ಬಗ್ಗೆಗೂ ಚರ್ಚೆಗಳಾದವು. ಕೆಲಸದ ಸ್ಥಳಗಳಲ್ಲಿ ಜನರು ಹೆಚ್ಚು ಸಂವೇದನಾಶೀಲರಾಗಲು ತಳಸಮುದಾಯಗಳಿಂದ ಆಗ್ರಹ ಮೂಡಿಬಂತು. ಆಗ ಶೋಷಕ ಸಮುದಾಯಕ್ಕೆ ಸೇರಿದ ಕೆಲವರಾದರೂ ಎಚ್ಚೆತ್ತು ಸ್ಪಂದಿಸಲು ಪ್ರಾರಂಭಿಸಿದರು. ಅದರ ಜೊತೆಗೇ ಈ ಎಚ್ಚೆತ್ತ ಪ್ರಜ್ಞೆಯನ್ನು ಪ್ರಶ್ನಿಸುವ ಅವಮಾನಿಸುವ ವಿದ್ಯಮಾನಗಳೂ ಚುರುಕು ಪಡೆದವು. ಇಂದಿಗೂ ಈ ವಿವೇಕ್ ರಾಮಸ್ವಾಮಿ ’ಬ್ಲಾಕ್ ಲೈವ್ಸ್ ಮ್ಯಾಟರ್‍ಸ್’ಅನ್ನು ಗೇಲಿಮಾಡುವುದನ್ನು ತನ್ನ ಕಾಯಕವನ್ನಾಗಿಸಿಕೊಂಡಿದ್ದಾರೆ. ಅದಕ್ಕಾಗಿ ಆ ಚಳವಳಿಯಲ್ಲಿ ಭಾಗಿಯಾದವರ ಚಾರಿತ್ರ್ಯಹರಣಕ್ಕೂ ಮುಂದಾಗುತ್ತಾರೆ.

ಭಾರತದಲ್ಲಿ ಲೋಕಸಭಾ ಚುನಾವಣೆಗಳು 2024ರ ಮೊದಲ ಭಾಗದಲ್ಲಿ ಜರುಗಲಿವೆ. ಅಮೆರಿಕದ ಚುನಾವಣೆಗಳು 2024ರ ಕೊನೆಗೆ. ಅಮೆರಿಕದಲ್ಲಿ ರಿಪಬ್ಲಿಕನ್ ಪಕ್ಷ ತೀವ್ರ ಬಲಪಂಥೀಯತೆಯ ಹೊಸ ರೂಪದಲ್ಲಿ ಅವತರಿಸುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ. 2020ರಲ್ಲಿ ಹೇಗೋ ರಿವರ್ಸ್ ಪೋಲರೈಸೇಷನ್ ಸಾಧ್ಯವಾಗಿ ಟ್ರಂಪ್‌ನ ಸೋಲು ಸಾಧ್ಯವಾಗಿತ್ತು. ಆದರೆ ಟ್ರಂಪ್‌ಗಿಂತಲೂ ತನ್ನ ಪ್ರತಿಗಾಮಿ ಚಿಂತನೆಗಳನ್ನು ಪರಿಣಾಮಕಾರಿಯಾಗಿ ಮಂಡಿಸಬಲ್ಲ ವ್ಯಕ್ತಿತ್ವ ವಿವೇಕ್ ಅವರದ್ದು. ಇವರ ನರೆಟಿವ್‌ಅನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸುವ ಕಾರ್ಯಸ್ವರೂಪ ಡೆಮಾಕ್ರಟ್ ಪಕ್ಷದಿಂದ ದೊಡ್ಡಮಟ್ಟದಲ್ಲಿ ವ್ಯಕ್ತವಾಗಿಲ್ಲ. ಭಾರತದಲ್ಲಿಯೂ ಇದೇ ಸನ್ನಿವೇಶವನ್ನು ನಾವು ಮುಂಗಾಣಬಹುದಾಗಿದೆ. ಚುನಾವಣೆಗಳು ಹತ್ತಿರ ಬರುತ್ತಿದ್ದಂತೆ ಆಡಳಿತ ನಡೆಸುತ್ತಿರುವ ಬಲಪಂಥೀಯ ಪಕ್ಷ ಮರು ಆಯ್ಕೆಗಾಗಿ ಹಿಂದೆ ನಡೆಸಿದಂತೆಯೆ ಧ್ರುವೀಕರಣದ ತೀವ್ರ ಪ್ರಚಾರಾಭಿಯಾನ ನಡೆಸಲಿದೆ. ಇಲ್ಲಿನ ವಿರೋಧ ಪಕ್ಷಗಳು ಅದನ್ನು ಕೌಂಟರ್ ಮಾಡಲು ಸಜ್ಜಾಗಿವೆಯೇ? ರಾಷ್ಟ್ರವ್ಯಾಪಿ ಅಸ್ತಿತ್ವವಿದೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷದಲ್ಲಿಯೂ ಇಂದು ಜನಪರ-ಪ್ರಗತಿಪರ ನಿಲುವುಗಳನ್ನು ಮತ್ತು ಬಲಪಂಥೀಯ ನೀತಿಗಳ ವಿರುದ್ಧವಾದ ಪೊಸಿಶನ್‌ಅನ್ನು ತೆಗೆದುಕೊಳ್ಳುವ ಮುಖಂಡರುಗಳು ಕಾಣಿಸುತ್ತಿಲ್ಲ. ಸಂಪತ್ತಿನ ಅಸಮಾನತೆ, ಪ್ರಾತಿನಿಧ್ಯ, ಹವಾಮಾನ ವೈಪರೀತ್ಯ ಇಂತಹ ವಿಷಯಗಳು ಇಲ್ಲಿನ್ನೂ ಚುನಾವಣೆಯ ವಿಷಯಗಳಾಗುತ್ತಿಲ್ಲ. ಈ ನಿಟ್ಟಿನಲ್ಲಿ ನಾಗರಿಕ ಸಮಾಜದ ಜವಾಬ್ದಾರಿಯೇ ದೊಡ್ಡದಿದೆ ಎಂಬುದಂತೂ ನಿಚ್ಚಳ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಭಾರತದಲ್ಲಿ 12 ಸಾವಿರ ಉದ್ಯೋಗಿಗಳನ್ನು ವಜಾಗೊಳಿಸಿದ ಒರಾಕಲ್ : ಜಾಗತಿಕವಾಗಿ 30 ಸಾವಿರ ಜನರ ಕೆಲಸಕ್ಕೆ ಕುತ್ತು

ಐಟಿ ದೈತ್ಯ ಒರಾಕಲ್ ಜಾಗತಿಕ ಮಟ್ಟದಲ್ಲಿ ಸುಮಾರು 30,000 ಉದ್ಯೋಗಿಗಳನ್ನು ವಜಾಗೊಳಿಸಲು ನಿರ್ಧರಿಸಿದ್ದು, ಇದು ಭಾರತದ ಮೇಲೂ ತೀವ್ರ ಪರಿಣಾಮ ಬೀರಿದೆ. ವರದಿಗಳ ಪ್ರಕಾರ, ಭಾರತವೊಂದರಲ್ಲೇ ಸುಮಾರು 12,000 ಉದ್ಯೋಗಿಗಳನ್ನು ಕೆಲಸದಿಂದ ತೆಗೆದುಹಾಕಲಾಗಿದೆ. ಕಂಪನಿಯು ತನ್ನ ಒಟ್ಟು ಉದ್ಯೋಗಿಳ...

ಗೋವಾ ನೈಟ್‌ಕ್ಲಬ್ ಬೆಂಕಿ ಪ್ರಕರಣ: ಮಾಲೀಕರಾದ ಸೌರಭ್ ಲೂತ್ರಾ, ಗೌರವ್ ಲೂತ್ರಾ ಸಹೋದರರಿಗೆ ಜಾಮೀನು

ಪಣಜಿ: ಕಳೆದ ಡಿಸೆಂಬರ್‌ನಲ್ಲಿ 25 ಜನರ ಸಾವಿಗೆ ಕಾರಣವಾದ ವಿನಾಶಕಾರಿ ಬೆಂಕಿ ಪ್ರಕರಣಕ್ಕೆ ಸಂಬಂಧಿಸಿದ ಪ್ರಕರಣದಲ್ಲಿ ಬಿರ್ಚ್ ಬೈ ರೋಮಿಯೋ ಲೇನ್ ನೈಟ್‌ಕ್ಲಬ್‌ನ ಮಾಲೀಕರಾದ ಸೌರಭ್ ಲೂತ್ರಾ ಮತ್ತು ಗೌರವ್ ಲೂತ್ರಾ ಅವರಿಗೆ...

ಲೈಂಗಿಕ ದೌರ್ಜನ್ಯ ಆರೋಪ: ಮಲಯಾಳಂ ಚಲನಚಿತ್ರ ನಿರ್ದೇಶಕ ರಂಜಿತ್ ಬಾಲಕೃಷ್ಣನ್ 14 ದಿನಗಳ ನ್ಯಾಯಾಂಗ ಬಂಧನಕ್ಕೆ 

ಕೇರಳ: ಲೈಂಗಿಕ ದೌರ್ಜನ್ಯ ಪ್ರಕರಣಕ್ಕೆ ಸಂಬಂಧಿಸಿದಂತೆ ಮಲಯಾಳಂ ನಿರ್ದೇಶಕ ಮತ್ತು ನಿರ್ಮಾಪಕ ರಂಜಿತ್ ಬಾಲಕೃಷ್ಣನ್ ಅವರನ್ನು ಬುಧವಾರ 14 ದಿನಗಳ ನ್ಯಾಯಾಂಗ ಬಂಧನಕ್ಕೆ ಒಳಪಡಿಸಲಾಗಿದೆ. ಪ್ರಸ್ತುತ ಅವರನ್ನು ಎರ್ನಾಕುಲಂ ಸಬ್ ಜೈಲಿನಲ್ಲಿ ಇರಿಸಲಾಗಿದೆ.  ಜನವರಿ...

ಫಾರ್ಮ್–6 ವಿವಾದ : ಕೋಲ್ಕತ್ತಾದ ಚುನಾವಣಾಧಿಕಾರಿ ಕಚೇರಿ ಮುಂದೆ ಟಿಎಂಸಿ -ಬಿಜೆಪಿ ಕಾರ್ಯಕರ್ತರ ನಡುವೆ ಘರ್ಷಣೆ

ಮತದಾರರ ಪಟ್ಟಿಗೆ ಹೊಸದಾಗಿ ಹೆಸರುಗಳನ್ನು ಸೇರಿಸುವ ನಮೂನೆ -6 (ಫಾರ್ಮ್ -6) ವಿಚಾರದಲ್ಲಿ ಕೋಲ್ಕತ್ತಾದ ಮುಖ್ಯ ಚುನಾವಣಾಧಿಕಾರಿ ಕಚೇರಿ ಮುಂದೆ ಮಂಗಳವಾರ (ಮಾ. 31) ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮತ್ತು ಬಿಜೆಪಿ ಕಾರ್ಯಕರ್ತರ...

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...