Homeಅಂಕಣಗಳುಅಮೆರಿಕದಲ್ಲಿ ಬಲಪಂಥೀಯರ ಚುನಾವಣಾ ವಿಷಯವಾಗುತ್ತಿರುವ ‘ಆ್ಯಂಟಿ ವೋಕ್'!

ಅಮೆರಿಕದಲ್ಲಿ ಬಲಪಂಥೀಯರ ಚುನಾವಣಾ ವಿಷಯವಾಗುತ್ತಿರುವ ‘ಆ್ಯಂಟಿ ವೋಕ್’!

- Advertisement -
- Advertisement -

ದಿಲ್ಬರ್ಟ್ ಮತ್ತು ರೋಲ್ಡ್ ಡಾಲ್ ಹಾಗೂ ಎಚ್ಚೆತ್ತ ಮಾಧ್ಯಮಗಳ ಬಗ್ಗೆ ಕಳೆದ ವಾರ ಬರೆದ ಸಂಪಾದಕೀಯದಲ್ಲಿ, ಈ ಎಚ್ಚರಿಕೆಯನ್ನು ’ವೋಕ್ ಸಂಸ್ಕೃತಿ’ ಅಥವಾ ’ವೋಕಿಸಂ’ ಎಂಬ ಬಗೆದು ಹೀಗಳೆಯಲು ಹಲವರು ಪ್ರಯತ್ನಿಸುವ ಬಗ್ಗೆ ಪ್ರಸ್ತಾಪಿಸಿ ಲೇಖನವನ್ನು ಕೊನೆಗೊಳಿಸಲಾಗಿತ್ತು. ’ವೋಕ್-ವಿರೋಧಿ’ ಅಭಿಯಾನವನ್ನೇ ಪ್ರಧಾನವಾಗಿಟ್ಟುಕೊಂಡು ಯುಎಸ್‌ಎನ ರಿಪಬ್ಲಿಕನ್ ಪಕ್ಷದಿಂದ ಅಧ್ಯಕ್ಷೀಯ ಅಭ್ಯರ್ಥಿಯಾಗಲು ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಇತ್ತೀಚೆಗೆ ವಿವೇಕ್ ಬಗ್ಗೆ ಸುದೀರ್ಘ ಲೇಖನವನ್ನು ಪ್ರಕಟಿಸಿದ್ದ ನ್ಯೂಯಾರ್ಕರ್ ಪತ್ರಿಕೆ ಅವರನ್ನು ’ಆಂಟಿ ವೋಕ್ ಇಂಕ್’ ಸಿಇಒ ಎಂದು ಕರೆದಿತ್ತು. 21ನೇ ಶತಮಾನದಲ್ಲಿ ಜನಾಂಗ, ಲಿಂಗತ್ವ, ಹವಾಮಾನ, ಸವಲತ್ತು, ಪ್ರಾತಿನಿಧ್ಯ ಮುಂತಾದ ಸಂಗತಿಗಳ ಬಗ್ಗೆ ಸಮಾಜ ಎಚ್ಚೆತ್ತುಕೊಳ್ಳುತ್ತಿರುವ ಅಥವಾ ಎಚ್ಚರಗೊಳ್ಳಬೇಕಿರುವ ಆಶಯದ ವಿರುದ್ಧ ಹೂಡಿರುವ ಈ ’ವೋಕ್-ವಿರೋಧಿ’ ಅಭಿಯಾನ ದಿನೇದಿನೇ ಬಲಪಂಥೀಯ ಮಾಧ್ಯಮಗಳಲ್ಲಿ ರಾರಾಜಿಸುತ್ತಿದೆ. ಅಮೆರಿಕದ ತೀವ್ರ ಬಲಪಂಥೀಯ ಟಿವಿ ಚಾನೆಲ್ ಆದ ಫಾಕ್ಸ್ ನ್ಯೂಸ್ ಕಾರ್ಯಕ್ರಮಗಳಲ್ಲಿ ವಿವೇಕ್ ರಾಮಸ್ವಾಮಿ ಕಾಯಂಆಗಿ ಹೋಗಿದ್ದಾರೆ ಎನ್ನುತ್ತವೆ ವರದಿಗಳು.

ಸ್ಯಾಂಪಲ್‌ಗೆ ವಿವೇಕ್ ಅವರ ಒಂದು ಟ್ವೀಟ್ ನೋಡಿ: “ನಾನು ಅಧ್ಯಕ್ಷನಾಗಿ, ಫೆಡೆರಲ್ ಕಾನೂನಾದ (ಯುಎಸ್‌ಎ ರಾಷ್ಟ್ರ ಮತ್ತು ರಾಜ್ಯಗಳು ಸೇರಿ ಮಾಡಿರುವ) ’ಅಫರ್ಮೆಟಿವ್ ಆಕ್ಷನ್’ ಅನ್ನು (ಅಂದರೆ, ಜನಾಂಗೀಯ ತಾರತಮ್ಯ ಕೊನೆಗಾಣಿಸಲು ನೀಡುವ ಮೀಸಲಾತಿ) ಕೊನೆಗೊಳಿಸುತ್ತೇನೆ. ಜನಾಂಗದ ಆಧಾರದ ಮೇಲೆ ಮೀಸಲಾತಿ ನೀಡುವ ಲಿಂಡನ್ ಜಾನ್ಸನ್ ಕಾರ್ಯಾಂಗ ಆದೇಶ 11246ವನ್ನು ವಾಪಸ್ ತೆಗೆದುಕೊಳ್ಳುತ್ತೇನೆ. ಜಾನ್ಸನ್ ನಂತರ ಪ್ರತಿ ರಿಪಬ್ಲಿಕನ್‌ಗೆ ಈ ಕೆಲಸ ಮಾಡುವ ಅವಕಾಶವಿತ್ತು. ನಾನು ಯಾವುದೇ ಕ್ಷಮೆ ಕೇಳದೆ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ “ಪ್ರತಿಭೆ, ಶ್ರೇಷ್ಠತೆ, ಸ್ವ-ಆಡಳಿತ, ಮುಕ್ತ ಅಭಿವ್ಯಕ್ತಿ. ಇದು ಹೊಸ ಅಮೆರಿಕನ್ ಡ್ರೀಮ್ ಎಂದು ಬರೆದುಕೊಳ್ಳುತ್ತಾರೆ. ಯಾವ ಮೌಲ್ಯಗಳನ್ನು ಮರುಮೌಲ್ಯಮಾಪನ ಮಾಡಿ ಸಮಾನತೆ, ಪ್ರಾತಿನಿಧ್ಯದ ಕಡೆಗೆ ಚಲಿಸಬೇಕೆಂದು ಎಚ್ಚೆತ್ತ ಮನಸ್ಸುಗಳು ತುಡಿಯುತ್ತಿವೆಯೋ ಅವನ್ನೆಲ್ಲಾ ಅವಮಾನಿಸಿ ವಿರೋಧಿಸುವ ಅಭಿಯಾನವೇ ’ಆ್ಯಂಟಿ ವೋಕಿಸಂ’. ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ, ಜನಾಂಗೀಯ ನಿಂದನೆಯ ಬಗ್ಗೆ ಕಠಿಣ ಕ್ರಮಗಳು, ಜನ ಕಲ್ಯಾಣ ಯೋಜನೆಗಳು – ಹೀಗೆ ಜನಪರ ನೀತಿಗಳನ್ನೆಲ್ಲಾ ತೊಡೆದುಹಾಕಿ ’ಅಮೆರಿಕ ಫಸ್ಟ್’ ಎನಿಸಿಕೊಳ್ಳಬೇಕೆನ್ನುವ ’ಹುಸಿ ಶ್ರೇಷ್ಠತೆಯ’ ಧೋರಣೆಯೇ ಇದರ ಮೊದಲ ಆದ್ಯತೆ. ಮುಕ್ತ ಅಭಿವ್ಯಕ್ತಿ ಎಂಬುದು ಜವಾಬ್ದಾರಿ ಹೊತ್ತುಕೊಳ್ಳದ ಅಭಿವ್ಯಕ್ತಿ ಸ್ವಾತಂತ್ರ್ಯವಾಗಿ ಉಳಿಯಬೇಕೆಂಬ ವಾದ ಇವರದ್ದು. ಯಾವುದೇ ಮಟ್ಟದಲ್ಲಿ ಕೂಡ ಜನಾಂಗೀಯ, ಅಲ್ಪಸಂಖ್ಯಾತರ, ಮಹಿಳೆಯರ ಅವಮಾನ-ನಿಂದನೆಯನ್ನು ಮಾಡಲು ಸ್ವಾತಂತ್ರ್ಯ ಇರಬೇಕೆಂಬುದು ಇವರ ಫ್ರೀ ಸ್ಪೀಚ್ ವಾದದ ಉದ್ದೇಶ!

ಇದನ್ನೂ ಓದಿ: ದಿಲ್ಬರ್ಟ್, ರೋಲ್ಡ್ ಡಾಲ್ ಮತ್ತು ಎಚ್ಚೆತ್ತ ಮಾಧ್ಯಮಗಳ ಸುತ್ತ…

ಈ ವಿವೇಕ್ ರಾಮಸ್ವಾಮಿಯ ಕುಟುಂಬದವರು ಕೇರಳ ಮೂಲದ ಬ್ರಾಹ್ಮಣ ಜಾತಿಗೆ ಸೇರಿದವರು. ಇಲ್ಲಿನ ಬ್ರಾಹ್ಮಣ್ಯದ ’ಶ್ರೇಷ್ಠತೆಯ’ ಬಲಪಂಥೀಯತೆ ಮತ್ತು ಅಮೆರಿಕದಲ್ಲಿ ಹುಟ್ಟಿ ಬೆಳೆದು ಮೈಗೂಡಿಸಿಕೊಂಡಿರುವ ಕಾರ್ಪೊರೆಟ್ ಸಂಸ್ಕೃತಿಯ ಬಲಪಂಥೀಯತೆ ಒಟ್ಟಿಗೆ ಸೇರಿ ವಿವೇಕ್ ಅಮೆರಿಕದಲ್ಲಿ ಹೊಸ ಬಗೆಯ ಧ್ರುವೀಕರಣಕ್ಕೆ ನಾಂದಿ ಹಾಡುತ್ತಿದ್ದಾರೆ; ಡೊನಾಲ್ಡ್ ಟ್ರಂಪ್ ಮಾಡಿದ ಡ್ಯಾಮೇಜ್ ಏನೇನೂ ಸಾಲದೆಂಬಂತೆ. ಇಂತಹ ’ವೋಕ್-ಎಚ್ಚರ’ದ ವಿರುದ್ಧದ ಅಭಿಯಾನ ಮೀಸಲಾತಿ ವಿರೋಧಿಯಾಗಿ, ಖಾಸಗೀಕರಣದ ಪ್ರತಿಪಾದಕನಾಗಿ, ದೈತ್ಯ ಕಾರ್ಪೊರೆಟ್ ಕುಳಗಳ ಸಂರಕ್ಷರರಾಗಿ ಬೇರೆಬೇರೆ ಅವತಾರಗಳಲ್ಲಿ ಭಾರತದಲ್ಲಿಯೂ ನಮಗೆ ಕಾಣಸಿಗುತ್ತದೆ. ಅದು ಮುಂದೆ ಇನ್ನೂ ತೀವ್ರವಾಗುವುದರಲ್ಲಿ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಆಧುನಿಕ ಜಗತ್ತಿಗೆ ಬೇಕಾದ ಸಮಾನತೆಯ ಮೌಲ್ಯಗಳನ್ನು ಉಳಿಸಿಕೊಳ್ಳುವ ಬಗ್ಗೆ ಕಾಳಜಿಯನ್ನು ಸ್ವಲ್ಪವಾದರೂ ಉಳಿಸಿಕೊಂಡಿರುವ ರಾಜಕೀಯ ಪಕ್ಷಗಳು, ನಾಗರಿಕ ಸಮಾಜ ಮತ್ತು ನಾಗರಿಕ ಹಕ್ಕುಗಳ ಹೋರಾಟ ಗುಂಪುಗಳು ಸಕ್ರಿಯವಾಗಬೇಕಿದೆ.

2014ರಲ್ಲಿ ಕಪ್ಪು ವ್ಯಕ್ತಿಯೊಬ್ಬನನ್ನು ಅಮೆರಿಕದ ಪೊಲೀಸನೊಬ್ಬ ಕೊಂದಿದ್ದು ’ಬ್ಲಾಕ್ ಲೈವ್ಸ್ ಮ್ಯಾಟರ್‍ಸ್’ ಪ್ರತಿಭಟನೆಗಳಿಗೆ ಕಾರಣವಾಗಿತ್ತು. ಆಗ ’ಸ್ಟೇ ವೋಕ್’ ಅಥವಾ ’ವೋಕ್’ ಅತಿ ಹೆಚ್ಚು ಜನಪ್ರಿಯತೆ ಪಡೆದುಕೊಂಡಿತು. 2020ರಲ್ಲಿ ಯುಎಸ್‌ಎನ ಪೊಲೀಸನೊಬ್ಬ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ವ್ಯಕ್ತಿಯನ್ನು ಕತ್ತುಹಿಸುಕಿ ಸಾರ್ವಜನಿಕವಾಗಿಯೇ ಹತ್ಯೆ ಮಾಡಿದಾಗ ’ಬ್ಲಾಕ್ ಲೈವ್ಸ್ ಮ್ಯಾಟರ್‍ಸ್’ ತೀವ್ರ ಸ್ವರೂಪ ಪಡೆದುಕೊಂಡಿತು. ಇದು ಜಗತ್ತಿನಾದ್ಯಂತ ಜನಾಂಗೀಯ ಹಿಂಸೆಗಳ ಬಗ್ಗೆ ಚರ್ಚೆಗೆ ಕಾರಣವಾಯಿತು. ಜನಾಂಗೀಯ ನಿಂದನೆ ಮತ್ತು ಹಿಂಸೆಗಳ ಬಗ್ಗೆ ಜಾಗೃತಿ ತಳೆಯುವಂತೆ ಯುವ ಸಮುದಾಯವನ್ನು ಪ್ರಚೋದಿಸಿತು. ಭಾರತದಲ್ಲಿ ಜಾತಿನಿಂದನೆ ಮತ್ತು ಹಿಂಸೆಯ ಬಗ್ಗೆಗೂ ಚರ್ಚೆಗಳಾದವು. ಕೆಲಸದ ಸ್ಥಳಗಳಲ್ಲಿ ಜನರು ಹೆಚ್ಚು ಸಂವೇದನಾಶೀಲರಾಗಲು ತಳಸಮುದಾಯಗಳಿಂದ ಆಗ್ರಹ ಮೂಡಿಬಂತು. ಆಗ ಶೋಷಕ ಸಮುದಾಯಕ್ಕೆ ಸೇರಿದ ಕೆಲವರಾದರೂ ಎಚ್ಚೆತ್ತು ಸ್ಪಂದಿಸಲು ಪ್ರಾರಂಭಿಸಿದರು. ಅದರ ಜೊತೆಗೇ ಈ ಎಚ್ಚೆತ್ತ ಪ್ರಜ್ಞೆಯನ್ನು ಪ್ರಶ್ನಿಸುವ ಅವಮಾನಿಸುವ ವಿದ್ಯಮಾನಗಳೂ ಚುರುಕು ಪಡೆದವು. ಇಂದಿಗೂ ಈ ವಿವೇಕ್ ರಾಮಸ್ವಾಮಿ ’ಬ್ಲಾಕ್ ಲೈವ್ಸ್ ಮ್ಯಾಟರ್‍ಸ್’ಅನ್ನು ಗೇಲಿಮಾಡುವುದನ್ನು ತನ್ನ ಕಾಯಕವನ್ನಾಗಿಸಿಕೊಂಡಿದ್ದಾರೆ. ಅದಕ್ಕಾಗಿ ಆ ಚಳವಳಿಯಲ್ಲಿ ಭಾಗಿಯಾದವರ ಚಾರಿತ್ರ್ಯಹರಣಕ್ಕೂ ಮುಂದಾಗುತ್ತಾರೆ.

ಭಾರತದಲ್ಲಿ ಲೋಕಸಭಾ ಚುನಾವಣೆಗಳು 2024ರ ಮೊದಲ ಭಾಗದಲ್ಲಿ ಜರುಗಲಿವೆ. ಅಮೆರಿಕದ ಚುನಾವಣೆಗಳು 2024ರ ಕೊನೆಗೆ. ಅಮೆರಿಕದಲ್ಲಿ ರಿಪಬ್ಲಿಕನ್ ಪಕ್ಷ ತೀವ್ರ ಬಲಪಂಥೀಯತೆಯ ಹೊಸ ರೂಪದಲ್ಲಿ ಅವತರಿಸುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ. 2020ರಲ್ಲಿ ಹೇಗೋ ರಿವರ್ಸ್ ಪೋಲರೈಸೇಷನ್ ಸಾಧ್ಯವಾಗಿ ಟ್ರಂಪ್‌ನ ಸೋಲು ಸಾಧ್ಯವಾಗಿತ್ತು. ಆದರೆ ಟ್ರಂಪ್‌ಗಿಂತಲೂ ತನ್ನ ಪ್ರತಿಗಾಮಿ ಚಿಂತನೆಗಳನ್ನು ಪರಿಣಾಮಕಾರಿಯಾಗಿ ಮಂಡಿಸಬಲ್ಲ ವ್ಯಕ್ತಿತ್ವ ವಿವೇಕ್ ಅವರದ್ದು. ಇವರ ನರೆಟಿವ್‌ಅನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸುವ ಕಾರ್ಯಸ್ವರೂಪ ಡೆಮಾಕ್ರಟ್ ಪಕ್ಷದಿಂದ ದೊಡ್ಡಮಟ್ಟದಲ್ಲಿ ವ್ಯಕ್ತವಾಗಿಲ್ಲ. ಭಾರತದಲ್ಲಿಯೂ ಇದೇ ಸನ್ನಿವೇಶವನ್ನು ನಾವು ಮುಂಗಾಣಬಹುದಾಗಿದೆ. ಚುನಾವಣೆಗಳು ಹತ್ತಿರ ಬರುತ್ತಿದ್ದಂತೆ ಆಡಳಿತ ನಡೆಸುತ್ತಿರುವ ಬಲಪಂಥೀಯ ಪಕ್ಷ ಮರು ಆಯ್ಕೆಗಾಗಿ ಹಿಂದೆ ನಡೆಸಿದಂತೆಯೆ ಧ್ರುವೀಕರಣದ ತೀವ್ರ ಪ್ರಚಾರಾಭಿಯಾನ ನಡೆಸಲಿದೆ. ಇಲ್ಲಿನ ವಿರೋಧ ಪಕ್ಷಗಳು ಅದನ್ನು ಕೌಂಟರ್ ಮಾಡಲು ಸಜ್ಜಾಗಿವೆಯೇ? ರಾಷ್ಟ್ರವ್ಯಾಪಿ ಅಸ್ತಿತ್ವವಿದೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷದಲ್ಲಿಯೂ ಇಂದು ಜನಪರ-ಪ್ರಗತಿಪರ ನಿಲುವುಗಳನ್ನು ಮತ್ತು ಬಲಪಂಥೀಯ ನೀತಿಗಳ ವಿರುದ್ಧವಾದ ಪೊಸಿಶನ್‌ಅನ್ನು ತೆಗೆದುಕೊಳ್ಳುವ ಮುಖಂಡರುಗಳು ಕಾಣಿಸುತ್ತಿಲ್ಲ. ಸಂಪತ್ತಿನ ಅಸಮಾನತೆ, ಪ್ರಾತಿನಿಧ್ಯ, ಹವಾಮಾನ ವೈಪರೀತ್ಯ ಇಂತಹ ವಿಷಯಗಳು ಇಲ್ಲಿನ್ನೂ ಚುನಾವಣೆಯ ವಿಷಯಗಳಾಗುತ್ತಿಲ್ಲ. ಈ ನಿಟ್ಟಿನಲ್ಲಿ ನಾಗರಿಕ ಸಮಾಜದ ಜವಾಬ್ದಾರಿಯೇ ದೊಡ್ಡದಿದೆ ಎಂಬುದಂತೂ ನಿಚ್ಚಳ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಬಾಲಿವುಡ್ ನಟ ರಣವೀರ್ ಸಿಂಗ್ ಗೆ ಬಿಷ್ಣೋಯಿ ಗ್ಯಾಂಗ್ ನಿಂದ ಜೀವಬೆದರಿಕೆ: ಅಮೆರಿಕಾ ನಂಬರ್ ನಿಂದ 10ಕೋಟಿ ರೂ. ಬೇಡಿಕೆ 

ಬಿಷ್ಣೋಯ್ ಗ್ಯಾಂಗ್ ಬಾಲಿವುಡ್ ನಟ ರಣವೀರ್ ಸಿಂಗ್ ಅವರಿಂದ 10 ಕೋಟಿ ರೂ.ಗೆ ಬೇಡಿಕೆ ಇಟ್ಟಿದೆ ಎನ್ನಲಾಗಿದೆ. ಅಮೆರಿಕದ ಸಂಖ್ಯೆಯಿಂದ ಬಂದ ವಾಯ್ಸ್ ನೋಟ್ ಮೂಲಕ ಬೆದರಿಕೆ ಹಾಕಲಾಗಿದೆ ಎಂದು ವರದಿಯಾಗಿದೆ. ಮುಂಬೈ ಪೊಲೀಸ್...

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...