Homeಅಂಕಣಗಳುಅಮೆರಿಕದಲ್ಲಿ ಬಲಪಂಥೀಯರ ಚುನಾವಣಾ ವಿಷಯವಾಗುತ್ತಿರುವ ‘ಆ್ಯಂಟಿ ವೋಕ್'!

ಅಮೆರಿಕದಲ್ಲಿ ಬಲಪಂಥೀಯರ ಚುನಾವಣಾ ವಿಷಯವಾಗುತ್ತಿರುವ ‘ಆ್ಯಂಟಿ ವೋಕ್’!

- Advertisement -
- Advertisement -

ದಿಲ್ಬರ್ಟ್ ಮತ್ತು ರೋಲ್ಡ್ ಡಾಲ್ ಹಾಗೂ ಎಚ್ಚೆತ್ತ ಮಾಧ್ಯಮಗಳ ಬಗ್ಗೆ ಕಳೆದ ವಾರ ಬರೆದ ಸಂಪಾದಕೀಯದಲ್ಲಿ, ಈ ಎಚ್ಚರಿಕೆಯನ್ನು ’ವೋಕ್ ಸಂಸ್ಕೃತಿ’ ಅಥವಾ ’ವೋಕಿಸಂ’ ಎಂಬ ಬಗೆದು ಹೀಗಳೆಯಲು ಹಲವರು ಪ್ರಯತ್ನಿಸುವ ಬಗ್ಗೆ ಪ್ರಸ್ತಾಪಿಸಿ ಲೇಖನವನ್ನು ಕೊನೆಗೊಳಿಸಲಾಗಿತ್ತು. ’ವೋಕ್-ವಿರೋಧಿ’ ಅಭಿಯಾನವನ್ನೇ ಪ್ರಧಾನವಾಗಿಟ್ಟುಕೊಂಡು ಯುಎಸ್‌ಎನ ರಿಪಬ್ಲಿಕನ್ ಪಕ್ಷದಿಂದ ಅಧ್ಯಕ್ಷೀಯ ಅಭ್ಯರ್ಥಿಯಾಗಲು ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಇತ್ತೀಚೆಗೆ ವಿವೇಕ್ ಬಗ್ಗೆ ಸುದೀರ್ಘ ಲೇಖನವನ್ನು ಪ್ರಕಟಿಸಿದ್ದ ನ್ಯೂಯಾರ್ಕರ್ ಪತ್ರಿಕೆ ಅವರನ್ನು ’ಆಂಟಿ ವೋಕ್ ಇಂಕ್’ ಸಿಇಒ ಎಂದು ಕರೆದಿತ್ತು. 21ನೇ ಶತಮಾನದಲ್ಲಿ ಜನಾಂಗ, ಲಿಂಗತ್ವ, ಹವಾಮಾನ, ಸವಲತ್ತು, ಪ್ರಾತಿನಿಧ್ಯ ಮುಂತಾದ ಸಂಗತಿಗಳ ಬಗ್ಗೆ ಸಮಾಜ ಎಚ್ಚೆತ್ತುಕೊಳ್ಳುತ್ತಿರುವ ಅಥವಾ ಎಚ್ಚರಗೊಳ್ಳಬೇಕಿರುವ ಆಶಯದ ವಿರುದ್ಧ ಹೂಡಿರುವ ಈ ’ವೋಕ್-ವಿರೋಧಿ’ ಅಭಿಯಾನ ದಿನೇದಿನೇ ಬಲಪಂಥೀಯ ಮಾಧ್ಯಮಗಳಲ್ಲಿ ರಾರಾಜಿಸುತ್ತಿದೆ. ಅಮೆರಿಕದ ತೀವ್ರ ಬಲಪಂಥೀಯ ಟಿವಿ ಚಾನೆಲ್ ಆದ ಫಾಕ್ಸ್ ನ್ಯೂಸ್ ಕಾರ್ಯಕ್ರಮಗಳಲ್ಲಿ ವಿವೇಕ್ ರಾಮಸ್ವಾಮಿ ಕಾಯಂಆಗಿ ಹೋಗಿದ್ದಾರೆ ಎನ್ನುತ್ತವೆ ವರದಿಗಳು.

ಸ್ಯಾಂಪಲ್‌ಗೆ ವಿವೇಕ್ ಅವರ ಒಂದು ಟ್ವೀಟ್ ನೋಡಿ: “ನಾನು ಅಧ್ಯಕ್ಷನಾಗಿ, ಫೆಡೆರಲ್ ಕಾನೂನಾದ (ಯುಎಸ್‌ಎ ರಾಷ್ಟ್ರ ಮತ್ತು ರಾಜ್ಯಗಳು ಸೇರಿ ಮಾಡಿರುವ) ’ಅಫರ್ಮೆಟಿವ್ ಆಕ್ಷನ್’ ಅನ್ನು (ಅಂದರೆ, ಜನಾಂಗೀಯ ತಾರತಮ್ಯ ಕೊನೆಗಾಣಿಸಲು ನೀಡುವ ಮೀಸಲಾತಿ) ಕೊನೆಗೊಳಿಸುತ್ತೇನೆ. ಜನಾಂಗದ ಆಧಾರದ ಮೇಲೆ ಮೀಸಲಾತಿ ನೀಡುವ ಲಿಂಡನ್ ಜಾನ್ಸನ್ ಕಾರ್ಯಾಂಗ ಆದೇಶ 11246ವನ್ನು ವಾಪಸ್ ತೆಗೆದುಕೊಳ್ಳುತ್ತೇನೆ. ಜಾನ್ಸನ್ ನಂತರ ಪ್ರತಿ ರಿಪಬ್ಲಿಕನ್‌ಗೆ ಈ ಕೆಲಸ ಮಾಡುವ ಅವಕಾಶವಿತ್ತು. ನಾನು ಯಾವುದೇ ಕ್ಷಮೆ ಕೇಳದೆ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ “ಪ್ರತಿಭೆ, ಶ್ರೇಷ್ಠತೆ, ಸ್ವ-ಆಡಳಿತ, ಮುಕ್ತ ಅಭಿವ್ಯಕ್ತಿ. ಇದು ಹೊಸ ಅಮೆರಿಕನ್ ಡ್ರೀಮ್ ಎಂದು ಬರೆದುಕೊಳ್ಳುತ್ತಾರೆ. ಯಾವ ಮೌಲ್ಯಗಳನ್ನು ಮರುಮೌಲ್ಯಮಾಪನ ಮಾಡಿ ಸಮಾನತೆ, ಪ್ರಾತಿನಿಧ್ಯದ ಕಡೆಗೆ ಚಲಿಸಬೇಕೆಂದು ಎಚ್ಚೆತ್ತ ಮನಸ್ಸುಗಳು ತುಡಿಯುತ್ತಿವೆಯೋ ಅವನ್ನೆಲ್ಲಾ ಅವಮಾನಿಸಿ ವಿರೋಧಿಸುವ ಅಭಿಯಾನವೇ ’ಆ್ಯಂಟಿ ವೋಕಿಸಂ’. ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ, ಜನಾಂಗೀಯ ನಿಂದನೆಯ ಬಗ್ಗೆ ಕಠಿಣ ಕ್ರಮಗಳು, ಜನ ಕಲ್ಯಾಣ ಯೋಜನೆಗಳು – ಹೀಗೆ ಜನಪರ ನೀತಿಗಳನ್ನೆಲ್ಲಾ ತೊಡೆದುಹಾಕಿ ’ಅಮೆರಿಕ ಫಸ್ಟ್’ ಎನಿಸಿಕೊಳ್ಳಬೇಕೆನ್ನುವ ’ಹುಸಿ ಶ್ರೇಷ್ಠತೆಯ’ ಧೋರಣೆಯೇ ಇದರ ಮೊದಲ ಆದ್ಯತೆ. ಮುಕ್ತ ಅಭಿವ್ಯಕ್ತಿ ಎಂಬುದು ಜವಾಬ್ದಾರಿ ಹೊತ್ತುಕೊಳ್ಳದ ಅಭಿವ್ಯಕ್ತಿ ಸ್ವಾತಂತ್ರ್ಯವಾಗಿ ಉಳಿಯಬೇಕೆಂಬ ವಾದ ಇವರದ್ದು. ಯಾವುದೇ ಮಟ್ಟದಲ್ಲಿ ಕೂಡ ಜನಾಂಗೀಯ, ಅಲ್ಪಸಂಖ್ಯಾತರ, ಮಹಿಳೆಯರ ಅವಮಾನ-ನಿಂದನೆಯನ್ನು ಮಾಡಲು ಸ್ವಾತಂತ್ರ್ಯ ಇರಬೇಕೆಂಬುದು ಇವರ ಫ್ರೀ ಸ್ಪೀಚ್ ವಾದದ ಉದ್ದೇಶ!

ಇದನ್ನೂ ಓದಿ: ದಿಲ್ಬರ್ಟ್, ರೋಲ್ಡ್ ಡಾಲ್ ಮತ್ತು ಎಚ್ಚೆತ್ತ ಮಾಧ್ಯಮಗಳ ಸುತ್ತ…

ಈ ವಿವೇಕ್ ರಾಮಸ್ವಾಮಿಯ ಕುಟುಂಬದವರು ಕೇರಳ ಮೂಲದ ಬ್ರಾಹ್ಮಣ ಜಾತಿಗೆ ಸೇರಿದವರು. ಇಲ್ಲಿನ ಬ್ರಾಹ್ಮಣ್ಯದ ’ಶ್ರೇಷ್ಠತೆಯ’ ಬಲಪಂಥೀಯತೆ ಮತ್ತು ಅಮೆರಿಕದಲ್ಲಿ ಹುಟ್ಟಿ ಬೆಳೆದು ಮೈಗೂಡಿಸಿಕೊಂಡಿರುವ ಕಾರ್ಪೊರೆಟ್ ಸಂಸ್ಕೃತಿಯ ಬಲಪಂಥೀಯತೆ ಒಟ್ಟಿಗೆ ಸೇರಿ ವಿವೇಕ್ ಅಮೆರಿಕದಲ್ಲಿ ಹೊಸ ಬಗೆಯ ಧ್ರುವೀಕರಣಕ್ಕೆ ನಾಂದಿ ಹಾಡುತ್ತಿದ್ದಾರೆ; ಡೊನಾಲ್ಡ್ ಟ್ರಂಪ್ ಮಾಡಿದ ಡ್ಯಾಮೇಜ್ ಏನೇನೂ ಸಾಲದೆಂಬಂತೆ. ಇಂತಹ ’ವೋಕ್-ಎಚ್ಚರ’ದ ವಿರುದ್ಧದ ಅಭಿಯಾನ ಮೀಸಲಾತಿ ವಿರೋಧಿಯಾಗಿ, ಖಾಸಗೀಕರಣದ ಪ್ರತಿಪಾದಕನಾಗಿ, ದೈತ್ಯ ಕಾರ್ಪೊರೆಟ್ ಕುಳಗಳ ಸಂರಕ್ಷರರಾಗಿ ಬೇರೆಬೇರೆ ಅವತಾರಗಳಲ್ಲಿ ಭಾರತದಲ್ಲಿಯೂ ನಮಗೆ ಕಾಣಸಿಗುತ್ತದೆ. ಅದು ಮುಂದೆ ಇನ್ನೂ ತೀವ್ರವಾಗುವುದರಲ್ಲಿ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಆಧುನಿಕ ಜಗತ್ತಿಗೆ ಬೇಕಾದ ಸಮಾನತೆಯ ಮೌಲ್ಯಗಳನ್ನು ಉಳಿಸಿಕೊಳ್ಳುವ ಬಗ್ಗೆ ಕಾಳಜಿಯನ್ನು ಸ್ವಲ್ಪವಾದರೂ ಉಳಿಸಿಕೊಂಡಿರುವ ರಾಜಕೀಯ ಪಕ್ಷಗಳು, ನಾಗರಿಕ ಸಮಾಜ ಮತ್ತು ನಾಗರಿಕ ಹಕ್ಕುಗಳ ಹೋರಾಟ ಗುಂಪುಗಳು ಸಕ್ರಿಯವಾಗಬೇಕಿದೆ.

2014ರಲ್ಲಿ ಕಪ್ಪು ವ್ಯಕ್ತಿಯೊಬ್ಬನನ್ನು ಅಮೆರಿಕದ ಪೊಲೀಸನೊಬ್ಬ ಕೊಂದಿದ್ದು ’ಬ್ಲಾಕ್ ಲೈವ್ಸ್ ಮ್ಯಾಟರ್‍ಸ್’ ಪ್ರತಿಭಟನೆಗಳಿಗೆ ಕಾರಣವಾಗಿತ್ತು. ಆಗ ’ಸ್ಟೇ ವೋಕ್’ ಅಥವಾ ’ವೋಕ್’ ಅತಿ ಹೆಚ್ಚು ಜನಪ್ರಿಯತೆ ಪಡೆದುಕೊಂಡಿತು. 2020ರಲ್ಲಿ ಯುಎಸ್‌ಎನ ಪೊಲೀಸನೊಬ್ಬ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ವ್ಯಕ್ತಿಯನ್ನು ಕತ್ತುಹಿಸುಕಿ ಸಾರ್ವಜನಿಕವಾಗಿಯೇ ಹತ್ಯೆ ಮಾಡಿದಾಗ ’ಬ್ಲಾಕ್ ಲೈವ್ಸ್ ಮ್ಯಾಟರ್‍ಸ್’ ತೀವ್ರ ಸ್ವರೂಪ ಪಡೆದುಕೊಂಡಿತು. ಇದು ಜಗತ್ತಿನಾದ್ಯಂತ ಜನಾಂಗೀಯ ಹಿಂಸೆಗಳ ಬಗ್ಗೆ ಚರ್ಚೆಗೆ ಕಾರಣವಾಯಿತು. ಜನಾಂಗೀಯ ನಿಂದನೆ ಮತ್ತು ಹಿಂಸೆಗಳ ಬಗ್ಗೆ ಜಾಗೃತಿ ತಳೆಯುವಂತೆ ಯುವ ಸಮುದಾಯವನ್ನು ಪ್ರಚೋದಿಸಿತು. ಭಾರತದಲ್ಲಿ ಜಾತಿನಿಂದನೆ ಮತ್ತು ಹಿಂಸೆಯ ಬಗ್ಗೆಗೂ ಚರ್ಚೆಗಳಾದವು. ಕೆಲಸದ ಸ್ಥಳಗಳಲ್ಲಿ ಜನರು ಹೆಚ್ಚು ಸಂವೇದನಾಶೀಲರಾಗಲು ತಳಸಮುದಾಯಗಳಿಂದ ಆಗ್ರಹ ಮೂಡಿಬಂತು. ಆಗ ಶೋಷಕ ಸಮುದಾಯಕ್ಕೆ ಸೇರಿದ ಕೆಲವರಾದರೂ ಎಚ್ಚೆತ್ತು ಸ್ಪಂದಿಸಲು ಪ್ರಾರಂಭಿಸಿದರು. ಅದರ ಜೊತೆಗೇ ಈ ಎಚ್ಚೆತ್ತ ಪ್ರಜ್ಞೆಯನ್ನು ಪ್ರಶ್ನಿಸುವ ಅವಮಾನಿಸುವ ವಿದ್ಯಮಾನಗಳೂ ಚುರುಕು ಪಡೆದವು. ಇಂದಿಗೂ ಈ ವಿವೇಕ್ ರಾಮಸ್ವಾಮಿ ’ಬ್ಲಾಕ್ ಲೈವ್ಸ್ ಮ್ಯಾಟರ್‍ಸ್’ಅನ್ನು ಗೇಲಿಮಾಡುವುದನ್ನು ತನ್ನ ಕಾಯಕವನ್ನಾಗಿಸಿಕೊಂಡಿದ್ದಾರೆ. ಅದಕ್ಕಾಗಿ ಆ ಚಳವಳಿಯಲ್ಲಿ ಭಾಗಿಯಾದವರ ಚಾರಿತ್ರ್ಯಹರಣಕ್ಕೂ ಮುಂದಾಗುತ್ತಾರೆ.

ಭಾರತದಲ್ಲಿ ಲೋಕಸಭಾ ಚುನಾವಣೆಗಳು 2024ರ ಮೊದಲ ಭಾಗದಲ್ಲಿ ಜರುಗಲಿವೆ. ಅಮೆರಿಕದ ಚುನಾವಣೆಗಳು 2024ರ ಕೊನೆಗೆ. ಅಮೆರಿಕದಲ್ಲಿ ರಿಪಬ್ಲಿಕನ್ ಪಕ್ಷ ತೀವ್ರ ಬಲಪಂಥೀಯತೆಯ ಹೊಸ ರೂಪದಲ್ಲಿ ಅವತರಿಸುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ. 2020ರಲ್ಲಿ ಹೇಗೋ ರಿವರ್ಸ್ ಪೋಲರೈಸೇಷನ್ ಸಾಧ್ಯವಾಗಿ ಟ್ರಂಪ್‌ನ ಸೋಲು ಸಾಧ್ಯವಾಗಿತ್ತು. ಆದರೆ ಟ್ರಂಪ್‌ಗಿಂತಲೂ ತನ್ನ ಪ್ರತಿಗಾಮಿ ಚಿಂತನೆಗಳನ್ನು ಪರಿಣಾಮಕಾರಿಯಾಗಿ ಮಂಡಿಸಬಲ್ಲ ವ್ಯಕ್ತಿತ್ವ ವಿವೇಕ್ ಅವರದ್ದು. ಇವರ ನರೆಟಿವ್‌ಅನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸುವ ಕಾರ್ಯಸ್ವರೂಪ ಡೆಮಾಕ್ರಟ್ ಪಕ್ಷದಿಂದ ದೊಡ್ಡಮಟ್ಟದಲ್ಲಿ ವ್ಯಕ್ತವಾಗಿಲ್ಲ. ಭಾರತದಲ್ಲಿಯೂ ಇದೇ ಸನ್ನಿವೇಶವನ್ನು ನಾವು ಮುಂಗಾಣಬಹುದಾಗಿದೆ. ಚುನಾವಣೆಗಳು ಹತ್ತಿರ ಬರುತ್ತಿದ್ದಂತೆ ಆಡಳಿತ ನಡೆಸುತ್ತಿರುವ ಬಲಪಂಥೀಯ ಪಕ್ಷ ಮರು ಆಯ್ಕೆಗಾಗಿ ಹಿಂದೆ ನಡೆಸಿದಂತೆಯೆ ಧ್ರುವೀಕರಣದ ತೀವ್ರ ಪ್ರಚಾರಾಭಿಯಾನ ನಡೆಸಲಿದೆ. ಇಲ್ಲಿನ ವಿರೋಧ ಪಕ್ಷಗಳು ಅದನ್ನು ಕೌಂಟರ್ ಮಾಡಲು ಸಜ್ಜಾಗಿವೆಯೇ? ರಾಷ್ಟ್ರವ್ಯಾಪಿ ಅಸ್ತಿತ್ವವಿದೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷದಲ್ಲಿಯೂ ಇಂದು ಜನಪರ-ಪ್ರಗತಿಪರ ನಿಲುವುಗಳನ್ನು ಮತ್ತು ಬಲಪಂಥೀಯ ನೀತಿಗಳ ವಿರುದ್ಧವಾದ ಪೊಸಿಶನ್‌ಅನ್ನು ತೆಗೆದುಕೊಳ್ಳುವ ಮುಖಂಡರುಗಳು ಕಾಣಿಸುತ್ತಿಲ್ಲ. ಸಂಪತ್ತಿನ ಅಸಮಾನತೆ, ಪ್ರಾತಿನಿಧ್ಯ, ಹವಾಮಾನ ವೈಪರೀತ್ಯ ಇಂತಹ ವಿಷಯಗಳು ಇಲ್ಲಿನ್ನೂ ಚುನಾವಣೆಯ ವಿಷಯಗಳಾಗುತ್ತಿಲ್ಲ. ಈ ನಿಟ್ಟಿನಲ್ಲಿ ನಾಗರಿಕ ಸಮಾಜದ ಜವಾಬ್ದಾರಿಯೇ ದೊಡ್ಡದಿದೆ ಎಂಬುದಂತೂ ನಿಚ್ಚಳ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಒಳಮೀಸಲಾತಿ ಇಲ್ಲದೆ 56 ಸಾವಿರ ಹುದ್ದೆಗಳ ನೇಮಕಾತಿ ಇಲ್ಲ: ಸಚಿವ ಮುನಿಯಪ್ಪ

“ಒಳಮೀಸಲಾತಿ ಇಲ್ಲದೆ ಒಂದೇ ಒಂದು ಹುದ್ದೆಯನ್ನೂ ನೇಮಕ ಮಾಡಲು ಬಿಡುವುದಿಲ್ಲ, ಮುಖ್ಯಮಂತ್ರಿಗಳು ಈ ಬಗ್ಗೆ ಒಪ್ಪಿಕೊಂಡಿದ್ದಾರೆ. 27ರಂದು ನಡೆಯುವ ಸಚಿವ ಸಂಪುಟ ಸಭೆ ನಮಗೆ ಚಾರಿತ್ರಿಕವಾಗಲಿದೆ. ಮುಖ್ಯಮಂತ್ರಿಗಳ ಮೇಲೆ ವಿಶ್ವಾಸ ಇರಲಿ” ಎಂದು...

ಪಶ್ಚಿಮ ಏಷ್ಯಾ ಸಂಘರ್ಷ| ‘ಈ ಯುದ್ಧವನ್ನು ಕೊನೆಗೊಳಿಸಲು ಒಂದೇ ಮಾರ್ಗ…’: ಮೂರು ಷರತ್ತುಗಳನ್ನು ಮುಂದಿಟ್ಟ ಇರಾನ್

ಇರಾನ್ ಅಧ್ಯಕ್ಷ ಮಸೌದ್ ಪೆಜೆಶ್ಕಿಯಾನ್ ಅವರು ಅಮೆರಿಕ ಮತ್ತು ಇಸ್ರೇಲ್ ಜೊತೆಗಿನ ನಡೆಯುತ್ತಿರುವ ಸಂಘರ್ಷವನ್ನು ಕೊನೆಗೊಳಿಸಲು ಮೂರು ಷರತ್ತುಗಳನ್ನು ನಿಗದಿಪಡಿಸಿದ್ದಾರೆ. ಇದರಲ್ಲಿ ದೇಶವು ಭವಿಷ್ಯದ ದಾಳಿಗಳನ್ನು ಎದುರಿಸುವುದಿಲ್ಲ ಎಂಬ ಖಾತರಿಗಳು ಸೇರಿವೆ. ಬುಧವಾರ ತಮ್ಮ...

ಖಾಸಗಿ ಜಾಗದ ನಮಾಝ್‌ಗೆ ಅಧಿಕಾರಿಗಳಿಂದ ಅಡ್ಡಿ : ಮುಸ್ಲಿಂ ವ್ಯಕ್ತಿಗೆ ಭದ್ರತೆ ಒದಗಿಸಲು ಕೋರ್ಟ್ ಆದೇಶ

ಉತ್ತರ ಪ್ರದೇಶದ ಬರೇಲಿ ಜಿಲ್ಲೆಯ ಮುಸ್ಲಿಂ ವ್ಯಕ್ತಿಯೊಬ್ಬರು ತಮ್ಮ ಖಾಸಗಿ ಜಾಗದಲ್ಲಿ ಇತರರೊಂದಿಗೆ ನಮಾಝ್ ಮಾಡುವುದಕ್ಕೆ ಅಡ್ಡಿಪಡಿಸಲಾಗಿದೆ ಎಂದು ಆರೋಪಿಸಿದ ಹಿನ್ನೆಲೆ, ಅವರಿಗೆ ದಿನದ 24 ಗಂಟೆಯೂ ರಕ್ಷಣೆ ನೀಡಲು ಇಬ್ಬರು ಭದ್ರತಾ...

‘ಒಳಮೀಸಲಾತಿ ಜಾರಿಗೆ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಬಿಡುತ್ತಿಲ್ಲ’: ಮಂದಕೃಷ್ಣ ಮಾದಿಗ ಆರೋಪ

‘ಒಳಮೀಸಲಾತಿ ಜಾರಿಗೆ ತರುತ್ತೇವೆಂದು ಹೇಳಿದ್ದ ಕಾಂಗ್ರೆಸ್, ಈಗ ಒಳಮೀಸಲಾತಿ ಅನುಷ್ಠಾನದಲ್ಲಿ ಮೀನಾಮೇಷ ಎಣಿಸುತ್ತಿದೆ. ಕಾಂಗ್ರೆಸ್ ನ ಹೈಕಮಾಂಡ್ ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಹಾಗೂ ಪ್ರಿಯಾಂಕಾ ಗಾಂಧಿ. ಈ ಮೂವರನ್ನು ನಿಯಂತ್ರಿಸುವವರು ಕಾಂಗ್ರೆಸ್...

ಸಾವರ್ಕರ್ ಕುರಿತು ಹೇಳಿಕೆ : ರಾಹುಲ್ ಗಾಂಧಿ ವಿರುದ್ಧದ ಮಾನನಷ್ಟ ಮೊಕದ್ದಮೆ ರದ್ದು

ಭಾರತ್ ಜೋಡೋ ಯಾತ್ರೆಯ ಸಂದರ್ಭದಲ್ಲಿ (2022ರಲ್ಲಿ) ಹಿಂದುತ್ವ ಸಿದ್ಧಾಂತವಾದಿ ವಿನಾಯಕ ದಾಮೋದರ್ ಸಾವರ್ಕರ್ ಕುರಿತು ನೀಡಿದ್ದ ಹೇಳಿಕೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿದ್ದ ಮಾನನಷ್ಟ ಮೊಕದ್ದಮೆಯನ್ನು...

‘ಒಳಮೀಸಲಾತಿ ಜಾರಿಯಲ್ಲಿ ಸರ್ಕಾರ ನಿರ್ಲಕ್ಷ್ಯ ಧೋರಣೆ ತೋರಿದರೆ ಹೋರಾಟ ವಿಧಾನಸೌಧಕ್ಕೆ ಸ್ಥಳಾಂತರವಾಗುತ್ತದೆ’: ಮಾದರ ಚೆನ್ನಯ್ಯ ಸ್ವಾಮೀಜಿ

ಕಳೆದ 35 ವರ್ಷಗಳಿಂದ ಹಲವಾರು ಹೋರಾಟಗಾರರು ತಮ್ಮ ಜೀವ-ಜೀವನವನ್ನು ಅರ್ಪಿಸಿ, ಮನೆ-ಮಠವನ್ನು ಬಿಟ್ಟು ಒಳಮೀಸಲಾತಿ ಹೋರಾಟವನ್ನು ಅಂತಿಮ ಘಟ್ಟಕ್ಕೆ ತಂದಿದ್ದಾರೆ. ಅನೇಕರು ಬದುಕನ್ನು ಮಾತ್ರವಲ್ಲ, ಪ್ರಾಣವನ್ನೂ ಕಳೆದುಕೊಂಡಿದ್ದಾರೆ. ಇದು 2ನೇ ಸ್ವಾತಂತ್ರ್ಯ ಹೋರಾಟವಾಗಿದೆ....

ಎಸ್‌ಎನ್‌ಡಿಪಿ ಪ್ರಧಾನ ಕಾರ್ಯದರ್ಶಿ ಹುದ್ದೆಯಿಂದ ವೆಳ್ಳಾಪ್ಪಳ್ಳಿ ನಟೇಶನ್ ಅನರ್ಹ

ಶ್ರೀ ನಾರಾಯಣ ಧರ್ಮ ಪರಿಪಾಲನ ಯೋಗಂ (ಎಸ್‌ಎನ್‌ಡಿಪಿ ಯೋಗಂ) ನ ಪ್ರಧಾನ ಕಾರ್ಯದರ್ಶಿ ಮತ್ತು ಮತ್ತು ಎಸ್‌ಎನ್ ಟ್ರಸ್ಟ್‌ನ ಕಾರ್ಯದರ್ಶಿ ಸ್ಥಾನದಿಂದ ವೆಳ್ಳಾಪ್ಪಳ್ಳಿ ನಟೇಶನ್ ಅವರನ್ನು ಕೇರಳ ಹೈಕೋರ್ಟ್ ಗುರುವಾರ (ಮಾ.12) ಅನರ್ಹಗೊಳಿಸಿದ್ದು,...

‘ಫಾರೂಕ್ ಅಬ್ದುಲ್ಲಾರನ್ನು ಕೊಲ್ಲುವುದು ಸರ್ಕಾರದ ಉದ್ದೇಶವೇ?’..ರಾಜ್ಯ ಸಭೆಯಲ್ಲಿ ಖರ್ಗೆ ಪ್ರಶ್ನೆ

ಜಮ್ಮು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಹಾಗೂ ನ್ಯಾಷನಲ್ ಕಾನ್ಫರೆನ್ಸ್ (ಎನ್‌ಸಿ) ಪಕ್ಷದ ಮುಖ್ಯಸ್ಥ ಫಾರೂಕ್ ಅಬ್ದುಲ್ಲಾ ಅವರ ಹತ್ಯೆ ಯತ್ನ ವಿಚಾರವನ್ನು ವಿಪಕ್ಷ ಸದಸ್ಯರು ಗುರುವಾರ (ಮಾ.12) ರಾಜ್ಯಸಭೆಯಲ್ಲಿ ಪ್ರಸ್ತಾಪಿಸಿದರು. ಘಟನೆ ಬಗ್ಗೆ...

56 ಸಾವಿರ ಹುದ್ದೆಗಳ ನೇಮಕಾತಿಯಲ್ಲಿ ಒಳಮೀಸಲಾತಿ ಅನ್ವಯಕ್ಕೆ ಆಗ್ರಹಿಸಿ ಎಡಗೈ ಸಮುದಾಯದಿಂದ ಬೃಹತ್ ಪ್ರತಿಭಟನೆ 

ಸರ್ಕಾರವು ಒಳ ಮೀಸಲಾತಿಯನ್ನು ತಪ್ಪಿಸುವ ಹುನ್ನಾರದಿಂದ ತರಾತುರಿಯಲ್ಲಿ 56,432 ಹುದ್ದೆಗಳ ನೇಮಕಾತಿಗೆ ಆದೇಶ ಹೊರಡಿಸಿದೆ. ನೇಮಕಾತಿಯಲ್ಲಿ ಒಳಮೀಸಲಾತಿ ಅಳವಡಿಸದೆ, ಎಡಗೈ ಸಮುದಾಯಗಳಿಗೆ ಸರ್ಕಾರ ಮತ್ತೆ ವಂಚಿಸುತ್ತಿದೆ ಎಂದು ‘ಒಳಮೀಸಲಾತಿ ಹೋರಾಟ ಸಮಿತಿ’ ಆರೋಪಿಸಿದೆ....

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧದ ಅವಿಶ್ವಾಸ ನಿರ್ಣಯಕ್ಕೆ ಸೋಲು

ಲೋಕಸಭೆ ಸ್ಪೀಕರ್ ಓಂ ಬಿರ್ಲಾ ವಿರುದ್ಧ ವಿರೋಧ ಪಕ್ಷಗಳು ಮಂಡಿಸಿದ್ದ ಅವಿಶ್ವಾಸ ನಿರ್ಣಯವು ಬುಧವಾರ (ಮಾ.11) ಧ್ವನಿ ಮತದ ಮೂಲಕ ತಿರಸ್ಕಾರಗೊಂಡಿದೆ. ಸದನದಲ್ಲಿ ವಿರೋಧ ಪಕ್ಷಗಳ ತೀವ್ರ ಗದ್ದಲ ಮತ್ತು ಘೋಷಣೆಗಳ ನಡುವೆಯೇ ಸ್ಪೀಕರ್...