Homeಅಂಕಣಗಳುಅಮೆರಿಕದಲ್ಲಿ ಬಲಪಂಥೀಯರ ಚುನಾವಣಾ ವಿಷಯವಾಗುತ್ತಿರುವ ‘ಆ್ಯಂಟಿ ವೋಕ್'!

ಅಮೆರಿಕದಲ್ಲಿ ಬಲಪಂಥೀಯರ ಚುನಾವಣಾ ವಿಷಯವಾಗುತ್ತಿರುವ ‘ಆ್ಯಂಟಿ ವೋಕ್’!

- Advertisement -
- Advertisement -

ದಿಲ್ಬರ್ಟ್ ಮತ್ತು ರೋಲ್ಡ್ ಡಾಲ್ ಹಾಗೂ ಎಚ್ಚೆತ್ತ ಮಾಧ್ಯಮಗಳ ಬಗ್ಗೆ ಕಳೆದ ವಾರ ಬರೆದ ಸಂಪಾದಕೀಯದಲ್ಲಿ, ಈ ಎಚ್ಚರಿಕೆಯನ್ನು ’ವೋಕ್ ಸಂಸ್ಕೃತಿ’ ಅಥವಾ ’ವೋಕಿಸಂ’ ಎಂಬ ಬಗೆದು ಹೀಗಳೆಯಲು ಹಲವರು ಪ್ರಯತ್ನಿಸುವ ಬಗ್ಗೆ ಪ್ರಸ್ತಾಪಿಸಿ ಲೇಖನವನ್ನು ಕೊನೆಗೊಳಿಸಲಾಗಿತ್ತು. ’ವೋಕ್-ವಿರೋಧಿ’ ಅಭಿಯಾನವನ್ನೇ ಪ್ರಧಾನವಾಗಿಟ್ಟುಕೊಂಡು ಯುಎಸ್‌ಎನ ರಿಪಬ್ಲಿಕನ್ ಪಕ್ಷದಿಂದ ಅಧ್ಯಕ್ಷೀಯ ಅಭ್ಯರ್ಥಿಯಾಗಲು ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ ಪ್ರಚಾರವನ್ನು ಪ್ರಾರಂಭಿಸಿದ್ದಾರೆ. ಇತ್ತೀಚೆಗೆ ವಿವೇಕ್ ಬಗ್ಗೆ ಸುದೀರ್ಘ ಲೇಖನವನ್ನು ಪ್ರಕಟಿಸಿದ್ದ ನ್ಯೂಯಾರ್ಕರ್ ಪತ್ರಿಕೆ ಅವರನ್ನು ’ಆಂಟಿ ವೋಕ್ ಇಂಕ್’ ಸಿಇಒ ಎಂದು ಕರೆದಿತ್ತು. 21ನೇ ಶತಮಾನದಲ್ಲಿ ಜನಾಂಗ, ಲಿಂಗತ್ವ, ಹವಾಮಾನ, ಸವಲತ್ತು, ಪ್ರಾತಿನಿಧ್ಯ ಮುಂತಾದ ಸಂಗತಿಗಳ ಬಗ್ಗೆ ಸಮಾಜ ಎಚ್ಚೆತ್ತುಕೊಳ್ಳುತ್ತಿರುವ ಅಥವಾ ಎಚ್ಚರಗೊಳ್ಳಬೇಕಿರುವ ಆಶಯದ ವಿರುದ್ಧ ಹೂಡಿರುವ ಈ ’ವೋಕ್-ವಿರೋಧಿ’ ಅಭಿಯಾನ ದಿನೇದಿನೇ ಬಲಪಂಥೀಯ ಮಾಧ್ಯಮಗಳಲ್ಲಿ ರಾರಾಜಿಸುತ್ತಿದೆ. ಅಮೆರಿಕದ ತೀವ್ರ ಬಲಪಂಥೀಯ ಟಿವಿ ಚಾನೆಲ್ ಆದ ಫಾಕ್ಸ್ ನ್ಯೂಸ್ ಕಾರ್ಯಕ್ರಮಗಳಲ್ಲಿ ವಿವೇಕ್ ರಾಮಸ್ವಾಮಿ ಕಾಯಂಆಗಿ ಹೋಗಿದ್ದಾರೆ ಎನ್ನುತ್ತವೆ ವರದಿಗಳು.

ಸ್ಯಾಂಪಲ್‌ಗೆ ವಿವೇಕ್ ಅವರ ಒಂದು ಟ್ವೀಟ್ ನೋಡಿ: “ನಾನು ಅಧ್ಯಕ್ಷನಾಗಿ, ಫೆಡೆರಲ್ ಕಾನೂನಾದ (ಯುಎಸ್‌ಎ ರಾಷ್ಟ್ರ ಮತ್ತು ರಾಜ್ಯಗಳು ಸೇರಿ ಮಾಡಿರುವ) ’ಅಫರ್ಮೆಟಿವ್ ಆಕ್ಷನ್’ ಅನ್ನು (ಅಂದರೆ, ಜನಾಂಗೀಯ ತಾರತಮ್ಯ ಕೊನೆಗಾಣಿಸಲು ನೀಡುವ ಮೀಸಲಾತಿ) ಕೊನೆಗೊಳಿಸುತ್ತೇನೆ. ಜನಾಂಗದ ಆಧಾರದ ಮೇಲೆ ಮೀಸಲಾತಿ ನೀಡುವ ಲಿಂಡನ್ ಜಾನ್ಸನ್ ಕಾರ್ಯಾಂಗ ಆದೇಶ 11246ವನ್ನು ವಾಪಸ್ ತೆಗೆದುಕೊಳ್ಳುತ್ತೇನೆ. ಜಾನ್ಸನ್ ನಂತರ ಪ್ರತಿ ರಿಪಬ್ಲಿಕನ್‌ಗೆ ಈ ಕೆಲಸ ಮಾಡುವ ಅವಕಾಶವಿತ್ತು. ನಾನು ಯಾವುದೇ ಕ್ಷಮೆ ಕೇಳದೆ ಮಾಡುತ್ತೇನೆ” ಎಂದು ಬರೆದುಕೊಂಡಿದ್ದಾರೆ. ಮತ್ತೊಂದು ಟ್ವೀಟ್‌ನಲ್ಲಿ “ಪ್ರತಿಭೆ, ಶ್ರೇಷ್ಠತೆ, ಸ್ವ-ಆಡಳಿತ, ಮುಕ್ತ ಅಭಿವ್ಯಕ್ತಿ. ಇದು ಹೊಸ ಅಮೆರಿಕನ್ ಡ್ರೀಮ್ ಎಂದು ಬರೆದುಕೊಳ್ಳುತ್ತಾರೆ. ಯಾವ ಮೌಲ್ಯಗಳನ್ನು ಮರುಮೌಲ್ಯಮಾಪನ ಮಾಡಿ ಸಮಾನತೆ, ಪ್ರಾತಿನಿಧ್ಯದ ಕಡೆಗೆ ಚಲಿಸಬೇಕೆಂದು ಎಚ್ಚೆತ್ತ ಮನಸ್ಸುಗಳು ತುಡಿಯುತ್ತಿವೆಯೋ ಅವನ್ನೆಲ್ಲಾ ಅವಮಾನಿಸಿ ವಿರೋಧಿಸುವ ಅಭಿಯಾನವೇ ’ಆ್ಯಂಟಿ ವೋಕಿಸಂ’. ಹವಾಮಾನ ಬದಲಾವಣೆಯ ಬಗ್ಗೆ ಕಾಳಜಿ, ಜನಾಂಗೀಯ ನಿಂದನೆಯ ಬಗ್ಗೆ ಕಠಿಣ ಕ್ರಮಗಳು, ಜನ ಕಲ್ಯಾಣ ಯೋಜನೆಗಳು – ಹೀಗೆ ಜನಪರ ನೀತಿಗಳನ್ನೆಲ್ಲಾ ತೊಡೆದುಹಾಕಿ ’ಅಮೆರಿಕ ಫಸ್ಟ್’ ಎನಿಸಿಕೊಳ್ಳಬೇಕೆನ್ನುವ ’ಹುಸಿ ಶ್ರೇಷ್ಠತೆಯ’ ಧೋರಣೆಯೇ ಇದರ ಮೊದಲ ಆದ್ಯತೆ. ಮುಕ್ತ ಅಭಿವ್ಯಕ್ತಿ ಎಂಬುದು ಜವಾಬ್ದಾರಿ ಹೊತ್ತುಕೊಳ್ಳದ ಅಭಿವ್ಯಕ್ತಿ ಸ್ವಾತಂತ್ರ್ಯವಾಗಿ ಉಳಿಯಬೇಕೆಂಬ ವಾದ ಇವರದ್ದು. ಯಾವುದೇ ಮಟ್ಟದಲ್ಲಿ ಕೂಡ ಜನಾಂಗೀಯ, ಅಲ್ಪಸಂಖ್ಯಾತರ, ಮಹಿಳೆಯರ ಅವಮಾನ-ನಿಂದನೆಯನ್ನು ಮಾಡಲು ಸ್ವಾತಂತ್ರ್ಯ ಇರಬೇಕೆಂಬುದು ಇವರ ಫ್ರೀ ಸ್ಪೀಚ್ ವಾದದ ಉದ್ದೇಶ!

ಇದನ್ನೂ ಓದಿ: ದಿಲ್ಬರ್ಟ್, ರೋಲ್ಡ್ ಡಾಲ್ ಮತ್ತು ಎಚ್ಚೆತ್ತ ಮಾಧ್ಯಮಗಳ ಸುತ್ತ…

ಈ ವಿವೇಕ್ ರಾಮಸ್ವಾಮಿಯ ಕುಟುಂಬದವರು ಕೇರಳ ಮೂಲದ ಬ್ರಾಹ್ಮಣ ಜಾತಿಗೆ ಸೇರಿದವರು. ಇಲ್ಲಿನ ಬ್ರಾಹ್ಮಣ್ಯದ ’ಶ್ರೇಷ್ಠತೆಯ’ ಬಲಪಂಥೀಯತೆ ಮತ್ತು ಅಮೆರಿಕದಲ್ಲಿ ಹುಟ್ಟಿ ಬೆಳೆದು ಮೈಗೂಡಿಸಿಕೊಂಡಿರುವ ಕಾರ್ಪೊರೆಟ್ ಸಂಸ್ಕೃತಿಯ ಬಲಪಂಥೀಯತೆ ಒಟ್ಟಿಗೆ ಸೇರಿ ವಿವೇಕ್ ಅಮೆರಿಕದಲ್ಲಿ ಹೊಸ ಬಗೆಯ ಧ್ರುವೀಕರಣಕ್ಕೆ ನಾಂದಿ ಹಾಡುತ್ತಿದ್ದಾರೆ; ಡೊನಾಲ್ಡ್ ಟ್ರಂಪ್ ಮಾಡಿದ ಡ್ಯಾಮೇಜ್ ಏನೇನೂ ಸಾಲದೆಂಬಂತೆ. ಇಂತಹ ’ವೋಕ್-ಎಚ್ಚರ’ದ ವಿರುದ್ಧದ ಅಭಿಯಾನ ಮೀಸಲಾತಿ ವಿರೋಧಿಯಾಗಿ, ಖಾಸಗೀಕರಣದ ಪ್ರತಿಪಾದಕನಾಗಿ, ದೈತ್ಯ ಕಾರ್ಪೊರೆಟ್ ಕುಳಗಳ ಸಂರಕ್ಷರರಾಗಿ ಬೇರೆಬೇರೆ ಅವತಾರಗಳಲ್ಲಿ ಭಾರತದಲ್ಲಿಯೂ ನಮಗೆ ಕಾಣಸಿಗುತ್ತದೆ. ಅದು ಮುಂದೆ ಇನ್ನೂ ತೀವ್ರವಾಗುವುದರಲ್ಲಿ ಸಂಶಯವಿಲ್ಲ. ಈ ನಿಟ್ಟಿನಲ್ಲಿ ಆಧುನಿಕ ಜಗತ್ತಿಗೆ ಬೇಕಾದ ಸಮಾನತೆಯ ಮೌಲ್ಯಗಳನ್ನು ಉಳಿಸಿಕೊಳ್ಳುವ ಬಗ್ಗೆ ಕಾಳಜಿಯನ್ನು ಸ್ವಲ್ಪವಾದರೂ ಉಳಿಸಿಕೊಂಡಿರುವ ರಾಜಕೀಯ ಪಕ್ಷಗಳು, ನಾಗರಿಕ ಸಮಾಜ ಮತ್ತು ನಾಗರಿಕ ಹಕ್ಕುಗಳ ಹೋರಾಟ ಗುಂಪುಗಳು ಸಕ್ರಿಯವಾಗಬೇಕಿದೆ.

2014ರಲ್ಲಿ ಕಪ್ಪು ವ್ಯಕ್ತಿಯೊಬ್ಬನನ್ನು ಅಮೆರಿಕದ ಪೊಲೀಸನೊಬ್ಬ ಕೊಂದಿದ್ದು ’ಬ್ಲಾಕ್ ಲೈವ್ಸ್ ಮ್ಯಾಟರ್‍ಸ್’ ಪ್ರತಿಭಟನೆಗಳಿಗೆ ಕಾರಣವಾಗಿತ್ತು. ಆಗ ’ಸ್ಟೇ ವೋಕ್’ ಅಥವಾ ’ವೋಕ್’ ಅತಿ ಹೆಚ್ಚು ಜನಪ್ರಿಯತೆ ಪಡೆದುಕೊಂಡಿತು. 2020ರಲ್ಲಿ ಯುಎಸ್‌ಎನ ಪೊಲೀಸನೊಬ್ಬ ಜಾರ್ಜ್ ಫ್ಲಾಯ್ಡ್ ಎಂಬ ಕಪ್ಪು ವ್ಯಕ್ತಿಯನ್ನು ಕತ್ತುಹಿಸುಕಿ ಸಾರ್ವಜನಿಕವಾಗಿಯೇ ಹತ್ಯೆ ಮಾಡಿದಾಗ ’ಬ್ಲಾಕ್ ಲೈವ್ಸ್ ಮ್ಯಾಟರ್‍ಸ್’ ತೀವ್ರ ಸ್ವರೂಪ ಪಡೆದುಕೊಂಡಿತು. ಇದು ಜಗತ್ತಿನಾದ್ಯಂತ ಜನಾಂಗೀಯ ಹಿಂಸೆಗಳ ಬಗ್ಗೆ ಚರ್ಚೆಗೆ ಕಾರಣವಾಯಿತು. ಜನಾಂಗೀಯ ನಿಂದನೆ ಮತ್ತು ಹಿಂಸೆಗಳ ಬಗ್ಗೆ ಜಾಗೃತಿ ತಳೆಯುವಂತೆ ಯುವ ಸಮುದಾಯವನ್ನು ಪ್ರಚೋದಿಸಿತು. ಭಾರತದಲ್ಲಿ ಜಾತಿನಿಂದನೆ ಮತ್ತು ಹಿಂಸೆಯ ಬಗ್ಗೆಗೂ ಚರ್ಚೆಗಳಾದವು. ಕೆಲಸದ ಸ್ಥಳಗಳಲ್ಲಿ ಜನರು ಹೆಚ್ಚು ಸಂವೇದನಾಶೀಲರಾಗಲು ತಳಸಮುದಾಯಗಳಿಂದ ಆಗ್ರಹ ಮೂಡಿಬಂತು. ಆಗ ಶೋಷಕ ಸಮುದಾಯಕ್ಕೆ ಸೇರಿದ ಕೆಲವರಾದರೂ ಎಚ್ಚೆತ್ತು ಸ್ಪಂದಿಸಲು ಪ್ರಾರಂಭಿಸಿದರು. ಅದರ ಜೊತೆಗೇ ಈ ಎಚ್ಚೆತ್ತ ಪ್ರಜ್ಞೆಯನ್ನು ಪ್ರಶ್ನಿಸುವ ಅವಮಾನಿಸುವ ವಿದ್ಯಮಾನಗಳೂ ಚುರುಕು ಪಡೆದವು. ಇಂದಿಗೂ ಈ ವಿವೇಕ್ ರಾಮಸ್ವಾಮಿ ’ಬ್ಲಾಕ್ ಲೈವ್ಸ್ ಮ್ಯಾಟರ್‍ಸ್’ಅನ್ನು ಗೇಲಿಮಾಡುವುದನ್ನು ತನ್ನ ಕಾಯಕವನ್ನಾಗಿಸಿಕೊಂಡಿದ್ದಾರೆ. ಅದಕ್ಕಾಗಿ ಆ ಚಳವಳಿಯಲ್ಲಿ ಭಾಗಿಯಾದವರ ಚಾರಿತ್ರ್ಯಹರಣಕ್ಕೂ ಮುಂದಾಗುತ್ತಾರೆ.

ಭಾರತದಲ್ಲಿ ಲೋಕಸಭಾ ಚುನಾವಣೆಗಳು 2024ರ ಮೊದಲ ಭಾಗದಲ್ಲಿ ಜರುಗಲಿವೆ. ಅಮೆರಿಕದ ಚುನಾವಣೆಗಳು 2024ರ ಕೊನೆಗೆ. ಅಮೆರಿಕದಲ್ಲಿ ರಿಪಬ್ಲಿಕನ್ ಪಕ್ಷ ತೀವ್ರ ಬಲಪಂಥೀಯತೆಯ ಹೊಸ ರೂಪದಲ್ಲಿ ಅವತರಿಸುವ ಸಾಧ್ಯತೆಯನ್ನು ಅಲ್ಲಗೆಳೆಯುವಂತಿಲ್ಲ. 2020ರಲ್ಲಿ ಹೇಗೋ ರಿವರ್ಸ್ ಪೋಲರೈಸೇಷನ್ ಸಾಧ್ಯವಾಗಿ ಟ್ರಂಪ್‌ನ ಸೋಲು ಸಾಧ್ಯವಾಗಿತ್ತು. ಆದರೆ ಟ್ರಂಪ್‌ಗಿಂತಲೂ ತನ್ನ ಪ್ರತಿಗಾಮಿ ಚಿಂತನೆಗಳನ್ನು ಪರಿಣಾಮಕಾರಿಯಾಗಿ ಮಂಡಿಸಬಲ್ಲ ವ್ಯಕ್ತಿತ್ವ ವಿವೇಕ್ ಅವರದ್ದು. ಇವರ ನರೆಟಿವ್‌ಅನ್ನು ಪರಿಣಾಮಕಾರಿಯಾಗಿ ಹಿಮ್ಮೆಟ್ಟಿಸುವ ಕಾರ್ಯಸ್ವರೂಪ ಡೆಮಾಕ್ರಟ್ ಪಕ್ಷದಿಂದ ದೊಡ್ಡಮಟ್ಟದಲ್ಲಿ ವ್ಯಕ್ತವಾಗಿಲ್ಲ. ಭಾರತದಲ್ಲಿಯೂ ಇದೇ ಸನ್ನಿವೇಶವನ್ನು ನಾವು ಮುಂಗಾಣಬಹುದಾಗಿದೆ. ಚುನಾವಣೆಗಳು ಹತ್ತಿರ ಬರುತ್ತಿದ್ದಂತೆ ಆಡಳಿತ ನಡೆಸುತ್ತಿರುವ ಬಲಪಂಥೀಯ ಪಕ್ಷ ಮರು ಆಯ್ಕೆಗಾಗಿ ಹಿಂದೆ ನಡೆಸಿದಂತೆಯೆ ಧ್ರುವೀಕರಣದ ತೀವ್ರ ಪ್ರಚಾರಾಭಿಯಾನ ನಡೆಸಲಿದೆ. ಇಲ್ಲಿನ ವಿರೋಧ ಪಕ್ಷಗಳು ಅದನ್ನು ಕೌಂಟರ್ ಮಾಡಲು ಸಜ್ಜಾಗಿವೆಯೇ? ರಾಷ್ಟ್ರವ್ಯಾಪಿ ಅಸ್ತಿತ್ವವಿದೆ ಎಂದು ಹೇಳಿಕೊಳ್ಳುವ ಕಾಂಗ್ರೆಸ್ ಪಕ್ಷದಲ್ಲಿಯೂ ಇಂದು ಜನಪರ-ಪ್ರಗತಿಪರ ನಿಲುವುಗಳನ್ನು ಮತ್ತು ಬಲಪಂಥೀಯ ನೀತಿಗಳ ವಿರುದ್ಧವಾದ ಪೊಸಿಶನ್‌ಅನ್ನು ತೆಗೆದುಕೊಳ್ಳುವ ಮುಖಂಡರುಗಳು ಕಾಣಿಸುತ್ತಿಲ್ಲ. ಸಂಪತ್ತಿನ ಅಸಮಾನತೆ, ಪ್ರಾತಿನಿಧ್ಯ, ಹವಾಮಾನ ವೈಪರೀತ್ಯ ಇಂತಹ ವಿಷಯಗಳು ಇಲ್ಲಿನ್ನೂ ಚುನಾವಣೆಯ ವಿಷಯಗಳಾಗುತ್ತಿಲ್ಲ. ಈ ನಿಟ್ಟಿನಲ್ಲಿ ನಾಗರಿಕ ಸಮಾಜದ ಜವಾಬ್ದಾರಿಯೇ ದೊಡ್ಡದಿದೆ ಎಂಬುದಂತೂ ನಿಚ್ಚಳ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...

ಸರ್ಕಾರ-ನ್ಯಾಯಾಂಗ ವ್ಯವಸ್ಥೆ ಕೈಬಿಟ್ಟರೆ ರಾಜ್ಯದ ಜನ ಅನಾಥರಾಗುತ್ತಾರೆ : ಹಿರಿಯ ಸಾಹಿತಿ ಬಿ.ಟಿ. ಲಲಿತಾ ನಾಯ್ಕ್

ಎಸ್‌ಐಆರ್‌ ವಿಚಾರದಲ್ಲಿ ಇಂದು ನಾಡಿನ ಜನತೆ ಭೀಕರ ಸಂಕಷ್ಟದಲ್ಲಿದ್ದಾರೆ. ಈ ಗೊಂದಲವನ್ನು ಉಂಟು ಮಾಡಿದವರು ಯಾರು? ಕೇಂದ್ರ ಸರ್ಕಾರವೋ ಅಥವಾ ಕರ್ನಾಟಕ ಸರ್ಕಾರದ ಅಲಕ್ಷ್ಯ ಇದಕ್ಕೆ ಕಾರಣವೇ? ಅಥವಾ ನಮಗೆ ಸಂಬಂಧವೇ ಇಲ್ಲ...

ಎಸ್ಐಆರ್ ಹೆಸರಿನಲ್ಲಿ ನಡೆಯುತ್ತಿರುವ ಜನವಿರೋಧಿ ಹುನ್ನಾರಗಳನ್ನು ಸೋಲಿಸಬೇಕಿದೆ: ಎಸ್. ವರಲಕ್ಷ್ಮಿ

ಬೆಂಗಳೂರು: ರಾಜ್ಯಾದ್ಯಂತ ಎಸ್ಐಆರ್ (SIR) ವಿರುದ್ಧ ನಡೆಯುತ್ತಿರುವ ಸಮಾವೇಶವು ಆಕ್ರಮಣಕಾರಿ ಧೋರಣೆಯ ವಿರುದ್ಧದ ಬೃಹತ್ ಪ್ರತಿರೋಧವಾಗಿದೆ ಎಂದು ಸಿಐಟಿಯು ರಾಜ್ಯ ಪ್ರಧಾನ ಕಾರ್ಯದರ್ಶಿ ಎಸ್. ವರಲಕ್ಷ್ಮಿ ತಿಳಿಸಿದರು. ಎಸ್ಐಆರ್ ಸಮಸ್ಯೆಯಲ್ಲ ಎಂದು ಬಿಂಬಿಸುವ ಸಂಘಪರಿವಾರದವರ...

ಮತದಾನ ನಮ್ಮ ಜನ್ಮಸಿದ್ದ ಹಕ್ಕು, ಎಸ್‌ಐಆರ್ ಕುರಿತು ಜನ ಜಾಗೃತಿ ಅಗತ್ಯ: ಪೀಟರ್ ಮಚಾಡೋ

'ಮತದಾನ ನಮ್ಮ ಜನ್ಮಸಿದ್ದ ಹಕ್ಕು ಅದನ್ನು ನಾವು ಬಿಟ್ಟು ಕೊಡುವುದಿಲ್ಲ' ಎಂದು ಕರ್ನಾಟಕ ಕ್ರೈಸ್ತ ಸಮುದಾಯದ ಮಹಾ ಧರ್ಮಾಧ್ಯಕ್ಷ ರೆವೆಂಡರ್ ಫಾದರ್ ಪೀಟರ್ ಮಚಾಡೋ ಹೇಳಿದರು. ಬೆಂಗಳೂರಿನ ಫ್ರೀಡಂ ಪಾರ್ಕ್‌ನಲ್ಲಿ...

ಸುರಿವ ಮಳೆಯಲ್ಲಿಯೂ ಎಸ್‌ಐಆರ್ ವಿರೋಧಿ ಜಾಥಾಕ್ಕೆ ಜೊತೆಯಾದ ಮಳವಳ್ಳಿ, ಮದ್ದೂರು, ಮಂಡ್ಯ ಜನತೆ

ಮಂಡ್ಯ: ಮಳವಳ್ಳಿಯ ಬಸ್ ನಿಲ್ದಾಣದ ಬಳಿ ಸುರಿವ ಮಳೆಯಲ್ಲಿಯೂ 'ಎಸ್‌ಐಆರ್ (SIR) ವಿರೋಧಿ ಕರ್ನಾಟಕ' ಜಾಥಾಕ್ಕೆ ಹೋರಾಟಗಾರರು, ಬರಹಗಾರರು, ಜನಚಳವಳಿಗಳ ಮುಖಂಡರು ಹಾಗೂ ಪ್ರಗತಿಪರರು ಬೆಂಬಲ ವ್ಯಕ್ತಪಡಿಸಿದರು‌. ಈ ವೇಳೆ ಎಸ್‌ಐಆರ್ ಕುರಿತು ಮಾತನಾಡಿದ...

ಚಿತ್ರದುರ್ಗದಲ್ಲಿ ಸಮಾರೋಪಗೊಂಡ ಮಾರ್ಗ -3 SIR ವಿರೋಧಿ ಜನಜಾಗೃತಿ ಜಾಥ: ಜೂನ್ 20ರ ಸಮಾವೇಶದ ಯಶಸ್ಸಿಗೆ ಕರೆ

ಚುನಾವಣಾ ಆಯೋಗ ಜಾರಿಗೆ ತರಲು ಹೊರಟಿರುವ ಎಸ್‌ಐಆರ್ (SIR) ವ್ಯವಸ್ಥೆಯನ್ನು ವಿರೋಧಿಸಿ ಹಮ್ಮಿಕೊಳ್ಳಲಾಗಿದ್ದ ‘ಎಸ್‌ಐಆರ್ ವಿರೋಧಿ ಜನಜಾಗೃತಿ ಜಾಥಾ’ವು ದಾವಣಗೆರೆಯಲ್ಲಿ ಪ್ರಚಾರ ಮುಗಿಸಿ ಚಿತ್ರದುರ್ಗವನ್ನು ತಲುಪಿದ್ದು, ಇಲ್ಲಿ ಯಶಸ್ವಿಯಾಗಿ ಸಮಾರೋಪಗೊಂಡಿದೆ. ಎದ್ದೇಳು ಕರ್ನಾಟಕ,...