Homeಮುಖಪುಟಗಾಝಾ ಮೇಲಿನ ದಾಳಿಗೆ US ಬೆಂಬಲ: ಅಮೆರಿಕದ ದೀಪಾವಳಿ ಪಾರ್ಟಿ ಆಹ್ವಾನ ತಿರಸ್ಕರಿಸಿದ ಕವಯಿತ್ರಿ

ಗಾಝಾ ಮೇಲಿನ ದಾಳಿಗೆ US ಬೆಂಬಲ: ಅಮೆರಿಕದ ದೀಪಾವಳಿ ಪಾರ್ಟಿ ಆಹ್ವಾನ ತಿರಸ್ಕರಿಸಿದ ಕವಯಿತ್ರಿ

- Advertisement -
- Advertisement -

ಗಾಝಾದ ಮೇಲೆ ಇಸ್ರೇಲ್‌ ಘೋಷಿಸಿದ ಯುದ್ಧವನ್ನು ಅಮೆರಿಕ ಬೆಂಬಲಿಸಿದ್ದಕ್ಕೆ, ಭಾರತೀಯ ಮೂಲದ ಕವಯಿತ್ರಿ ರೂಪಿ ಕೌರ್ ಅವರು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಕಳುಹಿಸಿದ ದೀಪಾವಳಿ ಪಾರ್ಟಿಯ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್‌ ದಾಳಿಯ ವೇಳೆ ಯುದ್ಧವನ್ನು ಅಮೆರಿಕ ಬೆಂಬಲಿಸಿರುವುದು, ಇಂತಹ ಸನ್ನಿವೇಶದಲ್ಲಿ ದೀಪಾವಳಿ ಆಚರಿಸುವುದು ಅಚ್ಚರಿ ತಂದಿದೆ ರೂಪಿ ಕೌರ್ ಅವರು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಕೆನಡಾದ ಬರಹಗಾರ್ತಿ ರೂಪಿ ಕೌರ್ ಬರೆದುಕೊಂಡಿದ್ದು, ನಾಗರಿಕರ ಮೇಲಿನ ಅದರಲ್ಲೂ 50% ಮಕ್ಕಳ ಸಾಮೂಹಿಕ ಶಿಕ್ಷೆಯನ್ನು ಬೆಂಬಲಿಸುವ ದೇಶದ ಯಾವುದೇ ಆಹ್ವಾನವನ್ನು ನಾನು  ತಿರಸ್ಕರಿಸುತ್ತೇನೆ ಎಂದು ಹೇಳಿದ್ದಾರೆ.

ಇಂದು ಅಮೆರಿಕ ಸರ್ಕಾರವು ಗಾಝಾದ ಮೇಲೆ ಬಾಂಬ್ ದಾಳಿಗೆ ಧನಸಹಾಯ ಮಾತ್ರ ನೀಡುತ್ತಿಲ್ಲ, ಅವರು ಪ್ಯಾಲೆಸ್ತೀನಿಯನ್ನರ ವಿರುದ್ಧದ  ನರಮೇಧವನ್ನು ಸಮರ್ಥಿಸುತ್ತಿದ್ದಾರೆ. ಎಷ್ಟು ನಿರಾಶ್ರಿತರ ಶಿಬಿರಗಳು, ಆರೋಗ್ಯ ಸೌಲಭ್ಯಗಳು ಮತ್ತು ಆರಾಧನಾ ಸ್ಥಳಗಳನ್ನು ಸ್ಫೋಟಿಸಲಾಗಿದೆ ಎಂಬುದನ್ನು ಲೆಕ್ಕಹಾಕಿದೆಯಾ ಎಂದು ಕೌರ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಯುಎಸ್ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲು ಅವರು ದಕ್ಷಿಣ-ಏಷ್ಯಾದ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಕಮಲಾ ಹ್ಯಾರಿಸ್ ಕಳೆದ ರಾತ್ರಿ ವಾಷಿಂಗ್ಟನ್‌ನಲ್ಲಿರುವ ತನ್ನ ಅಧಿಕೃತ ನಿವಾಸದಲ್ಲಿ ಸುಮಾರು 300 ಜನರೊಂದಿಗೆ ದೀಪಾವಳಿಯನ್ನು ಆಚರಿಸಿದ್ದು, ಅದರಲ್ಲಿ ಹೆಚ್ಚಿನವರು ಭಾರತೀಯರು ಭಾಗಿಯಾಗಿದ್ದರು.  ಈ ಆಚರಣೆಯನ್ನು ಬಹಿಷ್ಕರಿಸಲು ಹಲವು ಗುಂಪುಗಳು ಕರೆ ನೀಡಿದ್ದವು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಹ್ಯಾರಿಸ್, ಯುದ್ಧದ ಬಗ್ಗೆ ಬಿಡೆನ್ ಆಡಳಿತದ ನಿಲುವನ್ನು  ಪುನರುಚ್ಛರಿಸಿದ್ದರು. ಅಧ್ಯಕ್ಷ ಜೋ ಬಿಡೆನ್ ಮತ್ತು ನಾನು, ತನ್ನನ್ನು ತಾನು ರಕ್ಷಿಸಿಕೊಳ್ಳುವ ಇಸ್ರೇಲ್‌ನ ನಿಲುವನ್ನು ಬೆಂಬಲಿಸಲು ಕೆಲಸ ಮಾಡುತ್ತಿದ್ದೇವೆ ಎಂದು ಎಲ್ಲರೊಂದಿಗೆ ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. ಗಾಝಾದಲ್ಲಿರುವ ಜನರಿಗೆ ಮಾನವೀಯ ನೆರವು ನೀಡಬೇಕಾದ ಅಗತ್ಯವನ್ನು ನಾವು ಬೆಂಬಲಿಸುತ್ತೇವೆ ಎಂದು ಅವರು ಹೇಳಿದರು.

ಅ.7ರ ದಾಳಿಯ ನಂತರ ಹಮಾಸ್‌ನಿಂದ ಗಾಝಾದಲ್ಲಿ ಒತ್ತೆಯಾಳಾಗಿರಿಸಿದ್ದ 240 ಜನರನ್ನು ಉಲ್ಲೇಖಿಸಿದ ಹ್ಯಾರಿಸ್, ನಮಗೆ ಅಮೇರಿಕನ್ ಒತ್ತೆಯಾಳುಗಳನ್ನು ದೇಶಕ್ಕೆ ಕರೆತರುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ. ಪ್ಯಾಲೆಸ್ತೀನ್‌ ಜನರಿಗೆ ಹಕ್ಕಿದೆ,  ಅವರು ಸ್ವ-ನಿರ್ಣಯ ಮತ್ತು ಘನತೆ ಹೊಂದಲು ಅರ್ಹರು. ನಾವು ಅದನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ ಎಂದು ಹ್ಯಾರಿಸ್ ಇದೇ ವೇಳೆ ಹೇಳಿದರು.

ಇದನ್ನು ಓದಿ: ಗಾಝಾ ನರಮೇಧವನ್ನು ಬೆಂಬಲಿಸುವ ಸರಕಾರಗಳಿಗೆ ನಾಚಿಕೆಯಾಗಬೇಕು; ಪ್ರಿಯಾಂಕ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

TMC ಅಧ್ಯಕ್ಷ ಸ್ಥಾನದಿಂದ ಮಮತಾ ಬ್ಯಾನರ್ಜಿಯನ್ನು ಉಚ್ಚಾಟಿಸಿದ ತೃಣಮೂಲ ಬಂಡಾಯ ಶಾಸಕರು

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣಾ ಸೋಲಿನ ಬೆನ್ನಲ್ಲೇ ತೃಣಮೂಲ ಕಾಂಗ್ರೆಸ್ ಪಕ್ಷವು ಇತಿಹಾಸದಲ್ಲೇ ಕಾಣದ ಅತ್ಯಂತ ದೊಡ್ಡ ಬಂಡಾಯಕ್ಕೆ ಸಾಕ್ಷಿಯಾಗಿದೆ. ಬಂಡಾಯ ಶಾಸಕರ ನೇತೃತ್ವ ವಹಿಸಿರುವ ಋತಬ್ರತಾ ಬ್ಯಾನರ್ಜಿ ಸೋಮವಾರ ಮಮತಾ ಬ್ಯಾನರ್ಜಿ...

ಯುಪಿ: ಮೊಹರಂ ಮೆರವಣಿಗೆಯಲ್ಲಿ ಪಿತೂರಿ: ಪಾಕ್ ಪರ ಘೋಷಣೆಯ ಸುಳ್ಳು ವಿಡಿಯೋ ಹರಿಬಿಟ್ಟ ಇಬ್ಬರು ಹಿಂದುತ್ವವಾದಿಗಳ ಬಂಧನ 

ಬರೇಲಿ (ಉತ್ತರ ಪ್ರದೇಶ): ಮೊಹರಂ ಮೆರವಣಿಗೆಯೊಂದರಲ್ಲಿ "ಪಾಕಿಸ್ತಾನ್ ಜಿಂದಾಬಾದ್" ಎಂದು ದೇಶವಿರೋಧಿ ಘೋಷಣೆ ಕೂಗಲಾಗಿದೆ ಎಂಬ ನಕಲಿ ವೀಡಿಯೋ ಸೃಷ್ಟಿಸಿ, ಮುಸ್ಲಿಂ ಸಮುದಾಯದ ಮೇಲೆ ಸುಳ್ಳು ಆರೋಪ ಹೊರಿಸಲು ಯತ್ನಿಸಿದ ಇಬ್ಬರು ಹಿಂದುತ್ವವಾದಿ...

ಮಕ್ಕಳಿಗೆ ಆರ್‌ಎಸ್‌ಎಸ್‌ ತರಬೇತಿ ನೀಡುವುದನ್ನು ಟೀಕಿಸಿ ವಿಡಿಯೋ ಹಂಚಿಕೆ : ಯುವಕನನ್ನು ವಶಕ್ಕೆ ಪಡೆದ ಪೊಲೀಸರು!

ರಾಜಸ್ಥಾನದ ಜುಂಜುನು ಜಿಲ್ಲೆಯ ನವೀನ್ ಚೌಧರಿ ಎಂಬ 25 ವರ್ಷದ ಯುವಕ, ರಾಷ್ಟ್ರೀಯ ಸ್ವಯಂಸೇವಕ ಸಂಘ (ಆರ್‌ಎಸ್‌ಎಸ್‌) ಕುರಿತು ಸಾಮಾಜಿಕ ಜಾಲತಾಣ ಇನ್‌ಸ್ಟಾಗ್ರಾಮ್‌ನಲ್ಲಿ ವಿಡಿಯೋವೊಂದನ್ನು ಹಂಚಿಕೊಂಡಿದ್ದರು. 'ಜುಂಜುನು ಎಕ್ಸ್‌ಪ್ರೆಸ್' ಎಂಬ ಇನ್‌ಸ್ಟಾಗ್ರಾಮ್ ಪೇಜ್‌ನಲ್ಲಿ...

ಮುಂಗಾರು ಮಳೆ ಕೊರತೆ: ಇಡೀ ದೇಶದಲ್ಲಿ ಆತಂಕದ ಕಾರ್ಮೋಡ

ಭಾರತದ ಆಕಾಶದಲ್ಲಿ ಸದ್ಯ ಮೂಡುತ್ತಿರುವ ಉಪಗ್ರಹ ಚಿತ್ರಗಳು ಮತ್ತು ಹವಾಮಾನ ಇಲಾಖೆಯ ದತ್ತಾಂಶಗಳು ದೇಶಕ್ಕೆ ದೊಡ್ಡ ಗಂಡಾಂತರದ ಮುನ್ಸೂಚನೆ ನೀಡುತ್ತಿವೆ. ಕೃಷಿ ಚಟುವಟಿಕೆಗಳ ಅತ್ಯಂತ ನಿರ್ಣಾಯಕ ಅವಧಿಯಾದ ಜೂನ್ ತಿಂಗಳಲ್ಲೇ ಮುಂಗಾರು ಮಳೆ...

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? : ಬಿ.ಕೆ ಹರಿಪ್ರಸಾದ್

ನೀಟ್ ಪರೀಕ್ಷೆ ಪದೇ ಪದೇ ಬರೆಯುವಂತೆ ಮಾಡಿದ್ದು ಯಾರು? ಬಿಜೆಪಿ ನಾಯಕರ ಆರೋಪಗಳನ್ನು ನೋಡಿದರೆ, ತಪ್ಪು ಮಾಡಿದವರೇ ಉಪದೇಶ ಮಾಡುವ ಸ್ಥಿತಿಗೆ ಬಂದಂತಿದೆ ಎಂದು ಕೆಪಿಸಿಸಿ ನೂತನ ಅಧ್ಯಕ್ಷ ಬಿ.ಕೆ ಹರಿಪ್ರಸಾದ್ ಹೇಳಿದರು....

ಎಸ್‌ಐಆರ್‌ನಲ್ಲಿ ಕೈಬಿಟ್ಟ ವ್ಯಕ್ತಿ ಕುರಿತು ಮಹತ್ವದ ಹೇಳಿಕೆ ನೀಡಿದ ಸುಪ್ರೀಂ ಕೋರ್ಟ್

ವಿಶೇಷ ತೀವ್ರ ಪರಿಷ್ಕರಣೆಯ (Special Intensive Revision) ಸಂದರ್ಭದಲ್ಲಿ ಮತದಾರರ ಪಟ್ಟಿಯಿಂದ ಹೆಸರು ಕೈಬಿಟ್ಟಿರುವ ಅಥವಾ ಹೊರಗಿಟ್ಟಿರುವ ಬಂಗಾಳದ ಮುರ್ಷಿದಾಬಾದ್‌ನ 75 ವರ್ಷದ ವಕೀಲರೊಬ್ಬರು "ಪಶ್ಚಿಮ ಬಂಗಾಳದ ನಿಜವಾದ ಮತ್ತು ವಿಶ್ವಾಸಾರ್ಹ ನಾಗರಿಕ" ನಂತೆ...

ನೀಟ್ ಅಕ್ರಮ, ವ್ಯವಸ್ಥೆಯ ವೈಫಲ್ಯಕ್ಕೆ ಮತ್ತೊಂದು ಬಲಿ: ಮರು ಪರೀಕ್ಷೆ ಹಿಂದಿನ ದಿನವೇ ಆತ್ಮಹತ್ಯೆಗೆ ಶರಣಾದ ಪ್ರತಿಭಾವಂತ ವಿದ್ಯಾರ್ಥಿನಿ 

ಹೈದರಾಬಾದ್: ದೇಶದಲ್ಲಿ ವೈದ್ಯಕೀಯ ಶಿಕ್ಷಣದ ಪ್ರವೇಶಾತಿಗಾಗಿ ನಡೆಯುವ ರಾಷ್ಟ್ರೀಯ ಅರ್ಹತಾ ಮತ್ತು ಪ್ರವೇಶ ಪರೀಕ್ಷೆಯ (NEET) ಸುತ್ತ ಹಬ್ಬಿರುವ ಅಕ್ರಮಗಳ ಜಾಲ ಮತ್ತು ವ್ಯವಸ್ಥೆಯ ನಿರಂತರ ಗೊಂದಲಗಳು ಮತ್ತೊಂದು ಯುವ ಜೀವವನ್ನು ಬಲಿಪಡೆದಿವೆ.  ಜೂನ್...

ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿ ಮುಂದುವರೆದ ಸಿಜೆಪಿ ಪ್ರತಿಭಟನೆ; ಪ್ರಧಾನ್ ರಾಜೀನಾಮೆಗೆ ಪಟ್ಟು

ಪರೀಕ್ಷಾ ಅಕ್ರಮಗಳು ಮತ್ತು ಮೇ 3 ರ ನೀಟ್ ಪತ್ರಿಕೆ ಸೋರಿಕೆಯ ವಿರುದ್ಧ ತಮ್ಮ ಪ್ರತಿಭಟನೆಯನ್ನು ಮುಂದುವರಿಸಿರುವ ಜಿರಳೆ ಜನತಾ ಪಕ್ಷ (ಸಿಜೆಪಿ) ಸೋಮವಾರ ಸತತ ಮೂರನೇ ದಿನವೂ ಜಂತರ್ ಮಂತರ್‌ನಲ್ಲಿಯೇ ಕುಳಿತಿದ್ದಾರೆ. ಶನಿವಾರ...

ಸಂವಿಧಾನದ ಬುಡಕ್ಕೆ ಕೊಡಲಿ ಏಟು: ಆರ್‌ಎಸ್‌ಎಸ್-ಬಿಜೆಪಿಯ ಷಡ್ಯಂತ್ರ ಸೋಲಿಸಲು ಎರಡನೇ ಸ್ವಾತಂತ್ರ್ಯ ಸಂಗ್ರಾಮ ಅನಿವಾರ್ಯ – ಬಿ.ಕೆ. ಹರಿಪ್ರಸಾದ್

ಎಸ್‌ಐಆರ್ (SIR) ವಿರೋಧಿ ಹೋರಾಟದಲ್ಲಿ ನಮ್ಮ ಪಕ್ಷ ನಿಮ್ಮ ಜೊತೆಗಿದೆ ಎಂದು ಹೇಳಲು ಸರ್ಕಾರದ ಪ್ರತಿನಿಧಿಯಾಗಿ ನಾನು ಇಲ್ಲಿ ಬಂದಿದ್ದೇನೆ. ನೀವು ಮಂಡಿಸಿರುವ ಹಕ್ಕೊತ್ತಾಯಗಳ ಕುರಿತು ನೂತನ ಮುಖ್ಯಮಂತ್ರಿಗಳು, ಸಿದ್ದರಾಮಯ್ಯ ಸೇರಿದಂತೆ ಪಕ್ಷದ...

ಮತದಾರರ ಪಟ್ಟಿಯಿಂದ 65 ಲಕ್ಷ ಜನರನ್ನು ಹೊರಹಾಕಿದ್ದು ಯಾರು? ಈ ಅಕ್ರಮಕ್ಕೆ ಚುನಾವಣಾ ಆಯೋಗವೇ ಉತ್ತರಿಸಬೇಕು: ಮೊಹಮ್ಮದ್ ಯೂಸುಫ್ ಕನ್ನಿ

"ಬ್ರಿಟಿಷರ ವಿರುದ್ಧ ಹೋರಾಡಿ ದೇಶಕ್ಕೆ ಸ್ವಾತಂತ್ರ್ಯ ತಂದುಕೊಟ್ಟಿದ್ದೇವೆ. 1952ರ ಮೊದಲ ಚುನಾವಣೆಯ ಸಂದರ್ಭದಲ್ಲಿ ಸುಮಾರು 17.32 ಕೋಟಿ ಮತದಾರರಿದ್ದರು. 1955ರಲ್ಲಿ ಸಿಟಿಜನ್‌ಶಿಪ್ ಆಕ್ಟ್ ಜಾರಿಯಾದ ಬಳಿಕ ನಡೆದ 1957ರ ಚುನಾವಣೆಯಲ್ಲಿ ಈ ಸಂಖ್ಯೆ...