Homeಮುಖಪುಟಗಾಝಾ ಮೇಲಿನ ದಾಳಿಗೆ US ಬೆಂಬಲ: ಅಮೆರಿಕದ ದೀಪಾವಳಿ ಪಾರ್ಟಿ ಆಹ್ವಾನ ತಿರಸ್ಕರಿಸಿದ ಕವಯಿತ್ರಿ

ಗಾಝಾ ಮೇಲಿನ ದಾಳಿಗೆ US ಬೆಂಬಲ: ಅಮೆರಿಕದ ದೀಪಾವಳಿ ಪಾರ್ಟಿ ಆಹ್ವಾನ ತಿರಸ್ಕರಿಸಿದ ಕವಯಿತ್ರಿ

- Advertisement -
- Advertisement -

ಗಾಝಾದ ಮೇಲೆ ಇಸ್ರೇಲ್‌ ಘೋಷಿಸಿದ ಯುದ್ಧವನ್ನು ಅಮೆರಿಕ ಬೆಂಬಲಿಸಿದ್ದಕ್ಕೆ, ಭಾರತೀಯ ಮೂಲದ ಕವಯಿತ್ರಿ ರೂಪಿ ಕೌರ್ ಅವರು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಕಳುಹಿಸಿದ ದೀಪಾವಳಿ ಪಾರ್ಟಿಯ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್‌ ದಾಳಿಯ ವೇಳೆ ಯುದ್ಧವನ್ನು ಅಮೆರಿಕ ಬೆಂಬಲಿಸಿರುವುದು, ಇಂತಹ ಸನ್ನಿವೇಶದಲ್ಲಿ ದೀಪಾವಳಿ ಆಚರಿಸುವುದು ಅಚ್ಚರಿ ತಂದಿದೆ ರೂಪಿ ಕೌರ್ ಅವರು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಕೆನಡಾದ ಬರಹಗಾರ್ತಿ ರೂಪಿ ಕೌರ್ ಬರೆದುಕೊಂಡಿದ್ದು, ನಾಗರಿಕರ ಮೇಲಿನ ಅದರಲ್ಲೂ 50% ಮಕ್ಕಳ ಸಾಮೂಹಿಕ ಶಿಕ್ಷೆಯನ್ನು ಬೆಂಬಲಿಸುವ ದೇಶದ ಯಾವುದೇ ಆಹ್ವಾನವನ್ನು ನಾನು  ತಿರಸ್ಕರಿಸುತ್ತೇನೆ ಎಂದು ಹೇಳಿದ್ದಾರೆ.

ಇಂದು ಅಮೆರಿಕ ಸರ್ಕಾರವು ಗಾಝಾದ ಮೇಲೆ ಬಾಂಬ್ ದಾಳಿಗೆ ಧನಸಹಾಯ ಮಾತ್ರ ನೀಡುತ್ತಿಲ್ಲ, ಅವರು ಪ್ಯಾಲೆಸ್ತೀನಿಯನ್ನರ ವಿರುದ್ಧದ  ನರಮೇಧವನ್ನು ಸಮರ್ಥಿಸುತ್ತಿದ್ದಾರೆ. ಎಷ್ಟು ನಿರಾಶ್ರಿತರ ಶಿಬಿರಗಳು, ಆರೋಗ್ಯ ಸೌಲಭ್ಯಗಳು ಮತ್ತು ಆರಾಧನಾ ಸ್ಥಳಗಳನ್ನು ಸ್ಫೋಟಿಸಲಾಗಿದೆ ಎಂಬುದನ್ನು ಲೆಕ್ಕಹಾಕಿದೆಯಾ ಎಂದು ಕೌರ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಯುಎಸ್ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲು ಅವರು ದಕ್ಷಿಣ-ಏಷ್ಯಾದ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಕಮಲಾ ಹ್ಯಾರಿಸ್ ಕಳೆದ ರಾತ್ರಿ ವಾಷಿಂಗ್ಟನ್‌ನಲ್ಲಿರುವ ತನ್ನ ಅಧಿಕೃತ ನಿವಾಸದಲ್ಲಿ ಸುಮಾರು 300 ಜನರೊಂದಿಗೆ ದೀಪಾವಳಿಯನ್ನು ಆಚರಿಸಿದ್ದು, ಅದರಲ್ಲಿ ಹೆಚ್ಚಿನವರು ಭಾರತೀಯರು ಭಾಗಿಯಾಗಿದ್ದರು.  ಈ ಆಚರಣೆಯನ್ನು ಬಹಿಷ್ಕರಿಸಲು ಹಲವು ಗುಂಪುಗಳು ಕರೆ ನೀಡಿದ್ದವು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಹ್ಯಾರಿಸ್, ಯುದ್ಧದ ಬಗ್ಗೆ ಬಿಡೆನ್ ಆಡಳಿತದ ನಿಲುವನ್ನು  ಪುನರುಚ್ಛರಿಸಿದ್ದರು. ಅಧ್ಯಕ್ಷ ಜೋ ಬಿಡೆನ್ ಮತ್ತು ನಾನು, ತನ್ನನ್ನು ತಾನು ರಕ್ಷಿಸಿಕೊಳ್ಳುವ ಇಸ್ರೇಲ್‌ನ ನಿಲುವನ್ನು ಬೆಂಬಲಿಸಲು ಕೆಲಸ ಮಾಡುತ್ತಿದ್ದೇವೆ ಎಂದು ಎಲ್ಲರೊಂದಿಗೆ ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. ಗಾಝಾದಲ್ಲಿರುವ ಜನರಿಗೆ ಮಾನವೀಯ ನೆರವು ನೀಡಬೇಕಾದ ಅಗತ್ಯವನ್ನು ನಾವು ಬೆಂಬಲಿಸುತ್ತೇವೆ ಎಂದು ಅವರು ಹೇಳಿದರು.

ಅ.7ರ ದಾಳಿಯ ನಂತರ ಹಮಾಸ್‌ನಿಂದ ಗಾಝಾದಲ್ಲಿ ಒತ್ತೆಯಾಳಾಗಿರಿಸಿದ್ದ 240 ಜನರನ್ನು ಉಲ್ಲೇಖಿಸಿದ ಹ್ಯಾರಿಸ್, ನಮಗೆ ಅಮೇರಿಕನ್ ಒತ್ತೆಯಾಳುಗಳನ್ನು ದೇಶಕ್ಕೆ ಕರೆತರುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ. ಪ್ಯಾಲೆಸ್ತೀನ್‌ ಜನರಿಗೆ ಹಕ್ಕಿದೆ,  ಅವರು ಸ್ವ-ನಿರ್ಣಯ ಮತ್ತು ಘನತೆ ಹೊಂದಲು ಅರ್ಹರು. ನಾವು ಅದನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ ಎಂದು ಹ್ಯಾರಿಸ್ ಇದೇ ವೇಳೆ ಹೇಳಿದರು.

ಇದನ್ನು ಓದಿ: ಗಾಝಾ ನರಮೇಧವನ್ನು ಬೆಂಬಲಿಸುವ ಸರಕಾರಗಳಿಗೆ ನಾಚಿಕೆಯಾಗಬೇಕು; ಪ್ರಿಯಾಂಕ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ನುಡಿಯು ಸಿರಿಯಲ್ಲ ಬದುಕು’ ಕರಾವಳಿಯಲ್ಲಿ ಮತ್ತೆ ಪ್ರತಿರೋಧದ ಧ್ವನಿ: ನವೆಂಬರ್ 28-29ಕ್ಕೆ ‘ಜನನುಡಿ-2026’

"ನವೆಂಬರ್ ಕೊನೆಯ ಶನಿವಾರ ಮತ್ತು ಭಾನುವಾರ ಮಂಗಳೂರಿನಲ್ಲಿ ಕೇವಲ ವಿಚಾರ ಸಂಕಿರಣ ಮಾತ್ರವಲ್ಲ, ಹರಟೆ, ಚರ್ಚೆ, ಸೌಹಾರ್ದತೆಯ ಮೀನೂಟ ಹಾಗೂ ಪ್ರೀತಿಯೊಂದಿಗೆ ಸಂವಿಧಾನಿಕ ಮೌಲ್ಯಗಳನ್ನು ಎತ್ತಿಹಿಡಿಯುವ ಹೊಸ ಬೆಳಕನ್ನು ಕಂಡುಕೊಳ್ಳಲಿದ್ದೇವೆ," ಎಂದು 'ಅಭಿಮತ...

‘ಟ್ರಂಪ್’ ಗಾಗಿ ಭಾರತದ ಹಿತವನ್ನು ಬಲಿ ಕೊಟ್ಟ ಕೇಂದ್ರ: E20 ಎಥೆನಾಲ್ ನೀತಿ ಹಿಂಪಡೆಯಲು ಕೇಜ್ರಿವಾಲ್ ಪಟ್ಟು

ವಾಹನಗಳ ಎಂಜಿನ್‌ಗೆ ಹಾನಿಯುಂಟುಮಾಡುತ್ತಿದೆ ಎಂದು ಆರೋಪಿಸಲಾದ ಇ20 (E20) ಎಥೆನಾಲ್ ಮಿಶ್ರಿತ ಪೆಟ್ರೋಲ್ ನೀತಿಯನ್ನು ಹಿಂಪಡೆಯುವಂತೆ ಆಗ್ರಹಿಸಿ, ದೇಶಾದ್ಯಂತ ಸಂಗ್ರಹಿಸಲಾಗಿದ್ದ 2.30 ಲಕ್ಷಕ್ಕೂ ಅಧಿಕ ಸಾರ್ವಜನಿಕ ಸಹಿಗಳ ಮನವಿ ಪತ್ರದೊಂದಿಗೆ ಪ್ರಧಾನಿ ನರೇಂದ್ರ...

ಗಾಝಾ | ಇಸ್ರೇಲ್ ನರಮೇಧಕ್ಕೆ ಬಲಿಯಾದ ಎರಡು ಕುಟುಂಬಗಳ 112 ಸದಸ್ಯರ ಸಾಮೂಹಿಕ ಅಂತ್ಯಸಂಸ್ಕಾರ: ಸಾವಿರಾರು ಜನರಿಂದ ಕಣ್ಣೀರ ವಿದಾಯ

ಇಸ್ರೇಲ್ ಬಾಂಬ್ ದಾಳಿಯಿಂದ ಧ್ವಂಸಗೊಂಡಿದ್ದ ಮನೆಗಳ ಅವಶೇಷಗಳ ಅಡಿಯಲ್ಲಿ ಇತ್ತೀಚೆಗೆ ಪತ್ತೆಯಾದ ಗಾಝಾದ ಹಸಾಯ್ನ ಮತ್ತು ಅಬು ಶರಿಯಾ ಕುಟುಂಬಗಳ 112 ಸದಸ್ಯರ ಮೃತದೇಹಗಳ ಅಂತ್ಯ ಸಂಸ್ಕಾರ ಮಂಗಳವಾರ (ಆ.4) ನಡೆಯಿತು. ಸಾವಿರಾರು...

E20 ಇಂಧನ ರಾದ್ಧಾಂತ: ನಾಗ್ಪುರದಲ್ಲಿ ಗಡ್ಕರಿ ಮನೆಗೆ ಮುತ್ತಿಗೆ ಯತ್ನ, ಯುವ ಕಾಂಗ್ರೆಸ್ ಕಾರ್ಯಕರ್ತರ ಬಂಧನ

ಎಥೆನಾಲ್ ಮಿಶ್ರಿತ ಇ20 (E20) ಇಂಧನದಿಂದ ದೇಶದ ಲಕ್ಷಾಂತರ ವಾಹನ ಮಾಲೀಕರು ಎಂಜಿನ್ ಹಾನಿ ಮತ್ತು ಮೈಲೇಜ್ ಅಭಾವ ಎದುರಿಸುತ್ತಿದ್ದಾರೆ ಎಂಬ ಆಕ್ರೋಶದ ನಡುವೆಯೇ, ನಾಗ್ಪುರದಲ್ಲಿ ಕೇಂದ್ರ ರಸ್ತೆ ಸಾರಿಗೆ ಸಚಿವ ನಿತಿನ್...

ರಾಜ್ಯದಲ್ಲಿ ‘SIR’ ಅವಾಂತರ: 1.ಕೋಟಿಗೂ ಹೆಚ್ಚು ಮತದಾರರನ್ನು ಹೊರಗಿಡಲು ಸಂಚು, ‘SIR ವಿರೋಧಿ ಕರ್ನಾಟಕ’ ಆಕ್ರೋಶ

ಕರ್ನಾಟಕದಲ್ಲಿ ಜಾರಿಯಲ್ಲಿರುವ ಬೂತ್ ಮಟ್ಟದ ಮತದಾರರ ಪಟ್ಟಿ ಸರಿಪಡಿಸುವ 'ಎಸ್‌ಐಆರ್' (SIR) ಪ್ರಕ್ರಿಯೆಯಲ್ಲಿ ಭಾರೀ ಅವ್ಯವಹಾರ ಮತ್ತು ಕಪಟತನ ನಡೆದಿದ್ದು, ರಾಜ್ಯದ ಶೇ. 20 ರಷ್ಟು (ಆಗಸ್ಟ್ 2026ರ ಹೊತ್ತಿಗೆ ಸುಮಾರು 1.10...

‘ಜನರು ಬಿಜೆಪಿಯಿಂದ ಅತೃಪ್ತರಾಗಿದ್ದಾರೆ…’: ದಾಟಿಯಾ ಉಪಚುನಾವಣೆಯಲ್ಲಿ ಗೆಲುವಿನ ನಂತರ ಆಡಳಿತ ಪಕ್ಷದ ವಿರುದ್ಧ ಘನಶ್ಯಾಮ್ ಸಿಂಗ್ ವಾಗ್ದಾಳಿ

ಭೋಪಾಲ್ (ಮಧ್ಯಪ್ರದೇಶ): ಮಧ್ಯಪ್ರದೇಶದ ದಾಟಿಯಾ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯಲ್ಲಿ ನೂತನವಾಗಿ ಆಯ್ಕೆಯಾಗಿರುವ ಕಾಂಗ್ರೆಸ್ ಶಾಸಕ ಘನಶ್ಯಾಮ್ ಸಿಂಗ್ ಅವರು, ತಮ್ಮ ಅಭೂತಪೂರ್ವ ಗೆಲುವನ್ನು ಬಿಜೆಪಿಯ 'ಭ್ರಷ್ಟಾಚಾರ'ಕ್ಕೆ ಸಾರ್ವಜನಿಕರು ನೀಡಿದ ತಕ್ಕ ಹಾಗೂ ಸೂಕ್ತ...

ಇಂದಿನ ವಿಚಾರಣೆ ಬಳಿಕ ಉದಯನಿಧಿ ಬಿಡುಗಡೆಗೆ ಮದ್ರಾಸ್ ಹೈಕೋರ್ಟ್ ನಿರ್ದೇಶನ

ಆಕ್ಷೇಪಾರ್ಹ ಹೇಳಿಕೆ ನೀಡಿದ ಆರೋಪದ ಮೇಲೆ ಬಂಧಿತರಾದ ತಮಿಳುನಾಡು ವಿಧಾನಸಭೆಯ ವಿಪಕ್ಷ ನಾಯಕ ಉದಯನಿಧಿ ಸ್ಟಾಲಿನ್ ಅವರನ್ನು, ವಿಚಾರಣೆಯಯ ಬಳಿಕ ಸ್ಟೇಷನ್ ಬೇಲ್ (ಠಾಣಾ ಜಾಮೀನು) ಮೇಲೆ ಬಿಡುಗಡೆ ಮಾಡುವಂತೆ ಮದ್ರಾಸ್ ಹೈಕೋರ್ಟ್...

ರಾಜೀನಾಮೆ ನೀಡಿದರೆ ಕೆಲವೇ ನಿಮಿಷಗಳಲ್ಲಿ ಅಂಗೀಕರಿಸುವೆ, ಸಚಿವ ಸ್ಥಾನ ವಂಚಿತರ ಬೆದರಿಕೆಗೆ ಸಿಎಂ ಡಿ.ಕೆ. ಶಿವಕುಮಾರ್ ವಾರ್ನಿಂಗ್

ಪಕ್ಷದ ಹಿತವೇ ಎಲ್ಲಕ್ಕಿಂತ ಮುಖ್ಯ. ಸಚಿವ ಸ್ಥಾನ ಸಿಗಲಿಲ್ಲ ಎಂಬ ಕಾರಣಕ್ಕೆ ಯಾರಾದರೂ ರಾಜೀನಾಮೆ ಸಲ್ಲಿಸಿದರೆ, ಕೆಲವೇ ನಿಮಿಷಗಳಲ್ಲಿ ಅದನ್ನು ನಾನು ಅಂಗೀಕರಿಸುತ್ತೇನೆ" ಎಂದು ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಖಡಕ್ ಎಚ್ಚರಿಕೆ ನೀಡಿದ್ದಾರೆ. ಶಾಸಕರ...

ನಮಗೆ ಚುನಾವಣಾ ರಾಜಕೀಯದ ಉದ್ದೇಶವಿಲ್ಲ, ಜನಾಂದೋಲನವೇ ನಮ್ಮ ಗುರಿ: ಸಿಜೆಪಿ ಸಂಸ್ಥಾಪಕ ಅಭಿಜೀತ್ ದೀಪ್ಕೆ

ಕಾಕ್ರೋಚ್ ಜನತಾ ಪಾರ್ಟಿ (CJP) ಚುನಾವಣಾ ರಾಜಕೀಯಕ್ಕೆ ಪ್ರವೇಶಿಸುವ ಯಾವುದೇ ಉದ್ದೇಶವನ್ನು ಹೊಂದಿಲ್ಲ, ಬದಲಾಗಿ ದೇಶದ ಪ್ರಜಾಸತ್ತಾತ್ಮಕ ಸಂಸ್ಥೆಗಳ ಮೇಲಿನ ಜನರ ನಂಬಿಕೆಯನ್ನು ಮರುಸ್ಥಾಪಿಸಲು ಬೃಹತ್ ಜನಾಂದೋಲನವನ್ನು ಕಟ್ಟುವುದೇ ನಮ್ಮ ಮೂಲ ಗುರಿ...

ನೀಟ್ ಪ್ರತಿಭಟನೆ: ಮಧ್ಯಪ್ರದೇಶ ಪೊಲೀಸರು ಧರ್ಮದ ಕಾರಣಕ್ಕೆ ನನ್ನ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ: ಜೆಎನ್‌ಯು ವಿದ್ಯಾರ್ಥಿ ನಾಯಕಿ ಡ್ಯಾನಿಶ್ ಅಲಿ ಆರೋಪ

ದೇಶದ ಶಿಕ್ಷಣ ವ್ಯವಸ್ಥೆಯ ಜವಾಬ್ದಾರಿಯನ್ನು ಪ್ರಶ್ನಿಸಿ ನಡೆದ ನೀಟ್ (NEET) ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಪ್ರತಿಭಟನೆಯಲ್ಲಿ ಸಕ್ರಿಯವಾಗಿ ಭಾಗವಹಿಸಿದ್ದಕ್ಕಾಗಿ, ಮಧ್ಯಪ್ರದೇಶ ಪೊಲೀಸರು ತಮ್ಮ ಕುಟುಂಬಕ್ಕೆ ಕಿರುಕುಳ ನೀಡುತ್ತಿದ್ದಾರೆ ಎಂದು ಜವಾಹರಲಾಲ್ ನೆಹರು ವಿಶ್ವವಿದ್ಯಾಲಯದ...