Homeಮುಖಪುಟಗಾಝಾ ಮೇಲಿನ ದಾಳಿಗೆ US ಬೆಂಬಲ: ಅಮೆರಿಕದ ದೀಪಾವಳಿ ಪಾರ್ಟಿ ಆಹ್ವಾನ ತಿರಸ್ಕರಿಸಿದ ಕವಯಿತ್ರಿ

ಗಾಝಾ ಮೇಲಿನ ದಾಳಿಗೆ US ಬೆಂಬಲ: ಅಮೆರಿಕದ ದೀಪಾವಳಿ ಪಾರ್ಟಿ ಆಹ್ವಾನ ತಿರಸ್ಕರಿಸಿದ ಕವಯಿತ್ರಿ

- Advertisement -
- Advertisement -

ಗಾಝಾದ ಮೇಲೆ ಇಸ್ರೇಲ್‌ ಘೋಷಿಸಿದ ಯುದ್ಧವನ್ನು ಅಮೆರಿಕ ಬೆಂಬಲಿಸಿದ್ದಕ್ಕೆ, ಭಾರತೀಯ ಮೂಲದ ಕವಯಿತ್ರಿ ರೂಪಿ ಕೌರ್ ಅವರು ಯುಎಸ್ ಉಪಾಧ್ಯಕ್ಷೆ ಕಮಲಾ ಹ್ಯಾರಿಸ್ ಕಳುಹಿಸಿದ ದೀಪಾವಳಿ ಪಾರ್ಟಿಯ ಆಹ್ವಾನವನ್ನು ತಿರಸ್ಕರಿಸಿದ್ದಾರೆ.

ಗಾಝಾದ ಮೇಲಿನ ಇಸ್ರೇಲ್‌ ದಾಳಿಯ ವೇಳೆ ಯುದ್ಧವನ್ನು ಅಮೆರಿಕ ಬೆಂಬಲಿಸಿರುವುದು, ಇಂತಹ ಸನ್ನಿವೇಶದಲ್ಲಿ ದೀಪಾವಳಿ ಆಚರಿಸುವುದು ಅಚ್ಚರಿ ತಂದಿದೆ ರೂಪಿ ಕೌರ್ ಅವರು ಹೇಳಿದ್ದಾರೆ.

ಈ ಬಗ್ಗೆ ಎಕ್ಸ್‌ನಲ್ಲಿ ಕೆನಡಾದ ಬರಹಗಾರ್ತಿ ರೂಪಿ ಕೌರ್ ಬರೆದುಕೊಂಡಿದ್ದು, ನಾಗರಿಕರ ಮೇಲಿನ ಅದರಲ್ಲೂ 50% ಮಕ್ಕಳ ಸಾಮೂಹಿಕ ಶಿಕ್ಷೆಯನ್ನು ಬೆಂಬಲಿಸುವ ದೇಶದ ಯಾವುದೇ ಆಹ್ವಾನವನ್ನು ನಾನು  ತಿರಸ್ಕರಿಸುತ್ತೇನೆ ಎಂದು ಹೇಳಿದ್ದಾರೆ.

ಇಂದು ಅಮೆರಿಕ ಸರ್ಕಾರವು ಗಾಝಾದ ಮೇಲೆ ಬಾಂಬ್ ದಾಳಿಗೆ ಧನಸಹಾಯ ಮಾತ್ರ ನೀಡುತ್ತಿಲ್ಲ, ಅವರು ಪ್ಯಾಲೆಸ್ತೀನಿಯನ್ನರ ವಿರುದ್ಧದ  ನರಮೇಧವನ್ನು ಸಮರ್ಥಿಸುತ್ತಿದ್ದಾರೆ. ಎಷ್ಟು ನಿರಾಶ್ರಿತರ ಶಿಬಿರಗಳು, ಆರೋಗ್ಯ ಸೌಲಭ್ಯಗಳು ಮತ್ತು ಆರಾಧನಾ ಸ್ಥಳಗಳನ್ನು ಸ್ಫೋಟಿಸಲಾಗಿದೆ ಎಂಬುದನ್ನು ಲೆಕ್ಕಹಾಕಿದೆಯಾ ಎಂದು ಕೌರ್ ಪ್ರಶ್ನಿಸಿದ್ದಾರೆ.

ಈ ಬಗ್ಗೆ ಯುಎಸ್ ಸರ್ಕಾರವನ್ನು ಹೊಣೆಗಾರರನ್ನಾಗಿ ಮಾಡಲು ಅವರು ದಕ್ಷಿಣ-ಏಷ್ಯಾದ ಸಮುದಾಯಕ್ಕೆ ಕರೆ ನೀಡಿದ್ದಾರೆ.

ಕಮಲಾ ಹ್ಯಾರಿಸ್ ಕಳೆದ ರಾತ್ರಿ ವಾಷಿಂಗ್ಟನ್‌ನಲ್ಲಿರುವ ತನ್ನ ಅಧಿಕೃತ ನಿವಾಸದಲ್ಲಿ ಸುಮಾರು 300 ಜನರೊಂದಿಗೆ ದೀಪಾವಳಿಯನ್ನು ಆಚರಿಸಿದ್ದು, ಅದರಲ್ಲಿ ಹೆಚ್ಚಿನವರು ಭಾರತೀಯರು ಭಾಗಿಯಾಗಿದ್ದರು.  ಈ ಆಚರಣೆಯನ್ನು ಬಹಿಷ್ಕರಿಸಲು ಹಲವು ಗುಂಪುಗಳು ಕರೆ ನೀಡಿದ್ದವು.

ಕಾರ್ಯಕ್ರಮದಲ್ಲಿ ಮಾತನಾಡಿದ್ದ ಹ್ಯಾರಿಸ್, ಯುದ್ಧದ ಬಗ್ಗೆ ಬಿಡೆನ್ ಆಡಳಿತದ ನಿಲುವನ್ನು  ಪುನರುಚ್ಛರಿಸಿದ್ದರು. ಅಧ್ಯಕ್ಷ ಜೋ ಬಿಡೆನ್ ಮತ್ತು ನಾನು, ತನ್ನನ್ನು ತಾನು ರಕ್ಷಿಸಿಕೊಳ್ಳುವ ಇಸ್ರೇಲ್‌ನ ನಿಲುವನ್ನು ಬೆಂಬಲಿಸಲು ಕೆಲಸ ಮಾಡುತ್ತಿದ್ದೇವೆ ಎಂದು ಎಲ್ಲರೊಂದಿಗೆ ಸ್ಪಷ್ಟವಾಗಿ ಹೇಳಲು ಬಯಸುತ್ತೇನೆ. ಗಾಝಾದಲ್ಲಿರುವ ಜನರಿಗೆ ಮಾನವೀಯ ನೆರವು ನೀಡಬೇಕಾದ ಅಗತ್ಯವನ್ನು ನಾವು ಬೆಂಬಲಿಸುತ್ತೇವೆ ಎಂದು ಅವರು ಹೇಳಿದರು.

ಅ.7ರ ದಾಳಿಯ ನಂತರ ಹಮಾಸ್‌ನಿಂದ ಗಾಝಾದಲ್ಲಿ ಒತ್ತೆಯಾಳಾಗಿರಿಸಿದ್ದ 240 ಜನರನ್ನು ಉಲ್ಲೇಖಿಸಿದ ಹ್ಯಾರಿಸ್, ನಮಗೆ ಅಮೇರಿಕನ್ ಒತ್ತೆಯಾಳುಗಳನ್ನು ದೇಶಕ್ಕೆ ಕರೆತರುವುದು ಮುಖ್ಯವಾಗಿದೆ ಎಂದು ಹೇಳಿದ್ದಾರೆ. ಪ್ಯಾಲೆಸ್ತೀನ್‌ ಜನರಿಗೆ ಹಕ್ಕಿದೆ,  ಅವರು ಸ್ವ-ನಿರ್ಣಯ ಮತ್ತು ಘನತೆ ಹೊಂದಲು ಅರ್ಹರು. ನಾವು ಅದನ್ನು ಬೆಂಬಲಿಸುವುದನ್ನು ಮುಂದುವರಿಸುತ್ತೇವೆ ಎಂದು ಹ್ಯಾರಿಸ್ ಇದೇ ವೇಳೆ ಹೇಳಿದರು.

ಇದನ್ನು ಓದಿ: ಗಾಝಾ ನರಮೇಧವನ್ನು ಬೆಂಬಲಿಸುವ ಸರಕಾರಗಳಿಗೆ ನಾಚಿಕೆಯಾಗಬೇಕು; ಪ್ರಿಯಾಂಕ ಗಾಂಧಿ

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...