Homeಮುಖಪುಟಬೆಂಗಳೂರಿನಲ್ಲಿರುವ ತಾಯಿಗೆ ಅನಾರೋಗ್ಯ |ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ವೀಸಾ ನಿರಾಕರಣೆ

ಬೆಂಗಳೂರಿನಲ್ಲಿರುವ ತಾಯಿಗೆ ಅನಾರೋಗ್ಯ |ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ವೀಸಾ ನಿರಾಕರಣೆ

- Advertisement -
- Advertisement -

ಬೆಂಗಳೂರಿನಲ್ಲಿರುವ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ಭಾರತ ಸರ್ಕಾರ ವೀಸಾ ನಿರಾಕರಿಸಿದೆ ಎಂದು ಭಾರತೀಯ ಮೂಲದ ಜಾತಿ ವಿರೋಧಿ ಹೋರಾಟಗಾರ್ತಿ ಕ್ಷಮಾ ಸಾವಂತ್ ಭಾನುವಾರ (ಫೆ.3) ಆರೋಪಿಸಿದ್ದಾರೆ.

ಅಮೆರಿಕಲ್ಲಿ ವಾಸವಿರುವ ಸಾವಂತ್ ಅವರು 2013ರಿಂದ 2023 ರವರೆಗೆ, ಅಲ್ಲಿನ ಸಿಯಾಟಲ್ ಸಿಟಿ ಕೌನ್ಸಿಲ್‌ನಲ್ಲಿ ಚುನಾಯಿತ ಪ್ರತಿನಿಧಿಯಾಗಿದ್ದರು.

ಫೆಬ್ರವರಿ 2023ರಲ್ಲಿ, ಸಾವಂತ್ ಅವರು ಮಂಡಿಸಿದ ನಿರ್ಣಯ ಅಂಗೀಕಾರ ಪಡೆಯುವ ಮೂಲಕ, ಸಿಯಾಟಲ್ ಜಾತಿ ಆಧಾರಿತ ತಾರತಮ್ಯವನ್ನು ನಿಷೇಧಿಸಿದ ಮೊದಲ ಅಮೆರಿಕನ್ ನಗರ ಎನಿಸಿಕೊಂಡಿತ್ತು.

ತನ್ನ ವೀಸಾ ನಿರಾಕರಣೆಯನ್ನು “ಭಾರತೀಯ ಜನತಾ ಪಕ್ಷದ (ಬಿಜೆಪಿ) ಸರ್ಕಾರದ ರಾಜಕೀಯ ಪ್ರತೀಕಾರ” ಎಂದು ಸಾವಂತ್ ಆರೋಪಿಸಿದ್ದಾರೆ. ಈ ಕ್ರಮವನ್ನು ಪ್ರತಿಭಟಿಸಿ ಭಾರತ ಸರ್ಕಾರದ ವಿರುದ್ದ ಅವರು ಆನ್‌ಲೈನ್ ದೂರು ಆರಂಭಿಸಿದ್ದಾರೆ.

“ಮೋದಿ ಇತರ ಹೋರಾಟಗಾರರು ಮತ್ತು ಪತ್ರಕರ್ತರ ವಿರುದ್ಧವೂ ಇದೇ ರೀತಿ ಸೇಡು ತೀರಿಸಿಕೊಂಡಿದ್ದಾರೆ. ಭಾರತಕ್ಕೆ ಪ್ರವೇಶ ನಿರಾಕರಿಸಿದ್ದಾರೆ ಅಥವಾ ರದ್ದುಗೊಳಿಸಿದ್ದಾರೆ” ಎಂದು ಸಾವಂತ್ ದೂರಿದ್ದಾರೆ. ತನ್ನ 82 ವರ್ಷದ ತಾಯಿಯ ಆರೋಗ್ಯವು ವೇಗವಾಗಿ ಕ್ಷೀಣಿಸುತ್ತಿದೆ ಎಂದಿದ್ದಾರೆ.

“ಕ್ಷಮಾ ಸಾವಂತ್ ಮತ್ತು ಅವರ ಪತಿ ಕ್ಯಾಲ್ವಿನ್ ಪ್ರೀಸ್ಟ್ ಅವರಿಗೆ ಭಾರತಕ್ಕೆ ಪ್ರಯಾಣಿಸಲು ಮತ್ತು ಕ್ಷಮಾ ಅವರಿಗೆ ತಾಯಿಯನ್ನು ಭೇಟಿ ಮಾಡಲು ಸಾಧ್ಯವಾಗುವಂತೆ ಮಾನವೀಯ ನೆಲೆಯಲ್ಲಿ ತುರ್ತಾಗಿ ವೀಸಾ ಮಂಜೂರು ಮಾಡುವಂತೆ ನಾವು ಮೋದಿ ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಆನ್‌ಲೈನ್‌ ದೂರಿನಲ್ಲಿ ಹೇಳಲಾಗಿದೆ.

ಯಾವುದೇ ವಿವರಣೆ ನೀಡದೆ ಸಾವಂತ್ ಅವರಿಗೆ ಮೂರು ಬಾರಿ ಭಾರತ ವೀಸಾವನ್ನು ನಿರಾಕರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಸಲ್ಲಿಸಿದ ಮನವಿಯನ್ನೂ ತಿರಸ್ಕರಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಆ ಸಮಯದಲ್ಲಿ, ಕ್ಷಮಾ ಅವರು ಮೋದಿ ಮತ್ತು ಬಿಜೆಪಿ ಸರ್ಕಾರದ ಮುಸ್ಲಿಂ ವಿರೋಧಿ, ಬಡವರ ವಿರೋಧಿ ಸಿಎಎ-ಎನ್‌ಆರ್‌ಸಿ [ಪೌರತ್ವ ತಿದ್ದುಪಡಿ ಕಾಯ್ದೆ-ನಾಗರಿಕರ ರಾಷ್ಟ್ರೀಯ ನೋಂದಣಿ] ಕಾನೂನುಗಳನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದ್ದರು ಮತ್ತು ಮೋದಿಯವರ ಕ್ರೂರ ಮತ್ತು ಶೋಷಣಾ ನೀತಿಗಳ ವಿರುದ್ಧ ರೈತರ ಚಳವಳಿಗೆ ಒಗ್ಗಟ್ಟಿನ ನಿರ್ಣಯ ಕೈಗೊಂಡಿದ್ದರು” ಎಂದು ದೂರಿನಲ್ಲಿ ಹೇಳಲಾಗಿದೆ.

ಜನವರಿಯಲ್ಲಿ, ಸ್ವೀಡಿಷ್ ಭಾರತೀಯ ಮೂಲದ ಪ್ರಾಧ್ಯಾಪಕ ಅಶೋಕ್ ಸ್ವೈನ್ ಅವರು ತಮ್ಮ ಸಾಗರೋತ್ತರ ಭಾರತೀಯ ನಾಗರಿಕ ಸ್ಥಾನಮಾನವನ್ನು ರದ್ದುಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸುವಂತೆ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾರತದ ಸಾಗರೋತ್ತರ ಪೌರತ್ವವು ವಲಸೆ ಸ್ಥಾನಮಾನವಾಗಿದ್ದು, ಇದು ಭಾರತೀಯ ಮೂಲದ ವಿದೇಶಿಯರು ಭಾರತದಲ್ಲಿ ಅನಿರ್ದಿಷ್ಟವಾಗಿ ವಾಸಿಸಲು ಮತ್ತು ಕೆಲಸ ಮಾಡಲು ಅನುವು ಮಾಡಿಕೊಡುತ್ತದೆ. ರದ್ದತಿಯು ಅವರು ಭಾರತಕ್ಕೆ ಮರುಳುವುದನ್ನು ನಿರ್ಬಂಧಿಸುತ್ತದೆ.

ಸ್ವೈನ್ ಅವರು ಸ್ವೀಡನ್‌ನ ಉಪ್ಸಲಾ ವಿಶ್ವವಿದ್ಯಾಲಯದ ಶಾಂತಿ ಮತ್ತು ಸಂಘರ್ಷ ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮತ್ತು ಐದು ವರ್ಷಗಳಿಂದ ಭೇಟಿಯಾಗಲು ಸಾಧ್ಯವಾಗದ ತನ್ನ 82 ವರ್ಷದ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿಯಾಗುವ ಮನವಿಯನ್ನು ಸ್ವೈನ್ ಮುಂದಿಟ್ಟಿದ್ದಾರೆ.

ಭಾರತದ ಸಾರ್ವಭೌಮತೆ, ಸಮಗ್ರತೆ ಮತ್ತು ಭದ್ರತೆಯ ಹಿತಾಸಕ್ತಿಗಳಿಗೆ ವಿರುದ್ಧವಾದ “ಕಾನೂನುಬಾಹಿರ ಚಟುವಟಿಕೆಗಳಲ್ಲಿ” ತೊಡಗಿರುವುದು ಕಂಡುಬಂದಿದೆ ಎಂಬ ಆಧಾರದ ಮೇಲೆ ಕೇಂದ್ರ ಸರ್ಕಾರವು ಜುಲೈ 2023ರಲ್ಲಿ ಸ್ವೈನ್ ಅವರ ಸಾಗರೋತ್ತರ ಪೌರತ್ವ ನೋಂದಣಿಯನ್ನು ರದ್ದುಗೊಳಿಸಿತ್ತು.

ಫೆಬ್ರವರಿ 2024ರಲ್ಲಿ, ಭಾರತೀಯ ಮೂಲದ ಬ್ರಿಟಿಷ್ ಬರಹಗಾರ್ತಿ ಮತ್ತು ಲಂಡನ್‌ನ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದ ರಾಜಕೀಯ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರು, “ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ಮಾತನಾಡಿದ್ದಕ್ಕಾಗಿ” ಕೇಂದ್ರ ಸರ್ಕಾರದ ಆದೇಶದ ಮೇರೆಗೆ ದೇಶಕ್ಕೆ ಪ್ರವೇಶ ನಿರಾಕರಿಸಲಾಯಿತು ಮತ್ತು ಬೆಂಗಳೂರು ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಲಾಯಿತು ಎಂದು ಆರೋಪಿಸಿದ್ದರು.

“ಸಂವಿಧಾನ ಮತ್ತು ಪ್ರಜಾಪ್ರಭುತ್ವ” ಎಂಬ ವಿಷಯದ ಕುರಿತು ಮಾತನಾಡಲು ಕೌಲ್ ಅವರನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶಕ್ಕೆ ಆಹ್ವಾನಿಸಿತ್ತು. ಕೌಲ್ ಅವರು ಬೆಂಗಳೂರಿಗೆ ಬಂದಿಳಿದ ನಂತರ, ಮಾನ್ಯ ವೀಸಾ ಹೊಂದಿದ್ದರೂ ವಿಮಾನ ನಿಲ್ದಾಣದಿಂದ ಹೊರಹೋಗಲು ಅವರಿಗೆ ಅನುಮತಿ ನಿರಾಕರಿಸಲಾಗಿತ್ತು.

ಭಾರತದ ಸಾಗರೋತ್ತರ ನಾಗರಿಕರಾಗಿರುವ ಕೌಲ್, ಭಾರತದ ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಮಾತೃ ಪಕ್ಷವಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಟೀಕೆಗೆ ಗುರಿಯಾಗಿದ್ದರು. 2019ರಲ್ಲಿ, ಅವರು ಯುಎಸ್ ವಿದೇಶಾಂಗ ವ್ಯವಹಾರಗಳ ಸದನ ಸಮಿತಿಯ ಮುಂದೆ ಸಾಕ್ಷ್ಯ ನುಡಿದು, ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಎತ್ತಿ ತೋರಿಸಿದ್ದರು.

ಆಗಸ್ಟ್ 2022ರಲ್ಲಿ, ಅಮೆರಿಕ ಮೂಲದ ಪತ್ರಕರ್ತ ಅಂಗದ್ ಸಿಂಗ್ ಅವರು ಪಂಜಾಬ್‌ನಲ್ಲಿರುವ ತಮ್ಮ ಕುಟುಂಬವನ್ನು ಭೇಟಿ ಮಾಡಲು ನ್ಯೂಯಾರ್ಕ್‌ನಿಂದ ಆಗಮಿಸಿದ್ದಾಗ ದೆಹಲಿ ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.

ಜನವರಿ 2023ರಲ್ಲಿ, ಸಿಂಗ್ ಅವರ ಸಾಕ್ಷ್ಯಚಿತ್ರ “ಇಂಡಿಯಾ ಬರ್ನಿಂಗ್” ಭಾರತದ ಜಾತ್ಯತೀತತೆಯ ಬಗ್ಗೆ ಅತ್ಯಂತ ನಕಾರಾತ್ಮಕ ದೃಷ್ಟಿಕೋನವನ್ನು ಪ್ರಸ್ತುತಪಡಿಸಿದ ಕಾರಣ ಭಾರತಕ್ಕೆ ಭೇಟಿ ನೀಡದಂತೆ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರವು ದೆಹಲಿ ಹೈಕೋರ್ಟ್‌ ಮುಂದೆ ಸಮರ್ಥಿಸಿಕೊಂಡಿತ್ತು.

ಮಣಿಪುರ ಹಿಂಸಾಚಾರದಲ್ಲಿ ಬಿರೇನ್ ಸಿಂಗ್ ಪಾತ್ರವಿದೆ ಎಂಬ ಆಡಿಯೋ ಸೋರಿಕೆ; ಎಫ್‌ಎಸ್‌ಎಲ್‌ನಿಂದ ವರದಿ ಕೇಳಿದ ಸುಪ್ರೀಂ ಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ: ಆರು ಜನ ಹಿರಿಯರು ಸೇರಿದಂತೆ 41 ಜನ ನಕ್ಸಲ್ ಕಾರ್ಯಕರ್ತರು ಪೊಲೀಸರಿಗೆ ಶರಣು

ದೇಶದಲ್ಲಿ ಮಾವೋವಾದಿ ವಿರೋಧಿ ಕಾರ್ಯಾಚರಣೆಗಳಲ್ಲಿ ಪ್ರಮುಖ ಬೆಳವಣಿಗೆಯಲ್ಲಿ, ಆರು ಜನ ಹಿರಿಯರು ಸೇರಿದಂತೆ 41 ಜನ ಕಮ್ಯುನಿಸ್ಟ್ ಪಾರ್ಟಿ ಆಫ್ ಇಂಡಿಯಾ (ಮಾವೋವಾದಿ) ಕಾರ್ಯಕರ್ತರು ತೆಲಂಗಾಣ ಪೊಲೀಸರ ಮುಂದೆ ಇಂದು ಶರಣಾಗಿದ್ದಾರೆ. ಶರಣಾಗತಿ ಪ್ರಕ್ರಿಯೆಯ...

‘ವೀಸಾ ಅವಧಿ ಮುಗಿಯುವ ಮೊದಲು ಪಾಕ್ ಮಹಿಳೆಯ ಪೌರತ್ವ ಅರ್ಜಿ ಪರಿಗಣಿಸಿ..’; ಕೇಂದ್ರ ಸರ್ಕಾರಕ್ಕೆ ಕರ್ನಾಟಕ ಹೈಕೋರ್ಟ್‌ ಸೂಚನೆ

ಭಾರತದಲ್ಲಿ ವಾಸಿಸುತ್ತಿರುವ ಪಾಕಿಸ್ತಾನಿ ಪ್ರಜೆಯ ಹೊಸ ಪೌರತ್ವ ಅರ್ಜಿಯನ್ನು ಸಕ್ರಿಯವಾಗಿ ಪರಿಗಣಿಸುವ ಜೊತೆಗೆ ಅವರ ದೀರ್ಘಾವಧಿಯ ವೀಸಾ ಅವಧಿ ಮುಗಿಯುವ ಮೊದಲೇ ಪ್ರಕ್ರಿಯೆಯನ್ನು ಪೂರ್ಣಗೊಳಿಸಬೇಕು ಎಂದು, ವಿದೇಶಾಂಗ ಸಚಿವಾಲಯ, ಗೃಹ ಸಚಿವಾಲಯ ಮತ್ತು...

ಎಚ್‌ಐವಿ ಪಾಸಿಟಿವ್ ಎಂದು ವಜಾಗೊಳಿಸಲಾದ ಬಿಎಸ್‌ಎಫ್ ಯೋಧನನ್ನು ಮತ್ತೆ ನೇಮಿಸುವಂತೆ ಹೈಕೋರ್ಟ್ ಆದೇಶ

ಜುಲೈ 2017 ರಲ್ಲಿ ಎಚ್‌ಐವಿ ಪಾಸಿಟಿವ್ ಎಂಬ ಕಾರಣಕ್ಕೆ ಸೇವೆಯಿಂದ ವಜಾಗೊಳಿಸಲಾದ ಗಡಿ ಭದ್ರತಾ ಪಡೆಯ ಕಾನ್‌ಸ್ಟೆಬಲ್‌ ಒಬ್ಬರನ್ನು ಮರುನೇಮಕ ಮಾಡುವಂತೆ ದೆಹಲಿ ಹೈಕೋರ್ಟ್ ಆದೇಶಿಸಿದೆ.  ನ್ಯಾಯಮೂರ್ತಿಗಳಾದ ಸಿ ಹರಿಶಂಕರ್ ಮತ್ತು ಓಂ ಪ್ರಕಾಶ್...

ವೈದ್ಯೆ ಬುರ್ಖಾ ಎಳೆದ ನಿತೀಶ್‌ಕುಮಾರ್: ಶ್ರೀನಗರದಲ್ಲಿ ದೂರು ದಾಖಲಿಸಿದ ಇಲ್ತಿಜಾ ಮುಫ್ತಿ

ಪಾಟ್ನಾದಲ್ಲಿ ನಡೆದ ಸರ್ಕಾರಿ ಕಾರ್ಯಕ್ರಮದ ಸಂದರ್ಭದಲ್ಲಿ ಮುಸ್ಲಿಂ ಮಹಿಳಾ ವೈದ್ಯರ ನಿಖಾಬ್ (ಬುರ್ಖಾ) ಎಳೆಯುತ್ತಿರುವುದನ್ನು ತೋರಿಸುವ ವೈರಲ್ ವೀಡಿಯೊದ ಕುರಿತು ಬಿಹಾರ ಮುಖ್ಯಮಂತ್ರಿ ನಿತೀಶ್ ಕುಮಾರ್ ವಿರುದ್ಧ ಎಫ್ಐಆರ್ ದಾಖಲಿಸಲು ಪೀಪಲ್ಸ್ ಡೆಮಾಕ್ರಟಿಕ್...

ಪ್ರಶ್ನೆಗಾಗಿ ಕಾಸು ಪ್ರಕರಣ: ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್‌ ಸಲ್ಲಿಸಲು ಅನುಮತಿಸಿದ್ದ ಲೋಕಪಾಲ್ ಆದೇಶ ರದ್ದು ಪಡಿಸಿದ ದೆಹಲಿ ಹೈಕೋರ್ಟ್

‘ಪ್ರಶ್ನೆಗಾಗಿ ಕಾಸು’ ಪ್ರಕರಣದಲ್ಲಿ ತೃಣಮೂಲ ಕಾಂಗ್ರೆಸ್(ಟಿಎಂಸಿ) ಸಂಸದೆ ಮಹುವಾ ಮೊಯಿತ್ರಾ ವಿರುದ್ಧ ಚಾರ್ಜ್‌ಶೀಟ್ ಸಲ್ಲಿಸಲು ಸಿಬಿಐಗೆ ಅನುಮತಿ ನೀಡಿದ್ದ ಲೋಕಪಾಲ್ ಆದೇಶವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ರದ್ದುಗೊಳಿಸಿದೆ. ಇದರಿಂದಾಗಿ ಮೊಯಿತ್ರಾ ಅವರಿಗೆ ಈ...

ಜಮ್ಮು-ಕಾಶ್ಮೀರ: ಪತ್ರಕರ್ತನ ಮೊಬೈಲ್ ಫೋನ್ ವಶಪಡಿಸಿಕೊಂಡ ಪೊಲೀಸರು

ಕಿಶ್ತ್ವಾರ್‌ನಲ್ಲಿನ ವಿದ್ಯುತ್ ಯೋಜನೆಯಲ್ಲಿ ಸ್ವಜನಪಕ್ಷಪಾತ ಮತ್ತು ಭ್ರಷ್ಟಾಚಾರದ ಆರೋಪಗಳ ಕುರಿತು ವರದಿ ಮಾಡುತ್ತಿದ್ದಾಗ, ದಿ ವೈರ್ ಸುದ್ದಿ ಪೋರ್ಟಲ್‌ನ ಪತ್ರಕರ್ತ ಜೆಹಾಂಗೀರ್ ಅಲಿ ಅವರ ಮೊಬೈಲ್ ಫೋನ್ ಅನ್ನು ಬುಧವಾರ (ಡಿಸೆಂಬರ್ 17)...

ಕೇರಳದಲ್ಲಿ ಗುಂಪುಹತ್ಯೆ: ಛತ್ತೀಸ್‌ಗಢ ವಲಸೆ ಕಾರ್ಮಿಕನನ್ನು ‘ಕಳ್ಳ’ ಎಂದು ಥಳಿಸಿ ಕೊಂದ ಗುಂಪು 

ಕೇರಳದ ಪಾಲಕ್ಕಾಡ್ ಜಿಲ್ಲೆಯಲ್ಲಿ ಗುರುವಾರ ಛತ್ತೀಸ್‌ಗಢದಿಂದ ಬಂದ ವಲಸೆ ಕಾರ್ಮಿಕನೊಬ್ಬನನ್ನು ಕಳ್ಳನೆಂದು ಶಂಕಿಸಿ ಗುಂಪೊಂದು ಥಳಿಸಿ ಕೊಂದಿದೆ. ಕೊಲೆಯಾದ ವ್ಯಕ್ತಿಯನ್ನು ರಾಮನಾರಾಯಣ್ ಭಯಾರ್ (31) ಎಂದು ಗುರುತಿಸಲಾಗಿದ್ದು, ಕಳೆದ ಒಂದು ತಿಂಗಳಿನಿಂದ ಪಾಲಕ್ಕಾಡ್‌ನ ಕಾಂಜಿಕೋಡ್‌ನಲ್ಲಿರುವ...

ನೋಯ್ಡಾ ಪೊಲೀಸ್ ಠಾಣೆಯೊಳಗೆ ವಕೀಲೆ ಮೇಲೆ ಲೈಂಗಿಕ ದೌರ್ಜನ್ಯ ಆರೋಪ; ಸಿಸಿಟಿವಿ ದೃಶ್ಯಾವಳಿ ಕೇಳಿದ ಸುಪ್ರೀಂ ಕೋರ್ಟ್

ಮಹಿಳಾ ವಕೀಲೆಯೊಬ್ಬರನ್ನು 14 ಗಂಟೆಗಳ ಕಾಲ ಅಕ್ರಮವಾಗಿ ಬಂಧಿಸಿ ಪೊಲೀಸರು ಲೈಂಗಿಕ ದೌರ್ಜನ್ಯ esgi, ಕಸ್ಟಡಿಯಲ್ಲಿ ಚಿತ್ರಹಿಂಸೆ ನೀಡಿದ ಆರೋಪದ ಪ್ರಕರಣವನ್ನು ಗಂಭೀರವಾಗಿ ಪರಿಗಣಿಸಿರುವ ಸುಪ್ರೀಂ ಕೋಡರ್ಟ್, ಮುಚ್ಚಿದ ಕವರ್‌ನಲ್ಲಿ ಸಿಸಿಟಿವಿ ದೃಶ್ಯಾವಳಿಗಳನ್ನು...

ಹಾಲು ಉತ್ಪಾದಕರಿಗೆ 1 ಲೀಟರ್ ಹಾಲಿನ ಪ್ರೋತ್ಸಾಹಧನ 5 ರಿಂದ 7 ರೂಗೆ ಏರಿಕೆ: ಅಧಿವೇಶನದಲ್ಲಿ ಸಿದ್ದರಾಮಯ್ಯ ಘೋಷಣೆ

ರೈತರ ಹಿತದೃಷ್ಠಿಯಿಂದ 1 ಲೀಟರ್ ಹಾಲಿಗೆ ಪ್ರೋತ್ಸಾಹಧನವನ್ನು 7 ರೂಪಾಯಿಗೆ ಏರಿಕೆ ಮಾಡುತ್ತೇವೆ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ. ಡಿಸೆಂಬರ್ 19ರಂದು ಬೆಳಗಾವಿ ಅಧಿವೇಶನದ ಕೊನೆಯ ದಿನ ಮಾತನಾಡಿದ ಅವರು, ರೈತರಿಗೆ ಹಸುಗಳನ್ನು ಸಾಕಿ...

ಬಾಂಗ್ಲಾ ದಂಗೆ: ಮಾಧ್ಯಮ ಸಂಸ್ಥೆಗಳಿಗೆ ಬೆಂಕಿ ಹಚ್ಚಿದ ಪ್ರತಿಭಟನಾಕಾರರು, ಉರಿಯುತ್ತಿದ್ದ ಕಚೇರಿಗಳಿಂದ 25 ಕ್ಕೂ ಹೆಚ್ಚು ಪತ್ರಕರ್ತರ ರಕ್ಷಣೆ

ಜುಲೈ ದಂಗೆಯ ನಾಯಕ ಷರೀಫ್ ಉಸ್ಮಾನ್ ಹಾದಿ ಅವರ ನಿಧನದ ಸುದ್ದಿ ಕೇಳಿದ ಬೆನ್ನಲ್ಲೇ ಶುಕ್ರವಾರ ಬಾಂಗ್ಲಾದೇಶದ ವಿವಿಧ ಭಾಗಗಳಲ್ಲಿ ತೀವ್ರ ಪ್ರತಿಭಟನೆಗಳು ಆರಂಭವಾಗಿದ್ದು ಹಿಂಸಾಚಾರಕ್ಕೆ ನಾಂದಿ ಹಾಡಿವೆ. ಅನೇಕ ಪ್ರತಿಭಟನಾಕಾರರು ಬೀದಿಗಿಳಿದಿದ್ದು,...