Homeಮುಖಪುಟಬೆಂಗಳೂರಿನಲ್ಲಿರುವ ತಾಯಿಗೆ ಅನಾರೋಗ್ಯ |ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ವೀಸಾ ನಿರಾಕರಣೆ

ಬೆಂಗಳೂರಿನಲ್ಲಿರುವ ತಾಯಿಗೆ ಅನಾರೋಗ್ಯ |ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ವೀಸಾ ನಿರಾಕರಣೆ

- Advertisement -
- Advertisement -

ಬೆಂಗಳೂರಿನಲ್ಲಿರುವ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ಭಾರತ ಸರ್ಕಾರ ವೀಸಾ ನಿರಾಕರಿಸಿದೆ ಎಂದು ಭಾರತೀಯ ಮೂಲದ ಜಾತಿ ವಿರೋಧಿ ಹೋರಾಟಗಾರ್ತಿ ಕ್ಷಮಾ ಸಾವಂತ್ ಭಾನುವಾರ (ಫೆ.3) ಆರೋಪಿಸಿದ್ದಾರೆ.

ಅಮೆರಿಕಲ್ಲಿ ವಾಸವಿರುವ ಸಾವಂತ್ ಅವರು 2013ರಿಂದ 2023 ರವರೆಗೆ, ಅಲ್ಲಿನ ಸಿಯಾಟಲ್ ಸಿಟಿ ಕೌನ್ಸಿಲ್‌ನಲ್ಲಿ ಚುನಾಯಿತ ಪ್ರತಿನಿಧಿಯಾಗಿದ್ದರು.

ಫೆಬ್ರವರಿ 2023ರಲ್ಲಿ, ಸಾವಂತ್ ಅವರು ಮಂಡಿಸಿದ ನಿರ್ಣಯ ಅಂಗೀಕಾರ ಪಡೆಯುವ ಮೂಲಕ, ಸಿಯಾಟಲ್ ಜಾತಿ ಆಧಾರಿತ ತಾರತಮ್ಯವನ್ನು ನಿಷೇಧಿಸಿದ ಮೊದಲ ಅಮೆರಿಕನ್ ನಗರ ಎನಿಸಿಕೊಂಡಿತ್ತು.

ತನ್ನ ವೀಸಾ ನಿರಾಕರಣೆಯನ್ನು “ಭಾರತೀಯ ಜನತಾ ಪಕ್ಷದ (ಬಿಜೆಪಿ) ಸರ್ಕಾರದ ರಾಜಕೀಯ ಪ್ರತೀಕಾರ” ಎಂದು ಸಾವಂತ್ ಆರೋಪಿಸಿದ್ದಾರೆ. ಈ ಕ್ರಮವನ್ನು ಪ್ರತಿಭಟಿಸಿ ಭಾರತ ಸರ್ಕಾರದ ವಿರುದ್ದ ಅವರು ಆನ್‌ಲೈನ್ ದೂರು ಆರಂಭಿಸಿದ್ದಾರೆ.

“ಮೋದಿ ಇತರ ಹೋರಾಟಗಾರರು ಮತ್ತು ಪತ್ರಕರ್ತರ ವಿರುದ್ಧವೂ ಇದೇ ರೀತಿ ಸೇಡು ತೀರಿಸಿಕೊಂಡಿದ್ದಾರೆ. ಭಾರತಕ್ಕೆ ಪ್ರವೇಶ ನಿರಾಕರಿಸಿದ್ದಾರೆ ಅಥವಾ ರದ್ದುಗೊಳಿಸಿದ್ದಾರೆ” ಎಂದು ಸಾವಂತ್ ದೂರಿದ್ದಾರೆ. ತನ್ನ 82 ವರ್ಷದ ತಾಯಿಯ ಆರೋಗ್ಯವು ವೇಗವಾಗಿ ಕ್ಷೀಣಿಸುತ್ತಿದೆ ಎಂದಿದ್ದಾರೆ.

“ಕ್ಷಮಾ ಸಾವಂತ್ ಮತ್ತು ಅವರ ಪತಿ ಕ್ಯಾಲ್ವಿನ್ ಪ್ರೀಸ್ಟ್ ಅವರಿಗೆ ಭಾರತಕ್ಕೆ ಪ್ರಯಾಣಿಸಲು ಮತ್ತು ಕ್ಷಮಾ ಅವರಿಗೆ ತಾಯಿಯನ್ನು ಭೇಟಿ ಮಾಡಲು ಸಾಧ್ಯವಾಗುವಂತೆ ಮಾನವೀಯ ನೆಲೆಯಲ್ಲಿ ತುರ್ತಾಗಿ ವೀಸಾ ಮಂಜೂರು ಮಾಡುವಂತೆ ನಾವು ಮೋದಿ ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಆನ್‌ಲೈನ್‌ ದೂರಿನಲ್ಲಿ ಹೇಳಲಾಗಿದೆ.

ಯಾವುದೇ ವಿವರಣೆ ನೀಡದೆ ಸಾವಂತ್ ಅವರಿಗೆ ಮೂರು ಬಾರಿ ಭಾರತ ವೀಸಾವನ್ನು ನಿರಾಕರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಸಲ್ಲಿಸಿದ ಮನವಿಯನ್ನೂ ತಿರಸ್ಕರಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಆ ಸಮಯದಲ್ಲಿ, ಕ್ಷಮಾ ಅವರು ಮೋದಿ ಮತ್ತು ಬಿಜೆಪಿ ಸರ್ಕಾರದ ಮುಸ್ಲಿಂ ವಿರೋಧಿ, ಬಡವರ ವಿರೋಧಿ ಸಿಎಎ-ಎನ್‌ಆರ್‌ಸಿ [ಪೌರತ್ವ ತಿದ್ದುಪಡಿ ಕಾಯ್ದೆ-ನಾಗರಿಕರ ರಾಷ್ಟ್ರೀಯ ನೋಂದಣಿ] ಕಾನೂನುಗಳನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದ್ದರು ಮತ್ತು ಮೋದಿಯವರ ಕ್ರೂರ ಮತ್ತು ಶೋಷಣಾ ನೀತಿಗಳ ವಿರುದ್ಧ ರೈತರ ಚಳವಳಿಗೆ ಒಗ್ಗಟ್ಟಿನ ನಿರ್ಣಯ ಕೈಗೊಂಡಿದ್ದರು” ಎಂದು ದೂರಿನಲ್ಲಿ ಹೇಳಲಾಗಿದೆ.

ಜನವರಿಯಲ್ಲಿ, ಸ್ವೀಡಿಷ್ ಭಾರತೀಯ ಮೂಲದ ಪ್ರಾಧ್ಯಾಪಕ ಅಶೋಕ್ ಸ್ವೈನ್ ಅವರು ತಮ್ಮ ಸಾಗರೋತ್ತರ ಭಾರತೀಯ ನಾಗರಿಕ ಸ್ಥಾನಮಾನವನ್ನು ರದ್ದುಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸುವಂತೆ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾರತದ ಸಾಗರೋತ್ತರ ಪೌರತ್ವವು ವಲಸೆ ಸ್ಥಾನಮಾನವಾಗಿದ್ದು, ಇದು ಭಾರತೀಯ ಮೂಲದ ವಿದೇಶಿಯರು ಭಾರತದಲ್ಲಿ ಅನಿರ್ದಿಷ್ಟವಾಗಿ ವಾಸಿಸಲು ಮತ್ತು ಕೆಲಸ ಮಾಡಲು ಅನುವು ಮಾಡಿಕೊಡುತ್ತದೆ. ರದ್ದತಿಯು ಅವರು ಭಾರತಕ್ಕೆ ಮರುಳುವುದನ್ನು ನಿರ್ಬಂಧಿಸುತ್ತದೆ.

ಸ್ವೈನ್ ಅವರು ಸ್ವೀಡನ್‌ನ ಉಪ್ಸಲಾ ವಿಶ್ವವಿದ್ಯಾಲಯದ ಶಾಂತಿ ಮತ್ತು ಸಂಘರ್ಷ ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮತ್ತು ಐದು ವರ್ಷಗಳಿಂದ ಭೇಟಿಯಾಗಲು ಸಾಧ್ಯವಾಗದ ತನ್ನ 82 ವರ್ಷದ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿಯಾಗುವ ಮನವಿಯನ್ನು ಸ್ವೈನ್ ಮುಂದಿಟ್ಟಿದ್ದಾರೆ.

ಭಾರತದ ಸಾರ್ವಭೌಮತೆ, ಸಮಗ್ರತೆ ಮತ್ತು ಭದ್ರತೆಯ ಹಿತಾಸಕ್ತಿಗಳಿಗೆ ವಿರುದ್ಧವಾದ “ಕಾನೂನುಬಾಹಿರ ಚಟುವಟಿಕೆಗಳಲ್ಲಿ” ತೊಡಗಿರುವುದು ಕಂಡುಬಂದಿದೆ ಎಂಬ ಆಧಾರದ ಮೇಲೆ ಕೇಂದ್ರ ಸರ್ಕಾರವು ಜುಲೈ 2023ರಲ್ಲಿ ಸ್ವೈನ್ ಅವರ ಸಾಗರೋತ್ತರ ಪೌರತ್ವ ನೋಂದಣಿಯನ್ನು ರದ್ದುಗೊಳಿಸಿತ್ತು.

ಫೆಬ್ರವರಿ 2024ರಲ್ಲಿ, ಭಾರತೀಯ ಮೂಲದ ಬ್ರಿಟಿಷ್ ಬರಹಗಾರ್ತಿ ಮತ್ತು ಲಂಡನ್‌ನ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದ ರಾಜಕೀಯ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರು, “ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ಮಾತನಾಡಿದ್ದಕ್ಕಾಗಿ” ಕೇಂದ್ರ ಸರ್ಕಾರದ ಆದೇಶದ ಮೇರೆಗೆ ದೇಶಕ್ಕೆ ಪ್ರವೇಶ ನಿರಾಕರಿಸಲಾಯಿತು ಮತ್ತು ಬೆಂಗಳೂರು ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಲಾಯಿತು ಎಂದು ಆರೋಪಿಸಿದ್ದರು.

“ಸಂವಿಧಾನ ಮತ್ತು ಪ್ರಜಾಪ್ರಭುತ್ವ” ಎಂಬ ವಿಷಯದ ಕುರಿತು ಮಾತನಾಡಲು ಕೌಲ್ ಅವರನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶಕ್ಕೆ ಆಹ್ವಾನಿಸಿತ್ತು. ಕೌಲ್ ಅವರು ಬೆಂಗಳೂರಿಗೆ ಬಂದಿಳಿದ ನಂತರ, ಮಾನ್ಯ ವೀಸಾ ಹೊಂದಿದ್ದರೂ ವಿಮಾನ ನಿಲ್ದಾಣದಿಂದ ಹೊರಹೋಗಲು ಅವರಿಗೆ ಅನುಮತಿ ನಿರಾಕರಿಸಲಾಗಿತ್ತು.

ಭಾರತದ ಸಾಗರೋತ್ತರ ನಾಗರಿಕರಾಗಿರುವ ಕೌಲ್, ಭಾರತದ ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಮಾತೃ ಪಕ್ಷವಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಟೀಕೆಗೆ ಗುರಿಯಾಗಿದ್ದರು. 2019ರಲ್ಲಿ, ಅವರು ಯುಎಸ್ ವಿದೇಶಾಂಗ ವ್ಯವಹಾರಗಳ ಸದನ ಸಮಿತಿಯ ಮುಂದೆ ಸಾಕ್ಷ್ಯ ನುಡಿದು, ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಎತ್ತಿ ತೋರಿಸಿದ್ದರು.

ಆಗಸ್ಟ್ 2022ರಲ್ಲಿ, ಅಮೆರಿಕ ಮೂಲದ ಪತ್ರಕರ್ತ ಅಂಗದ್ ಸಿಂಗ್ ಅವರು ಪಂಜಾಬ್‌ನಲ್ಲಿರುವ ತಮ್ಮ ಕುಟುಂಬವನ್ನು ಭೇಟಿ ಮಾಡಲು ನ್ಯೂಯಾರ್ಕ್‌ನಿಂದ ಆಗಮಿಸಿದ್ದಾಗ ದೆಹಲಿ ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.

ಜನವರಿ 2023ರಲ್ಲಿ, ಸಿಂಗ್ ಅವರ ಸಾಕ್ಷ್ಯಚಿತ್ರ “ಇಂಡಿಯಾ ಬರ್ನಿಂಗ್” ಭಾರತದ ಜಾತ್ಯತೀತತೆಯ ಬಗ್ಗೆ ಅತ್ಯಂತ ನಕಾರಾತ್ಮಕ ದೃಷ್ಟಿಕೋನವನ್ನು ಪ್ರಸ್ತುತಪಡಿಸಿದ ಕಾರಣ ಭಾರತಕ್ಕೆ ಭೇಟಿ ನೀಡದಂತೆ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರವು ದೆಹಲಿ ಹೈಕೋರ್ಟ್‌ ಮುಂದೆ ಸಮರ್ಥಿಸಿಕೊಂಡಿತ್ತು.

ಮಣಿಪುರ ಹಿಂಸಾಚಾರದಲ್ಲಿ ಬಿರೇನ್ ಸಿಂಗ್ ಪಾತ್ರವಿದೆ ಎಂಬ ಆಡಿಯೋ ಸೋರಿಕೆ; ಎಫ್‌ಎಸ್‌ಎಲ್‌ನಿಂದ ವರದಿ ಕೇಳಿದ ಸುಪ್ರೀಂ ಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಗಳ ವಿಚ್ಛೇದನ: ಸಿಹಿ ಹಂಚಿ, ಮೆರವಣಿಗೆಯಲ್ಲಿ ಆಕೆಯನ್ನು ಮನೆಗೆ ಕರೆತಂದ ನೀವೃತ್ತ ನ್ಯಾಯಾದೀಶ ಮತ್ತು ಕುಟುಂಬ

ಮೀರತ್: ಕೌಟುಂಬಿಕ ನ್ಯಾಯಾಲಯದಲ್ಲಿ ಮಗಳ ವಿಚ್ಛೇದನ ಅಂತಿಮವಾದ ನಂತರ ಆಕೆಯನ್ನು ಡೋಲು, ನೃತ್ಯಗಳ ಮೆರವಣಿಗೆಯಲ್ಲಿ ಸಂಭ್ರಮದಿಂದ ತಂದೆ ಮನೆಗೆ ಕರೆತಂದ ಘಟನೆ ಮೀರನ್ ನಲ್ಲಿ ನಡೆದಿದೆ.  ಪೋಷಕರ ಬೆಂಬಲದ ಅಪರೂಪದ ಮತ್ತು ಹೃದಯಸ್ಪರ್ಶಿ ಪ್ರದರ್ಶನದಲ್ಲಿ,...

“ನೀನು ನಿಜವಾಗಿಯೂ ಅಂಬೇಡ್ಕರ್ ಮಗಳಾ ಎಂದು ತಿಳಿಯಲು ನಾವು ನಿನ್ನ ಡಿಎನ್‌ಎ ಟೆಸ್ಟ್ ಮಾಡುತ್ತೇವೆ” ದೆಹಲಿ ಸಭೆಯಲ್ಲಿ ದಲಿತ ಟ್ರಾನ್ಸ್ ಹೋರಾಟಗಾರ್ತಿ ಗ್ರೇಸ್ ಬಾನುಗೆ ಜಾತಿ ನಿಂದನೆ ಆರೋಪ

ಕೇಂದ್ರ ಸರ್ಕಾರದ ವಿವಾದಾತ್ಮಕ ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ತಿದ್ದುಪಡಿ ಕಾಯ್ದೆ, 2026ರ ವಿರುದ್ಧ ಕಳೆದ ಕೆಲ ವಾರಗಳಿಂದ ಇಡೀ ಟ್ರಾನ್ಸ್‌ಜೆಂಡರ್ ಮತ್ತು ಪ್ರಗತಿಪರ ಸಮುದಾಯ ಪ್ರತಿಭಟನೆ ನಡೆಸುತ್ತಿದೆ. ಈ ನಡುವೆ ಶುಕ್ರವಾರ...

‘ಮೋದಿ ಕ್ರಿಶ್ಚಿಯನ್ ಸಂಸ್ಥೆಗಳಲ್ಲಿ ಭಯ ಹುಟ್ಟಿಸಲು ಪ್ರಯತ್ನಿಸುತ್ತಿದ್ದಾರೆ’: ಎಫ್‌ಸಿಆರ್‌ಎ ತಿದ್ದುಪಡಿ ಕುರಿತು ಮಲ್ಲಿಕಾರ್ಜುನ ಖರ್ಗೆ

ಇಡುಕ್ಕಿ (ಕೇರಳ): ಸಾರ್ವಜನಿಕ ಮತ್ತು ಸಾಮಾಜಿಕ ಕಲ್ಯಾಣ ಕ್ಷೇತ್ರದಲ್ಲಿ ಕೆಲಸ ಮಾಡುವ ಕ್ರಿಶ್ಚಿಯನ್ ಸಂಸ್ಥೆಗಳು, ಎನ್‌ಜಿಒಗಳು ಮತ್ತು ನಾಗರಿಕ ಸಮಾಜದ ಮೇಲೆ ದಾಳಿ ಮಾಡಲು ಪ್ರಧಾನಿ ನರೇಂದ್ರ ಮೋದಿ ಎಫ್‌ಸಿಆರ್‌ಎ (ವಿದೇಶಿ ದೇಣಿಗೆ...

ವೈದ್ಯಕೀಯ, ತಾಂತ್ರಿಕ ಶಿಕ್ಷಣದಲ್ಲಿ ಎಸ್‌ಸಿ/ಎಸ್‌ಟಿ ಮೀಸಲಾತಿ ಹೆಚ್ಚಿಸಿದ ಒಡಿಶಾ ಸರ್ಕಾರ, ಒಬಿಸಿ ವಿದ್ಯಾರ್ಥಿಗಳಿಗೆ ಹೊಸ ಕೋಟಾ

ಮಹತ್ವದ ನಿರ್ಧಾರ ಕೈಗೊಂಡಿರುವ ಒಡಿಶಾ ಸರ್ಕಾರ, ವೈದ್ಯಕೀಯ, ಇಂಜಿನಿಯರಿಂಗ್ ಮತ್ತು ಇತರ ತಾಂತ್ರಿಕ ಹಾಗೂ ವೃತ್ತಿಪರ ಶಿಕ್ಷಣ ಕೋರ್ಸ್‌ಗಳಲ್ಲಿ ಪರಿಶಿಷ್ಟ ಪಂಗಡ (ಎಸ್‌ಟಿ), ಪರಿಶಿಷ್ಟ ಜಾತಿ (ಎಸ್‌ಸಿ) ಅಭ್ಯರ್ಥಿಗಳಿಗೆ ಮೀಸಲಾತಿಯನ್ನು ಗಣನೀಯವಾಗಿ ಹೆಚ್ಚಿಸಿದೆ....

ಶಾಲಾ ವಾರ್ಷಿಕೋತ್ಸವದಲ್ಲಿ ಲವಲವಿಕೆಯಿಂದ ಭಾಗವಹಿಸಿದ್ದ 6 ಮಕ್ಕಳು, ತಡರಾತ್ರಿ ಹೊತ್ತಿಗೆ ಶವವಾದರು : ಮಹಾರಾಷ್ಟ್ರದಲ್ಲೊಂದು ಹೃದಯ ವಿದ್ರಾವಕ ಘಟನೆ

ಶಾಲಾ ವಾರ್ಷಿಕೋತ್ಸವದಲ್ಲಿ ಬಹಳ ಉತ್ಸಾಹದಿಂದ ಭಾಗವಹಿಸಿದ್ದ ಆರು ಮಂದಿ ಮಕ್ಕಳು, ತಡ ರಾತ್ರಿ ಹೊತ್ತಿಗೆ ಶವವಾದ ಹೃದಯ ವಿದ್ರಾವಕ ಘಟನೆಯೊಂದು ಮಹಾರಾಷ್ಟ್ರದ ದಿಂಡೋರಿಯಲ್ಲಿ ಶುಕ್ರವಾರ (ಏ.3) ನಡೆದಿದೆ. ನಾಸಿಕ್‌ ನಗರದಿಂದ 20 ಕಿಲೋ...

ಕೇರಳ: ಕೊಲ್ಲಂನಲ್ಲಿ ಟಿವಿ ಚಾನೆಲ್ ಕಚೇರಿ ಮೇಲೆ ಸ್ಫೋಟಕ ವಸ್ತು ಎಸೆತ

ಕೊಲ್ಲಂ: ಇಲ್ಲಿನ ಟಿವಿ ಚಾನೆಲ್ ಒಂದರ ಕಚೇರಿಯ ಮೇಲೆ ಭಾನುವಾರ ಬೆಳಿಗ್ಗೆ ಸ್ಫೋಟಕ ವಸ್ತು ಎಸೆಯಲಾಗಿದೆ ಎಂದು ಪೊಲೀಸರು ತಿಳಿಸಿದ್ದಾರೆ. ಪೊಲೀಸರ ಪ್ರಕಾರ, ಆ ಪ್ರದೇಶ ಮತ್ತು ಚಾನೆಲ್ ಕಚೇರಿಯ ಸಿಸಿಟಿವಿ ದೃಶ್ಯಗಳಲ್ಲಿ ಇಬ್ಬರು...

ಹತ್ಯೆಯಾದ ಇರಾನ್ ಕಮಾಂಡರ್ ಖಾಸಿಮ್ ಸುಲೈಮಾನಿ ಅವರ ಸೊಸೆ, ಮೊಮ್ಮಗಳನ್ನು ಬಂಧಿಸಿದ ಅಮೆರಿಕ

ನವದೆಹಲಿ: ಅಮೆರಿಕದ ವಿದೇಶಾಂಗ ಕಾರ್ಯದರ್ಶಿ ಮಾರ್ಕೊ ರೂಬಿಯೊ ಶುಕ್ರವಾರ ತಮ್ಮ ಶಾಶ್ವತ ನಿವಾಸಿ ಸ್ಥಾನಮಾನವನ್ನು ರದ್ದುಗೊಳಿಸಿದ ನಂತರ ಇಸ್ಲಾಮಿಕ್ ರೆವಲ್ಯೂಷನರಿ ಗಾರ್ಡ್ ಕಾರ್ಪ್ಸ್ (ಐಆರ್‌ಜಿಸಿ) ನ ದಿವಂಗತ ನಾಯಕ ಖಾಸಿಮ್ ಸೊಲೈಮಾನಿ ಅವರ...

ಇರಾನ್ ಮೇಲೆ ಬೃಹತ್ ದಾಳಿ: ಹಲವು ಉನ್ನತ ನಾಯಕರನ್ನು ಕೊಲ್ಲಲಾಗಿದೆ ಎಂದು ವಿಡಿಯೋ ಹಂಚಿಕೊಂಡ ಟ್ರಂಪ್

ಟೆಹ್ರಾನ್ ಮೇಲೆ ನಡೆದ ದಾಳಿಯ ವೀಡಿಯೊವನ್ನು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಹಂಚಿಕೊಂಡಿದ್ದು, ಹಲವಾರು ಇರಾನ್ ಮಿಲಿಟರಿ ನಾಯಕರ ಸಾವಿಗೆ ಅದು ಕಾರಣ ಎಂದು ಹೇಳಿಕೊಂಡಿದ್ದಾರೆ. "ಟೆಹ್ರಾನ್‌ನಲ್ಲಿ ನಡೆದ ಈ ಬೃಹತ್ ದಾಳಿಯೊಂದಿಗೆ, ಇರಾನ್‌ನ...

ಅಸ್ಸಾಂ ಚುನಾವಣೆ : ನುಸುಳುಕೋರರಿಂದ ಯುವ ಕಲ್ಯಾಣಕ್ಕೆ ವರಸೆ ಬದಲಿಸಿದ ಬಿಜೆಪಿ

ಅಸ್ಸಾಂ ವಿಧಾನಸಭಾ ಚುನಾವಣೆಗೆ ನಾಲ್ಕು ದಿನಗಳು ಬಾಕಿ ಇರುವಾಗ ಬಿಜೆಪಿ ತನ್ನ ಪ್ರಚಾರದ ವರಸೆಯನ್ನು ಬದಲಿಸಿಕೊಂಡಿದೆ. ನುಸುಳುಕೋರರನ್ನು ಹೊರಹಾಕುತ್ತೇವೆ, ಅಕ್ರಮ ವಲಸೆಗೆ ಕಡಿವಾಣ ಹಾಕುತ್ತೇವೆಂದು ಅಬ್ಬರಿಸುತ್ತಿದ್ದ ಬಿಜೆಪಿಗರು, ಈಗ ನುಸುಳಕೋರರ ವಿಷಯವನ್ನು ಬದಿಗೊತ್ತಿದ್ದಾರೆ....

ಕುಡಿದ ಮತ್ತಿನಲ್ಲಿ ಕಾರು ಚಾಲನೆ: ಬೈಕ್ ಗೆ ಡಿಕ್ಕಿ ಹೊಡೆದ ಪರಿಣಾಮ 19ವರ್ಷದ ಯುವಕ ಸಾವು 

ಬೆಂಗಳೂರು: ಕುಡಿದ ಮತ್ತಿನಲ್ಲಿ ಹದಿಹರೆಯದ ಯುವಕನೊಬ್ಬ ಚಲಾಯಿಸುತ್ತಿದ್ದ ಕಾರು, 19 ವರ್ಷದ ಯುವಕನ ಮೋಟಾರ್ ಸೈಕಲ್‌ಗೆ ಡಿಕ್ಕಿ ಹೊಡೆದ ಪರಿಣಾಮ ಆತ ಸಾವನ್ನಪ್ಪಿದ್ದಾನೆ. ಮಲ್ಲೇಶಪಾಳ್ಯದ ಮಾರುತಿನಗರದ 10 ನೇ ಮುಖ್ಯ ರಸ್ತೆಯಲ್ಲಿ ಶುಕ್ರವಾರ ತಡರಾತ್ರಿ...