Homeಮುಖಪುಟಬೆಂಗಳೂರಿನಲ್ಲಿರುವ ತಾಯಿಗೆ ಅನಾರೋಗ್ಯ |ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ವೀಸಾ ನಿರಾಕರಣೆ

ಬೆಂಗಳೂರಿನಲ್ಲಿರುವ ತಾಯಿಗೆ ಅನಾರೋಗ್ಯ |ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ವೀಸಾ ನಿರಾಕರಣೆ

- Advertisement -
- Advertisement -

ಬೆಂಗಳೂರಿನಲ್ಲಿರುವ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ಭಾರತ ಸರ್ಕಾರ ವೀಸಾ ನಿರಾಕರಿಸಿದೆ ಎಂದು ಭಾರತೀಯ ಮೂಲದ ಜಾತಿ ವಿರೋಧಿ ಹೋರಾಟಗಾರ್ತಿ ಕ್ಷಮಾ ಸಾವಂತ್ ಭಾನುವಾರ (ಫೆ.3) ಆರೋಪಿಸಿದ್ದಾರೆ.

ಅಮೆರಿಕಲ್ಲಿ ವಾಸವಿರುವ ಸಾವಂತ್ ಅವರು 2013ರಿಂದ 2023 ರವರೆಗೆ, ಅಲ್ಲಿನ ಸಿಯಾಟಲ್ ಸಿಟಿ ಕೌನ್ಸಿಲ್‌ನಲ್ಲಿ ಚುನಾಯಿತ ಪ್ರತಿನಿಧಿಯಾಗಿದ್ದರು.

ಫೆಬ್ರವರಿ 2023ರಲ್ಲಿ, ಸಾವಂತ್ ಅವರು ಮಂಡಿಸಿದ ನಿರ್ಣಯ ಅಂಗೀಕಾರ ಪಡೆಯುವ ಮೂಲಕ, ಸಿಯಾಟಲ್ ಜಾತಿ ಆಧಾರಿತ ತಾರತಮ್ಯವನ್ನು ನಿಷೇಧಿಸಿದ ಮೊದಲ ಅಮೆರಿಕನ್ ನಗರ ಎನಿಸಿಕೊಂಡಿತ್ತು.

ತನ್ನ ವೀಸಾ ನಿರಾಕರಣೆಯನ್ನು “ಭಾರತೀಯ ಜನತಾ ಪಕ್ಷದ (ಬಿಜೆಪಿ) ಸರ್ಕಾರದ ರಾಜಕೀಯ ಪ್ರತೀಕಾರ” ಎಂದು ಸಾವಂತ್ ಆರೋಪಿಸಿದ್ದಾರೆ. ಈ ಕ್ರಮವನ್ನು ಪ್ರತಿಭಟಿಸಿ ಭಾರತ ಸರ್ಕಾರದ ವಿರುದ್ದ ಅವರು ಆನ್‌ಲೈನ್ ದೂರು ಆರಂಭಿಸಿದ್ದಾರೆ.

“ಮೋದಿ ಇತರ ಹೋರಾಟಗಾರರು ಮತ್ತು ಪತ್ರಕರ್ತರ ವಿರುದ್ಧವೂ ಇದೇ ರೀತಿ ಸೇಡು ತೀರಿಸಿಕೊಂಡಿದ್ದಾರೆ. ಭಾರತಕ್ಕೆ ಪ್ರವೇಶ ನಿರಾಕರಿಸಿದ್ದಾರೆ ಅಥವಾ ರದ್ದುಗೊಳಿಸಿದ್ದಾರೆ” ಎಂದು ಸಾವಂತ್ ದೂರಿದ್ದಾರೆ. ತನ್ನ 82 ವರ್ಷದ ತಾಯಿಯ ಆರೋಗ್ಯವು ವೇಗವಾಗಿ ಕ್ಷೀಣಿಸುತ್ತಿದೆ ಎಂದಿದ್ದಾರೆ.

“ಕ್ಷಮಾ ಸಾವಂತ್ ಮತ್ತು ಅವರ ಪತಿ ಕ್ಯಾಲ್ವಿನ್ ಪ್ರೀಸ್ಟ್ ಅವರಿಗೆ ಭಾರತಕ್ಕೆ ಪ್ರಯಾಣಿಸಲು ಮತ್ತು ಕ್ಷಮಾ ಅವರಿಗೆ ತಾಯಿಯನ್ನು ಭೇಟಿ ಮಾಡಲು ಸಾಧ್ಯವಾಗುವಂತೆ ಮಾನವೀಯ ನೆಲೆಯಲ್ಲಿ ತುರ್ತಾಗಿ ವೀಸಾ ಮಂಜೂರು ಮಾಡುವಂತೆ ನಾವು ಮೋದಿ ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಆನ್‌ಲೈನ್‌ ದೂರಿನಲ್ಲಿ ಹೇಳಲಾಗಿದೆ.

ಯಾವುದೇ ವಿವರಣೆ ನೀಡದೆ ಸಾವಂತ್ ಅವರಿಗೆ ಮೂರು ಬಾರಿ ಭಾರತ ವೀಸಾವನ್ನು ನಿರಾಕರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಸಲ್ಲಿಸಿದ ಮನವಿಯನ್ನೂ ತಿರಸ್ಕರಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಆ ಸಮಯದಲ್ಲಿ, ಕ್ಷಮಾ ಅವರು ಮೋದಿ ಮತ್ತು ಬಿಜೆಪಿ ಸರ್ಕಾರದ ಮುಸ್ಲಿಂ ವಿರೋಧಿ, ಬಡವರ ವಿರೋಧಿ ಸಿಎಎ-ಎನ್‌ಆರ್‌ಸಿ [ಪೌರತ್ವ ತಿದ್ದುಪಡಿ ಕಾಯ್ದೆ-ನಾಗರಿಕರ ರಾಷ್ಟ್ರೀಯ ನೋಂದಣಿ] ಕಾನೂನುಗಳನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದ್ದರು ಮತ್ತು ಮೋದಿಯವರ ಕ್ರೂರ ಮತ್ತು ಶೋಷಣಾ ನೀತಿಗಳ ವಿರುದ್ಧ ರೈತರ ಚಳವಳಿಗೆ ಒಗ್ಗಟ್ಟಿನ ನಿರ್ಣಯ ಕೈಗೊಂಡಿದ್ದರು” ಎಂದು ದೂರಿನಲ್ಲಿ ಹೇಳಲಾಗಿದೆ.

ಜನವರಿಯಲ್ಲಿ, ಸ್ವೀಡಿಷ್ ಭಾರತೀಯ ಮೂಲದ ಪ್ರಾಧ್ಯಾಪಕ ಅಶೋಕ್ ಸ್ವೈನ್ ಅವರು ತಮ್ಮ ಸಾಗರೋತ್ತರ ಭಾರತೀಯ ನಾಗರಿಕ ಸ್ಥಾನಮಾನವನ್ನು ರದ್ದುಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸುವಂತೆ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾರತದ ಸಾಗರೋತ್ತರ ಪೌರತ್ವವು ವಲಸೆ ಸ್ಥಾನಮಾನವಾಗಿದ್ದು, ಇದು ಭಾರತೀಯ ಮೂಲದ ವಿದೇಶಿಯರು ಭಾರತದಲ್ಲಿ ಅನಿರ್ದಿಷ್ಟವಾಗಿ ವಾಸಿಸಲು ಮತ್ತು ಕೆಲಸ ಮಾಡಲು ಅನುವು ಮಾಡಿಕೊಡುತ್ತದೆ. ರದ್ದತಿಯು ಅವರು ಭಾರತಕ್ಕೆ ಮರುಳುವುದನ್ನು ನಿರ್ಬಂಧಿಸುತ್ತದೆ.

ಸ್ವೈನ್ ಅವರು ಸ್ವೀಡನ್‌ನ ಉಪ್ಸಲಾ ವಿಶ್ವವಿದ್ಯಾಲಯದ ಶಾಂತಿ ಮತ್ತು ಸಂಘರ್ಷ ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮತ್ತು ಐದು ವರ್ಷಗಳಿಂದ ಭೇಟಿಯಾಗಲು ಸಾಧ್ಯವಾಗದ ತನ್ನ 82 ವರ್ಷದ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿಯಾಗುವ ಮನವಿಯನ್ನು ಸ್ವೈನ್ ಮುಂದಿಟ್ಟಿದ್ದಾರೆ.

ಭಾರತದ ಸಾರ್ವಭೌಮತೆ, ಸಮಗ್ರತೆ ಮತ್ತು ಭದ್ರತೆಯ ಹಿತಾಸಕ್ತಿಗಳಿಗೆ ವಿರುದ್ಧವಾದ “ಕಾನೂನುಬಾಹಿರ ಚಟುವಟಿಕೆಗಳಲ್ಲಿ” ತೊಡಗಿರುವುದು ಕಂಡುಬಂದಿದೆ ಎಂಬ ಆಧಾರದ ಮೇಲೆ ಕೇಂದ್ರ ಸರ್ಕಾರವು ಜುಲೈ 2023ರಲ್ಲಿ ಸ್ವೈನ್ ಅವರ ಸಾಗರೋತ್ತರ ಪೌರತ್ವ ನೋಂದಣಿಯನ್ನು ರದ್ದುಗೊಳಿಸಿತ್ತು.

ಫೆಬ್ರವರಿ 2024ರಲ್ಲಿ, ಭಾರತೀಯ ಮೂಲದ ಬ್ರಿಟಿಷ್ ಬರಹಗಾರ್ತಿ ಮತ್ತು ಲಂಡನ್‌ನ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದ ರಾಜಕೀಯ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರು, “ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ಮಾತನಾಡಿದ್ದಕ್ಕಾಗಿ” ಕೇಂದ್ರ ಸರ್ಕಾರದ ಆದೇಶದ ಮೇರೆಗೆ ದೇಶಕ್ಕೆ ಪ್ರವೇಶ ನಿರಾಕರಿಸಲಾಯಿತು ಮತ್ತು ಬೆಂಗಳೂರು ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಲಾಯಿತು ಎಂದು ಆರೋಪಿಸಿದ್ದರು.

“ಸಂವಿಧಾನ ಮತ್ತು ಪ್ರಜಾಪ್ರಭುತ್ವ” ಎಂಬ ವಿಷಯದ ಕುರಿತು ಮಾತನಾಡಲು ಕೌಲ್ ಅವರನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶಕ್ಕೆ ಆಹ್ವಾನಿಸಿತ್ತು. ಕೌಲ್ ಅವರು ಬೆಂಗಳೂರಿಗೆ ಬಂದಿಳಿದ ನಂತರ, ಮಾನ್ಯ ವೀಸಾ ಹೊಂದಿದ್ದರೂ ವಿಮಾನ ನಿಲ್ದಾಣದಿಂದ ಹೊರಹೋಗಲು ಅವರಿಗೆ ಅನುಮತಿ ನಿರಾಕರಿಸಲಾಗಿತ್ತು.

ಭಾರತದ ಸಾಗರೋತ್ತರ ನಾಗರಿಕರಾಗಿರುವ ಕೌಲ್, ಭಾರತದ ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಮಾತೃ ಪಕ್ಷವಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಟೀಕೆಗೆ ಗುರಿಯಾಗಿದ್ದರು. 2019ರಲ್ಲಿ, ಅವರು ಯುಎಸ್ ವಿದೇಶಾಂಗ ವ್ಯವಹಾರಗಳ ಸದನ ಸಮಿತಿಯ ಮುಂದೆ ಸಾಕ್ಷ್ಯ ನುಡಿದು, ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಎತ್ತಿ ತೋರಿಸಿದ್ದರು.

ಆಗಸ್ಟ್ 2022ರಲ್ಲಿ, ಅಮೆರಿಕ ಮೂಲದ ಪತ್ರಕರ್ತ ಅಂಗದ್ ಸಿಂಗ್ ಅವರು ಪಂಜಾಬ್‌ನಲ್ಲಿರುವ ತಮ್ಮ ಕುಟುಂಬವನ್ನು ಭೇಟಿ ಮಾಡಲು ನ್ಯೂಯಾರ್ಕ್‌ನಿಂದ ಆಗಮಿಸಿದ್ದಾಗ ದೆಹಲಿ ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.

ಜನವರಿ 2023ರಲ್ಲಿ, ಸಿಂಗ್ ಅವರ ಸಾಕ್ಷ್ಯಚಿತ್ರ “ಇಂಡಿಯಾ ಬರ್ನಿಂಗ್” ಭಾರತದ ಜಾತ್ಯತೀತತೆಯ ಬಗ್ಗೆ ಅತ್ಯಂತ ನಕಾರಾತ್ಮಕ ದೃಷ್ಟಿಕೋನವನ್ನು ಪ್ರಸ್ತುತಪಡಿಸಿದ ಕಾರಣ ಭಾರತಕ್ಕೆ ಭೇಟಿ ನೀಡದಂತೆ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರವು ದೆಹಲಿ ಹೈಕೋರ್ಟ್‌ ಮುಂದೆ ಸಮರ್ಥಿಸಿಕೊಂಡಿತ್ತು.

ಮಣಿಪುರ ಹಿಂಸಾಚಾರದಲ್ಲಿ ಬಿರೇನ್ ಸಿಂಗ್ ಪಾತ್ರವಿದೆ ಎಂಬ ಆಡಿಯೋ ಸೋರಿಕೆ; ಎಫ್‌ಎಸ್‌ಎಲ್‌ನಿಂದ ವರದಿ ಕೇಳಿದ ಸುಪ್ರೀಂ ಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ವಿದ್ಯುತ್ ಖಾಸಗೀಕರಣ ವಿರುದ್ದದ ಹೋರಾಟಕ್ಕೆ ಗೆಲುವು: ಅರ್ಜಿ ಹಿಂಪಡೆದ ಟಾಟಾ ಪವರ್ ಕಂಪನಿ

ರಾಜ್ಯದಲ್ಲಿ ವಿದ್ಯುತ್ ಕ್ಷೇತ್ರದಲ್ಲಿ ಖಾಸಗೀಕರಣದ ಹೆಜ್ಜೆ ಇಡಲು ಮುಂದಾಗಿದ್ದ ಟಾಟಾ ಪವರ್ ಕಂಪನಿಗೆ ಭಾರಿ ಹಿನ್ನಡೆಯಾಗಿದೆ. ಕರ್ನಾಟಕ ವಿದ್ಯುತ್ ನಿಯಂತ್ರಣ ಆಯೋಗದ (KERC) ಮುಂದೆ ರಾಜ್ಯದ 19 ಕಂದಾಯ ಜಿಲ್ಲೆಗಳಿಗೆ ಸಂಬಂಧಿಸಿದಂತೆ ತಾನು...

SIR: ಮತದಾರರ ಮನೆಗೆ ಹೋಗದೆ ಕಚೇರಿಯಲ್ಲೇ ಕುಳಿತು ಫಾರ್ಮ್ ವಿತರಣೆ ಆರೋಪ, BLO ಗಳಿಗೆ ಎಚ್ಚರಿಕೆ ನೀಡಿದ ಆಯೋಗ

ರಾಜ್ಯದಲ್ಲಿ ಪ್ರಸ್ತುತ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ಸಾರ್ವಜನಿಕರಿಂದ ವ್ಯಾಪಕ ದೂರುಗಳು ಕೇಳಿಬಂದ ಬೆನ್ನಲ್ಲೇ, ರಾಜ್ಯ ಚುನಾವಣಾ ಆಯೋಗವು ತೀವ್ರ ಆಕ್ಷೇಪ ವ್ಯಕ್ತಪಡಿಸಿದೆ. ಮತದಾರರ ಮನೆ-ಮನೆಗೆ ಭೇಟಿ...

ಅಳುವ ಕಂದಮ್ಮಗಳನ್ನು ವಾಷಿಂಗ್ ಮೆಷಿನ್‌ನಲ್ಲಿ ಕೂಡಿಹಾಕ್ತಿದ್ದ ಇಬ್ಬರು ಕೇರ್‌ಟೇಕರ್ ಅರೆಸ್ಟ್

ಸಿಲಿಕಾನ್ ಸಿಟಿಯ ಬ್ರೂಕ್‌ಫೀಲ್ಡ್‌ನಲ್ಲಿರುವ ಪ್ರಮುಖ ಐಟಿ ಸಂಸ್ಥೆ 'ಕ್ಯಾಪ್‌ಜೆಮಿನಿ' ಕ್ಯಾಂಪಸ್‌ನ ಡೇ-ಕೇರ್ ಸೆಂಟರ್‌ನಲ್ಲಿ ಪುಟ್ಟ ಕಂದಮ್ಮಗಳನ್ನು ಬಾತ್‌ರೂಮ್ ಹಾಗೂ ವಾಷಿಂಗ್ ಮೆಷಿನ್‌ಗಳಲ್ಲಿ ಕೂಡಿಹಾಕಿ ವಿಕೃತಿ ಮೆರೆದಿದ್ದ ಪ್ರಕರಣದಲ್ಲಿ ಪೊಲೀಸರು ಭರ್ಜರಿ ಬೇಟೆಯಾಡಿದ್ದಾರೆ. ಪ್ರಕರಣದ...

“ನಾಗರಿಕರು ಸರ್ಕಾರದ ಗುಲಾಮರಲ್ಲ”: ಸಿಎಎ, ಜ್ಞಾನವಾಪಿ ವಿರೋಧಿ ಪ್ರತಿಭಟನೆ ಸಂಬಂಧ ಎಸ್‌ಡಿಪಿಐ ನಾಯಕನ ಗಡಿಪಾರು ಪ್ರಶ್ನಿಸಿದ ಬಾಂಬೆ ಹೈಕೋರ್ಟ್

“ದೇಶದ ನಾಗರಿಕರು ಸರ್ಕಾರದ ಗುಲಾಮರಲ್ಲ. ಕೇವಲ ಸರ್ಕಾರದ ನಿರ್ಧಾರಗಳನ್ನು ವಿರೋಧಿಸುವುದು ಅಥವಾ ಆಡಳಿತ ವ್ಯವಸ್ಥೆಯ ವಿರುದ್ಧ ಘೋಷಣೆಗಳನ್ನು ಕೂಗುವುದು ಒಬ್ಬ ನಾಗರಿಕನನ್ನು ಗಡಿಪಾರು ಮಾಡಲು ಕಾನೂನಾತ್ಮಕ ಕಾರಣವಾಗಲಾರದು,” ಎಂದು ಬಾಂಬೆ ಹೈಕೋರ್ಟ್‌ ಐತಿಹಾಸಿಕ...

ಗೌರಿಯಕ್ಕ, ಸುರೇಶ್ ಭಟ್ರ ಬಗ್ಗೆ ತಿಳಿಯಲು ಎಕ್ಸ್ ಆರೆಸ್ಸೆಸ್‌ನವರ ಪ್ರಮಾಣ ಪತ್ರ ಬೇಕಿಲ್ಲ

ಕರ್ನಾಟಕ ಕೋಮು ಸೌಹಾರ್ದ ವೇದಿಕೆಯಲ್ಲಿ ನಮ್ಮ ಒಡನಾಡಿಯಾಗಿದ್ದ ಎ‌ಐಸಿಸಿ ಕಾರ್ಯದರ್ಶಿಯೂ ಆಗಿರುವ ಪಿ.ವಿ.ಮೋಹನ್‌ರಿಗೆ ವಿಧಾನ ಪರಿಷತ್ ಸದಸ್ಯತ್ವ ಸಿಕ್ಕಿದ್ದು ಸಹಜವಾಗಿಯೇ ನಮಗೆ ಖುಷಿಯಾಗಿತ್ತು. ಈ ನಿಟ್ಟಿನಲ್ಲಿ ಮಂಗಳೂರಿನ ವುಡ್‌ಲ್ಯಾಂಡ್ಸ್ ಹೋಟೆಲಲ್ಲಿ ಕೋಮು ಸೌಹಾರ್ದ...

ಡ್ರಗ್ಸ್ ಮುಕ್ತ ಕರ್ನಾಟಕ ನಮ್ಮ ಗುರಿ: ‘ಆಪರೇಷನ್ RISE’ ಮತ್ತು ‘ಬೇಡ BRO’ ಅಭಿಯಾನಕ್ಕೆ ಸಚಿವ ಪ್ರಿಯಾಂಕ್ ಖರ್ಗೆ ಕರೆ

ಬೆಂಗಳೂರು: ಮಾದಕ ದ್ರವ್ಯ ಮುಕ್ತ ಕರ್ನಾಟಕವನ್ನು ನಿರ್ಮಿಸುವ ನಿಟ್ಟಿನಲ್ಲಿ ರಾಜ್ಯ ಸರ್ಕಾರ ಮಹತ್ವದ ಹೆಜ್ಜೆ ಇಟ್ಟಿದ್ದು, ಮಾದಕ ವ್ಯಸನದ ವಿರುದ್ಧ ಯುವಜನತೆ ಮತ್ತು ಸಾರ್ವಜನಿಕರು ಕೈಜೋಡಿಸಬೇಕು ಎಂದು ಗೃಹ ಸಚಿವ ಪ್ರಿಯಾಂಕ್ ಖರ್ಗೆ...

ಬೆಂಗಳೂರಿನ 3 ಪ್ರಮುಖ ಮಾರ್ಗಗಳಲ್ಲಿ ಟೋಲ್ ದರ ಭಾರಿ ಹೆಚ್ಚಳ: ಇಂದಿನಿಂದಲೇ ಜಾರಿ 

ಬೆಂಗಳೂರು: ಸಿಲಿಕಾನ್ ಸಿಟಿಯ ವಾಹನ ಸವಾರರಿಗೆ ಜುಲೈ ಒಂದರಿಂದಲೇ ಅನ್ವಯವಾಗುವಂತೆ ಬೆಲೆ ಏರಿಕೆಯ ಭಾರಿ ಬಿಸಿ ತಟ್ಟಿದೆ. ಬೆಂಗಳೂರಿನ ಪ್ರಮುಖ ಸಂಪರ್ಕ ರಸ್ತೆಗಳಾದ ನೈಸ್ ರಸ್ತೆ (NICE Road), ಎಲೆಕ್ಟ್ರಾನಿಕ್ಸ್ ಸಿಟಿ ಎಲಿವೇಟೆಡ್...

ಕೊಪ್ಪಳದ ಬೋಚನಹಳ್ಳಿಯಲ್ಲಿ ದಲಿತರ ಮೇಲೆ ಹಲ್ಲೆ: ದೂರು-ಪ್ರತಿದೂರು; ಹೋರಾಟಕ್ಕೆ ಸಂಘಟನೆಗಳ ನಿರ್ಧಾರ

ಮೊಹರಂ ಮೆರವಣಿಗೆ ವೇಳೆ ನಡೆದ ಗಲಾಟೆಗೆ ಸಂಬಂಧಿಸಿದಂತೆ ದಲಿತರ ಮನೆಗಳಿಗೆ ನುಗ್ಗಿ ಮಾರಣಾಂತಿಕ ಹಲ್ಲೆ ನಡೆಸಿದ ಘಟನೆ ಕೊಪ್ಪಳ ತಾಲೂಕಿನ ಅಳವಂಡಿ ಬಳಿಯ ಬೋಚನಹಳ್ಳಿ ಗ್ರಾಮದಲ್ಲಿ ನಡೆದಿದೆ. ಜೂನ್ 25ರಂದು ಗ್ರಾಮದಲ್ಲಿ ಮೊಹರಂ ಮೆರವಣಿಗೆ...

ಎನ್ಯೂಮರೇಷನ್ ಫಾರಂ ಭರ್ತಿ ಮಾಡುವ ಮೂಲಕ SIR ಗೆ ಚಾಲನೆ ನೀಡಿದ ಸಿಎಂ ಡಿ.ಕೆ ಶಿವಕುಮಾರ್

ಮುಖ್ಯಮಂತ್ರಿ ಡಿ.ಕೆ. ಶಿವಕುಮಾರ್ ಇಂದು (ಜೂನ್ 30) ಮಂಗಳವಾರ ತಮ್ಮ ಸದಾಶಿವನಗರ ನಿವಾಸದಲ್ಲಿ ದಾಖಲಾತಿ ನಮೂನೆಯನ್ನು ಭರ್ತಿ ಮಾಡಿ ಸಲ್ಲಿಸುವ ಮೂಲಕ ಮತದಾರರ ಪಟ್ಟಿಯ 'ವಿಶೇಷ ತೀವ್ರ ಪರಿಷ್ಕರಣೆ' (SIR) ಅಭಿಯಾನಕ್ಕೆ ಅಧಿಕೃತವಾಗಿ...

‘ಆಪರೇಷನ್ ಸಿಂಧೂರ್‌’ ಕುರಿತು ಸಂಸತ್ತಿಗೆ ಸುಳ್ಳು ಮಾಹಿತಿ: ರಾಜನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್‌ನಿಂದ ಹಕ್ಕುಚ್ಯುತಿ ನೋಟಿಸ್

ಕೇಂದ್ರ ರಕ್ಷಣಾ ಸಚಿವ ರಾಜ್‌ನಾಥ್ ಸಿಂಗ್ ವಿರುದ್ಧ ಕಾಂಗ್ರೆಸ್ ಪಕ್ಷ ಲೋಕಸಭೆಯಲ್ಲಿ ಹಕ್ಕುಚ್ಯುತಿ ನೋಟಿಸ್ ನೀಡಿದೆ. ಕಾಂಗ್ರೆಸ್ ಸಂಸದ ಕೆ. ಸಿ. ವೇಣುಗೋಪಾಲ್ ಅವರು ಲೋಕಸಭಾ ಸ್ಪೀಕರ್ ಓಂ ಬಿರ್ಲಾ ಅವರಿಗೆ ಈ ಕುರಿತು ಪತ್ರ ಬರೆದಿದ್ದು,...