Homeಮುಖಪುಟಬೆಂಗಳೂರಿನಲ್ಲಿರುವ ತಾಯಿಗೆ ಅನಾರೋಗ್ಯ |ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ವೀಸಾ ನಿರಾಕರಣೆ

ಬೆಂಗಳೂರಿನಲ್ಲಿರುವ ತಾಯಿಗೆ ಅನಾರೋಗ್ಯ |ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ವೀಸಾ ನಿರಾಕರಣೆ

- Advertisement -
- Advertisement -

ಬೆಂಗಳೂರಿನಲ್ಲಿರುವ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ಭಾರತ ಸರ್ಕಾರ ವೀಸಾ ನಿರಾಕರಿಸಿದೆ ಎಂದು ಭಾರತೀಯ ಮೂಲದ ಜಾತಿ ವಿರೋಧಿ ಹೋರಾಟಗಾರ್ತಿ ಕ್ಷಮಾ ಸಾವಂತ್ ಭಾನುವಾರ (ಫೆ.3) ಆರೋಪಿಸಿದ್ದಾರೆ.

ಅಮೆರಿಕಲ್ಲಿ ವಾಸವಿರುವ ಸಾವಂತ್ ಅವರು 2013ರಿಂದ 2023 ರವರೆಗೆ, ಅಲ್ಲಿನ ಸಿಯಾಟಲ್ ಸಿಟಿ ಕೌನ್ಸಿಲ್‌ನಲ್ಲಿ ಚುನಾಯಿತ ಪ್ರತಿನಿಧಿಯಾಗಿದ್ದರು.

ಫೆಬ್ರವರಿ 2023ರಲ್ಲಿ, ಸಾವಂತ್ ಅವರು ಮಂಡಿಸಿದ ನಿರ್ಣಯ ಅಂಗೀಕಾರ ಪಡೆಯುವ ಮೂಲಕ, ಸಿಯಾಟಲ್ ಜಾತಿ ಆಧಾರಿತ ತಾರತಮ್ಯವನ್ನು ನಿಷೇಧಿಸಿದ ಮೊದಲ ಅಮೆರಿಕನ್ ನಗರ ಎನಿಸಿಕೊಂಡಿತ್ತು.

ತನ್ನ ವೀಸಾ ನಿರಾಕರಣೆಯನ್ನು “ಭಾರತೀಯ ಜನತಾ ಪಕ್ಷದ (ಬಿಜೆಪಿ) ಸರ್ಕಾರದ ರಾಜಕೀಯ ಪ್ರತೀಕಾರ” ಎಂದು ಸಾವಂತ್ ಆರೋಪಿಸಿದ್ದಾರೆ. ಈ ಕ್ರಮವನ್ನು ಪ್ರತಿಭಟಿಸಿ ಭಾರತ ಸರ್ಕಾರದ ವಿರುದ್ದ ಅವರು ಆನ್‌ಲೈನ್ ದೂರು ಆರಂಭಿಸಿದ್ದಾರೆ.

“ಮೋದಿ ಇತರ ಹೋರಾಟಗಾರರು ಮತ್ತು ಪತ್ರಕರ್ತರ ವಿರುದ್ಧವೂ ಇದೇ ರೀತಿ ಸೇಡು ತೀರಿಸಿಕೊಂಡಿದ್ದಾರೆ. ಭಾರತಕ್ಕೆ ಪ್ರವೇಶ ನಿರಾಕರಿಸಿದ್ದಾರೆ ಅಥವಾ ರದ್ದುಗೊಳಿಸಿದ್ದಾರೆ” ಎಂದು ಸಾವಂತ್ ದೂರಿದ್ದಾರೆ. ತನ್ನ 82 ವರ್ಷದ ತಾಯಿಯ ಆರೋಗ್ಯವು ವೇಗವಾಗಿ ಕ್ಷೀಣಿಸುತ್ತಿದೆ ಎಂದಿದ್ದಾರೆ.

“ಕ್ಷಮಾ ಸಾವಂತ್ ಮತ್ತು ಅವರ ಪತಿ ಕ್ಯಾಲ್ವಿನ್ ಪ್ರೀಸ್ಟ್ ಅವರಿಗೆ ಭಾರತಕ್ಕೆ ಪ್ರಯಾಣಿಸಲು ಮತ್ತು ಕ್ಷಮಾ ಅವರಿಗೆ ತಾಯಿಯನ್ನು ಭೇಟಿ ಮಾಡಲು ಸಾಧ್ಯವಾಗುವಂತೆ ಮಾನವೀಯ ನೆಲೆಯಲ್ಲಿ ತುರ್ತಾಗಿ ವೀಸಾ ಮಂಜೂರು ಮಾಡುವಂತೆ ನಾವು ಮೋದಿ ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಆನ್‌ಲೈನ್‌ ದೂರಿನಲ್ಲಿ ಹೇಳಲಾಗಿದೆ.

ಯಾವುದೇ ವಿವರಣೆ ನೀಡದೆ ಸಾವಂತ್ ಅವರಿಗೆ ಮೂರು ಬಾರಿ ಭಾರತ ವೀಸಾವನ್ನು ನಿರಾಕರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಸಲ್ಲಿಸಿದ ಮನವಿಯನ್ನೂ ತಿರಸ್ಕರಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಆ ಸಮಯದಲ್ಲಿ, ಕ್ಷಮಾ ಅವರು ಮೋದಿ ಮತ್ತು ಬಿಜೆಪಿ ಸರ್ಕಾರದ ಮುಸ್ಲಿಂ ವಿರೋಧಿ, ಬಡವರ ವಿರೋಧಿ ಸಿಎಎ-ಎನ್‌ಆರ್‌ಸಿ [ಪೌರತ್ವ ತಿದ್ದುಪಡಿ ಕಾಯ್ದೆ-ನಾಗರಿಕರ ರಾಷ್ಟ್ರೀಯ ನೋಂದಣಿ] ಕಾನೂನುಗಳನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದ್ದರು ಮತ್ತು ಮೋದಿಯವರ ಕ್ರೂರ ಮತ್ತು ಶೋಷಣಾ ನೀತಿಗಳ ವಿರುದ್ಧ ರೈತರ ಚಳವಳಿಗೆ ಒಗ್ಗಟ್ಟಿನ ನಿರ್ಣಯ ಕೈಗೊಂಡಿದ್ದರು” ಎಂದು ದೂರಿನಲ್ಲಿ ಹೇಳಲಾಗಿದೆ.

ಜನವರಿಯಲ್ಲಿ, ಸ್ವೀಡಿಷ್ ಭಾರತೀಯ ಮೂಲದ ಪ್ರಾಧ್ಯಾಪಕ ಅಶೋಕ್ ಸ್ವೈನ್ ಅವರು ತಮ್ಮ ಸಾಗರೋತ್ತರ ಭಾರತೀಯ ನಾಗರಿಕ ಸ್ಥಾನಮಾನವನ್ನು ರದ್ದುಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸುವಂತೆ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾರತದ ಸಾಗರೋತ್ತರ ಪೌರತ್ವವು ವಲಸೆ ಸ್ಥಾನಮಾನವಾಗಿದ್ದು, ಇದು ಭಾರತೀಯ ಮೂಲದ ವಿದೇಶಿಯರು ಭಾರತದಲ್ಲಿ ಅನಿರ್ದಿಷ್ಟವಾಗಿ ವಾಸಿಸಲು ಮತ್ತು ಕೆಲಸ ಮಾಡಲು ಅನುವು ಮಾಡಿಕೊಡುತ್ತದೆ. ರದ್ದತಿಯು ಅವರು ಭಾರತಕ್ಕೆ ಮರುಳುವುದನ್ನು ನಿರ್ಬಂಧಿಸುತ್ತದೆ.

ಸ್ವೈನ್ ಅವರು ಸ್ವೀಡನ್‌ನ ಉಪ್ಸಲಾ ವಿಶ್ವವಿದ್ಯಾಲಯದ ಶಾಂತಿ ಮತ್ತು ಸಂಘರ್ಷ ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮತ್ತು ಐದು ವರ್ಷಗಳಿಂದ ಭೇಟಿಯಾಗಲು ಸಾಧ್ಯವಾಗದ ತನ್ನ 82 ವರ್ಷದ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿಯಾಗುವ ಮನವಿಯನ್ನು ಸ್ವೈನ್ ಮುಂದಿಟ್ಟಿದ್ದಾರೆ.

ಭಾರತದ ಸಾರ್ವಭೌಮತೆ, ಸಮಗ್ರತೆ ಮತ್ತು ಭದ್ರತೆಯ ಹಿತಾಸಕ್ತಿಗಳಿಗೆ ವಿರುದ್ಧವಾದ “ಕಾನೂನುಬಾಹಿರ ಚಟುವಟಿಕೆಗಳಲ್ಲಿ” ತೊಡಗಿರುವುದು ಕಂಡುಬಂದಿದೆ ಎಂಬ ಆಧಾರದ ಮೇಲೆ ಕೇಂದ್ರ ಸರ್ಕಾರವು ಜುಲೈ 2023ರಲ್ಲಿ ಸ್ವೈನ್ ಅವರ ಸಾಗರೋತ್ತರ ಪೌರತ್ವ ನೋಂದಣಿಯನ್ನು ರದ್ದುಗೊಳಿಸಿತ್ತು.

ಫೆಬ್ರವರಿ 2024ರಲ್ಲಿ, ಭಾರತೀಯ ಮೂಲದ ಬ್ರಿಟಿಷ್ ಬರಹಗಾರ್ತಿ ಮತ್ತು ಲಂಡನ್‌ನ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದ ರಾಜಕೀಯ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರು, “ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ಮಾತನಾಡಿದ್ದಕ್ಕಾಗಿ” ಕೇಂದ್ರ ಸರ್ಕಾರದ ಆದೇಶದ ಮೇರೆಗೆ ದೇಶಕ್ಕೆ ಪ್ರವೇಶ ನಿರಾಕರಿಸಲಾಯಿತು ಮತ್ತು ಬೆಂಗಳೂರು ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಲಾಯಿತು ಎಂದು ಆರೋಪಿಸಿದ್ದರು.

“ಸಂವಿಧಾನ ಮತ್ತು ಪ್ರಜಾಪ್ರಭುತ್ವ” ಎಂಬ ವಿಷಯದ ಕುರಿತು ಮಾತನಾಡಲು ಕೌಲ್ ಅವರನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶಕ್ಕೆ ಆಹ್ವಾನಿಸಿತ್ತು. ಕೌಲ್ ಅವರು ಬೆಂಗಳೂರಿಗೆ ಬಂದಿಳಿದ ನಂತರ, ಮಾನ್ಯ ವೀಸಾ ಹೊಂದಿದ್ದರೂ ವಿಮಾನ ನಿಲ್ದಾಣದಿಂದ ಹೊರಹೋಗಲು ಅವರಿಗೆ ಅನುಮತಿ ನಿರಾಕರಿಸಲಾಗಿತ್ತು.

ಭಾರತದ ಸಾಗರೋತ್ತರ ನಾಗರಿಕರಾಗಿರುವ ಕೌಲ್, ಭಾರತದ ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಮಾತೃ ಪಕ್ಷವಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಟೀಕೆಗೆ ಗುರಿಯಾಗಿದ್ದರು. 2019ರಲ್ಲಿ, ಅವರು ಯುಎಸ್ ವಿದೇಶಾಂಗ ವ್ಯವಹಾರಗಳ ಸದನ ಸಮಿತಿಯ ಮುಂದೆ ಸಾಕ್ಷ್ಯ ನುಡಿದು, ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಎತ್ತಿ ತೋರಿಸಿದ್ದರು.

ಆಗಸ್ಟ್ 2022ರಲ್ಲಿ, ಅಮೆರಿಕ ಮೂಲದ ಪತ್ರಕರ್ತ ಅಂಗದ್ ಸಿಂಗ್ ಅವರು ಪಂಜಾಬ್‌ನಲ್ಲಿರುವ ತಮ್ಮ ಕುಟುಂಬವನ್ನು ಭೇಟಿ ಮಾಡಲು ನ್ಯೂಯಾರ್ಕ್‌ನಿಂದ ಆಗಮಿಸಿದ್ದಾಗ ದೆಹಲಿ ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.

ಜನವರಿ 2023ರಲ್ಲಿ, ಸಿಂಗ್ ಅವರ ಸಾಕ್ಷ್ಯಚಿತ್ರ “ಇಂಡಿಯಾ ಬರ್ನಿಂಗ್” ಭಾರತದ ಜಾತ್ಯತೀತತೆಯ ಬಗ್ಗೆ ಅತ್ಯಂತ ನಕಾರಾತ್ಮಕ ದೃಷ್ಟಿಕೋನವನ್ನು ಪ್ರಸ್ತುತಪಡಿಸಿದ ಕಾರಣ ಭಾರತಕ್ಕೆ ಭೇಟಿ ನೀಡದಂತೆ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರವು ದೆಹಲಿ ಹೈಕೋರ್ಟ್‌ ಮುಂದೆ ಸಮರ್ಥಿಸಿಕೊಂಡಿತ್ತು.

ಮಣಿಪುರ ಹಿಂಸಾಚಾರದಲ್ಲಿ ಬಿರೇನ್ ಸಿಂಗ್ ಪಾತ್ರವಿದೆ ಎಂಬ ಆಡಿಯೋ ಸೋರಿಕೆ; ಎಫ್‌ಎಸ್‌ಎಲ್‌ನಿಂದ ವರದಿ ಕೇಳಿದ ಸುಪ್ರೀಂ ಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತಾಯ್ತನ ಕ್ರೀಡೆಗೆ ಅಡ್ಡಿಯಾಗಬಾರದು: ಕುಸ್ತಿ ಒಕ್ಕೂಟಕ್ಕೆ ದೆಹಲಿ ಹೈಕೋರ್ಟ್ ಚಾಟಿ, ವಿನೇಶ್ ಫೋಗಟ್‌ಗೆ ಬಿಗ್ ರಿಲೀಫ್!

ಖ್ಯಾತ ಮಹಿಳಾ ಕುಸ್ತಿ ಪಟು ವಿನೇಶ್ ಫೋಗಟ್ ಅವರನ್ನು ದೇಶೀಯ ಕ್ರೀಡಾಕೂಟಗಳಲ್ಲಿ ಭಾಗವಹಿಸದಂತೆ "ಅನರ್ಹ" ಎಂದು ಘೋಷಿಸಿದ್ದ ಭಾರತೀಯ ಕುಸ್ತಿ ಒಕ್ಕೂಟದ (WFI) ನಿರ್ಧಾರವನ್ನು ದೆಹಲಿ ಹೈಕೋರ್ಟ್ ಶುಕ್ರವಾರ ತೀವ್ರವಾಗಿ ತರಾಟೆಗೆ ತೆಗೆದುಕೊಂಡಿದೆ....

ಗುಜರಾತ್: ಜಾನುವಾರು ಹತ್ಯೆ ಆರೋಪದಲ್ಲಿ ಬಂಧಿಸಿದ 70 ವರ್ಷದ ಮುಸ್ಲಿಂ ವ್ಯಕ್ತಿ ಸಾವು: ‘ತಂದೆಯನ್ನು ಕೊಂದರು’ ಎಂದು ಆರೋಪಿಸಿದ ಮಗ

ಗುಜರಾತ್‌ನ ಅಹಮದಾಬಾದ್ ನಗರದಲ್ಲಿ ಪೊಲೀಸ್ ಕಸ್ಟಡಿಯಲ್ಲಿದ್ದ 70 ವರ್ಷದ ಜಹೀರ್ ಶೇಖ್ ಎಂಬ ಮುಸ್ಲಿಂ ವೃದ್ಧರೊಬ್ಬರು ಅನುಮಾನಾಸ್ಪದವಾಗಿ ಸಾವನ್ನಪ್ಪಿದ್ದಾರೆ. ಈ ಘಟನೆಯು ಗುಜರಾತ್‌ನಲ್ಲಿ ತೀವ್ರ ಸಂಚಲನ ಸೃಷ್ಟಿಸಿದ್ದು, ಕಸ್ಟಡಿ ನಿಂದನೆ, ಪೊಲೀಸರ ದೌರ್ಜನ್ಯ...

ಪಶ್ಚಿಮ ಬಂಗಾಳ: ಬಿಜೆಪಿಗೆ ಉಲ್ಟಾ ಹೊಡೆಯುತ್ತಾ ಗೋ-ಹತ್ಯೆ ನಿಷೇಧ ಕಾಯ್ದೆ?

ಬಕ್ರೀದ್ (ಈದ್-ಉಲ್-ಅದ್ಹಾ) ಹಬ್ಬ ಹತ್ತಿರ ಬರುತ್ತಿದ್ದಂತೆ, ಪಶ್ಚಿಮ ಬಂಗಾಳದಲ್ಲಿ ಗೋ ಹತ್ಯೆ ನಿಯಂತ್ರಣ ಕಾಯ್ದೆಯನ್ನು ಕಟ್ಟುನಿಟ್ಟಾಗಿ ಜಾರಿಗೊಳಿಸುತ್ತಿರುವುದಕ್ಕೆ ವ್ಯಾಪಕ ವಿರೋಧ ವ್ಯಕ್ತವಾಗುತ್ತಿದೆ. ಈ ಆಕ್ರೋಶ ಕೇವಲ ಧಾರ್ಮಿಕ ಕಾರಣಗಳಿಗಷ್ಟೇ ಸೀಮಿತವಾಗಿಲ್ಲ, ಬದಲಿಗೆ ವ್ಯಾಪಾರಿಗಳು,...

ಪ.ಬಂಗಾಳ: ಮಮತಾ ಸರ್ಕಾರ ಜಾರಿ ಮಾಡಿದ್ದ OBC ಮೀಸಲಾತಿಯನ್ನು ಕಿತ್ತೆಸೆದ ಸುವೇಂದು ನೇತೃತ್ವದ ಬಿಜೆಪಿ ಸರ್ಕಾರ

ಪಶ್ಚಿಮ ಬಂಗಾಳದ ಒಬಿಸಿ (ಇತರ ಹಿಂದುಳಿದ ವರ್ಗಗಳು) ಪಟ್ಟಿಯಲ್ಲಿದ್ದ ಮುಸ್ಲಿಂ ಸಮುದಾಯಗಳನ್ನು ಕೈಬಿಡುವ ಮೂಲಕ ಮುಖ್ಯಮಂತ್ರಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರವು ಭಾರಿ ರಾಜಕೀಯ ಸಂಚಲನ ಸೃಷ್ಟಿಸಿದೆ. ಈ ಹಿಂದೆ...

ಸಾಮಾಜಿಕ ಹೋರಾಟಗಾರ ‘ಫರಿದುಲ್ ಇಸ್ಲಾಂ’ರನ್ನು ಸುಳ್ಳು ಪ್ರಕರಣದಲ್ಲಿ ಬಂಧಿಸಿದ ಕೋಲ್ಕತ್ತಾ ಪೊಲೀಸರು

ಪಶ್ಚಿಮ ಬಂಗಾಳದಲ್ಲಿ ಸುವೇಂದು ಅಧಿಕಾರಿ ನೇತೃತ್ವದ ನೂತನ ಬಿಜೆಪಿ ಸರ್ಕಾರ ಅಧಿಕಾರಕ್ಕೆ ಬಂದು ಇನ್ನು ಹತ್ತು ದಿನಗಳು ಕಳೆಯುವಷ್ಟರಲ್ಲೇ, ಸರ್ಕಾರದ ಆಡಳಿತವನ್ನು ಪ್ರಶ್ನಿಸುವವರ ಹಾಗೂ ಹೋರಾಟಗಾರರ ಧ್ವನಿಯನ್ನು ಹತ್ತಿಕ್ಕುವ ಕೆಲಸ ಆರಂಭವಾಗಿದೆ ಎಂಬ...

ಉಪ್ಪಿನಂಗಡಿ: ಸೂರ್ಯ ಆಸ್ಪತ್ರೆ ವೈದ್ಯರ ನಿರ್ಲಕ್ಷ್ಯ, ಚಿಕಿತ್ಸೆಗೆಂದು ತೆರಳಿ ಶವವಾಗಿ ಮರಳಿದ ಬೀದಿಬದಿ ವ್ಯಾಪಾರಿ!

ಖಾಸಗಿ ಆಸ್ಪತ್ರೆಗಳ ಹಣದ ದಾಹ ಮತ್ತು ವೈದ್ಯಕೀಯ ಸಿಬ್ಬಂದಿಯ ಘೋರ ನಿರ್ಲಕ್ಷ್ಯಕ್ಕೆ ಮತ್ತೊಂದು ಬಡ ಜೀವ ಬಲಿಯಾಗಿದೆ. ಉಪ್ಪಿನಂಗಡಿಯ ಸೂರ್ಯ ಆಸ್ಪತ್ರೆಯಲ್ಲಿ ಚಿಕಿತ್ಸೆಗಾಗಿ ದಾಖಲಾಗಿದ್ದ ಮೊಹಮ್ಮದ್ ಶರೀಫ್ (35) ಎಂಬ ಬೀದಿ ಬದಿ...

ಬಿಸಿಲಿನ ಬೆಂಕಿಗೆ ‘ಎಲ್ ನಿನೊ’ ತುಪ್ಪ: 2026ರ ಮುಂಗಾರು ಕಥೆ ಏನು?

ದೇಶಾದ್ಯಂತ ತಾಪಮಾನ ದಿನೇ ದಿನೇ ಏರುತ್ತಿದ್ದು, ಭೀಕರ ಶಾಖದ ಅಲೆಗಳಿಗೆ (Heatwaves) ಜನ ತತ್ತರಿಸಿ ಹೋಗಿದ್ದಾರೆ. ಈ ಹೊತ್ತಿನಲ್ಲಿ ಎಲ್ಲರ ಕಣ್ಣುಗಳು ಸಾವಿರಾರು ಕಿಲೋಮೀಟರ್ ದೂರದ ಪೆಸಿಫಿಕ್ ಮಹಾಸಾಗರದಲ್ಲಿ ಸಂಭವಿಸುತ್ತಿರುವ ಹವಾಮಾನ ಬದಲಾವಣೆಯ...

ಸುಮಾರು 1 ಲಕ್ಷ ಶಾಲೆಗಳಲ್ಲಿ ಬಾಲಕಿಯರಿಗೆ ಶೌಚಾಲಯವಿಲ್ಲ, 61,000 ಶಾಲೆಗಳಲ್ಲಿ ಕ್ರಿಯಾತ್ಮಕ ಶೌಚಾಲಯಗಳಿಲ್ಲ: ನೀತಿ ಆಯೋಗ

ಶಿಕ್ಷಣವು ಒಂದು ದೇಶದ ಅಭಿವೃದ್ಧಿಯ ಬೆನ್ನೆಲುಬು ಅಂತಲೇ ಹೇಳಲಾಗುತ್ತದೆ. ಆದರೆ, ಭಾರತದ ಶಾಲಾ ಶಿಕ್ಷಣದ ಮೂಲಭೂತ ಸೌಕರ್ಯಗಳು ಮತ್ತು ವ್ಯವಸ್ಥೆಯ ಕುರಿತಾಗಿ ನೀತಿ ಆಯೋಗ ಹಾಗೂ ಯುಡಿಐಎಸ್ಇ+ (UDISE+ 2024–25) ಇತ್ತೀಚೆಗೆ ಬಿಡುಗಡೆ...

CJI ಹೇಳಿಕೆಯಿಂದ ರಾತ್ರೋರಾತ್ರಿ ಹುಟ್ಟಿಕೊಂಡ ‘ಕಾಕ್‌ರೋಚ್ ಜನತಾ ಪಾರ್ಟಿ’

ಒಂದು ರಾಜಕೀಯ ಪಕ್ಷವನ್ನು ಕಟ್ಟಿ, ಅದಕ್ಕೊಂದು ರೂಪ ಕೊಡಲು ಎಷ್ಟು ಸಮಯ ಬೇಕಾಗಬಹುದು? ಕೇವಲ 48 ಗಂಟೆಗಳು! ಹೌದು, ಕಳೆದ ಭಾನುವಾರ ನೀವು ಸಾಮಾಜಿಕ ಜಾಲತಾಣಗಳಲ್ಲಿ ಸ್ವಲ್ಪ ಸಮಯ ಕಳೆದಿದ್ದರೆ ನಿಮಗಿದು ಖಂಡಿತ...

ಬೆಂಗಳೂರು: ಗಂಗಸಂದ್ರ ದಲಿತರ ಭೂಮಿ ಕಿತ್ತುಕೊಳ್ಳಲು ಮುಗಿಬಿದ್ದ ಅರಣ್ಯ ಇಲಾಖೆ: ಮಿತಿಮೀರಿದ ಅಧಿಕಾರಿಗಳ ದರ್ಪ

ಕೆಂಗೇರಿ ಬಳಿಯ ಗಂಗಸಂದ್ರ ಗ್ರಾಮದಲ್ಲಿನ ದಲಿತರ ಭೂಮಿಯನ್ನು ಅರಣ್ಯ ಭೂಮಿಯೆಂದು ಅರಣ್ಯ ಇಲಾಖೆಯ ವಶಕ್ಕೆ ಪಡೆಯಲು ಅಧಿಕಾರಿಗಳು ಮುಂದಾಗಿದ್ದಾರೆ. 2026 ಮೇ 19ರ, ಮಂಗಳವಾರ  ಬೆಳ್ಳಂಬೆಳಗ್ಗೆಯೇ ಅಧಿಕಾರಿಗಳ ದರ್ಪ ತಾರಕಕ್ಕೇರಿದೆ. ದಲಿತ ನಿವಾಸಿಗಳ...