Homeಮುಖಪುಟಬೆಂಗಳೂರಿನಲ್ಲಿರುವ ತಾಯಿಗೆ ಅನಾರೋಗ್ಯ |ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ವೀಸಾ ನಿರಾಕರಣೆ

ಬೆಂಗಳೂರಿನಲ್ಲಿರುವ ತಾಯಿಗೆ ಅನಾರೋಗ್ಯ |ಭಾರತೀಯ ಮೂಲದ ಅಮೆರಿಕದ ಜಾತಿ ವಿರೋಧಿ ಹೋರಾಟಗಾರ್ತಿಗೆ ವೀಸಾ ನಿರಾಕರಣೆ

- Advertisement -
- Advertisement -

ಬೆಂಗಳೂರಿನಲ್ಲಿರುವ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿ ಮಾಡಲು ಭಾರತ ಸರ್ಕಾರ ವೀಸಾ ನಿರಾಕರಿಸಿದೆ ಎಂದು ಭಾರತೀಯ ಮೂಲದ ಜಾತಿ ವಿರೋಧಿ ಹೋರಾಟಗಾರ್ತಿ ಕ್ಷಮಾ ಸಾವಂತ್ ಭಾನುವಾರ (ಫೆ.3) ಆರೋಪಿಸಿದ್ದಾರೆ.

ಅಮೆರಿಕಲ್ಲಿ ವಾಸವಿರುವ ಸಾವಂತ್ ಅವರು 2013ರಿಂದ 2023 ರವರೆಗೆ, ಅಲ್ಲಿನ ಸಿಯಾಟಲ್ ಸಿಟಿ ಕೌನ್ಸಿಲ್‌ನಲ್ಲಿ ಚುನಾಯಿತ ಪ್ರತಿನಿಧಿಯಾಗಿದ್ದರು.

ಫೆಬ್ರವರಿ 2023ರಲ್ಲಿ, ಸಾವಂತ್ ಅವರು ಮಂಡಿಸಿದ ನಿರ್ಣಯ ಅಂಗೀಕಾರ ಪಡೆಯುವ ಮೂಲಕ, ಸಿಯಾಟಲ್ ಜಾತಿ ಆಧಾರಿತ ತಾರತಮ್ಯವನ್ನು ನಿಷೇಧಿಸಿದ ಮೊದಲ ಅಮೆರಿಕನ್ ನಗರ ಎನಿಸಿಕೊಂಡಿತ್ತು.

ತನ್ನ ವೀಸಾ ನಿರಾಕರಣೆಯನ್ನು “ಭಾರತೀಯ ಜನತಾ ಪಕ್ಷದ (ಬಿಜೆಪಿ) ಸರ್ಕಾರದ ರಾಜಕೀಯ ಪ್ರತೀಕಾರ” ಎಂದು ಸಾವಂತ್ ಆರೋಪಿಸಿದ್ದಾರೆ. ಈ ಕ್ರಮವನ್ನು ಪ್ರತಿಭಟಿಸಿ ಭಾರತ ಸರ್ಕಾರದ ವಿರುದ್ದ ಅವರು ಆನ್‌ಲೈನ್ ದೂರು ಆರಂಭಿಸಿದ್ದಾರೆ.

“ಮೋದಿ ಇತರ ಹೋರಾಟಗಾರರು ಮತ್ತು ಪತ್ರಕರ್ತರ ವಿರುದ್ಧವೂ ಇದೇ ರೀತಿ ಸೇಡು ತೀರಿಸಿಕೊಂಡಿದ್ದಾರೆ. ಭಾರತಕ್ಕೆ ಪ್ರವೇಶ ನಿರಾಕರಿಸಿದ್ದಾರೆ ಅಥವಾ ರದ್ದುಗೊಳಿಸಿದ್ದಾರೆ” ಎಂದು ಸಾವಂತ್ ದೂರಿದ್ದಾರೆ. ತನ್ನ 82 ವರ್ಷದ ತಾಯಿಯ ಆರೋಗ್ಯವು ವೇಗವಾಗಿ ಕ್ಷೀಣಿಸುತ್ತಿದೆ ಎಂದಿದ್ದಾರೆ.

“ಕ್ಷಮಾ ಸಾವಂತ್ ಮತ್ತು ಅವರ ಪತಿ ಕ್ಯಾಲ್ವಿನ್ ಪ್ರೀಸ್ಟ್ ಅವರಿಗೆ ಭಾರತಕ್ಕೆ ಪ್ರಯಾಣಿಸಲು ಮತ್ತು ಕ್ಷಮಾ ಅವರಿಗೆ ತಾಯಿಯನ್ನು ಭೇಟಿ ಮಾಡಲು ಸಾಧ್ಯವಾಗುವಂತೆ ಮಾನವೀಯ ನೆಲೆಯಲ್ಲಿ ತುರ್ತಾಗಿ ವೀಸಾ ಮಂಜೂರು ಮಾಡುವಂತೆ ನಾವು ಮೋದಿ ಸರ್ಕಾರವನ್ನು ಒತ್ತಾಯಿಸುತ್ತೇವೆ” ಎಂದು ಆನ್‌ಲೈನ್‌ ದೂರಿನಲ್ಲಿ ಹೇಳಲಾಗಿದೆ.

ಯಾವುದೇ ವಿವರಣೆ ನೀಡದೆ ಸಾವಂತ್ ಅವರಿಗೆ ಮೂರು ಬಾರಿ ಭಾರತ ವೀಸಾವನ್ನು ನಿರಾಕರಿಸಲಾಗಿದೆ ಎಂದು ದೂರಿನಲ್ಲಿ ತಿಳಿಸಲಾಗಿದ್ದು, ಕೇಂದ್ರ ವಿದೇಶಾಂಗ ಸಚಿವ ಎಸ್. ಜೈಶಂಕರ್ ಅವರಿಗೆ ಸಲ್ಲಿಸಿದ ಮನವಿಯನ್ನೂ ತಿರಸ್ಕರಿಸಲಾಗಿದೆ ಎಂದು ದೂರಿನಲ್ಲಿ ವಿವರಿಸಲಾಗಿದೆ.

“ಆ ಸಮಯದಲ್ಲಿ, ಕ್ಷಮಾ ಅವರು ಮೋದಿ ಮತ್ತು ಬಿಜೆಪಿ ಸರ್ಕಾರದ ಮುಸ್ಲಿಂ ವಿರೋಧಿ, ಬಡವರ ವಿರೋಧಿ ಸಿಎಎ-ಎನ್‌ಆರ್‌ಸಿ [ಪೌರತ್ವ ತಿದ್ದುಪಡಿ ಕಾಯ್ದೆ-ನಾಗರಿಕರ ರಾಷ್ಟ್ರೀಯ ನೋಂದಣಿ] ಕಾನೂನುಗಳನ್ನು ಖಂಡಿಸುವ ನಿರ್ಣಯವನ್ನು ಅಂಗೀಕರಿಸಿದ್ದರು ಮತ್ತು ಮೋದಿಯವರ ಕ್ರೂರ ಮತ್ತು ಶೋಷಣಾ ನೀತಿಗಳ ವಿರುದ್ಧ ರೈತರ ಚಳವಳಿಗೆ ಒಗ್ಗಟ್ಟಿನ ನಿರ್ಣಯ ಕೈಗೊಂಡಿದ್ದರು” ಎಂದು ದೂರಿನಲ್ಲಿ ಹೇಳಲಾಗಿದೆ.

ಜನವರಿಯಲ್ಲಿ, ಸ್ವೀಡಿಷ್ ಭಾರತೀಯ ಮೂಲದ ಪ್ರಾಧ್ಯಾಪಕ ಅಶೋಕ್ ಸ್ವೈನ್ ಅವರು ತಮ್ಮ ಸಾಗರೋತ್ತರ ಭಾರತೀಯ ನಾಗರಿಕ ಸ್ಥಾನಮಾನವನ್ನು ರದ್ದುಗೊಳಿಸುವುದನ್ನು ಪ್ರಶ್ನಿಸಿ ಸಲ್ಲಿಸಿದ್ದ ಅರ್ಜಿಯನ್ನು ಶೀಘ್ರ ವಿಚಾರಣೆಗೆ ಒಳಪಡಿಸುವಂತೆ ದೆಹಲಿ ಹೈಕೋರ್ಟ್‌ಗೆ ಮನವಿ ಮಾಡಿದ್ದರು ಎಂದು ದಿ ಇಂಡಿಯನ್ ಎಕ್ಸ್‌ಪ್ರೆಸ್ ವರದಿ ಮಾಡಿದೆ.

ಭಾರತದ ಸಾಗರೋತ್ತರ ಪೌರತ್ವವು ವಲಸೆ ಸ್ಥಾನಮಾನವಾಗಿದ್ದು, ಇದು ಭಾರತೀಯ ಮೂಲದ ವಿದೇಶಿಯರು ಭಾರತದಲ್ಲಿ ಅನಿರ್ದಿಷ್ಟವಾಗಿ ವಾಸಿಸಲು ಮತ್ತು ಕೆಲಸ ಮಾಡಲು ಅನುವು ಮಾಡಿಕೊಡುತ್ತದೆ. ರದ್ದತಿಯು ಅವರು ಭಾರತಕ್ಕೆ ಮರುಳುವುದನ್ನು ನಿರ್ಬಂಧಿಸುತ್ತದೆ.

ಸ್ವೈನ್ ಅವರು ಸ್ವೀಡನ್‌ನ ಉಪ್ಸಲಾ ವಿಶ್ವವಿದ್ಯಾಲಯದ ಶಾಂತಿ ಮತ್ತು ಸಂಘರ್ಷ ಸಂಶೋಧನಾ ವಿಭಾಗದಲ್ಲಿ ಪ್ರಾಧ್ಯಾಪಕರಾಗಿದ್ದಾರೆ. ಒಡಿಶಾದ ಭುವನೇಶ್ವರದಲ್ಲಿ ಒಂಟಿಯಾಗಿ ವಾಸಿಸುತ್ತಿರುವ ಮತ್ತು ಐದು ವರ್ಷಗಳಿಂದ ಭೇಟಿಯಾಗಲು ಸಾಧ್ಯವಾಗದ ತನ್ನ 82 ವರ್ಷದ ಅನಾರೋಗ್ಯ ಪೀಡಿತ ತಾಯಿಯನ್ನು ಭೇಟಿಯಾಗುವ ಮನವಿಯನ್ನು ಸ್ವೈನ್ ಮುಂದಿಟ್ಟಿದ್ದಾರೆ.

ಭಾರತದ ಸಾರ್ವಭೌಮತೆ, ಸಮಗ್ರತೆ ಮತ್ತು ಭದ್ರತೆಯ ಹಿತಾಸಕ್ತಿಗಳಿಗೆ ವಿರುದ್ಧವಾದ “ಕಾನೂನುಬಾಹಿರ ಚಟುವಟಿಕೆಗಳಲ್ಲಿ” ತೊಡಗಿರುವುದು ಕಂಡುಬಂದಿದೆ ಎಂಬ ಆಧಾರದ ಮೇಲೆ ಕೇಂದ್ರ ಸರ್ಕಾರವು ಜುಲೈ 2023ರಲ್ಲಿ ಸ್ವೈನ್ ಅವರ ಸಾಗರೋತ್ತರ ಪೌರತ್ವ ನೋಂದಣಿಯನ್ನು ರದ್ದುಗೊಳಿಸಿತ್ತು.

ಫೆಬ್ರವರಿ 2024ರಲ್ಲಿ, ಭಾರತೀಯ ಮೂಲದ ಬ್ರಿಟಿಷ್ ಬರಹಗಾರ್ತಿ ಮತ್ತು ಲಂಡನ್‌ನ ವೆಸ್ಟ್‌ಮಿನಿಸ್ಟರ್ ವಿಶ್ವವಿದ್ಯಾಲಯದ ರಾಜಕೀಯ ಪ್ರಾಧ್ಯಾಪಕಿ ನಿತಾಶಾ ಕೌಲ್ ಅವರು, “ಪ್ರಜಾಪ್ರಭುತ್ವ ಮತ್ತು ಸಾಂವಿಧಾನಿಕ ಮೌಲ್ಯಗಳ ಕುರಿತು ಮಾತನಾಡಿದ್ದಕ್ಕಾಗಿ” ಕೇಂದ್ರ ಸರ್ಕಾರದ ಆದೇಶದ ಮೇರೆಗೆ ದೇಶಕ್ಕೆ ಪ್ರವೇಶ ನಿರಾಕರಿಸಲಾಯಿತು ಮತ್ತು ಬೆಂಗಳೂರು ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಲಾಯಿತು ಎಂದು ಆರೋಪಿಸಿದ್ದರು.

“ಸಂವಿಧಾನ ಮತ್ತು ಪ್ರಜಾಪ್ರಭುತ್ವ” ಎಂಬ ವಿಷಯದ ಕುರಿತು ಮಾತನಾಡಲು ಕೌಲ್ ಅವರನ್ನು ಕರ್ನಾಟಕದ ಕಾಂಗ್ರೆಸ್ ಸರ್ಕಾರವು ತನ್ನ ಸಂವಿಧಾನ ಮತ್ತು ರಾಷ್ಟ್ರೀಯ ಏಕತಾ ಸಮಾವೇಶಕ್ಕೆ ಆಹ್ವಾನಿಸಿತ್ತು. ಕೌಲ್ ಅವರು ಬೆಂಗಳೂರಿಗೆ ಬಂದಿಳಿದ ನಂತರ, ಮಾನ್ಯ ವೀಸಾ ಹೊಂದಿದ್ದರೂ ವಿಮಾನ ನಿಲ್ದಾಣದಿಂದ ಹೊರಹೋಗಲು ಅವರಿಗೆ ಅನುಮತಿ ನಿರಾಕರಿಸಲಾಗಿತ್ತು.

ಭಾರತದ ಸಾಗರೋತ್ತರ ನಾಗರಿಕರಾಗಿರುವ ಕೌಲ್, ಭಾರತದ ಆಡಳಿತಾರೂಢ ಬಿಜೆಪಿಯ ಸೈದ್ಧಾಂತಿಕ ಮಾತೃ ಪಕ್ಷವಾದ ರಾಷ್ಟ್ರೀಯ ಸ್ವಯಂಸೇವಕ ಸಂಘದ (ಆರ್‌ಎಸ್‌ಎಸ್‌) ಟೀಕೆಗೆ ಗುರಿಯಾಗಿದ್ದರು. 2019ರಲ್ಲಿ, ಅವರು ಯುಎಸ್ ವಿದೇಶಾಂಗ ವ್ಯವಹಾರಗಳ ಸದನ ಸಮಿತಿಯ ಮುಂದೆ ಸಾಕ್ಷ್ಯ ನುಡಿದು, ಹಿಂದಿನ ಜಮ್ಮು ಮತ್ತು ಕಾಶ್ಮೀರ ರಾಜ್ಯಕ್ಕೆ ವಿಶೇಷ ಸ್ಥಾನಮಾನವನ್ನು ನೀಡಿದ್ದ ಸಂವಿಧಾನದ 370ನೇ ವಿಧಿಯನ್ನು ರದ್ದುಗೊಳಿಸಿದ ನಂತರ ಕಾಶ್ಮೀರದಲ್ಲಿ ಮಾನವ ಹಕ್ಕುಗಳ ಉಲ್ಲಂಘನೆಯನ್ನು ಎತ್ತಿ ತೋರಿಸಿದ್ದರು.

ಆಗಸ್ಟ್ 2022ರಲ್ಲಿ, ಅಮೆರಿಕ ಮೂಲದ ಪತ್ರಕರ್ತ ಅಂಗದ್ ಸಿಂಗ್ ಅವರು ಪಂಜಾಬ್‌ನಲ್ಲಿರುವ ತಮ್ಮ ಕುಟುಂಬವನ್ನು ಭೇಟಿ ಮಾಡಲು ನ್ಯೂಯಾರ್ಕ್‌ನಿಂದ ಆಗಮಿಸಿದ್ದಾಗ ದೆಹಲಿ ವಿಮಾನ ನಿಲ್ದಾಣದಿಂದ ಗಡಿಪಾರು ಮಾಡಲಾಗಿತ್ತು ಎಂದು ಆರೋಪಿಸಲಾಗಿದೆ.

ಜನವರಿ 2023ರಲ್ಲಿ, ಸಿಂಗ್ ಅವರ ಸಾಕ್ಷ್ಯಚಿತ್ರ “ಇಂಡಿಯಾ ಬರ್ನಿಂಗ್” ಭಾರತದ ಜಾತ್ಯತೀತತೆಯ ಬಗ್ಗೆ ಅತ್ಯಂತ ನಕಾರಾತ್ಮಕ ದೃಷ್ಟಿಕೋನವನ್ನು ಪ್ರಸ್ತುತಪಡಿಸಿದ ಕಾರಣ ಭಾರತಕ್ಕೆ ಭೇಟಿ ನೀಡದಂತೆ ಕಪ್ಪುಪಟ್ಟಿಗೆ ಸೇರಿಸಲಾಗಿದೆ ಎಂದು ಕೇಂದ್ರವು ದೆಹಲಿ ಹೈಕೋರ್ಟ್‌ ಮುಂದೆ ಸಮರ್ಥಿಸಿಕೊಂಡಿತ್ತು.

ಮಣಿಪುರ ಹಿಂಸಾಚಾರದಲ್ಲಿ ಬಿರೇನ್ ಸಿಂಗ್ ಪಾತ್ರವಿದೆ ಎಂಬ ಆಡಿಯೋ ಸೋರಿಕೆ; ಎಫ್‌ಎಸ್‌ಎಲ್‌ನಿಂದ ವರದಿ ಕೇಳಿದ ಸುಪ್ರೀಂ ಕೋರ್ಟ್

 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಹೈದರಾಬಾದ್| ಎಕ್ಸ್‌ಪ್ರೆಸ್‌ವೇನಲ್ಲಿ ನೇಮಕಾತಿ ಪರೀಕ್ಷೆ ಓಎಂಆರ್ ಹಾಳೆಗಳು ಪತ್ತೆ: ತನಿಖೆಗೆ ಆದೇಶ

ನೇಮಕಾತಿ ಪರೀಕ್ಷೆಯ ಮೂಲ ಆಪ್ಟಿಕಲ್ ಮಾರ್ಕ್ ರೆಕಗ್ನಿಷನ್ (ಒಎಂಆರ್) ಹಾಳೆಗಳು ಹೈದರಾಬಾದ್‌ನ ರಸ್ತೆಬದಿಯಲ್ಲಿ ರಾಶಿ ರಾಶಿಯಾಗಿ ಬಿದ್ದಿರುವುದು ಕಂಡುಬಂದ ನಂತರ ತೆಲಂಗಾಣ ಸಾರ್ವಜನಿಕ ಸೇವಾ ಆಯೋಗ (ಟಿಜಿಪಿಎಸ್‌ಸಿ) ತನಿಖೆಗೆ ಆದೇಶಿಸಿದೆ. 2018 ರ ಹಾಸ್ಟೆಲ್...

ಕರೂರ್ ಕಾಲ್ತುಳಿತ ಮೃತರ ಕುಟುಂಬಸ್ಥರಿಗೆ ನೀಡಿದ್ದ ಸರ್ಕಾರಿ ಉದ್ಯೋಗವನ್ನು ರದ್ದುಗೊಳಿಸಿದ ಮದ್ರಾಸ್ ಹೈಕೋರ್ಟ್

ಕರೂರ್ ಕಾಲ್ತುಳಿತ ದುರಂತದಲ್ಲಿ ಮೃತಪಟ್ಟವರ ಕುಟುಂಬಸ್ಥರಿಗೆ ಸರ್ಕಾರಿ ಉದ್ಯೋಗ ನೀಡಿದ್ದ ತಮಿಳುನಾಡು ಸರ್ಕಾರದ ಆದೇಶವನ್ನು ಮದ್ರಾಸ್ ಹೈಕೋರ್ಟ್ ಸೋಮವಾರ ರದ್ದುಗೊಳಿಸಿದೆ. ಈ ನೇಮಕಾತಿಗಳನ್ನು ಪ್ರಶ್ನಿಸಿ ಸಲ್ಲಿಕೆಯಾಗಿದ್ದ ಸಾರ್ವಜನಿಕ ಹಿತಾಸಕ್ತಿ ಅರ್ಜಿಗಳ (PIL) ವಿಚಾರಣೆ...

ವಿದ್ಯಾರ್ಥಿಗಳ ಬಂಧನ: ಮತ್ತೆ ಪ್ರತಿಭಟನೆಯ ಎಚ್ಚರಿಕೆ ನೀಡಿದ ‘ಕಾಕ್ರೋಚ್ ಜನತಾ ಪಾರ್ಟಿ’

ಪ್ರತಿಭಟನಾಕಾರರ ವಿರುದ್ಧ ಯಾವುದೇ ಪೋಲೀಸ್ ಕ್ರಮ ಕೈಗೊಳ್ಳುವುದಿಲ್ಲ ಎಂಬ ಒಪ್ಪಂದವನ್ನು ಸಂಪೂರ್ಣವಾಗಿ ಉಲ್ಲಂಘಿಸಲಾಗಿದೆ ಎಂದು 'ಕಾಕ್ರೋಚ್ ಜನತಾ ಪಾರ್ಟಿ' (CJP) ರಾಷ್ಟ್ರೀಯ ವಕ್ತಾರ ಅಶುತೋಷ್ ರಂಕಾ ಎಕ್ಸ್ (X) ಸಾಮಾಜಿಕ ಜಾಲತಾಣದ ಪೋಸ್ಟ್‌ನಲ್ಲಿ...

ಜೆನ್ ಝೀ ಪೀಳಿಗೆಯ ಹೋರಾಟ ಮತ್ತು ಮುಂದಿನ ನಡೆ.!

NEET ಪರೀಕ್ಷೆಯ ಅಕ್ರಮ ಹಾಗೂ ಪೇಪರ್ ಸೋರಿಕೆ ವಿರುದ್ಧ 'ಜೆನ್ ಝೀ' (Gen Z) ಯುವ ಸಮೂಹ ನಡೆಸಿದ ಹೋರಾಟವು ಕೇವಲ ಒಂದು ತಾತ್ಕಾಲಿಕ ವಿದ್ಯಾರ್ಥಿ ಹೋರಾಟವಾಗಿ ಉಳಿದಿಲ್ಲ. ಇದು ಪ್ರಭುತ್ವದ ಅಹಂಕಾರವನ್ನು...

ಬಿಹಾರ| ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ಬಳಸಿದ ಪೊಲೀಸ್‌ ಕಾನ್‌ಸ್ಟೆಬಲ್ ಅಮಾನತು

ಬಿಹಾರದ ಸಿವಾನ್ ಜಿಲ್ಲೆಯಲ್ಲಿ ಜುಲೈ 25 ರಂದು ನಡೆದ ವಿದ್ಯಾರ್ಥಿಗಳ ಪ್ರತಿಭಟನೆಯ ಸಮಯದಲ್ಲಿ ಎಕೆ-47 ರೈಫಲ್ ಬಳಸಿರುವ ವೀಡಿಯೊ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಪೊಲೀಸ್ ಕಾನ್‌ಸ್ಟೆಬಲ್ ಒಬ್ಬರನ್ನು ಅಮಾನತುಗೊಳಿಸಲಾಗಿದೆ ಎಂದು...

ನಾಳೆ ನನ್ನ ಮಗನೂ ಮೋದಿ ವಿರುದ್ಧ ಮಾತನಾಡಬಹುದು: ಅಸ್ಸಾಂ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ

ಅಸ್ಸಾಂ ಸಚಿವರೊಬ್ಬರ ಮಗಳು ಗುವಾಹಟಿಯಲ್ಲಿ ನಡೆದ ಪ್ರತಿಭಟನೆಯಲ್ಲಿ ಪಾಲ್ಗೊಂಡು, ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಆಗ್ರಹಿಸಿರುವುದು ರಾಜ್ಯಾದ್ಯಂತ ತೀವ್ರ ಚರ್ಚೆಗೆ ಗ್ರಾಸವಾಗಿದೆ. ಈ ಘಟನೆಗೆ ಪ್ರತಿಕ್ರಿಯಿಸಿರುವ ಮುಖ್ಯಮಂತ್ರಿ...

ವಿದ್ಯಾರ್ಥಿಗಳನ್ನು ಗುಂಡಿಕ್ಕಿ ಕೊಲ್ಲಬೇಕಿತ್ತು: ಆರ್‌ಎಸ್‌ಎಸ್ ಸಿದ್ಧಾಂತವಾದಿ ಟಿ.ಜಿ. ಮೋಹನ್‌ದಾಸ್ ವಿಕೃತ ಹೇಳಿಕೆ

ನವದೆಹಲಿ: ಕೇಂದ್ರ ಸರ್ಕಾರದ ಶಿಕ್ಷಣ ನೀತಿಗಳು ಹಾಗೂ ಪರೀಕ್ಷಾ ಅಕ್ರಮಗಳ ವಿರುದ್ಧ ದೆಹಲಿಯ ಜಂತರ್ ಮಂತರ್‌ನಲ್ಲಿ ಬೃಹತ್ ಪ್ರತಿಭಟನೆ ನಡೆಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ರಾಜೀನಾಮೆಗೆ ಆಗ್ರಹಿಸಿದ್ದ ಯುವಜನರ ವಿರುದ್ಧ...

ಸಿಜೆಪಿ ಪ್ರತಿಭಟನೆ: ವಿದ್ಯಾರ್ಥಿಗಳ ಮೇಲೆ ‘ಪೆಲೆಟ್‌ ಗನ್’ ದಾಳಿ ದೃಢ; ನಿಯಮಾವಳಿಗಳನ್ನು ಉಲ್ಲಂಘಿಸಿ ಬಲಪ್ರಯೋಗ ನಡೆಸಿರುವ RAF

ನವದೆಹಲಿ: ತಮ್ಮ ಹಕ್ಕುಗಳಿಗಾಗಿ ಪ್ರಜಾಸತ್ತಾತ್ಮಕವಾಗಿ ಧ್ವನಿ ಎತ್ತುತ್ತಿದ್ದ ವಿದ್ಯಾರ್ಥಿ ಸಮುದಾಯದ ಮೇಲೆ ಕೇಂದ್ರದ ಸಶಸ್ತ್ರ ಪಡೆಗಳು ಎಸಗಿದ ದೌರ್ಜನ್ಯದ ಕರಾಳ ಮುಖ ಕೊನೆಗೂ ಅನಾವರಣಗೊಂಡಿದೆ. ಜುಲೈ 20ರಂದು ದೆಹಲಿಯ ಕನ್ಹಾಟ್ ಪ್ಲೇಸ್ ಪ್ರದೇಶದಲ್ಲಿ...

ಕೇವಲ ಪ್ರತಿಭಟಿಸಿದ್ದಕ್ಕೆ ವಿದ್ಯಾರ್ಥಿಗಳು ಜೈಲುಪಾಲು; ಗಂಗೆಯ ದೋಣಿಯಲ್ಲಿ ಬಿರಿಯಾನಿ ತಿಂದವರಿಗೂ ಸಿಗುತ್ತಿಲ್ಲ ಜಾಮೀನು : ನ್ಯಾಯಮೂರ್ತಿ ಉಜ್ಜಲ್ ಭುಯಾನ್ ಕಳವಳ

ಭಾರತದಲ್ಲಿ ಭಿನ್ನಾಭಿಪ್ರಾಯಗಳನ್ನು ಗೌರವಿಸುವ ಮತ್ತು ಅವುಗಳಿಗೆ ಅವಕಾಶ ನೀಡುವ ಸಾರ್ವಜನಿಕ ಸ್ಥಳಗಳು ಎಷ್ಟು ಕಡಿಮೆಯಾಗುತ್ತಿವೆ ಎಂದರೆ, ತಮ್ಮ ಹಕ್ಕುಗಳಿಗಾಗಿ ಪ್ರತಿಭಟಿಸುವ ವಿದ್ಯಾರ್ಥಿಗಳನ್ನು ಬಂಧಿಸಿ ಅವರಿಗೆ ಜಾಮೀನು ನಿರಾಕರಿಸಲಾಗುತ್ತಿದೆ ಎಂದು ಸುಪ್ರೀಂ ಕೋರ್ಟ್‌ನ ನ್ಯಾಯಮೂರ್ತಿ...

ಪ.ಬಂಗಾಳ: ನೂತನ ‘ಗೂಂಡಾ ಕಾಯ್ದೆ’ ಅಡಿ NEET ಪ್ರತಿಭಟನೆಯಲ್ಲಿ ಭಾಗಿಯಾದ 10 ಮುಸ್ಲಿಂ ಯುವಕರು ಸೇರಿದಂತೆ 11 ಜನರ ಬಂಧನ 

ಕೋಲ್ಕತ್ತಾ: ಕೇಂದ್ರದ ನರೇಂದ್ರ ಮೋದಿ ಸರ್ಕಾರದ ಶಿಕ್ಷಣ ಕ್ಷೇತ್ರದ ವೈಫಲ್ಯಗಳು ಹಾಗೂ ನೀಟ್-ಯುಜಿ (NEET-UG) ಪ್ರಶ್ನೆ ಪತ್ರಿಕೆ ಸೋರಿಕೆ ಹಗರಣವನ್ನು ಖಂಡಿಸಿ ಶುಕ್ರವಾರ ಕೋಲ್ಕತ್ತಾದಲ್ಲಿ ನಡೆದ ಬೃಹತ್ ವಿದ್ಯಾರ್ಥಿ ಪ್ರತಿಭಟನೆಯು ತೀವ್ರ ರಾಜಕೀಯ...