Homeಮುಖಪುಟಯುಎಸ್ ಅಧ್ಯಕ್ಷೀಯ ರೇಸ್‌ನಿಂದ ಹೊರಬಿದ್ದ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ

ಯುಎಸ್ ಅಧ್ಯಕ್ಷೀಯ ರೇಸ್‌ನಿಂದ ಹೊರಬಿದ್ದ ಭಾರತೀಯ ಮೂಲದ ವಿವೇಕ್ ರಾಮಸ್ವಾಮಿ

- Advertisement -
- Advertisement -

ಅಯೋವಾ ರಿಪಬ್ಲಿಕನ್ ಸಭೆಗಳಲ್ಲಿ ನೀರಸ ಪ್ರದರ್ಶನ ವ್ಯಕ್ತವಾದ ನಂತರ ಭಾರತೀಯ-ಅಮೆರಿಕನ್ ಉದ್ಯಮಿ ವಿವೇಕ್ ರಾಮಸ್ವಾಮಿ ಅವರು 2024ರ ಅಮೆರಿಕಾ (ಯುಎಸ್) ಅಧ್ಯಕ್ಷೀಯ ರೇಸ್‌ನಿಂದ ಹೊರಬಿದ್ದಿದ್ದು, ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ತಮ್ಮ ಬೆಂಬಲವನ್ನು ಘೋಷಿಸಿದ್ದಾರೆ.

ರಾಮಸ್ವಾಮಿ ಅವರು ಫೆಬ್ರವರಿ 2023ರಲ್ಲಿ ಅಧ್ಯಕ್ಷೀಯ ರೇಸ್ ಪ್ರವೇಶಿಸಿದಾಗ ರಾಜಕೀಯ ವಲಯಕ್ಕೆ ಅವರು ಅಪರಿಚಿತರಾಗಿದ್ದರು. ವಲಸೆ ನೀತಿ ಮತ್ತು ಅಮೆರಿಕನ್ನರಿಗೆ ಮೊದಲ ಆದ್ಯತೆ ಬಗ್ಗೆ ತಮ್ಮ ಬಲವಾದ ಅಭಿಪ್ರಾಯಗಳ ಮೂಲಕ ರಿಪಬ್ಲಿಕನ್ ಮತದಾರರ ಗಮನ ಸೆಳೆಯುವಲ್ಲಿ ಮತ್ತು ಬೆಂಬಲ ಗಳಿಸುವಲ್ಲಿ ಯಶಸ್ವಿಯಾದರು. ಅವರ ಪ್ರಚಾರ ಕಾರ್ಯತಂತ್ರವು ಮಾಜಿ ಅಧ್ಯಕ್ಷ ಟ್ರಂಪ್ ಅವರ ವೈಖರಿಯನ್ನು ಪ್ರತಿಬಿಂಬಿಸುತ್ತದೆ. ಹಿಂದಿನ ಚುನಾವಣೆಗಳಲ್ಲಿ ಟ್ರಂಪ್ ಅವರನ್ನು ಯಶಸ್ಸಿನತ್ತ ಮುನ್ನಡೆಸಿದ್ದ ಸಂಪ್ರದಾಯವಾದಿ ದಾರಿಯನ್ನು ಯಥಾವತ್ತಾಗಿ ಬಳಸಿಕೊಳ್ಳಲು ರಾಮಸ್ವಾಮಿ ಪ್ರಯತ್ನಿಸಿದರು.

ಆದರೆ, ಟ್ರಂಪ್ ಅವರು ಅಯೋವಾದ ಅಭ್ಯರ್ಥಿಯಾಗಿ ವಿಜಯಶಾಲಿಯಾಗಿ ಹೊರಹೊಮ್ಮಿದರು, ರಿಪಬ್ಲಿಕನ್ ನಾಮನಿರ್ದೇಶನಕ್ಕೆ ಮುಂಚೂಣಿಯಲ್ಲಿರುವ ತಮ್ಮ ಸ್ಥಾನವನ್ನು ಅವರು ಗಟ್ಟಿಗೊಳಿಸಿಕೊಂಡಿದ್ದಾರೆ.
ಓಹಿಯೋ ಮೂಲದ ವಿವೇಕ್ ರಾಮಸ್ವಾಮಿ, ಕೇರಳದಿಂದ ಅಮೆರಿಕಕ್ಕೆ ವಲಸೆ ಬಂದ ಪೋಷಕರಿಗೆ ಜನಿಸಿದ್ದಾರೆ. ಟ್ರಂಪ್ ಅವರ ಖ್ಯಾತಿಯಿಂದ ಇನ್ನೂ ಪ್ರಾಬಲ್ಯ ಹೊಂದಿರುವ ರಿಪಬ್ಲಿಕನ್ ಕ್ಷೇತ್ರದಲ್ಲಿ ಅನಿರೀಕ್ಷಿತ ಸ್ಪರ್ಧಿಗಳಲ್ಲಿ ಒಬ್ಬರಾಗಿ ಹೊರಹೊಮ್ಮಿದರು.

ಟ್ರಂಪ್ ಅವರನ್ನು ಸಾರ್ವಜನಿಕವಾಗಿ ಖಂಡಿಸಿದ ನಂತರ ಅಯೋವಾ ಕಾಕಸ್‌ಗಳಿಗೆ ಕಾರಣವಾದ ಅಂತಿಮ ದಿನಗಳಲ್ಲಿ ರಾಮಸ್ವಾಮಿ ವಿರುದ್ಧದ ಅಲೆಗಳು ಆರಂಭವಾದವು. ಸಾಮಾಜಿಕ ಮಾಧ್ಯಮ ಪ್ಲಾಟ್ಫಾರ್ಮ್ ಟ್ರೂತ್ ಸೋಶಿಯಲ್‌ನಲ್ಲಿ ಅವರನ್ನು “ವಂಚಕ” ಎಂದು ಲೇಬಲ್ ಮಾಡಿದರು. ಅಯೋವಾದಲ್ಲಿ ರಾಮಸ್ವಾಮಿ ಸುಮಾರು 7.7% ಮತಗಳನ್ನು ಗಳಿಸಿ, ನಾಲ್ಕನೇ ಸ್ಥಾನ ಪಡೆದರು.

ಇದನ್ನೂ ಓದಿ; ‘ತಮ್ಮ ಕಚೇರಿಗೆ ಬಂದು ಹೇಳಿಕೆ ದಾಖಲಿಸಿಕೊಳ್ಳಬಹುದು…’; ಇಡಿ ಅಧಿಕಾರಿಗಳಿಗೆ ಪತ್ರ ಬರೆದ ಸೊರೇನ್

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ನಾಸಿಕ್‌| ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು ಬಿಟ್ಟ ಪ್ರತಿಭಟನಾಕಾರರು

ಮಹಾರಾಷ್ಟ್ರದ ನಾಸಿಕ್ ಜಿಲ್ಲೆಯ ನಿಫಾದ್ ನಗರ ಪಂಚಾಯತ್ ವ್ಯಾಪ್ತಿಯಲ್ಲಿ ಬೀದಿ ನಾಯಿಗಳ ಹಾವಳಿಯನ್ನು ಖಂಡಿಸಿ ಮತ್ತು ಅಧಿಕಾರಿಗಳ ನಿರ್ಲಕ್ಷ್ಯವನ್ನು ಖಂಡಿಸಿದ ಪ್ರತಿಭಟನಾಕಾರರ ಗುಂಪೊಂದು ನಗರ ಪಂಚಾಯತ್ ಅಧಿಕಾರಿಯ ಮೇಜಿನ ಮೇಲೆ ಬೀದಿ ನಾಯಿಗಳನ್ನು...

ವಿವಾಹಿತೆ ಮೇಲೆ ಅತ್ಯಾಚಾರ ಆರೋಪ : ಬಿಜೆಪಿ ಮಾಜಿ ಶಾಸಕನ ವಿರುದ್ಧ ಎಫ್‌ಐಆರ್

ಗನ್‌ ಪಾಯಿಂಟ್‌ ಇಟ್ಟು ಬೆದರಿಸಿ 22 ವರ್ಷದ ವಿವಾಹಿತ ಮಹಿಳೆ ಮೇಲೆ ಸಾಮೂಹಿಕ ಅತ್ಯಾಚಾರ ಎಸಗಿದ ಪ್ರಕರಣದಲ್ಲಿ ಮಹಾರಾಷ್ಟ್ರದ ಬಿಜೆಪಿ ಮಾಜಿ ಶಾಸಕ ಮತ್ತು ವಜಾಗೊಂಡಿರುವ ಪೊಲೀಸ್ ಸಿಬ್ಬಂದಿಯೊಬ್ಬರ ವಿರುದ್ಧ ಗುರುವಾರ (ಸೆ.17)...

ಬ್ರಿಕ್ಸ್ ಶೃಂಗಸಭೆಯಲ್ಲಿ ಸಂಪೂರ್ಣ ಸಸ್ಯಹಾರಿ ಮೆನು; ಶಿವಸೇನೆ ತೀವ್ರ ವಾಗ್ದಾಳಿ

ದೆಹಲಿಯಲ್ಲಿ ನಡೆದ 18ನೇ ಬ್ರಿಕ್ಸ್ ಶೃಂಗಸಭೆಯಲ್ಲಿ ವಿದೇಶಿ ಪ್ರತಿನಿಧಿಗಳಿಗೆ ಕೇವಲ ಸಸ್ಯಹಾರಿ ಆಹಾರವನ್ನು ಬಡಿಸಿರುವುದನ್ನು ಖಂಡಿಸಿರುವ ಶಿವಸೇನೆ (ಯುಬಿಟಿ) ಗುರುವಾರ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದೆ. ಇದು ಅಂತರರಾಷ್ಟ್ರೀಯ ಅತಿಥಿಗಳ ಮೇಲೆ...

ದೆಹಲಿ ಎಸ್‌ಐಆರ್: ಮತದಾರರ ಪಟ್ಟಿಯಿಂದ ಹೆಸರುಗಳ ಡಿಲೀಟ್ ಪ್ರಶ್ನಿಸಿ ಅರ್ಜಿ; ವಿಚಾರಣೆಗೆ ಸುಪ್ರೀಂ ಕೋರ್ಟ್ ಒಪ್ಪಿಗೆ

ದೆಹಲಿಯಲ್ಲಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಅಭಿಯಾನದಡಿ ಮತದಾರರ ಪಟ್ಟಿಯಿಂದ ಹೆಸರುಗಳನ್ನು ಕೈಬಿಟ್ಟಿರುವುದನ್ನು ಪ್ರಶ್ನಿಸಿ ಸಲ್ಲಿಕೆಯಾಗಿರುವ ಅರ್ಜಿಯ ವಿಚಾರಣೆಯನ್ನು ಸೆಪ್ಟೆಂಬರ್ 21ರಂದು ನಡೆಸಲು ಸುಪ್ರೀಂ ಕೋರ್ಟ್ ಗುರುವಾರ ಒಪ್ಪಿಗೆ ಸೂಚಿಸಿದೆ. ಮುಖ್ಯ ನ್ಯಾಯಮೂರ್ತಿ ಸೂರ್ಯಕಾಂತ್...

ಕೇರಳ | ಮಿತಿಗಿಂತ ಹೆಚ್ಚು ಮದ್ಯ ಸಂಗ್ರಹ ಆರೋಪ : ರಿಪೋರ್ಟರ್ ಟಿವಿ ಎಂಡಿ ಆಂಟೋ ಆಗಸ್ಟಿನ್ ಬಂಧನ

ಕೇರಳ ಅಬಕಾರಿ ಇಲಾಖೆಯು ಮಲಯಾಳಂ ಸುದ್ದಿ ವಾಹಿನಿ 'ರಿಪೋರ್ಟರ್ ಟಿವಿ'ಯ ವ್ಯವಸ್ಥಾಪಕ ನಿರ್ದೇಶಕ (ಎಂಡಿ) ಆಂಟೋ ಆಗಸ್ಟಿನ್ ಅವರನ್ನು ಗುರುವಾರ (ಸೆ.17) ಮುಂಜಾನೆ ಬಂಧಿಸಿದೆ. ಎರ್ನಾಕುಲಂನಲ್ಲಿರುವ ಸುದ್ದಿ ವಾಹಿನಿಯ ಕಚೇರಿಯಿಂದ ಮುಂಜಾನೆ ಸುಮಾರು...

ದೆಹಲಿ: ಜಾಮೀನು ಸಿಕ್ಕ ಬೆನ್ನಲ್ಲೇ ಸ್ವತಂತ್ರ ಭಾರದ್ವಾಜ್ ವಿಡಿಯೋ ವೈರಲ್; ಷರತ್ತು ಉಲ್ಲಂಘನೆ ಆರೋಪ!

ಜಂತರ್ ಮಂತರ್‌ನಲ್ಲಿ ದಲಿತ ವಿದ್ಯಾರ್ಥಿ ಹೋರಾಟಗಾರ್ತಿ ನಿಶು ಆಜಾದ್ ಅವರ ತಂದೆಯ ಮೇಲೆ ಹಲ್ಲೆ ನಡೆಸಿದ ಆರೋಪದಲ್ಲಿ ಬಂಧಿತರಾಗಿದ್ದ ಹಿಂದುತ್ವ ಪ್ರಭಾವಿ ಸ್ವತಂತ್ರ ಭಾರದ್ವಾಜ್ ಅವರಿಗೆ ದೆಹಲಿ ನ್ಯಾಯಾಲಯ ಮೂರು ವಾರಗಳ ಮಧ್ಯಂತರ...

ಸರ್ಕಾರದ ಹಸ್ತಕ್ಷೇಪದಿಂದ ಕ್ಯಾಂಪಸ್ ನಿರ್ಬಂಧದವರೆಗೆ: ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯದ ಕುಸಿತ ಬಯಲಿಗೆಳೆದ ಜಾಗತಿಕ ವರದಿ 

ಭಾರತದಲ್ಲಿ ಶೈಕ್ಷಣಿಕ ಸ್ವಾತಂತ್ರ್ಯವು ತೀವ್ರವಾಗಿ ನಿರ್ಬಂಧಿತವಾಗಿದ್ದು, ಉನ್ನತ ಶಿಕ್ಷಣ ಸಂಸ್ಥೆಗಳ ಮೇಲೆ ಸರ್ಕಾರದ ಹೆಚ್ಚುತ್ತಿರುವ ಹಸ್ತಕ್ಷೇಪ, ಕ್ಯಾಂಪಸ್‌ಗಳಲ್ಲಿ ಶೈಕ್ಷಣಿಕ ಮತ್ತು ರಾಜಕೀಯ ಅಭಿವ್ಯಕ್ತಿಯ ಮೇಲಿನ ನಿರ್ಬಂಧಗಳು, ವಿದ್ವಾಂಸರು ಹಾಗೂ ವಿದ್ಯಾರ್ಥಿಗಳ ವಿರುದ್ಧದ ಕ್ರಮಗಳು...

ಬಿಹಾರ| ದಲಿತ ಯುವಕನ ವಿವಾಹವಾದ ಯುವತಿ; ಮಗಳ ಸಾಂಕೇತಿಕ ಅಂತ್ಯಕ್ರಿಯೆ ನಡೆಸಿದ ಪೋಷಕರು

ತಮ್ಮ 18 ವರ್ಷದ ಮಗಳು ಅಂತರ್ಜಾತಿ ವಿವಾಹವಾಗಿದ್ದಕ್ಕೆ ತೀವ್ರ ಆಕ್ರೋಶ ವ್ಯಕ್ತಪಡಿಸಿರುವ ಪೋಷಕರು, ಆಕೆಗೆ ಸಾಂಕೇತಿಕವಾಗಿ ಅಂತ್ಯಕ್ರಿಯೆ ನಡೆಸಿದ ಘಟನೆ ಬಿಹಾರದ ಪೂರ್ಣಿಯಾದಲ್ಲಿ ಬೆಳಕಿಗೆ ಬಂದಿದೆ. ಯುವತಿಯ ಫೋಟೋವಿರುವ ಪ್ರತಿಕೃತಿಯನ್ನು ಸಿದ್ಧಪಡಿಸಿ ಊರಿನಲ್ಲಿ ಶವಯಾತ್ರೆ...

ಸ್ವಇಚ್ಛೆಯಿಂದ ಇಸ್ಲಾಂ ಸ್ವೀಕಾರ : ಆಯುಷ್ ಮಲಿಕ್‌ರನ್ನು ಗೃಹಬಂಧನದಿಂದ ಬಿಡುಗಡೆಗೊಳಿಸಿದ ಅಲಹಾಬಾದ್ ಹೈಕೋರ್ಟ್

ತಾನು ಸ್ವಇಚ್ಛೆಯಿಂದ ಇಸ್ಲಾಂ ಧರ್ಮವನ್ನು ಸ್ವೀಕರಿಸಿರುವುದಾಗಿ ಮತ್ತು ಆ ನಂತರ ತನ್ನ ತಂದೆಯೇ ತನಗೆ ಬೆದರಿಕೆ ಹಾಕಿ, ಕಾನೂನುಬಾಹಿರವಾಗಿ ಗೃಹಬಂಧನದಲ್ಲಿ ಇರಿಸಿದ್ದರು ಎಂದು ಆರೋಪಿಸಿದ್ದ ಆಯುಷ್ ಮಲಿಕ್ ಎಂಬ 31 ವರ್ಷದ ಯುವಕನನ್ನು...

ಬಿಜ್ನೋರ್‌ನಲ್ಲಿ ಮುಸ್ಲಿಂ ಶಿಕ್ಷಕನ ಗುಂಡಿಕ್ಕಿ ಹತ್ಯೆ: ‘ಲವ್ ಜಿಹಾದ್’ ಆರೋಪ; ವೈಯಕ್ತಿಕ ದ್ವೇಷದ ಬಗ್ಗೆಯೂ ಪೊಲೀಸರಿಂದ ತನಿಖೆ 

ಬಿಜ್ನೋರ್: ಉತ್ತರ ಪ್ರದೇಶದ ಬಿಜ್ನೋರ್ ಜಿಲ್ಲೆಯಲ್ಲಿ 43 ವರ್ಷದ ಮುಸ್ಲಿಂ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕನೊಬ್ಬರನ್ನು ರೈತನೊಬ್ಬ ಗುಂಡಿಕ್ಕಿ ಹತ್ಯೆ ಮಾಡಿರುವ ಘಟನೆ ನಡೆದಿದೆ. ಶಿಕ್ಷಕ ನೌಶಾದ್ ಅಹ್ಮದ್ ಅವರು ‘ಲವ್ ಜಿಹಾದ್’...