Homeಮುಖಪುಟಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

- Advertisement -
- Advertisement -

ಭಾರತೀಯ ರೈಲ್ವೆ ದೇಶದ ಜೀವಸೆಲೆಗಳಲ್ಲಿ ಒಂದಾಗಿದೆ ಎಂದು ಹೇಳುವುದು ಅತಿಶಯೋಕ್ತಿಯಲ್ಲ. ಜನಸಂಖ್ಯೆಯ ಬಹುಪಾಲು ಜನರು ಇನ್ನೂ ತಮ್ಮ ದೈನಂದಿನ ಪ್ರಯಾಣಕ್ಕಾಗಿ ಅದರ ಮೇಲೆ ಅವಲಂಬಿತರಾಗಿದ್ದಾರೆ. ಹೆಚ್ಚಿನ ವಲಸೆ ಕಾರ್ಮಿಕರಿಗೆ ಇದು ತಮ್ಮ ಕುಟುಂಬ ಮತ್ತು ತಾವು ಕೆಲಸ ಮಾಡುವ ದೂರದ ಊರುಗಳೊಂದಿಗೆ ಸಂಪರ್ಕ ಸಾಧಿಸುವ ಏಕೈಕ ಕೈಗೆಟುಕುವ ಸಾಧನವಾಗಿದೆ.

ಇಂತಹ ಮಹತ್ವದ ರೈಲ್ವೆ ಇಲಾಖೆಯನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮತ್ತು ವ್ಯವಸ್ಥಿತವಾಗಿ ನಿರ್ಲಕ್ಷಿಸಿದೆ. ಜೊತೆಗೆ ರಹಸ್ಯವಾಗಿ ಖಾಸಗೀಕರಣಗೊಳಿಸುತ್ತಿದೆ.

ಪ್ರಯಾಣಿಕರ ರೈಲು ಸೇವೆಗಳ ಕಾರ್ಯಾಚರಣೆಗಾಗಿ ರೈಲ್ವೆ ಸಚಿವಾಲಯವು ಖಾಸಗಿ ಕಂಪನಿಗಳಿಗೆ ಆಹ್ವಾನ ನೀಡುವ ಮೂಲಕ ಖಾಸಗೀಕರಣದತ್ತ ಮೊದಲ ಹೆಜ್ಜೆ ಇಟ್ಟಿದೆ.

ಕನಿಷ್ಠ 151 ಆಧುನಿಕ ರೈಲು‌ಗಳನ್ನು ಪರಿಚಯಿಸಲಾಗುವುದು ಮತ್ತು ಖಾಸಗಿ ರೈಲು ಕಾರ್ಯಾಚರಣೆಗಾಗಿ 109 ಜೋಡಿ ಮಾರ್ಗಗಳನ್ನು ಯೋಜಿಸಲಾಗುವುದು. ಪ್ರತಿ ರೈಲಿನಲ್ಲಿ ಕನಿಷ್ಠ 16 ಬೋಗಿಗಳು ಇರಲಿವೆ ಎಂದು ಭಾರತೀಯ ರೈಲ್ವೆ ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರಯಾಣಿಕರ ರೈಲುಗಳ ಕಾರ್ಯಾಚರಣೆಯು “ಖಾಸಗಿ ವಲಯದ ಹೂಡಿಕೆಯನ್ನು ಸುಮಾರು 30,000 ಕೋಟಿ ರೂಗೆ ಹೆಚ್ಚಿಸುವ ಯೋಜನೆಯ ಭಾಗವಾಗಿದೆ” ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

“ಭಾರತೀಯ ರೈಲ್ವೆ ಜಾಲದ ಮೂಲಕ ಪ್ರಯಾಣಿಕರ ರೈಲುಗಳನ್ನು ಓಡಿಸಲು ಖಾಸಗಿ ಹೂಡಿಕೆಯ ಮೊದಲ ಕ್ರಮ ಇದಾಗಿದೆ” ಎಂದು ಅದು ಹೇಳಿದೆ.

ಭಾರತೀಯ ರೈಲ್ವೆಯ ಖಾಸಗೀಕರಣದ ಬಗ್ಗೆ ಮೋದಿ ಸರ್ಕಾರ ಕೆಲವು ಸಮಯದಿಂದ ಗಮನ ಹರಿಸುತ್ತಿದೆ. “ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ” ಸೋಗಿನಲ್ಲಿ ಖಾಸಗಿ ಕಂಪನಿಗಳಿಗೆ ಹೊರಗುತ್ತಿಗೆ, ವಾಣಿಜ್ಯ ಮತ್ತು ಆನ್-ಬೋರ್ಡ್ ಸೇವೆಗಳನ್ನು ಪ್ರಾರಂಭಿಸುವ ಮೂಲಕ ಇದು ಈಗಾಗಲೇ 2018 ರಲ್ಲಿ ಖಾಸಗೀಕರಣದ ಬಾಗಿಲುಗಳನ್ನು ತೆರೆದಿದೆ.

“ಭಾರತೀಯ ರೈಲ್ವೆ ಯಾವಾಗಲೂ ಭಾರತದ ಮತ್ತು ಭಾರತದ ಜನರ ಆಸ್ತಿಯಾಗಿ ಮುಂದುವರಿಯುತ್ತದೆ”. ಇದು ರೈಲ್ವೆ ಸಚಿವ ಪಿಯೂಷ್ ಗೋಯಲ್ 2019 ರ ನವೆಂಬರ್‌ನಲ್ಲಿ ಮೇಲ್ಮನೆಯಲ್ಲಿ ಹೇಳಿದ ಮಾತುಗಳು. ಆದರೆ ಅದಕ್ಕೆ ವಿರುದ್ಧವಾಗಿ ಸರ್ಕಾರ ಇಂದು ನಡೆದುಕೊಳ್ಳುತ್ತಿದೆ.

ಭಾರತೀಯ ರೈಲ್ವೆ: ಶ್ರೀಮಂತ ಇತಿಹಾಸ

ಭಾರತೀಯ ರೈಲ್ವೆಯು ಅತಿದೊಡ್ಡ ಸಾರ್ವಜನಿಕ ಉದ್ಯಮವಾಗಿದೆ ಮತ್ತು ದೇಶದ ಅತಿದೊಡ್ಡ ಉದ್ಯೋಗದಾತ ಸಾರ್ವಜನಿಕ ಕ್ಷೇತ್ರವಾಗಿದೆ. ಭಾರತೀಯ ರೈಲ್ವೆ ಪ್ರತಿವರ್ಷ 810 ಕೋಟಿಗೂ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತದೆ. ಇದರ 67,000 ಕಿಲೋಮೀಟರ್ ಉದ್ದದ ಮಾರ್ಗಗಳು ದೇಶದ ದೂರದ ಭಾಗಗಳನ್ನು ಪರಸ್ಪರ ಸಂಪರ್ಕಿಸುತ್ತವೆ. ಇದು ತಮ್ಮ ಹಳ್ಳಿಗಳು ಮತ್ತು ಕೆಲಸದ ನಗರಗಳ ನಡುವೆ ಕೋಟ್ಯಂತರ ಜನರಿಗೆ ಸಂಪರ್ಕ ಕಲ್ಪಿಸುವ ಏಕೈಕ ಕೈಗೆಟುಕುವ ಮಾರ್ಗವಾಗಿದೆ.

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

ಮೋದಿ ಸರ್ಕಾರ: ಹೂಡಿಕೆ ಹಿಂತೆಗೆತ

ಮೋದಿ ಸರ್ಕಾರವು ಸ್ಪಷ್ಟವಾಗಿ ಸಾರ್ವಜನಿಕ ಕ್ಷೇತ್ರಗಳಿಂದ ಹೂಡಿಕೆ ಹಿಂತೆಗೆದುಕೊಳ್ಳುತ್ತಿದೆ. ಬಿಎಸ್‌ಎನ್‌ಎಲ್ ಮತ್ತು ಒಎನ್‌ಜಿಸಿ ಸೇರಿದಂತೆ ಹಲವು ಕಂಪನಿಗಳ ವಿಚಾರದಲ್ಲಿ ಇದು ಸ್ಪಷ್ಟವಾಗಿದೆ. ಸದ್ಯದ ಕೋವಿಡ್ ಬಿಕ್ಕಟ್ಟು ಅವರ ಖಾಸಗೀಕರಣದ ಪ್ರಯತ್ನಗಳಿಗೆ ಒದಗಿದ ಸುವರ್ಣಾವಕಾಶವಾಗಿದೆ.

ಭಾರತದಲ್ಲಿ 339 ಸಾರ್ವಜನಿಕ ವಲಯದ ಉದ್ಯಮಗಳಿವೆ. ಅವುಗಳು ಖಾಸಗೀಕರಣಗೊಂಡರೆ ಉತ್ತಮ ಪ್ರದರ್ಶನ ನೀಡುತ್ತವೆ ಎಂಬ ವಾದವನ್ನು ಪ್ರತಿಬಾರಿ ಹೇಳಲಾಗುತ್ತದೆ. ಆದರೆ ಅಂತಹ ಉದಾಹರಣೆಗಳು ಕಾಣಸಿಗುವುದಿಲ್ಲ. ಇದರಿಂದ ಸರ್ಕಾರಕ್ಕೆ ಎಷ್ಟು ನಷ್ಟವಾಗುತ್ತದೆ ಎಂಬುದರ ಬಗ್ಗೆ ಚರ್ಚೆಗಳು ನಡೆಯುವುದಿಲ್ಲ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ), ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ, ಟಿಎಚ್‌ಡಿಸಿ ಲಿಮಿಟೆಡ್ ಮತ್ತು ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಶನ್ ಲಿಮಿಟೆಡ್‌ ಕಂಪನಿಗಳಲ್ಲಿನ ಸರ್ಕಾರಿ ಪಾಲನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರಸ್ತಾಪ ಮಾಡಲಾಗಿದೆ.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...