Homeಮುಖಪುಟಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

- Advertisement -
- Advertisement -

ಭಾರತೀಯ ರೈಲ್ವೆ ದೇಶದ ಜೀವಸೆಲೆಗಳಲ್ಲಿ ಒಂದಾಗಿದೆ ಎಂದು ಹೇಳುವುದು ಅತಿಶಯೋಕ್ತಿಯಲ್ಲ. ಜನಸಂಖ್ಯೆಯ ಬಹುಪಾಲು ಜನರು ಇನ್ನೂ ತಮ್ಮ ದೈನಂದಿನ ಪ್ರಯಾಣಕ್ಕಾಗಿ ಅದರ ಮೇಲೆ ಅವಲಂಬಿತರಾಗಿದ್ದಾರೆ. ಹೆಚ್ಚಿನ ವಲಸೆ ಕಾರ್ಮಿಕರಿಗೆ ಇದು ತಮ್ಮ ಕುಟುಂಬ ಮತ್ತು ತಾವು ಕೆಲಸ ಮಾಡುವ ದೂರದ ಊರುಗಳೊಂದಿಗೆ ಸಂಪರ್ಕ ಸಾಧಿಸುವ ಏಕೈಕ ಕೈಗೆಟುಕುವ ಸಾಧನವಾಗಿದೆ.

ಇಂತಹ ಮಹತ್ವದ ರೈಲ್ವೆ ಇಲಾಖೆಯನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮತ್ತು ವ್ಯವಸ್ಥಿತವಾಗಿ ನಿರ್ಲಕ್ಷಿಸಿದೆ. ಜೊತೆಗೆ ರಹಸ್ಯವಾಗಿ ಖಾಸಗೀಕರಣಗೊಳಿಸುತ್ತಿದೆ.

ಪ್ರಯಾಣಿಕರ ರೈಲು ಸೇವೆಗಳ ಕಾರ್ಯಾಚರಣೆಗಾಗಿ ರೈಲ್ವೆ ಸಚಿವಾಲಯವು ಖಾಸಗಿ ಕಂಪನಿಗಳಿಗೆ ಆಹ್ವಾನ ನೀಡುವ ಮೂಲಕ ಖಾಸಗೀಕರಣದತ್ತ ಮೊದಲ ಹೆಜ್ಜೆ ಇಟ್ಟಿದೆ.

ಕನಿಷ್ಠ 151 ಆಧುನಿಕ ರೈಲು‌ಗಳನ್ನು ಪರಿಚಯಿಸಲಾಗುವುದು ಮತ್ತು ಖಾಸಗಿ ರೈಲು ಕಾರ್ಯಾಚರಣೆಗಾಗಿ 109 ಜೋಡಿ ಮಾರ್ಗಗಳನ್ನು ಯೋಜಿಸಲಾಗುವುದು. ಪ್ರತಿ ರೈಲಿನಲ್ಲಿ ಕನಿಷ್ಠ 16 ಬೋಗಿಗಳು ಇರಲಿವೆ ಎಂದು ಭಾರತೀಯ ರೈಲ್ವೆ ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರಯಾಣಿಕರ ರೈಲುಗಳ ಕಾರ್ಯಾಚರಣೆಯು “ಖಾಸಗಿ ವಲಯದ ಹೂಡಿಕೆಯನ್ನು ಸುಮಾರು 30,000 ಕೋಟಿ ರೂಗೆ ಹೆಚ್ಚಿಸುವ ಯೋಜನೆಯ ಭಾಗವಾಗಿದೆ” ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

“ಭಾರತೀಯ ರೈಲ್ವೆ ಜಾಲದ ಮೂಲಕ ಪ್ರಯಾಣಿಕರ ರೈಲುಗಳನ್ನು ಓಡಿಸಲು ಖಾಸಗಿ ಹೂಡಿಕೆಯ ಮೊದಲ ಕ್ರಮ ಇದಾಗಿದೆ” ಎಂದು ಅದು ಹೇಳಿದೆ.

ಭಾರತೀಯ ರೈಲ್ವೆಯ ಖಾಸಗೀಕರಣದ ಬಗ್ಗೆ ಮೋದಿ ಸರ್ಕಾರ ಕೆಲವು ಸಮಯದಿಂದ ಗಮನ ಹರಿಸುತ್ತಿದೆ. “ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ” ಸೋಗಿನಲ್ಲಿ ಖಾಸಗಿ ಕಂಪನಿಗಳಿಗೆ ಹೊರಗುತ್ತಿಗೆ, ವಾಣಿಜ್ಯ ಮತ್ತು ಆನ್-ಬೋರ್ಡ್ ಸೇವೆಗಳನ್ನು ಪ್ರಾರಂಭಿಸುವ ಮೂಲಕ ಇದು ಈಗಾಗಲೇ 2018 ರಲ್ಲಿ ಖಾಸಗೀಕರಣದ ಬಾಗಿಲುಗಳನ್ನು ತೆರೆದಿದೆ.

“ಭಾರತೀಯ ರೈಲ್ವೆ ಯಾವಾಗಲೂ ಭಾರತದ ಮತ್ತು ಭಾರತದ ಜನರ ಆಸ್ತಿಯಾಗಿ ಮುಂದುವರಿಯುತ್ತದೆ”. ಇದು ರೈಲ್ವೆ ಸಚಿವ ಪಿಯೂಷ್ ಗೋಯಲ್ 2019 ರ ನವೆಂಬರ್‌ನಲ್ಲಿ ಮೇಲ್ಮನೆಯಲ್ಲಿ ಹೇಳಿದ ಮಾತುಗಳು. ಆದರೆ ಅದಕ್ಕೆ ವಿರುದ್ಧವಾಗಿ ಸರ್ಕಾರ ಇಂದು ನಡೆದುಕೊಳ್ಳುತ್ತಿದೆ.

ಭಾರತೀಯ ರೈಲ್ವೆ: ಶ್ರೀಮಂತ ಇತಿಹಾಸ

ಭಾರತೀಯ ರೈಲ್ವೆಯು ಅತಿದೊಡ್ಡ ಸಾರ್ವಜನಿಕ ಉದ್ಯಮವಾಗಿದೆ ಮತ್ತು ದೇಶದ ಅತಿದೊಡ್ಡ ಉದ್ಯೋಗದಾತ ಸಾರ್ವಜನಿಕ ಕ್ಷೇತ್ರವಾಗಿದೆ. ಭಾರತೀಯ ರೈಲ್ವೆ ಪ್ರತಿವರ್ಷ 810 ಕೋಟಿಗೂ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತದೆ. ಇದರ 67,000 ಕಿಲೋಮೀಟರ್ ಉದ್ದದ ಮಾರ್ಗಗಳು ದೇಶದ ದೂರದ ಭಾಗಗಳನ್ನು ಪರಸ್ಪರ ಸಂಪರ್ಕಿಸುತ್ತವೆ. ಇದು ತಮ್ಮ ಹಳ್ಳಿಗಳು ಮತ್ತು ಕೆಲಸದ ನಗರಗಳ ನಡುವೆ ಕೋಟ್ಯಂತರ ಜನರಿಗೆ ಸಂಪರ್ಕ ಕಲ್ಪಿಸುವ ಏಕೈಕ ಕೈಗೆಟುಕುವ ಮಾರ್ಗವಾಗಿದೆ.

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

ಮೋದಿ ಸರ್ಕಾರ: ಹೂಡಿಕೆ ಹಿಂತೆಗೆತ

ಮೋದಿ ಸರ್ಕಾರವು ಸ್ಪಷ್ಟವಾಗಿ ಸಾರ್ವಜನಿಕ ಕ್ಷೇತ್ರಗಳಿಂದ ಹೂಡಿಕೆ ಹಿಂತೆಗೆದುಕೊಳ್ಳುತ್ತಿದೆ. ಬಿಎಸ್‌ಎನ್‌ಎಲ್ ಮತ್ತು ಒಎನ್‌ಜಿಸಿ ಸೇರಿದಂತೆ ಹಲವು ಕಂಪನಿಗಳ ವಿಚಾರದಲ್ಲಿ ಇದು ಸ್ಪಷ್ಟವಾಗಿದೆ. ಸದ್ಯದ ಕೋವಿಡ್ ಬಿಕ್ಕಟ್ಟು ಅವರ ಖಾಸಗೀಕರಣದ ಪ್ರಯತ್ನಗಳಿಗೆ ಒದಗಿದ ಸುವರ್ಣಾವಕಾಶವಾಗಿದೆ.

ಭಾರತದಲ್ಲಿ 339 ಸಾರ್ವಜನಿಕ ವಲಯದ ಉದ್ಯಮಗಳಿವೆ. ಅವುಗಳು ಖಾಸಗೀಕರಣಗೊಂಡರೆ ಉತ್ತಮ ಪ್ರದರ್ಶನ ನೀಡುತ್ತವೆ ಎಂಬ ವಾದವನ್ನು ಪ್ರತಿಬಾರಿ ಹೇಳಲಾಗುತ್ತದೆ. ಆದರೆ ಅಂತಹ ಉದಾಹರಣೆಗಳು ಕಾಣಸಿಗುವುದಿಲ್ಲ. ಇದರಿಂದ ಸರ್ಕಾರಕ್ಕೆ ಎಷ್ಟು ನಷ್ಟವಾಗುತ್ತದೆ ಎಂಬುದರ ಬಗ್ಗೆ ಚರ್ಚೆಗಳು ನಡೆಯುವುದಿಲ್ಲ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ), ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ, ಟಿಎಚ್‌ಡಿಸಿ ಲಿಮಿಟೆಡ್ ಮತ್ತು ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಶನ್ ಲಿಮಿಟೆಡ್‌ ಕಂಪನಿಗಳಲ್ಲಿನ ಸರ್ಕಾರಿ ಪಾಲನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರಸ್ತಾಪ ಮಾಡಲಾಗಿದೆ.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಐ-ಪ್ಯಾಕ್ ಮೇಲೆ ದಾಳಿ ಪ್ರಕರಣ: ಮಮತಾ ಬ್ಯಾನರ್ಜಿ ದೂರಿನ ಬೆನ್ನಲ್ಲೇ ಜಾರಿ ನಿರ್ದೇಶನಾಲಯದ ವಿರುದ್ಧ ಎಫ್‌ಐಆರ್

ಕೋಲ್ಕತ್ತಾ: ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ನಿವಾಸದ ಮೇಲೆ ಜಾರಿ ನಿರ್ದೇಶನಾಲಯ ನಡೆಸಿದ ದಾಳಿಗೆ ಸಂಬಂಧಿಸಿದಂತೆ ಟಿಎಂಸಿ ಅಧ್ಯಕ್ಷೆ ಮಮತಾ ಬ್ಯಾನರ್ಜಿ...

‘ಭ್ರಷ್ಟ ಜನತಾ ಪಾರ್ಟಿ’: ಬಿಜೆಪಿ ಡಬಲ್ ಎಂಜಿನ್ ಆಡಳಿತದ ವಿರುದ್ಧ ರಾಹುಲ್ ಗಾಂಧಿ ವಾಗ್ದಾಳಿ

ನವದೆಹಲಿ: ವಿವಿಧ ರಾಜ್ಯಗಳಲ್ಲಿ ಬಿಜೆಪಿಯ ಡಬಲ್ ಎಂಜಿನ್ ಸರ್ಕಾರಗಳ ವಿರುದ್ಧ ಲೋಕಸಭೆ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಾಗ್ದಾಳಿ ನಡೆಸಿದ್ದಾರೆ.  ತಮ್ಮ ಸಾಮಾಜಿಕ ಮಾಧ್ಯಮ ಎಕ್ಸ್‌ನಲ್ಲಿ ಪೋಸ್ಟ್ ಮಾಡಿರುವ ರಾಹುಲ್, ಉತ್ತರಾಖಂಡದಲ್ಲಿ ಅಂಕಿತ...

ಇಂದೋರ್‌ನಲ್ಲಿ ಕಲುಷಿತ ನೀರಿಗೆ 8 ಮಂದಿ ಬಲಿ: ಆರ್‌ಎಸ್‌ಎಸ್ ಕಚೇರಿಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್: ಭುಗಿಲೆದ್ದ ವಿವಾದ

ಇಂದೋರ್: ಆರ್‌ಎಸ್‌ಎಸ್ ಕಚೇರಿಯಲ್ಲಿ ಬುಧವಾರ ತಡರಾತ್ರಿ ನಡೆದ ಸಭೆಯಲ್ಲಿ ಜಿಲ್ಲಾಧಿಕಾರಿ ಮತ್ತು ಮೇಯರ್ ಭಾಗವಹಿಸಿದ್ದು ಕಂಡುಬಂದ ನಂತರ ಗುರುವಾರ ಇಂದೋರ್‌ನಲ್ಲಿ ರಾಜಕೀಯ ವಿವಾದ ಭುಗಿಲೆದ್ದಿದೆ.  ಕನಿಷ್ಠ ಎಂಟು ಮಂದಿ ಜೀವಗಳನ್ನು ಬಲಿ ಪಡೆದಿರುವ ಕಲುಷಿತ...

ಐ-ಪ್ಯಾಕ್ ಮೇಲೆ ಇಡಿ ದಾಳಿ: ಕೋಲ್ಕತ್ತಾದಲ್ಲಿ ಮಮತಾ ಪ್ರತಿಭಟನೆ: ಅಮಿತ್ ಶಾ ಕಚೇರಿಯ ಹೊರಗೆ ಪ್ರತಿಭಟಿಸುತ್ತಿದ್ದ ಟಿಎಂಸಿ ಶಾಸಕರ ಬಂಧನ

ಗುರುವಾರ (ಜ.8) ಬೆಳಿಗ್ಗೆ ಕೋಲ್ಕತ್ತಾದ ಸಾಲ್ಟ್ ಲೇಕ್‌ನಲ್ಲಿರುವ ರಾಜಕೀಯ ಸಲಹಾ ಸಂಸ್ಥೆ ಐ-ಪಿಎಸಿ (ಐ-ಪ್ಯಾಕ್) ಕಚೇರಿ ಮತ್ತು ಅದರ ಮುಖ್ಯಸ್ಥ ಪ್ರತೀಕ್ ಜೈನ್ ಅವರ ಮನೆ ಮೇಲೆ ಜಾರಿ ನಿರ್ದೇಶನಾಲಯ (ಇಡಿ) ನಡೆಸಿದ...

ಮಹಾರಾಷ್ಟ್ರ ಜಲ್ನಾ ಮಹಾನಗರ ಪಾಲಿಕೆ ಚುನಾವಣೆಯಲ್ಲಿ ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಸ್ಪರ್ಧೆ!

ಪತ್ರಕರ್ತೆ ಗೌರಿ ಲಂಕೇಶ್ ಹತ್ಯೆಯ ಆರೋಪಿ ಶ್ರೀಕಾಂತ್ ಪಂಗಾರ್ಕರ್ ಮುಂಬರುವ ಜಲ್ನಾ ಮುನ್ಸಿಪಲ್ ಕಾರ್ಪೊರೇಷನ್ ಚುನಾವಣೆಯಲ್ಲಿ ಸ್ವತಂತ್ರ ಅಭ್ಯರ್ಥಿಯಾಗಿ ಸ್ಪರ್ಧಿಸುತ್ತಿದ್ದಾರೆ ಎಂಬ ಸುದ್ದಿ  ಹಲವು ರಾಷ್ಟ್ರೀಯ ಮಾಧ್ಯಮಗಳಲ್ಲಿ ವರದಿಯಾಗಿದೆ.  ಗೌರಿ ಲಂಕೇಶ್ ಹತ್ಯೆ ಸೇರಿದಂತೆ...

‘ಮೋದಿ ಟ್ರಂಪ್‌ಗೆ ಕರೆ ಮಾಡದ ಕಾರಣ ಭಾರತ-ಯುಎಸ್ ವ್ಯಾಪಾರ ಒಪ್ಪಂದ ನಡೆಯಲಿಲ್ಲ’: ಹೊವಾರ್ಡ್ ಲುಟ್ನಿಕ್ 

ಪ್ರಧಾನಿ ನರೇಂದ್ರ ಮೋದಿ ಅವರು ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರಿಗೆ ಸರಿಯಾದ ಸಮಯಕ್ಕೆ ಕರೆ ಮಾಡದ ಕಾರಣ ಭಾರತದೊಂದಿಗಿನ ವ್ಯಾಪಾರ ಒಪ್ಪಂದ ನಡೆಯಲಿಲ್ಲ ಎಂದು ಅಮೆರಿಕದ ವಾಣಿಜ್ಯ ಕಾರ್ಯದರ್ಶಿ ಹೊವಾರ್ಡ್ ಲುಟ್ನಿಕ್...

‘ರೈಲ್ವೆ ಸಚಿವಾಲಯವನ್ನು ವೈಯಕ್ತಿಕ ಆಸ್ತಿಯಾಗಿ ಬಳಸಿಕೊಳ್ಳಲಾಗಿದೆ’: ಲಾಲು ಮತ್ತು ಕುಟುಂಬದ ವಿರುದ್ಧ ದೆಹಲಿ ನ್ಯಾಯಾಲಯ ಆರೋಪ

ನವದೆಹಲಿ: ಉದ್ಯೋಗಕ್ಕಾಗಿ ಭೂಮಿ ಹಗರಣದಲ್ಲಿ ಆರ್‌ಜೆಡಿ ಮುಖ್ಯಸ್ಥ ಮತ್ತು ಮಾಜಿ ರೈಲ್ವೆ ಸಚಿವ ಲಾಲು ಪ್ರಸಾದ್ ಯಾದವ್, ಅವರ ಕುಟುಂಬದ ಸದಸ್ಯರು ಮತ್ತು ಇತರರ ವಿರುದ್ಧ ದೆಹಲಿ ನ್ಯಾಯಾಲಯ ಗಂಭೀರ ಆರೋಪಗಳನ್ನು ಮಾಡಿದೆ.  ಯಾದವ್...

‘ಕೇರಳದ ಮಲಯಾಳಂ ಮಸೂದೆಯನ್ನು ವಿರೋಧಿಸಲು ಸಾಧ್ಯವಿರುವ ಎಲ್ಲವನ್ನೂ ಮಾಡುತ್ತೇವೆ’: ಸಿಎಂ ಸಿದ್ದರಾಮಯ್ಯ

ಬೆಂಗಳೂರು: ಕನ್ನಡ ಮಾಧ್ಯಮ ಶಾಲೆಗಳಲ್ಲಿಯೂ ಮಲಯಾಳಂ ಅನ್ನು ಪ್ರಥಮ ಭಾಷೆಯನ್ನಾಗಿ ಮಾಡುವ ಕೇರಳದ ಪ್ರಸ್ತಾವಿತ ಕಾನೂನನ್ನು ವಿರೋಧಿಸಲು ಕರ್ನಾಟಕ "ಸಾಧ್ಯವಾದಷ್ಟು ಪ್ರಯತ್ನಿಸುತ್ತದೆ" ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಹೇಳಿದ್ದಾರೆ.   ಪ್ರಸ್ತಾವಿತ ಮಲಯಾಳಂ ಭಾಷಾ ಮಸೂದೆಯು "ಕೇರಳದ...

ಜಾರ್ಖಂಡ್‌ನಲ್ಲಿ ಮತ್ತೊಂದು ಗುಂಪುಹತ್ಯೆ: ದನ ಕಳ್ಳತನದ ಶಂಕೆಯಲ್ಲಿ ಮುಸ್ಲಿಂ ವ್ಯಕ್ತಿಯನ್ನು ಥಳಿಸಿ ಕೊಂದ ಗುಂಪು

ಜಾರ್ಖಂಡ್‌ನ ಗೊಡ್ಡಾ ಜಿಲ್ಲೆಯಲ್ಲಿ ಬುಧವಾರ ದನಗಳನ್ನು ಕದ್ದಿದ್ದಾನೆ ಎಂಬ ಶಂಕೆಯಲ್ಲಿ 45 ವರ್ಷದ ಮುಸ್ಲಿಂ ವ್ಯಕ್ತಿಯನ್ನು ಅಪರಿಚಿತ ಜನರ ಗುಂಪೊಂದು ಹೊಡೆದು ಕೊಂದಿದೆ ಎಂದು ಪಿಟಿಐ ವರದಿ ಮಾಡಿದೆ. ಪೊಲೀಸ್ ಅಧಿಕಾರಿಗಳನ್ನು ಉಲ್ಲೇಖಿಸಿ ವರದಿ...

ನ್ಯಾಷನಲ್ ಹೆರಾಲ್ಡ್ ಜಾಹೀರಾತು ವಿವಾದ: ಹಣಕಾಸಿನ ದಾಖಲೆ ಕೇಳಿ ಡಿಕೆ ಸಹೋದರರಿಗೆ ನೋಟಿಸ್  

ಕಾಂಗ್ರೆಸ್ ನೇತೃತ್ವದ ಕರ್ನಾಟಕ ಸರ್ಕಾರದಿಂದ ನ್ಯಾಷನಲ್ ಹೆರಾಲ್ಡ್ ಪತ್ರಿಕೆಗೆ ಬೇರೆ ಯಾವುದೇ ರಾಷ್ಟ್ರೀಯ ದಿನಪತ್ರಿಕೆಗಿಂತ ಹೆಚ್ಚಿನ ಜಾಹೀರಾತು ನಿಧಿ ದೊರೆತಿದೆ ಎಂದು ವರದಿಯಾಗಿದೆ, ಇದು ಸಾರ್ವಜನಿಕ ಹಣದ ಬಳಕೆಯ ಬಗ್ಗೆ ಪ್ರಶ್ನೆಗಳನ್ನು ಹುಟ್ಟುಹಾಕಿದೆ....