Homeಮುಖಪುಟಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

- Advertisement -
- Advertisement -

ಭಾರತೀಯ ರೈಲ್ವೆ ದೇಶದ ಜೀವಸೆಲೆಗಳಲ್ಲಿ ಒಂದಾಗಿದೆ ಎಂದು ಹೇಳುವುದು ಅತಿಶಯೋಕ್ತಿಯಲ್ಲ. ಜನಸಂಖ್ಯೆಯ ಬಹುಪಾಲು ಜನರು ಇನ್ನೂ ತಮ್ಮ ದೈನಂದಿನ ಪ್ರಯಾಣಕ್ಕಾಗಿ ಅದರ ಮೇಲೆ ಅವಲಂಬಿತರಾಗಿದ್ದಾರೆ. ಹೆಚ್ಚಿನ ವಲಸೆ ಕಾರ್ಮಿಕರಿಗೆ ಇದು ತಮ್ಮ ಕುಟುಂಬ ಮತ್ತು ತಾವು ಕೆಲಸ ಮಾಡುವ ದೂರದ ಊರುಗಳೊಂದಿಗೆ ಸಂಪರ್ಕ ಸಾಧಿಸುವ ಏಕೈಕ ಕೈಗೆಟುಕುವ ಸಾಧನವಾಗಿದೆ.

ಇಂತಹ ಮಹತ್ವದ ರೈಲ್ವೆ ಇಲಾಖೆಯನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮತ್ತು ವ್ಯವಸ್ಥಿತವಾಗಿ ನಿರ್ಲಕ್ಷಿಸಿದೆ. ಜೊತೆಗೆ ರಹಸ್ಯವಾಗಿ ಖಾಸಗೀಕರಣಗೊಳಿಸುತ್ತಿದೆ.

ಪ್ರಯಾಣಿಕರ ರೈಲು ಸೇವೆಗಳ ಕಾರ್ಯಾಚರಣೆಗಾಗಿ ರೈಲ್ವೆ ಸಚಿವಾಲಯವು ಖಾಸಗಿ ಕಂಪನಿಗಳಿಗೆ ಆಹ್ವಾನ ನೀಡುವ ಮೂಲಕ ಖಾಸಗೀಕರಣದತ್ತ ಮೊದಲ ಹೆಜ್ಜೆ ಇಟ್ಟಿದೆ.

ಕನಿಷ್ಠ 151 ಆಧುನಿಕ ರೈಲು‌ಗಳನ್ನು ಪರಿಚಯಿಸಲಾಗುವುದು ಮತ್ತು ಖಾಸಗಿ ರೈಲು ಕಾರ್ಯಾಚರಣೆಗಾಗಿ 109 ಜೋಡಿ ಮಾರ್ಗಗಳನ್ನು ಯೋಜಿಸಲಾಗುವುದು. ಪ್ರತಿ ರೈಲಿನಲ್ಲಿ ಕನಿಷ್ಠ 16 ಬೋಗಿಗಳು ಇರಲಿವೆ ಎಂದು ಭಾರತೀಯ ರೈಲ್ವೆ ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರಯಾಣಿಕರ ರೈಲುಗಳ ಕಾರ್ಯಾಚರಣೆಯು “ಖಾಸಗಿ ವಲಯದ ಹೂಡಿಕೆಯನ್ನು ಸುಮಾರು 30,000 ಕೋಟಿ ರೂಗೆ ಹೆಚ್ಚಿಸುವ ಯೋಜನೆಯ ಭಾಗವಾಗಿದೆ” ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

“ಭಾರತೀಯ ರೈಲ್ವೆ ಜಾಲದ ಮೂಲಕ ಪ್ರಯಾಣಿಕರ ರೈಲುಗಳನ್ನು ಓಡಿಸಲು ಖಾಸಗಿ ಹೂಡಿಕೆಯ ಮೊದಲ ಕ್ರಮ ಇದಾಗಿದೆ” ಎಂದು ಅದು ಹೇಳಿದೆ.

ಭಾರತೀಯ ರೈಲ್ವೆಯ ಖಾಸಗೀಕರಣದ ಬಗ್ಗೆ ಮೋದಿ ಸರ್ಕಾರ ಕೆಲವು ಸಮಯದಿಂದ ಗಮನ ಹರಿಸುತ್ತಿದೆ. “ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ” ಸೋಗಿನಲ್ಲಿ ಖಾಸಗಿ ಕಂಪನಿಗಳಿಗೆ ಹೊರಗುತ್ತಿಗೆ, ವಾಣಿಜ್ಯ ಮತ್ತು ಆನ್-ಬೋರ್ಡ್ ಸೇವೆಗಳನ್ನು ಪ್ರಾರಂಭಿಸುವ ಮೂಲಕ ಇದು ಈಗಾಗಲೇ 2018 ರಲ್ಲಿ ಖಾಸಗೀಕರಣದ ಬಾಗಿಲುಗಳನ್ನು ತೆರೆದಿದೆ.

“ಭಾರತೀಯ ರೈಲ್ವೆ ಯಾವಾಗಲೂ ಭಾರತದ ಮತ್ತು ಭಾರತದ ಜನರ ಆಸ್ತಿಯಾಗಿ ಮುಂದುವರಿಯುತ್ತದೆ”. ಇದು ರೈಲ್ವೆ ಸಚಿವ ಪಿಯೂಷ್ ಗೋಯಲ್ 2019 ರ ನವೆಂಬರ್‌ನಲ್ಲಿ ಮೇಲ್ಮನೆಯಲ್ಲಿ ಹೇಳಿದ ಮಾತುಗಳು. ಆದರೆ ಅದಕ್ಕೆ ವಿರುದ್ಧವಾಗಿ ಸರ್ಕಾರ ಇಂದು ನಡೆದುಕೊಳ್ಳುತ್ತಿದೆ.

ಭಾರತೀಯ ರೈಲ್ವೆ: ಶ್ರೀಮಂತ ಇತಿಹಾಸ

ಭಾರತೀಯ ರೈಲ್ವೆಯು ಅತಿದೊಡ್ಡ ಸಾರ್ವಜನಿಕ ಉದ್ಯಮವಾಗಿದೆ ಮತ್ತು ದೇಶದ ಅತಿದೊಡ್ಡ ಉದ್ಯೋಗದಾತ ಸಾರ್ವಜನಿಕ ಕ್ಷೇತ್ರವಾಗಿದೆ. ಭಾರತೀಯ ರೈಲ್ವೆ ಪ್ರತಿವರ್ಷ 810 ಕೋಟಿಗೂ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತದೆ. ಇದರ 67,000 ಕಿಲೋಮೀಟರ್ ಉದ್ದದ ಮಾರ್ಗಗಳು ದೇಶದ ದೂರದ ಭಾಗಗಳನ್ನು ಪರಸ್ಪರ ಸಂಪರ್ಕಿಸುತ್ತವೆ. ಇದು ತಮ್ಮ ಹಳ್ಳಿಗಳು ಮತ್ತು ಕೆಲಸದ ನಗರಗಳ ನಡುವೆ ಕೋಟ್ಯಂತರ ಜನರಿಗೆ ಸಂಪರ್ಕ ಕಲ್ಪಿಸುವ ಏಕೈಕ ಕೈಗೆಟುಕುವ ಮಾರ್ಗವಾಗಿದೆ.

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

ಮೋದಿ ಸರ್ಕಾರ: ಹೂಡಿಕೆ ಹಿಂತೆಗೆತ

ಮೋದಿ ಸರ್ಕಾರವು ಸ್ಪಷ್ಟವಾಗಿ ಸಾರ್ವಜನಿಕ ಕ್ಷೇತ್ರಗಳಿಂದ ಹೂಡಿಕೆ ಹಿಂತೆಗೆದುಕೊಳ್ಳುತ್ತಿದೆ. ಬಿಎಸ್‌ಎನ್‌ಎಲ್ ಮತ್ತು ಒಎನ್‌ಜಿಸಿ ಸೇರಿದಂತೆ ಹಲವು ಕಂಪನಿಗಳ ವಿಚಾರದಲ್ಲಿ ಇದು ಸ್ಪಷ್ಟವಾಗಿದೆ. ಸದ್ಯದ ಕೋವಿಡ್ ಬಿಕ್ಕಟ್ಟು ಅವರ ಖಾಸಗೀಕರಣದ ಪ್ರಯತ್ನಗಳಿಗೆ ಒದಗಿದ ಸುವರ್ಣಾವಕಾಶವಾಗಿದೆ.

ಭಾರತದಲ್ಲಿ 339 ಸಾರ್ವಜನಿಕ ವಲಯದ ಉದ್ಯಮಗಳಿವೆ. ಅವುಗಳು ಖಾಸಗೀಕರಣಗೊಂಡರೆ ಉತ್ತಮ ಪ್ರದರ್ಶನ ನೀಡುತ್ತವೆ ಎಂಬ ವಾದವನ್ನು ಪ್ರತಿಬಾರಿ ಹೇಳಲಾಗುತ್ತದೆ. ಆದರೆ ಅಂತಹ ಉದಾಹರಣೆಗಳು ಕಾಣಸಿಗುವುದಿಲ್ಲ. ಇದರಿಂದ ಸರ್ಕಾರಕ್ಕೆ ಎಷ್ಟು ನಷ್ಟವಾಗುತ್ತದೆ ಎಂಬುದರ ಬಗ್ಗೆ ಚರ್ಚೆಗಳು ನಡೆಯುವುದಿಲ್ಲ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ), ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ, ಟಿಎಚ್‌ಡಿಸಿ ಲಿಮಿಟೆಡ್ ಮತ್ತು ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಶನ್ ಲಿಮಿಟೆಡ್‌ ಕಂಪನಿಗಳಲ್ಲಿನ ಸರ್ಕಾರಿ ಪಾಲನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರಸ್ತಾಪ ಮಾಡಲಾಗಿದೆ.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಶೀಘ್ರದಲ್ಲೇ ಹೊರಡುತ್ತೇನೆ’: ‘2-3 ವಾರಗಳಲ್ಲಿ’ ಇರಾನ್ ಮೇಲಿನ ಯುದ್ಧ ಕೊನೆಗೊಳಿಸುವ ಬಗ್ಗೆ ಸುಳಿವು ನೀಡಿದ ಅಮೆರಿಕ ಅಧ್ಯಕ್ಷ ಟ್ರಂಪ್ 

ವಾಷಿಂಗ್ಟನ್ ಡಿಸಿ: ಜಾಗತಿಕ ಇಂಧನ ಮಾರುಕಟ್ಟೆಗಳನ್ನು ಅಸ್ತವ್ಯಸ್ತಗೊಳಿಸಿರುವ ಒಂದು ತಿಂಗಳ ಕಾಲ ನಡೆದ ಯುದ್ಧದ ಸಂಭಾವ್ಯ ಅಂತ್ಯದ ಬಗ್ಗೆ ಸುಳಿವು ನೀಡುವ ಮೂಲಕ, ಮುಂದಿನ ಎರಡು ಮೂರು ವಾರಗಳ ಮೊದಲೇ ಇರಾನ್ ವಿರುದ್ಧದ...

ದೊಡ್ಡಬಳ್ಳಾಪುರದಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ : ಕೆಐಎಡಿಬಿ ವಿರುದ್ಧ ಬೀದಿಗಿಳಿದ ಜನ

ದೇವನಹಳ್ಳಿ ಬಳಿಕ ಬೆಂಗಳೂರು ಗ್ರಾಮಾಂತರ ಜಿಲ್ಲೆಯ ದೊಡ್ಡಬಳ್ಳಾಪುರ ತಾಲೂಕಿನಲ್ಲಿ ಭೂ ಸ್ವಾಧೀನ ವಿರೋಧಿ ಹೋರಾಟ ಪ್ರಾರಂಭಗೊಂಡಿದೆ. ಕರ್ನಾಟಕ ಕೈಗಾರಿಕಾ ಪ್ರದೇಶ ಅಭಿವೃದ್ದಿ ಮಂಡಳಿ (ಕೆಐಎಡಿಬಿ) ವಿರುದ್ಧ ಜನರು ಬೀದಿಗಿಳಿದಿದ್ದಾರೆ. ದೊಡ್ಡಬಳ್ಳಾಪುರ ತಾಲೂಕಿನ ದೊಡ್ಡಬೆಳವಂಗಲ...

ಬಿಹಾರ: ಪತಿಯನ್ನು ಹತ್ಯೆ ಮಾಡಿದ ಗುಂಪಿನಿಂದ ಬೆದರಿಕೆ; ಇಬ್ಬರು ಮಕ್ಕಳೊಂದಿಗೆ ವಿಷ ಸೇವಿಸಿದ ಮುಸ್ಲಿಂ ಮಹಿಳೆ ಸಾವು, ಮಕ್ಕಳ ಸ್ಥಿತಿ ಗಂಭೀರ

ಬಿಹಾರದ ರೋಹ್ತಾಸ್ ಜಿಲ್ಲೆಯ ಮುಸ್ಲಿಂ ಮಹಿಳೆಯೊಬ್ಬರು ಮಂಗಳವಾರ ತನ್ನ ಇಬ್ಬರು ಅಪ್ರಾಪ್ತ ಮಕ್ಕಳೊಂದಿಗೆ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ ಎಂದು ವರದಿಯಾಗಿದೆ.  ಪತಿಯನ್ನು ಅಮಾನುಷವಾಗಿ ಹಲ್ಲೆ ನಡೆಸಿ ಹತ್ಯೆ ಮಾಡಿದ್ದ ಆರೋಪಿಗಳಿಂದ ಬೆದರಿಕೆಗಳನ್ನು ತಾಳಲಾರದೆ...

ಅತ್ಯಾಚಾರ ಆರೋಪ: ಅಶೋಕ್ ಖರತ್ ಅವರ ಪುತ್ರನನ್ನು ವಿಚಾರಣೆಗಾಗಿ ವಶಕ್ಕೆ ಪಡೆದ ಎಸ್ಐಟಿ; ಪತ್ನಿಗಾಗಿ ಹುಡುಕಾಟ 

ನಾಸಿಕ್: ಅತ್ಯಾಚಾರ ಆರೋಪಿ ಸ್ವಯಂ ಘೋಷಿತ ದೇವಮಾನವ ಅಶೋಕ್ ಖರತ್ ವಿರುದ್ಧ ತನಿಖೆ ನಡೆಸುತ್ತಿರುವ ವಿಶೇಷ ತನಿಖಾ ತಂಡ (ಎಸ್‌ಐಟಿ), ನಾಸಿಕ್ ನಗರದಲ್ಲಿ ಆತನ ಮಗನನ್ನು ವಿಚಾರಣೆಗಾಗಿ ವಶಕ್ಕೆ ಪಡೆದಿದ್ದು, ಆತನ ಪತ್ನಿಗಾಗಿಯೂ...

ಇರಾಕ್‌ : ಬಗ್ದಾದ್‌ನಲ್ಲಿ ಯುಎಸ್‌ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅಪಹರಣ

ಇರಾಕ್‌ ರಾಜಧಾನಿ ಬಗ್ದಾದ್‌ ನಗರದ ಅಲ್-ಸಾದೂನ್ ಬೀದಿಯಲ್ಲಿರುವ ಬಗ್ದಾದ್ ಹೋಟೆಲ್ ಬಳಿ ಅಮೆರಿಕದ ಪ್ರಶಸ್ತಿ ವಿಜೇತ ಸ್ವತಂತ್ರ ಪತ್ರಕರ್ತೆ ಶೆಲ್ಲಿ ಕಿಟಲ್‌ಸನ್ ಅವರನ್ನು ಮಂಗಳವಾರ (ಮಾ.31, 2026) ಅಪಹರಿಸಲಾಗಿದೆ ಎಂದು ವರದಿಯಾಗಿದೆ. ಸಿಸಿಟಿವಿ ದೃಶ್ಯಾವಳಿಗಳ ಪ್ರಕಾರ,...

ವಾಣಿಜ್ಯ ಎಲ್‌ಪಿಜಿ ದರ 195.50 ರೂ. ಏರಿಕೆ : ಜನ ಸಾಮಾನ್ಯರಿಗೆ ಗಾಯದ ಮೇಲೆ ಬರೆ

ಪಶ್ಚಿಮ ಏಷ್ಯಾ ಸಂಘರ್ಷದಿಂದಾಗಿ ಜಾಗತಿಕ ತೈಲ ಬೆಲೆಗಳು ಏರುತ್ತಿರುವ ನಡುವೆ, ವಾಣಿಜ್ಯ ಎಲ್‌ಪಿಜಿ ದರವನ್ನು ಬುಧವಾರ (ಏ.1) 195.50 ರೂ. ಹೆಚ್ಚಿಸಲಾಗಿದೆ. ಸರ್ಕಾರಿ ಸ್ವಾಮ್ಯದ ತೈಲ ಕಂಪನಿಗಳ ಪ್ರಕಾರ, ಬೆಲೆ ಏರಿಕೆ ಬಳಿಕ...

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿಯಿದೆ : ಅಖಿಲೇಶ್ ಯಾದವ್ ವ್ಯಂಗ್ಯ

ಕುಸಿಯುವುದರಲ್ಲಿ ರೂಪಾಯಿ ಮತ್ತು ಬಿಜೆಪಿ ವರ್ಚಸ್ಸಿನ ನಡುವೆ ತೀವ್ರ ಪೈಪೋಟಿ ನಡೆಯುತ್ತಿದೆ ಎಂದು ಸಮಾಜವಾದಿ ಪಕ್ಷದ ಮುಖ್ಯಸ್ಥ ಅಖಿಲೇಶ್ ಯಾದವ್ ವ್ಯಂಗ್ಯವಾಡಿದ್ದಾರೆ. ಬಿಜೆಪಿ ನಾಯಕರು ಹಾಗೂ ಅವರ ಸಹವರ್ತಿಗಳ ಭ್ರಷ್ಟಾಚಾರ ಮತ್ತು ದುರ್ನಡತೆಯ ಪ್ರಕರಣಗಳು...

ಅಂತರ್ಧರ್ಮೀಯ ‘ಲಿವ್-ಇನ್’ ಸಂಬಂಧ ಅಪರಾಧವಲ್ಲ: ಅಲಹಾಬಾದ್ ಹೈಕೋರ್ಟ್

ಅಂತರ್ಧರ್ಮೀಯ ಲಿವ್-ಇನ್ ಸಂಬಂಧವನ್ನು ನಿಷೇಧಿಸಲಾಗಿಲ್ಲ ಅಥವಾ ಯಾವುದೇ ಕಾನೂನಿನ ಅಡಿಯಲ್ಲಿ ಅಪರಾಧವಲ್ಲಎಂದು ತೀರ್ಪು ನೀಡಿರುವ ಅಲಹಾಬಾದ್ ಹೈಕೋರ್ಟ್, ಮಹಿಳೆಯ ಕುಟುಂಬದಿಂದ ಬೆದರಿಕೆ ಎದುರಿಸುತ್ತಿರುವ ದಂಪತಿಗಳಿಗೆ ರಕ್ಷಣೆ ನೀಡಿದೆ. ಸೋನ್‌ಭದ್ರಾದ ಕಾಜಲ್ ಪ್ರಜಾಪತಿ ಮತ್ತು ಅವರ...

‘ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧಗೊಳಿಸಬೇಕು’; ರಾಜ್ಯಸಭೆಯಲ್ಲಿ ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯ

ಭಾರತದಲ್ಲಿ ವೇತನ ಸಹಿತ ಪಿತೃತ್ವ ರಜೆಯನ್ನು ಕಾನೂನುಬದ್ಧ ಹಕ್ಕನ್ನಾಗಿ ಮಾಡಲು, ಹಂಚಿಕೆಯ ಆರೈಕೆ ಜವಾಬ್ದಾರಿಗಳನ್ನು ಒತ್ತಿಹೇಳಲು ಕಾನೂನನ್ನು ಜಾರಿಗೆ ತರಬೇಕೆಂದು ಎಎಪಿ ಸಂಸದ ರಾಘವ್ ಚಡ್ಡಾ ಒತ್ತಾಯಿಸಿದ್ದಾರೆ. ರಾಜ್ಯಸಭೆಯಲ್ಲಿ ಮಾತನಾಡಿದ ಅವರು, ತಂದೆ ಉದ್ಯೋಗ...

ಬಿಜೆಪಿ ಇತರ ರಾಜ್ಯಗಳ ಅಕ್ರಮ ಮತದಾರರನ್ನು ಸೇರಿಸುತ್ತಿದೆ : ಮಮತಾ ಬ್ಯಾನರ್ಜಿ ಆರೋಪ

ಪಶ್ಚಿಮ ಬಂಗಾಳ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಮಂಗಳವಾರ (ಮಾ.31) ಬಿಜೆಪಿ ಬಿಹಾರ, ರಾಜಸ್ಥಾನ, ಹರಿಯಾಣ ಮತ್ತು ಉತ್ತರ ಪ್ರದೇಶದ ಅಕ್ರಮ ಮತದಾರರನ್ನು ರಾಜ್ಯದ ಮತದಾರರ ಪಟ್ಟಿಯಲ್ಲಿ ಸೇರಿಸಲು ಪ್ರಯತ್ನಿಸುತ್ತಿದೆ ಎಂದು ಆರೋಪಿಸಿದರು. ಪಶ್ಚಿಮ...