Homeಮುಖಪುಟಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

- Advertisement -
- Advertisement -

ಭಾರತೀಯ ರೈಲ್ವೆ ದೇಶದ ಜೀವಸೆಲೆಗಳಲ್ಲಿ ಒಂದಾಗಿದೆ ಎಂದು ಹೇಳುವುದು ಅತಿಶಯೋಕ್ತಿಯಲ್ಲ. ಜನಸಂಖ್ಯೆಯ ಬಹುಪಾಲು ಜನರು ಇನ್ನೂ ತಮ್ಮ ದೈನಂದಿನ ಪ್ರಯಾಣಕ್ಕಾಗಿ ಅದರ ಮೇಲೆ ಅವಲಂಬಿತರಾಗಿದ್ದಾರೆ. ಹೆಚ್ಚಿನ ವಲಸೆ ಕಾರ್ಮಿಕರಿಗೆ ಇದು ತಮ್ಮ ಕುಟುಂಬ ಮತ್ತು ತಾವು ಕೆಲಸ ಮಾಡುವ ದೂರದ ಊರುಗಳೊಂದಿಗೆ ಸಂಪರ್ಕ ಸಾಧಿಸುವ ಏಕೈಕ ಕೈಗೆಟುಕುವ ಸಾಧನವಾಗಿದೆ.

ಇಂತಹ ಮಹತ್ವದ ರೈಲ್ವೆ ಇಲಾಖೆಯನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮತ್ತು ವ್ಯವಸ್ಥಿತವಾಗಿ ನಿರ್ಲಕ್ಷಿಸಿದೆ. ಜೊತೆಗೆ ರಹಸ್ಯವಾಗಿ ಖಾಸಗೀಕರಣಗೊಳಿಸುತ್ತಿದೆ.

ಪ್ರಯಾಣಿಕರ ರೈಲು ಸೇವೆಗಳ ಕಾರ್ಯಾಚರಣೆಗಾಗಿ ರೈಲ್ವೆ ಸಚಿವಾಲಯವು ಖಾಸಗಿ ಕಂಪನಿಗಳಿಗೆ ಆಹ್ವಾನ ನೀಡುವ ಮೂಲಕ ಖಾಸಗೀಕರಣದತ್ತ ಮೊದಲ ಹೆಜ್ಜೆ ಇಟ್ಟಿದೆ.

ಕನಿಷ್ಠ 151 ಆಧುನಿಕ ರೈಲು‌ಗಳನ್ನು ಪರಿಚಯಿಸಲಾಗುವುದು ಮತ್ತು ಖಾಸಗಿ ರೈಲು ಕಾರ್ಯಾಚರಣೆಗಾಗಿ 109 ಜೋಡಿ ಮಾರ್ಗಗಳನ್ನು ಯೋಜಿಸಲಾಗುವುದು. ಪ್ರತಿ ರೈಲಿನಲ್ಲಿ ಕನಿಷ್ಠ 16 ಬೋಗಿಗಳು ಇರಲಿವೆ ಎಂದು ಭಾರತೀಯ ರೈಲ್ವೆ ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರಯಾಣಿಕರ ರೈಲುಗಳ ಕಾರ್ಯಾಚರಣೆಯು “ಖಾಸಗಿ ವಲಯದ ಹೂಡಿಕೆಯನ್ನು ಸುಮಾರು 30,000 ಕೋಟಿ ರೂಗೆ ಹೆಚ್ಚಿಸುವ ಯೋಜನೆಯ ಭಾಗವಾಗಿದೆ” ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

“ಭಾರತೀಯ ರೈಲ್ವೆ ಜಾಲದ ಮೂಲಕ ಪ್ರಯಾಣಿಕರ ರೈಲುಗಳನ್ನು ಓಡಿಸಲು ಖಾಸಗಿ ಹೂಡಿಕೆಯ ಮೊದಲ ಕ್ರಮ ಇದಾಗಿದೆ” ಎಂದು ಅದು ಹೇಳಿದೆ.

ಭಾರತೀಯ ರೈಲ್ವೆಯ ಖಾಸಗೀಕರಣದ ಬಗ್ಗೆ ಮೋದಿ ಸರ್ಕಾರ ಕೆಲವು ಸಮಯದಿಂದ ಗಮನ ಹರಿಸುತ್ತಿದೆ. “ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ” ಸೋಗಿನಲ್ಲಿ ಖಾಸಗಿ ಕಂಪನಿಗಳಿಗೆ ಹೊರಗುತ್ತಿಗೆ, ವಾಣಿಜ್ಯ ಮತ್ತು ಆನ್-ಬೋರ್ಡ್ ಸೇವೆಗಳನ್ನು ಪ್ರಾರಂಭಿಸುವ ಮೂಲಕ ಇದು ಈಗಾಗಲೇ 2018 ರಲ್ಲಿ ಖಾಸಗೀಕರಣದ ಬಾಗಿಲುಗಳನ್ನು ತೆರೆದಿದೆ.

“ಭಾರತೀಯ ರೈಲ್ವೆ ಯಾವಾಗಲೂ ಭಾರತದ ಮತ್ತು ಭಾರತದ ಜನರ ಆಸ್ತಿಯಾಗಿ ಮುಂದುವರಿಯುತ್ತದೆ”. ಇದು ರೈಲ್ವೆ ಸಚಿವ ಪಿಯೂಷ್ ಗೋಯಲ್ 2019 ರ ನವೆಂಬರ್‌ನಲ್ಲಿ ಮೇಲ್ಮನೆಯಲ್ಲಿ ಹೇಳಿದ ಮಾತುಗಳು. ಆದರೆ ಅದಕ್ಕೆ ವಿರುದ್ಧವಾಗಿ ಸರ್ಕಾರ ಇಂದು ನಡೆದುಕೊಳ್ಳುತ್ತಿದೆ.

ಭಾರತೀಯ ರೈಲ್ವೆ: ಶ್ರೀಮಂತ ಇತಿಹಾಸ

ಭಾರತೀಯ ರೈಲ್ವೆಯು ಅತಿದೊಡ್ಡ ಸಾರ್ವಜನಿಕ ಉದ್ಯಮವಾಗಿದೆ ಮತ್ತು ದೇಶದ ಅತಿದೊಡ್ಡ ಉದ್ಯೋಗದಾತ ಸಾರ್ವಜನಿಕ ಕ್ಷೇತ್ರವಾಗಿದೆ. ಭಾರತೀಯ ರೈಲ್ವೆ ಪ್ರತಿವರ್ಷ 810 ಕೋಟಿಗೂ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತದೆ. ಇದರ 67,000 ಕಿಲೋಮೀಟರ್ ಉದ್ದದ ಮಾರ್ಗಗಳು ದೇಶದ ದೂರದ ಭಾಗಗಳನ್ನು ಪರಸ್ಪರ ಸಂಪರ್ಕಿಸುತ್ತವೆ. ಇದು ತಮ್ಮ ಹಳ್ಳಿಗಳು ಮತ್ತು ಕೆಲಸದ ನಗರಗಳ ನಡುವೆ ಕೋಟ್ಯಂತರ ಜನರಿಗೆ ಸಂಪರ್ಕ ಕಲ್ಪಿಸುವ ಏಕೈಕ ಕೈಗೆಟುಕುವ ಮಾರ್ಗವಾಗಿದೆ.

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

ಮೋದಿ ಸರ್ಕಾರ: ಹೂಡಿಕೆ ಹಿಂತೆಗೆತ

ಮೋದಿ ಸರ್ಕಾರವು ಸ್ಪಷ್ಟವಾಗಿ ಸಾರ್ವಜನಿಕ ಕ್ಷೇತ್ರಗಳಿಂದ ಹೂಡಿಕೆ ಹಿಂತೆಗೆದುಕೊಳ್ಳುತ್ತಿದೆ. ಬಿಎಸ್‌ಎನ್‌ಎಲ್ ಮತ್ತು ಒಎನ್‌ಜಿಸಿ ಸೇರಿದಂತೆ ಹಲವು ಕಂಪನಿಗಳ ವಿಚಾರದಲ್ಲಿ ಇದು ಸ್ಪಷ್ಟವಾಗಿದೆ. ಸದ್ಯದ ಕೋವಿಡ್ ಬಿಕ್ಕಟ್ಟು ಅವರ ಖಾಸಗೀಕರಣದ ಪ್ರಯತ್ನಗಳಿಗೆ ಒದಗಿದ ಸುವರ್ಣಾವಕಾಶವಾಗಿದೆ.

ಭಾರತದಲ್ಲಿ 339 ಸಾರ್ವಜನಿಕ ವಲಯದ ಉದ್ಯಮಗಳಿವೆ. ಅವುಗಳು ಖಾಸಗೀಕರಣಗೊಂಡರೆ ಉತ್ತಮ ಪ್ರದರ್ಶನ ನೀಡುತ್ತವೆ ಎಂಬ ವಾದವನ್ನು ಪ್ರತಿಬಾರಿ ಹೇಳಲಾಗುತ್ತದೆ. ಆದರೆ ಅಂತಹ ಉದಾಹರಣೆಗಳು ಕಾಣಸಿಗುವುದಿಲ್ಲ. ಇದರಿಂದ ಸರ್ಕಾರಕ್ಕೆ ಎಷ್ಟು ನಷ್ಟವಾಗುತ್ತದೆ ಎಂಬುದರ ಬಗ್ಗೆ ಚರ್ಚೆಗಳು ನಡೆಯುವುದಿಲ್ಲ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ), ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ, ಟಿಎಚ್‌ಡಿಸಿ ಲಿಮಿಟೆಡ್ ಮತ್ತು ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಶನ್ ಲಿಮಿಟೆಡ್‌ ಕಂಪನಿಗಳಲ್ಲಿನ ಸರ್ಕಾರಿ ಪಾಲನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರಸ್ತಾಪ ಮಾಡಲಾಗಿದೆ.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...