Homeಮುಖಪುಟಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

- Advertisement -
- Advertisement -

ಭಾರತೀಯ ರೈಲ್ವೆ ದೇಶದ ಜೀವಸೆಲೆಗಳಲ್ಲಿ ಒಂದಾಗಿದೆ ಎಂದು ಹೇಳುವುದು ಅತಿಶಯೋಕ್ತಿಯಲ್ಲ. ಜನಸಂಖ್ಯೆಯ ಬಹುಪಾಲು ಜನರು ಇನ್ನೂ ತಮ್ಮ ದೈನಂದಿನ ಪ್ರಯಾಣಕ್ಕಾಗಿ ಅದರ ಮೇಲೆ ಅವಲಂಬಿತರಾಗಿದ್ದಾರೆ. ಹೆಚ್ಚಿನ ವಲಸೆ ಕಾರ್ಮಿಕರಿಗೆ ಇದು ತಮ್ಮ ಕುಟುಂಬ ಮತ್ತು ತಾವು ಕೆಲಸ ಮಾಡುವ ದೂರದ ಊರುಗಳೊಂದಿಗೆ ಸಂಪರ್ಕ ಸಾಧಿಸುವ ಏಕೈಕ ಕೈಗೆಟುಕುವ ಸಾಧನವಾಗಿದೆ.

ಇಂತಹ ಮಹತ್ವದ ರೈಲ್ವೆ ಇಲಾಖೆಯನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮತ್ತು ವ್ಯವಸ್ಥಿತವಾಗಿ ನಿರ್ಲಕ್ಷಿಸಿದೆ. ಜೊತೆಗೆ ರಹಸ್ಯವಾಗಿ ಖಾಸಗೀಕರಣಗೊಳಿಸುತ್ತಿದೆ.

ಪ್ರಯಾಣಿಕರ ರೈಲು ಸೇವೆಗಳ ಕಾರ್ಯಾಚರಣೆಗಾಗಿ ರೈಲ್ವೆ ಸಚಿವಾಲಯವು ಖಾಸಗಿ ಕಂಪನಿಗಳಿಗೆ ಆಹ್ವಾನ ನೀಡುವ ಮೂಲಕ ಖಾಸಗೀಕರಣದತ್ತ ಮೊದಲ ಹೆಜ್ಜೆ ಇಟ್ಟಿದೆ.

ಕನಿಷ್ಠ 151 ಆಧುನಿಕ ರೈಲು‌ಗಳನ್ನು ಪರಿಚಯಿಸಲಾಗುವುದು ಮತ್ತು ಖಾಸಗಿ ರೈಲು ಕಾರ್ಯಾಚರಣೆಗಾಗಿ 109 ಜೋಡಿ ಮಾರ್ಗಗಳನ್ನು ಯೋಜಿಸಲಾಗುವುದು. ಪ್ರತಿ ರೈಲಿನಲ್ಲಿ ಕನಿಷ್ಠ 16 ಬೋಗಿಗಳು ಇರಲಿವೆ ಎಂದು ಭಾರತೀಯ ರೈಲ್ವೆ ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರಯಾಣಿಕರ ರೈಲುಗಳ ಕಾರ್ಯಾಚರಣೆಯು “ಖಾಸಗಿ ವಲಯದ ಹೂಡಿಕೆಯನ್ನು ಸುಮಾರು 30,000 ಕೋಟಿ ರೂಗೆ ಹೆಚ್ಚಿಸುವ ಯೋಜನೆಯ ಭಾಗವಾಗಿದೆ” ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

“ಭಾರತೀಯ ರೈಲ್ವೆ ಜಾಲದ ಮೂಲಕ ಪ್ರಯಾಣಿಕರ ರೈಲುಗಳನ್ನು ಓಡಿಸಲು ಖಾಸಗಿ ಹೂಡಿಕೆಯ ಮೊದಲ ಕ್ರಮ ಇದಾಗಿದೆ” ಎಂದು ಅದು ಹೇಳಿದೆ.

ಭಾರತೀಯ ರೈಲ್ವೆಯ ಖಾಸಗೀಕರಣದ ಬಗ್ಗೆ ಮೋದಿ ಸರ್ಕಾರ ಕೆಲವು ಸಮಯದಿಂದ ಗಮನ ಹರಿಸುತ್ತಿದೆ. “ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ” ಸೋಗಿನಲ್ಲಿ ಖಾಸಗಿ ಕಂಪನಿಗಳಿಗೆ ಹೊರಗುತ್ತಿಗೆ, ವಾಣಿಜ್ಯ ಮತ್ತು ಆನ್-ಬೋರ್ಡ್ ಸೇವೆಗಳನ್ನು ಪ್ರಾರಂಭಿಸುವ ಮೂಲಕ ಇದು ಈಗಾಗಲೇ 2018 ರಲ್ಲಿ ಖಾಸಗೀಕರಣದ ಬಾಗಿಲುಗಳನ್ನು ತೆರೆದಿದೆ.

“ಭಾರತೀಯ ರೈಲ್ವೆ ಯಾವಾಗಲೂ ಭಾರತದ ಮತ್ತು ಭಾರತದ ಜನರ ಆಸ್ತಿಯಾಗಿ ಮುಂದುವರಿಯುತ್ತದೆ”. ಇದು ರೈಲ್ವೆ ಸಚಿವ ಪಿಯೂಷ್ ಗೋಯಲ್ 2019 ರ ನವೆಂಬರ್‌ನಲ್ಲಿ ಮೇಲ್ಮನೆಯಲ್ಲಿ ಹೇಳಿದ ಮಾತುಗಳು. ಆದರೆ ಅದಕ್ಕೆ ವಿರುದ್ಧವಾಗಿ ಸರ್ಕಾರ ಇಂದು ನಡೆದುಕೊಳ್ಳುತ್ತಿದೆ.

ಭಾರತೀಯ ರೈಲ್ವೆ: ಶ್ರೀಮಂತ ಇತಿಹಾಸ

ಭಾರತೀಯ ರೈಲ್ವೆಯು ಅತಿದೊಡ್ಡ ಸಾರ್ವಜನಿಕ ಉದ್ಯಮವಾಗಿದೆ ಮತ್ತು ದೇಶದ ಅತಿದೊಡ್ಡ ಉದ್ಯೋಗದಾತ ಸಾರ್ವಜನಿಕ ಕ್ಷೇತ್ರವಾಗಿದೆ. ಭಾರತೀಯ ರೈಲ್ವೆ ಪ್ರತಿವರ್ಷ 810 ಕೋಟಿಗೂ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತದೆ. ಇದರ 67,000 ಕಿಲೋಮೀಟರ್ ಉದ್ದದ ಮಾರ್ಗಗಳು ದೇಶದ ದೂರದ ಭಾಗಗಳನ್ನು ಪರಸ್ಪರ ಸಂಪರ್ಕಿಸುತ್ತವೆ. ಇದು ತಮ್ಮ ಹಳ್ಳಿಗಳು ಮತ್ತು ಕೆಲಸದ ನಗರಗಳ ನಡುವೆ ಕೋಟ್ಯಂತರ ಜನರಿಗೆ ಸಂಪರ್ಕ ಕಲ್ಪಿಸುವ ಏಕೈಕ ಕೈಗೆಟುಕುವ ಮಾರ್ಗವಾಗಿದೆ.

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

ಮೋದಿ ಸರ್ಕಾರ: ಹೂಡಿಕೆ ಹಿಂತೆಗೆತ

ಮೋದಿ ಸರ್ಕಾರವು ಸ್ಪಷ್ಟವಾಗಿ ಸಾರ್ವಜನಿಕ ಕ್ಷೇತ್ರಗಳಿಂದ ಹೂಡಿಕೆ ಹಿಂತೆಗೆದುಕೊಳ್ಳುತ್ತಿದೆ. ಬಿಎಸ್‌ಎನ್‌ಎಲ್ ಮತ್ತು ಒಎನ್‌ಜಿಸಿ ಸೇರಿದಂತೆ ಹಲವು ಕಂಪನಿಗಳ ವಿಚಾರದಲ್ಲಿ ಇದು ಸ್ಪಷ್ಟವಾಗಿದೆ. ಸದ್ಯದ ಕೋವಿಡ್ ಬಿಕ್ಕಟ್ಟು ಅವರ ಖಾಸಗೀಕರಣದ ಪ್ರಯತ್ನಗಳಿಗೆ ಒದಗಿದ ಸುವರ್ಣಾವಕಾಶವಾಗಿದೆ.

ಭಾರತದಲ್ಲಿ 339 ಸಾರ್ವಜನಿಕ ವಲಯದ ಉದ್ಯಮಗಳಿವೆ. ಅವುಗಳು ಖಾಸಗೀಕರಣಗೊಂಡರೆ ಉತ್ತಮ ಪ್ರದರ್ಶನ ನೀಡುತ್ತವೆ ಎಂಬ ವಾದವನ್ನು ಪ್ರತಿಬಾರಿ ಹೇಳಲಾಗುತ್ತದೆ. ಆದರೆ ಅಂತಹ ಉದಾಹರಣೆಗಳು ಕಾಣಸಿಗುವುದಿಲ್ಲ. ಇದರಿಂದ ಸರ್ಕಾರಕ್ಕೆ ಎಷ್ಟು ನಷ್ಟವಾಗುತ್ತದೆ ಎಂಬುದರ ಬಗ್ಗೆ ಚರ್ಚೆಗಳು ನಡೆಯುವುದಿಲ್ಲ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ), ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ, ಟಿಎಚ್‌ಡಿಸಿ ಲಿಮಿಟೆಡ್ ಮತ್ತು ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಶನ್ ಲಿಮಿಟೆಡ್‌ ಕಂಪನಿಗಳಲ್ಲಿನ ಸರ್ಕಾರಿ ಪಾಲನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರಸ್ತಾಪ ಮಾಡಲಾಗಿದೆ.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...

ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು ಬಿಸಿಯೂಟ ಯೋಜನೆಯಿಂದ ಹೊರಕ್ಕೆ : ಸಂಸತ್ತಿಗೆ ತಿಳಿಸಿದ ಕೇಂದ್ರ

ಕಳೆದ ಐದು ವರ್ಷಗಳಲ್ಲಿ 84 ಸಾವಿರ ಸರ್ಕಾರಿ ಶಾಲೆಗಳು 'ಪ್ರಧಾನಮಂತ್ರಿ ಪೋಷಣ್ ಯೋಜನೆ'ಯಿಂದ (ಮಧ್ಯಾಹ್ನದ ಬಿಸಿಯೂಟ) ಹೊರ ಬಿದ್ದಿವೆ. 2020-21ರಲ್ಲಿ 11.19 ಲಕ್ಷ ಇದ್ದ ಶಾಲೆಗಳ ಸಂಖ್ಯೆ 2024-25ರಲ್ಲಿ 10.35ಕ್ಕೆ ಕುಸಿದಿದೆ ಎಂದು...

ಭೀಮಾ ಕೋರೆಗಾಂವ್ ಪ್ರಕರಣ: ಗೌತಮ್ ನವಲಖಾಗೆ ಜಾಮೀನಿನ ಮೇಲೆ ದೆಹಲಿಗೆ ತೆರಳಲು ಅನುಮತಿ ನೀಡಿದ ಬಾಂಬೆ ಹೈಕೋರ್ಟ್

ಭೀಮಾ ಕೋರೆಗಾಂವ್ ಯುಎಪಿಎ ಪ್ರಕರಣದಲ್ಲಿ ಜಾಮೀನಿನ ಮೇಲೆ ಹೊರಗಿರುವ ಮಾನವ ಹಕ್ಕುಗಳ ಕಾರ್ಯಕರ್ತ ಗೌತಮ್ ನವಲಖಾ ಅವರಿಗೆ ಪ್ರಕರಣದ ವಿಚಾರಣೆ ನಡೆಯುತ್ತಿರುವಾಗ ನವದೆಹಲಿಯಲ್ಲಿ ವಾಸಿಸಲು ಬಾಂಬೆ ಹೈಕೋರ್ಟ್ ಬುಧವಾರ ಅನುಮತಿ ನೀಡಿದೆ. ಆದಾಗಲೂ, ಮಾನವ...

ಕಾರವಾರ ನೌಕಾ ಪ್ರದೇಶದ ಸುತ್ತಮುತ್ತ ಆತಂಕ ಮೂಡಿಸಿದ ‘ಸೀಗಲ್‌’ ಪಕ್ಷಿ; ಚೀನಾ ನಿರ್ಮಿತ ಜಿಪಿಎಸ್ ಸಾಧನ ಪತ್ತೆ

ಉತ್ತರ ಕನ್ನಡ ಜಿಲ್ಲೆಯ ಕಾರವಾರದ ಕರಾವಳಿ ಪ್ರದೇಶದ ಬಳಿ, ಸೂಕ್ಷ್ಮ ನೌಕಾ ವಲಯದ ಬಳಿ ಚೀನಾ ನಿರ್ಮಿತ ಜಿಪಿಎಸ್ ಟ್ರ್ಯಾಕಿಂಗ್ ಸಾಧನವೊಂದು 'ಸೀಗಲ್' (ಸಮುದ್ರಹಕ್ಕಿ) ಪಕ್ಷಿಗೆ ಅಳವಡಿಸಿರುವುದು ಕಂಡುಬಂದ ನಂತರ ಭದ್ರತಾ ಸಂಸ್ಥೆಗಳು...

ಅಣು ಶಕ್ತಿಯ ಖಾಸಗೀಕರಣ : ‘ಶಾಂತಿ’ ಮಸೂದೆಗೆ ಲೋಕಸಭೆ ಅಸ್ತು

ಭಾರತದ ಅಣು ವಿದ್ಯುತ್ ಕ್ಷೇತ್ರದಲ್ಲಿ ಖಾಸಗಿ ವಲಯದ ಪ್ರವೇಶಕ್ಕೆ ದಾರಿ ಮಾಡಿಕೊಡುವ, 'ಭಾರತದ ಪ್ರಗತಿಗಾಗಿ ಅಣು ಶಕ್ತಿಯ ಸುಸ್ಥಿರ ಉತ್ಪಾದನೆ (ಎಸ್‌ಎಚ್‌ಎಎನ್‌ಟಿಐ– ಶಾಂತಿ ಮಸೂದೆ) ಮಸೂದೆಯನ್ನು ಲೋಕಸಭೆ ಬುಧವಾರ (ಡಿ.17) ಅಂಗೀಕರಿಸಿತು. ವಿಪಕ್ಷಗಳ ಸದಸ್ಯರು...

ಮಾದಕ ದ್ರವ್ಯ ಸೇವನೆ, ಲೈಂಗಿಕ ಕಿರುಕುಳಕ್ಕೆ 3 ಲಕ್ಷ ರೂ. ದಂಡ ವಸೂಲಿ: ಬೆಂಗಳೂರಿನ ಅಪಾರ್ಟ್‌ಮೆಂಟ್ ಅಸೋಸಿಯೇಷನ್ ​​ವಿರುದ್ಧ ಪ್ರಕರಣ ದಾಖಲು

ಬೆಂಗಳೂರು: ಪಶ್ಚಿಮ ಬೆಂಗಳೂರಿನ ದೊಡ್ಡಬೆಲೆ ಬಳಿಯ ವಸತಿ ಸಂಕೀರ್ಣವೊಂದರ ಅಪಾರ್ಟ್‌ಮೆಂಟ್ ಮಾಲೀಕರ ಸಂಘದ ವಿರುದ್ಧ ಅಪರಾಧ ಚಟುವಟಿಕೆಗಳಲ್ಲಿ ತೊಡಗಿರುವ ನಿವಾಸಿಗಳಿಂದ ದಂಡ ವಸೂಲಿ ಮಾಡಿದ ಮತ್ತು ಅಪರಾಧಗಳನ್ನು ಮುಚ್ಚಿಟ್ಟ ಆರೋಪದ ಮೇಲೆ ಕುಂಬಳಗೋಡು...

2020ರ ದೆಹಲಿ ಗಲಭೆ ಪ್ರಕರಣ: ಐವರು ಆರೋಪಿಗಳನ್ನು ಖುಲಾಸೆಗೊಳಿಸಿದ ನ್ಯಾಯಾಲಯ

2020 ರ ದೆಹಲಿ ಗಲಭೆಗೆ ಸಂಬಂಧಿಸಿದಂತೆ ಬೆಂಕಿ ಹಚ್ಚುವಿಕೆ, ಗಲಭೆ ಮತ್ತು ವಿಧ್ವಂಸಕ ಕೃತ್ಯದ ಆರೋಪ ಹೊತ್ತಿರುವ ಐವರನ್ನು ನ್ಯಾಯಾಲಯ ಖುಲಾಸೆಗೊಳಿಸಿದೆ. ಅಬ್ದುಲ್ ಸತ್ತಾರ್, ಮುಹಮ್ಮದ್ ಖಾಲಿದ್, ಹುನೈನ್, ತನ್ವೀರ್ ಮತ್ತು ಆರಿಫ್ ವಿರುದ್ಧದ...

ಕಾರ್‌ ಚಲಾಯಿಸುವಾಗ ಫೋನ್‌ನಲ್ಲಿ ಮಾತನಾಡದಂತೆ ಹೇಳಿದ್ದಕ್ಕೆ ಪತ್ರಕರ್ತನ ಮೇಲೆ ರಾಡ್‌ನಿಂದ ಹಲ್ಲೆ

ಆ್ಯಪ್ ಆಧಾರಿತ ಟ್ಯಾಕ್ಸಿ ಬುಕಿಂಗ್‌ ಮಾಡುವ ಪ್ರಯಾಣಿಕರ ಸುರಕ್ಷತೆ ಮತ್ತು ಚಾಲಕರ ನಡವಳಿಕೆಯ ಕುರಿತ ಕಳವಳವಳಕಾರಿ ಘಟನೆಯೊಂದು ಹರಿಯಾಣದ ಫರಿದಾಬಾದ್‌ನಲ್ಲಿ ಬೆಳಕಿಗೆ ಬಂದಿದೆ. ರ್ಯಾಪಿಡೋ ಟ್ಯಾಕ್ಸಿ ಚಾಲಕನೊಬ್ಬ ಪ್ರಯಾಣಿಕನ ಮೇಲೆ ಕಬ್ಬಿಣದ ರಾಡ್‌ನಿಂದ...

ರಾಜಸ್ಥಾನ| ಎಥೆನಾಲ್ ಸ್ಥಾವರದ ವಿರುದ್ಧ ಪ್ರತಿಭಟನೆ: 40 ಜನರ ಬಂಧನ

ರಾಜಸ್ಥಾನದ ಹನುಮಾನ್‌ಗಢ ಜಿಲ್ಲೆಯ ರೈತರು, ಪ್ರಸ್ತಾವಿತ ಎಥೆನಾಲ್ ಕಾರ್ಖಾನೆಯ ವಿರುದ್ಧ ಎರಡನೇ ದಿನವೂ ಪ್ರತಿಭಟನೆ ಮುಂದುವರೆಸಿದ್ದಾರೆ, ಈ ಪ್ರದೇಶದಲ್ಲಿ ಹೆಚ್ಚಿನ ಭದ್ರತೆ ಮತ್ತು ಇಂಟರ್ನೆಟ್ ಸೇವೆಗಳನ್ನು ಸ್ಥಗಿತಗೊಳಿಸಲಾಗಿದೆ. ಗುರುವಾರ ಮುಂಜಾನೆ ಟಿಬ್ಬಿ ಬಳಿಯ ಗುರುದ್ವಾರದಲ್ಲಿ...

ವಿಧಾನಸಭೆಯಲ್ಲಿ ‘ಗೃಹಲಕ್ಷ್ಮಿ’ ಗದ್ದಲ : ಬಿಜೆಪಿ ಸದಸ್ಯರಿಂದ ಸಭಾತ್ಯಾಗ, ಕ್ಷಮೆ ಕೋರಿದ ಸಚಿವೆ ಲಕ್ಷ್ಮಿ ಹೆಬ್ಬಾಳ್ಕರ್

ಗೃಹಲಕ್ಷಿ ಯೋಜನೆಯ ಹಣ ಬಿಡುಗಡೆ ಸಂಬಂಧ ಸಚಿವರು ಸದನಕ್ಕೆ ತಪ್ಪು ಮಾಹಿತಿ ನೀಡಿದ್ದಾರೆ ಎಂಬ ವಿಚಾರ ಇಂದು (ಡಿ.17 ಬುಧವಾರ) ವಿಧಾನಸಭೆಯಲ್ಲಿ ದೊಡ್ಡ ಮಟ್ಟದ ವಾಗ್ವಾದ, ಆರೋಪ-ಪ್ರತ್ಯಾರೋಪ, ಗದ್ದಲ, ಪ್ರತಿಭಟನೆ, ಸಭಾತ್ಯಾಗ ಮತ್ತು...