Homeಮುಖಪುಟಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

- Advertisement -
- Advertisement -

ಭಾರತೀಯ ರೈಲ್ವೆ ದೇಶದ ಜೀವಸೆಲೆಗಳಲ್ಲಿ ಒಂದಾಗಿದೆ ಎಂದು ಹೇಳುವುದು ಅತಿಶಯೋಕ್ತಿಯಲ್ಲ. ಜನಸಂಖ್ಯೆಯ ಬಹುಪಾಲು ಜನರು ಇನ್ನೂ ತಮ್ಮ ದೈನಂದಿನ ಪ್ರಯಾಣಕ್ಕಾಗಿ ಅದರ ಮೇಲೆ ಅವಲಂಬಿತರಾಗಿದ್ದಾರೆ. ಹೆಚ್ಚಿನ ವಲಸೆ ಕಾರ್ಮಿಕರಿಗೆ ಇದು ತಮ್ಮ ಕುಟುಂಬ ಮತ್ತು ತಾವು ಕೆಲಸ ಮಾಡುವ ದೂರದ ಊರುಗಳೊಂದಿಗೆ ಸಂಪರ್ಕ ಸಾಧಿಸುವ ಏಕೈಕ ಕೈಗೆಟುಕುವ ಸಾಧನವಾಗಿದೆ.

ಇಂತಹ ಮಹತ್ವದ ರೈಲ್ವೆ ಇಲಾಖೆಯನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮತ್ತು ವ್ಯವಸ್ಥಿತವಾಗಿ ನಿರ್ಲಕ್ಷಿಸಿದೆ. ಜೊತೆಗೆ ರಹಸ್ಯವಾಗಿ ಖಾಸಗೀಕರಣಗೊಳಿಸುತ್ತಿದೆ.

ಪ್ರಯಾಣಿಕರ ರೈಲು ಸೇವೆಗಳ ಕಾರ್ಯಾಚರಣೆಗಾಗಿ ರೈಲ್ವೆ ಸಚಿವಾಲಯವು ಖಾಸಗಿ ಕಂಪನಿಗಳಿಗೆ ಆಹ್ವಾನ ನೀಡುವ ಮೂಲಕ ಖಾಸಗೀಕರಣದತ್ತ ಮೊದಲ ಹೆಜ್ಜೆ ಇಟ್ಟಿದೆ.

ಕನಿಷ್ಠ 151 ಆಧುನಿಕ ರೈಲು‌ಗಳನ್ನು ಪರಿಚಯಿಸಲಾಗುವುದು ಮತ್ತು ಖಾಸಗಿ ರೈಲು ಕಾರ್ಯಾಚರಣೆಗಾಗಿ 109 ಜೋಡಿ ಮಾರ್ಗಗಳನ್ನು ಯೋಜಿಸಲಾಗುವುದು. ಪ್ರತಿ ರೈಲಿನಲ್ಲಿ ಕನಿಷ್ಠ 16 ಬೋಗಿಗಳು ಇರಲಿವೆ ಎಂದು ಭಾರತೀಯ ರೈಲ್ವೆ ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರಯಾಣಿಕರ ರೈಲುಗಳ ಕಾರ್ಯಾಚರಣೆಯು “ಖಾಸಗಿ ವಲಯದ ಹೂಡಿಕೆಯನ್ನು ಸುಮಾರು 30,000 ಕೋಟಿ ರೂಗೆ ಹೆಚ್ಚಿಸುವ ಯೋಜನೆಯ ಭಾಗವಾಗಿದೆ” ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

“ಭಾರತೀಯ ರೈಲ್ವೆ ಜಾಲದ ಮೂಲಕ ಪ್ರಯಾಣಿಕರ ರೈಲುಗಳನ್ನು ಓಡಿಸಲು ಖಾಸಗಿ ಹೂಡಿಕೆಯ ಮೊದಲ ಕ್ರಮ ಇದಾಗಿದೆ” ಎಂದು ಅದು ಹೇಳಿದೆ.

ಭಾರತೀಯ ರೈಲ್ವೆಯ ಖಾಸಗೀಕರಣದ ಬಗ್ಗೆ ಮೋದಿ ಸರ್ಕಾರ ಕೆಲವು ಸಮಯದಿಂದ ಗಮನ ಹರಿಸುತ್ತಿದೆ. “ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ” ಸೋಗಿನಲ್ಲಿ ಖಾಸಗಿ ಕಂಪನಿಗಳಿಗೆ ಹೊರಗುತ್ತಿಗೆ, ವಾಣಿಜ್ಯ ಮತ್ತು ಆನ್-ಬೋರ್ಡ್ ಸೇವೆಗಳನ್ನು ಪ್ರಾರಂಭಿಸುವ ಮೂಲಕ ಇದು ಈಗಾಗಲೇ 2018 ರಲ್ಲಿ ಖಾಸಗೀಕರಣದ ಬಾಗಿಲುಗಳನ್ನು ತೆರೆದಿದೆ.

“ಭಾರತೀಯ ರೈಲ್ವೆ ಯಾವಾಗಲೂ ಭಾರತದ ಮತ್ತು ಭಾರತದ ಜನರ ಆಸ್ತಿಯಾಗಿ ಮುಂದುವರಿಯುತ್ತದೆ”. ಇದು ರೈಲ್ವೆ ಸಚಿವ ಪಿಯೂಷ್ ಗೋಯಲ್ 2019 ರ ನವೆಂಬರ್‌ನಲ್ಲಿ ಮೇಲ್ಮನೆಯಲ್ಲಿ ಹೇಳಿದ ಮಾತುಗಳು. ಆದರೆ ಅದಕ್ಕೆ ವಿರುದ್ಧವಾಗಿ ಸರ್ಕಾರ ಇಂದು ನಡೆದುಕೊಳ್ಳುತ್ತಿದೆ.

ಭಾರತೀಯ ರೈಲ್ವೆ: ಶ್ರೀಮಂತ ಇತಿಹಾಸ

ಭಾರತೀಯ ರೈಲ್ವೆಯು ಅತಿದೊಡ್ಡ ಸಾರ್ವಜನಿಕ ಉದ್ಯಮವಾಗಿದೆ ಮತ್ತು ದೇಶದ ಅತಿದೊಡ್ಡ ಉದ್ಯೋಗದಾತ ಸಾರ್ವಜನಿಕ ಕ್ಷೇತ್ರವಾಗಿದೆ. ಭಾರತೀಯ ರೈಲ್ವೆ ಪ್ರತಿವರ್ಷ 810 ಕೋಟಿಗೂ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತದೆ. ಇದರ 67,000 ಕಿಲೋಮೀಟರ್ ಉದ್ದದ ಮಾರ್ಗಗಳು ದೇಶದ ದೂರದ ಭಾಗಗಳನ್ನು ಪರಸ್ಪರ ಸಂಪರ್ಕಿಸುತ್ತವೆ. ಇದು ತಮ್ಮ ಹಳ್ಳಿಗಳು ಮತ್ತು ಕೆಲಸದ ನಗರಗಳ ನಡುವೆ ಕೋಟ್ಯಂತರ ಜನರಿಗೆ ಸಂಪರ್ಕ ಕಲ್ಪಿಸುವ ಏಕೈಕ ಕೈಗೆಟುಕುವ ಮಾರ್ಗವಾಗಿದೆ.

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

ಮೋದಿ ಸರ್ಕಾರ: ಹೂಡಿಕೆ ಹಿಂತೆಗೆತ

ಮೋದಿ ಸರ್ಕಾರವು ಸ್ಪಷ್ಟವಾಗಿ ಸಾರ್ವಜನಿಕ ಕ್ಷೇತ್ರಗಳಿಂದ ಹೂಡಿಕೆ ಹಿಂತೆಗೆದುಕೊಳ್ಳುತ್ತಿದೆ. ಬಿಎಸ್‌ಎನ್‌ಎಲ್ ಮತ್ತು ಒಎನ್‌ಜಿಸಿ ಸೇರಿದಂತೆ ಹಲವು ಕಂಪನಿಗಳ ವಿಚಾರದಲ್ಲಿ ಇದು ಸ್ಪಷ್ಟವಾಗಿದೆ. ಸದ್ಯದ ಕೋವಿಡ್ ಬಿಕ್ಕಟ್ಟು ಅವರ ಖಾಸಗೀಕರಣದ ಪ್ರಯತ್ನಗಳಿಗೆ ಒದಗಿದ ಸುವರ್ಣಾವಕಾಶವಾಗಿದೆ.

ಭಾರತದಲ್ಲಿ 339 ಸಾರ್ವಜನಿಕ ವಲಯದ ಉದ್ಯಮಗಳಿವೆ. ಅವುಗಳು ಖಾಸಗೀಕರಣಗೊಂಡರೆ ಉತ್ತಮ ಪ್ರದರ್ಶನ ನೀಡುತ್ತವೆ ಎಂಬ ವಾದವನ್ನು ಪ್ರತಿಬಾರಿ ಹೇಳಲಾಗುತ್ತದೆ. ಆದರೆ ಅಂತಹ ಉದಾಹರಣೆಗಳು ಕಾಣಸಿಗುವುದಿಲ್ಲ. ಇದರಿಂದ ಸರ್ಕಾರಕ್ಕೆ ಎಷ್ಟು ನಷ್ಟವಾಗುತ್ತದೆ ಎಂಬುದರ ಬಗ್ಗೆ ಚರ್ಚೆಗಳು ನಡೆಯುವುದಿಲ್ಲ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ), ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ, ಟಿಎಚ್‌ಡಿಸಿ ಲಿಮಿಟೆಡ್ ಮತ್ತು ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಶನ್ ಲಿಮಿಟೆಡ್‌ ಕಂಪನಿಗಳಲ್ಲಿನ ಸರ್ಕಾರಿ ಪಾಲನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರಸ್ತಾಪ ಮಾಡಲಾಗಿದೆ.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...