Homeಮುಖಪುಟಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

- Advertisement -
- Advertisement -

ಭಾರತೀಯ ರೈಲ್ವೆ ದೇಶದ ಜೀವಸೆಲೆಗಳಲ್ಲಿ ಒಂದಾಗಿದೆ ಎಂದು ಹೇಳುವುದು ಅತಿಶಯೋಕ್ತಿಯಲ್ಲ. ಜನಸಂಖ್ಯೆಯ ಬಹುಪಾಲು ಜನರು ಇನ್ನೂ ತಮ್ಮ ದೈನಂದಿನ ಪ್ರಯಾಣಕ್ಕಾಗಿ ಅದರ ಮೇಲೆ ಅವಲಂಬಿತರಾಗಿದ್ದಾರೆ. ಹೆಚ್ಚಿನ ವಲಸೆ ಕಾರ್ಮಿಕರಿಗೆ ಇದು ತಮ್ಮ ಕುಟುಂಬ ಮತ್ತು ತಾವು ಕೆಲಸ ಮಾಡುವ ದೂರದ ಊರುಗಳೊಂದಿಗೆ ಸಂಪರ್ಕ ಸಾಧಿಸುವ ಏಕೈಕ ಕೈಗೆಟುಕುವ ಸಾಧನವಾಗಿದೆ.

ಇಂತಹ ಮಹತ್ವದ ರೈಲ್ವೆ ಇಲಾಖೆಯನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮತ್ತು ವ್ಯವಸ್ಥಿತವಾಗಿ ನಿರ್ಲಕ್ಷಿಸಿದೆ. ಜೊತೆಗೆ ರಹಸ್ಯವಾಗಿ ಖಾಸಗೀಕರಣಗೊಳಿಸುತ್ತಿದೆ.

ಪ್ರಯಾಣಿಕರ ರೈಲು ಸೇವೆಗಳ ಕಾರ್ಯಾಚರಣೆಗಾಗಿ ರೈಲ್ವೆ ಸಚಿವಾಲಯವು ಖಾಸಗಿ ಕಂಪನಿಗಳಿಗೆ ಆಹ್ವಾನ ನೀಡುವ ಮೂಲಕ ಖಾಸಗೀಕರಣದತ್ತ ಮೊದಲ ಹೆಜ್ಜೆ ಇಟ್ಟಿದೆ.

ಕನಿಷ್ಠ 151 ಆಧುನಿಕ ರೈಲು‌ಗಳನ್ನು ಪರಿಚಯಿಸಲಾಗುವುದು ಮತ್ತು ಖಾಸಗಿ ರೈಲು ಕಾರ್ಯಾಚರಣೆಗಾಗಿ 109 ಜೋಡಿ ಮಾರ್ಗಗಳನ್ನು ಯೋಜಿಸಲಾಗುವುದು. ಪ್ರತಿ ರೈಲಿನಲ್ಲಿ ಕನಿಷ್ಠ 16 ಬೋಗಿಗಳು ಇರಲಿವೆ ಎಂದು ಭಾರತೀಯ ರೈಲ್ವೆ ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರಯಾಣಿಕರ ರೈಲುಗಳ ಕಾರ್ಯಾಚರಣೆಯು “ಖಾಸಗಿ ವಲಯದ ಹೂಡಿಕೆಯನ್ನು ಸುಮಾರು 30,000 ಕೋಟಿ ರೂಗೆ ಹೆಚ್ಚಿಸುವ ಯೋಜನೆಯ ಭಾಗವಾಗಿದೆ” ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

“ಭಾರತೀಯ ರೈಲ್ವೆ ಜಾಲದ ಮೂಲಕ ಪ್ರಯಾಣಿಕರ ರೈಲುಗಳನ್ನು ಓಡಿಸಲು ಖಾಸಗಿ ಹೂಡಿಕೆಯ ಮೊದಲ ಕ್ರಮ ಇದಾಗಿದೆ” ಎಂದು ಅದು ಹೇಳಿದೆ.

ಭಾರತೀಯ ರೈಲ್ವೆಯ ಖಾಸಗೀಕರಣದ ಬಗ್ಗೆ ಮೋದಿ ಸರ್ಕಾರ ಕೆಲವು ಸಮಯದಿಂದ ಗಮನ ಹರಿಸುತ್ತಿದೆ. “ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ” ಸೋಗಿನಲ್ಲಿ ಖಾಸಗಿ ಕಂಪನಿಗಳಿಗೆ ಹೊರಗುತ್ತಿಗೆ, ವಾಣಿಜ್ಯ ಮತ್ತು ಆನ್-ಬೋರ್ಡ್ ಸೇವೆಗಳನ್ನು ಪ್ರಾರಂಭಿಸುವ ಮೂಲಕ ಇದು ಈಗಾಗಲೇ 2018 ರಲ್ಲಿ ಖಾಸಗೀಕರಣದ ಬಾಗಿಲುಗಳನ್ನು ತೆರೆದಿದೆ.

“ಭಾರತೀಯ ರೈಲ್ವೆ ಯಾವಾಗಲೂ ಭಾರತದ ಮತ್ತು ಭಾರತದ ಜನರ ಆಸ್ತಿಯಾಗಿ ಮುಂದುವರಿಯುತ್ತದೆ”. ಇದು ರೈಲ್ವೆ ಸಚಿವ ಪಿಯೂಷ್ ಗೋಯಲ್ 2019 ರ ನವೆಂಬರ್‌ನಲ್ಲಿ ಮೇಲ್ಮನೆಯಲ್ಲಿ ಹೇಳಿದ ಮಾತುಗಳು. ಆದರೆ ಅದಕ್ಕೆ ವಿರುದ್ಧವಾಗಿ ಸರ್ಕಾರ ಇಂದು ನಡೆದುಕೊಳ್ಳುತ್ತಿದೆ.

ಭಾರತೀಯ ರೈಲ್ವೆ: ಶ್ರೀಮಂತ ಇತಿಹಾಸ

ಭಾರತೀಯ ರೈಲ್ವೆಯು ಅತಿದೊಡ್ಡ ಸಾರ್ವಜನಿಕ ಉದ್ಯಮವಾಗಿದೆ ಮತ್ತು ದೇಶದ ಅತಿದೊಡ್ಡ ಉದ್ಯೋಗದಾತ ಸಾರ್ವಜನಿಕ ಕ್ಷೇತ್ರವಾಗಿದೆ. ಭಾರತೀಯ ರೈಲ್ವೆ ಪ್ರತಿವರ್ಷ 810 ಕೋಟಿಗೂ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತದೆ. ಇದರ 67,000 ಕಿಲೋಮೀಟರ್ ಉದ್ದದ ಮಾರ್ಗಗಳು ದೇಶದ ದೂರದ ಭಾಗಗಳನ್ನು ಪರಸ್ಪರ ಸಂಪರ್ಕಿಸುತ್ತವೆ. ಇದು ತಮ್ಮ ಹಳ್ಳಿಗಳು ಮತ್ತು ಕೆಲಸದ ನಗರಗಳ ನಡುವೆ ಕೋಟ್ಯಂತರ ಜನರಿಗೆ ಸಂಪರ್ಕ ಕಲ್ಪಿಸುವ ಏಕೈಕ ಕೈಗೆಟುಕುವ ಮಾರ್ಗವಾಗಿದೆ.

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

ಮೋದಿ ಸರ್ಕಾರ: ಹೂಡಿಕೆ ಹಿಂತೆಗೆತ

ಮೋದಿ ಸರ್ಕಾರವು ಸ್ಪಷ್ಟವಾಗಿ ಸಾರ್ವಜನಿಕ ಕ್ಷೇತ್ರಗಳಿಂದ ಹೂಡಿಕೆ ಹಿಂತೆಗೆದುಕೊಳ್ಳುತ್ತಿದೆ. ಬಿಎಸ್‌ಎನ್‌ಎಲ್ ಮತ್ತು ಒಎನ್‌ಜಿಸಿ ಸೇರಿದಂತೆ ಹಲವು ಕಂಪನಿಗಳ ವಿಚಾರದಲ್ಲಿ ಇದು ಸ್ಪಷ್ಟವಾಗಿದೆ. ಸದ್ಯದ ಕೋವಿಡ್ ಬಿಕ್ಕಟ್ಟು ಅವರ ಖಾಸಗೀಕರಣದ ಪ್ರಯತ್ನಗಳಿಗೆ ಒದಗಿದ ಸುವರ್ಣಾವಕಾಶವಾಗಿದೆ.

ಭಾರತದಲ್ಲಿ 339 ಸಾರ್ವಜನಿಕ ವಲಯದ ಉದ್ಯಮಗಳಿವೆ. ಅವುಗಳು ಖಾಸಗೀಕರಣಗೊಂಡರೆ ಉತ್ತಮ ಪ್ರದರ್ಶನ ನೀಡುತ್ತವೆ ಎಂಬ ವಾದವನ್ನು ಪ್ರತಿಬಾರಿ ಹೇಳಲಾಗುತ್ತದೆ. ಆದರೆ ಅಂತಹ ಉದಾಹರಣೆಗಳು ಕಾಣಸಿಗುವುದಿಲ್ಲ. ಇದರಿಂದ ಸರ್ಕಾರಕ್ಕೆ ಎಷ್ಟು ನಷ್ಟವಾಗುತ್ತದೆ ಎಂಬುದರ ಬಗ್ಗೆ ಚರ್ಚೆಗಳು ನಡೆಯುವುದಿಲ್ಲ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ), ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ, ಟಿಎಚ್‌ಡಿಸಿ ಲಿಮಿಟೆಡ್ ಮತ್ತು ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಶನ್ ಲಿಮಿಟೆಡ್‌ ಕಂಪನಿಗಳಲ್ಲಿನ ಸರ್ಕಾರಿ ಪಾಲನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರಸ್ತಾಪ ಮಾಡಲಾಗಿದೆ.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...

ಕಾಂಗ್ರೆಸ್‌ಗೆ ಕಗ್ಗಂಟಾದ ಕೇರಳ ಸಿಎಂ ಆಯ್ಕೆ : ಮೂವರು ಪ್ರಭಾವಿಗಳಲ್ಲಿ ಹೈಕಮಾಂಡ್ ಒಲವು ಯಾರ ಪರ?

ಕೇರಳ ವಿಧಾನಸಭಾ ಚುನಾವಣೆಯಲ್ಲಿ ಭರ್ಜರಿ ಜಯ ಗಳಿಸಿರುವ ಕಾಂಗ್ರೆಸ್ ನೇತೃತ್ವದ ಯುನೈಟೆಡ್ ಡೆಮಾಕ್ರಟಿಕ್ ಫ್ರಂಟ್ (ಯುಡಿಎಫ್)ಗೆ ಮುಖ್ಯಮಂತ್ರಿ ಆಯ್ಕೆ ಕಗ್ಗಂಟಾಗಿದೆ. ಯುಡಿಎಫ್‌ ಮೈತ್ರಿಕೂಟ ಗೆದ್ದಿರುವ ಒಟ್ಟು 102 ಸ್ಥಾನಗಳ ಪೈಕಿ 63 ಸ್ಥಾನಗಳನ್ನು...

ಏಪ್ರಿಲ್‌ನಲ್ಲಿ ಗಾಜಾ ಮತ್ತು ಪಶ್ಚಿಮ ದಂಡೆಯಾದ್ಯಂತ ಇಸ್ರೇಲಿ ಪಡೆಗಳಿಂದ 122 ಪ್ಯಾಲೆಸ್ಟೀನಿಯನ್ನರ ಹತ್ಯೆ: ವಿಶ್ವಸಂಸ್ಥೆಯ ಹಕ್ಕುಗಳ ಕಚೇರಿ

ಏಪ್ರಿಲ್‌ನಲ್ಲಿ ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶಗಳಲ್ಲಿ ಇಸ್ರೇಲಿ ಪಡೆಗಳು ಮತ್ತು ವಸಾಹತುಗಾರರು 22 ಮಕ್ಕಳು ಮತ್ತು ಎಂಟು ಮಹಿಳೆಯರು ಸೇರಿದಂತೆ ಕನಿಷ್ಠ 122 ಪ್ಯಾಲೆಸ್ಟೀನಿಯನ್ನರನ್ನು ಕೊಂದಿದ್ದಾರೆ ಎಂದು ಆಕ್ರಮಿತ ಪ್ಯಾಲೆಸ್ಟೀನಿಯನ್ ಪ್ರದೇಶದಲ್ಲಿನ ವಿಶ್ವಸಂಸ್ಥೆಯ ಮಾನವ...

2026ರ ತಮಿಳುನಾಡು ವಿಧಾನಸಭಾ ಚುನಾವಣೆಯ ಫಲಿತಾಂಶ: ರಾಜಕೀಯ ಸ್ಥಿತ್ಯಂತರಗಳ ಅವಲೋಕನ

"2026ರ ತಮಿಳುನಾಡು ವಿಧಾನಸಭಾ ಚುನಾವಣೆಯು ರಾಜ್ಯದ ರಾಜಕೀಯ ಇತಿಹಾಸದ ಹಾದಿಯನ್ನೇ ಬದಲಿಸಿದೆ. ಟಿವಿಕೆ ಪಕ್ಷದ ನಾಯಕ ಜೋಸೆಫ್ ವಿಜಯ್ ರಾಜ್ಯದ ನೂತನ ಮುಖ್ಯಮಂತ್ರಿಯಾಗಿ ಪದಗ್ರಹಣ ಮಾಡುವ ಮೂಲಕ ದಶಕಗಳ ಕಾಲ ನಡೆದಿದ್ದ ಡಿಎಂಕೆ-ಎಐಎಡಿಎಂಕೆ...

ಬಂಗಾಳದಲ್ಲಿ ‘ಅಧಿಕಾರಿ’ ಆಡಳಿತ: ಜಾತ್ಯತೀತ ಮುಖವಾಡ ಕಳಚಿ ಹಿಂದುತ್ವದ ಅಸ್ತ್ರ ಹಿಡಿದು ಗದ್ದುಗೆ ಏರಿದ ಸುವೇಂದು! 

ಕೋಲ್ಕತ್ತಾ/ನವದೆಹಲಿ: ಪಶ್ಚಿಮ ಬಂಗಾಳದ ಮುಖ್ಯಮಂತ್ರಿ ಗಾದಿಗೆ ಸುವೇಂದು ಅಧಿಕಾರಿ ಅವರ ಪದಾರ್ಪಣೆಯು, ಹಳೆಯ ಭ್ರಷ್ಟ ವ್ಯವಸ್ಥೆಯನ್ನು ಗುಡಿಸಿ ಹಾಕಲು ಬಂದ 'ಹೊರಗಿನ' ವ್ಯಕ್ತಿಯ ಕಥೆಯಲ್ಲ. ಬದಲಿಗೆ, ಬಂಗಾಳದ ಹಿಂಸಾತ್ಮಕ, ಬಣ ರಾಜಕೀಯ ಮತ್ತು...

ಬಂಗಾಳ ಚುನಾವಣೆ : SIRನಲ್ಲಿ ಅತಿ ಹೆಚ್ಚು ಹೆಸರು ಅಳಿಸಿದ ಕ್ಷೇತ್ರಗಳು ಬಿಜೆಪಿ ಪಾಲು

ಪಶ್ಚಿಮ ಬಂಗಾಳದ ವಿಧಾನಸಭೆ ಚುನಾವಣೆಯಲ್ಲಿ ಭರ್ಜರಿ ಗೆಲುವು ಸಾಧಿಸಿರುವ ಬಿಜೆಪಿ, ಸರ್ಕಾರ ರಚಿಸಲು ಅಣಿಯಾಗಿದೆ. ಈ ನಡುವೆ ಹಲವು ಪ್ರಶ್ನೆಗಳು, ಗೊಂದಲಗಳು ಹಾಗೆಯೇ ಮುಂದುವರಿದಿದೆ. ಚುನಾವಣೆ ಘೋಷಣೆಗೆ ಮುನ್ನವೇ ಬಂಗಾಳದ ಮತದಾರರ ಪಟ್ಟಿಯ ವಿಶೇಷ...

ತಮಿಳುನಾಡು ರಾಜ್ಯಪಾಲರ ನಡೆ ಎಷ್ಟು ಸಮಂಜಸ?

'ಮಳೆ ನಿಂತರೂ ಮರದ ಹನಿ ನಿಲ್ಲಲ್ಲ' ಎಂಬ ಮಾತಿಗೆ ಅನ್ವರ್ಥದಂತೆ ಚುನಾವಣೆ ಮುಗಿದರೂ ಸರ್ಕಾರ ರಚನೆಯ ಸರ್ಕಸ್ ಮಾತ್ರ ನಿಲ್ಲುವ ಸೂಚನೆ ಕಾಣುತ್ತಿಲ್ಲ. ತಮಿಳುನಾಡಿನ ರಾಜಕೀಯ ವಿದ್ಯಮಾನಗಳನ್ನು ನೋಡುತ್ತಿದ್ದರೆ ಅಲ್ಲಿ ನಡೆಯುತ್ತಿರವ ಬೆಳವಣಿಗೆಗಳು...

ಬಿಜೆಪಿಯಿಂದ ಯಡಿಯೂರಪ್ಪ ಅಭಿಮಾನೋತ್ಸವ: ಲಿಂಗಾಯತ ಮತಕ್ಕಾಗಿ ಮಾಸ್ಟರ್ ಫ್ಲಾನ್…?  

ದಕ್ಷಿಣ ಭಾರತದ ರಾಜಕಾರಣದಲ್ಲಿ ಬಿಜೆಪಿ ಎನ್ನುವುದು ಒಂದು ಕಾಲಕ್ಕೆ ಕೇವಲ ನಗರ ಪ್ರದೇಶಗಳಿಗೆ ಸೀಮಿತವಾಗಿದ್ದ ಪಕ್ಷ. ಆದರೆ, ಅದೇ ಬಿಜೆಪಿಯನ್ನು ಕರ್ನಾಟಕದಲ್ಲಿ ಬೇರೂರುವಂತೆ ಮಾಡಿದ್ದು ಬೂಕನಕೆರೆ ಸಿದ್ದಲಿಂಗಪ್ಪ ಯಡಿಯೂರಪ್ಪ ಅಂದರೆ ಬಿ.ಎಸ್. ಯಡಿಯೂರಪ್ಪ....