Homeಮುಖಪುಟಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಮೋದಿ ಸರ್ಕಾರದ ಮುಂದಿನ ಸರ್ಜಿಕಲ್ ಸ್ಟ್ರೈಕ್: ಭಾರತೀಯ ರೈಲ್ವೆ ಮಾರಾಟಕ್ಕೆ ಸಿದ್ಧವಾಗಿದೆ!

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

- Advertisement -
- Advertisement -

ಭಾರತೀಯ ರೈಲ್ವೆ ದೇಶದ ಜೀವಸೆಲೆಗಳಲ್ಲಿ ಒಂದಾಗಿದೆ ಎಂದು ಹೇಳುವುದು ಅತಿಶಯೋಕ್ತಿಯಲ್ಲ. ಜನಸಂಖ್ಯೆಯ ಬಹುಪಾಲು ಜನರು ಇನ್ನೂ ತಮ್ಮ ದೈನಂದಿನ ಪ್ರಯಾಣಕ್ಕಾಗಿ ಅದರ ಮೇಲೆ ಅವಲಂಬಿತರಾಗಿದ್ದಾರೆ. ಹೆಚ್ಚಿನ ವಲಸೆ ಕಾರ್ಮಿಕರಿಗೆ ಇದು ತಮ್ಮ ಕುಟುಂಬ ಮತ್ತು ತಾವು ಕೆಲಸ ಮಾಡುವ ದೂರದ ಊರುಗಳೊಂದಿಗೆ ಸಂಪರ್ಕ ಸಾಧಿಸುವ ಏಕೈಕ ಕೈಗೆಟುಕುವ ಸಾಧನವಾಗಿದೆ.

ಇಂತಹ ಮಹತ್ವದ ರೈಲ್ವೆ ಇಲಾಖೆಯನ್ನು ಕೇಂದ್ರ ಸರ್ಕಾರ ನಿರಂತರವಾಗಿ ಮತ್ತು ವ್ಯವಸ್ಥಿತವಾಗಿ ನಿರ್ಲಕ್ಷಿಸಿದೆ. ಜೊತೆಗೆ ರಹಸ್ಯವಾಗಿ ಖಾಸಗೀಕರಣಗೊಳಿಸುತ್ತಿದೆ.

ಪ್ರಯಾಣಿಕರ ರೈಲು ಸೇವೆಗಳ ಕಾರ್ಯಾಚರಣೆಗಾಗಿ ರೈಲ್ವೆ ಸಚಿವಾಲಯವು ಖಾಸಗಿ ಕಂಪನಿಗಳಿಗೆ ಆಹ್ವಾನ ನೀಡುವ ಮೂಲಕ ಖಾಸಗೀಕರಣದತ್ತ ಮೊದಲ ಹೆಜ್ಜೆ ಇಟ್ಟಿದೆ.

ಕನಿಷ್ಠ 151 ಆಧುನಿಕ ರೈಲು‌ಗಳನ್ನು ಪರಿಚಯಿಸಲಾಗುವುದು ಮತ್ತು ಖಾಸಗಿ ರೈಲು ಕಾರ್ಯಾಚರಣೆಗಾಗಿ 109 ಜೋಡಿ ಮಾರ್ಗಗಳನ್ನು ಯೋಜಿಸಲಾಗುವುದು. ಪ್ರತಿ ರೈಲಿನಲ್ಲಿ ಕನಿಷ್ಠ 16 ಬೋಗಿಗಳು ಇರಲಿವೆ ಎಂದು ಭಾರತೀಯ ರೈಲ್ವೆ ಬುಧವಾರ ಪತ್ರಿಕಾ ಹೇಳಿಕೆಯಲ್ಲಿ ತಿಳಿಸಿದೆ.

ಈ ಪ್ರಯಾಣಿಕರ ರೈಲುಗಳ ಕಾರ್ಯಾಚರಣೆಯು “ಖಾಸಗಿ ವಲಯದ ಹೂಡಿಕೆಯನ್ನು ಸುಮಾರು 30,000 ಕೋಟಿ ರೂಗೆ ಹೆಚ್ಚಿಸುವ ಯೋಜನೆಯ ಭಾಗವಾಗಿದೆ” ಎಂದು ರೈಲ್ವೆ ಸಚಿವಾಲಯ ತಿಳಿಸಿದೆ.

“ಭಾರತೀಯ ರೈಲ್ವೆ ಜಾಲದ ಮೂಲಕ ಪ್ರಯಾಣಿಕರ ರೈಲುಗಳನ್ನು ಓಡಿಸಲು ಖಾಸಗಿ ಹೂಡಿಕೆಯ ಮೊದಲ ಕ್ರಮ ಇದಾಗಿದೆ” ಎಂದು ಅದು ಹೇಳಿದೆ.

ಭಾರತೀಯ ರೈಲ್ವೆಯ ಖಾಸಗೀಕರಣದ ಬಗ್ಗೆ ಮೋದಿ ಸರ್ಕಾರ ಕೆಲವು ಸಮಯದಿಂದ ಗಮನ ಹರಿಸುತ್ತಿದೆ. “ಪ್ರಯಾಣಿಕರಿಗೆ ಉತ್ತಮ ಸೌಲಭ್ಯಗಳನ್ನು ಒದಗಿಸುವ” ಸೋಗಿನಲ್ಲಿ ಖಾಸಗಿ ಕಂಪನಿಗಳಿಗೆ ಹೊರಗುತ್ತಿಗೆ, ವಾಣಿಜ್ಯ ಮತ್ತು ಆನ್-ಬೋರ್ಡ್ ಸೇವೆಗಳನ್ನು ಪ್ರಾರಂಭಿಸುವ ಮೂಲಕ ಇದು ಈಗಾಗಲೇ 2018 ರಲ್ಲಿ ಖಾಸಗೀಕರಣದ ಬಾಗಿಲುಗಳನ್ನು ತೆರೆದಿದೆ.

“ಭಾರತೀಯ ರೈಲ್ವೆ ಯಾವಾಗಲೂ ಭಾರತದ ಮತ್ತು ಭಾರತದ ಜನರ ಆಸ್ತಿಯಾಗಿ ಮುಂದುವರಿಯುತ್ತದೆ”. ಇದು ರೈಲ್ವೆ ಸಚಿವ ಪಿಯೂಷ್ ಗೋಯಲ್ 2019 ರ ನವೆಂಬರ್‌ನಲ್ಲಿ ಮೇಲ್ಮನೆಯಲ್ಲಿ ಹೇಳಿದ ಮಾತುಗಳು. ಆದರೆ ಅದಕ್ಕೆ ವಿರುದ್ಧವಾಗಿ ಸರ್ಕಾರ ಇಂದು ನಡೆದುಕೊಳ್ಳುತ್ತಿದೆ.

ಭಾರತೀಯ ರೈಲ್ವೆ: ಶ್ರೀಮಂತ ಇತಿಹಾಸ

ಭಾರತೀಯ ರೈಲ್ವೆಯು ಅತಿದೊಡ್ಡ ಸಾರ್ವಜನಿಕ ಉದ್ಯಮವಾಗಿದೆ ಮತ್ತು ದೇಶದ ಅತಿದೊಡ್ಡ ಉದ್ಯೋಗದಾತ ಸಾರ್ವಜನಿಕ ಕ್ಷೇತ್ರವಾಗಿದೆ. ಭಾರತೀಯ ರೈಲ್ವೆ ಪ್ರತಿವರ್ಷ 810 ಕೋಟಿಗೂ ಹೆಚ್ಚು ಪ್ರಯಾಣಿಕರನ್ನು ಸಾಗಿಸುತ್ತದೆ. ಇದರ 67,000 ಕಿಲೋಮೀಟರ್ ಉದ್ದದ ಮಾರ್ಗಗಳು ದೇಶದ ದೂರದ ಭಾಗಗಳನ್ನು ಪರಸ್ಪರ ಸಂಪರ್ಕಿಸುತ್ತವೆ. ಇದು ತಮ್ಮ ಹಳ್ಳಿಗಳು ಮತ್ತು ಕೆಲಸದ ನಗರಗಳ ನಡುವೆ ಕೋಟ್ಯಂತರ ಜನರಿಗೆ ಸಂಪರ್ಕ ಕಲ್ಪಿಸುವ ಏಕೈಕ ಕೈಗೆಟುಕುವ ಮಾರ್ಗವಾಗಿದೆ.

ಭಾರತೀಯ ರೈಲ್ವೆಯು 15 ಲಕ್ಷಕ್ಕೂ ಹೆಚ್ಚು ಜನರಿಗೆ ಉದ್ಯೋಗ ನೀಡಿದೆ. ಅತಿ ಹೆಚ್ಚು ಉದ್ಯೋಗ ನೀಡಿದ ಪ್ರಪಂಚದ 7ನೇ ಉದ್ಯಮವಾಗಿದೆ. ಈಗ ಸರ್ಕಾರದ ಖಾಸಗೀಕರಣದ ನಡೆಯಿಂದಾಗಿ ಅಲ್ಲಿನ ನೌಕರರು ಆತಂಕದ ಸ್ಥಿತಿ ಎದುರಿಸುತ್ತಿದ್ದಾರೆ.

ಮೋದಿ ಸರ್ಕಾರ: ಹೂಡಿಕೆ ಹಿಂತೆಗೆತ

ಮೋದಿ ಸರ್ಕಾರವು ಸ್ಪಷ್ಟವಾಗಿ ಸಾರ್ವಜನಿಕ ಕ್ಷೇತ್ರಗಳಿಂದ ಹೂಡಿಕೆ ಹಿಂತೆಗೆದುಕೊಳ್ಳುತ್ತಿದೆ. ಬಿಎಸ್‌ಎನ್‌ಎಲ್ ಮತ್ತು ಒಎನ್‌ಜಿಸಿ ಸೇರಿದಂತೆ ಹಲವು ಕಂಪನಿಗಳ ವಿಚಾರದಲ್ಲಿ ಇದು ಸ್ಪಷ್ಟವಾಗಿದೆ. ಸದ್ಯದ ಕೋವಿಡ್ ಬಿಕ್ಕಟ್ಟು ಅವರ ಖಾಸಗೀಕರಣದ ಪ್ರಯತ್ನಗಳಿಗೆ ಒದಗಿದ ಸುವರ್ಣಾವಕಾಶವಾಗಿದೆ.

ಭಾರತದಲ್ಲಿ 339 ಸಾರ್ವಜನಿಕ ವಲಯದ ಉದ್ಯಮಗಳಿವೆ. ಅವುಗಳು ಖಾಸಗೀಕರಣಗೊಂಡರೆ ಉತ್ತಮ ಪ್ರದರ್ಶನ ನೀಡುತ್ತವೆ ಎಂಬ ವಾದವನ್ನು ಪ್ರತಿಬಾರಿ ಹೇಳಲಾಗುತ್ತದೆ. ಆದರೆ ಅಂತಹ ಉದಾಹರಣೆಗಳು ಕಾಣಸಿಗುವುದಿಲ್ಲ. ಇದರಿಂದ ಸರ್ಕಾರಕ್ಕೆ ಎಷ್ಟು ನಷ್ಟವಾಗುತ್ತದೆ ಎಂಬುದರ ಬಗ್ಗೆ ಚರ್ಚೆಗಳು ನಡೆಯುವುದಿಲ್ಲ.

ಭಾರತ್ ಪೆಟ್ರೋಲಿಯಂ ಕಾರ್ಪೊರೇಶನ್ ಲಿಮಿಟೆಡ್ (ಬಿಪಿಸಿಎಲ್) ಇಂಡಸ್ಟ್ರಿಯಲ್ ಡೆವಲಪ್ಮೆಂಟ್ ಬ್ಯಾಂಕ್ ಆಫ್ ಇಂಡಿಯಾ (ಐಡಿಬಿಐ), ಶಿಪ್ಪಿಂಗ್ ಕಾರ್ಪೊರೇಷನ್ ಆಫ್ ಇಂಡಿಯಾ, ಕಂಟೈನರ್ ಕಾರ್ಪೊರೇಷನ್ ಆಫ್ ಇಂಡಿಯಾ, ಟಿಎಚ್‌ಡಿಸಿ ಲಿಮಿಟೆಡ್ ಮತ್ತು ನಾರ್ತ್ ಈಸ್ಟರ್ನ್ ಎಲೆಕ್ಟ್ರಿಕ್ ಪವರ್ ಕಾರ್ಪೊರೇಶನ್ ಲಿಮಿಟೆಡ್‌ ಕಂಪನಿಗಳಲ್ಲಿನ ಸರ್ಕಾರಿ ಪಾಲನ್ನು ಖಾಸಗಿಯವರಿಗೆ ಮಾರಾಟ ಮಾಡುವ ಪ್ರಸ್ತಾಪ ಮಾಡಲಾಗಿದೆ.


ಇದನ್ನೂ ಓದಿ: ಭೂ ಸುಧಾರಣಾ ಕಾನೂನಿನ ತಿದ್ದುಪಡಿ ಮತ್ತು ಅದರ ಪರಿಣಾಮಗಳು – ಡಾ.ಎ.ಆರ್ ವಾಸವಿ 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...

ತಾರತಮ್ಯ ಮುಕ್ತ ಕ್ಯಾಂಪಸ್ ನಿರ್ಮಾಣದತ್ತ ಮಹತ್ವದ ಹೆಜ್ಜೆ; ‘ರೋಹಿತ್ ವೇಮುಲ ಮಸೂದೆ’ಗೆ ಸಚಿವ ಸಂಪುಟ ಅನುಮೋದನೆ

ಕರ್ನಾಟಕ ಸರ್ಕಾರದ ಸಚಿವ ಸಂಪುಟ ಗುರುವಾರ (ಏ.16) ದಂದು ಕರ್ನಾಟಕ ರೋಹಿತ್ ವೇಮುಲ (ಹೊರಗಿಡುವಿಕೆ ಅಥವಾ ಅನ್ಯಾಯ ತಡೆಗಟ್ಟುವಿಕೆ) (ಶಿಕ್ಷಣ ಮತ್ತು ಘನತೆಯ ಹಕ್ಕು) ಮಸೂದೆ’ಗೆ ಅನುಮೋದನೆ ನೀಡಿದೆ. ಹೈದರಾಬಾದ್‌ನ ಕೆಂದ್ರೀಯ ವಿಶ್ವವಿದ್ಯಾಲಯದಲ್ಲಿ...