Homeಎಕಾನಮಿಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ...

ಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ ಟ್ರೋಲ್ ಮಾಡಿದ ನೆಟ್ಟಿಗರು

- Advertisement -
- Advertisement -

ತೀವ್ರ ಆರ್ಥಿಕ ಕುಸಿತದ ಬೆನ್ನಲ್ಲೇ ಡಾಲರ್ ಎದುರು ರೂಪಾಯಿ ಮೌಲ್ಯವು ಮತ್ತಷ್ಟು ಕುಸಿಸಿದೆ. ಸದ್ಯಕ್ಕೆ 1 ಡಾಲರ್ ಗೆ 71.65 ರೂಗಳು ಇದ್ದು ಬೆಳಿಗ್ಗೆ ಇದು 72 ರೂ ಗಳಿಗೆ ತಲುಪಿತ್ತು. ಇದೇ ವಿಚಾರ ಇಟ್ಟುಕೊಂಡು ನೆಟ್ಟಿಗರು ಟ್ರೋಲ್ ಆರಂಭಿಸಿದ್ದಾರೆ.

“ಡಾಲರ್ ಎದುರು ರುಪಾಯಿ 60 ರೂಗೆ ತಲುಪಿದೆ. ಇದು ಆರ್ಥಿಕ ಕುಸಿತದ ಸಂಕೇತ. ಆದರೂ ಏನೂ ಆಗಿಲ್ಲವೆನ್ನುವಂತೆ ಸರ್ಕಾರ ಸುಮ್ಮನೆ ಕುಳಿತಿದೆ” ಎಂದು ಲೇಖಕ ಚೇತನ್ ಭಗತ್ 2013ರ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಟ್ವೀಟ್ ಮಾಡಿ ಟೀಕಿಸಿದ್ದರು.ಈಗ 71 ರೂ ದಾಟಿದ ಹಿನ್ನೆಲೆಯಲ್ಲಿ ಆ ಟ್ವೀಟ್ ನ ಸ್ಕ್ರೀನ್ ಶಾಟ್ ಅನ್ನು ಪೋಸ್ಟ್ ಮಾಡಿ ಲೇವಡಿ ಮಾಡಿದ್ದಾರೆ. ಈಗ್ಯಾಕೆ ಚೇತನ್ ಭಗತ್ ಬಾಯಿ ಬಿಡುತ್ತಿಲ್ಲ ಎಂದು ಛೇಡಿಸಿದ್ದಾರೆ.

ಕಿರಣ್ ಬೇಡಿಯವರು ಸಹ 2013ರಲ್ಲಿಯೇ ಡಾಲರ್ ಎದುರು ರೂಪಾಯಿ ಕುಸಿತವನ್ನು ಒಂದು ಪದ್ಯದ ಮೂಲಕ ವ್ಯಂಗ್ಯ ಮಾಡಿದ್ದರು. “ಡಾಲರ್ ಎಸ್ಕಲೇಟರ್ ನಲ್ಲಿದೆ, ರುಪಾಯಿ ವೆಂಟಿಲೇಟರ್ ನಲ್ಲಿದೆ. ಫೈಲುಗಳು ಲಾಕರ್ ನಲ್ಲಿವೆ, ಮಾಧ್ಯಮಗಳು ಶಾಕ್ ಆಗಿವೆ, ಕೆಲವು ವ್ಯವಹಾರಕ್ಕೆ ಹೋಗವು ಬಂಕರ್ ಗಳು ಹೊಂದಿಕೊಂಡಿವೆ ಎನ್ನುವ ಅರ್ಥದಲ್ಲಿ ಬರೆದಿದ್ದರು.

ಆದರೆ ಈಗ ಕಿರಣ್ ಬೇಡಿಯವರು ಬಿಜೆಪಿ ಪಕ್ಷದಲ್ಲಿದ್ದು ರುಪಾಯಿ 72 ರೂ ಗೆ ಕುಸಿದರೂ ಉಸಿರೆ ಎತ್ತುತ್ತಿಲ್ಲ ಏಕೆ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಮುಖ್ಯವಾಗಿ ಈ ಇಬ್ಬರು ಸೆಲೆಬ್ರಟಿಗಳು ಸಹ ಬಿಜೆಪಿಯ ಬೆಂಬಲಿಗರಾಗಿದ್ದು ಯುಪಿಎ ಆಡಳಿತದ ಕಾಲಾವಧಿಯಲ್ಲಿ ಮಾತು ಮಾತಿಗೂ ಟ್ವೀಟ್ ಮಾಡುತ್ತಿದ್ದವರು ಈಗ ದೊಡ್ಡ ಆರ್ಥಿಕ ಕುಸಿತ ಉಂಟಾದರು ಏಕೆ ಮಾತಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

ಶ್ರೀನಿವಾಸ ಕಾರ್ಕಾಳರವರು ‘ವಿದೇಶದಲ್ಲಿರುವ ಭಾರತೀಯ “ದೇಶಭಕ್ತ” ರಿಗೆ ಖುಷಿಯೋ ಖುಷಿ. 1 ಡಾಲರ್ ಗೆ 72 ರುಪಾಯಿ ಸಿಗುತ್ತೆ.’ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಮೂರು ದಿನಗಳ ಹಿಂದೆ ತಾನೇ ಕರ್ನಾಟಕ ಬಿಜೆಪಿಯ ರಾಜ್ಯಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲು ಆಯ್ಕೆಯಾಗಿದ್ದಾರೆ. ಅವರು ಅಧ್ಯಕ್ಷರಾದೊಡನೆ ಅವರು ಹಿಂದೆ ಚುನಾವಣಾ ಪ್ರಚಾರವೊಂದರಲ್ಲಿ ಮಾಡಿದ್ದ ಭಾಷಣವನ್ನು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಳ್ಳಲಾಗಿದೆ.

ಅದರಲ್ಲಿ ಅವರು”ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಡಾಲರ್ ಎದುರು ರೂಪಾಯಿಯನ್ನು 15 ರೂ ಗೆ ತರುತ್ತೇವೆ ಎಂದು ಜೋರಾಗಿ ಭಾಷಣ ಮಾಡಿದ್ದರು. ಒಂದಲ್ಲ ಎರಡು ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೂ ಏಕೆ ರೂಪಾಯಿ ಮೌಲ್ಯ ಕುಸಿಯುತ್ತಲೇ ಇದೆ ಎಂದು ನೆಟ್ಟಿಗರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. gauri!!!

    Thanks for info, around the world recession will start now, because every one is taking care of our planet.

    All manufacturer of diesel vehicle is stoped.
    MSME & SMALL SCALE BUSINESSES WILL IMPACT NOT ONLY IN INDIA….

    so, flectuation will be there..

    Not only considering value of money ..

    Please consider the population and consumption also..

LEAVE A REPLY

Please enter your comment!
Please enter your name here

- Advertisment -

ಪ.ಬಂಗಾಳ ಎಸ್‌ಐಆರ್‌ : ದೇಶ ಕಾದ ಯೋಧನಿಂದ ತೀರ್ಪು ಕೊಟ್ಟ ನ್ಯಾಯಾಧೀಶರವರೆಗೆ.. ಮತ ಹಕ್ಕು ಕಳೆದುಕೊಂಡ ಲಕ್ಷಾಂತರ ಜನರು

ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್‌) ದೇಶದಲ್ಲಿ ಪ್ರಸ್ತುತ ಚರ್ಚೆಯಲ್ಲಿರುವ ಪ್ರಮುಖ ವಿಚಾರ. ಹಲವು ಗೊಂದಲಗಳ ನಡುವೆ ಮೊದಲ ಹಂತದಲ್ಲಿ ಬಿಹಾರದಲ್ಲಿ ಎಸ್‌ಐಆರ್‌ ಪೂರ್ತಿಗೊಳಿಸಿದ ಚುನಾವಣಾ ಆಯೋಗ, ನಂತರ ಅಲ್ಲಿ ವಿಧಾನಸಭಾ...

ತೆಲಂಗಾಣ ಜಾತಿ ಸಮೀಕ್ಷೆ: ಜನರ ಆರ್ಥಿಕ ಭವಿಷ್ಯ ನಿರ್ಧರಿಸುತ್ತಿರುವ ಜಾತಿ ಹಿನ್ನೆಲೆ

ತೆಲಂಗಾಣದಲ್ಲಿರುವ ಎಲ್ಲಾ ಪರಿಶಿಷ್ಟ ಜಾತಿ ಕಾರ್ಮಿಕರಲ್ಲಿ ಸುಮಾರು ಅರ್ಧದಷ್ಟು ಜನರು ದಿನಗೂಲಿ ಕಾರ್ಮಿಕರು. ಆದರೆ, ಸಾಮಾನ್ಯ ಜಾತಿ ಕಾರ್ಮಿಕರಲ್ಲಿ 10 ರಲ್ಲಿ ಒಬ್ಬರು ಮಾತ್ರ ದಿನಗೂಲಿ ಮಾಡುತ್ತಾರೆ. ಬ್ರಾಹ್ಮಣರು ಎಸ್‌ಟಿ ಸಮುದಾಯದ ಕೋಲಂಗಿಂತ...

ಲೆಬನಾನ್‌ನಲ್ಲಿ ಯೇಸುವಿನ ಪ್ರತಿಮೆ ಧ್ವಂಸ ಮಾಡಿದ ಇಸ್ರೇಲಿ ಸೈನಿಕ; ಫೋಟೋ ವೈರಲ್

ಇಸ್ರೇಲಿ ಸೈನಿಕನೊಬ್ಬ ದಕ್ಷಿಣ ಲೆಬನಾನ್‌ನಲ್ಲಿ ಸ್ಲೆಡ್ಜ್ ಹ್ಯಾಮರ್‌ನಿಂದ ಯೇಸುಕ್ರಿಸ್ತನ ಪ್ರತಿಮೆಯನ್ನು ಧ್ವಂಸ ಮಾಡುತ್ತಿರುವುದನ್ನು ತೋರಿಸುವ ವೈರಲ್ ಚಿತ್ರದ ಸತ್ಯಾಸತ್ಯತೆಯನ್ನು ಇಸ್ರೇಲ್ ರಕ್ಷಣಾ ಪಡೆಗಳು (ಐಡಿಎಫ್‌) ದೃಢಪಡಿಸಿದ್ದು, ವ್ಯಾಪಕ ಆಕ್ರೋಶಕ್ಕೆ ಕಾರಣವಾಗಿದೆ. ಎಕ್ಸ್ ನಲ್ಲಿ 6.8...

TCS ನಾಸಿಕ್ ಪ್ರಕರಣ : ಮಾಧ್ಯಮಗಳ ಸುಳ್ಳು ಮತ್ತು ಕಂಪನಿ ಹೇಳಿದ ಸತ್ಯ

ಮಹಾರಾಷ್ಟ್ರದ ನಾಸಿಕ್‌ನಲ್ಲಿರುವ ಟಾಟಾ ಕನ್ಸಲ್ಟೆನ್ಸಿ ಸರ್ವಿಸಸ್ (ಟಿಸಿಎಸ್‌) ಕಂಪನಿಯ ಬಿಪಿಒ ಘಟಕದಲ್ಲಿ ನಡೆದಿದೆ ಎನ್ನಲಾದ ಪ್ರಕರಣವೊಂದು ಪ್ರಸ್ತುತ ಇಡೀ ದೇಶದಾದ್ಯಂತ ಭಾರೀ ಚರ್ಚೆಯ ವಿಷಯವಾಗಿದೆ. ಈ ಪ್ರಕರಣದಲ್ಲಿ ಮುಖ್ಯವಾಗಿ ಲೈಂಗಿಕ ಕಿರುಕುಳ ಮತ್ತು...

‘ಅಮೆರಿಕದೊಂದಿಗೆ ಮಾತುಕತೆ ಇಲ್ಲ..’; ಇಸ್ಲಾಮಾಬಾದ್‌ ಸಭೆಯಲ್ಲಿ ಇರಾನ್ ಭಾಗವಹಿಸುವುದು ಅನುಮಾನ

ಯುನೈಟೆಡ್ ಸ್ಟೇಟ್ಸ್ (ಅಮೆರಿಕ) ಜೊತೆ ಹೊಸ ಸುತ್ತಿನ ಮಾತುಕತೆಗಾಗಿ ಇಸ್ಲಾಮಾಬಾದ್‌ಗೆ ಸಂಧಾನಕಾರರನ್ನು ಕಳುಹಿಸುವ ಯಾವುದೇ ಯೋಜನೆ ಇಲ್ಲ ಎಂದು ಇರಾನ್ ಸೂಚಿಸಿದೆ. ಕದನ ವಿರಾಮ ಮುಕ್ತಾಯಗೊಳ್ಳಲು 48 ಗಂಟೆಗಳ ಮೊದಲು ಯುದ್ಧ ನಿರತ...

ಇರಾನ್, ಇಸ್ರೇಲ್-ಅಮೆರಿಕ ಯುದ್ಧ : ವಿನಾಶದ ನಡುವೆಯೂ ಲಾಭ ಪಡೆದವರು ಯಾರು?

ಅಂತಾರಾಷ್ಟ್ರೀಯ ಹಣಕಾಸು ನಿಧಿ (ಐಎಂಎಫ್‌) 2026ರ ಜಾಗತಿಕ ಬೆಳವಣಿಗೆಯ ಅಂದಾಜನ್ನು ಶೇಕಡ 3.3 ರಿಂದ 3.1ಕ್ಕೆ ಇಳಿಸಿದೆ. ಇರಾನ್ ವಿರುದ್ಧದ ಅಮೆರಿಕ-ಇಸ್ರೇಲ್ ಯುದ್ಧದ ಪರಿಣಾಮ ಮತ್ತು ಹಾರ್ಮುಝ್ ಜಲಸಂಧಿಯನ್ನು ಮುಚ್ಚಿರುವುದು ವಿಶ್ವ ಆರ್ಥಿಕತೆಯ...

ಕ್ಷೇತ್ರ ಮರುವಿಂಗಡಣೆ ವಿರುದ್ಧ ದಕ್ಷಿಣದ ರಾಜ್ಯಗಳ ಪಟ್ಟು: ಭವಿಷ್ಯದ ಮರುಚಿಂತನೆಗೆ ಇದುವೇ ಸೂಕ್ತ ಕಾಲ

ಲೋಕಸಭೆಯಲ್ಲಿ 131 ನೇ ಸಾಂವಿಧಾನಿಕ ತಿದ್ದುಪಡಿ ಮಸೂದೆಯನ್ನು ತಿರಸ್ಕರಿಸಿರುವುದು ಭಾರತದ ಪ್ರಜಾಪ್ರಭುತ್ವ ಪಥದಲ್ಲಿ ಮಹತ್ವದ ಕ್ಷಣವಾಗಿದೆ. ಇದು ಕೇವಲ ಶಾಸಕಾಂಗದ ಹಿನ್ನಡೆಯನ್ನು ಮಾತ್ರವಲ್ಲ, ಒಕ್ಕೂಟ ವ್ಯವಸ್ಥೆಯ ಸೂಕ್ಷ್ಮ ಸಮತೋಲನವನ್ನು ಹಾಳುಮಾಡುವ ಅಪಾಯವನ್ನುಂಟುಮಾಡುವ ಪ್ರಸ್ತಾಪಗಳ...

ಮೋದಿ ಸರ್ಕಾರದ ಯೂಟರ್ನ್ : ಜನಸಂಖ್ಯಾ ಸ್ಫೋಟದ ಕಳವಳದಿಂದ ಹೆಚ್ಚು ಜನಸಂಖ್ಯೆಯ ರಾಜ್ಯಗಳಿಗೆ ಗಿಫ್ಟ್ ಕೊಡುವವರೆಗೆ

ಭಾರತದ ಜನಸಂಖ್ಯೆಯ ಬಗ್ಗೆ ಪ್ರಧಾನಮಂತ್ರಿ ನರೇಂದ್ರ ಮೋದಿ ಮತ್ತು ಅವರ ಸರ್ಕಾರ ನಿಜವಾಗಿಯೂ ಬಹಳ ಕಳವಳ ವ್ಯಕ್ತಪಡಿಸುತ್ತಿದೆ– ಅಥವಾ ಅವರು ನಮಗೆ ಆ ರೀತಿ ನಂಬುವಂತೆ ಮಾಡಿದ್ದಾರೆ. ಏಕೆಂದರೆ... 2019ರ ಸ್ವಾತಂತ್ರ್ಯ ದಿನಾಚರಣೆಯಂದು ಮೋದಿಯವರು,...

ದೇಶವನ್ನುದ್ದೇಶಿಸಿ ಮೋದಿ ಭಾಷಣ : ಚುನಾವಣಾ ನೀತಿ ಸಂಹಿತೆಯ ಉಲ್ಲಂಘನೆ

ಕ್ಷೇತ್ರ ಮರುವಿಂಗಡನೆಗೆ ಉದ್ದೇಶಿಸಿದ್ದ ಸಂವಿಧಾನದ 131ನೇ ತಿದ್ದುಪಡಿ ಮಸೂದೆಗೆ ಲೋಕಸಭೆಯಲ್ಲಿ ಸೋಲಾದ ಬೆನ್ನಲ್ಲೇ ಶನಿವಾರ (ಏ.18) ದೇಶವನ್ನುದ್ದೇಶಿಸಿ ಮಾತನಾಡಿದ ಪ್ರಧಾನಿ ನರೇಂದ್ರ ಮೋದಿ, ಪ್ರತಿಪಕ್ಷಗಳ ವಿರುದ್ಧ ತೀವ್ರ ವಾಗ್ದಾಳಿ ನಡೆಸಿದ್ದು, ಸಂಸತ್ತಿನಲ್ಲಿ ವಿರೋಧ...

ಫ್ಯಾಕ್ಟ್‌ಚೆಕ್ : ಅತ್ಯಾಚಾರ ಅಪರಾಧಿ ಪರ ವಕೀಲೆಗೆ ಟಿಎಂಸಿಯಿಂದ ರಾಜ್ಯಸಭೆ ಸೀಟ್; ಬಿಜೆಪಿ ಆರೋಪದ ಸತ್ಯಾಸತ್ಯತೆ ಏನು?

ಪಶ್ಚಿಮ ಬಂಗಾಳ ವಿಧಾನಸಭೆ ಚುನಾವಣೆಗೆ ಪಾಣಿಹತಿ ಕ್ಷೇತ್ರದಿಂದ ಬಿಜೆಪಿ ಅಭ್ಯರ್ಥಿಯಾಗಿರುವ ಆರ್‌ಜಿ ಕರ್‌ ಸಂತ್ರಸ್ತೆಯ ತಾಯಿ ಮತ್ತು ವಕೀಲೆ ಹಾಗೂ ತೃಣಮೂಲ ಕಾಂಗ್ರೆಸ್ (ಟಿಎಂಸಿ) ರಾಜ್ಯಸಭಾ ಸದಸ್ಯೆ ಮೇನಕಾ ಗುರುಸ್ವಾಮಿ ಅವರ ಎಐ-ರಚಿತ...