Homeಎಕಾನಮಿಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ...

ಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ ಟ್ರೋಲ್ ಮಾಡಿದ ನೆಟ್ಟಿಗರು

- Advertisement -
- Advertisement -

ತೀವ್ರ ಆರ್ಥಿಕ ಕುಸಿತದ ಬೆನ್ನಲ್ಲೇ ಡಾಲರ್ ಎದುರು ರೂಪಾಯಿ ಮೌಲ್ಯವು ಮತ್ತಷ್ಟು ಕುಸಿಸಿದೆ. ಸದ್ಯಕ್ಕೆ 1 ಡಾಲರ್ ಗೆ 71.65 ರೂಗಳು ಇದ್ದು ಬೆಳಿಗ್ಗೆ ಇದು 72 ರೂ ಗಳಿಗೆ ತಲುಪಿತ್ತು. ಇದೇ ವಿಚಾರ ಇಟ್ಟುಕೊಂಡು ನೆಟ್ಟಿಗರು ಟ್ರೋಲ್ ಆರಂಭಿಸಿದ್ದಾರೆ.

“ಡಾಲರ್ ಎದುರು ರುಪಾಯಿ 60 ರೂಗೆ ತಲುಪಿದೆ. ಇದು ಆರ್ಥಿಕ ಕುಸಿತದ ಸಂಕೇತ. ಆದರೂ ಏನೂ ಆಗಿಲ್ಲವೆನ್ನುವಂತೆ ಸರ್ಕಾರ ಸುಮ್ಮನೆ ಕುಳಿತಿದೆ” ಎಂದು ಲೇಖಕ ಚೇತನ್ ಭಗತ್ 2013ರ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಟ್ವೀಟ್ ಮಾಡಿ ಟೀಕಿಸಿದ್ದರು.ಈಗ 71 ರೂ ದಾಟಿದ ಹಿನ್ನೆಲೆಯಲ್ಲಿ ಆ ಟ್ವೀಟ್ ನ ಸ್ಕ್ರೀನ್ ಶಾಟ್ ಅನ್ನು ಪೋಸ್ಟ್ ಮಾಡಿ ಲೇವಡಿ ಮಾಡಿದ್ದಾರೆ. ಈಗ್ಯಾಕೆ ಚೇತನ್ ಭಗತ್ ಬಾಯಿ ಬಿಡುತ್ತಿಲ್ಲ ಎಂದು ಛೇಡಿಸಿದ್ದಾರೆ.

ಕಿರಣ್ ಬೇಡಿಯವರು ಸಹ 2013ರಲ್ಲಿಯೇ ಡಾಲರ್ ಎದುರು ರೂಪಾಯಿ ಕುಸಿತವನ್ನು ಒಂದು ಪದ್ಯದ ಮೂಲಕ ವ್ಯಂಗ್ಯ ಮಾಡಿದ್ದರು. “ಡಾಲರ್ ಎಸ್ಕಲೇಟರ್ ನಲ್ಲಿದೆ, ರುಪಾಯಿ ವೆಂಟಿಲೇಟರ್ ನಲ್ಲಿದೆ. ಫೈಲುಗಳು ಲಾಕರ್ ನಲ್ಲಿವೆ, ಮಾಧ್ಯಮಗಳು ಶಾಕ್ ಆಗಿವೆ, ಕೆಲವು ವ್ಯವಹಾರಕ್ಕೆ ಹೋಗವು ಬಂಕರ್ ಗಳು ಹೊಂದಿಕೊಂಡಿವೆ ಎನ್ನುವ ಅರ್ಥದಲ್ಲಿ ಬರೆದಿದ್ದರು.

ಆದರೆ ಈಗ ಕಿರಣ್ ಬೇಡಿಯವರು ಬಿಜೆಪಿ ಪಕ್ಷದಲ್ಲಿದ್ದು ರುಪಾಯಿ 72 ರೂ ಗೆ ಕುಸಿದರೂ ಉಸಿರೆ ಎತ್ತುತ್ತಿಲ್ಲ ಏಕೆ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಮುಖ್ಯವಾಗಿ ಈ ಇಬ್ಬರು ಸೆಲೆಬ್ರಟಿಗಳು ಸಹ ಬಿಜೆಪಿಯ ಬೆಂಬಲಿಗರಾಗಿದ್ದು ಯುಪಿಎ ಆಡಳಿತದ ಕಾಲಾವಧಿಯಲ್ಲಿ ಮಾತು ಮಾತಿಗೂ ಟ್ವೀಟ್ ಮಾಡುತ್ತಿದ್ದವರು ಈಗ ದೊಡ್ಡ ಆರ್ಥಿಕ ಕುಸಿತ ಉಂಟಾದರು ಏಕೆ ಮಾತಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

ಶ್ರೀನಿವಾಸ ಕಾರ್ಕಾಳರವರು ‘ವಿದೇಶದಲ್ಲಿರುವ ಭಾರತೀಯ “ದೇಶಭಕ್ತ” ರಿಗೆ ಖುಷಿಯೋ ಖುಷಿ. 1 ಡಾಲರ್ ಗೆ 72 ರುಪಾಯಿ ಸಿಗುತ್ತೆ.’ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಮೂರು ದಿನಗಳ ಹಿಂದೆ ತಾನೇ ಕರ್ನಾಟಕ ಬಿಜೆಪಿಯ ರಾಜ್ಯಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲು ಆಯ್ಕೆಯಾಗಿದ್ದಾರೆ. ಅವರು ಅಧ್ಯಕ್ಷರಾದೊಡನೆ ಅವರು ಹಿಂದೆ ಚುನಾವಣಾ ಪ್ರಚಾರವೊಂದರಲ್ಲಿ ಮಾಡಿದ್ದ ಭಾಷಣವನ್ನು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಳ್ಳಲಾಗಿದೆ.

ಅದರಲ್ಲಿ ಅವರು”ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಡಾಲರ್ ಎದುರು ರೂಪಾಯಿಯನ್ನು 15 ರೂ ಗೆ ತರುತ್ತೇವೆ ಎಂದು ಜೋರಾಗಿ ಭಾಷಣ ಮಾಡಿದ್ದರು. ಒಂದಲ್ಲ ಎರಡು ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೂ ಏಕೆ ರೂಪಾಯಿ ಮೌಲ್ಯ ಕುಸಿಯುತ್ತಲೇ ಇದೆ ಎಂದು ನೆಟ್ಟಿಗರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. gauri!!!

    Thanks for info, around the world recession will start now, because every one is taking care of our planet.

    All manufacturer of diesel vehicle is stoped.
    MSME & SMALL SCALE BUSINESSES WILL IMPACT NOT ONLY IN INDIA….

    so, flectuation will be there..

    Not only considering value of money ..

    Please consider the population and consumption also..

LEAVE A REPLY

Please enter your comment!
Please enter your name here

- Advertisment -

ಕೇಂದ್ರದ ವಿಬಿ-ಜಿ ರಾಮ್ ಜಿಗೆ ಟಕ್ಕರ್ : ಪ. ಬಂಗಾಳದ ‘ಕರ್ಮಶ್ರೀ’ ಯೋಜನೆಗೆ ಮಹಾತ್ಮ ಗಾಂಧಿ ಹೆಸರಿಡುವುದಾಗಿ ಘೋಷಿಸಿದ ಮಮತಾ ಬ್ಯಾನರ್ಜಿ

ಪಶ್ಚಿಮ ಬಂಗಾಳ ಸರ್ಕಾರದ ಉದ್ಯೋಗ ಖಾತರಿ ಯೋಜನೆ 'ಕರ್ಮಶ್ರೀ'ಯನ್ನು ಮಹಾತ್ಮ ಗಾಂಧಿ ಹೆಸರಿನಲ್ಲಿ ಮರುನಾಮಕರಣ ಮಾಡುವುದಾಗಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಗುರುವಾರ (ಡಿಸೆಂಬರ್ 18) ಘೋಷಿಸಿದ್ದಾರೆ. ನರೇಗಾ ಯೋಜನೆಯಿಂದ ಮಹಾತ್ಮಾ ಗಾಂಧಿಯವರ ಹೆಸರನ್ನು ಕೈಬಿಟ್ಟಿರುವುದಕ್ಕೆ...

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ: ಶಾಸಕ ಕುಣಿಗಲ್ ರಂಗನಾಥ್ ವಿರುದ್ಧ ಕೆ.ಎನ್. ರಾಜಣ್ಣ ವಾಗ್ದಾಳಿ

ಕೃಷಿ ಸಹಕಾರ ಸಂಘಗಳಿಗೆ ಹಣ ಬಿಡುಗಡೆ ಮಾಡುವುದನ್ನು ಮಾಜಿ ಸಹಕಾರಿ ಸಚಿವ ಕೆ.ಎನ್. ರಾಜಣ್ಣ ಗುರುವಾರ ಬಲವಾಗಿ ಸಮರ್ಥಿಸಿಕೊಂಡಿದ್ದಾರೆ. ಆಡಳಿತ ಪಕ್ಷದೊಳಗಿನ ಸಾರ್ವಜನಿಕ ಭಿನ್ನಾಭಿಪ್ರಾಯದ ನಡುವೆಯೂ, "ಸಂಘಗಳಿಗೆ ವಿತರಿಸಲಾದ ನಿಧಿ ಠೇವಣಿದಾರರ ಹಣ,...

ತನ್ನದೇ ಶಾಸಕರ ಅನರ್ಹತೆ ಕೋರಿ ಬಿಆರ್‌ಎಸ್‌ ಅರ್ಜಿ : ತಿರಸ್ಕರಿಸಿದ ತೆಲಂಗಾಣ ಸ್ಪೀಕರ್

ಆಡಳಿತಾರೂಢ ಕಾಂಗ್ರೆಸ್‌ಗೆ ನಿಷ್ಠೆ ಬದಲಾಯಿಸಿದ್ದಾರೆಂದು ಹೇಳಲಾದ ಹತ್ತು ಬಿಆರ್‌ಎಸ್ ಶಾಸಕರನ್ನು ಅನರ್ಹಗೊಳಿಸುವಂತೆ ಕೋರಿದ್ದ ಅರ್ಜಿಗಳ ಪೈಕಿ ಐದು ಅರ್ಜಿಗಳನ್ನು ತೆಲಂಗಾಣ ವಿಧಾನಸಭೆಯ ಸ್ಪೀಕರ್ ಗದ್ದಂ ಪ್ರಸಾದ್ ಕುಮಾರ್ ಬುಧವಾರ (ಡಿಸೆಂಬರ್ 18) ತಿರಸ್ಕರಿಸಿದ್ದಾರೆ....

ಸಾಮಾಜಿಕ ಬಹಿಷ್ಕಾರ, ದ್ವೇಷ ಭಾಷಣ ತಡೆ ವಿಧೇಯಕಗಳು ವಿಧಾನಸಭೆಯಲ್ಲಿ ಅಂಗೀಕಾರ

ಕರ್ನಾಟಕ ಸಾಮಾಜಿಕ ಬಹಿಷ್ಕಾರ (ಪ್ರತಿಬಂಧ, ನಿಷೇಧ ಮತ್ತು ಪರಿಹಾರ) ವಿಧೇಯಕ-2025 ಗುರುವಾರ (ಡಿ.18) ವಿಧಾನಸಭೆಯಲ್ಲಿ ಸರ್ವಾನುಮತದ ಅಂಗೀಕಾರಗೊಂಡಿತು. ಬೆಳಗಾವಿ ಸುವರ್ಣ ಸೌಧದಲ್ಲಿ ನಡೆಯುತ್ತಿರುವ ಚಳಿಗಾಲದ ವಿಧಾನಮಂಡಲ ಅಧಿವೇಶನದ ವಿಧಾನಸಭೆ ಕಲಾಪದಲ್ಲಿ ಸಮಾಜ ಕಲ್ಯಾಣ ಇಲಾಖೆ...

ಆಕ್ರಮಿತ ಪೂರ್ವ ಜೆರುಸಲೆಮ್ ವಸಾಹತು ಪ್ರದೇಶದಲ್ಲಿ 9000 ವಸತಿ ಘಟಕಗಳ ಯೋಜನೆ ಮುಂದಿಟ್ಟ ಇಸ್ರೇಲ್ 

ಆಕ್ರಮಿತ ಪೂರ್ವ ಜೆರುಸಲೆಮ್‌ನಲ್ಲಿರುವ ಕೈಬಿಟ್ಟ ಖಲಾಂಡಿಯಾ ವಿಮಾನ ನಿಲ್ದಾಣದ ಸ್ಥಳ ಬಳಿ ಅಕ್ರಮ ವಸಾಹತು ಪ್ರದೇಶದಲ್ಲಿ ಸುಮಾರು 9,000 ಹೊಸ ವಸತಿ ಘಟಕಗಳನ್ನು ನಿರ್ಮಿಸಲು ಇಸ್ರೇಲಿ ಆಕ್ರಮಿತ ಅಧಿಕಾರಿಗಳು ಯೋಜನೆಗಳನ್ನು ರೂಪಿಸಲು ಸಜ್ಜಾಗಿದ್ದಾರೆ....

ವಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಲೋಕಸಭೆಯಲ್ಲಿ ‘ವಿಬಿ-ಜಿ ರಾಮ್ ಜಿ ಮಸೂದೆ’ ಅಂಗೀಕಾರ

ಪ್ರತಿಪಕ್ಷಗಳ ತೀವ್ರ ವಿರೋಧದ ನಡುವೆಯೇ ಗುರುವಾರ (ಡಿ.18) ಲೋಕಸಭೆಯಲ್ಲಿ 'ವಿಕ್ಷಿತ್ ಭಾರತ್ ಗ್ಯಾರಂಟಿ ಫಾರ್ ರೋಜ್‌ಗಾರ್ ಅಂಡ್ ಅಜೀವಿಕ ಮಿಷನ್ (ಗ್ರಾಮೀಣ್ ) (ವಿಬಿ-ಜಿ ರಾಮ್ ಜಿ) ಮಸೂದೆ ಅಂಗೀಕಾರಗೊಂಡಿತು. ಈ ಮಸೂದೆ 2005ರಲ್ಲಿ...

ರಾಹುಲ್ ಗಾಂಧಿ ಆಪ್ತ ಸಹಾಯಕನ ಪತ್ನಿ ಪ್ರಜ್ಞಾ ಸತವ್ ಕಾಂಗ್ರೆಸ್ ಎಂಎಲ್‌ಸಿ ಸ್ಥಾನಕ್ಕೆ ರಾಜೀನಾಮೆ; ಬಿಜೆಪಿ ಸೇರುವ ನಿರೀಕ್ಷೆ

ಕಾಂಗ್ರೆಸ್ಸಿಗ ಮತ್ತು ಲೋಕಸಭಾ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿಯವರ ಆಪ್ತರಾಗಿದ್ದ ದಿವಂಗತ ರಾಜೀವ್ ಸತವ್ ಅವರ ಪತ್ನಿ ಸತವ್ ಬಿಜೆಪಿಗೆ ಸೇರುವ ನಿರೀಕ್ಷೆಯಿದೆ. ಮಹಾರಾಷ್ಟ್ರದ ಕಾಂಗ್ರೆಸ್ ನಾಯಕಿ ಪ್ರಜ್ಞಾ ಸತವ್ ಅವರು ಗುರುವಾರ...

ಭೂ ಕಬಳಿಕೆ ಆರೋಪ : ಸದನದಲ್ಲಿ ಚರ್ಚೆಗೆ ಸಿದ್ದ ಎಂದ ಸಚಿವ ಕೃಷ್ಣ ಬೈರೇಗೌಡ

"ಸದನದ ಸದಸ್ಯನಾಗಿ ನನ್ನ ಹಕ್ಕನ್ನು ಬಿಟ್ಟುಕೊಡಲು ಸಿದ್ದನಿದ್ದೇನೆ. ನನ್ನ ಬಗ್ಗೆ ಎತ್ತಿರುವ ವೈಯಕ್ತಿಕ ಆರೋಪದ ಬಗ್ಗೆ ಚರ್ಚೆಗೆ ಸಿದ್ದ" ಎಂದು ಸಚಿವ ಕೃಷ್ಣ ಬೈರೇಗೌಡ ಹೇಳಿದರು. ಗುರುವಾರ (ಡಿ.18) ವಿಧಾನಸಭೆಯ ಶೂನ್ಯ ವೇಳೆಯಲ್ಲಿ, ವಿಧಾನಪರಿಷತ್...

ಡಿಸೆಂಬರ್ 15 ರ ಪ್ರತಿಭಟನೆಯಲ್ಲಿ ಭಾಗವಹಿಸಿದ್ದಕ್ಕಾಗಿ ಜಾಮಿಯಾ ಮಿಲಿಯಾ ವಿದ್ಯಾರ್ಥಿಗಳಿಗೆ ವಿಶ್ವವಿದ್ಯಾಲಯದಿಂದ ಶೋಕಾಸ್ ನೋಟಿಸ್‌

2019 ರಲ್ಲಿ ವಿದ್ಯಾರ್ಥಿಗಳ ಮೇಲಿನ ಹಿಂಸಾಚಾರ ನಡೆದು ಆರು ವರ್ಷಗಳು ತುಂಬಿದ್ದು, ಅದರ ವಾರ್ಷಿಕ ನೆನಪಿನಲ್ಲಿ ಜಾಮಿಯಾ ಮಿಲಿಯಾ ಇಸ್ಲಾಮಿಯಾ ವಿದ್ಯಾರ್ಥಿಗಳು ಡಿಸೆಂಬರ್ 15 ರಂದು ಕ್ಯಾಂಪಸ್ ಒಳಗೆ ದೊಡ್ಡ ಪ್ರತಿಭಟನೆ ನಡೆಸಿದ್ದರು....

ಅಮೆರಿಕದ ಸುಂಕಗಳು ತಮಿಳುನಾಡಿನ ರಫ್ತು ಕೈಗಾರಿಕೆಗಳನ್ನು ಅಂಚಿಗೆ ತಳ್ಳುತ್ತವೆ: ಪ್ರಧಾನಿ ಮೋದಿಗೆ ಸಿಎಂ ಸ್ಟಾಲಿನ್ ಎಚ್ಚರಿಕೆ

ತಮಿಳುನಾಡು ಮುಖ್ಯಮಂತ್ರಿ ಎಂ.ಕೆ. ಸ್ಟಾಲಿನ್ ಅವರು ಪ್ರಧಾನಿ ನರೇಂದ್ರ ಮೋದಿ ಅವರಿಗೆ ಪತ್ರ ಬರೆದಿದ್ದು, ಭಾರತದ ರಫ್ತಿನ ಮೇಲೆ ಅಮೆರಿಕ ವಿಧಿಸಿರುವ ಭಾರೀ ಸುಂಕಗಳು ರಾಜ್ಯದ ಕೆಲವು ಉದ್ಯೋಗ- ಕೈಗಾರಿಕೆಗಳನ್ನು ತೀವ್ರ ಬಿಕ್ಕಟ್ಟಿನತ್ತ...