Homeಎಕಾನಮಿಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ...

ಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ ಟ್ರೋಲ್ ಮಾಡಿದ ನೆಟ್ಟಿಗರು

- Advertisement -
- Advertisement -

ತೀವ್ರ ಆರ್ಥಿಕ ಕುಸಿತದ ಬೆನ್ನಲ್ಲೇ ಡಾಲರ್ ಎದುರು ರೂಪಾಯಿ ಮೌಲ್ಯವು ಮತ್ತಷ್ಟು ಕುಸಿಸಿದೆ. ಸದ್ಯಕ್ಕೆ 1 ಡಾಲರ್ ಗೆ 71.65 ರೂಗಳು ಇದ್ದು ಬೆಳಿಗ್ಗೆ ಇದು 72 ರೂ ಗಳಿಗೆ ತಲುಪಿತ್ತು. ಇದೇ ವಿಚಾರ ಇಟ್ಟುಕೊಂಡು ನೆಟ್ಟಿಗರು ಟ್ರೋಲ್ ಆರಂಭಿಸಿದ್ದಾರೆ.

“ಡಾಲರ್ ಎದುರು ರುಪಾಯಿ 60 ರೂಗೆ ತಲುಪಿದೆ. ಇದು ಆರ್ಥಿಕ ಕುಸಿತದ ಸಂಕೇತ. ಆದರೂ ಏನೂ ಆಗಿಲ್ಲವೆನ್ನುವಂತೆ ಸರ್ಕಾರ ಸುಮ್ಮನೆ ಕುಳಿತಿದೆ” ಎಂದು ಲೇಖಕ ಚೇತನ್ ಭಗತ್ 2013ರ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಟ್ವೀಟ್ ಮಾಡಿ ಟೀಕಿಸಿದ್ದರು.ಈಗ 71 ರೂ ದಾಟಿದ ಹಿನ್ನೆಲೆಯಲ್ಲಿ ಆ ಟ್ವೀಟ್ ನ ಸ್ಕ್ರೀನ್ ಶಾಟ್ ಅನ್ನು ಪೋಸ್ಟ್ ಮಾಡಿ ಲೇವಡಿ ಮಾಡಿದ್ದಾರೆ. ಈಗ್ಯಾಕೆ ಚೇತನ್ ಭಗತ್ ಬಾಯಿ ಬಿಡುತ್ತಿಲ್ಲ ಎಂದು ಛೇಡಿಸಿದ್ದಾರೆ.

ಕಿರಣ್ ಬೇಡಿಯವರು ಸಹ 2013ರಲ್ಲಿಯೇ ಡಾಲರ್ ಎದುರು ರೂಪಾಯಿ ಕುಸಿತವನ್ನು ಒಂದು ಪದ್ಯದ ಮೂಲಕ ವ್ಯಂಗ್ಯ ಮಾಡಿದ್ದರು. “ಡಾಲರ್ ಎಸ್ಕಲೇಟರ್ ನಲ್ಲಿದೆ, ರುಪಾಯಿ ವೆಂಟಿಲೇಟರ್ ನಲ್ಲಿದೆ. ಫೈಲುಗಳು ಲಾಕರ್ ನಲ್ಲಿವೆ, ಮಾಧ್ಯಮಗಳು ಶಾಕ್ ಆಗಿವೆ, ಕೆಲವು ವ್ಯವಹಾರಕ್ಕೆ ಹೋಗವು ಬಂಕರ್ ಗಳು ಹೊಂದಿಕೊಂಡಿವೆ ಎನ್ನುವ ಅರ್ಥದಲ್ಲಿ ಬರೆದಿದ್ದರು.

ಆದರೆ ಈಗ ಕಿರಣ್ ಬೇಡಿಯವರು ಬಿಜೆಪಿ ಪಕ್ಷದಲ್ಲಿದ್ದು ರುಪಾಯಿ 72 ರೂ ಗೆ ಕುಸಿದರೂ ಉಸಿರೆ ಎತ್ತುತ್ತಿಲ್ಲ ಏಕೆ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಮುಖ್ಯವಾಗಿ ಈ ಇಬ್ಬರು ಸೆಲೆಬ್ರಟಿಗಳು ಸಹ ಬಿಜೆಪಿಯ ಬೆಂಬಲಿಗರಾಗಿದ್ದು ಯುಪಿಎ ಆಡಳಿತದ ಕಾಲಾವಧಿಯಲ್ಲಿ ಮಾತು ಮಾತಿಗೂ ಟ್ವೀಟ್ ಮಾಡುತ್ತಿದ್ದವರು ಈಗ ದೊಡ್ಡ ಆರ್ಥಿಕ ಕುಸಿತ ಉಂಟಾದರು ಏಕೆ ಮಾತಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

ಶ್ರೀನಿವಾಸ ಕಾರ್ಕಾಳರವರು ‘ವಿದೇಶದಲ್ಲಿರುವ ಭಾರತೀಯ “ದೇಶಭಕ್ತ” ರಿಗೆ ಖುಷಿಯೋ ಖುಷಿ. 1 ಡಾಲರ್ ಗೆ 72 ರುಪಾಯಿ ಸಿಗುತ್ತೆ.’ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಮೂರು ದಿನಗಳ ಹಿಂದೆ ತಾನೇ ಕರ್ನಾಟಕ ಬಿಜೆಪಿಯ ರಾಜ್ಯಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲು ಆಯ್ಕೆಯಾಗಿದ್ದಾರೆ. ಅವರು ಅಧ್ಯಕ್ಷರಾದೊಡನೆ ಅವರು ಹಿಂದೆ ಚುನಾವಣಾ ಪ್ರಚಾರವೊಂದರಲ್ಲಿ ಮಾಡಿದ್ದ ಭಾಷಣವನ್ನು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಳ್ಳಲಾಗಿದೆ.

ಅದರಲ್ಲಿ ಅವರು”ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಡಾಲರ್ ಎದುರು ರೂಪಾಯಿಯನ್ನು 15 ರೂ ಗೆ ತರುತ್ತೇವೆ ಎಂದು ಜೋರಾಗಿ ಭಾಷಣ ಮಾಡಿದ್ದರು. ಒಂದಲ್ಲ ಎರಡು ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೂ ಏಕೆ ರೂಪಾಯಿ ಮೌಲ್ಯ ಕುಸಿಯುತ್ತಲೇ ಇದೆ ಎಂದು ನೆಟ್ಟಿಗರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. gauri!!!

    Thanks for info, around the world recession will start now, because every one is taking care of our planet.

    All manufacturer of diesel vehicle is stoped.
    MSME & SMALL SCALE BUSINESSES WILL IMPACT NOT ONLY IN INDIA….

    so, flectuation will be there..

    Not only considering value of money ..

    Please consider the population and consumption also..

LEAVE A REPLY

Please enter your comment!
Please enter your name here

- Advertisment -

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...

ಮಹಾರಾಷ್ಟ್ರ| 10 ದಿನಗಳ ಮಗುವಿನೊಂದಿಗೆ 12 ನೇ ತರಗತಿ ಪರೀಕ್ಷೆ ಬರೆದ ಮಹಿಳೆ

ಮಹಾರಾಷ್ಟ್ರದ ನಾಂದೇಡ್ ನಗರದಲ್ಲಿ 12 ನೇ ತರಗತಿಯ ಮಹಾರಾಷ್ಟ್ರ ಬೋರ್ಡ್ ಪರೀಕ್ಷೆಗೆ ಹಾಜರಾದ ಮಹಿಳೆಯೊಬ್ಬರು ತನ್ನ 10 ದಿನಗಳ ಮಗುವನ್ನು ಪರೀಕ್ಷಾ ಕೇಂದ್ರಕ್ಕೆ ಕರೆತಂದಿದ್ದಾರೆ. ಮಹಿಳೆ ಪರೀಕ್ಷೆ ಬರೆಯುವ ಕಾರಣಕ್ಕೆ ಕೇಂದ್ರದ ವಿಶೇಷ...

ಒಡಿಶಾ| ದಲಿತರು ವಾಸಿಸುವ ಪ್ರದೇಶಕ್ಕೆ ಕುಡಿಯುವ ನೀರು-ವಿದ್ಯುತ್ ಸಂಪರ್ಕ ಕಡಿತ

ಒಡಿಶಾದ ಬಲಂಗೀರ್ ಜಿಲ್ಲೆಯಲ್ಲಿ ಜಾತಿ ಆಧಾರಿತ ತಾರತಮ್ಯವಿದೆ ಎಂದು ಸ್ಥಳೀಯ ನಿವಾಸಿಗಳು ಆರೋಪಿಸಿದ್ದಾರೆ. ಆದರೆ, ಗ್ರಾಮದ ಅಧಿಕಾರಿಯೊಬ್ಬರು ಈ ಅಡಚಣೆಗೆ ಸ್ಥಳೀಯ ಕಲಹ ಕಾರಣ ಎಂದು ಆರೋಪಿಸಿದ್ದಾರೆ. ಜಿಲ್ಲೆಯ ತುರೆಕೆಲಾ ಬ್ಲಾಕ್‌ನ ಡುಮೆರ್ಚುವಾನ್ ಗ್ರಾಮದಲ್ಲಿ...

ತಮಿಳುನಾಡು ವಿಧಾನಸಭಾ ಚುನಾವಣೆ: ಡಿಎಂಕೆ ನೇತೃತ್ವದ ಮೈತ್ರಿಕೂಟಕ್ಕೆ ಡಿಎಂಡಿಕೆ ಸೇರ್ಪಡೆ

ಚೆನ್ನೈ: ದಿವಂಗತ ನಟ ವಿಜಯಕಾಂತ್ ಅವರ ದೇಶೀಯ ಮುರ್ಪೋಕ್ಕು ದ್ರಾವಿಡ ಕಳಗಂ (ಡಿಎಂಡಿಕೆ) ಗುರುವಾರ ದ್ರಾವಿಡ ಮುನ್ನೇತ್ರ ಕಳಗಂ ನೇತೃತ್ವದ ಜಾತ್ಯತೀತ ಪ್ರಗತಿಪರ ಒಕ್ಕೂಟ (ಎಸ್‌ಪಿಎ)ವನ್ನು 21ವರ್ಷಗಳ ಅಸ್ತಿತ್ವದ ನಂತರ ಮೊದಲ ಬಾರಿಗೆ...

ಟ್ರಕ್ ಚಾಲಕ ರಸ್ತೆಯಲ್ಲಿ ನಮಾಝ್ ಮಾಡಿದ್ದರಿಂದ ಟ್ರಾಫಿಕ್ ಜಾಮ್ ಎಂದು ಸುಳ್ಳು ಸುದ್ದಿ ಪ್ರಸಾರ : ಝೀ ನ್ಯೂಸ್‌ಗೆ 1 ಲಕ್ಷ ರೂ. ದಂಡ

ಮುಸ್ಲಿಂ ವ್ಯಕ್ತಿಯೊಬ್ಬರು ನಮಾಝ್ ಮಾಡಲು ಹೆದ್ದಾರಿ ಮಧ್ಯೆ ಟ್ರಕ್‌ ನಿಲ್ಲಿಸಿದ್ದರಿಂದ ಟ್ರಾಫಿಕ್ ಜಾಮ್‌ ಉಂಟಾಗಿದೆ ಎಂದು ಸುಳ್ಳು ಸುದ್ದಿ ಹಬ್ಬಿದ ಝೀ ನ್ಯೂಸ್‌ ಚಾನೆಲ್‌ಗೆ ಸುದ್ದಿ ಪ್ರಸಾರಕರು ಮತ್ತು ಡಿಜಿಟಲ್ ಮಾನದಂಡಗಳ ಪ್ರಾಧಿಕಾರ(ಎನ್‌ಬಿಡಿಎಸ್‌ಎ)...

ಗುಜರಾತ್‌| ಜಾತಿ ಆಧಾರಿತ ಜಗಳದಲ್ಲಿ ದಲಿತ ಯುವಕನ ಮೇಲೆ ಚಾಕುವಿನಿಂದ ದಾಳಿ

ಶನಿವಾರ ತಡರಾತ್ರಿ ರಾಣಿಪ್‌ನಲ್ಲಿ ನಡೆದ ಸಣ್ಣ ಭಿನ್ನಾಭಿಪ್ರಾಯವೊಂದು ಹಿಂಸಾಚಾರಕ್ಕೆ ತಿರುಗಿದ್ದು, 25 ವರ್ಷದ ದಲಿತ ಯುವಕ ಸಾಹಿಲ್ ವಘೇಲಾ ಮೇಲೆ ಚಾಕುವಿನಿಂದ ಹಲ್ಲೆ ನಡೆಸಲಾಗಿದೆ. ಯುವಕ ಗಂಭೀರವಾಗಿ ಗಾಯಗೊಂಡಿದ್ದು, ಘಟನೆಯು ಈ ಪ್ರದೇಶದಲ್ಲಿ...