Homeಎಕಾನಮಿಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ...

ಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ ಟ್ರೋಲ್ ಮಾಡಿದ ನೆಟ್ಟಿಗರು

- Advertisement -
- Advertisement -

ತೀವ್ರ ಆರ್ಥಿಕ ಕುಸಿತದ ಬೆನ್ನಲ್ಲೇ ಡಾಲರ್ ಎದುರು ರೂಪಾಯಿ ಮೌಲ್ಯವು ಮತ್ತಷ್ಟು ಕುಸಿಸಿದೆ. ಸದ್ಯಕ್ಕೆ 1 ಡಾಲರ್ ಗೆ 71.65 ರೂಗಳು ಇದ್ದು ಬೆಳಿಗ್ಗೆ ಇದು 72 ರೂ ಗಳಿಗೆ ತಲುಪಿತ್ತು. ಇದೇ ವಿಚಾರ ಇಟ್ಟುಕೊಂಡು ನೆಟ್ಟಿಗರು ಟ್ರೋಲ್ ಆರಂಭಿಸಿದ್ದಾರೆ.

“ಡಾಲರ್ ಎದುರು ರುಪಾಯಿ 60 ರೂಗೆ ತಲುಪಿದೆ. ಇದು ಆರ್ಥಿಕ ಕುಸಿತದ ಸಂಕೇತ. ಆದರೂ ಏನೂ ಆಗಿಲ್ಲವೆನ್ನುವಂತೆ ಸರ್ಕಾರ ಸುಮ್ಮನೆ ಕುಳಿತಿದೆ” ಎಂದು ಲೇಖಕ ಚೇತನ್ ಭಗತ್ 2013ರ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಟ್ವೀಟ್ ಮಾಡಿ ಟೀಕಿಸಿದ್ದರು.ಈಗ 71 ರೂ ದಾಟಿದ ಹಿನ್ನೆಲೆಯಲ್ಲಿ ಆ ಟ್ವೀಟ್ ನ ಸ್ಕ್ರೀನ್ ಶಾಟ್ ಅನ್ನು ಪೋಸ್ಟ್ ಮಾಡಿ ಲೇವಡಿ ಮಾಡಿದ್ದಾರೆ. ಈಗ್ಯಾಕೆ ಚೇತನ್ ಭಗತ್ ಬಾಯಿ ಬಿಡುತ್ತಿಲ್ಲ ಎಂದು ಛೇಡಿಸಿದ್ದಾರೆ.

ಕಿರಣ್ ಬೇಡಿಯವರು ಸಹ 2013ರಲ್ಲಿಯೇ ಡಾಲರ್ ಎದುರು ರೂಪಾಯಿ ಕುಸಿತವನ್ನು ಒಂದು ಪದ್ಯದ ಮೂಲಕ ವ್ಯಂಗ್ಯ ಮಾಡಿದ್ದರು. “ಡಾಲರ್ ಎಸ್ಕಲೇಟರ್ ನಲ್ಲಿದೆ, ರುಪಾಯಿ ವೆಂಟಿಲೇಟರ್ ನಲ್ಲಿದೆ. ಫೈಲುಗಳು ಲಾಕರ್ ನಲ್ಲಿವೆ, ಮಾಧ್ಯಮಗಳು ಶಾಕ್ ಆಗಿವೆ, ಕೆಲವು ವ್ಯವಹಾರಕ್ಕೆ ಹೋಗವು ಬಂಕರ್ ಗಳು ಹೊಂದಿಕೊಂಡಿವೆ ಎನ್ನುವ ಅರ್ಥದಲ್ಲಿ ಬರೆದಿದ್ದರು.

ಆದರೆ ಈಗ ಕಿರಣ್ ಬೇಡಿಯವರು ಬಿಜೆಪಿ ಪಕ್ಷದಲ್ಲಿದ್ದು ರುಪಾಯಿ 72 ರೂ ಗೆ ಕುಸಿದರೂ ಉಸಿರೆ ಎತ್ತುತ್ತಿಲ್ಲ ಏಕೆ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಮುಖ್ಯವಾಗಿ ಈ ಇಬ್ಬರು ಸೆಲೆಬ್ರಟಿಗಳು ಸಹ ಬಿಜೆಪಿಯ ಬೆಂಬಲಿಗರಾಗಿದ್ದು ಯುಪಿಎ ಆಡಳಿತದ ಕಾಲಾವಧಿಯಲ್ಲಿ ಮಾತು ಮಾತಿಗೂ ಟ್ವೀಟ್ ಮಾಡುತ್ತಿದ್ದವರು ಈಗ ದೊಡ್ಡ ಆರ್ಥಿಕ ಕುಸಿತ ಉಂಟಾದರು ಏಕೆ ಮಾತಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

ಶ್ರೀನಿವಾಸ ಕಾರ್ಕಾಳರವರು ‘ವಿದೇಶದಲ್ಲಿರುವ ಭಾರತೀಯ “ದೇಶಭಕ್ತ” ರಿಗೆ ಖುಷಿಯೋ ಖುಷಿ. 1 ಡಾಲರ್ ಗೆ 72 ರುಪಾಯಿ ಸಿಗುತ್ತೆ.’ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಮೂರು ದಿನಗಳ ಹಿಂದೆ ತಾನೇ ಕರ್ನಾಟಕ ಬಿಜೆಪಿಯ ರಾಜ್ಯಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲು ಆಯ್ಕೆಯಾಗಿದ್ದಾರೆ. ಅವರು ಅಧ್ಯಕ್ಷರಾದೊಡನೆ ಅವರು ಹಿಂದೆ ಚುನಾವಣಾ ಪ್ರಚಾರವೊಂದರಲ್ಲಿ ಮಾಡಿದ್ದ ಭಾಷಣವನ್ನು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಳ್ಳಲಾಗಿದೆ.

ಅದರಲ್ಲಿ ಅವರು”ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಡಾಲರ್ ಎದುರು ರೂಪಾಯಿಯನ್ನು 15 ರೂ ಗೆ ತರುತ್ತೇವೆ ಎಂದು ಜೋರಾಗಿ ಭಾಷಣ ಮಾಡಿದ್ದರು. ಒಂದಲ್ಲ ಎರಡು ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೂ ಏಕೆ ರೂಪಾಯಿ ಮೌಲ್ಯ ಕುಸಿಯುತ್ತಲೇ ಇದೆ ಎಂದು ನೆಟ್ಟಿಗರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. gauri!!!

    Thanks for info, around the world recession will start now, because every one is taking care of our planet.

    All manufacturer of diesel vehicle is stoped.
    MSME & SMALL SCALE BUSINESSES WILL IMPACT NOT ONLY IN INDIA….

    so, flectuation will be there..

    Not only considering value of money ..

    Please consider the population and consumption also..

LEAVE A REPLY

Please enter your comment!
Please enter your name here

- Advertisment -

‘ಪೊಲೀಸರನ್ನು ನಿಯಂತ್ರಿಸದಿದ್ದರೆ ಜರ್ಮನಿಯ ನಾಜಿಗಳಂತೆ ಆಗಬಹುದು’: ದಲಿತ ವ್ಯಕ್ತಿಯ ಮೇಲಿನ ದೌರ್ಜನ್ಯ ಪ್ರಕರಣದಲ್ಲಿ ಪಾಟ್ನಾ ಹೈಕೋರ್ಟ್ ಕಳವಳ

ದಲಿತ ವ್ಯಕ್ತಿಯೊಬ್ಬರ ಜಾತಿ ತಿಳಿದ ನಂತರ ಅವರ ಮೇಲೆ ಕ್ರೂರವಾಗಿ ಹಲ್ಲೆ ನಡೆಸಿದ ಆರೋಪ ಎದುರಿಸುತ್ತಿರುವ ಬಿಹಾರದ ಮಾಜಿ ಪೊಲೀಸ್ ಅಧಿಕಾರಿಯ ವಿರುದ್ಧ ತಕ್ಷಣವೇ ಎಫ್‌ಐಆರ್ (FIR) ದಾಖಲಿಸುವಂತೆ ಪಾಟ್ನಾ ಹೈಕೋರ್ಟ್ ನಿರ್ದೇಶಿಸಿದೆ....

“ಎಷ್ಟೊಂದು ದುರಹಂಕಾರ!”: ಜೆ.ಪಿ.ನಡ್ಡಾ ಹೇಳಿಕೆಗೆ ಕಪಿಲ್ ಸಿಬಲ್ ತೀವ್ರ ಆಕ್ಷೇಪ; ಪ್ರತಿಭಟನಾನಿರತ ಸಿಜೆಪಿ ಬೆಂಬಲಿಸಿ ವೀಡಿಯೋ ಸಂದೇಶ

ಪರೀಕ್ಷಾ ಅಕ್ರಮಗಳನ್ನು ಖಂಡಿಸಿ ಕ್ರಾಂತಿಕಾರಿ ಜಿರಳೆ ಜನತಾ ಪಕ್ಷ (ಸಿಜೆಪಿ) ನಡೆಸುತ್ತಿರುವ ವಿದ್ಯಾರ್ಥಿ ಪ್ರತಿಭಟನೆಯ ವಿಚಾರದಲ್ಲಿ ಕೇಂದ್ರ ಸರ್ಕಾರದ ನಡೆಗೆ ದೇಶಾದ್ಯಂತ ತೀವ್ರ ಆಕ್ರೋಶ ವ್ಯಕ್ತವಾಗುತ್ತಿದೆ. ಈ ನಡುವೆ ಕೇಂದ್ರ ಸಚಿವ ಜೆ.ಪಿ....

ವಿದ್ಯಾರ್ಥಿಗಳ ಮೇಲೆ ಪೊಲೀಸ್ ದೌರ್ಜನ್ಯ: ಮೋದಿ-ಅಮಿತ್ ಶಾ ರಾಜೀನಾಮೆಗೆ ರಾಹುಲ್ ಗಾಂಧಿ ಆಗ್ರಹ

ನೀಟ್‌ ಪ್ರಶ್ನೆ ಪತ್ರಿಕೆ ಸೋರಿಕೆ ಹೊಣೆ ಹೊತ್ತು ಕೇಂದ್ರ ಶಿಕ್ಷಣ ಸಚಿವ ರಾಜೀನಾಮೆ ನೀಡಬೇಕು ಎಂದು ಆಗ್ರಹಿಸಿ 'ಸಂಸತ್ ಚಲೋ' ಹಮ್ಮಿಕೊಂಡಿದ್ದ ವಿದ್ಯಾರ್ಥಿಗಳ ಮೇಲೆ ನಡೆದ ಪೊಲೀಸ್ ದೌರ್ಜನ್ಯವನ್ನು ಕಾಂಗ್ರೆಸ್ ನಾಯಕ ರಾಹುಲ್...

ಕೇಂದ್ರ ಸಚಿವ ಜೆ.ಪಿ.ನಡ್ಡಾ ಅವರನ್ನು ಭೇಟಿಯಾದ ಸಿಜೆಪಿ ನಿಯೋಗ; ಮನವಿ ಪತ್ರ ಸಲ್ಲಿಕೆ

ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್‌ ರಾಜೀನಾಮೆಗೆ ಆಗ್ರಹಿಸಿ ನವದೆಹಲಿಯಲ್ಲಿ ಪ್ರತಿಭಟನೆ ತೀವ್ರಗೊಂಡಿರುವ ಬೆನ್ನಲ್ಲೇ ಇಂದು ಕೇಂದ್ರ ಸಚಿವ ಜೆಪಿ ನಡ್ಡಾ ಅವರನ್ನು ಸಿಜೆಪಿ ಸದಸ್ಯರಾದ ಸೌರವ್ ದಾಸ್ ಮತ್ತು ಅಶುತೋಷ್ ರಂಕಾ...

‘ಸಂಸತ್ ಚಲೋ’: ‘ಸೋನಮ್ ವಾಂಗ್ಚುಕ್ ಪತ್ನಿ ಮೇಲೆ ದೆಹಲಿ ಪೊಲೀಸರಿಂದ ಹಲ್ಲೆ’: ವಿದ್ಯಾರ್ಥಿಗಳ ಮೇಲೂ ಲಾಠಿ ಚಾರ್ಜ್  

ನವದೆಹಲಿ: ರಾಷ್ಟ್ರ ರಾಜಧಾನಿಯಲ್ಲಿ ಆಯೋಜಿಸಲಾಗಿದ್ದ ‘ಸಂಸದ್ ಚಲೋ’ ಮೆರವಣಿಗೆಯ ವೇಳೆ ಶಿಕ್ಷಣ ತಜ್ಞ ಹಾಗೂ ಲಡಾಖ್ ಹೋರಾಟಗಾರ ಸೋನಮ್ ವಾಂಗ್ಚುಕ್ ಅವರ ಪತ್ನಿ ಗೀತಾಂಜಲಿ ಜೆ. ಆಂಗ್ಮೋ ಸೇರಿದಂತೆ ಹಲವಾರು ಪ್ರತಿಭಟನಾಕಾರರ ಮೇಲೆ...

ಕನಿಷ್ಠ 20 ಸಾವಿರ ‘ಕಾಕ್ರೋಚ್‌’ಗಳಿಂದ ಸಂಸತ್ತಿಗೆ ಮೆರವಣಿಗೆ; ವಿದ್ಯಾರ್ಥಿಗಳ ಮೇಲೆ ಪೊಲೀಸರಿಂದ ಲಾಠಿಚಾರ್ಜ್ – ಅಶ್ರುವಾಯು

ಧರ್ಮೇಂದ್ರ ಪ್ರಧಾನ್ ರಾಜೀನಾಮಗೆ ಒತ್ತಾಯಿಸಿ ಮುಂಗಾರು ಅಧಿವೇಶನದ ಮೊದಲ ದಿನದಂದು ಸಂಸತ್ತಿಗೆ ಮೆರವಣಿಗೆ ನಡೆಸಲು ದೆಹಲಿಯಲ್ಲಿ ಜಮಾಯಿಸಿದ್ದ ಕಾಕ್ರೋಚ್ ಜನತಾ ಪಕ್ಷದ (ಸಿಜೆಪಿ) ಸಾವಿರಾರು ಬೆಂಬಲಿಗರನ್ನು ಚದುರಿಸಲು ದೆಹಲಿ ಪೊಳಿಸರು ಅಶ್ರುವಾಯು ಶೆಲ್‌ಗಳನ್ನು...

ಸಿಜೆಪಿ ಪ್ರತಿಭಟನೆಗೆ ನಡುಗಿದ ಕೇಂದ್ರ ಸರ್ಕಾರ; ತರಾತುರಿಯಲ್ಲಿ ಸಂಸತ್ತಿನ ಗೇಟ್ ಮುಚ್ಚಿದ ಭದ್ರತಾ ಸಿಬ್ಬಂದಿ

ನೀಟ್‌ ಪರೀಕ್ಷೆಯಲ್ಲಿ ನಡೆದಿದೆ ಎನ್ನಲಾದ ಅಕ್ರಮಗಳನ್ನು ವಿರೋಧಿಸಿ, ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ರಾಜೀನಾಮೆಗೆ ಒತ್ತಾಯಿಸಿ ಇಂದು ಕಾಕ್ರೋಚ್ ಜನತಾ ಪಕ್ಷ (ಸಿಜೆಪಿ) ಹಮ್ಮಿಕೊಂಡಿರುವ ಸಂಸತ್ ಮೆರವಣಿಗೆಗೆ ಕೇಂದ್ರ ಸರ್ಕಾರ...

ಹಕ್ಕುಗಳ ಕಾಯ್ದೆಗೆ 7 ವರ್ಷ: ಕಾಗದದಲ್ಲಷ್ಟೇ ಸಮಾನತೆ, ಉದ್ಯೋಗ ಸಿಗದೆ ಬೀದಿಗೆ ತಳ್ಳಲ್ಪಡುತ್ತಿರುವ ಟ್ರಾನ್ಸ್‌ಜೆಂಡರ್‌ ಸಮುದಾಯ

ಬೆಂಗಳೂರು: ರಾಷ್ಟ್ರೀಯ ಮಟ್ಟದಲ್ಲಿ ‘ಟ್ರಾನ್ಸ್‌ಜೆಂಡರ್ ವ್ಯಕ್ತಿಗಳ (ಹಕ್ಕುಗಳ ರಕ್ಷಣೆ) ಕಾಯ್ದೆ-2019’ ಜಾರಿಗೆ ಬಂದು ಏಳು ವರ್ಷಗಳು ಕಳೆದಿದ್ದರೂ, ಸಮುದಾಯದ ಆರ್ಥಿಕ ಸಬಲೀಕರಣ ಇನ್ನೂ ಕನಸಾಗಿಯೇ ಉಳಿದಿದೆ. ಬೆಂಗಳೂರಿನ ಸಾಮಾಜಿಕ ಮತ್ತು ಆರ್ಥಿಕ ಬದಲಾವಣೆ...

ಸಂಸತ್‌ ಚಲೋ: ಕಾಕ್ರೋಚ್ ಜನತಾ ಪಾರ್ಟಿ ಪ್ರತಿಭಟನೆಗೆ ಭಾರೀ ಬೆಂಬಲ

ದೇಶಾದ್ಯಂತ ಭಾರಿ ಸಂಚಲನ ಸೃಷ್ಟಿಸಿರುವ ನೀಟ್‌ (NEET) ಪ್ರಶ್ನೆಪತ್ರಿಕೆ ಸೋರಿಕೆ, ಸಾಲು ಸಾಲು ವಿದ್ಯಾರ್ಥಿಗಳ ಆತ್ಮಹತ್ಯೆ ಹಾಗೂ ದೇಶದ ಪರೀಕ್ಷಾ ವ್ಯವಸ್ಥೆಯ ಸರಣಿ ವೈಫಲ್ಯಗಳನ್ನು ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ (CJP) ಆಯೋಜಿಸಿರುವ...

ಡಿಜಿಟಲೀಕರಣಗೊಂಡ 2002ರ ಮತದಾರರ ಪಟ್ಟಿಯಿಂದ ಬೆಂಗಳೂರಿನ ಮತಗಟ್ಟೆಗಳೇ ಮಾಯ: ಮಾಹಿತಿ ಸಿಗದೆ ಆತಂಕದಲ್ಲಿ ನೂರಾರು ಮತದಾರರು

ಬೆಂಗಳೂರು: ಸಿಲಿಕಾನ್ ಸಿಟಿ ಬೆಂಗಳೂರಿನ ಹಲವು ಭಾಗಗಳಲ್ಲಿ 2002ರ ಡಿಜಿಟಲೀಕರಣಗೊಂಡ ಮತದಾರರ ಪಟ್ಟಿಯಿಂದ ಇಡೀ ಮತಗಟ್ಟೆಗಳೇ ಕಾಣೆಯಾಗಿರುವ ಗಂಭೀರ ಪ್ರಕರಣವೊಂದು ಬೆಳಕಿಗೆ ಬಂದಿದೆ. ಇದರಿಂದಾಗಿ ನೂರಾರು ಮತದಾರರು ಆತಂಕ ಮತ್ತು ಗೊಂದಲಕ್ಕೊಳಗಾಗಿದ್ದಾರೆ ಎಂದು...