Homeಎಕಾನಮಿಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ...

ಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ ಟ್ರೋಲ್ ಮಾಡಿದ ನೆಟ್ಟಿಗರು

- Advertisement -
- Advertisement -

ತೀವ್ರ ಆರ್ಥಿಕ ಕುಸಿತದ ಬೆನ್ನಲ್ಲೇ ಡಾಲರ್ ಎದುರು ರೂಪಾಯಿ ಮೌಲ್ಯವು ಮತ್ತಷ್ಟು ಕುಸಿಸಿದೆ. ಸದ್ಯಕ್ಕೆ 1 ಡಾಲರ್ ಗೆ 71.65 ರೂಗಳು ಇದ್ದು ಬೆಳಿಗ್ಗೆ ಇದು 72 ರೂ ಗಳಿಗೆ ತಲುಪಿತ್ತು. ಇದೇ ವಿಚಾರ ಇಟ್ಟುಕೊಂಡು ನೆಟ್ಟಿಗರು ಟ್ರೋಲ್ ಆರಂಭಿಸಿದ್ದಾರೆ.

“ಡಾಲರ್ ಎದುರು ರುಪಾಯಿ 60 ರೂಗೆ ತಲುಪಿದೆ. ಇದು ಆರ್ಥಿಕ ಕುಸಿತದ ಸಂಕೇತ. ಆದರೂ ಏನೂ ಆಗಿಲ್ಲವೆನ್ನುವಂತೆ ಸರ್ಕಾರ ಸುಮ್ಮನೆ ಕುಳಿತಿದೆ” ಎಂದು ಲೇಖಕ ಚೇತನ್ ಭಗತ್ 2013ರ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಟ್ವೀಟ್ ಮಾಡಿ ಟೀಕಿಸಿದ್ದರು.ಈಗ 71 ರೂ ದಾಟಿದ ಹಿನ್ನೆಲೆಯಲ್ಲಿ ಆ ಟ್ವೀಟ್ ನ ಸ್ಕ್ರೀನ್ ಶಾಟ್ ಅನ್ನು ಪೋಸ್ಟ್ ಮಾಡಿ ಲೇವಡಿ ಮಾಡಿದ್ದಾರೆ. ಈಗ್ಯಾಕೆ ಚೇತನ್ ಭಗತ್ ಬಾಯಿ ಬಿಡುತ್ತಿಲ್ಲ ಎಂದು ಛೇಡಿಸಿದ್ದಾರೆ.

ಕಿರಣ್ ಬೇಡಿಯವರು ಸಹ 2013ರಲ್ಲಿಯೇ ಡಾಲರ್ ಎದುರು ರೂಪಾಯಿ ಕುಸಿತವನ್ನು ಒಂದು ಪದ್ಯದ ಮೂಲಕ ವ್ಯಂಗ್ಯ ಮಾಡಿದ್ದರು. “ಡಾಲರ್ ಎಸ್ಕಲೇಟರ್ ನಲ್ಲಿದೆ, ರುಪಾಯಿ ವೆಂಟಿಲೇಟರ್ ನಲ್ಲಿದೆ. ಫೈಲುಗಳು ಲಾಕರ್ ನಲ್ಲಿವೆ, ಮಾಧ್ಯಮಗಳು ಶಾಕ್ ಆಗಿವೆ, ಕೆಲವು ವ್ಯವಹಾರಕ್ಕೆ ಹೋಗವು ಬಂಕರ್ ಗಳು ಹೊಂದಿಕೊಂಡಿವೆ ಎನ್ನುವ ಅರ್ಥದಲ್ಲಿ ಬರೆದಿದ್ದರು.

ಆದರೆ ಈಗ ಕಿರಣ್ ಬೇಡಿಯವರು ಬಿಜೆಪಿ ಪಕ್ಷದಲ್ಲಿದ್ದು ರುಪಾಯಿ 72 ರೂ ಗೆ ಕುಸಿದರೂ ಉಸಿರೆ ಎತ್ತುತ್ತಿಲ್ಲ ಏಕೆ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಮುಖ್ಯವಾಗಿ ಈ ಇಬ್ಬರು ಸೆಲೆಬ್ರಟಿಗಳು ಸಹ ಬಿಜೆಪಿಯ ಬೆಂಬಲಿಗರಾಗಿದ್ದು ಯುಪಿಎ ಆಡಳಿತದ ಕಾಲಾವಧಿಯಲ್ಲಿ ಮಾತು ಮಾತಿಗೂ ಟ್ವೀಟ್ ಮಾಡುತ್ತಿದ್ದವರು ಈಗ ದೊಡ್ಡ ಆರ್ಥಿಕ ಕುಸಿತ ಉಂಟಾದರು ಏಕೆ ಮಾತಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

ಶ್ರೀನಿವಾಸ ಕಾರ್ಕಾಳರವರು ‘ವಿದೇಶದಲ್ಲಿರುವ ಭಾರತೀಯ “ದೇಶಭಕ್ತ” ರಿಗೆ ಖುಷಿಯೋ ಖುಷಿ. 1 ಡಾಲರ್ ಗೆ 72 ರುಪಾಯಿ ಸಿಗುತ್ತೆ.’ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಮೂರು ದಿನಗಳ ಹಿಂದೆ ತಾನೇ ಕರ್ನಾಟಕ ಬಿಜೆಪಿಯ ರಾಜ್ಯಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲು ಆಯ್ಕೆಯಾಗಿದ್ದಾರೆ. ಅವರು ಅಧ್ಯಕ್ಷರಾದೊಡನೆ ಅವರು ಹಿಂದೆ ಚುನಾವಣಾ ಪ್ರಚಾರವೊಂದರಲ್ಲಿ ಮಾಡಿದ್ದ ಭಾಷಣವನ್ನು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಳ್ಳಲಾಗಿದೆ.

ಅದರಲ್ಲಿ ಅವರು”ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಡಾಲರ್ ಎದುರು ರೂಪಾಯಿಯನ್ನು 15 ರೂ ಗೆ ತರುತ್ತೇವೆ ಎಂದು ಜೋರಾಗಿ ಭಾಷಣ ಮಾಡಿದ್ದರು. ಒಂದಲ್ಲ ಎರಡು ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೂ ಏಕೆ ರೂಪಾಯಿ ಮೌಲ್ಯ ಕುಸಿಯುತ್ತಲೇ ಇದೆ ಎಂದು ನೆಟ್ಟಿಗರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. gauri!!!

    Thanks for info, around the world recession will start now, because every one is taking care of our planet.

    All manufacturer of diesel vehicle is stoped.
    MSME & SMALL SCALE BUSINESSES WILL IMPACT NOT ONLY IN INDIA….

    so, flectuation will be there..

    Not only considering value of money ..

    Please consider the population and consumption also..

LEAVE A REPLY

Please enter your comment!
Please enter your name here

- Advertisment -

ಶಾಲೆ, ಪೂಜಾ ಸ್ಥಳ, ಬಸ್ ನಿಲ್ದಾಣಗಳ ಬಳಿ ಇರುವ 717 ಮದ್ಯದಂಗಡಿಗಳನ್ನು ಮುಚ್ಚಲು ತಮಿಳುನಾಡು ಸಿಎಂ ಜೋಸೆಫ್ ವಿಜಯ್ ಆದೇಶ 

ಅಧಿಕಾರ ವಹಿಸಿಕೊಂಡ ನಂತರ ತಮ್ಮ ಮೊದಲ ಪ್ರಮುಖ ಆಡಳಿತಾತ್ಮಕ ನಿರ್ದೇಶನದಲ್ಲಿ, ಸಿ. ಜೋಸೆಫ್ ವಿಜಯ್ ಸೋಮವಾರ, ತಮಿಳುನಾಡು ಸರ್ಕಾರವು ಪೂಜಾ ಸ್ಥಳಗಳು, ಶಿಕ್ಷಣ ಸಂಸ್ಥೆಗಳು ಮತ್ತು ಬಸ್ ನಿಲ್ದಾಣಗಳಿಂದ 500 ಮೀಟರ್ ಒಳಗೆ...

FACT CHECK: ಭಾರತೀಯರು ಚಿನ್ನ ಖರೀದಿಸಬೇಡಿ ಎಂದು 1967ರಲ್ಲೇ ಇಂದಿರಾ ಗಾಂಧಿ ಹೇಳಿದ್ರಾ?

ಪ್ರಧಾನಿ ನರೇಂದ್ರ ಮೋದಿಯವರು ಇತ್ತೀಚೆಗೆ ತೆಲಂಗಾಣದ ಸಿಕಂದರಾಬಾದ್ ರ‍್ಯಾಲಿಯಲ್ಲಿ ಮಾತನಾಡುತ್ತಾ, ಆರ್ಥಿಕ ಬಿಕ್ಕಟ್ಟು ತಪ್ಪಿಸಲು "ಒಂದು ವರ್ಷ ಚಿನ್ನ ಖರೀದಿಸಬೇಡಿ" ಎಂದು ಜನರಲ್ಲಿ ಮನವಿ ಮಾಡಿದ್ದರು. ಇದರ ಬೆನ್ನಲ್ಲೇ, 1967ರಲ್ಲಿ ಅಂದಿನ ಪ್ರಧಾನಿ...

ಪಶ್ಚಿಮ ಬಂಗಾಳ| ಧ್ವನಿವರ್ಧಕಗಳ ನಿಯಂತ್ರಣಕ್ಕೆ ಆದೇಶಿಸಿದ ನೂತನ ಸಿಎಂ ಅಧಿಕಾರಿ; ಧಾರ್ಮಿಕ ಸಭೆ ನೆಪದಲ್ಲಿ ರಸ್ತೆ ತಡೆಗೆ ನಿಷೇಧ

ಪಶ್ಚಿಮ ಬಂಗಾಳದಲ್ಲಿ ಬಿಜೆಪಿ ನೇತೃತ್ವದ ಸರ್ಕಾರವು ಧಾರ್ಮಿಕ ಸ್ಥಳಗಳಲ್ಲಿ ಧ್ವನಿವರ್ಧಕಗಳ ಬಳಕೆಯನ್ನು ನಿಯಂತ್ರಿಸಲು ಮತ್ತು ಪ್ರಾರ್ಥನೆ ಅಥವಾ ಧಾರ್ಮಿಕ ಸಭೆ ನೆಪದಲ್ಲಿ ಸಾರ್ವಜನಿಕ ರಸ್ತೆಗಳನ್ನು ನಿರ್ಬಂಧಿಸದಂತೆ ನೋಡಿಕೊಳ್ಳಲು ಪೊಲೀಸ್ ಅಧಿಕಾರಿಗಳಿಗೆ ಹೊಸ ಸೂಚನೆಗಳನ್ನು...

ರಾಜಸ್ಥಾನದಲ್ಲಿ ನೀಟ್‌-ಯುಜಿ ಪ್ರಶ್ನೆ ಪತ್ರಿಕೆ ಸೋರಿಕೆ; ಸಿಬಿಐ ತನಿಖೆಗೆ ಆದೇಶಿಸಿದ ಸರ್ಕಾರ

ಮೇ 3 ರಂದು ನಡೆಸಲಾದ ನೀಟ್ (ಯುಜಿ) 2026 ಅನ್ನು ರದ್ದುಗೊಳಿಸುವುದಾಗಿ ರಾಷ್ಟ್ರೀಯ ಪರೀಕ್ಷಾ ಸಂಸ್ಥೆ (ಎನ್‌ಟಿಎ) ಮಂಗಳವಾರ (ಮೇ 12) ಘೋಷಿಸಿದೆ. ಪ್ರತ್ಯೇಕವಾಗಿ ತಿಳಿಸಲಾಗುವ ದಿನಾಂಕಗಳಲ್ಲಿ ಮರು ಪರೀಕ್ಷೆಯನ್ನು ನಡೆಸಲಾಗುವುದು, ಪರೀಕ್ಷೆಗೆ...

ಇತ್ಯರ್ಥವಾಗದ ಚುನಾವಣಾ ತಕರಾರು : ಮತ ಹಾಕಿದ ಜನರಿಗೆ ದಿನಕ್ಕೊಬ್ಬ ಶಾಸಕ

ರಾಜ್ಯದಲ್ಲಿ ಪ್ರಸ್ತುತ ಆಡಳಿತ ನಡೆಸುತ್ತಿರುವ ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಮೂರು ವರ್ಷಗಳನ್ನು ಪೂರೈಸಿದೆ. ಚುನಾವಣೆ ನಡೆಯಲು ಇನ್ನು ಎರಡು ವರ್ಷಗಳು ಬಾಕಿಯಿದೆ. ಅಂದರೆ, ಸರ್ಕಾರದ ಐದು ವರ್ಷಗಳ ಅವಧಿಯಲ್ಲಿ ಮುಕ್ಕಾಲು...

“ಸನಾತನವನ್ನು ನಿರ್ಮೂಲನೆ ಮಾಡಬೇಕು…”; ವಿಧಾನಸಭೆಯಲ್ಲೇ ತನ್ನ ಹಿಂದಿನ ಹೇಳಿಕೆ ಪುನರುಚ್ಚರಿಸಿದ ಉದಯನಿಧಿ ಸ್ಟಾಲಿನ್

ತಮಿಳುನಾಡು ವಿರೋಧ ಪಕ್ಷದ ನಾಯಕ ಮತ್ತು ಡಿಎಂಕೆ ನಾಯಕ ಉದಯನಿಧಿ ಸ್ಟಾಲಿನ್ ಮಂಗಳವಾರ ತಮಿಳುನಾಡು ವಿಧಾನಸಭೆಯಲ್ಲಿ ನಡೆದ ಅಧಿವೇಶನದಲ್ಲಿ, ಸನಾತನ ಧರ್ಮದ ನಿರ್ಮೂಲನೆಗೆ ಮತ್ತೊಮ್ಮೆ ಕರೆ ನೀಡಿದ್ದಾರೆ. ಸದನದಲ್ಲಿ ಮಾತನಾಡಿದ ಅವರು, "ಜನರನ್ನು ವಿಭಜಿಸುವ...

‘ಅಮೃತಕಾಲ’ದ ಸ್ವಪ್ನದಿಂದ ‘ಬಿಕ್ಕಟ್ಟಿನ ಕಾಲ’ಕ್ಕೆ: ಕಳಚಿಕೊಳ್ಳುತ್ತಿರುವ ಮೋದಿಯವರ ‘ಆತ್ಮನಿರ್ಭರ’ ಮುಖವಾಡ 

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗೂ ಮುನ್ನ ದೇಶವು ಎಲ್‌ಪಿಜಿ ಸಿಲಿಂಡರ್‌ಗಳ ಕೊರತೆಯಿಂದ ಬಳಲುತ್ತಿದ್ದಾಗ, ಬಿಜೆಪಿ ನಾಯಕರು ಮತ್ತು ಕೇಂದ್ರ ಸರ್ಕಾರದ ಮಂತ್ರಿಗಳು ಮೋದಿಯವರ ‘ದಯೆ’ಯಿಂದ ಭಾರತಕ್ಕೆ ಯಾವುದೇ...

ಪಶ್ಚಿಮ ಬಂಗಾಳ| ಚುನಾವಣಾ ಫಲಿತಾಂಶದ ಬಳಿಕ ಮುಸ್ಲಿಂ ಸಮುದಾಯದ ಮನೆ- ಅಂಗಡಿಗಳ ಮೇಲೆ ದಾಳಿ: ಎಪಿಸಿಆರ್

ಪಶ್ಚಿಮ ಬಂಗಾಳದ ಇತ್ತೀಚಿನ ಚುನಾವಣಾ ಫಲಿತಾಂಶದ ಬಳಿಕ ಭಾರತೀಯ ಜನತಾ ಪಕ್ಷದ ಸದಸ್ಯರು ಸರಣಿ ಹಿಂಸಾತ್ಮಕ ಘಟನೆಗಳನ್ನು ನಡೆಸಿದ್ದಾರೆ ಎಂದು ನಾಗರಿಕ ಹಕ್ಕುಗಳ ರಕ್ಷಣಾ ಸಂಘ (ಎಪಿಸಿಆರ್) ದಾಖಲಿಸಿದೆ. ವಿಶೇಷವಾಗಿ, ಮುಸ್ಲಿಮರ ವಿರುದ್ಧ...

ದುಬಾರಿ ರ‍್ಯಾಲಿ, ರೋಡ್ ಶೋ ನಡೆಸುತ್ತಾ ದೇಶದ ಜನರಿಗೆ ಮಿತವ್ಯಯದ ಸಲಹೆ ನೀಡಿದ ಪ್ರಧಾನಿ ಮೋದಿ

ನಾಲ್ಕು ರಾಜ್ಯಗಳು ಮತ್ತು ಒಂದು ಕೇಂದ್ರಾಡಳಿತ ಪ್ರದೇಶದ ವಿಧಾನಸಭೆ ಚುನಾವಣೆಗಳು ಪೂರ್ಣಗೊಂಡ ಬಳಿಕ, ಮೇ 10ರಂದು ಪ್ರಧಾನಿ ನರೇಂದ್ರ ಮೋದಿಯವರು ದೇಶದ ಜನರಿಗೆ ಕೆಲವು ಸಲಹೆಗಳನ್ನು ನೀಡಿದ್ದು, ಕೋವಿಡ್ ಸಂದರ್ಭದ ಮಿತಿಗಳನ್ನು ಹಾಕಿಕೊಳ್ಳುವಂತೆ...

ಮೇ 15 ರಂದು ರಾಷ್ಟ್ರವ್ಯಾಪಿ ಮನರೇಗಾ ಕಾರ್ಮಿಕರ ಮುಷ್ಕರ; ದೇಶದಾದ್ಯಂತ ಕಾರ್ಮಿಕ ಸಂಘಟನೆಗಳ ಬೆಂಬಲ

ವಿಬಿ ಜಿರಾಮ್‌ (ಜಿ) ಕಾಯ್ದೆಯನ್ನು ಹಿಂಪಡೆಯುವ ಜೊತೆಗೆ ಗ್ರಾಮೀಣ ಉದ್ಯೋಗ ಯೋಜನೆಯಡಿಯಲ್ಲಿ ಬಲವಾದ ಉದ್ಯೋಗ ಖಾತರಿಗಳನ್ನು ನೀಡುವಂತೆ ಒತ್ತಾಯಿಸಿ ಕೃಷಿ ಮತ್ತು ಗ್ರಾಮೀಣ ಕಾರ್ಮಿಕರ ಸಂಘಗಳ ಜಂಟಿ ವೇದಿಕೆ ಮತ್ತು ಮನರೇಗಾ ಸಂಘರ್ಷ...