Homeಎಕಾನಮಿಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ...

ಡಾಲರ್ ಎದುರು ರೂಪಾಯಿ ಕುಸಿತ: ಚೇತನ್ ಭಗತ್, ಕಿರಣ್ ಬೇಡಿಯ ಹಳೆಯ ಟ್ವೀಟ್ ಗಳನ್ನು ಹಾಕಿ ಟ್ರೋಲ್ ಮಾಡಿದ ನೆಟ್ಟಿಗರು

- Advertisement -
- Advertisement -

ತೀವ್ರ ಆರ್ಥಿಕ ಕುಸಿತದ ಬೆನ್ನಲ್ಲೇ ಡಾಲರ್ ಎದುರು ರೂಪಾಯಿ ಮೌಲ್ಯವು ಮತ್ತಷ್ಟು ಕುಸಿಸಿದೆ. ಸದ್ಯಕ್ಕೆ 1 ಡಾಲರ್ ಗೆ 71.65 ರೂಗಳು ಇದ್ದು ಬೆಳಿಗ್ಗೆ ಇದು 72 ರೂ ಗಳಿಗೆ ತಲುಪಿತ್ತು. ಇದೇ ವಿಚಾರ ಇಟ್ಟುಕೊಂಡು ನೆಟ್ಟಿಗರು ಟ್ರೋಲ್ ಆರಂಭಿಸಿದ್ದಾರೆ.

“ಡಾಲರ್ ಎದುರು ರುಪಾಯಿ 60 ರೂಗೆ ತಲುಪಿದೆ. ಇದು ಆರ್ಥಿಕ ಕುಸಿತದ ಸಂಕೇತ. ಆದರೂ ಏನೂ ಆಗಿಲ್ಲವೆನ್ನುವಂತೆ ಸರ್ಕಾರ ಸುಮ್ಮನೆ ಕುಳಿತಿದೆ” ಎಂದು ಲೇಖಕ ಚೇತನ್ ಭಗತ್ 2013ರ ಮನಮೋಹನ್ ಸಿಂಗ್ ಪ್ರಧಾನಿಯಾಗಿದ್ದಾಗ ಟ್ವೀಟ್ ಮಾಡಿ ಟೀಕಿಸಿದ್ದರು.ಈಗ 71 ರೂ ದಾಟಿದ ಹಿನ್ನೆಲೆಯಲ್ಲಿ ಆ ಟ್ವೀಟ್ ನ ಸ್ಕ್ರೀನ್ ಶಾಟ್ ಅನ್ನು ಪೋಸ್ಟ್ ಮಾಡಿ ಲೇವಡಿ ಮಾಡಿದ್ದಾರೆ. ಈಗ್ಯಾಕೆ ಚೇತನ್ ಭಗತ್ ಬಾಯಿ ಬಿಡುತ್ತಿಲ್ಲ ಎಂದು ಛೇಡಿಸಿದ್ದಾರೆ.

ಕಿರಣ್ ಬೇಡಿಯವರು ಸಹ 2013ರಲ್ಲಿಯೇ ಡಾಲರ್ ಎದುರು ರೂಪಾಯಿ ಕುಸಿತವನ್ನು ಒಂದು ಪದ್ಯದ ಮೂಲಕ ವ್ಯಂಗ್ಯ ಮಾಡಿದ್ದರು. “ಡಾಲರ್ ಎಸ್ಕಲೇಟರ್ ನಲ್ಲಿದೆ, ರುಪಾಯಿ ವೆಂಟಿಲೇಟರ್ ನಲ್ಲಿದೆ. ಫೈಲುಗಳು ಲಾಕರ್ ನಲ್ಲಿವೆ, ಮಾಧ್ಯಮಗಳು ಶಾಕ್ ಆಗಿವೆ, ಕೆಲವು ವ್ಯವಹಾರಕ್ಕೆ ಹೋಗವು ಬಂಕರ್ ಗಳು ಹೊಂದಿಕೊಂಡಿವೆ ಎನ್ನುವ ಅರ್ಥದಲ್ಲಿ ಬರೆದಿದ್ದರು.

ಆದರೆ ಈಗ ಕಿರಣ್ ಬೇಡಿಯವರು ಬಿಜೆಪಿ ಪಕ್ಷದಲ್ಲಿದ್ದು ರುಪಾಯಿ 72 ರೂ ಗೆ ಕುಸಿದರೂ ಉಸಿರೆ ಎತ್ತುತ್ತಿಲ್ಲ ಏಕೆ ಎಂದು ನೆಟ್ಟಿಗರು ವ್ಯಂಗ್ಯವಾಡಿದ್ದಾರೆ.

ಮುಖ್ಯವಾಗಿ ಈ ಇಬ್ಬರು ಸೆಲೆಬ್ರಟಿಗಳು ಸಹ ಬಿಜೆಪಿಯ ಬೆಂಬಲಿಗರಾಗಿದ್ದು ಯುಪಿಎ ಆಡಳಿತದ ಕಾಲಾವಧಿಯಲ್ಲಿ ಮಾತು ಮಾತಿಗೂ ಟ್ವೀಟ್ ಮಾಡುತ್ತಿದ್ದವರು ಈಗ ದೊಡ್ಡ ಆರ್ಥಿಕ ಕುಸಿತ ಉಂಟಾದರು ಏಕೆ ಮಾತಾಡುತ್ತಿಲ್ಲ ಎಂದು ಟೀಕಿಸಿದ್ದಾರೆ.

ಶ್ರೀನಿವಾಸ ಕಾರ್ಕಾಳರವರು ‘ವಿದೇಶದಲ್ಲಿರುವ ಭಾರತೀಯ “ದೇಶಭಕ್ತ” ರಿಗೆ ಖುಷಿಯೋ ಖುಷಿ. 1 ಡಾಲರ್ ಗೆ 72 ರುಪಾಯಿ ಸಿಗುತ್ತೆ.’ ಎಂದು ವ್ಯಂಗ್ಯವಾಡಿದ್ದಾರೆ.

ಇನ್ನು ಮೂರು ದಿನಗಳ ಹಿಂದೆ ತಾನೇ ಕರ್ನಾಟಕ ಬಿಜೆಪಿಯ ರಾಜ್ಯಧ್ಯಕ್ಷರಾಗಿ ಸಂಸದ ನಳೀನ್ ಕುಮಾರ್ ಕಟೀಲು ಆಯ್ಕೆಯಾಗಿದ್ದಾರೆ. ಅವರು ಅಧ್ಯಕ್ಷರಾದೊಡನೆ ಅವರು ಹಿಂದೆ ಚುನಾವಣಾ ಪ್ರಚಾರವೊಂದರಲ್ಲಿ ಮಾಡಿದ್ದ ಭಾಷಣವನ್ನು ಸಾಮಾಜಿಕ ಜಾಲತಾಣದಲ್ಲಿ ನೆನಪಿಸಿಕೊಳ್ಳಲಾಗಿದೆ.

ಅದರಲ್ಲಿ ಅವರು”ಬಿಜೆಪಿ ಅಧಿಕಾರಕ್ಕೆ ಬಂದರೆ ಒಂದು ಡಾಲರ್ ಎದುರು ರೂಪಾಯಿಯನ್ನು 15 ರೂ ಗೆ ತರುತ್ತೇವೆ ಎಂದು ಜೋರಾಗಿ ಭಾಷಣ ಮಾಡಿದ್ದರು. ಒಂದಲ್ಲ ಎರಡು ಬಾರಿ ಬಿಜೆಪಿ ಅಧಿಕಾರಕ್ಕೆ ಬಂದರೂ ಏಕೆ ರೂಪಾಯಿ ಮೌಲ್ಯ ಕುಸಿಯುತ್ತಲೇ ಇದೆ ಎಂದು ನೆಟ್ಟಿಗರು ಅವರನ್ನು ತರಾಟೆಗೆ ತೆಗೆದುಕೊಂಡಿದ್ದಾರೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

3 COMMENTS

  1. gauri!!!

    Thanks for info, around the world recession will start now, because every one is taking care of our planet.

    All manufacturer of diesel vehicle is stoped.
    MSME & SMALL SCALE BUSINESSES WILL IMPACT NOT ONLY IN INDIA….

    so, flectuation will be there..

    Not only considering value of money ..

    Please consider the population and consumption also..

LEAVE A REPLY

Please enter your comment!
Please enter your name here

- Advertisment -

ರೈಲುಗಳಲ್ಲಿ ಹಲಾಲ್ ಮಾಂಸ; ರೈಲ್ವೆಗೆ ಮಾನವ ಹಕ್ಕುಗಳ ಆಯೋಗ ನೋಟಿಸ್

ಭಾರತೀಯ ರೈಲ್ವೆ ತನ್ನ ರೈಲುಗಳಲ್ಲಿ ಹಲಾಲ್-ಸಂಸ್ಕರಿಸಿದ ಮಾಂಸವನ್ನು ಮಾತ್ರ ಪೂರೈಸುತ್ತದೆ ಎಂಬ ದೂರು ಬಂದ ನಂತರ ರಾಷ್ಟ್ರೀಯ ಮಾನವ ಹಕ್ಕುಗಳ ಆಯೋಗ (ಎನ್‌ಎಚ್‌ಆರ್‌ಸಿ) ರೈಲ್ವೆ ಮಂಡಳಿಗೆ ನೋಟಿಸ್ ನೀಡಿದೆ. "ಇದು ತಾರತಮ್ಯವನ್ನು ಸೃಷ್ಟಿಸುತ್ತದೆ,...

ಕರ್ತವ್ಯದಲ್ಲಿದ್ದಾಗ ಧಾರ್ಮಿಕ ಆಚರಣೆಗೆ ನಿರಾಕರಣೆ; ಹೈದರಾಬಾದ್ ಪೊಲೀಸರ ವಿರುದ್ಧ ಹಿಂದುತ್ವ ಗುಂಪಿನಿಂದ ಪ್ರತಿಭಟನೆ

ಕರ್ತವ್ಯದಲ್ಲಿರುವಾಗ ಸಬ್-ಇನ್ಸ್‌ಪೆಕ್ಟರ್ ಅವರಿಗೆ ಅಯ್ಯಪ್ಪ ದೀಕ್ಷಾ ಪದ್ಧತಿಗಳನ್ನು ಅನುಸರಿಸಲು ಅನುಮತಿ ನಿರಾಕರಿಸಿದ ಪೊಲೀಸ್ ಆಂತರಿಕ ಜ್ಞಾಪಕ ಪತ್ರವು ಸಾರ್ವಜನಿಕವಾಗಿ ಪ್ರಸಾರವಾದ ನಂತರ ಹೈದರಾಬಾದ್‌ನ ಆಗ್ನೇಯ ವಲಯ ಪೊಲೀಸರು ರಾಜಕೀಯ ವಿವಾದದ ಮಧ್ಯದಲ್ಲಿ ಸಿಲುಕಿದ್ದಾರೆ. ಮೇಲಧಿಕಾರಿಗಳು...

ಆನ್‌ಲೈನ್‌ ವಿಷಯಗಳ ನಿಯಂತ್ರಣ : ಸ್ವಾಯತ್ತ ಸಂಸ್ಥೆಯ ಅಗತ್ಯವಿದೆ ಎಂದ ಸುಪ್ರೀಂ ಕೋರ್ಟ್

ಆನ್‌ಲೈನ್ ಪ್ಲಾಟ್‌ಫಾರ್ಮ್‌ಗಳಲ್ಲಿ ಅಶ್ಲೀಲ, ಆಕ್ರಮಣಕಾರಿ ಅಥವಾ ಕಾನೂನುಬಾಹಿರ ವಿಷಯವನ್ನು ನಿಯಂತ್ರಿಸಲು 'ತಟಸ್ಥ, ಸ್ವತಂತ್ರ ಮತ್ತು ಸ್ವಾಯತ್ತ' ಸಂಸ್ಥೆಯ ಅಗತ್ಯವಿದೆ ಎಂದು ಸುಪ್ರೀಂ ಕೋರ್ಟ್ ಗುರುವಾರ (ನ. 27) ಒತ್ತಿ ಹೇಳಿದೆ. ಮಾಧ್ಯಮ ಸಂಸ್ಥೆಗಳು...

ಆರು ವರ್ಷದ ಬಾಲಕಿ ಮೇಲೆ ಅತ್ಯಾಚಾರ: ಕೃತ್ಯ ಎಸಗಿದವನನ್ನು ಗಲ್ಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಆಗ್ರಹ

ಮಧ್ಯಪ್ರದೇಶದ ಪಂಜ್ರಾ ಗ್ರಾಮದಲ್ಲಿ ಆರು ವರ್ಷದ ಬಾಲಕಿಯ ಮೇಲೆ ನಡೆದ ಅತ್ಯಾಚಾರ ಪ್ರಕರಣ ಪ್ರತಿಭಟನೆಗೆ ಕಾರಣವಾಯಿತು. ಕೃತ್ಯ ಎಸಗಿದ ಸಲ್ಮಾನ್‌ನನ್ನು ಗಲಗಲಿಗೇರಿಸುವಂತೆ ಹಿಂದೂ-ಮುಸ್ಲಿಂ ಸಮುದಾಯ ಒಗ್ಗಟ್ಟಾಗಿ ಆಗ್ರಹಿಸಿದೆ. ನ್ಯಾಯಕ್ಕಾಗಿ ಒತ್ತಾಯಿಸುತ್ತಿರುವ ಎರಡೂ ಸಮುದಾಯಗಳು ಕೃತ್ಯವನ್ನು...

ತೆಲಂಗಾಣ ಮಾಜಿ ಸರಪಂಚ್ ಭೀಕರ ಹತ್ಯೆ ಪ್ರಕರಣ; ಸುಪಾರಿ ಗ್ಯಾಂಗ್ ಬಂಧನ

ತೆಲಂಗಾಣ ರಾಜ್ಯದ ಗದ್ವಾಲ ಜಿಲ್ಲೆಯ ನಂದಿನ್ನಿ ಗ್ರಾಮದ ಮಾಜಿ ಸರಪಂಚ ಚಿನ್ನ ಭೀಮರಾಯ ಎಂಬುವವರನ್ನು ಕಳೆದ ಶುಕ್ರವಾರ ಮಧ್ಯಾಹ್ನ ಜಾಂಪಲ್ಲಿ ಗ್ರಾಮದ ಹತ್ತಿರ ದ್ವಿಚಕ್ರ ವಾಹನಕ್ಕೆ ಕಾರಿನಿಂದ ಡಿಕ್ಕಿ ಹೊಡೆದು ಕೊಲೆ ಮಾಡಲಾಗಿತ್ತು....

ಹಿರಿಯ ನಾಯಕರೊಂದಿಗೆ ಚರ್ಚಿಸಿ ಸಿಎಂ ಬದಲಾವಣೆ ಗೊಂದಲಕ್ಕೆ ತೆರೆ : ಮಲ್ಲಿಕಾರ್ಜುನ ಖರ್ಗೆ

ಕರ್ನಾಟಕದಲ್ಲಿ ಹೆಚ್ಚುತ್ತಿರುವ ನಾಯಕತ್ವದ ಜಗಳವನ್ನು ಪರಿಹರಿಸಲು ರಾಹುಲ್ ಗಾಂಧಿ, ಮುಖ್ಯಮಂತ್ರಿ ಸಿದ್ದರಾಮಯ್ಯ ಮತ್ತು ಉಪಮುಖ್ಯಮಂತ್ರಿ ಡಿ.ಕೆ ಶಿವಕುಮಾರ್ ಸೇರಿದಂತೆ ಪಕ್ಷದ ಹಿರಿಯ ನಾಯಕರೊಂದಿಗೆ ನವದೆಹಲಿಯಲ್ಲಿ ಸಭೆ ನಡೆಸುವುದಾಗಿ ಎಐಸಿಸಿ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ...

ದಲಿತ ಎಂಬ ಕಾರಣಕ್ಕೆ ಅಯೋಧ್ಯೆ ಧ್ವಜಾರೋಹಣಕ್ಕೆ ನನ್ನನ್ನು ಆಹ್ವಾನಿಸಿಲ್ಲ: ಎಸ್‌ಪಿ ಸಂಸದ ಅವಧೇಶ್ ಪ್ರಸಾದ್

ಅಯೋಧ್ಯೆಯ ಶ್ರೀ ರಾಮ ಜನ್ಮಭೂಮಿ ದೇವಾಲಯದಲ್ಲಿ ನಡೆದ ಧ್ವಜಾರೋಹಣ ಸಮಾರಂಭಕ್ಕೆ ತಮ್ಮನ್ನು ಆಹ್ವಾನಿಸಲಾಗಿಲ್ಲ ಎಂದು ಸಮಾಜವಾದಿ ಪಕ್ಷದ ಸಂಸದ ಅವಧೇಶ್ ಪ್ರಸಾದ್ ಹೇಳಿದ್ದಾರೆ. ದಲಿತ ಸಮುದಾಯಕ್ಕೆ ಸೇರಿದವರಾಗಿರುವುದರಿಂದ ನನ್ನನ್ನು ಹೊರಗಿಡಲಾಗಿದೆ ಎಂದು ಅವರು...

ನೂರಾರು ಹುಡುಗಿಯರ ಮೇಲೆ ಲೈಂಗಿಕ ದೌರ್ಜನ್ಯ, ಜೈಲಿನಲ್ಲಿ ನಿಗೂಢ ಸಾವು : ಅಮೆರಿಕವನ್ನು ತಲ್ಲಣಗೊಳಿಸಿದ ಜೆಫ್ರಿ ಎಪ್‌ಸ್ಟೀನ್ ಯಾರು?

ಜೆಫ್ರಿ ಎಪ್‌ಸ್ಟೀನ್ ಎಂಬ ಅಮೆರಿಕದ ಈ ಪ್ರಭಾವಿ ವ್ಯಕ್ತಿಯ ಹೆಸರು ಕಳೆದ ದಿನಗಳಿಂದ ಭಾರೀ ಚರ್ಚೆಯಲ್ಲಿದೆ. 2019ರಿಂದಲೂ ಈತನ ಬಗ್ಗೆ ಜಾಗತಿಕ ಮಟ್ಟದಲ್ಲಿ ಚರ್ಚೆಗಳು ನಡೆದರೂ, ಈಗ ಮತ್ತೊಮ್ಮೆ ಈತನ ವಿಷಯ ಮುನ್ನೆಲೆಗೆ...

ಎಕ್ಸ್‌ಪ್ರೆಸ್ ರೈಲಿನಲ್ಲಿ ನೂಡಲ್ಸ್‌ ಬೇಯಿಸಿದ ಮಹಿಳೆ ಪುಣೆಯಲ್ಲಿ ಪತ್ತೆ; ಕ್ಷಮೆಯಾಚನೆ

ಎಕ್ಸ್‌ಪ್ರೆಸ್ ರೈಲಿನ ಕೋಚ್‌ನ ಪವರ್ ಸಾಕೆಟ್‌ಗೆ ಪ್ಲಗ್ ಮಾಡಲಾದ ಎಲೆಕ್ಟ್ರಿಕ್ ಕೆಟಲ್‌ನಿಂದ ಬಳಸಿ ನೂಡಲ್ಸ್ ತಯಾರಿಸುವ ವೀಡಿಯೊ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆಗಿತ್ತು; ಆ ಮಹಿಳೆಯನ್ನು ಕೇಂದ್ರ ರೈಲ್ವೆ ಪತ್ತೆಹಚ್ಚಿದೆ. ಸರಿತಾ ಲಿಂಗಾಯತ್...

ಬೆಂಗಳೂರು ಪೊಲೀಸರಲ್ಲಿ ವಿಶ್ವಾಸಾರ್ಹತೆಯ ಬಿಕ್ಕಟ್ಟು: ಕಳೆದ ಹತ್ತು ತಿಂಗಳಲ್ಲಿ 124 ಪೊಲೀಸ್ ಸಿಬ್ಬಂದಿ ಅಮಾನತು

ಕಳೆದ ಹತ್ತು ತಿಂಗಳಲ್ಲಿ ಬೆಂಗಳೂರಿನಲ್ಲಿ ಕಾನ್‌ಸ್ಟೆಬಲ್‌ಗಳಿಂದ ಹಿಡಿದು ಐಪಿಎಸ್ ಅಧಿಕಾರಿಗಳವರೆಗೆ ಸುಮಾರು 124 ಪೊಲೀಸ್ ಸಿಬ್ಬಂದಿಯನ್ನು, ಭ್ರಷ್ಟಾಚಾರ, ಸುಲಿಗೆ, ದರೋಡೆ, ಕರ್ತವ್ಯ ಲೋಪ ಮತ್ತು ಮಾದಕವಸ್ತು ಮಾರಾಟದಂತಹ ಅಪರಾಧಗಳಿಗಾಗಿ ಅಮಾನತುಗೊಳಿಸಲಾಗಿದೆ. ಆದರೆ ಯಾವುದೇ ಪ್ರಕರಣವೂ...