Homeಮುಖಪುಟಗ್ರಾಮೀಣ ಪ್ರದೇಶಗಳಲ್ಲಿ 10 ರೂಗೆ ಸಿಗಲಿದೆ ’ಎಲ್‌ಇಡಿ’ ಬಲ್ಬ್‌‌!

ಗ್ರಾಮೀಣ ಪ್ರದೇಶಗಳಲ್ಲಿ 10 ರೂಗೆ ಸಿಗಲಿದೆ ’ಎಲ್‌ಇಡಿ’ ಬಲ್ಬ್‌‌!

2014 ರಲ್ಲಿ ಒಂದು ಎಲ್‌ಇಡಿ ಬಲ್ಬ್‌ಗೆ 310 ರುಪಾಯಿಗೆ ಮಾರಲಾಗುತ್ತಿತ್ತು. ನಂತರ ಅದರ ಬೆಲೆಯನ್ನು 70 ರುಪಾಯಿಗೆ ಇಳಿಸಲಾಗಿತ್ತು. ಈಗ ಇನ್ನೂ ಅಗ್ಗವಾಗಿದೆ.

- Advertisement -
- Advertisement -

ಗ್ರಾಮೀಣ ಪ್ರದೇಶಗಳಿಗೆ ಎಲ್‌ಇಡಿ ಬಲ್ಬ್ ಒಂದಕ್ಕೆ 10 ರುಪಾಯಿಯಂತೆ ನೀಡಲು ಭಾರತದ ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ ನಿಂದ (EESL) ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದ ಬೆಂಬಲ ಅಥವಾ ಪ್ರೋತ್ಸಾಹಧನ ಏನನ್ನೂ ಪಡೆಯದೆ ಆರು ಕೋಟಿ ಎಲ್‌ಇಡಿ ಬಲ್ಬ್ ವಿತರಿಸಲು ಅದು ಮುಂದಾಗಿದೆ.

ಸರ್ಕಾರಿ ಸ್ಯಾಮ್ಯದ EESLನ ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಜಾಗತಿಕ ಮಟ್ಟದಲ್ಲೇ ಅತ್ಯಂತ ಕಡಿಮೆ ಬೆಲೆಗೆ EESL ಎಲ್‌ಇಡಿ ಬಲ್ಬ್ ಒದಗಿಸಲಿದೆ. ಆ ಮೂಲಕ ಮೇಕ್ ಇನ್ ಇಂಡಿಯಾಗೆ ಒತ್ತು ನೀಡಲಿದೆ ಎಂದಿದ್ದಾರೆ.

ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ UJALA (ಉನ್ನತ್ ಜ್ಯೋತಿ ಬೈ ಅಫೋರ್ಡಬಲ್ ಲೈಟಿಂಗ್ ಫಾರ್ ಆಲ್) ಯೋಜನೆ ಅಡಿಯಲ್ಲಿ ಇದನ್ನು ಪ್ರಸ್ತಾಪ ಮಾಡಲಾಗಿದೆ, ಇದರಿಂದ ವಿದ್ಯುತ್ ಸಹ ಉಳಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಶ್ವಸಂಸ್ಥೆಯ ಕ್ಲೀನ್ ಡೆವಲಪ್‌ಮೆಂಟ್ ಮೆಕಾನಿಸಂ (ಸಿಡಿಎಂ) ಅಡಿಯಲ್ಲಿ ಗ್ರಾಮ UJALA ದಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಆ ಮೂಲಕ ಕಾರ್ಬನ್ ಕ್ರೆಡಿಟ್ಸ್ ಬರಲಿದ್ದು, 2014ರಲ್ಲಿ ಒಂದು ಎಲ್‌ಇಡಿ ಬಲ್ಬ್‌ಗೆ 310 ರುಪಾಯಿಗೆ ಮಾರಲಾಗುತ್ತಿತ್ತು. ಸರ್ಕಾರದ UJALA ಯೋಜನೆ ಅಡಿ ಅದರ ಬೆಲೆಯನ್ನು 70 ರುಪಾಯಿಗೆ ಕಡಿತ ಮಾಡಲಾಯಿತು. ಈಗಿನ ಯೋಜನೆಯು ಅದನ್ನು ಇನ್ನು ದರಕ್ಕೆ ಒದಗಿಸಲಾಗುತ್ತಿದೆ ಎನ್ನಲಾಗಿದೆ.

ಈಗಿನ ಹೊಸ ಯೋಜನೆ ಅಡಿಯಲ್ಲಿ ಕಾರ್ಬನ್ ಕ್ರೆಡಿಟ್ಸ್‌ನಿಂದ 60 ರುಪಾಯಿ ಬಂದರೆ, ಬಾಕಿ 10 ರುಪಾಯಿಯನ್ನು ಗ್ರಾಮೀಣ ಭಾಗದ ಗ್ರಾಹಕರು ಪಾವತಿಸುತ್ತಾರೆ. ಮೊದಲ ಹಂತವಾಗಿ 1 ಕೋಟಿ ಎಲ್‌ಇಡಿ ಬಲ್ಬ್ ವಿತರಿಸಲಾಗುತ್ತದೆ ಎನ್ನಲಾಗಿದ್ದು, ಒಟ್ಟಾರೆ 4000 ಕೋಟಿ ಹೂಡಿಕೆಯಲ್ಲಿ 600 ಕೋಟಿ ರೂ ಗ್ರಾಮೀಣ ಗ್ರಾಹಕರು ಪಾವತಿಸಿದರೆ, 3400 ಕೋಟಿ ರುಪಾಯಿ ಕಾರ್ಬನ್ ಕ್ರೆಡಿಟ್ ಆದಾಯದ ಮೂಲಕ ಬರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

EESL ಪ್ರಕಾರ, ಮೌಲ್ಯದ ದೃಷ್ಟಿಯಿಂದ ವಿಶ್ವದ ಎರಡನೇ ದೊಡ್ಡ ಮಾರುಕಟ್ಟೆ ಭಾರತವಾಗಿದೆ. ಈಗಿನ ವಿದ್ಯುತ್‌ ಬಲ್ಬ್‌ಗಳ ಮೂಲಕ ಹೆಚ್ಚಿನ ವಿದ್ಯುತ್ ವ್ಯರ್ಥವಾಗುತ್ತಿದೆ. ಸದ್ಯದ ವಿದ್ಯುತ್ ಬೇಡಿಕೆ ಉಚ್ಛ್ರಾಯ ಮಟ್ಟದ 9428 ಮೆಗಾವ್ಯಾಟ್ ತಲುಪುವುದನ್ನು UJALA ಯೋಜನೆಯ ಎಲ್‌ಇಡಿ ಬಲ್ಬ್‌ಗಳನ್ನು ಬಳಸುವ ಮೂಲಕ ತಡೆಯಬಹುದು.


ಓದಿ: ಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ರಾಜಿ ಮಾಡಿಕೊಂಡ ಪ್ರಧಾನಿ’: ಎಐ ಇಂಪ್ಯಾಕ್ಟ್ ಶೃಂಗಸಭೆಯಲ್ಲಿ ಯುವ ಕಾಂಗ್ರೆಸ್‌ ಕಾರ್ಯಕರ್ತರಿಂದ ಶರ್ಟ್‌ ಬಿಚ್ಚಿ ಪ್ರತಿಭಟನೆ

ಎಐ ಇಂಪ್ಯಾಕ್ಟ್ ಶೃಂಗಸಭೆಗೆ ಸಂಬಂಧಿಸಿದಂತೆ ಪ್ರಧಾನಿ ನರೇಂದ್ರ ಮೋದಿಯವರನ್ನು ಗುರಿಯಾಗಿಸಿಕೊಂಡು ಮತ್ತು ಪ್ರಧಾನಿ "ರಾಜಿ ಮಾಡಿಕೊಂಡಿದ್ದಾರೆ" ಎಂದು ಆರೋಪಿಸಿ ಭಾರತೀಯ ಯುವ ಕಾಂಗ್ರೆಸ್ ಕಾರ್ಯಕರ್ತರು ಶುಕ್ರವಾರ ಭಾರತ್ ಮಂಟಪದಲ್ಲಿ ಶರ್ಟ್ ಧರಿಸದೆ ಪ್ರತಿಭಟನೆ...

ಬಾಗಲಕೋಟೆ: ಶಿವಾಜಿ ಜಯಂತಿ ಮೆರವಣಿಗೆ ವೇಳೆ ಕಲ್ಲು ತೂರಾಟ, ಉದ್ವಿಗ್ನ ಪರಿಸ್ಥಿತಿ: ಫೆ.24ರವರೆಗೆ ನಿಷೇಧಾಜ್ಞೆ ಜಾರಿ

ಬಾಗಲಕೋಟೆಯಲ್ಲಿ ಗುರುವಾರ ಛತ್ರಪತಿ ಶಿವಾಜಿ ಮಹಾರಾಜರ ಜಯಂತಿಯಂದು ನಡೆದ ಪ್ರತಿಮೆ ಮೆರವಣಿಗೆಯ ಸಂದರ್ಭದಲ್ಲಿ ಕಲ್ಲು ತೂರಾಟ ನಡೆದ ಘಟನೆ ವರದಿಯಾಗಿದೆ. ಹಳೆಯ ನಗರ ಪ್ರದೇಶದ ಪಂಕ ಮಸೀದಿ ಬಳಿ ಮೆರವಣಿಗೆ ಸಾಗುತ್ತಿದ್ದಾಗ ಈ...

ನಿಯಮಿತವಾಗಿ ಎಸ್‌ಸಿ/ಎಸ್‌ಟಿ ಕಾಯ್ದೆ ಕೋಶದ ಸಭೆ ನಡೆಸುತ್ತಿಲ್ಲ ಎಂದು ಆರೋಪಿಸಿದ ಮೇವಾನಿ; ಗುಜರಾತ್ ವಿಧಾನಸಭೆಯಲ್ಲಿ ಕಾಂಗ್ರೆಸ್- ಬಿಜೆಪಿ ನಡುವೆ ವಾಗ್ವಾದ

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡ (ದೌರ್ಜನ್ಯ ತಡೆ) ಕಾಯ್ದೆಯಡಿಯಲ್ಲಿ ರಚಿಸಲಾದ ರಾಜ್ಯ ಮೇಲ್ವಿಚಾರಣಾ ಕೋಶದ (ಎಸ್‌ಎಂಸಿ) ನಿಯಮಿತ ಸಭೆಗಳನ್ನು ಮುಖ್ಯಮಂತ್ರಿ ಭೂಪೇಂದ್ರ ಪಟೇಲ್ ಕರೆಯುತ್ತಿಲ್ಲ ಎಂದು ವಡ್ಗಾಮ್‌ನ ಕಾಂಗ್ರೆಸ್ ಶಾಸಕ ಜಿಗ್ನೇಶ್...

ನೆಲಮಂಗಲದಲ್ಲಿ ಹಾಸಿಗೆ ಹಿಡಿದ ಪತಿಯ ಎದುರೇ 60ವರ್ಷದ ಮಹಿಳೆಯ ಕೊಲೆ; ಐದು ಗಂಟೆಗಳಲ್ಲಿ ಆರೋಪಿ ಬಂಧನ

ಬೆಂಗಳೂರು: ಬೆಂಗಳೂರು ಹೊರವಲಯ ನೆಲಮಂಗಲದ ಪೇಟೆ ಬೀದಿಯಲ್ಲಿ ವೀಲ್‌ಚೇರ್‌ನಲ್ಲಿ ಕುಳಿತಿದ್ದ ಗಂಡನ ಮುಂದೆಯೇ ಮಹಿಳೆಯೊಬ್ಬಳ ಕೊಲೆಯಾದ ಐದು ಗಂಟೆಗಳಲ್ಲಿ ನೆಲಮಂಗಲ ಪಟ್ಟಣ ಪೊಲೀಸರು 45 ವರ್ಷದ ದಿನಸಿ ಅಂಗಡಿ ಮಾಲೀಕನನ್ನು ಬಂಧಿಸಿದ್ದಾರೆ. ಫೆಬ್ರವರಿ...

‘ದಿ ಕೇರಳ ಸ್ಟೋರಿ 2’ ಚಿತ್ರ ನಿರ್ಮಾಪಕರು, ಸಿಬಿಎಫ್‌ಸಿ ಮಂಡಳಿಗೆ ನೋಟಿಸ್ ಜಾರಿ ಮಾಡಿದ ಕೇರಳ ಹೈಕೋರ್ಟ್

ಕೊಚ್ಚಿ: 'ದಿ ಕೇರಳ ಸ್ಟೋರಿ 2 - ಗೋಸ್ ಬಿಯಾಂಡ್' ಚಿತ್ರದ ಪ್ರಮಾಣೀಕರಣವನ್ನು ರದ್ದುಗೊಳಿಸುವಂತೆ ಮತ್ತು ಅದರ ಶೀರ್ಷಿಕೆಯ ಮರುಪರಿಶೀಲನೆ ಸೇರಿದಂತೆ ಮಾರ್ಪಾಡುಗಳಿಗೆ ನಿರ್ದೇಶನ ನೀಡಬೇಕೆಂದು ಕೋರಿ ಕಣ್ಣೂರು ಮೂಲದವರು ಸಲ್ಲಿಸಿದ ಅರ್ಜಿಯ...

ಚುನಾವಣಾ ಸಮಯದಲ್ಲಿ ಉಚಿತ ಕೊಡುಗೆಗಳ ಪ್ರವೃತ್ತಿ ಪ್ರಶ್ನಿಸಿದ ಸುಪ್ರೀಂ ಕೋರ್ಟ್

ರಾಜಕೀಯ ಪಕ್ಷಗಳು ಮತ್ತು ರಾಜ್ಯ ಸರ್ಕಾರಗಳು ಚುನಾವಣೆಗೆ ಮುನ್ನ "ಉಚಿತ ಕೊಡುಗೆಗಳ" ಜಾಹೀರಾತು ನೀಡುವ ಅಭ್ಯಾಸ ಹೆಚ್ಚುತ್ತಿರುವ ಬಗ್ಗೆ ಸುಪ್ರೀಂ ಕೋರ್ಟ್ ಗುರುವಾರ ಬಲವಾದ ಮೌಖಿಕ ಅವಲೋಕನಗಳನ್ನು ನೀಡಿದೆ. ವಿದ್ಯುತ್ (ತಿದ್ದುಪಡಿ) ನಿಯಮಗಳು, 2024...

ರಾಹುಲ್ ಗಾಂಧಿಗೆ ಕರ್ಣಿ ಸೇನೆಯಿಂದ ಜೀವ ಬೆದರಿಕೆ: ಬಿಜೆಪಿ-ಆರ್‌ಎಸ್‌ಎಸ್ ಜಾಲವೇ ‘ಗೋಡ್ಸೆ ಕಾರ್ಖಾನೆ’ ಎಂದ ಕಾಂಗ್ರೆಸ್

ನವದೆಹಲಿ: ಲೋಕಸಭಾ ಸ್ಪೀಕರ್ ಓಂ ಬಿರ್ಲಾ ವಿರುದ್ಧ ನಡೆದ ಪ್ರತಿಭಟನೆಗೆ ಸಂಬಂಧಿಸಿದಂತೆ ಲೋಕಸಭೆಯ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ಅವರಿಗೆ ಕರ್ಣಿ ಸೇನೆ ಜೀವ ಬೆದರಿಕೆ ಹಾಕಿದ್ದು, ಇದು "ಏಕಾಂಗಿ ಸ್ಫೋಟವಲ್ಲ"...

ಬಿಹಾರ| ವಿಧಾನಸಭೆಯಲ್ಲಿ ‘ತಂಬಾಕು’ ತಿಂದ ಉಪಮುಖ್ಯಮಂತ್ರಿ ಸಾಮ್ರಾಟ್ ಚೌಧರಿ

ಬಿಹಾರ ವಿಧಾನಸಭೆಯ ಬಜೆಟ್ ಅಧಿವೇಶನದ ವಿಡಿಯೋ ಸಾಮಾಜಿಕ ಮಾಧ್ಯಮದಲ್ಲಿ ವೈರಲ್ ಆದ ಬಳಿಕ ರಾಜಕೀಯ ವಿವಾದಕ್ಕೆ ಕಾರಣವಾಗಿದೆ. ವಿಡಿಯೋದಲ್ಲಿ, ಉಪಮುಖ್ಯಮಂತ್ರಿ ಹಾಗೂ ಹಿರಿಯ ಬಿಜೆಪಿ ನಾಯಕ ಸಾಮ್ರಾಟ್ ಚೌಧರಿ ಕಲಾಪದ ಸಮಯದಲ್ಲಿ ವಸ್ತುವೊಂದನ್ನು...

‘ಬೆದರಿಕೆ, ಚಿತ್ರಹಿಂಸೆ, ಅತ್ಯಾಚಾರ ‘: ಇಸ್ರೇಲ್‌ ಜೈಲಿನ ದೌರ್ಜನ್ಯ ಬಿಚ್ಚಿಟ್ಟ ಪ್ಯಾಲೆಸ್ತೀನ್ ಪತ್ರಕರ್ತರು

ಇಸ್ರೇಲ್ ಜೈಲುಗಳಲ್ಲಿ ಬಂಧಿತರಾಗಿರುವ ಪ್ಯಾಲೆಸ್ತೀನ್ ಪತ್ರಕರ್ತರು ತೀವ್ರವಾದ ದೌರ್ಜನ್ಯಗಳನ್ನು ಎದುರಿಸುತ್ತಿದ್ದಾರೆ ಎಂದು ಅಂತಾರಾಷ್ಟ್ರೀಯ ಪತ್ರಕರ್ತರ ರಕ್ಷಣಾ ಸಮಿತಿ (ಸಿಪಿಜೆ) ಹೇಳಿದೆ. ಬಂಧನದಿಂದ ಬಿಡುಗಡೆಯಾಗಿರುವ ಪತ್ರಕರ್ತರನ್ನು ಸಂದರ್ಶಿಸಿರುವ ಸಿಪಿಜೆ, ಜೈಲಿನಲ್ಲಿರುವ ಪತ್ರಕರ್ತರು ನಿರಂತರವಾಗಿ ದೈಹಿಕ...

ಪಾಕಿಸ್ತಾನದ ಕರಾಚಿಯಲ್ಲಿ ಶಂಕಿತ ಅನಿಲ ಸೋರಿಕೆ: ಮಕ್ಕಳು ಸೇರಿದಂತೆ 16 ಮಂದಿ ಸಾವು

ಕರಾಚಿ: ಪಾಕಿಸ್ತಾನದ ಕರಾಚಿಯಲ್ಲಿ ಗುರುವಾರ ಬೆಳಿಗ್ಗೆ ವಸತಿ ಕಟ್ಟಡವೊಂದರಲ್ಲಿ ಶಂಕಿತ ಅನಿಲ ಸೋರಿಕೆಯಿಂದಾಗಿ ಸ್ಫೋಟ ಸಂಭವಿಸಿ, ಮಕ್ಕಳು ಸೇರಿದಂತೆ ಕನಿಷ್ಠ 16 ಜನರು ಸಾವನ್ನಪ್ಪಿದ್ದು, 14 ಜನರು ಗಾಯಗೊಂಡಿದ್ದಾರೆ. "ಓಲ್ಡ್ ಸೋಲ್ಜರ್ ಬಜಾರ್...