Homeಮುಖಪುಟಗ್ರಾಮೀಣ ಪ್ರದೇಶಗಳಲ್ಲಿ 10 ರೂಗೆ ಸಿಗಲಿದೆ ’ಎಲ್‌ಇಡಿ’ ಬಲ್ಬ್‌‌!

ಗ್ರಾಮೀಣ ಪ್ರದೇಶಗಳಲ್ಲಿ 10 ರೂಗೆ ಸಿಗಲಿದೆ ’ಎಲ್‌ಇಡಿ’ ಬಲ್ಬ್‌‌!

2014 ರಲ್ಲಿ ಒಂದು ಎಲ್‌ಇಡಿ ಬಲ್ಬ್‌ಗೆ 310 ರುಪಾಯಿಗೆ ಮಾರಲಾಗುತ್ತಿತ್ತು. ನಂತರ ಅದರ ಬೆಲೆಯನ್ನು 70 ರುಪಾಯಿಗೆ ಇಳಿಸಲಾಗಿತ್ತು. ಈಗ ಇನ್ನೂ ಅಗ್ಗವಾಗಿದೆ.

- Advertisement -
- Advertisement -

ಗ್ರಾಮೀಣ ಪ್ರದೇಶಗಳಿಗೆ ಎಲ್‌ಇಡಿ ಬಲ್ಬ್ ಒಂದಕ್ಕೆ 10 ರುಪಾಯಿಯಂತೆ ನೀಡಲು ಭಾರತದ ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ ನಿಂದ (EESL) ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದ ಬೆಂಬಲ ಅಥವಾ ಪ್ರೋತ್ಸಾಹಧನ ಏನನ್ನೂ ಪಡೆಯದೆ ಆರು ಕೋಟಿ ಎಲ್‌ಇಡಿ ಬಲ್ಬ್ ವಿತರಿಸಲು ಅದು ಮುಂದಾಗಿದೆ.

ಸರ್ಕಾರಿ ಸ್ಯಾಮ್ಯದ EESLನ ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಜಾಗತಿಕ ಮಟ್ಟದಲ್ಲೇ ಅತ್ಯಂತ ಕಡಿಮೆ ಬೆಲೆಗೆ EESL ಎಲ್‌ಇಡಿ ಬಲ್ಬ್ ಒದಗಿಸಲಿದೆ. ಆ ಮೂಲಕ ಮೇಕ್ ಇನ್ ಇಂಡಿಯಾಗೆ ಒತ್ತು ನೀಡಲಿದೆ ಎಂದಿದ್ದಾರೆ.

ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ UJALA (ಉನ್ನತ್ ಜ್ಯೋತಿ ಬೈ ಅಫೋರ್ಡಬಲ್ ಲೈಟಿಂಗ್ ಫಾರ್ ಆಲ್) ಯೋಜನೆ ಅಡಿಯಲ್ಲಿ ಇದನ್ನು ಪ್ರಸ್ತಾಪ ಮಾಡಲಾಗಿದೆ, ಇದರಿಂದ ವಿದ್ಯುತ್ ಸಹ ಉಳಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಶ್ವಸಂಸ್ಥೆಯ ಕ್ಲೀನ್ ಡೆವಲಪ್‌ಮೆಂಟ್ ಮೆಕಾನಿಸಂ (ಸಿಡಿಎಂ) ಅಡಿಯಲ್ಲಿ ಗ್ರಾಮ UJALA ದಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಆ ಮೂಲಕ ಕಾರ್ಬನ್ ಕ್ರೆಡಿಟ್ಸ್ ಬರಲಿದ್ದು, 2014ರಲ್ಲಿ ಒಂದು ಎಲ್‌ಇಡಿ ಬಲ್ಬ್‌ಗೆ 310 ರುಪಾಯಿಗೆ ಮಾರಲಾಗುತ್ತಿತ್ತು. ಸರ್ಕಾರದ UJALA ಯೋಜನೆ ಅಡಿ ಅದರ ಬೆಲೆಯನ್ನು 70 ರುಪಾಯಿಗೆ ಕಡಿತ ಮಾಡಲಾಯಿತು. ಈಗಿನ ಯೋಜನೆಯು ಅದನ್ನು ಇನ್ನು ದರಕ್ಕೆ ಒದಗಿಸಲಾಗುತ್ತಿದೆ ಎನ್ನಲಾಗಿದೆ.

ಈಗಿನ ಹೊಸ ಯೋಜನೆ ಅಡಿಯಲ್ಲಿ ಕಾರ್ಬನ್ ಕ್ರೆಡಿಟ್ಸ್‌ನಿಂದ 60 ರುಪಾಯಿ ಬಂದರೆ, ಬಾಕಿ 10 ರುಪಾಯಿಯನ್ನು ಗ್ರಾಮೀಣ ಭಾಗದ ಗ್ರಾಹಕರು ಪಾವತಿಸುತ್ತಾರೆ. ಮೊದಲ ಹಂತವಾಗಿ 1 ಕೋಟಿ ಎಲ್‌ಇಡಿ ಬಲ್ಬ್ ವಿತರಿಸಲಾಗುತ್ತದೆ ಎನ್ನಲಾಗಿದ್ದು, ಒಟ್ಟಾರೆ 4000 ಕೋಟಿ ಹೂಡಿಕೆಯಲ್ಲಿ 600 ಕೋಟಿ ರೂ ಗ್ರಾಮೀಣ ಗ್ರಾಹಕರು ಪಾವತಿಸಿದರೆ, 3400 ಕೋಟಿ ರುಪಾಯಿ ಕಾರ್ಬನ್ ಕ್ರೆಡಿಟ್ ಆದಾಯದ ಮೂಲಕ ಬರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

EESL ಪ್ರಕಾರ, ಮೌಲ್ಯದ ದೃಷ್ಟಿಯಿಂದ ವಿಶ್ವದ ಎರಡನೇ ದೊಡ್ಡ ಮಾರುಕಟ್ಟೆ ಭಾರತವಾಗಿದೆ. ಈಗಿನ ವಿದ್ಯುತ್‌ ಬಲ್ಬ್‌ಗಳ ಮೂಲಕ ಹೆಚ್ಚಿನ ವಿದ್ಯುತ್ ವ್ಯರ್ಥವಾಗುತ್ತಿದೆ. ಸದ್ಯದ ವಿದ್ಯುತ್ ಬೇಡಿಕೆ ಉಚ್ಛ್ರಾಯ ಮಟ್ಟದ 9428 ಮೆಗಾವ್ಯಾಟ್ ತಲುಪುವುದನ್ನು UJALA ಯೋಜನೆಯ ಎಲ್‌ಇಡಿ ಬಲ್ಬ್‌ಗಳನ್ನು ಬಳಸುವ ಮೂಲಕ ತಡೆಯಬಹುದು.


ಓದಿ: ಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ರಾಜ್ಯಸಭಾ ಚುನಾವಣೆ: ಕರ್ನಾಟದಿಂದ ಆಯ್ಕೆಯಾದ ಪ್ರತಿನಿಧಿಗಳಿಂದ ರಾಜ್ಯಕ್ಕೆ ಲಾಭವಾಗಿದೆಯೇ?

ರಾಜ್ಯಸಭೆಗೆ ಪ್ರತಿಬಾರಿ ಚುನಾವಣೆ ನಡೆಯುವಾಗಲೂ ಈ ಚರ್ಚೆಗಳು ಸಾಮಾನ್ಯ. ಕನ್ನಡೇತರರು ಇಲ್ಲಿಂದ ಆಯ್ಕೆಯಾಗಿ ಇಲ್ಲಿಯ ಸಮಸ್ಯೆಗಳ ಬಗ್ಗೆ ಮಾತನಾಡುವುದಿಲ್ಲ ಎಂಬ ವಾಸ್ತವದ ಜೊತೆಜೊತೆಗೆ, ರಾಜ್ಯಸಭೆಗೆ ಆಯ್ಕೆಯಾಗುವ ಕನ್ನಡವರಾದರೂ ಮಾತನಾಡುತ್ತಾರಾ? ಎಂದರೆ ಅದಕ್ಕೂ ನಮ್ಮಲ್ಲಿ...

ಬಂಗಾಳದಲ್ಲಿ ಬಿಜೆಪಿ ಬೆಂಬಲಿಗರ ಕ್ರೌರ್ಯ: ಅಭಿಷೇಕ್ ಬಳಿಕ ಕಲ್ಯಾಣ್‌ ಬ್ಯಾನರ್ಜಿ ಮೇಲೆ ಮಾರಣಾಂತಿಕ ದಾಳಿ

ಪಶ್ಚಿಮ ಬಂಗಾಳದ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಸಂಸದ ಕಲ್ಯಾಣ್ ಬ್ಯಾನರ್ಜಿ ಅವರು ಭಾನುವಾರ (ಮೇ 31), ಹೂಗ್ಲಿ ಜಿಲ್ಲೆಯಲ್ಲಿ ನಡೆದಿದ್ದ ಚುನಾವಣೋತ್ತರ ಹಿಂಸಾಚಾರದಲ್ಲಿ ಕಾರ್ಯಕರ್ತರ ಬಂಧನದ ವಿರುದ್ಧ ಮನವಿ ಪತ್ರ ಸಲ್ಲಿಸಲು ಭೇಟಿ...

ಬಸ್ತಾರ್‌: ಬುಡಕಟ್ಟು ಕ್ರಿಶ್ಚಿಯನ್ ಕುಟುಂಬಗಳಿಗೆ ಬೆದರಿಕೆ, ಥಳಿತ, ಹಿಂದೂ ಧರ್ಮ ಸ್ವೀಕರಿಸಲು ಬಲವಂತ: ಘನತೆಯ ಬದುಕಿಗಾಗಿ ಆದಿವಾಸಿಗಳ ಹೋರಾಟ

ಛತ್ತೀಸ್‌ಗಢದ ದಟ್ಟ ಅರಣ್ಯಗಳು ಮತ್ತು ಕಡಿದಾದ ಬೆಟ್ಟಗಳಿಂದ ಆವೃತವಾಗಿರುವ ಬಸ್ತಾರ್ ಕಣಿವೆಯು ತನ್ನ ವಿಶಿಷ್ಟ ಬುಡಕಟ್ಟು ಸಂಸ್ಕೃತಿ ಮತ್ತು ಪ್ರಾಕೃತಿಕ ಸಂಪತ್ತಿಗೆ ಹೆಸರುವಾಸಿ. ಆದರೆ ಇತ್ತೀಚಿನ ವರ್ಷಗಳಲ್ಲಿ, ಈ ಪ್ರಶಾಂತ ಭೂಭಾಗವು ತೀವ್ರಗಾಮಿ...

ಗಾಝಾದಲ್ಲಿ ರಕ್ತಸಿಕ್ತ ಈದ್: ಇಸ್ರೇಲ್ ಭೀಕರ ದಾಳಿಗೆ 26 ಪ್ಯಾಲೆಸ್ಟೀನಿಯನ್ನರು ಬಲಿ, ವಿಶ್ವಸಂಸ್ಥೆ ತೀವ್ರ ಆತಂಕ

ಗಾಝಾ: ಇಸ್ಲಾಂ ಧರ್ಮದ ಅತ್ಯಂತ ಪವಿತ್ರ ದಿನಗಳಲ್ಲಿ ಒಂದಾದ ‘ಈದ್ ಅಲ್-ಅಧಾ’ ಹಬ್ಬದ ಸಂದರ್ಭದಲ್ಲೂ ಗಾಝಾ ಪಟ್ಟಿಯಲ್ಲಿ ರಕ್ತಪಾತ ಮುಂದುವರಿದಿದ್ದು, ಹಬ್ಬದ ಮುನ್ನಾದಿನದಿಂದ ಆರಂಭಿಸಿ ಇಸ್ರೇಲ್ ಪಡೆಗಳು ನಡೆಸಿದ ಸರಣಿ ದಾಳಿಗಳಲ್ಲಿ ಕನಿಷ್ಠ...

ಜನರಿಗೆ ಇಂಧನ ಉಳಿಸುವ ಪಾಠ, ಪ್ರಧಾನಿಗೆ ರೋಡ್‌ಶೋಗಳ ಆಟ

ಮೇ 10 ರಂದು ಪ್ರಧಾನಮಂತ್ರಿ ನರೇಂದ್ರ ಮೋದಿ ಅವರು ಸಾರ್ವಜನಿಕರಲ್ಲಿ ಮಿತವ್ಯಯದ ಅಪೀಲು ಮಾಡಿದ್ದು, ಇಂಧನ ಬಳಕೆಯನ್ನು ಕನಿಷ್ಠ ಮಟ್ಟಕ್ಕೆ ಇಳಿಸುವಂತೆ ಕೋರಿದ್ದರು. ಜನರು ಖಾಸಗಿ ವಾಹನಗಳ ಬಳಕೆಯನ್ನು ಬಿಟ್ಟು ಸಾರ್ವಜನಿಕ ಸಾರಿಗೆಯನ್ನು...

ಏಷ್ಯನ್ ಗೇಮ್ಸ್‌ ಟ್ರಯಲ್ಸ್‌ನಲ್ಲಿ ಸ್ಪರ್ಧಿಸಲು ವಿನೇಶ್ ಫೋಗಟ್‌ಗೆ ಅನುಮತಿಸಿದ ಭಾರತೀಯ ಕುಸ್ತಿ ಒಕ್ಕೂಟ

ಮಾಜಿ ವಿಶ್ವ ಚಾಂಪಿಯನ್‌ಶಿಪ್ ಪದಕ ವಿಜೇತೆ ವಿನೇಶ್ ಫೋಗಟ್ ಅವರು (ಮೇ 30) ಏಷ್ಯನ್ ಗೇಮ್ಸ್ ಆಯ್ಕೆ ಟ್ರಯಲ್ಸ್‌ನಲ್ಲಿ ಮಹಿಳೆಯರ 53 ಕೆಜಿ ವಿಭಾಗದಲ್ಲಿ ಸ್ಪರ್ಧಿಸಲು ಅವಕಾಶ ಪಡೆದಿದ್ದಾರೆ. ಭಾರತೀಯ ಕುಸ್ತಿ ಒಕ್ಕೂಟ...

Uttarakhand | ಬಜರಂಗದಳದ ಕಾರ್ಯಕರ್ತರು ಈಗ ದ್ವೇಷ ಬಿತ್ತುವ ವೃತ್ತಿಪರ ಇನ್‌ಫ್ಲ್ಯುಯೆನ್ಸರ್ಸ್!

ಈ ವರ್ಷದ ಆರಂಭದಲ್ಲಿ ಉತ್ತರಾಖಂಡದ ಕೋಟದ್ವಾರದಲ್ಲಿ ಹಿಂದುತ್ವ ಗುಂಪೊಂದು ವೃದ್ಧ ಮುಸ್ಲಿಂ ವ್ಯಕ್ತಿಯೊಬ್ಬರ ಅಂಗಡಿಗೆ ನುಗ್ಗಿ, ಅಂಗಡಿಯ ಹೆಸರಾದ ‘ಬಾಬಾ’ ಎಂಬುವುದನ್ನು ಬದಲಾಯಿಸುವಂತೆ ಒತ್ತಾಯಿಸಿತ್ತು. ‘ಬಾಬಾ’ ಎಂಬುವುದು ‘ಹಿಂದೂ’ ಹೆಸರಾಗಿದೆ ಎಂದು ಆ...

​ನಿಗಿ ನಿಗಿ ಕೆಂಡದಂತಾಗಿರುವ ಬಿಡದಿ, ಡಿಕೆಶಿಗೆ ಬಿಸಿ ತುಪ್ಪದಂತಾದ ರೈತರು

​ಬದಲಾದ ರಾಜಕೀಯ ಸಂದರ್ಭದಲ್ಲಿ ಕರ್ನಾಟಕದ ಮುಂದಿನ ಮುಖ್ಯಮಂತ್ರಿ ಎಂದೇ ಬಿಂಬಿತವಾಗಿರುವ ಡಿ.ಕೆ. ಶಿವಕುಮಾರ್ ಪ್ರತಿಷ್ಠೆಯಾಗಿ ತೆಗೆದುಕೊಂಡಿರುವ ಬಿಡದಿಯ ಟೌನ್‌ಶಿಪ್ ಯೋಜನೆಯ ವಿರುದ್ಧ ನಡೆಯುತ್ತಿರುವ ರೈತರ ಹೋರಾಟ ದಿನದಿಂದ ದಿನಕ್ಕೆ ಉಗ್ರ ರೂಪ ಪಡೆಯುತ್ತಿದೆ. ​ಭೂಸ್ವಾಧೀನದ...

ಪ್ರಜಾಪ್ರಭುತ್ವವನ್ನು ಹತ್ತಿಕ್ಕಲು ‘SIR’ ಅನ್ನೇ ಅಸ್ತ್ರವನ್ನಾಗಿಸಿಕೊಂಡ ನರೇಂದ್ರ ಮೋದಿ!

ಪಶ್ಚಿಮ ಬಂಗಾಳದ ವಿಧಾನಸಭಾ ಚುನಾವಣೆಯ ಫಲಿತಾಂಶ ಪ್ರಕಟವಾದ ತಕ್ಷಣ (ಮೇ 4 ರಂದು), ಕಾಳೀಘಾಟ್‌ನಲ್ಲಿರುವ ತಮ್ಮ ನಿವಾಸದಲ್ಲಿ ಸುದ್ದಿಗೋಷ್ಠಿ ನಡೆಸಿದ ಮಾಜಿ ಮುಖ್ಯಮಂತ್ರಿ ಮಮತಾ ಬ್ಯಾನರ್ಜಿ ಅತ್ಯಂತ ಆಕ್ರೋಶದಿಂದ ಮಾತನಾಡಿದ್ದರು. ಅಷ್ಟೇ ಅಲ್ಲದೆ,...

ಕೇರಳದಲ್ಲಿ ಶಾಲಾ ಬಾಲಕಿಯರಿಗೆ ಮೂರು ದಿನ ಮುಟ್ಟಿನ ರಜೆ, ಅಸಂಘಟಿತ ವಲಯದ ಮಹಿಳೆಯರಿಗೆ ಆರು ತಿಂಗಳ ಹೆರಿಗೆ ರಜೆ ಘೋಷಣೆ 

ತಿರುವನಂತಪುರಂ: ಕೇರಳದ ವಿ.ಡಿ. ಸತೀಶನ್ ನೇತೃತ್ವದ ಕಾಂಗ್ರೆಸ್ ಸರ್ಕಾರವು ಮಹಿಳೆಯರಿಗೆ ಹಲವಾರು ಕಲ್ಯಾಣ ಕ್ರಮಗಳನ್ನು ಘೋಷಿಸಿದೆ, ಇದರಲ್ಲಿ ಶಾಲಾ ವಿದ್ಯಾರ್ಥಿಗಳಿಗೆ ಮೂರು ದಿನಗಳ ಮಾಸಿಕ ಮುಟ್ಟಿನ ರಜೆ, ಕೆಲಸದ ಸ್ಥಳಗಳಲ್ಲಿ ಮಹಿಳೆಯರಿಗೆ ಸಮಾನ...