Homeಮುಖಪುಟಗ್ರಾಮೀಣ ಪ್ರದೇಶಗಳಲ್ಲಿ 10 ರೂಗೆ ಸಿಗಲಿದೆ ’ಎಲ್‌ಇಡಿ’ ಬಲ್ಬ್‌‌!

ಗ್ರಾಮೀಣ ಪ್ರದೇಶಗಳಲ್ಲಿ 10 ರೂಗೆ ಸಿಗಲಿದೆ ’ಎಲ್‌ಇಡಿ’ ಬಲ್ಬ್‌‌!

2014 ರಲ್ಲಿ ಒಂದು ಎಲ್‌ಇಡಿ ಬಲ್ಬ್‌ಗೆ 310 ರುಪಾಯಿಗೆ ಮಾರಲಾಗುತ್ತಿತ್ತು. ನಂತರ ಅದರ ಬೆಲೆಯನ್ನು 70 ರುಪಾಯಿಗೆ ಇಳಿಸಲಾಗಿತ್ತು. ಈಗ ಇನ್ನೂ ಅಗ್ಗವಾಗಿದೆ.

- Advertisement -
- Advertisement -

ಗ್ರಾಮೀಣ ಪ್ರದೇಶಗಳಿಗೆ ಎಲ್‌ಇಡಿ ಬಲ್ಬ್ ಒಂದಕ್ಕೆ 10 ರುಪಾಯಿಯಂತೆ ನೀಡಲು ಭಾರತದ ಎನರ್ಜಿ ಎಫಿಷಿಯೆನ್ಸಿ ಸರ್ವೀಸಸ್ ಲಿಮಿಟೆಡ್ ನಿಂದ (EESL) ಯೋಜನೆ ರೂಪಿಸಲಾಗಿದೆ. ಇದಕ್ಕಾಗಿ ಸರ್ಕಾರದ ಬೆಂಬಲ ಅಥವಾ ಪ್ರೋತ್ಸಾಹಧನ ಏನನ್ನೂ ಪಡೆಯದೆ ಆರು ಕೋಟಿ ಎಲ್‌ಇಡಿ ಬಲ್ಬ್ ವಿತರಿಸಲು ಅದು ಮುಂದಾಗಿದೆ.

ಸರ್ಕಾರಿ ಸ್ಯಾಮ್ಯದ EESLನ ಹಿರಿಯ ಅಧಿಕಾರಿಗಳು ಈ ಬಗ್ಗೆ ಮಾಹಿತಿ ನೀಡಿದ್ದು, ಜಾಗತಿಕ ಮಟ್ಟದಲ್ಲೇ ಅತ್ಯಂತ ಕಡಿಮೆ ಬೆಲೆಗೆ EESL ಎಲ್‌ಇಡಿ ಬಲ್ಬ್ ಒದಗಿಸಲಿದೆ. ಆ ಮೂಲಕ ಮೇಕ್ ಇನ್ ಇಂಡಿಯಾಗೆ ಒತ್ತು ನೀಡಲಿದೆ ಎಂದಿದ್ದಾರೆ.

ಹವಾಮಾನ ಬದಲಾವಣೆಗೆ ಸಂಬಂಧಿಸಿದಂತೆ UJALA (ಉನ್ನತ್ ಜ್ಯೋತಿ ಬೈ ಅಫೋರ್ಡಬಲ್ ಲೈಟಿಂಗ್ ಫಾರ್ ಆಲ್) ಯೋಜನೆ ಅಡಿಯಲ್ಲಿ ಇದನ್ನು ಪ್ರಸ್ತಾಪ ಮಾಡಲಾಗಿದೆ, ಇದರಿಂದ ವಿದ್ಯುತ್ ಸಹ ಉಳಿಸಬಹುದು ಎಂದು ಅಧಿಕಾರಿಗಳು ತಿಳಿಸಿದ್ದಾರೆ.

ವಿಶ್ವಸಂಸ್ಥೆಯ ಕ್ಲೀನ್ ಡೆವಲಪ್‌ಮೆಂಟ್ ಮೆಕಾನಿಸಂ (ಸಿಡಿಎಂ) ಅಡಿಯಲ್ಲಿ ಗ್ರಾಮ UJALA ದಲ್ಲಿ ನೋಂದಣಿ ಪ್ರಕ್ರಿಯೆ ನಡೆಯುತ್ತಿದೆ. ಆ ಮೂಲಕ ಕಾರ್ಬನ್ ಕ್ರೆಡಿಟ್ಸ್ ಬರಲಿದ್ದು, 2014ರಲ್ಲಿ ಒಂದು ಎಲ್‌ಇಡಿ ಬಲ್ಬ್‌ಗೆ 310 ರುಪಾಯಿಗೆ ಮಾರಲಾಗುತ್ತಿತ್ತು. ಸರ್ಕಾರದ UJALA ಯೋಜನೆ ಅಡಿ ಅದರ ಬೆಲೆಯನ್ನು 70 ರುಪಾಯಿಗೆ ಕಡಿತ ಮಾಡಲಾಯಿತು. ಈಗಿನ ಯೋಜನೆಯು ಅದನ್ನು ಇನ್ನು ದರಕ್ಕೆ ಒದಗಿಸಲಾಗುತ್ತಿದೆ ಎನ್ನಲಾಗಿದೆ.

ಈಗಿನ ಹೊಸ ಯೋಜನೆ ಅಡಿಯಲ್ಲಿ ಕಾರ್ಬನ್ ಕ್ರೆಡಿಟ್ಸ್‌ನಿಂದ 60 ರುಪಾಯಿ ಬಂದರೆ, ಬಾಕಿ 10 ರುಪಾಯಿಯನ್ನು ಗ್ರಾಮೀಣ ಭಾಗದ ಗ್ರಾಹಕರು ಪಾವತಿಸುತ್ತಾರೆ. ಮೊದಲ ಹಂತವಾಗಿ 1 ಕೋಟಿ ಎಲ್‌ಇಡಿ ಬಲ್ಬ್ ವಿತರಿಸಲಾಗುತ್ತದೆ ಎನ್ನಲಾಗಿದ್ದು, ಒಟ್ಟಾರೆ 4000 ಕೋಟಿ ಹೂಡಿಕೆಯಲ್ಲಿ 600 ಕೋಟಿ ರೂ ಗ್ರಾಮೀಣ ಗ್ರಾಹಕರು ಪಾವತಿಸಿದರೆ, 3400 ಕೋಟಿ ರುಪಾಯಿ ಕಾರ್ಬನ್ ಕ್ರೆಡಿಟ್ ಆದಾಯದ ಮೂಲಕ ಬರುತ್ತದೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ.

EESL ಪ್ರಕಾರ, ಮೌಲ್ಯದ ದೃಷ್ಟಿಯಿಂದ ವಿಶ್ವದ ಎರಡನೇ ದೊಡ್ಡ ಮಾರುಕಟ್ಟೆ ಭಾರತವಾಗಿದೆ. ಈಗಿನ ವಿದ್ಯುತ್‌ ಬಲ್ಬ್‌ಗಳ ಮೂಲಕ ಹೆಚ್ಚಿನ ವಿದ್ಯುತ್ ವ್ಯರ್ಥವಾಗುತ್ತಿದೆ. ಸದ್ಯದ ವಿದ್ಯುತ್ ಬೇಡಿಕೆ ಉಚ್ಛ್ರಾಯ ಮಟ್ಟದ 9428 ಮೆಗಾವ್ಯಾಟ್ ತಲುಪುವುದನ್ನು UJALA ಯೋಜನೆಯ ಎಲ್‌ಇಡಿ ಬಲ್ಬ್‌ಗಳನ್ನು ಬಳಸುವ ಮೂಲಕ ತಡೆಯಬಹುದು.


ಓದಿ: ಕರ್ನಾಟಕದಲ್ಲಿ 1560ರೂ ವಿದ್ಯುತ್‌ ಬಿಲ್ ಕಟ್ಟಬೇಕಾದರೆ ದೆಹಲಿಯಲ್ಲಿ ಅಷ್ಟೂ ವಿದ್ಯುತ್‌ ಉಚಿತ!


 

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

‘ಸಾವರ್ಕರ್ ದೇವರನ್ನು, ಧಾರ್ಮಿಕ ನಂಬಿಕೆಗಳನ್ನು ಪ್ರಶ್ನಿಸಿದ್ದರು’: ಪುಣೆ ನ್ಯಾಯಾಲಯದಲ್ಲಿ ಮೊಮ್ಮಗ ಸತ್ಯಕಿ ಸಾವರ್ಕರ್ ಒಪ್ಪಿಗೆ

ಪುಣೆ: ಕಾಂಗ್ರೆಸ್ ನಾಯಕ ಹಾಗೂ ಸಂಸತ್ತಿನ ವಿರೋಧ ಪಕ್ಷದ ನಾಯಕ ರಾಹುಲ್ ಗಾಂಧಿ ವಿರುದ್ಧ ದಾಖಲಾಗಿರುವ ಕ್ರಿಮಿನಲ್ ಮಾನನಷ್ಟ ಮೊಕದ್ದಮೆಯ ವಿಚಾರಣೆಯು ಅತ್ಯಂತ ಕುತೂಹಲಕಾರಿ ಮತ್ತು ರಾಜಕೀಯ-ಸೈದ್ಧಾಂತಿಕ ತಿರುವನ್ನು ಪಡೆದುಕೊಂಡಿದೆ. ವಿನಾಯಕ ದಾಮೋದರ್...

ಮಾಜಿ ಸಚಿವ ಧರ್ಮೇಂದ್ರ ಪ್ರಧಾನ್ ಮಗಳ ಫೋನ್ ಬಿಲ್ ವಿವಾದ: ₹68 ಸಾವಿರ ಬಿಲ್-ಪೇ ಆಗಿದ್ದು ಸರ್ಕಾರಿ ಹಣದಲ್ಲಾ?

ಮಾಜಿ ಕೇಂದ್ರ ಶಿಕ್ಷಣ ಸಚಿವ ಧರ್ಮೇಂದ್ರ ಪ್ರಧಾನ್ ಅವರ ಪುತ್ರಿ ನೈಮಿಷಾ ಪ್ರಧಾನ್ ಅವರು ಮತ್ತೊಮ್ಮೆ ವಿವಾದದ ಕೇಂದ್ರಬಿಂದುವಾಗಿದ್ದಾರೆ. ವಾರಗಳ ಹಿಂದೆ ನೀಟ್ ಪರೀಕ್ಷೆಯ ಪತ್ರಿಕೆ ಸೋರಿಕೆ ಖಂಡಿಸಿ ಕಾಕ್ರೋಚ್ ಜನತಾ ಪಾರ್ಟಿ...

ಇರಾನ್ ವಸತಿ ಕಟ್ಟಡದ ಮೇಲೆ ಅಮೆರಿಕಾ ದಾಳಿ: ಎರಡು ವರ್ಷದ ಮಗು ಸೇರಿ ಒಂದೇ ಕುಟುಂಬದ ಮೂವರ ಸಾವು

ಮಧ್ಯಪ್ರಾಚ್ಯದಲ್ಲಿ ಅಮೆರಿಕ ತನ್ನ ಸಾಮ್ರಾಜ್ಯಶಾಹಿ ಆಧಿಪತ್ಯ ಸ್ಥಾಪನೆಗಾಗಿ ನಡೆಸುತ್ತಿರುವ ಯುದ್ಧಕೋರ ನೀತಿ ಮತ್ತೊಮ್ಮೆ ನಿರಪರಾಧಿ ಸಾರ್ವಜನಿಕರ ರಕ್ತ ಹರಿಸಿದೆ. ಇರಾನ್ ಮೇಲಿನ ಅಮೆರಿಕ ಪಡೆಗಳ ಸರಣಿ ಮತ್ತು ಭೀಕರ ಬಾಂಬ್ ದಾಳಿಗಳು ಕೇವಲ...

SIR: ASDDO ಪಟ್ಟಿಯಲ್ಲಿ ಬೆಂಗಳೂರಿಗೆ ಪ್ರಥಮ ಸ್ಥಾನ, ರಾಜ್ಯದಲ್ಲಿ 2 ಕೋಟಿ ಮತದಾರರ ಹೆಸರು ರದ್ದಾಗುವ ಬೀತಿ

ಕರ್ನಾಟಕದಲ್ಲಿ ನಡೆಯುತ್ತಿರುವ ಮತದಾರರ ಪಟ್ಟಿಯ ವಿಶೇಷ ಸಮಗ್ರ ಪರಿಷ್ಕರಣೆ (SIR) ಪ್ರಕ್ರಿಯೆಯಲ್ಲಿ ರಾಜಧಾನಿ ಬೆಂಗಳೂರು ಅತ್ಯಂತ ಪ್ರಮುಖ ಹಾಗೂ ಕಳವಳಕಾರಿ ಕೇಂದ್ರವಾಗಿ ಹೊರಹೊಮ್ಮಿದೆ. ರಾಜ್ಯದಲ್ಲಿರುವ ಒಟ್ಟು 5.54 ಕೋಟಿ ನೋಂದಾಯಿತ ಮತದಾರರ ಪೈಕಿ...

ಉಮರ್ ಖಾಲಿದ್ ಜಾಮೀನು ಅರ್ಜಿ; ಪೊಲೀಸರ ನಿಲುವು ಕೇಳಿದ ದೆಹಲಿ ಹೈಕೋರ್ಟ್

ಫೆಬ್ರವರಿ 2020 ರಲ್ಲಿ ಈಶಾನ್ಯ ದೆಹಲಿಯಲ್ಲಿ ನಡೆದ ಗಲಭೆಯ ಹಿಂದಿನ "ದೊಡ್ಡ ಪಿತೂರಿ"ಗೆ ಸಂಬಂಧಿಸಿದಂತೆ ಭಯೋತ್ಪಾದನಾ ವಿರೋಧಿ ಕಾನೂನು ಯುಎಪಿಎ ಅಡಿಯಲ್ಲಿ ಪ್ರಕರಣದಲ್ಲಿ ಜಾಮೀನು ಕೋರಿ ಉಮರ್ ಖಾಲಿದ್ ಸಲ್ಲಿಸಿದ ಅರ್ಜಿಯ ಕುರಿತು...

ಮುಂಬೈ: ‘ಶಾಲಾ ಜಿಹಾದ್’ ಎಂಬ ಬಿಜೆಪಿ ನಾಯಕನ ಕೋಮುದ್ವೇಷಕ್ಕೆ ಶಾಲೆಗೆ ನುಗ್ಗಿದ ಬುಲ್ಡೋಜರ್: ಬಿಎಂಸಿಗೆ ಚಾಟಿ ಬೀಸಿದ ಬಾಂಬೆ ಹೈಕೋರ್ಟ್

ಬಿಜೆಪಿ ನಾಯಕ ಕಿರೀಟ್ ಸೋಮಯ್ಯ ಅವರ “ಶಾಲಾ ಜಿಹಾದ್” ಎಂಬ ವಿಷಕಾರಿ ಹೇಳಿಕೆಯ ನಂತರ ಮುಂಬೈನ ಗೋವಂಡಿಯಲ್ಲಿ ಬಡ ಮುಸ್ಲಿಂ ಮಕ್ಕಳ ಶಿಕ್ಷಣದ ಆಶಾಕಿರಣವಾಗಿದ್ದ ತೆಹ್ಜೀಬ್ ಇಸ್ಲಾಮಿಕ್ ಇಂಗ್ಲಿಷ್ ಶಾಲೆಯನ್ನು ಬೃಹನ್ಮುಂಬೈ ಮುನ್ಸಿಪಲ್...

ಹಾಕಿ ತಂಡಕ್ಕೆ ಕೇಸರಿ ಜರ್ಸಿ: ‘ನಮ್ಮ ಗುರುತೇ ನೀಲಿ, ಕೇಸರಿ ಬಣ್ಣದ ತರ್ಕವೇನು?’: ಮಾಜಿ ಹಾಕಿ ಪಟು ಆಕ್ರೋಶ: ಬಿಜೆಪಿ ನಡೆಗೆ ವಿಪಕ್ಷಗಳ ಟೀಕೆ

ಭಾರತೀಯ ಕ್ರೀಡಾರಂಗದ ಹೆಮ್ಮೆಯ ಸಾಂಪ್ರದಾಯಿಕ 'ನೀಲಿ' (ಬ್ಲೂ) ಬಣ್ಣವನ್ನು ಕಳಚಿ, ಹಾಕಿ ತಂಡಕ್ಕೆ ಬಲವಂತವಾಗಿ ಕೇಸರಿ ಬಣ್ಣದ ಜೆರ್ಸಿ ತೊಡಿಸಲು ಹೊರಟಿರುವುದು ಇದೀಗ ತೀವ್ರ ಆಕ್ರೋಶಕ್ಕೆ ಕಾರಣವಾಗಿದೆ. ಮುಂಬರುವ ಎಫ್‌ಐಎಚ್ (FIH) ವಿಶ್ವಕಪ್‌ಗಾಗಿ...

ತಮಿಳುನಾಡು: ಶಾಲಾ ಮಕ್ಕಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡಲು ಚಿಂತನೆ

ತಮಿಳುನಾಡಿನ ಸರ್ಕಾರಿ ಶಾಲೆಗಳ ಮಧ್ಯಾಹ್ನದ ಬಿಸಿಊಟದ ಯೋಜನೆಯಡಿಯಲ್ಲಿ ವಿದ್ಯಾರ್ಥಿಗಳಿಗೆ ವಾರಕ್ಕೊಮ್ಮೆ ಚಿಕನ್ ಬಿರಿಯಾನಿ ನೀಡುವ ಪ್ರಸ್ತಾವನೆಯನ್ನು ತಮಿಳುನಾಡು ಸರ್ಕಾರ ಪರಿಶೀಲಿಸುತ್ತಿದ್ದು, ಶಾಲಾ ಶಿಕ್ಷಣ ಸಚಿವ ರಾಜ್‌ಮೋಹನ್ ಅವರು ಈ ಕುರಿತು ಮುಖ್ಯಮಂತ್ರಿ ಸಿ....

ಪ್ರಶ್ನೆಪತ್ರಿಕೆ ಸೋರಿಕೆ ವಿರೋಧಿ ಮಸೂದೆಯಲ್ಲಿ ಸುಧಾರಣೆಗಳಿಲ್ಲ, ರಾಜಕೀಯ ಮಾತ್ರ: ಕೇಂದ್ರದ ವಿರುದ್ಧ ಖರ್ಗೆ ವಾಗ್ದಾಳಿ

ಪಬ್ಲಿಕ್ ಪರೀಕ್ಷೆಗಳ (ಅನ್ಯಾಯಯುತ ವಿಧಾನಗಳ ತಡೆಗಟ್ಟುವಿಕೆ) ತಿದ್ದುಪಡಿ ಮಸೂದೆ 2026 ರ ಚರ್ಚೆಯ ಸಂದರ್ಭದಲ್ಲಿ ಮಾತನಾಡಿದ ರಾಜ್ಯಸಭೆ ವಿರೋಧ ಪಕ್ಷದ ನಾಯಕ ಮಲ್ಲಿಕಾರ್ಜುನ ಖರ್ಗೆ ಕೇಂದ್ರ ಸರ್ಕಾರದ ಮೇಲೆ ತೀವ್ರ ವಾಗ್ದಾಳಿ ನಡೆಸಿದರು....

ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಕೆ ಆರೋಪ; ಗೃಹ ಸಚಿವ ಅಮಿತ್‌ ಶಾ ಮೌನ ಪ್ರಶ್ನಿಸಿದ ಕಪಿಲ್ ಸಿಬಲ್

ಜುಲೈ 20 ರಂದು ದೆಹಲಿಯಲ್ಲಿ ನಡೆದ ಸಂಶತ್ ಚಲೋ ಪ್ರತಿಭಟನಾ ಮೆರವಣಿಗೆಯಲ್ಲಿ ವಿದ್ಯಾರ್ಥಿಗಳ ಮೇಲೆ ಪೆಲೆಟ್ ಗನ್ ಬಳಸಲಾಗಿದೆ ಎಂಬ ಆರೋಪದ ಬಗ್ಗೆ ಕೇಂದ್ರ ಗೃಹ ಸಚಿವ ಅಮಿತ್ ಶಾ ಅವರ ಮೌನವನ್ನು...