Homeಮುಖಪುಟರಷ್ಯಾದ ಸೇನೆಯಲ್ಲಿದ್ದ ಹಲವಾರು ಭಾರತೀಯರು ಇನ್ನೂ ನಾಪತ್ತೆ: ವರದಿ

ರಷ್ಯಾದ ಸೇನೆಯಲ್ಲಿದ್ದ ಹಲವಾರು ಭಾರತೀಯರು ಇನ್ನೂ ನಾಪತ್ತೆ: ವರದಿ

- Advertisement -
- Advertisement -

ರಷ್ಯಾದ ಸೈನ್ಯಕ್ಕೆ ಅಕ್ರಮವಾಗಿ ಸೇರ್ಪಡೆಗೊಂಡ ಹಲವಾರು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಗಳು ಮತ್ತು ನಾಪತ್ತೆಯಾದ ಇಬ್ಬರ ಕುಟುಂಬ ಸದಸ್ಯರನ್ನು ಉಲ್ಲೇಖಿಸಿ ದಿ ಹಿಂದೂ ಭಾನುವಾರ ವರದಿ ಮಾಡಿದೆ. ನಾಪತ್ತೆಯಾದವರಲ್ಲಿ ಒಬ್ಬರನ್ನು ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್‌ಧರ್‌ನ 27 ವರ್ಷದ ಜಹೂರ್ ಶೇಖ್ ಎಂದು ಗುರುತಿಸಲಾಗಿದೆ. ರಷ್ಯಾದ ಸೇನೆಯಲ್ಲಿದ್ದ

ನಾಪತ್ತೆಯಾದ ಜಹೂರ್‌ ಶೇಖ್‌ ಅವರ ತಂದೆ ಮೊಹಮ್ಮದ್ ಅಮೀನ್ ಶೇಖ್ ಮಾತನಾಡಿ, ತನ್ನ ಮಗ ಡಿಸೆಂಬರ್ 31 ರಂದು ಕುಟುಂಬದೊಂದಿಗೆ ಕೊನೆಯದಾಗಿ ಮಾತನಾಡಿದ್ದಾನೆ ಎಂದು ಹೇಳಿದ್ದಾರೆ. “ತಾನು ತರಬೇತಿಗೆ ಹೋಗುತ್ತಿರುವುದಾಗಿ ಮತ್ತು ಮುಂದಿನ ಮೂರು ತಿಂಗಳು ಫೋನ್‌ನಲ್ಲಿ ಲಭ್ಯವಿರುವುದಿಲ್ಲ ಎಂದು ಅವರು ಹೇಳಿದ್ದಾರೆ” ಎಂದು ಜಮ್ಮು ಕಾಶ್ಮೀರದ ಸಾರ್ವಜನಿಕ ಆರೋಗ್ಯ ಇಲಾಖೆಯ ನಿವೃತ್ತ ಇನ್ಸ್‌ಪೆಕ್ಟರ್ ಆಗಿರುವ ಮೊಹಮ್ಮದ್ ಅಮೀನ್ ಶೇಖ್ ಹೇಳಿದ್ದಾರೆಂದು ದಿ ಹಿಂದೂ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅದಾಗ್ಯೂ, ಜನವರಿಯಲ್ಲಿ ರಷ್ಯಾದಲ್ಲಿ ಭಾರತೀಯರ ಸಾವಿನ ಬಗ್ಗೆ ಸುದ್ದಿಯನ್ನು ನೋಡಿ ನಾವು ಚಿಂತೆಗೊಳಗಾಗಿ, ಅವರ ಸಂಖ್ಯೆಗೆ ಕರೆ ಮಾಡಿದೆವು. ಆದರೆ ಅವರಿಗೆ ಸಂಪರ್ಕ ಸಾಧ್ಯವಾಗಲಿಲ್ಲ. ಅವರು ಕೂಡಾ ಇದುವರೆಗೆ ನಮಗೆ ಕರೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 24, 2022 ರಂದು ರಷ್ಯಾವು ಉಕ್ರೇನ್ ವಿರುದ್ಧ ಆಕ್ರಮಣ ಪ್ರಾರಂಭಿಸಿದ್ದು, ಎರಡನೇ ವಿಶ್ವ ಯುದ್ಧದ ನಂತರ ಯುರೋಪ್‌ನಲ್ಲಿ ನಡೆದ ಭಾರಿ ಸಂಘರ್ಷ ಇದಾಗಿದೆ. ಯುದ್ಧದಲ್ಲಿ ಸುಮಾರು ನೂರು ಭಾರತೀಯರನ್ನು ರಷ್ಯಾ ಸೈನ್ಯದ ಪರವಾಗಿ ಹೋರಾಡುವಂತೆ ಮಾಡಲಾಗಿದೆ ಎಂದು ನಂಬಲಾಗಿದೆ. ಅವರಲ್ಲಿ ಹತ್ತಾರು ಜನರು ಭಾರತಕ್ಕೆ ಮರಳಲು ಸರ್ಕಾರದ ಸಹಾಯವನ್ನು ಕೋರಿದ್ದರು.

ಜುಲೈ ವೇಳೆಗೆ ಸಂಘರ್ಷದಲ್ಲಿ ಕನಿಷ್ಠ ಎಂಟು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸಂಸತ್ತಿಗೆ ತಿಳಿಸಿದ್ದಾರೆ. ಬೇರೆ ದುಡಿಮೆಗೆ ಎಂದು ರಷ್ಯಾಕ್ಕೆ ಕರೆಸಿಕೊಂಡು ಭಾರತೀಯರನ್ನು ಸೇನೆಗೆ ಸೇರಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಕಳೆದ ವಾರ ಜಹೂರ್ ಶೇಖ್ ಬಗ್ಗೆ ಮಾಹಿತಿ ನೀಡಲು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ವಿಫಲವಾದ ನಂತರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಷ್ಯಾದ ರಾಯಭಾರ ಕಚೇರಿಯಿಂದ ಉತ್ತರಗಳನ್ನು ಪಡೆಯಲು ಮೊಹಮ್ಮದ್ ಅಮೀನ್ ಶೇಖ್ ಮತ್ತು ಅವರ ಇಬ್ಬರು ಪುತ್ರರು ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ರಷ್ಯಾದ ಸೇನೆಯಲ್ಲಿದ್ದ

“ನಾವು ರಷ್ಯಾದ ರಾಯಭಾರ ಕಚೇರಿಯಲ್ಲಿ ಮನವಿ ಸಲ್ಲಿಸಿದ್ದೇವೆ” ಎಂದು ಜಹೂರ್ ಶೇಖ್ ಅವರ ಹಿರಿಯ ಸಹೋದರ 31 ವರ್ಷದ ಐಜಾಜ್ ಅಮೀನ್ ದಿ ಹಿಂದೂಗೆ ತಿಳಿಸಿದ್ದಾರೆ. “ಅವರು ವಿಷಯವನ್ನು ಪರಿಶೀಲಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಕನಿಷ್ಠ 15 ಭಾರತೀಯರು ಇನ್ನೂ ನಾಪತ್ತೆಯಾಗಿದ್ದಾರೆ ಮತ್ತು ರಷ್ಯಾ ಸರ್ಕಾರವು ಸಹಕರಿಸುತ್ತಿದ್ದರೂ, ಸ್ಥಳದಲ್ಲಿ ಇರುವ ಅವರ ಕಮಾಂಡರ್‌ಗಳು ಸ್ಪಂದಿಸುತ್ತಿಲ್ಲ” ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಕೆಲಸಕ್ಕೆ ಸಂಬಂಧಿಸಿದ ಯೂಟ್ಯೂಬ್ ವಿಡಿಯೋ ನೋಡಿದ ನಂತರ ಜಹೂರ್ ಶೇಖ್ ರಷ್ಯಾಕ್ಕೆ ಪ್ರಯಾಣಿಸಿದ್ದರು ಎಂದು ಐಜಾಜ್ ಅಮೀನ್ ಹೇಳಿದ್ದಾರೆ. ಆದರೆ, ಅವರು ರಷ್ಯಾಕ್ಕೆ ತಲುಪಿದ ನಂತರ ಸೈನ್ಯಕ್ಕೆ ಸೇರುವಂತೆ ಆಗಿತ್ತು, ಅಲ್ಲಿ ಅವರು ವಂಚನೆಗೊಳಗಾಗಿದ್ದಾರೆ. ಜಹೋರ್ ಅವರದೇ ರೀತಿ, ಪಂಜಾಬ್‌ನ ಜಲಂಧರ್‌ನ 30 ವರ್ಷದ ಮಂದೀಪ್ ಕೂಡಾ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

“ನಾವು ಮಂದೀಪ್ ಅವರೊಂದಿಗೆ ಕೊನೆಯದಾಗಿ ಮಾರ್ಚ್ 3 ರಂದು ಮಾತನಾಡಿದ್ದೇವೆ” ಎಂದು ಮಂದೀಪ್ ಅವರ ಸಹೋದರ ಜಗದೀಪ್ ಕುಮಾರ್ ಹೇಳಿದ್ದಾರೆಂದು ದಿ ಹಿಂದೂ ವರದಿ ಮಾಡಿದೆ. “ಅವರು ಆರಂಭದಲ್ಲಿ ಅರ್ಮೇನಿಯಾಕ್ಕೆ ಹೋಗಿದ್ದು, ಅಲ್ಲಿಂದ ಕೆಲಸ ಹುಡುಕಿಕೊಂಡು ಇಟಲಿಗೆ ಹೋಗಬೇಕಿತ್ತು. ಬದಲಾಗಿ, ಅವರು ವೀಸಾ ಏಜೆಂಟ್‌ನ ಮೋಸದಿಂದ ರಷ್ಯಾಕ್ಕೆ ಹೋಗಿ ಅವರ ಸೈನ್ಯಕ್ಕೆ ಸೇರುವಂತೆ ಆಯಿತು. ಕೆಲವು ದಿನಗಳ ತರಬೇತಿಯ ನಂತರ ಅವರನ್ನು ಯುದ್ಧ ವಲಯಕ್ಕೆ ಕಳುಹಿಸಲಾಗಿದೆ ಎಂದು ವರದಿ ಹೇಳಿದೆ.

ದೆಹಲಿಯಲ್ಲಿ ವಿದೇಶಾಂಗ ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿದ್ದೇನೆ ಎಂದು ಕುಮಾರ್ ಹೇಳಿದ್ದಾರೆ, ರಷ್ಯಾದಲ್ಲಿ ಕನಿಷ್ಠ 25 ಭಾರತೀಯರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಅಕ್ಟೋಬರ್ 21 ರಂದು, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಷ್ಯಾದ ಸೈನ್ಯಕ್ಕೆ ಸೇರ್ಪಡೆಗೊಂಡ ಮತ್ತು ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಭಾಗವಹಿಸಲಿದ್ದ 85 ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.

ರಷ್ಯಾದ ಸೇನೆಯಿಂದ ಇನ್ನೂ 20 ಭಾರತೀಯರನ್ನು ಬಿಡುಗಡೆ ಮಾಡಬೇಕಾಗಿದೆ ಮತ್ತು ಅವರನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಹೊಸ ದೆಹಲಿ ಪ್ರಯತ್ನಿಸುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಹೇಳಿದ್ದಾರೆ. ಜುಲೈನಲ್ಲಿ, ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ಭೇಟಿ ನೀಡಿದ್ದಾಗ, ರಷ್ಯಾವೂ ತನ್ನ ಮಿಲಿಟರಿಯಿಂದ ಎಲ್ಲಾ ಭಾರತೀಯರನ್ನು ಶೀಘ್ರವಾಗಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು ಎಂದು ವಿದೇಶಾಂಗ ಸಚಿವಾಲಯ ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ತ್ರಿಪುರಾದಲ್ಲಿ ಕೋಮು ಹಿಂಸಾಚಾರ : ಮಸೀದಿ, ಮನೆಗಳಿಗೆ ಹಾನಿ ; ನಿಷೇಧಾಜ್ಞೆ ಜಾರಿ

ಸ್ಥಳೀಯ ದೇವಾಲಯೊಂದಕ್ಕೆ ಚಂದಾ ಸಂಗ್ರಹಿಸುವ ವಿಚಾರದಲ್ಲಿ ಎರಡು ಗುಂಪುಗಳ ನಡುವೆ ಘರ್ಷಣೆ ನಡೆದು ಕನಿಷ್ಠ ಐದರಿಂದ ಆರು ಜನರು ಗಾಯಗೊಂಡು ಮನೆಗಳು, ಮರದ ಅಂಗಡಿ ಮತ್ತು ಮಸೀದಿಗೆ ಹಾನಿಯಾದ ನಂತರ, ಜನವರಿ 10ರ...

ಭದ್ರತಾ ಕಾರಣ ನೀಡಿ ಸ್ಮಾರ್ಟ್‌ಫೋನ್ ತಯಾರಕರು ಮೂಲ ಕೋಡ್ ನೀಡುವಂತೆ ಒತ್ತಾಯಿಸಲು ಕೇಂದ್ರದ ಪ್ರಸ್ತಾಪ

ನವದೆಹಲಿ: ಸ್ಮಾರ್ಟ್‌ಫೋನ್ ತಯಾರಕರು ಸರ್ಕಾರದೊಂದಿಗೆ ಮೂಲ ಕೋಡ್ ಹಂಚಿಕೊಳ್ಳುವುದು ಮತ್ತು ಭದ್ರತಾ ಕ್ರಮಗಳ ಭಾಗವಾಗಿ ಹಲವಾರು ಸಾಫ್ಟ್‌ವೇರ್ ಬದಲಾವಣೆಗಳನ್ನು ಮಾಡುವುದು ಕಡ್ಡಾಯಗೊಳಿಸಲು ಮೋದಿ ನೇತೃತ್ವದ ಕೇಂದ್ರ ಸರ್ಕಾರ ಪ್ರಸ್ತಾಪಿಸಿದೆ, ಇದು ಆಪಲ್ ಮತ್ತು...

ದಾಳಿ ನಡೆಸಿದರೆ ನಮ್ಮ ನೇರ ಗುರಿಯಾಗುತ್ತೀರಿ : ಅಮೆರಿಕ, ಇಸ್ರೇಲ್‌ಗೆ ಎಚ್ಚರಿಕೆ ನೀಡಿದ ಇರಾನ್

ಇರಾನ್‌ನಲ್ಲಿ ನಡೆಯುತ್ತಿರುವ ಆಡಳಿತ ವಿರೋಧಿ ದಂಗೆಯಲ್ಲಿ ಸಾವುಗಳು ಹೆಚ್ಚಾದರೆ ಅಮೆರಿಕ ಮಧ್ಯಪ್ರವೇಶಿಸಲಿದೆ ಎಂದಿರುವ ಅಧ್ಯಕ್ಷ ಡೊನಾಲ್ಡ್ ಟ್ರಂಪ್‌ಗೆ ಇರಾನ್‌ ತಿರುಗೇಟು ನೀಡಿದೆ. ಇರಾನ್‌ನ ಸಂಸತ್ತಿನ ಅಧ್ಯಕ್ಷ ಮೊಹಮ್ಮದ್ ಬಾಗರ್ ಖಲೀಬಾಫ್ "ಅಮೆರಿಕ ಇರಾನ್ ಮೇಲೆ...

ಕೇಂದ್ರ ಸರ್ಕಾರದ ಎಚ್ಜರಿಕೆ ನಂತರ 3,500 ಪೋಸ್ಟ್‌ಗಳ ನಿರ್ಬಂಧ, 600 ಖಾತೆಗಳನ್ನು ಅಳಿಸಿದ ಎಕ್ಸ್ ಪ್ಲಾಟ್ ಫಾರ್ಮ್

ಮಹಿಳೆಯರನ್ನು ಗುರಿಯಾಗಿಸಿಕೊಂಡು AI- ರಚಿತವಾದ ಅಶ್ಲೀಲ ವಿಡಿಯೋಗಳ ವಿಷಯವನ್ನು ಕೇಂದ್ರವು ಗಮನಕ್ಕೆ ತಂದ ಕಠಿಣ ಕಾನೂನು ಜಾರಿಗೊಳಿಸುವಿಕೆಗೆ ಪ್ರತಿಜ್ಞೆ ಮಾಡಿದ ನಂತರ X 3,500 ಪೋಸ್ಟ್‌ಗಳು ಮತ್ತು 600 ಖಾತೆಗಳನ್ನು ಅಳಿಸಿಹಾಕಿದೆ.   ಅಶ್ಲೀಲ ವಿಷಯಗಳ...

ಮಾನವ ತಲೆಬುರುಡೆ, ಹುಲಿಚರ್ಮದಂತಹ ಕಸ್ಟಮೈಸ್ ಚರ್ಮ ಸೇರಿದಂತೆ ಹಲವು ಅನುಮಾನಾಸ್ಪದ ವಸ್ತುಗಳ ಮಾರಾಟ: ಮಾಂತ್ರಿಕನ ಬಂಧನ

ಬೆಂಗಳೂರು ವಲಯ ಘಟಕದ ಕಂದಾಯ ಗುಪ್ತಚರ ನಿರ್ದೇಶನಾಲಯ (ಡಿಆರ್‌ಐ) ಉತ್ತರ ಬೆಂಗಳೂರಿನ ಭೂಪ್ಸಂದ್ರದ 39 ವರ್ಷದ ವ್ಯಕ್ತಿಯನ್ನು ವನ್ಯಜೀವಿ (ರಕ್ಷಣಾ) ಕಾಯ್ದೆ, 1972 ರ ಅಡಿಯಲ್ಲಿ ಬಂಧಿಸಿದೆ. "ಜನವರಿ 9 ರಂದು ನಡೆದ ಕಾರ್ಯಾಚರಣೆಯಲ್ಲಿ...

ದಲಿತ ಮಹಿಳೆಯನ್ನು ಕೊಂದು ಮಗಳ ಅಪಹರಣ : ಆರೋಪಿಯ ಬಂಧನ

ಉತ್ತರ ಪ್ರದೇಶದ ಮೀರತ್‌ನಲ್ಲಿ ದಲಿತ ಮಹಿಳೆಯನ್ನು ಕೊಂದು, ಆಕೆಯ ಮಗಳನ್ನು ಅಪಹರಿಸಿದ ಆರೋಪಿಯನ್ನು ಪೊಲೀಸರು ಶನಿವಾರ (ಜ.10) ಬಂಧಿಸಿದ್ದಾರೆ. ಬಂಧಿತನನ್ನು 22 ವರ್ಷದ ಪರಾಸ್ ಸೋಮ್ (ಪರಾಸ್ ಠಾಕೂರ್) ಎಂದು ಗುರುತಿಸಲಾಗಿದೆ. ರಜಪೂತ ಸಮುದಾಯದ...

‘ಮುಂಬೈ ಮಹಾರಾಷ್ಟ್ರ ನಗರವಲ್ಲ’: ಅಣ್ಣಾಮಲೈ ಹೇಳಿಕೆಗೆ ಶಿವಸೇನೆಯಿಂದ ತೀವ್ರ ಆಕ್ರೋಶ

ಮುಂಬೈ: ಐಪಿಎಸ್ ಅಧಿಕಾರಿಯಿಂದ ರಾಜಕಾರಣಿಯಾಗಿ ಬದಲಾದ ಕೆ.ಅಣ್ಣಾಮಲೈ ಅವರು "ಬಾಂಬೆ ಮಹಾರಾಷ್ಟ್ರ ನಗರವಲ್ಲ, ಅಂತರರಾಷ್ಟ್ರೀಯ ನಗರ" ಎಂದು ಹೇಳಿದ್ದು, ಇದು ಮುಂಬೈನಲ್ಲಿ ವಿವಾದ ಸೃಷ್ಟಿಸಿದೆ.  ಇದಕ್ಕೆ ಉದ್ಧವ್ ಠಾಕ್ರೆ ನೇತೃತ್ವದ ಶಿವಸೇನೆ (ಯುಬಿಟಿ)...

ಮೂರನೇ ಅತ್ಯಾಚಾರ ಪ್ರಕರಣ ದಾಖಲು : ಉಚ್ಛಾಟಿತ ಕಾಂಗ್ರೆಸ್ ಶಾಸಕ ರಾಹುಲ್ ಮಾಂಕೂಟತ್ತಿಲ್ ಬಂಧನ

ಅತ್ಯಾಚಾರ ಆರೋಪ ಕೇಳಿ ಬಂದ ಬಳಿಕ ಕಾಂಗ್ರೆಸ್‌ನಿಂದ ಉಚ್ಛಾಟನೆಗೊಂಡಿರುವ ಕೇರಳದ ಪಾಲಕ್ಕಾಡ್‌ನ ಶಾಸಕ ರಾಹುಲ್ ಮಾಂಕೂಟತ್ತಿಲ್ ಅವರನ್ನು ಭಾನುವಾರ (ಜ.11) ಬಂಧಿಸಲಾಗಿದೆ. ಪಾಲಕ್ಕಾಡ್‌ನ ಕೆಪಿಎಂ ರೀಜೆನ್ಸಿ ಹೋಟೆಲ್‌ನಿಂದ ಬೆಳಗಿನ ಜಾವ 12.30ರ ಸುಮಾರಿಗೆ ಮಾಂಕೂಟತ್ತಿಲ್...

ಇರಾನ್‌ ಹಿಂಸಾಚಾರ : ಸಾವಿನ ಸಂಖ್ಯೆ 116ಕ್ಕೆ ಏರಿಕೆ

ಕಳೆದ ಎರಡು ವಾರಗಳಿಂದ ಇರಾನ್‌ನಲ್ಲಿ ನಡೆಯುತ್ತಿರುವ ಸರ್ಕಾರಿ ವಿರೋಧಿ ಪ್ರತಿಭಟನೆಗಳಲ್ಲಿ ಕನಿಷ್ಠ 116 ಜನರು ಸಾವನ್ನಪ್ಪಿದ್ದಾರೆ. ಅಧಿಕಾರಿಗಳು ಪ್ರತಿಭಟನಾ ನಿರತರ ಮೇಲೆ ಕಠಿಣ ಕ್ರಮದ ಎಚ್ಚರಿಕೆ ನೀಡಿದ್ದಾರೆ ಎಂದು ವರದಿಯಾಗಿದೆ. ಡಿಸೆಂಬರ್ 28ರಂದು ಪ್ರಾರಂಭವಾದ...

ಪಾಕಿಸ್ತಾನದ ಸಿಂಧ್‌ನಲ್ಲಿ 23 ವರ್ಷದ ಹಿಂದೂ ರೈತನನ್ನು ಗುಂಡಿಕ್ಕಿ ಕೊಂದ ಭೂಮಾಲೀಕರು 

ಕರಾಚಿ: ಪಾಕಿಸ್ತಾನದ ಸಿಂಧ್ ಪ್ರಾಂತ್ಯದಲ್ಲಿ 23 ವರ್ಷದ ಹಿಂದೂ ರೈತನೊಬ್ಬ ತನ್ನ ಜಮೀನಿನಲ್ಲಿ ಆಶ್ರಯ ಮನೆ ನಿರ್ಮಿಸಿದ್ದಕ್ಕಾಗಿ ಆತನ ಮನೆ ಮಾಲೀಕರು ಗುಂಡಿಕ್ಕಿ ಕೊಂದಿದ್ದಾರೆ, ಇದು ಹಿಂದೂ ಸಮುದಾಯದಿಂದ ವ್ಯಾಪಕ ಪ್ರತಿಭಟನೆಗೆ ಎಂದು...