Homeಮುಖಪುಟರಷ್ಯಾದ ಸೇನೆಯಲ್ಲಿದ್ದ ಹಲವಾರು ಭಾರತೀಯರು ಇನ್ನೂ ನಾಪತ್ತೆ: ವರದಿ

ರಷ್ಯಾದ ಸೇನೆಯಲ್ಲಿದ್ದ ಹಲವಾರು ಭಾರತೀಯರು ಇನ್ನೂ ನಾಪತ್ತೆ: ವರದಿ

- Advertisement -
- Advertisement -

ರಷ್ಯಾದ ಸೈನ್ಯಕ್ಕೆ ಅಕ್ರಮವಾಗಿ ಸೇರ್ಪಡೆಗೊಂಡ ಹಲವಾರು ಭಾರತೀಯರು ನಾಪತ್ತೆಯಾಗಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವಾಲಯದ ಮೂಲಗಳು ಮತ್ತು ನಾಪತ್ತೆಯಾದ ಇಬ್ಬರ ಕುಟುಂಬ ಸದಸ್ಯರನ್ನು ಉಲ್ಲೇಖಿಸಿ ದಿ ಹಿಂದೂ ಭಾನುವಾರ ವರದಿ ಮಾಡಿದೆ. ನಾಪತ್ತೆಯಾದವರಲ್ಲಿ ಒಬ್ಬರನ್ನು ಜಮ್ಮು ಕಾಶ್ಮೀರದ ಕುಪ್ವಾರ ಜಿಲ್ಲೆಯ ತಂಗ್‌ಧರ್‌ನ 27 ವರ್ಷದ ಜಹೂರ್ ಶೇಖ್ ಎಂದು ಗುರುತಿಸಲಾಗಿದೆ. ರಷ್ಯಾದ ಸೇನೆಯಲ್ಲಿದ್ದ

ನಾಪತ್ತೆಯಾದ ಜಹೂರ್‌ ಶೇಖ್‌ ಅವರ ತಂದೆ ಮೊಹಮ್ಮದ್ ಅಮೀನ್ ಶೇಖ್ ಮಾತನಾಡಿ, ತನ್ನ ಮಗ ಡಿಸೆಂಬರ್ 31 ರಂದು ಕುಟುಂಬದೊಂದಿಗೆ ಕೊನೆಯದಾಗಿ ಮಾತನಾಡಿದ್ದಾನೆ ಎಂದು ಹೇಳಿದ್ದಾರೆ. “ತಾನು ತರಬೇತಿಗೆ ಹೋಗುತ್ತಿರುವುದಾಗಿ ಮತ್ತು ಮುಂದಿನ ಮೂರು ತಿಂಗಳು ಫೋನ್‌ನಲ್ಲಿ ಲಭ್ಯವಿರುವುದಿಲ್ಲ ಎಂದು ಅವರು ಹೇಳಿದ್ದಾರೆ” ಎಂದು ಜಮ್ಮು ಕಾಶ್ಮೀರದ ಸಾರ್ವಜನಿಕ ಆರೋಗ್ಯ ಇಲಾಖೆಯ ನಿವೃತ್ತ ಇನ್ಸ್‌ಪೆಕ್ಟರ್ ಆಗಿರುವ ಮೊಹಮ್ಮದ್ ಅಮೀನ್ ಶೇಖ್ ಹೇಳಿದ್ದಾರೆಂದು ದಿ ಹಿಂದೂ ವರದಿ ಮಾಡಿದೆ.

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ
ಇಲ್ಲಿಕ್ಲಿಕ್ ಮಾಡಿ

“ಅದಾಗ್ಯೂ, ಜನವರಿಯಲ್ಲಿ ರಷ್ಯಾದಲ್ಲಿ ಭಾರತೀಯರ ಸಾವಿನ ಬಗ್ಗೆ ಸುದ್ದಿಯನ್ನು ನೋಡಿ ನಾವು ಚಿಂತೆಗೊಳಗಾಗಿ, ಅವರ ಸಂಖ್ಯೆಗೆ ಕರೆ ಮಾಡಿದೆವು. ಆದರೆ ಅವರಿಗೆ ಸಂಪರ್ಕ ಸಾಧ್ಯವಾಗಲಿಲ್ಲ. ಅವರು ಕೂಡಾ ಇದುವರೆಗೆ ನಮಗೆ ಕರೆ ಮಾಡಿಲ್ಲ” ಎಂದು ಅವರು ಹೇಳಿದ್ದಾರೆ.

ಫೆಬ್ರವರಿ 24, 2022 ರಂದು ರಷ್ಯಾವು ಉಕ್ರೇನ್ ವಿರುದ್ಧ ಆಕ್ರಮಣ ಪ್ರಾರಂಭಿಸಿದ್ದು, ಎರಡನೇ ವಿಶ್ವ ಯುದ್ಧದ ನಂತರ ಯುರೋಪ್‌ನಲ್ಲಿ ನಡೆದ ಭಾರಿ ಸಂಘರ್ಷ ಇದಾಗಿದೆ. ಯುದ್ಧದಲ್ಲಿ ಸುಮಾರು ನೂರು ಭಾರತೀಯರನ್ನು ರಷ್ಯಾ ಸೈನ್ಯದ ಪರವಾಗಿ ಹೋರಾಡುವಂತೆ ಮಾಡಲಾಗಿದೆ ಎಂದು ನಂಬಲಾಗಿದೆ. ಅವರಲ್ಲಿ ಹತ್ತಾರು ಜನರು ಭಾರತಕ್ಕೆ ಮರಳಲು ಸರ್ಕಾರದ ಸಹಾಯವನ್ನು ಕೋರಿದ್ದರು.

ಜುಲೈ ವೇಳೆಗೆ ಸಂಘರ್ಷದಲ್ಲಿ ಕನಿಷ್ಠ ಎಂಟು ಭಾರತೀಯರು ಸಾವನ್ನಪ್ಪಿದ್ದಾರೆ ಎಂದು ವಿದೇಶಾಂಗ ವ್ಯವಹಾರಗಳ ಸಚಿವ ಎಸ್ ಜೈಶಂಕರ್ ಸಂಸತ್ತಿಗೆ ತಿಳಿಸಿದ್ದಾರೆ. ಬೇರೆ ದುಡಿಮೆಗೆ ಎಂದು ರಷ್ಯಾಕ್ಕೆ ಕರೆಸಿಕೊಂಡು ಭಾರತೀಯರನ್ನು ಸೇನೆಗೆ ಸೇರಿಸಲಾಗುತ್ತಿದೆ ಎನ್ನಲಾಗುತ್ತಿದೆ.

ಕಳೆದ ವಾರ ಜಹೂರ್ ಶೇಖ್ ಬಗ್ಗೆ ಮಾಹಿತಿ ನೀಡಲು ಮಾಸ್ಕೋದಲ್ಲಿರುವ ಭಾರತೀಯ ರಾಯಭಾರ ಕಚೇರಿ ವಿಫಲವಾದ ನಂತರ ವಿದೇಶಾಂಗ ವ್ಯವಹಾರಗಳ ಸಚಿವಾಲಯ ಮತ್ತು ರಷ್ಯಾದ ರಾಯಭಾರ ಕಚೇರಿಯಿಂದ ಉತ್ತರಗಳನ್ನು ಪಡೆಯಲು ಮೊಹಮ್ಮದ್ ಅಮೀನ್ ಶೇಖ್ ಮತ್ತು ಅವರ ಇಬ್ಬರು ಪುತ್ರರು ನವದೆಹಲಿಗೆ ಪ್ರಯಾಣ ಬೆಳೆಸಿದ್ದಾರೆ. ರಷ್ಯಾದ ಸೇನೆಯಲ್ಲಿದ್ದ

“ನಾವು ರಷ್ಯಾದ ರಾಯಭಾರ ಕಚೇರಿಯಲ್ಲಿ ಮನವಿ ಸಲ್ಲಿಸಿದ್ದೇವೆ” ಎಂದು ಜಹೂರ್ ಶೇಖ್ ಅವರ ಹಿರಿಯ ಸಹೋದರ 31 ವರ್ಷದ ಐಜಾಜ್ ಅಮೀನ್ ದಿ ಹಿಂದೂಗೆ ತಿಳಿಸಿದ್ದಾರೆ. “ಅವರು ವಿಷಯವನ್ನು ಪರಿಶೀಲಿಸುತ್ತಿದ್ದಾರೆ ಎಂದು ಅವರು ಹೇಳಿದ್ದಾರೆ. ಕನಿಷ್ಠ 15 ಭಾರತೀಯರು ಇನ್ನೂ ನಾಪತ್ತೆಯಾಗಿದ್ದಾರೆ ಮತ್ತು ರಷ್ಯಾ ಸರ್ಕಾರವು ಸಹಕರಿಸುತ್ತಿದ್ದರೂ, ಸ್ಥಳದಲ್ಲಿ ಇರುವ ಅವರ ಕಮಾಂಡರ್‌ಗಳು ಸ್ಪಂದಿಸುತ್ತಿಲ್ಲ” ಎಂದು ವಿದೇಶಾಂಗ ಸಚಿವಾಲಯದ ಅಧಿಕಾರಿಗಳು ತಿಳಿಸಿದ್ದಾರೆ.

ಭದ್ರತಾ ಕೆಲಸಕ್ಕೆ ಸಂಬಂಧಿಸಿದ ಯೂಟ್ಯೂಬ್ ವಿಡಿಯೋ ನೋಡಿದ ನಂತರ ಜಹೂರ್ ಶೇಖ್ ರಷ್ಯಾಕ್ಕೆ ಪ್ರಯಾಣಿಸಿದ್ದರು ಎಂದು ಐಜಾಜ್ ಅಮೀನ್ ಹೇಳಿದ್ದಾರೆ. ಆದರೆ, ಅವರು ರಷ್ಯಾಕ್ಕೆ ತಲುಪಿದ ನಂತರ ಸೈನ್ಯಕ್ಕೆ ಸೇರುವಂತೆ ಆಗಿತ್ತು, ಅಲ್ಲಿ ಅವರು ವಂಚನೆಗೊಳಗಾಗಿದ್ದಾರೆ. ಜಹೋರ್ ಅವರದೇ ರೀತಿ, ಪಂಜಾಬ್‌ನ ಜಲಂಧರ್‌ನ 30 ವರ್ಷದ ಮಂದೀಪ್ ಕೂಡಾ ನಾಪತ್ತೆಯಾಗಿದ್ದಾರೆ ಎಂದು ವರದಿಯಾಗಿದೆ.

“ನಾವು ಮಂದೀಪ್ ಅವರೊಂದಿಗೆ ಕೊನೆಯದಾಗಿ ಮಾರ್ಚ್ 3 ರಂದು ಮಾತನಾಡಿದ್ದೇವೆ” ಎಂದು ಮಂದೀಪ್ ಅವರ ಸಹೋದರ ಜಗದೀಪ್ ಕುಮಾರ್ ಹೇಳಿದ್ದಾರೆಂದು ದಿ ಹಿಂದೂ ವರದಿ ಮಾಡಿದೆ. “ಅವರು ಆರಂಭದಲ್ಲಿ ಅರ್ಮೇನಿಯಾಕ್ಕೆ ಹೋಗಿದ್ದು, ಅಲ್ಲಿಂದ ಕೆಲಸ ಹುಡುಕಿಕೊಂಡು ಇಟಲಿಗೆ ಹೋಗಬೇಕಿತ್ತು. ಬದಲಾಗಿ, ಅವರು ವೀಸಾ ಏಜೆಂಟ್‌ನ ಮೋಸದಿಂದ ರಷ್ಯಾಕ್ಕೆ ಹೋಗಿ ಅವರ ಸೈನ್ಯಕ್ಕೆ ಸೇರುವಂತೆ ಆಯಿತು. ಕೆಲವು ದಿನಗಳ ತರಬೇತಿಯ ನಂತರ ಅವರನ್ನು ಯುದ್ಧ ವಲಯಕ್ಕೆ ಕಳುಹಿಸಲಾಗಿದೆ ಎಂದು ವರದಿ ಹೇಳಿದೆ.

ದೆಹಲಿಯಲ್ಲಿ ವಿದೇಶಾಂಗ ಸಚಿವಾಲಯದ ಅಧಿಕಾರಿಗಳನ್ನು ಭೇಟಿ ಮಾಡಿದ್ದೇನೆ ಎಂದು ಕುಮಾರ್ ಹೇಳಿದ್ದಾರೆ, ರಷ್ಯಾದಲ್ಲಿ ಕನಿಷ್ಠ 25 ಭಾರತೀಯರು ಕಾಣೆಯಾಗಿದ್ದಾರೆ ಎಂದು ವರದಿಯಾಗಿದೆ ಎಂದು ಅವರು ತಿಳಿಸಿದ್ದಾರೆ. ಅಕ್ಟೋಬರ್ 21 ರಂದು, ವಿದೇಶಾಂಗ ವ್ಯವಹಾರಗಳ ಸಚಿವಾಲಯವು ರಷ್ಯಾದ ಸೈನ್ಯಕ್ಕೆ ಸೇರ್ಪಡೆಗೊಂಡ ಮತ್ತು ಉಕ್ರೇನ್ ವಿರುದ್ಧದ ಯುದ್ಧದಲ್ಲಿ ಭಾಗವಹಿಸಲಿದ್ದ 85 ಭಾರತೀಯರನ್ನು ಬಿಡುಗಡೆ ಮಾಡಲಾಗಿದೆ ಎಂದು ಹೇಳಿದೆ.

ರಷ್ಯಾದ ಸೇನೆಯಿಂದ ಇನ್ನೂ 20 ಭಾರತೀಯರನ್ನು ಬಿಡುಗಡೆ ಮಾಡಬೇಕಾಗಿದೆ ಮತ್ತು ಅವರನ್ನು ಶೀಘ್ರವಾಗಿ ಬಿಡುಗಡೆ ಮಾಡಲು ಹೊಸ ದೆಹಲಿ ಪ್ರಯತ್ನಿಸುತ್ತಿದೆ ಎಂದು ವಿದೇಶಾಂಗ ಕಾರ್ಯದರ್ಶಿ ವಿಕ್ರಮ್ ಮಿಸ್ರಿ ಅವರು ಹೇಳಿದ್ದಾರೆ. ಜುಲೈನಲ್ಲಿ, ಪ್ರಧಾನಿ ನರೇಂದ್ರ ಮೋದಿ ರಷ್ಯಾಕ್ಕೆ ಭೇಟಿ ನೀಡಿದ್ದಾಗ, ರಷ್ಯಾವೂ ತನ್ನ ಮಿಲಿಟರಿಯಿಂದ ಎಲ್ಲಾ ಭಾರತೀಯರನ್ನು ಶೀಘ್ರವಾಗಿ ಬಿಡುಗಡೆ ಮಾಡುವುದಾಗಿ ಭರವಸೆ ನೀಡಿತ್ತು ಎಂದು ವಿದೇಶಾಂಗ ಸಚಿವಾಲಯ ಹೇಳಿತ್ತು.

ಇದನ್ನೂ ಓದಿ: ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ಬಿಜೆಪಿ ಸೋಲಿಸಲು ದಲಿತ-ಅಲ್ಪಸಂಖ್ಯಾತರ ಮತಗಳನ್ನು ಒಗ್ಗೂಡಿಸಬೇಕು: ವಿಸಿಕೆ ಅಧ್ಯಕ್ಷ ತೊಳ್ ತಿರುಮಾವಳವನ್ ಕರೆ

ನಾನುಗೌರಿ.ಕಾಂಗೆ ದೇಣಿಗೆ ನೀಡಿ ಬೆಂಬಲಿಸಿ

LEAVE A REPLY

Please enter your comment!
Please enter your name here

- Advertisment -

ಮಹಾರಾಷ್ಟ್ರ ಉಪ ಮುಖ್ಯಮಂತ್ರಿಯಾಗಿ ಸುನೇತ್ರಾ ಪವಾರ್ ನೇಮಕದ ಹಿಂದೆ ಬಿಜೆಪಿ ನಾಯಕತ್ವದ ಮಾಸ್ಟರ್ ಮೈಂಡ್: ‘ಸಾಮ್ನಾ’

ಮಹಾರಾಷ್ಟ್ರದ ವಿರೋಧ ಪಕ್ಷವಾದ ಶಿವಸೇನೆ (ಯುಬಿಟಿ), ರಾಷ್ಟ್ರೀಯತಾವಾದಿ ಕಾಂಗ್ರೆಸ್ ಪಕ್ಷದ (ಎನ್‌ಸಿಪಿ) ನಾಯಕಿ ಸುನೇತ್ರಾ ಪವಾರ್ ಅವರು ಪತಿ ಅಜಿತ್ ಪವಾರ್ ನಿಧನರಾದ ಕೆಲವೇ ದಿನಗಳಲ್ಲಿ ರಾಜ್ಯದ ಉಪಮುಖ್ಯಮಂತ್ರಿಯಾಗಿ ಪ್ರಮಾಣ ವಚನ ಸ್ವೀಕರಿಸಿದ...

ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಹೆಸರು ಉಲ್ಲೇಖ : ಸಚಿವ ಹರ್ದೀಪ್ ಸಿಂಗ್ ಪುರಿ ಹೇಳಿದ್ದೇನು?

ಜಗತ್ತಿನಾದ್ಯಂತ ಚರ್ಚೆಯ ವಿಷಯವಾಗಿರುವ ಜೆಫ್ರಿ ಎಪ್‌ಸ್ಟೀನ್‌ ಫೈಲ್ಸ್‌ನಲ್ಲಿ ಕೇಂದ್ರ ಸಚಿವ ಹರ್ದೀಪ್ ಸಿಂಗ್ ಪುರಿ ಅವರ ಹೆಸರಿದೆ, ಪುರಿ ಮತ್ತು ಎಪ್‌ಸ್ಟೀನ್ ನಡುವೆ ಇ-ಮೇಲ್ ಸಂಭಾಷಣೆಗಳು ನಡೆದಿವೆ. ಈ ಇ-ಮೇಲ್‌ಗಳು ಕೇವಲ ವ್ಯವಹಾರಿಕ...

ಕೇಂದ್ರ ಬಜೆಟ್ 2026: ‘ಇದು ನನ್ನ ರಾಜಕೀಯ ಜೀವನದ ಅತ್ಯಂತ ನಿರಾಶಾದಾಯಕ ಬಜೆಟ್’: ಸಿಎಂ ಸಿದ್ದರಾಮಯ್ಯ

‘ಮೋದಿ ಸರ್ಕಾರ ಆರ್ಥಿಕ ದೂರದೃಷ್ಟಿಕೋನಗಳಿಲ್ಲದೆ, ದೇಶವನ್ನು ಯಾವ ದಿಕ್ಕಿನತ್ತ ಮುನ್ನಡೆಸಬೇಕು ಎನ್ನುವುದರ ಬಗ್ಗೆ ಸ್ಪಷ್ಟತೆ ಇಲ್ಲದೆ ದಣಿದಿದೆ ಎಂಬುದರ ಸಂಕೇತ ಈ 2026 ಬಜೆಟ್’ ಎಂದು ಸಿಎಂ ಸಿದ್ದರಾಮಯ್ಯ ಕಿಡಿ ಕಾರಿದ್ದಾರೆ.  ಕಲಬುರಗಿ ವಿಮಾನ...

ಕೇಂದ್ರ ಬಜೆಟ್ 2026: ಅಪರೂಪದ ಭೂಮಿಯ ಕಾರಿಡಾರ್‌ನಿಂದ ಹೈಸ್ಪೀಡ್ ರೈಲಿನವರೆಗೆ: ಚುನಾವಣೆ ನಡೆಯಲಿರುವ ರಾಜ್ಯಗಳಿಗೆ ಕೇಂದ್ರ ಬಜೆಟ್ ನಲ್ಲಿ ಸಿಕ್ಕಿದ್ದೇನು?

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಲೋಕಸಭೆಯಲ್ಲಿ ತಮ್ಮ ಸತತ 9 ನೇ ಬಜೆಟ್ ಅನ್ನು ಮಂಡಿಸಿದ್ದಾರೆ. ಈ ಬಜೆಟ್ ನಲ್ಲಿ ಕೇರಳ, ತಮಿಳುನಾಡು, ಪಶ್ಚಿಮ ಬಂಗಾಳ ಮತ್ತು ಅಸ್ಸಾಂನಂತಹ ಚುನಾವಣೆ...

ಬಲೂಚಿಸ್ತಾನ: ಭದ್ರತಾ ಕಾರ್ಯಾಚರಣೆಯಲ್ಲಿ 15 ಪಾಕ್ ಸೈನಿಕರು, 92 ಭಯೋತ್ಪಾದಕರು ಸಾವು

ಬಲೂಚಿಸ್ತಾನ ಪ್ರಾಂತ್ಯದ ಸುಮಾರು 12 ಸ್ಥಳಗಳಲ್ಲಿ ನಡೆದ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆಗಳಲ್ಲಿ ಕನಿಷ್ಠ 15 ಪಾಕಿಸ್ತಾನಿ ಸೈನಿಕರು ಮತ್ತು 92 ಭಯೋತ್ಪಾದಕರನ್ನು ಹತ್ಯೆ ಮಾಡಲಾಗಿದೆ ಎಂದು ಪಾಕಿಸ್ತಾನಿ ಸೇನೆ ತಿಳಿಸಿರುವುದಾಗಿ ಪಿಟಿಐ ವರದಿ...

ಕೇಂದ್ರ ಬಜೆಟ್ 2026 | ಯಾವುದು ಅಗ್ಗ ಮತ್ತು ಯಾವುದು ದುಬಾರಿ..? 

ಕೇಂದ್ರ ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ (ಫೆಬ್ರವರಿ 1, 2026) ತಮ್ಮ ಒಂಬತ್ತನೇ ಬಜೆಟ್ ಮಂಡಿಸಿದ್ದಾರೆ. ಈ ವರ್ಷದ (2026-27 ಹಣಕಾಸು) ಬಜೆಟ್ ತೀವ್ರಗೊಳ್ಳುತ್ತಿರುವ ಜಾಗತಿಕ ವ್ಯಾಪಾರ ಉದ್ವಿಗ್ನತೆ, ರೂಪಾಯಿ ಮೌಲ್ಯದಲ್ಲಿ...

ಕೇಂದ್ರ ಬಜೆಟ್ 2026| ರಕ್ಷಣಾ ಇಲಾಖೆಗೆ 7.85 ಲಕ್ಷ ಕೋಟಿ ರೂ. ಮೀಸಲು

ಕೇಂದ್ರ ಸರ್ಕಾರದ ಬಜೆಟ್ 2026 ರಲ್ಲಿ ರಕ್ಷಣಾ ವೆಚ್ಚವನ್ನು ಗಣನೀಯವಾಗಿ ಹೆಚ್ಚಿಸಲಾಗಿದೆ. ಈ ವಲಯಕ್ಕೆ 7.85 ಲಕ್ಷ ಕೋಟಿ ರೂ.ಗಳನ್ನು ಮೀಸಲಿಟ್ಟಿದೆ. ಇದು ಕಳೆದ ವರ್ಷದ 6.81 ಲಕ್ಷ ಕೋಟಿ ರೂ.ಗಳಿಗಿಂತ ಗಮನಾರ್ಹ...

‘ಭಾರತ ವೆನೆಜುವೆಲಾದ ತೈಲ ಖರೀದಿಸಲಿದೆ’ ಎಂದ ಟ್ರಂಪ್: ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡ ಕಾಂಗ್ರೆಸ್

ನವದೆಹಲಿ: ಭಾರತ ಇರಾನ್ ಬದಲು ವೆನೆಜುವೆಲಾದಿಂದ ತೈಲ ಖರೀದಿಸಲಿದೆ ಎಂಬ ಅಮೆರಿಕ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರ ಹೇಳಿಕೆಗೆ ಸಂಬಂಧಿಸಿದಂತೆ ಕಾಂಗ್ರೆಸ್ ಭಾನುವಾರ ಮೋದಿ ಸರ್ಕಾರವನ್ನು ತರಾಟೆಗೆ ತೆಗೆದುಕೊಂಡಿದೆ. ಅಮೆರಿಕದ ನಾಯಕ "ನಮ್ಮ...

ಕೇಂದ್ರ ಬಜೆಟ್ 2026: ಕ್ಯಾನ್ಸರ್ ಸೇರಿದಂತೆ ಇತರ 7 ಕಾಯಿಲೆಗಳ ಔಷಧಿ ಬೆಲೆಯಲ್ಲಿ ಇಳಿಕೆ

ಗಂಭೀರ ಖಾಯಿಲೆಗಳಿಂದ ಬಳುತ್ತಿರುವ ರೋಗಿಗಳಿಗೆ ಗಮನಾರ್ಹ ಪರಿಹಾರವಾಗಿ, ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ 2026 ರ ಬಜೆಟ್‌ನಲ್ಲಿ 17 ವಿಧದ ಕ್ಯಾನ್ಸರ್ ಮತ್ತು ಇತರ ಏಳು ಗಂಭೀರ ಕಾಯಿಲೆಗಳ ಚಿಕಿತ್ಸೆಗೆ ಬಳಸುವ ಔಷಧಿಗಳನ್ನು...

ಕೇಂದ್ರ ಬಜೆಟ್ 2026: ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ; ವಿದೇಶಿ ಪ್ರವಾಸದ ಟಿಸಿಎಸ್ ದರ ಶೇ.2ಕ್ಕೆ ಇಳಿಕೆ

ಹಣಕಾಸು ಸಚಿವೆ ನಿರ್ಮಲಾ ಸೀತಾರಾಮನ್ ಭಾನುವಾರ ಕೇಂದ್ರ ಬಜೆಟ್ 2026 ಅನ್ನು ಮಂಡಿಸಿದರು. "2025ರ ಏಪ್ರಿಲ್ 1 ರಿಂದ ಹೊಸ ಆದಾಯ ತೆರಿಗೆ ಕಾಯ್ದೆ ಜಾರಿಗೆ ಬರಲಿದೆ, ಪ್ರಸ್ತುತ ಶೇ.5 ಮತ್ತು ಶೇ.20...